Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ ೧೦ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ website: https://sevasindhuservices.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತಿ ರಸ್ತೆ ಕನಕದಾಸ ಬಡಾವಣೆ ತಾಲೂಕ ವಿಸ್ತರಾಣಾಧಿಕಾರಿಗಳು, ಉಪ ವಿಭಾಗ ವಿಜಯಪುರ ಮತ್ತು ಇಂಡಿ ಇವರನ್ನು ಹಾಗೂ ಅರಕೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ರೇಖಾ ಬಾರ್ಕಿ (ಮೊಬೈಲ್ ಸಂಖ್ಯೆ: ೮೯೭೧೪೫೯೬೮೩), ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದಪ್ಪ ಕಾರಿಮುಂಗಿ (ಮೊ:೯೯೮೦೯೫೨೯೬೦), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಾಳಿಯನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಸ್ತುಗಳು ಕಾಂಗ್ರೇಸ್ ಸರ್ಕಾರ ಹೆಚ್ಚಿಸಿದೆ. ಜನರ ಕಷ್ಟವನ್ನು ಕಿಂಚಿತ್ತು ಅರ್ಥ ಮಾಡಿಕೊಳ್ಳಲು ಅಸಮರ್ಥವಾದ ಆಡಳಿತವನ್ನು ಸಿದ್ಧರಾಮಯ್ಯನ ಸರ್ಕಾರ ನೀಡುತ್ತಿದ್ದಾರೆ.ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಮಾಡು೭ವವರೆಗೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಕಿಂಚಿತ್ತು ಸಂವೇದನಾಶೀಲತೆಯಿಲ್ಲದ ಹೆಚ್ಚಳ ಮಾಡುತ್ತಿರುವುದು ಖಂಡನೀಯ. ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಾರಣಾಂತಿಕ ಪೆಟ್ಟನ್ನು ನೀಡಿದ್ದಾರೆ. ವಿದ್ಯುತ್ ಇಲಾಖೆಯ ನೌಕರರಿಗೆ ಪಿಂಚಿಣಿ ಕೊಡಲು ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರ ವಿದ್ಯುತ್ ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಿಜಯ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜನರ ಅನುಕೂಲಕ್ಕಾಗಿ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಪ್ರಾರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.ಯುಗಾದಿಯ ದಿನವಾದ ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ಪ್ರಾರಂಭಿಸಲಾಗಿರುವ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಪಾಟೀಲ್ ಪ್ಲ್ಯಾನೆಟ್ ಪಕ್ಕದಲ್ಲಿ ಆರಂಭವಾಗಿರುವ ಈ ಸಿಟಿ ಮೆಡಿಕಲ್ ಸೆಂಟರ್ ನಲ್ಲಿ ಎಲ್ಲ ವೈದ್ಯಕೀಯ ಸೇವೆಗಳು ಲಭ್ಯವಿವೆ. ಶೀಘ್ರದಲ್ಲಿ ದಂತ ವೈದ್ಯಕೀಯ ಚಿಕಿತ್ಸೆ, ಸುಸಜ್ಜಿತ ಲ್ಯಾಬ್, ಡೈಗ್ನೊಸ್ಟಿಕ್ ವ್ಯವಸ್ಥೆ, ಫಿಜಿಯೋಥೆರಪಿ ಪ್ರಾರಂಭವಾಗಲಿದೆ. ಅಲ್ಲದೇ, ಮನೆಯಲ್ಲಿರುವ ರೋಗಿಗಳಿಂದ ರಕ್ತ ಸಂಗ್ರಹಿಸಿ ತಪಾಸಣೆ ಮಾಡಿಕೊಡುವ ಹೋಮ್ ಸರ್ವಿಸ್ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ. ಒಟ್ಟಾರೆ ಈ ಭಾಗದ ಜನರ ಅನುಕೂಲಕ್ಕಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ…
ವಿಜಯಪುರ & ಬಾಗಲಕೋಟೆ ಜಿಪಂ ಸಿಇಓ ರಿಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳು, ಎಲ್ಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ಪತ್ರ ಬರೆದಿದ್ದಾರೆ.ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ 31.03.2025 ನಿಗದಿ ಪಡಿಸಲಾಗಿತ್ತು. ಆದರೆ, ಶೇ 100 ರಷ್ಟು ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ರಾಜೀವ ಗಾಂಧಿ ವಸತಿ ನಿಗಮ ಸಮೀಕ್ಷೆ ಅವಧಿಯನ್ನು 30.04.2025ರ ವರೆಗೆ ವಿಸ್ತರಿಸಿದೆ. ಹೀಗಾಗಿ ಜಿ.ಪಂ, ತಾ.ಪಂ ಅಧಿಕಾರಿಗಳು ಹಾಗೂ ಪಿ.ಡಿ.ಓ…
ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆ ಡಾ.ಸುರೇಖಾ ಜಿ ರಾಠೋಡ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಶೋಕ ಸೋಮಲು ವಾಲಿಕಾರ ಅವರಿಗೆ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ 2024ನೇ ಸಾಲೀನ ವಾರ್ಷಿಕ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರದಾನ ಮಾಡಲಾಯಿತು.ಮಾ.27 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ಬೆಂಗಳೂರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರಿಗೆ 2024ನೇ ಸಾಲೀನ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿತುಪ್ರಶಸ್ತಿಯನ್ನು ಪಡೆದ ಅಶೋಕ ಸೋಮಲು ವಾಲಿಕಾರರವರಿಗೆ ಎಸ್ ಅರ್ ನಾಯಕ್ ಬರಟಗಿ ಇವರು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಹಾಗೆಯೆ ಭೂತನಾಳ ತಾಂಡಾದ ಹಿರಿಯರಾದ ಕಾಸು ನಾಯಕ, ಸಂತೋಷ ದಾಮುಲು ಕಾರಬಾರಿ, ಮುನ್ನು ಲಚ್ಚು ಡಾವ , ಹುನ್ನು ಶಂಕರ ನಾಯಕ, ಭೀಮು ರಾಮು ಢಾವ, ಮೋಹನ್ ಖುಬ್ಬು ಕಾರಬಾರಿ ಮತ್ತು ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯರಾದ ಡಾ.ಸುರೇಖಾ ಜಿ ರಾಠೋಡ ಮತ್ತು ಆರ್ ಬಿ ನಾಯಕ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
(ಏ.೦೨ ಬುಧವಾರ) ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮದು ಭರತ ಭೂಮಿ. ವಿಶ್ವದಲ್ಲೇ ಅಧ್ಯಾತ್ಮಿಕತೆ ಮತ್ತು ಧಾರ್ಮಿಕತೆಯಲ್ಲಿ ಅತ್ಯಂತ ಸಮೃದ್ಧವಾದ ದೇಶ. ಅಧ್ಯಾತ್ಮಿಕೆಯನ್ನು ಸಾರಿದ ಪೂಣ್ಯಭೂಮಿ. ಅಂತಹ ಪುಣ್ಯ ಪುರುಷರಲ್ಲಿ ೧೦ ನೇಯ ಶತಮಾನದಲ್ಲಿ ಆದ್ಯ ವಚನಕಾರರಾಗಿ ಹೆಸರುವಾಸಿಯಾವರು ಶ್ರೀ ದೇವರ ದಾಸಿಮಯ್ಯ. ವೃತ್ತಿಯಲ್ಲಿ ನೇಯ್ಗೆಕಾರರಾಗಿದ್ದ ಅವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವ ಭಕ್ತಿ ಮೆರೆದಂತಹ ಐತಿಹ್ಯಗಳು ಪುರಾಣಗಳಲ್ಲಿ ಉಲ್ಲೇಖವಾಗಿವೆ. ಅವರು ತಮ್ಮ ವಚನದಲ್ಲಿ,“ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ? ಕಡೆಗೀಲು ಬಂಡಿಗಾಧಾರ. ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ ರಾಮನಾಥ// ”ಎಂಬ ವಚನದ ಮೂಲಕ ಇಡೀ ಬಸವಾದಿ ಶರಣರಲ್ಲಿ ಅಗ್ರ ಪಂಕ್ತಿಯ ವಚನಕಾರರಾಗಿದ್ದರು.ದೇವರ ದಾಸಿಮಯ್ಯನವರು ಈಗೀನ ಯಾದಗೀರ ಜಿಲ್ಲೆಯ ಸುರಪುರ ತಾಲೂಕಿನ ಸಪ್ತ ತೀರ್ಥಗಳ ನಿಸರ್ಗ ಸೌಂದರ್ಯದ ನಡುವಿರುವ ಮುದನೂರು ಎಂಬ ಪುಟ್ಟ ಗ್ರಾಮದಲ್ಲಿ ರಾಮನಾಥನ ಪರಮಭಕ್ತರು ಮತ್ತು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಈರುಳ್ಳಿ ತುಂಬಿದ ಕ್ಯಾಂಟರ್ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಹಾಗೂ ಲಾರಿಗೆ ಡಿಕ್ಕಿ ಹೊಡೆದು ಕ್ಯಾಂಟರ್ ಉರುಳಿ ಬಿದ್ದ ಘಟನೆ ಸಂಗೀತ ಕಾರಂಜಿಯಿರುವ ಉದ್ಯಾನದ ಬಳಿ ಶನಿವಾರ ಸಂಜೆ ಜರುಗಿದೆ.ಕೊಲ್ಹಾರದಿಂದ ಈರುಳ್ಳಿ ತುಂಬಿಕೊಂಡು ಬಂಗಾರಪೇಟದತ್ತ ಹೊರಟಿದ್ದ ಕ್ಯಾಂಟರ್ ಆಲಮಟ್ಟಿ ಡ್ಯಾಂ ವೃತ್ತದಿಂದ ಆಲಮಟ್ಟಿ ಪೆಟ್ರೋಲ್ ಪಂಪ್ ರಸ್ತೆಗೆ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಬ್ರೇಕ್ ವಿಫಲಗೊಂಡಿದೆ. ಮೊದಲು ಕಾರಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಂತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದಿದೆ. ಆದರೆ ಯಾರಿಗೂ ಏನೂ ಆಗಿಲ್ಲ.ಕ್ರೂಸರ್ ವಾಹನ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಕಾರಿನ ಹಿಂಬದಿ ನಜ್ಜುಗುಜ್ಜಾಗಿದೆ.ಕ್ಯಾಂಟರ್ ಉರುಳಿಬಿದ್ದ ಪರಿಣಾಮ,ಈರುಳ್ಳಿ ಚೀಲಗಳು ರಸ್ತೆಯ ಮೇಲೆ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಕ್ಯಾಂಟರ್ ಇನ್ನೂ ೫೦ ಮೀ ಮುಂದೆ ಬಂದು ಉರುಳಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು.ಆಲಮಟ್ಟಿ ಅಣೆಕಟ್ಟು ವೃತ್ತ ಹಾಗೂ ಉದ್ಯಾನದ ರಸ್ತೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ ಕಾರಣ ಭಾರಿ ವಾಹನ ಪ್ರವೇಶ ನಿಷೇಧವಿದೆ. ಆದರೂ ಈರುಳ್ಳಿ ತುಂಬಿದ ವಾಹನ ಈ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಆರಾಧ್ಯ ದೈವ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ (ರಾಚೋಟೇಶ್ವರ) ದೇವರ ಜಾತ್ರಾ ಮಹೋತ್ಸವ ಮಾರ್ಚ್ 30 ರಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.ಮಾರ್ಚ್ 30 ರವಿವಾರ ರಂದು ಮುಂಜಾನೆ 4 ಗಂಟೆಗೆ ಕೊಲ್ಹಾರ ಹಾಗೂ ಬೇಲೂರು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಹುಲಗೇರಿ ಕಾಡಸಿದ್ದೇಶ್ವರ ಮಠದ ಗುರುದೇವ ಶಾಸ್ತ್ರೀಗಳು ಇವರ ನೇತೃತ್ವದಲ್ಲಿ ಹೋಮ, ಹವನ ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಜರುಗುವವು. ಮುಂಜಾನೆ 10 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಕಳಶದ ಮೆರವಣಿಗೆ ಮಧ್ಯಾಹ್ನ 1 ಗಂಟೆಗೆ ಪುರವಂತರ ಸೇವೆ, ಅಗ್ನಿ ಪ್ರವೇಶ, ಅನ್ನಸಂತರ್ಪಣೆ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಅಪಘಾತಕ್ಕೊಳಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರೊಂದಿಗೆ ಅವರ ಆರೋಗ್ಯ ಕುರಿತಾಗಿ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯಗಳ ಕಡಿವಾಣಕ್ಕೆ ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿಯೊಂದಿಗೆ ಮಾದಕ ದ್ರವ್ಯ ಸೇವಿಸುವವರನ್ನು ಪರೀಕ್ಷೆಗೊಳಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯ ಮೇಲೆ ಬೀರುವ ದುಷ್ಪರಿಣಾಮಗಳ ಜಾಗೃತಿ ಜೊತೆಗೆ ಮಾದಕ ವಸ್ತು- ದ್ರವ್ಯ ಸೇವನೆಗೊಳಗಾದವರಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಬೇಕು. ಇದರಿಂದ ಜನರಲ್ಲಿ ಅತಿಯಾಗಿ ಜಾಗೃತಿ ಮೂಡುವುದರೊಂದಿಗೆ ಭಯದಿಂದ ಮಾದಕ ವಸ್ತುಗಳ ಬಳಕೆ ಪ್ರಮಾಣ ತಗ್ಗಲು ಸಹಕಾರಿಯಾಗಲಿರುವುದರಿಂದ ಮಾದಕ ದ್ರವ್ಯ ಸೇವನೆಗೊಳಗಾದವರನ್ನು ಪರೀಕ್ಷೆಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಸಂಬಂಧಿಸಿದ ಇಲಾಖೆಗಳು ಕಟ್ಟುನಿಟ್ಟಿನ…
