Author: editor.udayarashmi@gmail.com

ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನೆ ಮತ್ತು ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪ್ರೇರಣೆಯಾಗುವಂತೆ ಆತ್ಮ ವಿಶ್ವಾಸ, ಆತ್ಮಸ್ಥೈರ್ಯ ಮೂಡಿಸುವ ಕಾರ್ಯ ನಡೆಯಬೇಕು. ಸಂಸ್ಕಾರಯುತ ಬದುಕು ವ್ಯಕ್ತಿಯ ವ್ಯಕ್ತಿತ್ವ ರೂಪಿಸುತ್ತದೆ. ಶಿಕ್ಷಣದ ಜತೆಗೆ ಸಂಸ್ಕೃತಿ, ಸಂಸ್ಕಾರಗಳನ್ನು ನೀಡುವುದು ಮುಖ್ಯವಾಗಿದೆ ಎಂದು ಕ್ಲಸ್ಟರ್ ೨೪ರ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಬಿ.ಎ.ಬಿರಾದಾರ ಹೇಳಿದರು.ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದಜತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪಾರ್ಧಾ ಮನೋಭಾವನೆ ಮೂಡಲು ಸಾಧ್ಯ. ಮಕ್ಕಳು ಅಂಕಗಳಿಗೆ ಸೀಮಿತವಾಗದೇ, ಜ್ಞಾನ ವಿಕಾಸಗೊಳಿಸಬೇಕು. ಸಾಮಾಜಿಕ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.ಬಂಜಾರಾ ಪಿಯು ಕಾಲೇಜಿನ ಪ್ರಾಚಾರ್ಯರಾದ ಎಸ್.ಬಿ.ಪವಾರರವರು ಮಾತನಾಡುತ್ತ. ವಿದ್ಯಾರ್ಥಿಗಳು ನಿತ್ಯ ಪರಿಶ್ರಮ ಪಡಬೇಕು. ತಾಳ್ಮೆಯಿಂದ ವರ್ತಿಸಬೇಕು. ಆಶಾವಾದಿಗಳಾಗಿ ಬದುಕಬೇಕು. ಪಾಲಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು…

Read More

ದೇವರೇ ಬಂದರೂ ಬೆಂಗಳೂರಿನ ಟ್ರಾಫಿಕ್’ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂಬ ಡಿಸಿಎಂ ಹೇಳಿಕೆಗೆ ತೀವ್ರ ಖಂಡನೆ ಬೆಂಗಳೂರು: ಮುಂದಿನ ಎರಡು ಅಥವಾ ಮೂರು ವರ್ಷಗಳಲ್ಲಿ ಬೆಂಗಳೂರಿನ ಟ್ರಾಫಿಕ್ ಅನ್ನು ದೇವರೂ ಬಂದರೂ ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.ನಗರದ ಟ್ರಾಫಿಕ್ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಡಿಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಮಸ್ಯೆಗಳನ್ನು ನಿಭಾಯಿಸುವ ಸಮರ್ಥ ವ್ಯಕ್ತಿಗೆ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಒತ್ತಾಯಿಸಿದ್ದಾರೆ.ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ, “ನಾನು ಮಾಧ್ಯಮ ಸ್ನೇಹಿತರಿಗೆ ಮತ್ತು ಇತರರಿಗೆ ಹೇಳಲು ಬಯಸುತ್ತೇನೆ, ಸ್ವತಃ ದೇವರೇ ಮೇಲಿನಿಂದ ಇಳಿದು ಬಂದರೂ, ಮುಂದಿನ ಒಂದು ವರ್ಷ, ಎರಡು ವರ್ಷ ಅಥವಾ ಮೂರು ವರ್ಷಗಳಲ್ಲಿ ಬೆಂಗಳೂರನ್ನು(ಸರಿಪಡಿಸಲು) ಸಾಧ್ಯವಿಲ್ಲ. ಈ ಸಮಸ್ಯೆಗಳನ್ನು ಸರಿಪಡಿಸಲು ನಾವು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಸಹಕಾರ ಮನೋಬಾವದಿಂದ ಆಡಳಿತ ನಡೆಸಿದರೆ ಗ್ರಾಮ ಪಟ್ಟಣಗಳ ಸಮಗ್ರ ಅಭಿವೃದ್ದಿ ಮಾಡಬಹುದು ಎಂದು ತಹಶೀಲ್ದಾರ ಎಸ್.ಎಸ್. ನಾಯಕಲಮಠ ಹೇಳಿದರು.ಸ್ಥಳೀಯ ಪಟ್ಟಣ ಪಂಚಾಯತಿಯಲ್ಲಿ ನಡೆದ ಪೂಜಾ ಕಾರ್ಯಕ್ರಮ ಅಧಿಕಾರ ಹಸ್ತಾಂತರ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಮೂರು ವರ್ಷದಿಂದ ಚುನಾಯಿತ ಸದಸ್ಯರಾಗಿದ್ದರೂ ಅಧಿಕಾರವಿಲ್ಲದೆ ಜನರ ಸೇವೆ ಮಾಡಿರುವ ತಾವುಗಳು ಈಗ ಪೂರ್ಣಪ್ರಮಾಣದ ಅಧಿಕಾರವನ್ನು ಅಧ್ಯಕ್ಷ ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಸರಕಾರ ಕೊಟ್ಟಿದ್ದು ತಮ್ಮ ಅಧಿಕಾರ ಅವದಿಯಲ್ಲಿ ಪಟ್ಟಣದ ಸರ್ವಜನಾಂಗದ ಜನರ ಏಳ್ಗೇಗಾಗಿ ಶ್ರಮಿಸುತ್ತಾ ಬದಲಾವಣೆ ದಿಕ್ಕಿನತ್ತ ಸಾಗಲಿ ಎಂದು ಹಾರೈಸಿದರು.ಹಿರೇಮಠದ ಮುರುಘೇಂದ್ರ ಮಹಾಸ್ವಾಮಿಗಳು ವೇದಮಂತ್ರ ಪಠಣದೊಂದಿಗೆ ಪೂಜಾ ಕಾರ್ಯಕ್ರಮ ನಡೆಸಿ ನೂತನವಾಗಿ ಆಯ್ಕೇಯಾದ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಫಗೋಳ ಮತ್ತು ಉಪಾಧ್ಯಕ್ಷರಾದ ಶ್ರಿಮತಿ ರಾಜಮಾ ನಧಾಪ ಹಾಗೂ ಸರ್ವಸದಸ್ಯರ ಹೆಸರಿಗೆ ಕೊಲ್ಹಾರ ಪಟ್ಟಣಕ್ಕೆ ಅಂಟಿರುವ ಕಳಂಕ ದೂರಾಗಿ ರಾಜ್ಯದ ಮಾದರಿ ಪಟ್ಟಣವಾಗಿ ಪ್ರಗತಿಯ ಪಥದತ್ತ ಸಾಗಲಿ ಎಂದು ಸಂಕಲ್ಪ ಮಾಡಿದರು.ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಆಯ್ಕೇಯಾದ ಚನಮಲ್ಲಪ್ಪ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸ್ಥಳೀಯ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದ ನಂತರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಅಧ್ಯಕ್ಷ ಚನಮಲ್ಲಪ್ಪ ಶಿ ಗಿಡ್ಡಪ್ಪಗೋಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಥಮ ಬಾರಿಗೆ ಜರುಗಿತು.ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಕೊಲ್ಹಾರ ಪಟ್ಟಣದ ಅಭಿವೃದ್ದಿ ವಿಷಯವಾಗಿ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಗಂಬೀರವಾದ ಏನೇನೂ ಚರ್ಚೆ ನಡೆಯದಿದ್ದರೂ ಔಪಚಾರಿಕವಾಗಿ ಕೆಲವು ವಿಷಯಗಳ ಕುರಿತು ಸದಸ್ಯರು ಸಭೆಯಲ್ಲಿ ಮಾತನಾಡಿದರು.14 ನೇ ವಾರ್ಡಿನ ಸದಸ್ಯ ಬಾಬು ಭಜಂತ್ರಿ ಮಾತನಾಡಿ ನಾವುಗಳು ಜನರಿಂದ ಚುನಾಯಿತರಾಗಿ ಮೂರು ವರ್ಷಗತಿಸಿದರೂ ಅಧಿಕಾರ ಆಡಳಿತಾಧಿಕರಗಳ ಮೂಲಕ ನಡೆಯುವಂತಾಗಿರುವದರಿಂದನಮಗೆ ಪೂರ್ಣಪ್ರಮಾಣದ ಅಧಿಕಾರ ಇರಲಿಲ್ಲ ಆದರೆ ಈಗ ಚುನಾಯಿತ ಸದಸ್ಯರ ಕೈಗೆ ಆಡಳಿತ ಬಂದಿರುವದರಿಂದ ಬಿಜೆಪಿ ಪಕ್ಷದಿಂದ ಆಯ್ಕೆಯಾದ ನಾವು ಮೂವರು ಸದಸ್ಯರು ಪಟ್ಟಣದ ಅಭಿವೃದ್ದಿಗಾಗಿ ಸಹಮತವಿದೆ ವಾರ್ಡಗಳ ಅನುದಾನ ಹಂಚಿಕೆಯಲ್ಲಿ ಅಧ್ಯಕ್ಷರು ತಾರತಮ್ಯ ಮಾಡದೆ ಸ್ವಾರ್ಥಬಿಟ್ಟು ನಿಸ್ವಾರ್ಥ ಸೇವೆ ಸಲ್ಲಿಸುವಂತಾಗಲಿ ಎಂದರು.15/16 ವಾರ್ಡಿನ ಸದಸ್ಯರಾದ ದಸ್ತಗೀರ ಕಲಾದಗಿ ಮತ್ತು ತೌಸೀಪ್ ಗಿರಗಾಂವಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಿಲ್ಡ್ರನ್ಸ್ ಆಫ್ ಇಂಡಿಯಾ ಫೌಂಡೇಶನ್, ದೇವದಾಸಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಸರಕಾರದಿಂದ ಪರಿಹಾರಕ್ಕಾಗಿ ಮಾಧ್ಯಮದವರೊಂದಿಗೆ ಜಾಗೃತಿ ಮತ್ತ ಸಂವಾದ ಕಾರ್ಯಕ್ರಮವನ್ನು ಫೆ.೨೪ ರಂದು ಬೆಳಿಗ್ಗೆ ೧೦.೩೦ ಕ್ಕೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಾಶ ಜಿ. ಬೆಣ್ಣೂರ, ಅತಿಥಿಗಳಾಗಿ ಡಾ. ಬಾಬು ಸಜ್ಜನ, ಆಯ್.ಆರ್.ಡಿ., ಯಲ್ಲಪ್ಪ ಯರಕಲ್ ಸಿ.ಡಬ್ಲೂ.ಸಿ, ಭಾರತಿ ಪಾಟೀಲ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ., ಮೋಹನ ಕುಲಕರ್ಣಿ, ಕಾರ್ಯದರ್ಶಿಗಳು ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ, ಬಾಬು ಅವತಾಳ (ವಕೀಲರು), ಭಾಗವಹಿಸಲಿದ್ದಾರೆಂದು ಶಾಂತಾ ಬೆಲ್ಯಾಳ, ಸಿ.ಗುಡ್, ಪ್ರೊಜೆಕ್ಟರ್, ವಿಜಯಪುರ ಇವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆಲಮೇಲ ಹಾಗೂ ಸಿಂದಗಿ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೊಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.ಆಲಮೇಲ ತಾಲೂಕಿನ ಕುಳೇಕುಮಟಗಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಭೂಸ್ವಾಧೀನದ ರಸ್ತೆ ಸಮಸ್ಯೆ ಕುರಿತಾಗಿ ಸ್ಥಳ ಪರಿಶೀಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.ಆಲಮೇಲದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಲಮೇಲದ ಆಡಳಿತ ಸೌಧ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಮೀನು ಸರ್ವೆ ನಂಬರ್ ೬೦೬/೩.೦೩ ಗುಂಟೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.ಸಣ್ಣ ನೀರಾವರಿ ಇಲಾಖೆಯಡಿ ಬರುವ ಕೆರೆ ವೀಕ್ಷಿಸಿದ ಅವರು,ಕೆರೆ ಅಭಿವೃದ್ಧಿಪಡಿಸುವುದಕ್ಕಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸೋಮಶೇಖರ ಪಟ್ಟಣಶೆಟ್ಟಿ ಇವರು ಬಡ ಮಕ್ಕಳ ಆಹಾರ ಮೊಟ್ಟೆ ಕಳ್ಳತನ ಮಾಡಿ ಮಾಡುತ್ತಿರುವ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರಿಗೆ ಕೊಲೆ ಬೆದರಿಕೆ ಹಾಕಿದ್ದು ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ವೇತನ ತಡೆಹಿಡಿಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಚಡಚಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುತ್ತಿ ಬಸವೇಶ್ವರ ಮ್ಯಾನ್ ಪವರ್ ಏಜೆನ್ಸಿ ಮೂಲಕ ಮಕ್ಕಳಿಗೆ ನೀಡುವ ಮೊಟ್ಟೆ ಕಳ್ಳತನ ಮಾಡಿರುತ್ತಾರೆ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಿದರು ಮಾಹಿತಿ ನೀಡಿರುವುದಿಲ್ಲ. ಉಪ ನಿರ್ದೇಶಕರಿಗೆ ಮೇಲ್ಮನವಿ ಸಲ್ಲಿಸಿದ ನಂತರ ಉಪ ನಿರ್ದೇಶಕರಿಗೆ ೭ ದಿನಗಳಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಆದೇಶ ಮಾಡಿರುತ್ತಾರೆ. ತಿಂಗಳು ಕಳೆದರೂ ಮಾಹಿತಿ ನೀಡಿದೆ ಇದ್ದ ಕಾರಣ ದಿನಾಂಕ. ೧೮/೦೨/೨೦೨೫ ರಂದು ಕೆ.ಆರ್.ಎಸ್ ಪಕ್ಷದ ಚಡಚಣ ತಾಲೂಕು ಅಧ್ಯಕ್ಷ ಚಂದ್ರಕಾಂತ ನಗರೆ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚಣಚಣ ಸೇರಿದಂತೆ ೫ ಜನ ಚಡಚಣ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನದೇವರನಾವದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವರನಾವದಗಿ ಕ್ಲಸ್ಟರ್ ನ ಎಫ್ ಎಲ್ ಎಂ ಕಲಿಕಾ ಹಬ್ಬವನ್ನು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದಿನಾಂಕ:20/2/2025 ರಂದು ಹೆಚ್ ಪಿಎಸ್ ದೇವರನಾವದಗಿ ಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ದೇವರನಾವದಾಗಿ ಕ್ಲಸ್ಟರ್ ಎಲ್ಲ ಸರಕಾರಿ ಶಾಲೆಗಳ ಮಕ್ಕಳು ಓದು ಬರಹ ಗಣಿತ ಹಾಗು ಕಥೆ ಹೇಳುವ ಕಲಿಕಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡರು.ಕಲಿಕಾ ಹಬ್ಬದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಎನ್ ವಿ. ನಿಂಬರಗಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿ ಈ ಕಲಿಕಾ ಹಬ್ಬವು ಮಕ್ಕಳ ಕಲಿಕೆಯನ್ನು ದೃಢೀಕರಿಸುವ ವೇದಿಕೆಯಾಗಿದ್ದು ಗುಣಾತ್ಮಕ ಶಿಕ್ಷಣ ಸಾಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.ಕಲಿಕಾ ಹಬ್ಬವನ್ನು ಬಮ್ಮನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಎಸ್ ಗೀತಾ ರವರು ಉದ್ಘಾಟಿಸಿದರು. ಶ್ರೀ ಶ್ರೀಮಂತ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ದೇವರ ನಾವದಾಗಿ ಕ್ಲಸ್ಟರನ ಎಲ್ಲ ಮುಖ್ಯ ಗುರುಗಳು ನೋಡಲ್ ಶಿಕ್ಷಕರು ನಿರ್ಣಾಯಕರು ಹಾಗು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿರುವ ಪ್ರದೀಪ ಭಿಸೇ ರವರು ಇಂಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆ ಆಗಿದ್ದಾರೆ.ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಶುಕ್ರವಾರ ಶಹರ ಠಾಣೆಯಲ್ಲಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.ರಾಜ್ಯದಲ್ಲಿ ಯಾವತ್ತೂ ಸದ್ದಿನಲ್ಲಿರುವದೇ ವಿಜಯಪುರ ಜಿಲ್ಲೆಯ ಭೀಮ ತೀರ, ಈ ಭೀಮತೀರಕ್ಕೆ ಖಡಕ್ ಹಾಗೂ ಜನಸ್ನೇಹಿ, ಮತ್ತು ದಕ್ಷ ಅಧಿಕಾರಿ ಬಂದಿರುವದು ಜನರಲ್ಲಿ ಉಲ್ಲಾಸ, ಉತ್ಸಾಹ ಮತ್ತು ಸಂತಸವನ್ನ ಮೂಡಿಸಿದೆ.ಅದೇ ರೀತಿ ಭೀಮಾ ತೀರದ ರೌಡಿಗಳಿಗೂ ಸಹ ನಡುಕ ಶುರುವಾಗಿದೆ. ಈ ಹಿಂದೆ ಇವರು ಕಾರ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕತೆ, ಜನರ ಜೊತೆ ಜನ ಸ್ನೇಹಿಯಾಗಿ ಗುರುತಿಸಿ ಕೊಂಡಿದ್ದಾರೆ, ಮತ್ತು ರೌಡಿಗಳಿಗೆ ಸಿಂಹ ಸ್ವಪ್ನವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ಒಟ್ಟಾರೆ ಇಂತಹ ದಕ್ಷ ಅಧಿಕಾರಿ ಇಂಡಿ ಠಾಣೆಗೆ ಬಂದಿರೋದು ಉತ್ತವಾಗಿದೆ ಎಂದು ಜನರು ಸಂತಸ ವ್ಯಕ್ತ ಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜೀವನದಲ್ಲಿ ಮನುಷ್ಯನಾದವನು ಶೈಕ್ಷಣಿಕವಾಗಿ ಯಶಸ್ಸಿಯಾಗಿ ಸಾಧಕನಾಗಬೇಕಾದರೆ ಮನುಷ್ಯನಿಗೆ ಆಸಕ್ತಿ,ಏಕಾಗ್ರತೆ,ಮನಃಶಾಂತಿ ಬಹಳಷ್ಟು ಮುಖ್ಯ ಎಂದುಸಾಹಿತಿ ಶಿಕ್ಷಕ ದಶರಥ ಕೋರಿ ತಿಳಿಸಿದರು.ಇಂಡಿ ನಗರದ ಶಾಂತಿನಿಕೇತನ ಪ್ರಾಥಮಿಕ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ದಕ್ಷಿಣ ಭಾರತದ ರಾಮೇಶ್ವರದ ಕಡಲ ತೀರದಲ್ಲಿ ಹಾರುವ ಹಕ್ಕಿಗಳನ್ನು ಆಕಾಶ ಮಾರ್ಗದಲ್ಲಿ ಸಾಗುವ ವಿಮಾನವನ್ನು ನೋಡಿ ಕನಸುಗಳನ್ನು ಕಟ್ಟಿಕೊಂಡ ಪುಟ್ಟ ಬಾಲಕ ಆಸಕ್ತಿಯಿಂದಲೇ ಭಾರತದ ಪರಮಾಣು ಸಿಡಿತೆಲೆ ಹೊತ್ತುಯ್ಯುವ ರಾಕೆಟ್ ಗಳನ್ನ ತನ್ನ ಅವಿಷ್ಕಾರದಿಂದ ಕಂಡು ಹಿಡಿದು ಹೊಸ ಐತಿಹಾಸಿಕ ಮೈಲುಗಲ್ಲನ್ನು ಸ್ಥಾಪಿಸಿದ, ಅವರು ಬೇರಾರು ಅಲ್ಲ ನಮ್ಮ ದೇಶದ ಖ್ಯಾತ ವಿಜ್ಞಾನಿ ಭಾರತ ರತ್ನ ಡಾ. ಎ.ಪಿ.ಜಿ ಅಬ್ದುಕಲಾಮ್ ಎಂದರು.ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಯಮುನಾಜಿ ಸಾಳುಂಕೆಯವರು ಶಾಲಾ ಮಕ್ಕಳಿಗೆ ರಾಷ್ಟ್ರಾಭಿಮಾನ ನಾಡು-ನುಡಿ ಸಂಸ್ಕೃತಿಯನ್ನು ವೀರ ಪುರುಷರ ಯಶೋಗಾಥೆಯನ್ನು ಮೈಮನಗಳಲ್ಲಿ ಅಳವಡಿಸಿಕೊಂಡು ತಾಯಿ…

Read More