Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕರ್ನಾಟಕ ಸರ್ಕಾರದ ವತಿಯಿಂದ ಇದೇ ಫೆ.೨೬, ೨೭ ಮತ್ತು ೨೮ರಂದು ಬೆಂಗಳೂರಿನ ಅಂತರರಾಷ್ಟ್ರೀಯ ಕನ್ವೆನಶನ್ ಸೆಂಟರ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ ಹೋಲ್ಡರ್ಗಳಿಗೆ ವ್ಯಾಪಾರ-ವಹಿವಾಟು ಹೆಚ್ಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಆಸಕ್ತ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ ಹೋಲ್ಡರ್ಗಳು ತಮ್ಮ ಉದ್ದಿಮೆಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡಲು ಸುವರ್ಣಾವಕಾಶವಿದ್ದು, ಈ ಕಾರ್ಯಕ್ರಮದಲ್ಲಿ ವ್ಯಾಪಾರ ಮಳಿಗೆಗಳನ್ನು ಕಾಯ್ದಿರಿಸಲು ಆಸಕ್ತ ಹೊಂದಿರುವ ಜಿಲ್ಲೆಯ ಉದ್ದಿಮೆದಾರರು ಪ್ರವಾಸೋದ್ಯಮ ಇಲಾಖೆ ಸಮಾಲೋಚಕರಾದ ಅನಿಲಕುಮಾರ ರಾ.ಬಣಜಿಗೇರ ಮೊ: ೯೮೮೬೩೭೩೦೦೬ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿ ಫಸಲ್ ಭೀಮಾ ಯೋಜನೆಯಡಿ ರೈತರು ಸಲ್ಲಿಸಿದ್ದ ಅರ್ಜಿಗಳಲ್ಲಿ ಕೆಲವು ತಿರಸ್ಕೃತಗೊಂಡಿದ್ದು, ಈ ಕುರಿತು ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಪ್ರಕಟಣೆ ನೀಡಲಾಗಿದೆ. ತಿರಸ್ಕೃತಗೊಂಡ ಅರ್ಜಿ ಬಗ್ಗೆ ರೈತರಲ್ಲಿ ಆಕ್ಷೇಪಣೆ ಇದ್ದಲ್ಲಿ ಮರು ದಾಖಲೀಕರಣಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಸಹಾಯಕ ನಿರ್ದೇಶಕರಾದ ಎಸ್.ಎ. ಇನಾಮದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇಕಡಾ ೭೫% ರಷ್ಟು ಹಾಗೂ ಇತರೆ ವರ್ಗದ ಶೇಕಡಾ ೨೫% ರಷ್ಟು ವಿದ್ಯಾರ್ಥಿಗಳಿಗೆ ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ವಸತಿ ಶಾಲೆಗಳಲ್ಲಿ ಶೇಕಡಾ ೫೦% ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರುವುದು. ವಿದ್ಯಾರ್ಥಿಗಳ ಪೋಷಕರ ಆದಾಯ ೨.೫೦ ಮಿತಿ ಲಕ್ಷ ಮಿರಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ ೧೦ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಸೇವಾಸಿಂಧುಪೋರ್ಟಲ್ನಲ್ಲಿ ನೇರವಾಗಿ ವೆಬ್ಸೈಟ್ https://sevasindhuservices.karnataka.gov.in ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ…
ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರ ಜಾರಿಗೊಳಿಸಿರುವ ವಿವಿಧ ಆರ್ಥಿಕ ಬೆಂಬಲ ನೀಡುವ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಲು ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಅಂತಕರಣದಿಂದ ಕಾರ್ಯನಿರ್ವಹಿಸಿ ಇಂತಹ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ…
ಆರೋಪಿಯು ಅರಕೇರಿ ಎಲ್.ಟಿ ನಂ.೧ ಸತೀಶ ರಾಠೋಡ ಕೊಲೆ ಪ್ರಕರಣದಲ್ಲಿ ಭಾಗಿ | ಜಿಲ್ಲೆಯಲ್ಲಿ ಹಲವರಿಗೆ ಅಕ್ರಮ ಪಿಸ್ತೂಲ್ ಪೂರೈಕೆ | ಪೊಲೀಸರ ಕಾರ್ಯಕ್ಕೆ ಜಿಲ್ಲಾದ್ಯಂತ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಂಟ್ರಿ ಪಿಸ್ತೂಲ್ ಗಳ ವಿಲೇವಾರಿಯ ಕಿಂಗ್ ಪಿನ್ ಸಾಗರ @ ಸುರೇಶ ರಾಠೋಡ ನನ್ನು ಫೆ.೧೩ ರಂದು ಬಂಧಿಸಿದ್ದ ಪೊಲೀಸರು ಇದೀಗ ಅಕ್ರಮ ಪಿಸ್ತೂಲ್ ಹೊಂದಿದ ೧೦ ಜನ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕುರಿತು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಕರಣದ ಸಂಪೂರ್ಣ ವಿವರಗಳನ್ನು ಸುದ್ದಿಗಾರರ ಮುಂದೆ ಬಿಡಿಸಿಟ್ಟರು.ಆರೋಪಿ ಸಾಗರ @ ಸುರೇಶ ರಾಠೋಡ ಜಿಲ್ಲೆಯ ಹಂಚನಾಳ ಎಲ್ಟಿ ನಂ: 1 ನಿವಾಸಿಯಾಗಿದ್ದು ಜ.೨೮ ರಂದು ನಡೆದ ಅರಕೇರಿ ಎಲ್.ಟಿ ನಂ.೧ ರಲ್ಲಿ ನಡೆದ ಸತೀಶ ರಾಠೋಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಅವನು ನಾನಾ ಕಡೆಗೆ ಪೂರೈಕೆ ಮಾಡಿದ್ದ ೧೦ ಕಂಟ್ರಿ ಪಿಸ್ತೂಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಮಾ.10 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದಲ್ಲಿರುವ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.ನಗರದ ಹೊಸ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ, ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಕೊಳ್ಳಲಾಯಿತು.ಅದೇ ದಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಸುಶಿಲೇಂದ್ರ ನಾಯಕ, ಮಹೇಶ ಶಟಗಾರ, ಕೆಯುಡಬ್ಲುಜೆ ಪ್ರಶಸ್ತಿಗೆ ಭಾಜನರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶಶಿಕಾಂತ ಮೆಂಡೇಗಾರ, ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿರುವ ರಫೀ ಭಂಡಾರಿ, ಕರ್ನಾಟಕ ಸರ್ಕಾರದ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಭಾಜನರಾಗಿರುವ ರುದ್ರಪ್ಪ ಆಸಂಗಿ, ಸ್ಥಳೀಯ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇರ್ಫಾನ್ ಶೇಖ್ ಇನ್ನಿತರರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಲ್ಲದೆ ಸಭೆಯಲ್ಲಿ ಮೂರು ವರ್ಷ ಅವಧಿಯ ವರದಿ, ಸಮ್ಮೇಳನ ಸೇರಿ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ಪ್ರೋತ್ಸಾಹ ಧನ ನೀಡುವ ಮೂಲಕ ರೈತರ ಪಾಲಿಗೆ ವರದಾನವಾಗಿದೆ ಎಂದು ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್ ಹೇಳಿದರು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಂಗಳವಾರ ಪಿಎಸಿಎಸ್ ಕೆಂಭಾವಿ-2 ಸಹಕಾರ ಸಂಘದ ಅಡಿಯಲ್ಲಿ ಆರಂಭಿಸಿದ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು ರೈತರು ತಾವು ಬೆಳೆದ ಫಸಲನ್ನು ದಲ್ಲಾಳಿಗಳಿಗೆ ಮಾರಾಟ ಮಾಡಿ ಮೋಸ ಹೋಗದೆ ತೊಗರಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡುವಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7550/- ರೂಪಾಯಿ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 450/- ರೂಪಾಯಿ ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್ ಗೆ 8000/- ರೂಪಾಯಿಗೆ ರೈತರು ಬೆಳೆದ ತೊಗರಿಯನ್ನು ಖರೀದಿಸುತ್ತಿದ್ದು. ರೈತರು ಮುಂಚಿತವಾಗಿ ಬಂದು ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಸಹಕಾರಿ ಸಂಘದ ಉಪಾಧ್ಯಕ್ಷ ತಿಪ್ಪಣ್ಣ ಡಿ ಯಾಳಗಿ ಮಾತನಾಡಿ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳಿ ನಿಯಮಿತ ಮತ್ತು…
ರಚನೆ- ರಾಜಶೇಖರ ರಾವ್ಸೋಮನಹಳ್ಳಿ ಉದಯರಶ್ಮಿ ದಿನಪತ್ರಿಕೆ ಆರದಿರದ ನಂದಾದೀಪ ಬಾನಂಗಳದಲಿಆ ದೀಪ ಬೆಳಗುತಲಿ ನಿರಂತರ ಬ್ರಹ್ಮಾಂಡದಲಿಹಗಲಲ್ಲಿ ಭಾಸ್ಕರನ ಪಾಳಿ ಇರುಳಲಿ ಚಂದಿರಇವರನುಗುಣ ಪ್ರಕೃತಿಯ ಪ್ರಕ್ರಿಯೆ ಶಾಶ್ವತ ಇಂದು ಆಳಿ ಅಳಿಸಿ ನಾಳೆಗಳ ಮಾಡುವ ದೀಪನಾಳೆ ಹಾಳೆಗಳಲಿ ಅಕ್ಷರನಾದ ಬರೆವ ದಾರಿದೀಪಪ್ರತಿಯ ಪ್ರತಿಸಾಲುಗಳು ಬದುಕು ಹರೆವ ಹಾದಿಹಾದಿಗಳಲಿ ನೀತಿ ನಿಯಮ ಪೊರೆಯುವ ಗಾದಿ ಸೊಡರಿದುವೆ ನಿರಂತರ ಉರಿವ ಸುಂದರ ದೀಪಬತ್ತಿದರು ಎಣ್ಣೆಬತ್ತಿ ನಿಗಿನಿಗಿ ಹೊತ್ತುರಿವ ತಾಪನಿರಂತರ ಕರ್ಮಚಕ್ರ ಕಳೆವ ಪಯಣದ ಶಾಪಸೂರ್ಯ ಚಂದ್ರರೆ ರಂಗದಾಟಕೆ ನಂದಾದೀಪ
ಲೇಖನಸುಮಗೌಡ(’ಕಥಾ ಅರಮನೆ’ ಬರಹಗಾರರು) ಉದಯರಶ್ಮಿ ದಿನಪತ್ರಿಕೆ ಅತಿ ಮಾನುಷ ಶಕ್ತಿಗಳ ಬಗ್ಗೆ ಸಂಶೋಧನೆ ಮಾಡಿದಾಗ ಬಹಳಷ್ಟು ರೋಚಕ ಸಂಗತಿಗಳು ಬೆಳಕಿಗೆ ಬಂದಿರುವ ಹಲವಾರು ಉದಾಹರಣೆಗಳು ಇವೆ.ಸಾಮಾನ್ಯವಾಗಿ ನಾವೆಲ್ಲ ಕೇಳಿ ನೋಡುತ್ತಾ ಬಂದಂತೆ ನಾವು ಚಿಕ್ಕವರಿರುವಾಗ ಊಟ ಮಾಡಿಸುವಾಗ ಅಥವಾ ಹಠಮಾಡಿದಾಗ ನಮ್ಮನ್ನು ಹೆದರಿಸಲು ಅಮ್ಮ ಗುಮ್ಮನನ್ನು ಕರಿತೀನಿ ಊಟ ಮಾಡು ಅನ್ನುತ್ತಿದ್ದದ್ದು ಮಾತು ಕೇಳದೆ ಹಠ ಮಾಡಿದರೆ ಗೊಗ್ಗಯ್ಯ ಬಂದು ಹಿಡ್ಕೊಂಡು ಹೋಗ್ತಾನೆ ಎಂದು ಹೆದರಿಸಿ ಮಾತು ಕೇಳುವಂತೆ ಮಾಡುತ್ತಿದ್ದು ಅದೆಷ್ಟು ಭಯ ಹುಟ್ಟಿಸುತ್ತಿತ್ತು ಅಂದರೆ ಮನೆಯೊಳಗೆ ಸ್ವಲ್ಪ ಕತ್ತಲೆ ಇರುವ ಜಾಗಕ್ಕೆ ಹೋಗಲು ಸಹ ಭಯ ಆಗುತ್ತಿತ್ತು. ಇದೆಲ್ಲಾ ಅಮ್ಮ ಪ್ರೀತಿಯಿಂದ ಹೇಳುತ್ತಿದ್ದಳು ಅನ್ನೋದು ಗೊತ್ತೇ ಆಗ್ತಿರಲಿಲ್ಲ .ಅತಿಮಾನುಷ ಶಕ್ತಿಗಳಲ್ಲಿ ಎಷ್ಟು ಸತ್ಯ ಹಾಗೂ ಪವಾಡಗಳು ತುಂಬಿರುತ್ತವೆ ಎಂಬುದಕ್ಕೆ ಒಂದು ಸತ್ಯ ಘಟನೆಯ ಸಾಕ್ಷಿ ಇದೆ. ನನ್ನ ಸೊಸೆಯ ಊರಿನಲ್ಲಿ ಅವರ ಕಾಫಿ ಎಸ್ಟೇಟ್ಗಳಲ್ಲಿ ಕಾಫಿ ಬೆಳೆ ಹಾಗೂ ಎಲ್ಲಾ ರೀತಿಯ ರಕ್ಷಣೆಗಳಿಗಾಗಿ ಚೌಡಮ್ಮನನ್ನು ಪೂಜಿಸುವ ಪದ್ಧತಿ ರೂಢಿಯಲ್ಲಿದೆ. ಅದಕ್ಕಾಗಿ…
ಕೊಡೇಕಲ್ ದಾವಲಮಲಿಕ್ ಅಜ್ಜರ ಯಶೋಗಾಥೆ | ದಾರಿ ಹೋಕರಿಂದ ಹಿಡಿದು ಅನಾಥರಿಗೆಲ್ಲ ಅನ್ನ, ನೀರು, ನೆರಳು ನೀಡಿದ ಸಹೃದಯಿ ಉದಯರಶ್ಮಿ ದಿನಪತ್ರಿಕೆ ವರದಿ: ಇಲ್ಯಾಸ್ ಪಟೇಲ್. ಬಯಾದಗಿರಿ: ತಾಯಿಯ ಮಮತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.ತಾಯಿಯಪ್ರೀತಿಯನ್ನು ಯಾರೂ ಕೊಡಲು ಸಾಧ್ಯವಿಲ್ಲ ತಂದೆ ತಾಯಿ ಇಲ್ಲದ ನೂರಾರು ಅನಾಥ ಜೀವಗಳ ತಾಯಿಯಾಗಿ, ತಂದೆಯಾಗಿ ಹಗಲು ರಾತ್ರಿ ಮಕ್ಕಳ ಆರೈಕೆ ಮಾಡುತ್ತಿರುವ ಮಹಾನ್ ಜೋಳಿಗೆ ಅಜ್ಜರ ಮಮತೆಯ ಮಡಿಲು ಇಲ್ಲಿದೆ ನೋಡಿ,ಅವರೆಲ್ಲ ಕನಸುಗಳನ್ನ ಹೊತ್ತುಕೊಂಡು ಓಡಾತ್ತಿರುವ ಪುಟ್ಟ ಪುಟ್ಟ ಮಕ್ಕಳು. ತಾಯಿಯ ಆಸರೆ ಇಲ್ಲದೆ, ಭಾವನೆಗಳ ಬರಿದಾದ ಜೀವನದಲ್ಲಿ ತಾಯಿಯ ಮಡಿಲು ಬೇಡುತ್ತಿರುವ ಚಿಕ್ಕ ಚಿಕ್ಕ ಕಂದಮ್ಮಗಳು. ಯ್ಯಾರೊ ಮಾಡಿದ ತಪ್ಪಿಗೆ ಇನ್ಯಾರೊ ನೋವು ಅನುಭವಿಸುತ್ತಿರುವ ಆ ಜೀವಗಳು. ತಂದೆ ತಾಯಿ ಮಾಡಿದ ತಪ್ಪಿಗೆ ಮಕ್ಕಳಿಗೆ ಶಿಕ್ಷೆ. ಈ ಎಲ್ಲ ನೋವು ಗಳನ್ನ ಅರಿತು, ತಾಯಿ ಮನಸ್ಸಿನಿಂದ ಆರೈಕೆ ಮಾಡುತ್ತಿರುವ ಹೃದಯ ವಂತಿಕೆಯ ನೂರು ಮಕ್ಕಳ ತಾಯಿ_ತಂದೆಯಾಗಿ ಭವದ ಬಯಲಿಗೆ ಬೆಂದು ಬಿದ್ದ ಜೀವಗಳ ರಕ್ಷಣೆಗಾಗಿ…
