Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ವಿಜಯಪುರ ಇವರ ಮೂಲಕ ೨೨೦/೧೧೦/೧೧ ಕೆ.ವ್ಹಿ ಬೇ ಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ, ೨೨೦/೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರ ಜುಮನಾಳ, ವಿಜಯಪುರ ನಗರ(ಸಿಟಿ), ಕೆಐಎಡಿಬಿ, ಹಾಗೂ ಭೂತನಾಳ ಉಪ ಕೇಂದ್ರದಲ್ಲಿಯೂ ಮತ್ತು ೧೧೦/೧೧ ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರ ಮಮದಾಪುರ, ಬೆಳ್ಳುಬ್ಬಿ, ದೇವರಗೆಣ್ಣೂರ, ಶಿರಬೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ, ಹಾಗೂ ನಿಡೋಣಿ ಮತ್ತು ೧೧೦/೩೩/೧೧ ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರ ತಿಕೋಟ, ತೊರವಿ, ಟಕ್ಕಳಕಿ, ಕನಮಡಿ ಹಾಗೂ ಹೊನವಾಡ ವಿದ್ಯುತ್ ಕೇಂದ್ರಗಳಿಂದ ಹೊರಹೋಗುವ ಎಲ್ಲಾ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಮಾರ್ಚ್ ೨೨ರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಕಾರಣ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ವಿವಿಧ ಶಿಕ್ಷಣ ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ದೀರ್ಘಕಾಲದಿಂದ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ನೇಮಕ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಗ್ರಂಥಾಲಯ ಸಂಘದ ಅಧ್ಯಕ್ಷ ಎಂ.ಕೆ. ಬಿರಾದಾರ ರಾಜ್ಯದ ವಿಶ್ವವಿದ್ಯಾಲಯಗಳು, ಸರ್ಕಾರಿ ಹಾಗೂ ಅನುದಾನಿತ ಪ್ರಥಮದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಪಿಯು ಕಾಲೇಜುಗಳಲ್ಲಿ ಅನೇಕ ಮಾನ್ಯಿತ ಗ್ರಂಥ ಪಾಲಕರ ಹುದ್ದೆಗಳು ದೀರ್ಘಕಾಲದಿಂದ ಖಾಲಿಯಾಗಿವೆ. ಇದಲ್ಲವೆ ಸಾರ್ವಜನಿಕ ಗ್ರಂಥಾಲಯಗಳು ರಾಜ್ಯ ಕೇಂದ್ರ, ಜಿಲ್ಲಾಕೇಂದ್ರ, ನಗರ ಕೇಂದ್ರ ಹಾಗೂ ತಾಲೂಕು ಗ್ರಂಥಾಲಯಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಗ್ರಂಥಾಲಯಗಳು, ಕರ್ನಾಟಕ ಪಬ್ಲಿಕ್ ಶಾಲೆಗಳ ಗ್ರಂಥಾಲಯಗಳು ಹಾಗೂ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ವಿಧಾನಸೌಧ, ಪುರಾತತ್ವ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿಯೂ ಗ್ರಂಥಪಾಲಕರ ಕೊರತೆ ತೀವ್ರವಾಗಿದೆ ಎಂದು ಹೇಳಿದರು.ಇದು ಕೇವಲ ಹುದ್ದೆಯ ಪ್ರಶ್ನೆಯಲ್ಲ ಇದು ಸಾವಿರಾರು ವಿದ್ಯಾವಂತ ಯುವಕರ ಬದುಕಿನ ಆಶೆಗಳ ಪ್ರಶ್ನೆಯಾಗಿದೆ. ಸಾಮಾಜಿಕ ಹಾಗೂ ಆರ್ಥಿಕವಾಗಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೊಪ್ಪಳ ಗವಿಮಠದ ಪ ಪೂ ಶ್ರೀ ಗವಿಸಿದ್ಧೆಶ್ವರ ಶ್ರೀಗಳು ಪಾವನ ಸಾನಿದ್ಯ ವಹಿಸಿ ಮಾರ್ಚ್ 22 ರಂದು ರವಿವಾರ ಸಂಜೆ 4 ಗಂಟೆಗೆ ತಾಲೂಕಿನ ರೋಣಿಹಾಳ ಗ್ರಾಮದ ಶ್ರೀ ಎಡೆಯೂರ ಸಿದ್ಧಲಿಂಗೇಶ್ವರ ಪೂರ್ವ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ರೋಣಿಹಾಳ ಶ್ರೀ ಎ ಸಿ ವಿ ವ ಸಂಘದ ಅಧ್ಯಕ್ಷ ರಮೇಶ ಬಿರಾದಾರ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ವಹಿಸಿ ಕಾಖಂಡಕಿ ಗುರುದೇವಾಶ್ರಮದ ಪ ಪೂ ಶಿವಯೋಗೀಶ್ವರ ಸ್ವಾಮೀಜಿ ಜ್ಯೋತಿಯನ್ನು ಬೆಳಗಿಸಲಿದ್ದಾರೆ. ಸಾನಿದ್ಯವನ್ನು ರೋಣಿಹಾಳದ ವೇ ಮೂ ರಾಜಶೇಖರಯ್ಯ ಹಿರೇಮಠ, ವೇ ಮೂ ರಾಚೋಟಯ್ಯ ಹಿರೇಮಠ, ವೇ ಮೂ ಮಹಾಂತಯ್ಯ ಮಠಪತಿ ವಹಿಸುವರು. ಅಧ್ಯಕ್ಷತೆಯನ್ನು ಶ್ರೀ ಎ ಸಿ ವಿ ವ ಸಂಘದ ಅಧ್ಯಕ್ಷ ರಮೇಶ ಮಮದಾಪೂರ ವಹಿಸುವರು. ಮುಖ್ಯ ಅತಿಥಿಗಳಾಗಿ ಗ್ರಾಮದ ಗಣ್ಯವ್ಯಕ್ತಿಗಳಾದ ಶರಣುಸಾವುಕಾರ ನ್ಯಾಮಗೌಡ್ರ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಗ್ರಾಮದ ಗಣ್ಯರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಉರುಪು ಮೂಲವ್ಯಾದಿ (Anal Fissure) ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಮಾರ್ಚ್ 23 ರಿಂದ 27ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಇಂಥ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್ ಮಹಾವಿದ್ಯಾಲಯದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮತ್ತು ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಸಾದಶಕ್ತಿ ಗಣ್ಣೂರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಡಾ. ಪ್ರವೀಣ ಚೌಗಲಾ 7760357413 ಇವರನ್ನು ಸಂಪರ್ಕಿಸಬಹುದಾಗಿದೆ.
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬದುಕಿನಲ್ಲಿ ಬರುವ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ನಮಗೆ ಚರ್ಚೆ, ಮಾತುಕತೆ ಮತ್ತು ಸಮಾಲೋಚನೆಗಳ ಅವಶ್ಯಕತೆ ಇದೆ.ಈ ಹಿಂದೆ ಮಕ್ಕಳು ಚಿಕ್ಕವರಿದ್ದಾಗ ಅವರಿಗೆ ಒಂದು ನೋಟ್ ಪುಸ್ತಕ ಬೇಕಾದರೆ ಅವರು ತಮ್ಮ ಪಾಲಕರಿಗೆ ಹೇಳುತ್ತಿದ್ದರು. ಹಾಗೆ ಹೇಳಿದೊಡನೆ ಪುಸ್ತಕ ಸಿಗುತ್ತದೆ ಎಂಬುದಕ್ಕೆ ಯಾವುದೇ ಖಾತರಿ ಇರಲಿಲ್ಲ. ಪಾಲಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮನೆಯಲ್ಲಿ ಉಳಿದ ಹಿಂದಿನ ವರ್ಷದ ಪುಸ್ತಕಗಳಲ್ಲಿನ ಖಾಲಿ ಹಾಳೆಗಳನ್ನು ಹರಿದು ಅದರಿಂದಲೇ ಮತ್ತೊಂದು ನೋಟು ಪುಸ್ತಕವನ್ನು ತಯಾರಿಸಿ ಅದನ್ನು ಬಳಸಿಕೊಳ್ಳಲು ಹೇಳುತ್ತಿದ್ದರು.ಯೂನಿಫಾರ್ಮ್ ಅಥವಾ ಸಮವಸ್ತ್ರದ್ದು ಕೂಡ ಇದೇ ಕಥೆ. ನಮಗೆ ಹೊಸ ಸಮವಸ್ತ್ರ ಬೇಕೆಂದು ನಾವು ಈ ವರ್ಷಕ್ಕೆ ಪಾಲಕರಲ್ಲಿ ಬೇಡಿಕೆ ಇಟ್ಟರೆ ಅದು ಮಾರ್ಚ್ ತಿಂಗಳಿನಲ್ಲಿಯೇ ಆಗಬೇಕಿತ್ತು. ಶಾಲೆಯ ರಜಾ ದಿನಗಳಲ್ಲಿ ನಮ್ಮ ಹಳೆಯ ಸಮವಸ್ತ್ರವನ್ನು ಪರಿಶೀಲಿಸಿ ಅದನ್ನು ರಿಪೇರಿ ಮಾಡಬಹುದಾದರೆ ಪಾಲಕರು ಅದರ ಹೊಲಿಗೆ ಬಿಚ್ಚಿ ದೊಡ್ಡದಾಗಿಸುವ ಇಲ್ಲವೇ ಇಲ್ಲವೇ ನಮ್ಮ ದೇಹದ ಅಳತೆಗೆ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿ ಸಮಾವೇಶ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಮಹಾವಿದ್ಯಾಲಯಕ್ಕೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದ್ದು, ಅದರಂತೆ ನಮಗೆ ನಿಮ್ಮ ಮುಕ್ತವಾದ ಪ್ರತಿಕ್ರಿಯೆ ನಮಗೆ ಮಹತ್ವದ್ದು ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ಧೆ ಹೇಳಿದರುನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹಳೆಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಮಾರ್ಚ-೧೭ ರಂದು ಹಳೆಯ ವಿದ್ಯಾರ್ಥಿ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಯಿತು.ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಮಹಾವಿದ್ಯಾಲಯಕ್ಕೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದ್ದು ಅದರಂತೆ ನಿಮ್ಮ ಪ್ರತಿಕ್ರಿಯೆ ನಮಗೆ ಮಹತ್ವದ್ದು, ನಮ್ಮ ಮಹಾವಿದ್ಯಾಲಯದದಿಂದ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗೆ ತಲುಪಿದ್ದಾರೆ. ನಿಮಗೆ ನೀಡಿರುವ ಶಿಕ್ಷಣ ನಿಮ್ಮ ವೃತ್ತಿ ಜೀವನಕ್ಕೆ ನಾಂದಿಯಾದ ಕಾಲೇಜಿನ ಬಗ್ಗೆ ನಿಮ್ಮ ಅನುಭವಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಇದೊಂದು ಸುವರ್ಣ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರು ಎನ್ನುವಂತೆ, ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರಗಳ ಮೌಲ್ಯಧಾರಣೆ ಮಾಡುವಲ್ಲಿ ತಾಯಿ ಪಾತ್ರ ಅಮೂಲ್ಯವಾದುದು. ಪ್ರತಿ ಕುಟುಂಬ, ಸಮಾಜ ಮತ್ತು ರಾಷ್ಟ್ರ ಅಭಿವೃದ್ಧಿ ಸಾಧಿಸಬೇಕಾದರೆ, ಮಹಿಳೆಯರ ಪಾತ್ರ ಪ್ರಮುಖವಾಗಿದೆ. ನಮಗೆಲ್ಲ ಕಿತ್ತೂರು ಚೆನ್ನಮ್ಮ, ಓನಕೆ ಒಬ್ಬವ್ವ, ಝಾನ್ಸಿ ರಾಣಿ ಲಕ್ಷ್ಮಿ, ಜೀಮಾ ಮಾತಾ ಇವರಲ್ಲರ ರಾಷ್ಟ್ರಭಕ್ತಿ-ದೇಶಪ್ರೇಮ ನಮಗೆಲ್ಲ ಆದರ್ಶವಾಗಬೇಕು ಎಂದು ಎಕ್ಸಲಂಟ್ ಕಾಲೇಜಿನ ಪ್ರಾಚಾರ್ಯ ಶ್ರೀ ಮಂಜುನಾಥ ಜುನಗೊಂಡ ಅವರು ಅಭಿಪ್ರಾಯಪಟ್ಟರು.ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಇರುವ ಲಕ್ಷ್ಮಿ ದೇವಸ್ಥಾನದ ೩ ನೇಯ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ “ಆಧುನಿಕ ಜಗತ್ತಿನಲ್ಲಿ ಸಂಸ್ಕೃತಿ-ಸAಸ್ಕಾರ ಉಳಿಸುವಲ್ಲಿ ಮಹಿಳೆಯರ ಪಾತ್ರ” ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ನಮ್ಮ ಜನಪದ ಸಂಸ್ಕೃತಿ ಶ್ರೀಮಂತವಾಗಿದ್ದು, ಜಾನಪದ, ಒಗಟು, ಕಲೆ, ಸಂಸ್ಕೃತಿ, ಹಾಸ್ಯ, ಬೀಸುವ ಕಲ್ಲಿನ ಪದ ಮತ್ತು ಗರತಿ ಹಾಡುಗಳ ನಮ್ಮ ಭವ್ಯ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿವೆ. ಇಂದಿನ ನಾಗರಿಕ ಅಕ್ಷರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಯಮೂರ್ತಿ ನಾಗಮೋಹನದಾಸ ಒಳ ಮಿಸಲಾತಿ ಏಕ ಸದಸ್ಯ ವಿಚಾರಣಾ ಆಯೋಗ ವಿರೋಧಿಸಿ ದಿನಾಂಕ ೨೫-೦೩-೨೦೨೬ ರಂದು ಮುಂಜಾನೆ ೧೦.೩೦ ಘಂಟೆಗೆ ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ವಿಜಯಪುರ ಜಿಲ್ಲೆಯ ಸಮಸ್ತ ಛಲವಾದಿ ಬಂಧುಗಳು ಹೋರಾಟದಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ ಕೊಡಬಾಗಿ, ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷರುಗಳಾದ ಸುನೀಲ ಉಕ್ಕಲಿ, ಮತ್ತು ರಾಹುಲ ಕುಬಕಡ್ಡಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಘೋಣಸಗಿ, ಕುಮಾರ ಶಹಾಪುರ ಅವರು ಪತ್ರಿಕಾ ಹೇಳಿಕೆ ನೀಡುವುದರ ಮೂಲಕ ಜಿಲ್ಲೆಯ ಸಮಸ್ತ ಛಲವಾದಿ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ.ಕೋಟ: ತಾಲೂಕಿನ ಬೋಚಿಕಟ್ಟೆ ಸಮೀಪ ಇರುವ ಚಿತ್ತಧಾಮದಲ್ಲಿ ಅರಣ್ಯ ಇಲಾಖೆ, ಮೈಸೂರು ಪ್ರಾದೇಶಿಕ ವಿಭಾಗ, ಹೆಚ್ ಡಿ ಕೋಟೆ ಉಪ ವಿಭಾಗ, ಹೆಚ್ ಡಿ ಕೋಟೆ ವಲಯ, ಹಾರ್ಟ್ ಸಂಸ್ಥೆ ಮೈಸೂರು ಸಹಯೋಗದೊಂದಿಗೆ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ನಡೆಯಿತು. ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಗ್ರಾಮೀಣ ಜನರು ಕೃಷಿಯ ಜೊತೆಗೆ ಅಣಬೆ ಬೇಸಾಯದಂತಹ ಉಪ ಬೇಸಾಯ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು . ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಅಣಬೆಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಇದೆ. ತರಬೇತಿ ಪಡೆದು ಅತಿ ಹೆಚ್ಚಾಗಿ ಅಣಬೆ ಬೆಳೆದು, ಆದಾಯ ಗಳಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿ ಪ್ರಸನ್ನ ಮಾತನಾಡಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಸೇರಿದಂತೆ ವಿವಿಧೆಡೆ ಅಣಬೆ ಬೇಸಾಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಸುಲಭವಾಗಿ ಒಂದು ಕೋಣೆಯಲ್ಲಿ ಅಣಬೆ ಬೆಳಯಲು ಬೇಕಾದ ವಾತಾವರಣ ನಿರ್ಮಿಸಿ ಸುಲಭವಾಗಿ ಅಣಬೆಗಳನ್ನು ಬೆಳೆದು ಮಾರಾಟ ಮಾಡಬಹುದು, ಮಾರುಕಟ್ಟೆಯಲ್ಲಿ 500 ಗ್ರಾಂ ಅಣಬೆಗೆ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಹೃದಯ ಭಾಗದಲ್ಲಿರುವ ಡಾ. ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಯನ್ನು ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರ ನಿಧಿಯಿಂದ ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಸುಸ್ಥಿರ ಕಟ್ಟಡ ವಿನ್ಯಾಸದ ಪರಿಕಲ್ಪನೆ ಸಂಬಂಧ ವಿಸಿಟ್ ಮಾಡಿ ಚರ್ಚಿಸಿದರು.ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ ಮಾತನಾಡಿ, ತಾಲೂಕಿನ ಹೃದಯ ಭಾಗದಲ್ಲಿರುವ ಈ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಬೇಕಾಗಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಮತ್ತಷ್ಟು ವಿನ್ಯಾಸದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರ, ದಲಿತ ನಾಯಕ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಡಾ. ಬಾಬು ಜಗಜೀವನ್ ರಾಂ ಈ ಒಂದು ಸ್ಥಳಕ್ಕೆ ಭೇಟಿ ನೀಡಿದ್ದು ಇತಿಹಾಸ. ಶಾಸಕರಾಗಿದ್ದಾಗ ಎಂ.ಪಿ. ವೆಂಕಟೇಶ್ ಅವರು, ಈ ಜಾಗವನ್ನು ನಮ್ಮ ಸಮುದಾಯಕ್ಕೆ ಮೀಸಲಿರಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದರು…
