Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿ.ಎಲ್ ಡಿ ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಸ್ಯಗಳು ಮಾನವನ ಅವಿಭಾಜ್ಯ ಅಂಗವಾಗಿದ್ದು ಪ್ರಾಕೃತಿಕ ಸಮತೋಲನ ಕಾಪಾಡುವುದರ ಜೊತಗೆ ಜೀವರಾಶಿಗಳಿಗೆ ಆಹಾರವನ್ನು ಪೂರೈಕೆ ಮಾಡುತ್ತವೆ ಹಾಗಾಗಿ ಜೈವಿಕ ಅಧ್ಯಯನ ಅತೀ ಮುಖ್ಯ ಎಂದು ಹಿಟ್ನಳ್ಳಿ ಕೃಷಿ ವಿವಿ ಡೀನ್ ಡಾ.ಅಶೋಕ ಸಜ್ಜನ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿರುವ `ಜೈವಿಕ ವಿಜ್ಞಾನದ ಗಡಿಗಳು ; ಸಂಶೋಧನೆ, ನಾವೀನ್ಯತೆ ಮತ್ತು ಸಹಯೋಗ ಎಂಬ ವಿಷಯದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬೆಳೆಗಳ ಇಳುವರಿ ಹೆಚ್ಚಿಸಿ ಆರ್ಥಿಕ ಬೆಳವಣಿಗೆ ಕಾಣಬೇಕಾದರೆ ಸುಧಾರಿತ ಕೃಷಿ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಸಸ್ಯಶಾಸ್ತ್ರವು ಆರ್ಥಿಕ ಉತ್ಪಾದನಾ ಕ್ಷೇತ್ರದಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಭಾರತ ಹಸಿರು ಕ್ರಾಂತಿಯ ಪರಿಣಾಮವಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಂಭಿಯಾಗಿದೆ. ಅದಕ್ಕೆ ಮೂಲ ಕಾರಣ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮೀನಾಥನ್. ೧೯೬೫-೬೮…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಅಲ್ಲೊಂದು ಪ್ರಕರಣ ನಡೆದಿದೆ. ಕೂಡಲೇ ಕಾರ್ಯಪ್ರವೃತ್ತವಾದ ಮಾಧ್ಯಮಗಳು ತಂತಮ್ಮ ಮೂಗಿನ ನೇರಕ್ಕೆ ವಿಷಯವನ್ನು ಅರ್ಥೈಸಿಕೊಂಡು ತಮ್ಮದೇ ರೋಚಕವಾದ ಮಾತುಗಳಲ್ಲಿ, ಸಿನಿಮೀಯ ರೀತಿಯಲ್ಲಿ ನಮ್ಮಲ್ಲಿಯೇ ಮೊದಲು ಬಿತ್ತರವಾಗುತ್ತಿರುವ ಬ್ರೇಕಿಂಗ್ ನ್ಯೂಸ್ ಎಂಬಂತೆ ವಿಷಯವನ್ನು ಹೇಳುತ್ತಾರೆ. ಹಾಗಾದರೆ ಮಾಧ್ಯಮಗಳದ್ದು ತಪ್ಪೇ? ಖಂಡಿತವಾಗಿಯೂ ತಪ್ಪು. ಪ್ರತಿಯೊಂದು ಘಟನೆಗೂ ಮೂರು ಆಯಾಮಗಳಿವೆ. ಒಂದು ನೀನು ನೋಡುವ ದೃಷ್ಟಿ ಮತ್ತೊಂದು ಪರರು ಅದನ್ನು ಅವಲೋಕಿಸುವ ರೀತಿ ಮತ್ತು ಮೂರನೆಯದ್ದು ನಿಜ ಸ್ಥಿತಿ. ಇದರಲ್ಲಿ ಯಾವುದನ್ನು ಹೇಳಬೇಕು? ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾದರೆ ಉತ್ತರ ಅತ್ಯಂತ ಸರಳ ಮತ್ತು ಸುಲಭ. ಮಾಧ್ಯಮದವರು ಸಂಪೂರ್ಣವಾಗಿ ನಿಜ ಸ್ಥಿತಿಯ ವಿವರವನ್ನು ಇಲ್ಲವೇ ಅದಕ್ಕೆ ಹತ್ತಿರವಾದ ವಿವರವನ್ನು ಬಿತ್ತರಗೊಳಿಸಬೇಕು. ನಾವು ನಂಬಿಕೊಂಡಿರುವುದು ಕೇವಲ ನಮ್ಮ ವೈಯುಕ್ತಿಕ ಅಭಿಪ್ರಾಯ ಬೇರೆಯವರು ನಂಬಿಕೊಂಡಿರುವುದು ಅವರ ವೈಯಕ್ತಿಕ ಅಭಿಪ್ರಾಯ … ಅದು ಸಾರ್ವತ್ರಿಕವಲ್ಲ. ವಸ್ತುನಿಷ್ಠ ವರದಿ ಮಾತ್ರ ಮಾಧ್ಯಮಗಳ ಕಾರ್ಯ ವ್ಯಾಪ್ತಿಗೆ ಬರಬೇಕು. ನಮಗೆ ಸರಿ ಕಂಡದ್ದೆಲ್ಲ…
ಲೇಖನ- ಸಂತೋಷ್ ರಾವ್ ಪೆರ್ಮುಡಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-574198ದೂ: 9742884160 ಉದಯರಶ್ಮಿ ದಿನಪತ್ರಿಕೆ ಕಲಾವಿದ ನಿದ್ದೆಯಲ್ಲೂ ಕಲೆಯನ್ನು ಆರಾಧಿಸುವವನು. ಕಲೆ ಎಂಬುದು ಒಂದೇ ಕ್ಷೇತ್ರದ ಸೊತ್ತಲ್ಲ, ಯಾವುದೇ ಕ್ಷೇತ್ರವಿರಲಿ ಅಲ್ಲಿ ಆಸಕ್ತಿ ಮತ್ತು ಶ್ರದ್ಧೆಯಿಂದ ಕೌಶಲವನ್ನು ಧಾರೆಯೆರೆದರೆ ಸಾಧಕನ ಪಟ್ಟ ದೊರೆತು ಸಾಧನೆಯ ತೃಪ್ತಿಯೂ ಶೀಘ್ರವಾಗಿ ದೊರೆಯುತ್ತದೆ. ಇಂತಹ ಸಾಧನೆಯ ಹಾದಿಯಲ್ಲಿರುವವನು ಧಾರವಾಡ ಜಿಲ್ಲೆಯ ಕೇಲಗೇರಿಯ ಯುವಕ ಅಮೃತ್ ಗೌಡ ಭಾವಿಕಟ್ಟಿ.ಹದಿನೆಂಟು ವರ್ಷದ ಯುವಕ ಅಮೃತ್ ಗೌಡ ಭಾವಿಕಟ್ಟಿ ಪ್ರಸ್ತುತ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ ಓದುತ್ತಿದ್ದಾನೆ. ಯುವಕ ಎಂದಾಕ್ಷಣ ನಮ್ಮ ಮುಂದೆ ಬರುವ ಚಿತ್ರಣ ಕೈಯಲ್ಲಿ ಮೊಬೈಲ್ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುವ ಯುವಕರದ್ದು. ಆದರೆ ಈ ಯುವಕನ ಕೈಯಲ್ಲಿ ಮೊಬೈಲ್ ಬದಲಿಗೆ ಕಲ್ಲಂಗಡಿ ಹಣ್ಣು ಇದೆ. ಇದೇನಪ್ಪಾ ಈತ ಇಷ್ಟೊಂದು ಕಲ್ಲಂಗಡಿ ಹಣ್ಣುಗಳನ್ನು ತಿನ್ನುತ್ತಾನೆಯೇ ಎಂಬ ಪ್ರಶ್ನೆಯು ಮನದಲ್ಲಿ ಮೂಡಬಹುದು. ಇಲ್ಲ ಈತ ಹಿಡಿಯುವ ಕಲ್ಲಂಗಡಿ ಹಣ್ಣುಗಳಲ್ಲಿ ವಿಭಿನ್ನವಾದ ಚಿತ್ರಗಳು ಮೂಡುತ್ತವೆ.…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ತೆಲಂಗಾಣ ರಾಜ್ಯಕ್ಕೆ 5 ಟಿಎಂಸಿ ಅಡಿ ನೀರನ್ನು ಯಾವುದೇ ಕಾರಣಕ್ಕೂ ಹರಿಸಬಾರದು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ, ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ತೆಲಂಗಾಣ ಸರ್ಕಾರ 5 ಟಿಎಂಸಿ ಅಡಿ ನೀರನ್ನು ಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರಬರೆದಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಪಕ್ಷದ ಅಧಿಕಾರ ಇದೆ. ರಾಜಕೀಯ ಹಿತದೃಷ್ಠಿಯಿಂದ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೀರು ಹರಿಸಿದರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಆಲಮಟ್ಟಿ, ನಾರಾಯಣಪುರ ಎರಡೂ ಜಲಾಶಯಗಳಲ್ಲಿ ಕುಡಿಯುವ ನೀರು, ಜಲಚರ, ನೀರು ಆವಿ ಆಗುವಿಕೆ, ಕೈಗಾರಿಕೆ, ವಿದ್ಯುತ್ ಸ್ಥಾವರಗಳು ಮತ್ತೀತರ ಬಳಕೆಗೆ ಕನಿಷ್ಠ 35 ಟಿಎಂಸಿ ಅಡಿ ನೀರು ಕಾಯ್ದಿರಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕಾಗುತ್ತದೆ. ಆದರೆ ಸದ್ಯ ಸಂಗ್ರಹವಿರುವ ನೀರಿನಲ್ಲಿ ಹಿಂಗಾರು…
ನಿಡಗುಂದಿಯ ಬನಶಂಕರಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ಕಲರವ | ಹಳ್ಳಿಯ ಸಂತೆ ವಾತಾವರಣ ಸೃಷ್ಟಿಸಿದ ವಿದ್ಯಾರ್ಥಿಗಳು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿಯಲ್ಲಿರುವ ಬನಶಂಕರಿ ಪಬ್ಲಿಕ್ ಸ್ಕೂಲ್ ಮತ್ತು ಪಿ ಯು ಕಾಲೇಜ್, ನೆಸ್ಟ್ (Nest) ಆಕಾಡೆಮಿ ಹೈದರಾಬಾದ ಸಹಯೋಗದೊಂದಿಗೆ ಮಕ್ಕಳ ಸಂತೆ ವಿನೂತನ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತರಕಾರಿ ಮಾರ್ಕೆಟ್ ಹೂವಿನ ಅಂಗಡಿ, ಜ್ಯೂಸು, ಮಿಟಾಯಿ ಪಾಪಡಿ, ತರಕಾರಿ ಅಂಗಡಿ , ಹಣ್ಣಿನ ಅಂಗಡಿ, Food counters ರೈಸ್, ಬಜಿ ವಡಾ ಪಾವ್, ತಾಜಾ ತಾಜಾ ತರಕಾರಿಗಳನ್ನು ಇಟ್ಟಿದ್ದು ವಿಶೇಷವಾಗಿತ್ತು.ಅದರಲ್ಲೂ ವಿದ್ಯಾರ್ಥಿಗಳು ತರಕಾರಿ ವಸ್ತುಗಳನ್ನ ಇಳಕಲ್ ಸೀರೆಯನ್ನು ಧರಿಸಿದ ವಿದ್ಯಾರ್ಥಿನಿಯರು ನೋಡುವವರಿಗೆ ಹಳ್ಳಿಯ ಸಂತೆಯ ವಾತಾವರಣವನ್ನು ಸೃಷ್ಟಿಸಿದ್ದರು.ಕೆಲ ವಿದ್ಯಾರ್ಥಿಗಳು ಮನೆಯಿಂದ ತಿನುಸುಗಳನ್ನು ತಂದು ಮಾರಾಟ ಮಾಡಿದರೆ, ಕೆಲ ವಿದ್ಯಾರ್ಥಿಗಳು ಮನೆಯಿಂದ ಶಾಲೆಗೆ ಗ್ಯಾಸ್ ಗಳನ್ನು ತಂದು ವಿದ್ಯಾರ್ಥಿಗಳೇ ಬಜಿಯನ್ನ ಮಾಡಿದ್ದು ಎಲ್ಲ ಪಾಲಕರ ಗಮನ ಸೆಳೆಯಿತು.ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎನ್ ಎಸ್ ಪಾಟೀಲ್, ಮಕ್ಕಳಿಗೆ ವ್ಯವಹಾರಿಕವಾದ…
11,000 ಪುಟಗಳ ತನಿಖಾ ವರದಿ ಕೋರ್ಟ್’ಗೆ ಸಲ್ಲಿಕೆ | ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.ತನಿಖಾಧಿಕಾರಿ ಎಸ್ಪಿ ಉದೇಶ್ ಅವರು, ಇಂದು ಬೆಳಗ್ಗೆ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11, 000 ಸಾವಿರ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,000 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ.ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕತೆಯಲ್ಲಿ ಮುಳುಗಿದ ಮನುಷ್ಯ ಕೌಟುಂಬಿಕ ಸಂಬಂಧಗಳಿಂದ ದೂರ ಉಳಿಯುತ್ತಿದ್ದಾನೆ. ವಿಭಕ್ತ ಕುಟುಂಬದಿಂದ ಮಾನವೀಯ ಮೌಲ್ಯಗಳು ಮರೆಯುತ್ತಿವೆ. ಸಂಸ್ಕೃತಿ, ಸಂದ್ರಾಯಗಳಿಂದ ಯುವಕ-ಯುವತಿಯರು ವಿಮುಖರಾಗುತ್ತಿದ್ದಾರೆ. ಮಾನಸಿಕ ದುಗುಡ ದುಮ್ಮಾನಗಳಿಂದ ಹೊರಬೇಕಾದರೆ ಸಂಗೀತ, ಸಾಂಸ್ಕೃತಿಕ, ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಳ್ಳಬೇಕು. ಉತ್ತಮ ಸಂಗೀತ, ಸಾಹಿತ್ಯ ಮತ್ತು ಕಲೆಗಳು ಮನುಷ್ಯನ ನೆಮ್ಮದಿಯ ಜೀವನದ ಸಂಗಾತಿಗಳು ಎಂದು ದರಬಾರ ಕಾಲೇಜಿನ ಉಪನ್ಯಾಸಕ ಹಾಗೂ ಪಂಡಿತ ಡಾ. ವೇದನಿಧಿ ಆಚಾರ್ಯ ಹೇಳಿದರು.ನಗರದ ಕರ್ನಾಟಕ ಕಲಾ ಸಂಘವು, ಬಿಡಿಈ ಬಾಲಕೀಯರ ಪ.ಪೂ. ಕಾಲೇಜಿನಲ್ಲಿ ಹಮ್ಮಿಕೊಂಡ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಶಿಕ್ಷಣ ಅಂಕಗಳಿಗೆ ಸೀಮಿತವಾಗಿದೆ. ಇಂದು ವಿದ್ಯೆಗೆ ಕೊರತೆಯಿಲ್ಲ. ಆದರೆ ಕೌಟುಂಬಿಕ ಬೆಲೆ ಅರಿತುಕೊಳ್ಳುತ್ತಿಲ್ಲ. ಪರಸ್ಪರ ಪ್ರೀತಿ, ಸಹೋದರತೆ ಭಾವ ಮೂಡಿದಾಗ ಮಾತ್ರ ಶಿಕ್ಷಣಕ್ಕೆ ಬೆಲೆ ಸಿಗುತ್ತದೆ ಎಂದರು.ಮುಖ್ಯ ಅತಿಥಿಗಳಾಗಿದ್ದ ಡಯಟ್ ಉಪನ್ಯಾಸಕ ನಾರಾಯಣ ಬಾಬಾನಗರ ಮಾತನಾಡಿ, ಕಳೆದ ೩೦ ವರ್ಷಗಳಿಂದ ಯಾವುದೇ ಫಲಾಪೆಕ್ಷೆಯಿಲ್ಲದೆ ಸಮಾಜಮುಖಿ ಕೆಲಸ ಮಾಡುತ್ತಿರುವ ಕರ್ನಾಟಕ ಕಲಾ ಸಂಘದ ಕಾರ್ಯ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರಾಚೀನ ಕಾಲದಿಂದಲೂ ಕರ್ತನ ಸಾಹಿತ್ಯ ವೈಶಿಷ್ಠ್ಯತೆ ಮೆರೆದಿದೆ. ಕಿರ್ತನ ಸಂಗೀತದ ನಾದ ಮಾಧುರ್ಯದೊಂದಿಗೆ ಗತಿಸಿಹೊದ ಪ್ರಾಚೀನ ಘಟನೆಗಳನ್ನು,ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಕಥಾ ಕೀರ್ತನ ಸಾಹಿತ್ಯ ತೋರಿಸಿಕೊಟ್ಟಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಬಸಪ್ಪ ಬಜಂತ್ರಿ ಬಾಗಲಕೋಟ ಹೇಳಿದರು.ಕರ್ನಾಟಕ ಸಂಗೀತ ನೃತ್ಯ ಅಕಾಡಮಿ ಹಾಗೂ ಸ್ಥಳಿಯ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಫೆ.19 ರಿಂದ ಐದು ದಿನಗಳ ವರೆಗೆ ಆಯೋಜಿಸಲಾದ ಜನಕಥಾಕಿರ್ತನ ಶಿಬಿರ ಮತ್ತು ಉತ್ಸವವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.ಸಾಹಿತಿ ರಾಜಶೇಖರ ಮಠಪತಿ ಮಾತನಾಡಿ, 19 ನೇ ಸತಮಾನದಲ್ಲಿ ಆಗಿಹೋದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯ ಆಯ್ದ ಸಂದರ್ಭಗಳನ್ನು ಕಿರ್ತನ ರೂಪದಲ್ಲಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.ಮೈಸೂರು ಭಾಗದಲ್ಲಿ ಇರತಕ್ಕಂತಹ ಕೀರ್ತನೆಗಳನ್ನು ಉತ್ತರ ಕರ್ನಾಕದ ಜನರಿಗೆ ತಿಳಿಸುವಂತದ್ದು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿರುವ ಜನಪದ ಸಾಹಿತ್ಯವನ್ನು ಸಂಸ್ಕೃತಿಯನ್ನ ದಕ್ಷಿಣ ಕರ್ನಾಟಕ ಭಾಗದವರಿಗೆ ತಿಳಿಸುವದೇ ಕಥಾ ಕೀರ್ತನ ಶಿಬಿರದ ಉದ್ದೇಶ.…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮೂಲಭೂತ ಸೌಲಭ್ಯಗಳಿಲ್ಲದೇ ಪರದಾಡುತ್ತಿರುವ ಕೂಡಗಿ ಎನ್ಟಿಪಿಸಿ ಕಾರ್ಮಿಕರ ಗೋಳು ಕೇಳದೇ ಇಲ್ಲಿನ ಅಧಿಕಾರಿಗಳು ನಿರ್ಲಕ್ಷ್ಯಭಾವ ತಾಳುತ್ತಿದ್ದಾರೆ ಎಂದು ಎನ್ಟಿಪಿಸಿ ಗುತ್ತಿಗೆ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಬಸವರಾಜ್ ಆಲೂರ ಆಕ್ರೋಶ ವ್ಯಕ್ತಪಡಿಸಿದರು.ಕೂಡಗಿ ಎನ್ಟಿಪಿಸಿ ಗುತ್ತಿಗೆ ಕಾರ್ಮಿಕರು ಸಮೀಪದ ಖಾಸಗಿ ಹೊಟೇಲ್ನಲ್ಲಿ ಬುಧವಾರ ಜರುಗಿಸಿದ ಕುಂದು ಕೊರತೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ಜ.೬ ರಂದು ಎನ್ಟಿಪಿಸಿ ಪ್ರವೇಶ ದ್ವಾರದೆದುರು ಸಹಸ್ರಾರು ಕಾರ್ಮಿಕರು ತಮಗೆ ಸಿಗಬೇಕಿದ್ದ ಮೂಲಭೂತ ಸೌಲಭ್ಯಗಳ ಕುರಿತು ಉರಿ ಬಿಸಿಲಲ್ಲೇ ಕುಳಿತು ಪ್ರತಿಭಟಿಸಿ ಗಮನ ಸೆಳೆದಿದ್ದರು. ಆಗ ಸ್ಥಾವರದ ಹಿರಿಯ ಅಧಿಕಾರಿಗಳು ಬಂದು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿಯೇ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡಿದ್ದರು. ಪ್ರಸ್ತುತ ಒಂದೂವರೆ ತಿಂಗಳು ಗತಿಸುತ್ತ ಬಂದರೂ ನಮ್ಮ ಒಂದೇಒಂದು ಬೇಡಿಕೆಯನ್ನು ಈ ಅಧಿಕಾರಿಗಳು ಈಡೇರಿಸಿಲ್ಲ. ಇದೇರೀತಿಯ ಮೊಂಡುತನವನ್ನು ಎನ್ಟಿಪಿಸಿ ಅಧಿಕಾರಿಗಳು ಪ್ರದರ್ಶಿಸುತ್ತ ಹೊರಟರೆ ಕೇಂದ್ರ ಕಾರ್ಮಿಕರ ಇಲಾಖೆ ಅಧಿಕಾರಿಗಳ ಬಳಿ ಶೀಘ್ರದಲ್ಲಿಯೇ ದೂರು ನೀಡುವುದಾಗಿ ಅವರು ಎಚ್ಚರಿಸಿದರು.ಕಾರ್ಮಿಕರ ಸಂಘದ ಅಧ್ಯಕ್ಷ ಆರೀಫ್ ತಾಳಿಕೋಟಿ…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹಿಂದು ಧರ್ಮದ ಅಪ್ರತಿಮ ಪ್ರತಿಪಾದಕ,ವೀರ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಮನಭಾವದಲ್ಲಿ ಹುದುಗಿದ್ದ ಹಿಂದುತ್ವದ ತಿರುಳುಳ್ಳ ದೇಶಪ್ರೇಮದ ವಿಚಾರಧಾರೆಗಳು ಅನನ್ಯವಾಗಿವೆ. ಅವು ಇಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಅಚ್ಚಳಿಯಾಗಿವೆ ಎಂದು ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ ಹೇಳಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಟ್ಟಾ ದೇಶಭಕ್ತಿ,ಸ್ವಾಭಿಮಾನಿಯಾಗಿದ್ದ ಛತ್ರಪತಿ ಶಿವಾಜಿಯವರ ರಾಷ್ಟ್ರ ಪ್ರೇಮ,ಧೈರ್ಯ,ಶೌರ್ಯ,ಸಾಹಸಮಯ ಗುಣಗಳು ಆವಣೀ೯ಯವಾಗಿವೆ ಎಂದರು.ಶಿವಾಜಿ ಮಹಾರಾಜರ ಜೀವನ ಚರಿತ್ರೆಯ ಯಶೋಗಾಥೆ ರೋಚಕಮಯವಾಗಿದೆ. ವೀರ,ಶೂರತೆ,ಸೌಹಾರ್ದತೆ ದಿಟ್ಟತೆಯ ಬಿಂಬಗಳು ಕಂಡಿವೆ. ರಾಷ್ಟ್ರ ರಕ್ಷಕವೆಂಬ ಹೆಗ್ಗಳಿಕೆಯ ಗುರುತುಗಳು ಅವರ ಧೀರತೆಯ ವ್ಯಕ್ತಿತ್ವಕ್ಕೆ ತಾಗಿವೆ.ಛಲಗಾರ,ಶ್ರೇಷ್ಠ ಆಡಳಿತಗಾರೆಂಬ ಖ್ಯಾತಿ ಪಡೆದು ಮಿನುಗಿದ್ದಾರೆ. ಜನಸಾಮಾನ್ಯರ ಕಳಕಳಿಗೆ ಸ್ಪಂದಿಸಿ ಜನೋಪಕಾರಿ ಸಮಾಜಸೇವಾ ಯೋಜನೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ಕಾರ್ಯರೂಪಕ್ಕೆ ತಂದು ಜನಮೆಚ್ಚುಗೆ ಪಡೆದಿದ್ದಾರೆ. ಶಿವಾಜಿ ಮಹಾರಾಜರು ದೇಶದ ಅಮೂಲ್ಯ ಆಸ್ತಿಯಾಗಿದ್ದಾರೆ.ಜನಮನದಲ್ಲಿ ಆತ್ಮಮನೋಬಲ ತುಂಬಿದ…
