Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರದಲ್ಲಿ ಫೆ.24 ರಂದು ನಡೆಯಲಿರುವ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಸ್ವಾಮೀಜಿ ಅವರನ್ನು ಆಯ್ಕೆ ಮಾಡಿರುವುದು ಸಂತಸದ ವಿಷಯವಾಗಿದೆ. ಕಳೆದ 70 ವರ್ಷದಿಂದ ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅವರ ಆಯ್ಕೆ ಸೂಕ್ತವಾಗಿದೆ. ಅವರ ಆಯ್ಕೆಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಗೌರವ ಬಂದಂತಾಗಿದೆ. ಅವರನ್ನು ಆಯ್ಕೆ ಮಾಡಲು ಸಹಕರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹಾಗೂ ಪದಾಧಿಕಾರಿಗಳು ಕೃತಜ್ಞತೆಗಳು. ಬಹುದಿನಗಳ ನಂತರ ಸೂಕ್ತ ವ್ಯಕ್ತಿಗೆ ಸೂಕ್ತ ಸ್ಥಾನ ಸಿಕ್ಕಂತಾಗಿದೆ. ಪೂಜ್ಯರು ಎಲ್ಲಾ ಪ್ರಶಸ್ತಿಗಳಿಗಿಂತಲೂ ಹೆಚ್ಚಿನ ಅರ್ಹತೆ ಹೊಂದಿದ್ದಾರೆ. ಅಂತವರ ಆಯ್ಕೆ ಇಡೀ ಜಿಲ್ಲೆಯ ಜನರಿಗಷ್ಟೇ ಅಲ್ಲ. ರಾಜ್ಯದ ಜನರಿಗೆ ಸಂತಸ ತಂದಿದೆ. ಚನ್ನಬಸವ ಸ್ವಾಮೀಜಿಯವರನ್ನು ಆಯ್ಕೆ ಮಾಡುವ ಮೂಲಕ ಸಾಹಿತ್ಯ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿದೆ ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪರಕೀಯರ ಆಡಳಿತ ಕಿತ್ತೊಗೆದು ಸ್ವರಾಜ್ಯ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿ, ನ್ಯಾಯವಂತ, ದಕ್ಷ ಆಡಳಿತಗಾರರಾಗಿದ್ದರು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದ ಅವರು, ಶಿವಾಜಿಯ ತಾಯಿ ವೀರಮಾತೆ ಜೀಜಾಬಾಯಿ ಅವರು ಶಿವಾಜಿಗೆ ರಾಮಾಯಣ, ಮಹಾಭಾರತ ಮಹಾಕಾವ್ಯಗಳ ಜೊತೆಗೆ ಶೌರ್ಯ ನೈತಿಕತೆಯ ಪಾಠಗಳನ್ನು ಹೇಳುತ್ತ ಜೀವನ ಮೌಲ್ಯಗಳ ಶಿಕ್ಷಣ ನೀಡಿದರು. ಇವರ ಗುರು ದಾದಾಜಿ ಕೊಂಡದೇವ ಶಸ್ತ್ರಾಸ್ತ್ರ ವಿದ್ಯೆ, ಕಲಿಸಿ, ತರುಣ ವೀರನ ಮನಸ್ಸನ್ನು ಜಾಗೃತಗೊಳಿಸಿದರು. ಹಿಂದೂ ಧರ್ಮ ಪುನರುಜ್ಜೀವನಗೊಳಿಸಬೇಕು, ಸ್ವರಾಜ್ಯ ಕಟ್ಟಬೇಕೆಂಬ ಆಕಾಂಕ್ಷೆಯಿಂದ ಮರಾಠ ಮುಖಂಡರು ಮತ್ತು ಪಶ್ಚಿಮ ಘಟ್ಟಗಳ ಮಾವಳರೆಂಬ ದೃಢಕಾಯರಾದ ಗಿರಿಜನರನ್ನು ಸೇರಿಸಿ ತರುಣರ ಪಡೆಯನ್ನು ಕಟ್ಟಿದರು. ಶಿವಾಜಿಯು ಸಂತ ರಾಮದಾಸರ ಪರಮ ಭಕ್ತರಾಗಿದ್ದರು. ಹಿಂದು ಧರ್ಮಕ್ಕೆ…
ದಾವಣಗೆರೆಯಲ್ಲಿ ಪುಟ್ಟರಾಜರ ಅಭಿಮಾನಿ ಭಕ್ತರ ಬೃಹತ್ ಸಮಾವೇಶ ಉದಯರಶ್ಮಿ ದಿನಪತ್ರಿಕೆ ಗದಗ: ನಗರದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ಪೂಜ್ಯ ಗುರು ಪುಟ್ಟರಾಜರ ನಿಜವಾದ ಅಭಿಮಾನಿ ಭಕ್ತರ ಮಹಾ ಮನೆಯಾಗಿರುವ ದಾವಣಗೆರೆಯಲ್ಲಿ, ಮಾರ್ಚ್ ಕೊನೆಯ ಅಥವಾ ಏಪ್ರಿಲ್ ಮೊದಲ ವಾರ ಡಾ. ಪಂ. ಪುಟ್ಟರಾಜರ ಅಭಿಮಾನಿ ಭಕ್ತರ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಒಂದು ದಿನದ ಈ ಸಮಾವೇಶದಲ್ಲಿ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಸಾಹಿತ್ಯ ಚಿಂತನ-ಮಂಥನ, ರಾಜ್ಯಮಟ್ಟದ ಭಕ್ತಿಗೀತೆ ಗೋಷ್ಠಿ ಮತ್ತು ವಚನ ಗೋಷ್ಠಿ, ಭಕ್ತಿಗೀತೆ ಗಾಯನ ಮತ್ತು ವಚನ ಗಾಯನ ಹಾಗೂ ಶಾಸ್ತ್ರೀಯ ನೃತ್ಯ ಗೋಷ್ಠಿಗಳನ್ನು ಆಯೋಜಿಸಿದೆ. ಈ ಸಮಾವೇಶದಲ್ಲಿ ಅಭಿಮಾನಿ ಭಕ್ತ ಪ್ರತಿನಿಧಿಯಾಗಿ ಭಾಗವಹಿಸಿ ಭಕ್ತಿ ಗೀತ ಗೋಷ್ಠಿ, ವಚನಗೋಷ್ಠಿ, ಭಕ್ತಿ ಗೀತೆ ಗಾಯನ ಮತ್ತು ನೃತ್ಯ ಮತ್ತು ನುಡಿ ನಮನ ಸಲ್ಲಿಸಲು ವಿನಂತಿಸಿಕೊಳ್ಳಲಾಗಿದೆ.ಪ್ರತನಿಧಿಯಾಗಿ ಹೆಸರು ನೋಂದಾಯಿಸಿಕೊಂಡು ಗೋಷ್ಠಿಗಳಲ್ಲಿ ಭಾಗವಹಿಸುವ ಪೂಜ್ಯರ ಅಭಿಮಾನಿ ಭಕ್ತ, ಕವಿ; ಕಲಾವಿದರಿಗೆ ಅಭಿಮಾನಿ ಭಕ್ತ ಶ್ರೇಷ್ಠ, ಪುಟ್ಟರಾಜ ಸಾಹಿತ್ಯ, ಸಂಗೀತ…
ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ | ರಾಜ್ಯದ ಜನತೆಗೆ ಮೋಸ | ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬುಧವಾರ ವಾಗ್ದಾಳಿ ನಡೆಸಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದರೆ, ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಎಂದು ಹೇಳಿದ್ದರು. ಆದರೆ, ಬಸ್ ನಿಲ್ಲಿಸಿದ್ರು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ತಲುಪುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ.…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವದು ಶಿಕ್ಷಾರ್ಹ ಅಪರಾಧ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವದು ಕಂಡು ಬಂದಲ್ಲಿ ಮುಲಾಜಿಲ್ಲದೇ ಪ್ರಕರಣ ದಾಖಲಿಸಲಾಗುವದು ಎಂದು ಕಾರ್ಮಿಕ ನಿರೀಕ್ಷಕ ಕೆ.ಅಲೀಂ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ನಿರ್ಮೂಲನೆ ಮೂಲಕ ಅಟೋ ಪ್ರಚಾರಕ್ಕೆ ಚಾಲನೆ ನೀಡುವ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.೧೪ ವರ್ಷಗಳ ಒಳಗಿನ ಮಕ್ಕಳನ್ನು ಬಾಲ ಕಾರ್ಮಿಕರೆಂದು, ೧೫ ರಿಂದ ೧೮ ವರ್ಷಗಳ ಒಳಗಿನ ಮಕ್ಕಳನ್ನು ಕಿಶೋರ ಕಾರ್ಮಿಕರೆಂದು ಗುರುತಿಸಲಾಗಿದೆ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವದು ಸಂಪೂರ್ಣ ಅಪರಾಧವಾದರೆ ಕಿಶೋರ ಕಾರ್ಮಿಕರನ್ನು ಶಾಲಾ ಅವಧಿಯಲ್ಲಿ ದುಡಿಸಿಕೊಳ್ಳುವದು ಅಪರಾಧವಾಗಿದೆ. ಬಾಲ ಕಾರ್ಮಿಕರನ್ನು ದುಡಿಸಿಕೊಂಡ ಅಪರಾಧಕ್ಕೆ ೨೦ರಿಂದ ೫೦ ಸಾವಿರಗಳ ದಂಡ ವಿಧಿಸಿ ಎರಡು ವರ್ಷಗಳ ವರೆಗೆ ಜೈಲು ಶಿಕ್ಷೆ ಕೂಡ ನೀಡಲಾಗುವದು. ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುವವರು ಕಿಶೋರ ಕಾರ್ಮಿಕರ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಇಲಾಖೆಗೆ ಮಾಹಿತಿ ನೀಡಿ ನಿಯಮಾನುಸಾರ ಕೆಲಸ ನೀಡಬೇಕಾಗುತ್ತದೆ. ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಶಿಕ್ಷೆ ಮತ್ತು ದಂಡಕ್ಕೆ ಪಾತ್ರರಾಗುತ್ತಾರೆ ಎಂದರು.ಕಿರಿಯ…
ಚಡಚಣ ಪಟ್ಟಣ ಪಂಚಾಯತ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳಿಯ ಪಟ್ಟಣ ಪಂಚಾಯ್ತಿಗೆ ಫೆ.21 ರಂದು ನಡೆಯಲಿರುವ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಬೇಷರತ್ ಬೆಂಬಲ ನೀಡುವದಾಗಿ ಚಡಚಣ ಪಟ್ಟಣ ಪಂಚಾಯ್ತಿ ಪಕ್ಷೇತರ ಸದಸ್ಯರಾದ ಚೇತನ ನಿರಾಳೆ ಹಾಗೂ ಚಂದ್ರಕಾಂತ ಕಲಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಟ್ಟಣ ಪಂಚಾಯ್ತಿಯ ಒಟ್ಟು 16 ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಬಿಜೆಪಿಯ 8 ಜನ ಸದಸ್ಯರು,ನಾಲ್ಕು ಜನ ಕಾಂಗ್ರೆಸ್ ಹಾಗು ನಾಲ್ಕು ಜನ ಪಕ್ಷೇತರರು ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನವನ್ನು ಅನೂಸೂಚಿತ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗʼಅʼ ಅಭ್ಯರ್ಥಿಗಳಿಗೆ ಮೀಸಲಾತಿ ನಿಗದಿ ಪಡಿಸಿ ಆದೇಶ ಹೊರಡಿಸಿದಂತೆ ಎರಡೂ ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಬಿಜೆಪಿಯಲ್ಲಿ ಇದ್ದಾರೆ. ಆದರೆ ಬಹುಮತಕ್ಕಾಗಿ ಒಂದು ಮತದ ಅವಶ್ಯಕತೆ ಇದೆ.ಆದ್ದರಿಂದ ನಾವು ಬಿಜೆಪಿ ಬೆಂಬಲಿಸಿ ಪಟ್ಟಣ ಪಂಚಾಯ್ತಿ ಯ ಗದ್ದುಗೆಯನ್ನು ಬಿಜೆಪಿ ಅಭ್ಯರ್ಥಿಗಳು ಹೊಂದಬೇಕು ಎಂಬ ಆಶಯದಿಂದ ಬೇಷರತ್ ಹಾಗೂ ಯಾವುದೇ ಬೇಡಿಕೆ ಇಲ್ಲದೆ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಠಾಣೆಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಒಟ್ಟು 09 ಜನ ಆರೋಪಿತರನ್ನು ಪತ್ತೆ ಮಾಡಿ, ಅವರಿಂದ 09 ಕಂಟ್ರಿ ಪಿಸ್ತೂಲುಗಳನ್ನು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ತಿಕೋಟಾ ಠಾಣಾ ಪಿಎಸ್ಐ ಬಸವರಾಜ ಉಳ್ಳಾಗಡ್ಡಿ ಹಾಗೂ ತಂಡದವರು ಅತೀ ಪ್ರಮುಖ ಪಾತ್ರ ನಿರ್ವಹಿಸಿದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಗಳವಾರ ಪ್ರಶಂಸನಾ ಪತ್ರ ನೀಡಿದ್ದಾರೆ.ನಿಮ್ಮ ಕರ್ತವ್ಯನಿಷ್ಠೆ ಹಾಗೂ ಪರಿಶ್ರಮ ಶ್ಲಾಘನೀಯವಾದದ್ದು. ನಿಮ್ಮ ಈ ಸಮರ್ಪಣಾಭಾವದ ಕೆಲಸ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇನ್ನು ಮುಂದೆಯು ಸಹ ನೀವು ನಿಮ್ಮ ಕರ್ತವ್ಯದಲ್ಲಿ ಇದೇ ರೀತಿ ಪ್ರಾಮಾಣಿಕ ಪ್ರಯತ್ನ ಮಾಡಿ ಇಲಾಖೆಗೆ ಗೌರವ ಹೆಚ್ಚಿಸುತ್ತೀರೆಂದು ಆಶಿಸುತ್ತಾ ಈ ಪ್ರಶಂಸನಾ ಪತ್ರ ವಿತರಿಸಿದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಳೆದ ಒಂದು ವಾರದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಸರಕಾರ ಅವರ ಮುಷ್ಕರಕ್ಕೆ ಕಿವಿಗೊಡದೇ ಇರುವುದು ದುರಂತ ಎಂದು ಮಾಜಿ ಶಾಸಕ ರಮೇಶ ಭೂಸನೂರ ಅಸಮಾಧಾನ ವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ಆಡಳಿತ ಸೌಧದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಹಮ್ಮಿಕೊಂಡ ೨ನೆಯ ಹಂತದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಸರಕಾರದ ಪ್ರದಾನ ಕಾರ್ಯದರ್ಶಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಕಾರಣ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೆರಿಲ್ಲ. ಇದರಿಂದ ಬೇಸರಗೊಂಡ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಅವರ ೨೨ ಬೇಡಿಕೆಗಳಲ್ಲಿ ಸರಕಾರ ಕನಿಷ್ಠ ೧೦ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.ಈ ವೇಳೆ ಎಸ್ಟಿ ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ, ಗ್ರಾಮ ಆಡಳಿತಾಧಿಕಾರಿಗಳಾದ ನಿಖಿಲ…
ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ ೦೫ ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮಗೆ ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ.ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ಹಾಗೂ ಹಲ್ಲೆ ಮಾಡಿರುವ ೦೫ ಜನ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ತಿಳಿಸಿದ್ದು, ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ಸೂಕ್ತ ಕಾನೂನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ ಹಾಗೂ ಎನ್ಟಿಪಿಸಿ ಇವರ ವತಿಯಿಂದ ಎನ್ಟಿಪಿಸಿಯಲ್ಲಿ ಫೆ.೧೮ರಂದು ಅಗ್ನಿ ಅವಘಢಗಳಲ್ಲಿ ಜಾಗೃತಿ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತ ಅಣುಕು ಪ್ರದರ್ಶನ ಯಶಸ್ವಿಯಾಗಿ ನಡೆಸಲಾಯಿತು.ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರ ಮಾರ್ಗದರ್ಶನದಲ್ಲಿ ಅಣುಕು ಪ್ರದರ್ಶನವನ್ನು ನಡೆಸಲಾಗಿದ್ದು, ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಈ ಅಣುಕು ಪ್ರದರ್ಶನದಲ್ಲಿ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಉಪಸ್ಥಿತರಿದ್ದು, ಅಣುಕು ಪ್ರದರ್ಶನವನ್ನು ವೀಕ್ಷಿಸಿದರು. ಎನ್ಟಿಪಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.
