Author: editor.udayarashmi@gmail.com

ಬಸವನಬಾಗೇವಾಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯೆ ಜಗದೇವಿ ಗುಂಡಳ್ಳಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯ ಅಶೋಕ ಹಾರಿವಾಳ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಘೋಷಿಸಿದರು.ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಗದೇವಿ ಗುಂಡಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಶೋಕ ಹಾರಿವಾಳ, ನಜೀರ ಗಣಿ, ಬಿಜೆಪಿ ಪಕ್ಷದ ಸದಸ್ಯ ಅಶೋಕ ಸಂಪನ್ನವರ ನಾಮಪತ್ರ ಸಲ್ಲಿಸಿದ್ದರು. ಸದಸ್ಯ ನಜೀರ ಗಣಿ ನಾಮಪತ್ರ ಹಿಂದಕ್ಕೆ ಪಡೆದರು. ಅಶೋಕ ಹಾರಿವಾಳ ಪರವಾಗಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ 19 ಸದಸ್ಯರು ಕೈ ಎತ್ತಿದ್ದರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಸದಸ್ಯ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿ ಠೇವಣಿದಾರರಲ್ಲಿ ಮುಗಿಲು ಮುಟ್ಟಿದ ಆತಂಕ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯಲ್ಲಿಟ್ಟಿದ್ದಠೇವಣಿದಾರರ ಹಣವನ್ನು ಮರಳಿಸಲು ಯಾವುದೇ ದಿಟ್ಟ ಕ್ರಮಕ್ಕೆ ಮುಂದಾಗದೇ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ನೊಂದ ಠೇವಣಿದಾರರು ಆಕ್ರೋಶಭರಿತರಾಗಿ ಹೋರಾಟದ ಹಾದಿ ತುಳಿಯುವ ನಿರ್ಧಾರಕ್ಕೆ ಬಂದಿದ್ದಾರೆ.ಈ ಕುರಿತು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ ನೊಂದ ಠೇವಣಿದಾರರು,ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳು. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ. ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ ಠೇವಣಿ ಹಣವನ್ನ ಇಟ್ಟಿದ್ದರು. ಚಿತ್ರ ಉದ್ಯಮಿ ಆನಂದ ಅಪ್ಪುಗೋಳ ಎಂಬ ವಂಚಕ ಠೇವಣಿದಾರರಿಗೆ ಪಂಗನಾಮ ಹಾಕಿದ್ದು ಸಾವಿರಾರು ಕೋಟಿ…

Read More

ರಂಜಾನ್ ಹಬ್ಬದ ಮರುದಿನ ಮುಸ್ಲಿಮರು ಆಲಮಟ್ಟಿಯ ಉದ್ಯಾನಕ್ಕೆ ಭೇಟಿ ನೀಡುವುದು ವಾಡಿಕೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರಂಜಾನ್ ಹಬ್ಬದ ಅಂಗವಾಗಿ ಆಲಮಟ್ಟಿಯ ವಿವಿಧ ಉದ್ಯಾನಗಳಿಗೆ ಮಂಗಳವಾರ ೧೦ ಸಾವಿರಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದರು.ರಾಕ್ ಉದ್ಯಾನವಂತೂ ಪ್ರವಾಸಿಗರಿಂದ ತುಂಬಿತ್ತು.ಪ್ರತಿ ವರ್ಷ ರಂಜಾನ್ ಹಬ್ಬದ ಮರುದಿನ ಮುಸ್ಲಿಮರು ಆಲಮಟ್ಟಿಯ ವಿವಿಧ ಉದ್ಯಾನಕ್ಕೆ ಭೇಟಿ ನೀಡುವುದು ಹೆಚ್ಚು.ಬೆಳಿಗ್ಗೆಯಿಂದಲೇ ಕಾರು, ಟಂಟಂ, ಬಸ್ ಹಾಗೂ ರೈಲಿನ ಮೂಲಕ ಆಗಮಿಸಿದ ಸಹಸ್ರಾರು ಪ್ರವಾಸಿಗರು ರಾಕ್ ಉದ್ಯಾನದ ಮುಂದೆ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂತು.ಮಧ್ಯಾಹ್ನದ ನಂತರ ಉದ್ಯಾನ ಗಳಲ್ಲಿ ಜನಜಂಗುಳಿ ಇನ್ನಷ್ಟು ಹೆಚ್ಚಿತು. ಸಂಜೆಯವರೆಗೂ ಜನ ಬರುತ್ತಲೆ ಇದ್ದರು. ಬುತ್ತಿ ಕಟ್ಟಿಕೊಂಡು ಕುಟುಂಬ ಸಮೇತರಾಗಿ ಬಂದು ರಾಕ್ ಉದ್ಯಾನ ಸೇರಿ ನಾನಾ ಕಡೆ ಊಟ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೃಷ್ಣಾ ನದಿಯ ತಟದಲ್ಲಿಯೂ ಜನಜಂಗುಳಿ ಹೆಚ್ಚಿತ್ತು.ಟಂಟಂ, ಟ್ರಾಕ್ಸ್, ಕಾರ್, ಬೈಕ್, ಮೂಲಕ ಉದ್ಯಾನಕ್ಕೆ ಬರುವವರ ಸಂಖ್ಯೆಯೂ ಹೆಚ್ಚಿತ್ತು. ಚಕ್ಕುಲಿ, ಐಸ್‌ಕ್ರೀಂ, ನೀರು, ದಿಢೀರ್ ಫೋಟೋ…

Read More

ತಾಳ್ಮೆ ಪರೀಕ್ಷೆ ಮಾಡಬೇಡಿ-ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಖಡಕ್ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ, ಕಾರ್ಯದಲ್ಲಿ ಅಲಕ್ಷ್ಯತನ, ನಿಷ್ಕಾಳಜಿ ನಾನು ಸಹಿಸುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವ ಕೆರೆ ಯಾವ ಇಲಾಖೆಗೆ ಸೇರಿದೆ ಎಂಬುದರ ಕುರಿತು ಒಂದು ವಾರದೊಳಗಾಗಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳ ಆರ್‌ಟಿಸಿ ಇಂದೀಕರಣ ಮಾಡಿ ಮಾಲೀಕತ್ವ ನಮೂದಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ, ಭೂಮಾಪನ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ದಿ ಕುರಿತು ಸಭೆ ನಡೆಸಿ ಅವರು ಸೂಚನೆ ನೀಡಿದ ಅವರು, ಆಯಾ ತಾಲೂಕಾ ತಹಶೀಲ್ದಾರ, ಭೂಮಾಪನ ಇಲಾಖೆ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು. ಅವಶ್ಯವಿದ್ದಲ್ಲಿ ಪೋಲಿಸರ ಸಹಾಯ ಪಡೆದು ತೆರವಿಗೆ ಕ್ರಮ…

Read More

ದರ ಏರಿಕೆ, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ & ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಖಂಡಿಸಿ ಈ ಯಾತ್ರೆ :ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಲೆ ಏರಿಕೆ, ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್.7ರಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿ ಮುಂದಾಗಿದೆ.ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸಿದ ಕ್ರಮ ಖಂಡಿಸಿ ಯತ್ನಾಳ ಅಭಿಮಾನಿಗಳು ಪ್ರತಿಭಟನೆ ಕೈಗೊಂಡು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಸಭೆ ಸೇರಿದ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿಮಾನಿಗಳು ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುಧ್ದ ಧಿಕ್ಕಾರ ಕೂಗುತ್ತ ಅಂಬೇಡ್ಕರ ವೃತ್ತದಲ್ಲಿ ಅರ್ಧಘಂಟೆಗಳ ಕಾಲ ಹೆದ್ದಾರಿ ಬಂದ್ ಮಾಡಿ ಸಭೆ ಆರಂಭಿಸಿದರು.ಈ ಸಂದರ್ಭದಲ್ಲಿ ಮತಕ್ಷೇತ್ರದ ಬಿಜೆಪಿ ಧುರೀಣ ಬಸನಗೌಡ ಪಾಟೀಲ (ನಾಗರಾಳಹುಲಿ), ಮಾತನಾಡಿ, ಯತ್ನಾಳರನ್ನು ಪಕ್ಷದಿಂದ ಹೊರಹಾಕುವುದರ ಮೂಲಕ ಎಲ್ಲ ಲಿಂಗಾಯತ ಪ್ರಮುಖ ನಾಯಕರನ್ನು ಮೂಲೆಗುಂಪು ಮಾಡುವುದಾಗಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಹಿಂದೂಗಳ ಬೆನ್ನಿಗೆ ನಿಂತವರು ಯತ್ನಾಳರು ಮಾತ್ರ ಎಂದು ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆಯ ಮಡುಗೌಡ ಬಿರಾದಾರ, ಎ.ಎಸ್.ಪಾಟೀಲ (ನಡಹಳ್ಳಿ) ನಡೆಯನ್ನು ಪ್ರಸ್ತಾಪಿಸಿ ಮಾತನಾಡುತ್ತ, ದೇವರಹಿಪ್ಪರಗಿ ಮತಕ್ಷೇತ್ರದ ಎರಡು ಅವಧಿಯ ಅಧಿಕಾರ ಅನುಭವಿಸಿದ ತಾವು ಈ ಮತಕ್ಷೇತ್ರದ ಅಭಿವೃದ್ದಿಗೆ ಮಾತ್ರ ಶೂನ್ಯ ಕೊಡುಗೆ ನೀಡಿದ್ದೀರಿ. ನಿಮಗೆ ಯತ್ನಾಳರ ಬಗ್ಗೆಯಾಗಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು. ನಿಹಾಲ್ ಶ್ರೀಶೈಲ ಮಾಳಿ ಇವನು ೨೦೨೪-೨೫ ನೇ ಸಾಲಿನ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದು ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಕ್ಕಾಗಿ ಕು. ನಿಹಾಲ ಗೆ ಮಂಗಳವಾರ ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯೆಯ ಅಂಗವಾಗಿ ಸ್ನಾನಕ್ಕಿಳಿದ ಮೂವರಲ್ಲಿ ನಾಪತ್ತೆಯಾಗಿದ್ದ ಇಬ್ಬರ ಶವಗಳು ಮಂಗಳವಾರ ದೊರಕಿವೆ.ಆಲಮಟ್ಟಿ ಶಾಸ್ತ್ರಿ ಜಲಾಶಯದ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಈಜಾಡಲು ಹೋಗಿದ್ದಮೂವರಲ್ಲಿ ಒಬ್ಬನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಎರಡು ದಿನಗಳ ಕಾಲ ಹುಡುಕಾಟ ನಡೆದಿತ್ತು. ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು.ಭಾನುವಾರವೇ ಸೋಮಶೇಖರ ಬೊಮ್ಮಣ್ಣ ದೇವರಮನಿ (೧೫) ಶವ ಪತ್ತೆಯಾಗಿದ್ದು. ಇವನೊಂದಿಗೆ ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (೧೫), ಪರನಗೌಡ ಮಲ್ಲಪ್ಪ ಬೀಳಗಿ (೧೭) ಕಾಣೆಯಾಗಿದ್ದರು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.ಘಟನೆ ನಡೆದ ತಕ್ಷಣ ಕಾಣೆಯಾದವರ ಹುಡುಕಾಟಕ್ಕೆ ಮೀನುಗಾರರು, ಅಗ್ನಿಶಾಮಕದಳದವರು ಅವಿರತವಾಗಿ ನದಿಯಲ್ಲಿ ಶೋಧ ಕಾರ್ಯ ನಡೆಸಿ ಕೊನೆಗೂ ಮಂಗಳವಾರ ಶವ ದೊರಕಿತು.ಪ್ರಕರಣ ಬಾಗಲಕೋಟ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಅವಧಿಯನ್ನು ಏಪ್ರಿಲ್ ೨೫ರ ವರೆಗೆ ಹಾಗೂ ಖರೀದಿ ಅವಧಿಯನ್ನು ಮೇ ೦೧ರವರೆಗೆ ವಿಸ್ತರಣೆ ಮಾಡಲಾಗಿದೆ.೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ೭,೫೫೦ ರೂ. ಜೊತೆಗೆ, ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲಿಗೆ ರೂ.೪೫೦ ಸೇರಿದಂತೆ ರೂ.೮,೦೦೦ ಪ್ರತಿ ಕ್ವಿಂಟಾಲಿಗೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦/೧೧ ಕೆ.ವ್ಹಿ ಉಮರಾಜ (ರೇವತಗಾಂವ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ ೨x೧೦ ಎಮ್.ವಿ ಸಾಮರ್ಥ್ಯದ ಪರಿವರ್ತಕಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ೧೧ ಕೆ.ವ್ಹಿ ಟಾಕಳಿ ಐಪಿ, ೧೧ ಕೆ.ವ್ಹಿ ಕಲ್ಮಡ ಐಪಿ ಹಾಗೂ ೧೧ ಕೆ.ವ್ಹಿ ಕೆರೂರು ಎನ್.ಜೆ.ವೈ ನೀರು ಸರಬರಾಜು ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೨ರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ಗಂಟೆ ವರೆಗೆ ಹಾಗೂ ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ ವಿತರಣಾ ಕೇಂದ್ರದಿಂದ ಹೊರಹೋಗುವ ೧೧ ಕೆ.ವ್ಹಿ ಅಂಕಲಮ್ಮ ಐಪಿ, ೧೧ ಕೆ.ವ್ಹಿ ಕಲ್ಮಡ ಐಪಿ ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೩ರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಅದರಂತೆ, ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ ವಿತರಣಾ ಕೇಂದ್ರದಿಂದ ಹೊರಹೋಗುವ ೧೧ ಕೆ.ವ್ಹಿ ಅಂಕಲಮ್ಮ ಐಪಿ ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೪ರ ಮಧ್ಯಾಹ್ನ ೨ ರಿಂದ ಸಂಜೆ ೬ಗಂಟೆ ವರೆಗೆ…

Read More