Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯ 71ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಎಸ್ .ಎಸ್.ಎಲ್.ಸಿ. ವಿದ್ಯಾಥಿ೯ಗಳ ಬೀಳ್ಕೊಡುಗೆ ಸಮಾರಂಭ ಜರುಗಿತು.ಶಾಲೆಯ ಮುಖ್ಯಗುರುಗಳಾದ ಹೆಚ್.ಆರ್.ಬಗಲಿ ಅವರು ಶಾಲೆಯ ಮತ್ತು ವಿದ್ಯಾರ್ಥಿಗಳ ಸಾಧನೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ವ್ಹಿ.ಜಿ.ಮುತ್ತಿನ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರತಿವರ್ಷ ಉತ್ತಮ ಫಲಿತಾಂಶ ನೀಡುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟ ಶಿಕ್ಷಣ ಪಡಿಯುತ್ತಾ ಇದ್ದಾರೆ.ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನ ಪಡಬೇಕು ಮತ್ತು ತಂದೆ ತಾಯಿ ಶಿಕ್ಷಕರು ಹೆಮ್ಮೆ ಪಡುವ ಹಾಗೆ ಜೀವನ ರೂಪಿಸಿಕೊಳ್ಳಬೇಕು ಎಂದರು.ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಎಸ್.ಎಸ್.ಚೋರಗಿ ಮಾತನಾಡಿ, ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ, ಶ್ರಮಪಟ್ಟು ಓದಿದರೆ ಗೆಲುವು ಕಟ್ಟಿಟ್ಟ ಬುತ್ತಿ ಮತ್ತು ನಾವು ಯಾವಾಗಲೂ ನಮ್ಮ ಸಂಸ್ಕೃತಿ ಬಿಂಬಿಸುವ ಹಬ್ಬದ ಆಚರಣೆಗಳು ಆಚರಿಸಬೇಕು‌ ಎಂದರು.ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ ವಿ.ಎಸ್.ಗೀಡವಿರ, ಶಿಕ್ಷಕರಾದ ಎಸ್.ಆರ್. ಹಿಟ್ನಳೀ, ಟಿ.ಆರ್.ಕೋಳಿ, ಆರ್.ಆರ್.ಕೋಳಿ, ಪಿ.ಎಸ್.ತೋಟಗರ, ಎಸ್.ಜಿ.ಉಮರಾಣಿ, ಎಮ್.ಆಯ್.ಅಮರಖೇಡ, ಎಸ್.ಆಯ್.ಗಚ್ಚಿನಕಟ್ಟೀ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಹೇಳದ ಮಾತಿಲ್ಲ ಎಂಬಂತೆ ಸಮಾಜದ ಉದ್ಧಾರಕ್ಕಾಗಿ ಪ್ರತಿ ವಿಷಯ-ಸಂಗತಿ ಮೇಲೆ ವಚನಗಳ ಮೂಲಕ ಬೆಳಕು ಚೆಲ್ಲಿದ್ದಾರೆ. ಅವರ ತ್ರಿಪದಿಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನವನ್ನು ಹಸನಾಗಿಸಿಕೊಳ್ಳುವಂತೆ ಶಿಕ್ಷಕ ಸಂತೋಷ ಬಂಡೆ ತಿಳಿಸಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಗುರುವಾರದಂದು ಹಮ್ಮಿಕೊಂಡ ಕವಿ ಸರ್ವಜ್ಞರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.ಸರ್ವಜ್ಞ ಸೌಜನ್ಯಶೀಲ, ಗೌರವದ ಬದುಕನ್ನು ಸಾಗಿಸಿ,ಸಮಾಜ ತಿದ್ದುವ ಕೆಲಸ ಮಾಡುತ್ತಾ, ಹಳ್ಳಿಯ ಜಾನಪದ ಭಾಷಾ ಶೈಲಿಯಲ್ಲಿ, ಸಾಮಾನ್ಯ ಜನರಿಗೆ ಮನವರಿಕೆ ಆಗುವ ರೀತಿಯಲ್ಲಿ ವಚನಗಳನ್ನು ರಚಿಸಿದ್ದಾರೆ. ಅವರ ವಚನಗಳನ್ನು ಇಂದಿನ ಮಕ್ಕಳು, ಯುವಜನಾಂಗ ಅರ್ಥ ಮಾಡಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಕವಿ ಸರ್ವಜ್ಞನ ವಚನಗಳು ಸಾಮಾಜಿಕ ಸುಧಾರಣೆ, ಜಾತ್ಯಾತೀತ, ಮಾನವೀಯ ಮೌಲ್ಯ ಹಾಗೂ ಸರ್ವಕಾಲಿಕ ಸತ್ಯವನ್ನು ಪ್ರತಿಪಾದಿಸುತ್ತವೆ. ಅವರು ಸರಳ, ಆದರ್ಶ, ಸುಂದರ ಸಮಾಜವನ್ನು ನಿರ್ಮಿಸಲು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ನಿರ್ಧಾರ ಖಂಡಿಸಿ ನಗರದಲ್ಲಿ ಎಬಿವಿಪಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯದ ಉಳಿವಿಗಾಗಿ ಭಿಕ್ಷಾಟನೆ ಮಾಡಿದ ಹಣವನ್ನು ಬುಧವಾರ ಮುಖ್ಯಮಂತ್ರಿಗಳ ಖಾತೆಗೆ ಜಮಾ ಮಾಡಲಾಯಿತು.ಪಟ್ಟಣದ ತಾಲ್ಲೂಕು ಸರಕಾರಿ ಬಸ್ ನಿಲ್ದಾಣ ಹಾಗೂ ಪ್ರಮುಖ ಬಿದಿಗಳಲ್ಲಿ ಎಬಿವಿಪಿ ಕಾರ್ಯಕರ್ತರು ಭಿಕ್ಷಾಟನೆ ನಡೆಸಿ ಸುಮಾರು1312 ರೂಪಾಯಿ ಸಂಗ್ರಹಿಸಿ ಮುಖ್ಯ ಮಂತ್ರಿ ಖಾತೆಗೆ ಜಮಾ ಮಾಡಿದ್ದಾರೆ.ಈ ಸಂದರ್ಭದಲ್ಲಿಎಬಿವಿಪಿ ಪದಾಧಿಕಾರಿ ಸಚಿನ್ ದಾನಗೊಂಡ ಪ್ರಾಂತ ಕಾರ್ಯಕಾರಣಿ ಸದಸ್ಯ ಮಾತನಾಡಿ, ಸಾಮಾನ್ಯವಾಗಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯ ಇರಬೇಕು ಎಂಬುದು ಆದರ್ಶ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳು ಸಂಖ್ಯೆಗೆ ಹೋಲಿಕೆ ಮಾಡಿದರೆ ಸದ್ಯದ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ ಪ್ರಮಾಣಪತ್ರ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು 200 ಕಿಮೀ ವಿದ್ಯಾರ್ಥಿಗಳು ಪ್ರಯಾಣ ಮಾಡಬೇಕು. ಇಂತಹ ಸಮಸ್ಯೆಗೆ ಪರಿಹಾರ ಕಲ್ಪಿಸಿರುವ ಹೊಸ ವಿವಿಗಳನ್ನು ಉಳಿಸಿಕೊಳ್ಳಬೇಕು. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿವಿಗಳನ್ನು ಅಭಿವೃದ್ಧಿಪಡಿಸಬೇಕು ವಿನಾ ಅತಂತ್ರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ಇಂಗಳಗಿ ಪಿಕೆಪಿಎಸ್ ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಎಲ್ಲವೂ ಶಾಸನಬದ್ಧವಾಗಿಯೆ ನಡೆಯುತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ದಾಖಲೆ ರಹಿತವಾಗಿ ಏನ ಏನೋ ಆರೋಪ ಮಾಡುತ್ತೀರುವುದು ಕಂಡರೆ, ಕೃಷಿ ಪತ್ತಿನ ಸಹಕಾರಿ ಸಂಘದ ಬೆಳವಣಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಸಂಘದ ಅಧ್ಯಕ್ಷ ಪ್ರಭು ಹೊಸಮನಿ ಕಿಡಿಕಾರಿದರು.ಬುಧವಾರ ಪಟ್ಟಣದ ಖಾಸಗಿ ಹೊಟೆಲ್ ಯೊಂದರಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಇಂಗಳಗಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಎಲ್ಲವೂ ಶಾಸನಬದ್ಧವಾಗಿದೆ. ವಾರ್ಷಿಕ ಸಭೆ ಸೇರಿದಂತೆ ಸಂಘದ ಎಲ್ಲಾ ಚಟುವಟಿಕೆಗಳು ಕಾನೂನು ಅಡಿಯಲ್ಲಿಯೇ ನಡೆದಿವೆ. ಅದಲ್ಲದೆ ಚುನಾವಣೆ ಎಲ್ಲಾ ಪ್ರಕ್ರಿಯೆಗಳು ಇಲಾಖೆಯ ಜಿಲ್ಲಾ ಅಧಿಕಾರಿ ಮಾರ್ಗಸೂಚಿಯಲ್ಲಿಯೇ ನಡೆಯುತ್ತಿದೆ. ಆದರೆ ಸಂಘದ ಕಾರ್ಯದರ್ಶಿ ಅವರಿಗೆ ಬೆದರಿಕೆ ಹಾಕಿ ಸಾಮಾನ್ಯ ಸಭೆ ಪುಸ್ತಕ ತೆಗೆದುಕೊಂಡು ಹೋಗಿ ಗೈರಾದ ಸದಸ್ಯರ ಸಹಿಗಳು ಮಾಡಿದ್ದಾರೆ ಎಂದು ಹೇಳಿದರು.ಇನ್ನೂ ಸಂಘದ ಕಾರ್ಯದರ್ಶಿ ಅವರ ಕಣ್ಣತಪ್ಪಿನಿಂದ ಸಣ್ಣ-ಪುಟ್ಟ ತಪ್ಪುಗಳಾಗಿದ್ದು, ಅವುಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಶ್ವದಲ್ಲಿ ಗಂಭೀರವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ತೊಡೆದು ಹಾಕುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ವಿಶ್ವದಾದ್ಯಂತ ಪ್ರತಿ ವರ್ಷ ಫೆ೨೦ ರಂದು ಆಚರಿಸಲಾಗುತ್ತದೆ ಎಂದು ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಸಿಂಧು ಪೋತದಾರ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಎಲ್ಲ ಜನತೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆ ಮಾಡಿದಲ್ಲಿ ರಾಷ್ಟçದ ಅಭಿವೃದ್ಧಿ ಸಾಧ್ಯ. ಹಾಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸಮಾಜದಲ್ಲಿ ಬದಲಾವಣೆ ತರುವದೇ ದಿನಾಚರಣೆಯ ಪ್ರಮುಖ ಉದ್ದೇಶ ಎಂದರು.ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಮಾತನಾಡಿ, ಮನುಷ್ಯ ಸಂಘಜೀವಿ. ಆತನಿಗೆ ಸಮಾಜದಲ್ಲಿ ವಾಸಿಸುವದು ಎಷ್ಟು ಅನಿವಾರ್ಯವೋ ಅಷ್ಟೇ ಅನಿವಾರ್ಯ ಆತನಿಗೆ ಸಾಮಾಜಿಕ ನ್ಯಾಯ ಕೊಡಿಸುವದೂ ಆಗಿದೆ. ಇತಿಹಾಸದ ಪುಟಗಳನ್ನು ತಿರುವಿದಾಗ ವಿವಿಧ ಪದ್ಧತಿಗಳ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೨೦೨೪-೨೫ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಮಹಿಳಾ ವಿವಿಯ ವುಶು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ವುಶು ಕ್ರೀಡೆಯು ಇದೇ ದಿ. ೨೨ ರಿಂದ ೨೭ ರವರೆಗೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಜರುಗಲಿದ್ದು ಸದರಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವುಶು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ತಂಡದ ತರಬೇತಿದಾರಾಗಿ ಅನಿತಾ ಚವ್ಹಾಣ ಮತ್ತು ವ್ಯವಸ್ಥಾಪಕರಾಗಿ ಜಬಿನತಾಜ ಜಿಗಳೂರ ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.೨೩ರ ಬೆಳಿಗ್ಗೆ ೦೯ಕ್ಕೆ ಜಿಲ್ಲಾ ಪೋಲಿಸ್ ಪರೇಡ ಮೈದಾನದಲ್ಲಿ ಶ್ವಾನ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಎಲ್ಲ ಶ್ವಾನ ಮಾಲೀಕರು ತಮ್ಮ ಎಲ್ಲ ವಿವಿಧ ತಳಿಗಳ ಶ್ವಾನಗಳ ಹೆಸರನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ ವಿಜಯಪುರ ಇವರಲ್ಲಿ ಹೆಸರು ನೋದಾಯಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಎಸ್.ಕನಮಡಿ, ಮುಖ್ಯ ಪಶುವೈದ್ಯಾಧಿಕಾರಿಗಳು ಮೊ:೬೩೬೧೩೦೭೯೧೬, ಡಾ. ಸುಜಾತ ಎಸ್.ಎಂ, ಮುಖ್ಯ ಪಶುವೈದ್ಯಾಧಿಕಾರಿಗಳ ಮೊ: ೯೮೪೫೮೭೩೭೦೧, ಡಾ|| ರಮೇಶ ರಾಠೋಡ ಹಿರಿಯ ಪಶುವೈದ್ಯಾಧಿಕಾರಿಗಳು ಪಶು ಚಿಕಿತ್ಸಾಲಯ ತಿಡಗುಂದಿ ವಿಜಯಪುರ ಮೊಬೈಲ್ ಸಂಖ್ಯೆ:೯೪೮೦೩೫೮೪೩೫, ಡಾ. ಸತೀಶ ಪಾಟೀಲ್ ಹಿರಿಯ ಪಶುವೈದ್ಯಾಧಿಕಾರಿ ಮೊ.೭೩೪೯೪೪೨೩೧೮ಈ ಶ್ವಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉತ್ತಮ ಶ್ವಾನಗಳಿಗೆ ಬಹುಮಾನ ನೀಡಲಾಗುವುದು. ಶ್ವಾನಗಳ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉಪನಿರ್ದೇಶಕರು ಹಾಗೂ ಮುಖ್ಯ ಪಶುವೈದ್ಯಾಧಿಕಾರಿಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರು ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಆದರ್ಶ ಐಟಿಐ ಶಿವಣಗಿ ಇವರ ಸಹಯೋಗದಲ್ಲಿ ಶಿವಣಗಿಯ ಆದರ್ಶ ಐಟಿಐ ಕಾಲೇಜಿನ ಆವರಣದಲ್ಲಿ ಹೊಸಪೇಟೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಕಂಪನಿ ಇವರ ವತಿಯಿಂದ ಅಪ್ರೆಂಟಿಶಿಪ್ ಗಾಗಿ ಕ್ಯಾಂಪಸ್ ಸಂದರ್ಶನ ಫೆ.೨೭ರ ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.ಐಟಿಐ ಪಾಸಾದ ೨೫ ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ೦೪ ಫೋಟೊ, ಆಧಾರ ಕಾರ್ಡ್, ಸಹಿತ ಸ್ವ-ವಿವರದೊಂದಿಗೆ ಶಾಲಾ ಶೈಕ್ಷಣಿಕ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.೮೮೬೭೮೪೮೫೮೧ ಹಾಗೂ ೯೯೪೫೦೦೦೭೯೩ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುದ್ದೇಬಿಹಾಳದ ನಗರಕ್ಕೆ ಹೊಸದಾಗಿ ಸೃಜಿಸಲಾದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಲಯಕ್ಕೆ ಹೋಗಿ ಬರುವ ಕಕ್ಷಿದಾರರು, ನ್ಯಾಯವಾದಿಗಳು, ವಕೀಲರು ನ್ಯಾಯಾಲಯದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ವಿಜಯಪುರ ನಗರದಿಂದ ಮುದ್ದೇಬಿಹಾಳ ನಗರಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ವತಿಯಿಂದ ನೂತನವಾಗಿ ವೇಗದೂತ ಬಸ್ ಆರಂಬಿಸಲಾಗಿದೆ.ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ನಗರದ ಕೋರ್ಟ್ ಆವರಣದಲ್ಲಿ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ವಿಜಯಪುರ (ಕಾರ್ಯಸ್ಥಳ ಮುದ್ದೇಬಿಹಾಳ) ಶ್ರೀಮತಿ ಸಿಂಧೂ ಪೋತದಾರ ಅವರು ನೂತನವಾಗಿ ಕಲ್ಯಾಣ ಕರ್ನಾಟಕ ಆರಂಭಿಸಲಾದ ಬಸ್‌ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ವಿಜಯಪುರದಿಂದ ಬೆಳಿಗ್ಗೆ ೮ ಗಂಟೆಗೆ ಹೊರಟು ೧೦ ಗಂಟೆಗೆ ಮುದ್ದೇಬಿಹಾಳನ್ನು ತಲುಪುತ್ತದೆ. ಸಾಯಂಕಾಲ ೬ ಗಂಟೆಗೆ ಮುದ್ದೇಬಿಹಾಳದಿಂದ ಹೊರಟು ವಿಜಯಪುರಕ್ಕೆ ರಾತ್ರಿ ೮ ಗಂಟೆಗೆ ತಲುಪಲಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೆಕೆಂದು ಸಿಂಧೂ ಪೋತದಾರ ಹೇಳಿದರು.ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ…

Read More

ವಿಜಯಪುರ ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಎಡಿಸಿ ಸೋಮಲಿಂಗ ಗೆಣ್ಣೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೇರ-ನಿಷ್ಠುರ, ಆದರ್ಶ ವಿಚಾರಗಳನ್ನು ಹಾಗೂ ಸತ್ಯ ನುಡಿಗಳನ್ನು ತ್ರಿಪದಿಗಳ ಮೂಲಕ ಸಾರಿ, ಜನಮಾನಸದಲ್ಲಿ ನೆಲೆನಿಂತ ಕವಿ ಸರ್ವಜ್ಞ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ನಡೆದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂಡದನ್ನು, ಅನುಭವಿಸಿದನ್ನು ಕೇವಲ ಮೂರು ಸಾಲುಗಳಲ್ಲಿ ಸರಳ ಹಾಗೂ ಸುಂದರವಾಗಿ ಒಳಿತು ಕೆಡಕುಗಳ ಸಂದೇಶವನ್ನು ತ್ರಿಪದಿಗಳಲ್ಲಿ ಸರ್ವಜ್ಞರು ಈ ಲೋಕಕ್ಕೆ ಸಾರಿದರು.ಸಕಲ ಸಂಪತ್ತಿನಲ್ಲಿ ವಿದ್ಯೆಯೇ ಶ್ರೇಷ್ಠ ಸಂಪತ್ತು. ವಿದ್ಯೆ ಎಂಬ ಸಂಪತ್ತನ್ನು ದಾರ್ಶನಿಕರ, ವಚನಕಾರರ ಸಾರ ಇಂದಿನ ಯುವ ಜನಾಂಗ ಅರಿತುಕೊಳ್ಳಬೇಕು. ಇಂತಹ ಸತ್ಪುರುಷರು ಸಾರಿದ ಸಂದೇಶ ಅವರ ನುಡಿಗಳನ್ನು ಮಕ್ಕಳಿಗೆ ತಿಳಿಸಿಕೊಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಬಹುದು ಎಂದು ಅಭಿಪ್ರಾಯ ವ್ಯಕ್ತ…

Read More