Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಪ್ರೀಂ ಕೋರ್ಟ್ ಆದೇಶಾನುಸಾರ ಚಿಂಚೋಳಿಯ ಸಿದ್ದಸಿರಿ ಎಥೆನಾಲ್ ಹಾಗೂ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕಾರ್ಖಾನೆ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಶುಕ್ರವಾರ ನಾಡದೇವತೆ ಮೈಸೂರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಚಿಂಚೋಳಿ ತಾಲ್ಲೂಕಿನಲ್ಲಿರುವ ನಮ್ಮ ಸಿದ್ದಸಿರಿ ಕಾರ್ಖಾನೆ ಆರಂಭವಾಗುವುದರಿಂದ ನೂರಾರು ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ಹಾಗು ರೈತರ ಏಳಿಗೆಗೆ ನಾಂದಿಯಾಗುತ್ತದೆ. ಕಾರ್ಖಾನೆ ಸ್ತಗಿತದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಬ್ಬು ಬೆಳೆಯುವ ರೈತರು 100 ಕಿ.ಮೀ ಹೆಚ್ಚು ದೂರದ ಕಾರ್ಖಾನೆಗೆ ಕಬ್ಬು ತೆಗೆದುಕೊಂಡು ಹೋಗುವಂತಾಗಿತ್ತು. ಇದರಿಂದ ಗಾಡಿ ಬಾಡಿಗೆ ಹೊರೆ ಆಗುವ ಜೊತೆಗೆ ಸರಿಯಾದ ಸಮಯಕ್ಕೆ ಕಟಾವು ಮಾಡದೆ ಕಬ್ಬು ಒಣಗಿ ಹೋಗುವ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಹಲವು ರೈತರು ಕಟಾವು ವಿಳಂಬದಿಂದ ಬೇಸತ್ತು ಕಬ್ಬಿಗೆ ಸುಟ್ಟು ಹಾಕಿರುವ ಪ್ರಕರಣಗಳು ನಡೆದಿರುವುದು ಬೇಸರ ಸಂಗತಿಯಾಗಿತ್ತು.ಅಲ್ಲದೆ, ನಮ್ಮ ಸಿದ್ದಸಿರಿ ಎಥೆನಾಲ್ ಮತ್ತು ಪವರ್ ಘಟಕದಿಂದ ರೈತರಿಗೆ ಅತೀ ಹೆಚ್ಚು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದಲ್ಲಿ ಮೃತರಾದವರ ಸಾಗಾಟಕ್ಕೆ ವಾಹನ ವ್ಯವಸ್ಥೆಯಿಲ್ಲದ ಕಾರಣ ಪುರಸಭೆ ಅಧ್ಯಕ್ಷರಾದ ಶಾಂತವೀರ ಬಿರಾದಾರ ಅವರು ತಮ್ಮ ಅಣ್ಣನಾದ ದಿ.ರವಿಕುಮಾರ ಬಿರಾದಾರ ಅವರ ದ್ವಿತೀಯ ಪುಣ್ಯಸ್ಮರಣೆಯ ನಿಮಿತ್ಯ ಸಿಂದಗಿ ಪುರಸಭೆಗೆ ವೈಯಕ್ತಿಕ ವೆಚ್ಚದಲ್ಲಿ ಮುಕ್ತಿ ವಾಹನ ಕೊಡುಗೆಯಾಗಿ ನೀಡುತ್ತಿದ್ದು, ಈ ವಾಹನವನ್ನು ಫೆ.೨೨ರಂದು ಬೆಳಿಗ್ಗೆ ೧೧ಗಂಟೆಗೆ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಜರುಗುವ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪುರಸಭೆಗೆ ಹಸ್ತಾಂತರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಕ್ಫ್ ಆಸ್ತಿ ಸಂರಕ್ಷಣಾ ಸಮೀತಿ ವತಿಯಿಂದ ಹಮ್ಮಿಕೊಂಡ ೫ನೆಯ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹಕ್ಕೆ ಆಗಮಿಸಿದ ವಕ್ಫ್ ಜಿಲ್ಲಾಧಿಕಾರಿ ತಬ್ಸುಮ್ ಮೂಲಕ ಸಚಿವರಿಗೆ ಮನವಿ ಸಲ್ಲಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಇಸ್ಲಾಂ ಸಮುದಾಯದ ಸಲುವಾಗಿ ೧೯೩೯ರಲ್ಲಿ ಅಂಜುಮನ್ ಎ ಇಸ್ಲಾಂ ಕಮೀಟಿ ಜಮೀನನ್ನು ಖರೀದಿಸಿ ಆ ಜಮೀನ ಖಬರಸ್ಥಾನ ಸಲುವಾಗಿ ಉಪಯೋಗಿಸಲು ಮೀಸಲಿಟ್ಟಿದ್ದು, ಆ ಜಮೀನನ್ನು ಇದೀಗ ವಕ್ಫ್ನ ರಾಜ್ಯ ಮಾಜಿ ಅಧ್ಯಕ್ಷರು, ವಿಜಯಪುರ ಜಿಲ್ಲೆಯಿಂದ ರಾಜ್ಯ ವಕ್ಫ್ ಸಮೀತಿಗೆ ಆಯ್ಕೆಯಾದ ಸದಸ್ಯರು ಹಾಗೂ ವಿಜಯಪುರ ಜಿಲ್ಲಾ ವಕ್ಫ್ ಅಧಿಕಾರಿಗಳು ಸೇರಿಕೊಂಡು ಈ ಜಮೀನನ್ನು ವಾಣಿಜ್ಯ ಮಳಿಗೆಗಳು ಮಾಡಬೇಕೆಂಬ ದೊಡ್ಡ ಹುನ್ನಾರ ನಡೆಸಿದ್ದಾರೆ ಎಂದು ಟಿಪ್ಪು ಕ್ರಾಂತಿ ಸೇನೆ ರಾಜ್ಯ ಪ್ರದಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ ಆರೋಪಿಸಿದರು.ಸಿಂದಗಿ ಪಟ್ಟಣದ ವಕ್ಫ್ ಆಸ್ತಿ ಸಂರಕ್ಷಣಾ ಸಮೀತಿ ವತಿಯಿಂದ ಹಮ್ಮಿಕೊಂಡು ೫ನೆಯ ದಿನಕ್ಕೆ ಕಾಳಿಟ್ಟ ಧರಣಿ ಸತ್ಯಾಗ್ರಹಕ್ಕೆ ಆಗಮಿಸಿದ ವಕ್ಫ್ ಜಿಲ್ಲಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿ ಅವರ ಮೂಲಕ ವಕ್ಫ್, ವಸತಿ, ಹಾಗೂ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಎಸ್ಎಫ್ಸಿ ವಿಶೇಷ ಅನುದಾನದಲ್ಲಿ ೫ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.ಸಿಂದಗಿ ನಗರದ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಾರ್ಯವನ್ನು ಸಕ್ರಿಯವಾಗಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವೆ. ೫ ಕೋಟಿ ರೂ. ವೆಚ್ಚದಲ್ಲಿ ಈ ಮೆಗಾ ಮಾರುಕಟ್ಟೆ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಮುಂಬರುವ ದಿನಮಾನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ. ಸಿಂದಗಿ ತಾಲೂಕಿನ ಜನತೆಗೆ ವ್ಯಾಪಾರ ವಹಿವಾಟಿಗೆ ವಾಣಿಜ್ಯ ಸಂಕೀರ್ಣ ಅನುಕೂಲವಾಗಲಿದೆ. ಈ ಯೋಜನೆಗೆ ಕಾರಣರಾದ ಸಂಬಂಧಿಸಿದ ಸಚಿವರಿಗೆ ಮತ್ತು ರಾಜ್ಯ ಸರಕಾರಕ್ಕೆ ಹಾಗೂ ಜನತೆಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಮೃತ್ ೨.೦ ಯೋಜನೆಯ ಜಿಲ್ಲಾ ಮಟ್ಟದ ಸಲಹಾ ಮತ್ತು ನಿರ್ವಹಣಾ ಸಮಿತಿ ಸಭೆ ನಡೆಯಿತು.ಈ ಸಭೆಯಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಟ್ರೆಂಚ್ -೧ರಲ್ಲಿ ಆರಂಭಗೊಂಡ ಕಾಮಗಾರಿಗಳನ್ನು ಮಾರ್ಚ್ ೨೦೨೫ರ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಗುತ್ತಿಗೆದಾರರಿಗೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಹಾಗೂ ಪುರಸಭೆ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು ಪೂರೈಕೆಗಾಗಿ ಉಪಯೋಗಿಸುತ್ತಿರುವ ಯಂತ್ರಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ದುರಸ್ಥಿ ಇದ್ದರೆ ಆದ್ಯತೆ ಮೇರೆಗೆ ಕ್ರಮ ವಹಿಸಬೇಕು. ನೀರು ಪೋಲಾಗದಂತೆ ನಿಗಾ ವಹಿಸಬೇಕು. ನಿಯಮಿತವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ್ ಮೆಕ್ಕಳಕಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ೨೦೨೪-೨೫ ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ., ಬಿ.ಎಸ್ಸಿ, ಬಿ.ಬಿ.ಎ., ಬಿಎಸ್ ಡಬ್ಲ್ಯೂ,ಬಿಎಲ್ ಐಎಸ್ಸಿ, ಎಂಎಸ್ಸಿ, ಎಂಸಿಎ,ಎಂಎಸ್ ಡಬ್ಲ್ಯೂ ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು www.ksoumysuru.ac.inವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಮತ್ತು ೯೧೧೦೨೫೬೭೩೮ ಸಂಪರ್ಕಿಸಬಹುದು ಎಂದು ವಿಜಯಪುರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳ ಖರೀದಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮಾಲ್ದಂಡಿ ಬಿಳಿಜೋಳ ಪ್ರತಿ ಕ್ವಿಂಟಲ್ಗೆ ರೂ.೩,೪೨೧ ಹಾಗೂ ಹೈಬ್ರಿಡ್ ಬಿಳಿಜೋಳ ಪ್ರತಿ ಕ್ವಿಂಟಲ್ಗೆ ರೂ.೩,೩೭೧ ರಂತೆ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಖರೀದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ತಿಳಿಸಿದ್ದಾರೆ.ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿದ್ದು, ಇವರು ಜಿಲ್ಲೆಯಲ್ಲಿ ರೈತರ ನೋಂದಣಿ ಕಾರ್ಯ ಕೈಗೊಳ್ಳಲಿದ್ದು, ಮಾರ್ಚ್ ೩೧ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಏಳು ಖರೀದಿ ಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ವಿಜಯಪುರದ ಎಪಿಎಂಸಿ ಆವರಣ, ಬಸವನ ಬಾಗೇವಾಡಿಯ ಎಪಿಎಂಸಿ ಆವರಣ, ತೆಲಗಿ ರೇಲ್ವೆ ನಿಲ್ದಾಣ ಹತ್ತಿರ, ಮುದ್ದೇಬಿಹಾಳದ ಎಸ್ಡಬ್ಲ್ಯುಸಿ ಬಿದರಕುಂದಿ, ತಾಳಿಕೋಟೆಯ ಸರ್ಕಾರಿ ಆಸ್ಪತ್ರೆ ಹಿಂದುಗಡೆ, ಇಂಡಿಯ ಕೆಇಬಿ ಹತ್ತಿರ ಹಾಗೂ ಗೋಲಗೇರಿ ರೋಡ ಸಿಂದಗಿಯಲ್ಲಿ ಸ್ಥಾಪಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಖರೀದಿ ಕೇಂದ್ರಗಳನ್ನು ಹಾಗೂ ವಿಜಯಪುರದ ಕೆಎಫ್ಸಿಎಸ್ಸಿ ನಿಗಮದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಫೆ.೨೨ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಿಗ್ಗೆ ೮.೨೫ಕ್ಕೆ ಬೆಳಗಾವಿಯಿಂದ ಹೊರಟು, ಮಧ್ಯಾಹ್ನ ೧೨.೨೫ಕ್ಕೆ ವಿಜಯಪುರಕ್ಕೆ ಆಗಮಿಸುವರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ೩೧ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಮಟ್ಟದ ಸಮ್ಮೇಳನ ಅನುಭಾವ-೨೫ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಅದೇ ದಿನ ಮಧ್ಯಾಹ್ನ ೩.೩೦ಕ್ಕೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಾರ್ಚ್ ೮ ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ | ಜಿಲ್ಲಾ ನ್ಯಾಯಾಧೀಶ ಶಿವಾಜಿ ನಲವಡೆ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾರ್ಚ್-೦೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವಾಜಿ ಅನಂತ ನಲವಡೆ ತಿಳಿಸಿದರು.ಶುಕ್ರವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಮಾರ್ಚ್ ೦೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಲೋಕ್ ಅದಾಲತ್…
ನಿಗದಿತ ಅವಧಿಯೊಳಗೆ ಗುರಿ ಸಾಧನೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಇ-ಖಾತಾ ನೀಡಲು ಅಭಿಯಾನವನ್ನು ಹಮ್ಮಿಕೊಂಡಿದ್ದು, ನಿಗದಿತ ಅವಧಿಯೊಳಗೆ ಎಲ್ಲ ಆಸ್ತಿಗಳಿಗೆ ಈ ಖಾತಾ ನೀಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳಿಗೆ ತೆರಿಗೆಗಳನ್ನು ವಿಧಿಸುವ ಕುರಿತು ಕರ್ನಾಟಕ ಪೌರ ನಿಗಮಗಳ ಅಧಿನಿಯಮ-೧೯೭೬ ಪ್ರಕರಣ ೧೧೨ (ಬಿ) ಹಾಗೂ ಪುರಸಭೆಗಳ ಅಧಿನಿನ-೧೯೬೪ ಪ್ರಕರಣ ೧೦೬ರ ತಿದ್ದುಪಡಿಯಂತ ಕರ್ನಾಟಕ ಮುನಿಸಿಪಾಲಿಟಿ ಟ್ಯಾಕ್ಷೇಶನ್ (ತಿದ್ದುಪಡಿ) ನಿಯಮಗಳು-೨೦೨೫ನ್ನು ಜಾರಿಗೊಳಿಸಿದ್ದು, ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ನಗರ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ತೆರಿಗೆ ವಿಧಿಸುವ ಪ್ರಕ್ರಿಯೆ ಅನುಷ್ಠಾನಗೊಳಿಸಲಾಗುತ್ತಿದೆ.ಸರ್ಕಾರದ ನಿರ್ದೇಶನದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕರಪತ್ರ…
