Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪ್ರತಿ ಮೂರು ವರ್ಷಗಳಿಗೊಮ್ಮೆ ಜರುಗುವ ಪಟ್ಟಣದ ಗ್ರಾಮ ದೇವತೆ ಜಾತ್ರೆಯನ್ನು ಈ ಬಾರಿಯೂ ಅತ್ಯಂತ ಅದ್ಧೂರಿಯಾಗಿ ಮೇ೩೦ ರಂದು ನಡೆಸಲು ನಿರ್ಧರಿಸಲಾಯಿತು.ಈ ಕುರಿತು ಪಟ್ಟಣದ ಕುಂಬಾರಗಲ್ಲಿಯ ಗ್ರಾಮ ದೇವತೆ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರ್ವ ಸಮಾಜದ ಮುಖಂಡರು, ಊರಿನ ಗುರು ಹಿರಿಯರು, ಗಣ್ಯ ವರ್ತಕರ ಒಮ್ಮತದ ಒಪ್ಪಿಗೆಯ ಮೇಲೆ ಈ ನಿರ್ಧಾರವನ್ನು ಪ್ರಕಟಿಸಲಾಯಿತು.ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸದಸ್ಯರಾದ ಅಶೋಕ ವನಹಳ್ಳಿ, ಪ್ರತಿಭಾ ಅಂಗಡಗೇರಿ, ರಫೀಕ ದ್ರಾಕ್ಷಿ, ಭಾರತಿ ಪಾಟೀಲ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ಎಂ.ಎಸ್.ನಾವದಗಿ, ಪ್ರಮುಖರಾದ ಅಶೋಕ ನಾಡಗೌಡ, ಅಪ್ಪು ಸಿದ್ದಾಪೂರ, ಬಾಬು ಬಿರಾದಾರ, ಸಂಗಣ್ಣ ಬಿರಾದಾರ ಜಿಟಿಸಿ, ಸುಧೀರ ನಾವದಗಿ, ಸತೀಶ ಓಸ್ವಾಲ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಅಶೋಕ ಚಟ್ಟೇರ, ಸಂಗಣ್ಣ ಮೇಲಿನಮನಿ, ಮುತ್ತಣ್ಣ ರಾಯಗೊಂಡ, ವಿಜೇಂದ್ರ ಅಶೋಕ, ಪರಶುರಾಮ ನಾಲತವಾಡ,…

Read More

ವರದಿಗಾರರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸತ್ತದೆ ಎಂದು ಸೋಮವಾರ ಹೇಳಿದ್ದಾರೆ.ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ “ಪರ್ಯಾಯ ಮುಖ್ಯಮಂತ್ರಿ” ಅಥವಾ “ಅಧಿಕಾರ ಹಂಚಿಕೆ” ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.ಸೋಮವಾರ ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, “ಅದನ್ನು ಹೈಕಮಾಂಡ್ ನಿರ್ಧರಿಸಬೇಕು” ಎಂದು ತಿಳಿಸಿದರು.ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ.ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ. ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ :ಡಿಕೆಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪಕ್ಷಾತೀತ ನಾಯಕರಾಗಿದ್ದಾರೆ. ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಯಾರೂ ಹೇಳಿಕೆ ನೀಡುವ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಇಲ್ಲಿನ ಪಿಎಲ್‌ಡಿ ಬ್ಯಾಂಕ್‌ನ ನೂತನ ನಿರ್ದೇಶಕರ ಚುನಾವಣೆಗೆ ಫೆ.೧೬ರಂದು ಮತದಾನ ಹಾಗೂ ಮತ ಎಣ ಕೆ ಕಾರ್ಯ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೆಚ್ಚಿನವರು ಗೆಲ್ಲುವ ಮೂಲಕ ಪಿಎಲ್‌ಡಿ ಬ್ಯಾಂಕ್‌ಗೆ ಕಾಂಗ್ರೆಸ್ ತೆಕ್ಕೆಗೆ ಸೇರುವಂತಾಗಿದ್ದರಿಂದ ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ಈ ಕುರಿತು ಮಾತನಾಡುತ್ತಾ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ ಹಾಗೂ ಶಾಸಕ ಎಂ.ವೈ ಪಾಟೀಲ್ ಅವರ ನೇತೃತ್ವದಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆಗಾಗಿ ಕಸರತ್ತು ಮಾಡಲಾಗಿತ್ತು. ಹೀಗಾಗಿ ೧೪ ನಿರ್ದೇಶಕರ ಸ್ಥಾನದ ಪೈಕಿ ಈ ಪೈಕಿ ೧೧ ಜನ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಹೊಸದಾಗಿ ಆಯ್ಕೆಗೊಂಡವರು ರೈತರ ಪರವಾಗಿ ಕೆಲಸಮಾಡಿ ಶಾಸಕರ, ಮಾಜಿ ಸಚಿವರ ಗೌರವ ಉಳಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.ಫಲಿತಾಂಶದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ಮೂರ್ತಿ, ಅಂಬೇಡ್ಕರ್ ಮೂರ್ತಿಗಳಿಗೆ ಪುಷ್ಪ ನಮನ ಸಲ್ಲಿಸಿ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಜೆ.ಎಂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಸಮಾಜವು ಅತ್ಯಂತ ಕಲುಷಿತ ವಾತಾವರಣದಲ್ಲಿದೆ ಅಂದರೆ ನೈತಿಕ ಮೌಲ್ಯಗಳು ಕುಸಿಯುತ್ತಿವೆ, ಅದಕ್ಕಾಗಿ ಜಾನಪದ ಸಾಹಿತ್ಯ ಶರಣ ಸಾಹಿತ್ಯ ತಿಳಿದು ನಡೆದರೆ ಮಾನವ ಜನಾಂಗಕ್ಕೆ ದಾರಿದೀಪ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವಿ ಸಿ ನಾಗಠಾಣ ಹೇಳಿದರು.ನಗರದ ವೀರಶೈವ ಲಿಂಗಾಯತ ಮಹಾಸಭಾ ಸಮುದಾಯ ಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ವೇದಿಕೆ ಅಡಿಯಲ್ಲಿ ಡಾ ಎಂ ಎನ್ ವಾಲಿ ಪ್ರತಿಷ್ಠಾನ ಯುಗದರ್ಶಿನಿ ಪ್ರತಿಷ್ಠಾನ ವತಿಯಿಂದ ಜನಪದ ಸಾಹಿತ್ಯೋತ್ಸವ ಹಾಗೂ ಶರಣ ಸಾಹಿತ್ಯೋತ್ಸವ ಕಾರ್ಯಕ್ರಮದ ಸಮಾರೋಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಾರದಾ ಐಹೊಳೆ ಮಾತನಾಡಿ, ಭಾರತವು ಭವ್ಯ ಸಂಸ್ಕೃತಿಯ ಆಗರ. ಇಲ್ಲಿ ಜನಪದ ಮತ್ತು ಶರಣ ಸಾಹಿತ್ಯ ಶ್ರೇಷ್ಠ ಸಾಹಿತ್ಯ.ನಾವು ಈ ಎರಡು ಸಾಹಿತ್ಯಗಳನ್ನು ಅಧ್ಯಯನ ಮಾಡಿ ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಸುಂದರವಾಗುತ್ತದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾದ…

Read More

ಹರಳಯ್ಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ ವಿಶೇಷ ತರಗತಿ ಆಯೋಜನೆ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಬರಲಿರುವ ಎಸ್ಸೆಸ್ಸೆಲ್ಸಿ ವಾಷಿ೯ಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಹವಣಿಸಬೇಕು. ಅದಕ್ಕೆ ಶ್ರದ್ಧೆಯಿಂದ, ಏಕಾಗ್ರತೆಯಿಂದ ಅದ್ಯಯನಶೀಲರಾಗಿ ಓದಾಭ್ಯಾಸದಲ್ಲಿ ತಲ್ಲಿನರಾಗಬೇಕು. ಅತ್ಯಂತ ಸುಲಭವಾಗಿ ಅತಿ ಹೆಚ್ಚು ಅಂಕಗಳಿಸಲು ಗಣಿತ ವಿಷಯದಲ್ಲಿ ಬರುವ ಪ್ರತಿ ಕ್ಲಿಷ್ಟಕರ ಸಮಸ್ಯೆಗಳನ್ನು ಅಥೈ೯ಸಿಕೊಂಡು ಬಿಡಿಸುವ ಹಂತಗಳನ್ನು ತಿಳಿದುಕೊಂಡರೆ ಅದು ಸಾಧ್ಯ ಎಂದು ಸಾವಳಗಿ ಬಿಎಲ್.ಡಿ.ಇ ಪ್ರೌಢಶಾಲೆಯ ಗಣಿತ ಶಿಕ್ಷಕ ಸುರೇಶ ಮನಹಳ್ಳಿ ಹೇಳಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಪರೀಕ್ಷಾ ದೃಷ್ಟಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಗಣಿತ ವಿಶೇಷ ತರಗತಿಯ ಪಾಠ ಪ್ರವಚನ ಬೋಧನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಭಾಗಲಬ್ದ ಎಂದು ಸಾಧಿಸುವುದು.ತ್ರಿಭುಜ ಮತ್ತು ವೃತ್ತದ ಮೇಲಿನ ಪ್ರಮೇಯಗಳು, ಗ್ರಾಫ್ ಹಾಗೂ ಎರಡು ಚರಾಕ್ಷರ ರೇಖಾತ್ಮಕ ಸಮೀಕರಣದಲ್ಲಿ ವಜಿ೯ಸುವ ವಿಧಾನ ಸಮಾಂತರ ಶ್ರೇಣಿಯ ವಾಕ್ಯರೂಪದ ಪ್ರಶ್ನೆಗಳಿಗೆ ಬಹುಪದೋಕ್ತಿಯಲ್ಲಿ ಅಪವತಿ೯ಸುವುದು, ವರ್ಗ ಸಮೀಕರಣಕ್ಕೆ ಹಾಗೂ…

Read More

ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಸರಕಾರದ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ೯ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ಹಾಗೂ ಬಿಕ್ಷಾಟನೆ ಮಾಡುವ ಮೂಲಕ ವಂತಿಕೆ ಹಣ ಜಮೆ ಮಾಡಿ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂದೀಪ ಅರಳಗುಂಡಿ ಮಾತನಾಡಿ, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ, ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನ ನೀಡುವುದು ಸರ್ಕಾರಗಳ ಆದ್ಯ ಕರ್ತವ್ಯ, ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಇಂದಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.ವಿದ್ಯಾರ್ಥಿನಿ ಸ್ನೇಹಾ ಹಿರೇಮಠ ಮಾತನಾಡಿ, ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ ಶಿವಕುಮಾರ ಅವರ…

Read More

ಫೆಬ್ರವರಿ ಮಾಹೆ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಫೆ.೧೭ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ ಸಂಪೂರ್ಣ ಪರಿಶೀಲನೆ ನಡೆಸಿದ ಅವರು, ಈ ಮಾಹೆಯ ಅಂತ್ಯಕ್ಕೆ ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಶೇ.೯೫ರಷ್ಟು ಮುಕ್ತಾಯಗೊಂಡಿದ್ದು, ಅಲ್ಲಲ್ಲಿ ಟ್ರ್ಯಾಕ್ ಸಮತಟ್ಟುಗೊಳಿಸುವ ಹಾಗೂ ಕೆಲವು ಕಡೆ ಬಾಕಿ ಇರುವ ಪೇಂಟಿಗ್ ಕಾರ್ಯವನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧಿಕಾರಿಗಳಿಂದ ಪರಿಶೀಲನೆ ನಡೆಸುವ ಸೂಕ್ತ ಕ್ರಮಕ್ಕಾಗಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.ಅರಣ್ಯ ಇಲಾಖೆಯ ಅಧೀನದಲ್ಲಿರುವ ಜಲ ಮೂಲ (ಬಾವಿ) ಗಳಿಂದ ಸೈಕ್ಲಿಂಗ್ ವೆಲೋಡ್ರೊಮಗೆ ಪೈಪ್‌ಲೈನ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸುವಂತೆಯೂ, ವೆಲೋಡ್ರೊಮ್ ಆವರಣದಲ್ಲಿ ಸಸಿಗಳನ್ನು ನೆಡಲು ಅಗತ್ಯ ಕ್ರಮಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: ೨೮-೦೨-೨೦೨೫ರ ಸಂಜೆ ೫ರ ಒಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಕಲ್ಪಿಸಲು ಫೆ.೧೯ ರಿಂದ ಫೆ.೨೬ರ ವರೆಗೆ ಶ್ರೀಶೈಲಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನ ಬಾಗೇವಾಡಿ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವದು. ಸದರಿ ಹೆಚ್ಚುವರಿ ವಾಹನಗಳಿಗೆ ಮುಂಗಡ ಟಿಕೇಟ್ ಬುಕ್ಕಿಂಗ ಸೌಕರ್ಯವನ್ನು ಕಲ್ಪಿಸಲಾಗಿದೆ.ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಜಯಪುರ೧ನೇ ಘಟಕದ ವ್ಯವಸ್ಥಾಪಕ ಮೊಬೈಲ್ ಸಂಖ್ಯೆ: ೭೭೬೦೯೯೨೨೬೩, ವಿಜಯಪುರ-೨ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೪, ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೫೮, ನಗರ ಸಾರಿಗೆ -೩ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೧೪೦೦೮, ಇಂಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೫, ಸಿಂದಗಿಯ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿ ಪ್ರಯುಕ್ತ ಬಸಂತವನ ಶಿವಗಿರಿಯಲ್ಲಿ ಫೆ.೨೬ರಂದು ಉತ್ಸವ ಜರುಗಲಿದ್ದು, ಶಿವಗಿರಿಗೆ ತೆರಳುವ ಪ್ರಯಾಣಿಕರ ಅನಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.ಗಾಂಧಿಚೌಕ ನಗರ ಸಾರಿಗೆ ಬಸ್ ನಿಲ್ದಾಣ, ಸೆಟಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More