Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆ.ಪಿ.ಟಿ.ಸಿ.ಎಲ್ ವತಿಯಿಂದ ೧೧೦ ಕೆ.ವ್ಹಿ ಬೇ ಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ೧೧೦/೧೧ ಕೆ.ವ್ಹಿ ವಿವಿ ಕೇಂದ್ರ ಕೆಐಎಡಿಬಿ, ಭೂತನಾಳ, ಜುಮನಾಳ, ವಿಜಯಪುರ ಸಿಟಿ ಮತ್ತು ೩೩/೧೧ ಹೊನ್ನುಟಗಿ, ನಾಗಠಾಣ ಹಾಗೂ ೨೨೦/೧೧೦ ಸ್ವೀಕರಣಾ ಕೇಂದ್ರ ವಿಜಯಪುರದಿಂದ ಹೊರಹೋಗುವ ಎಲ್ಲಾ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಿಗೆ ದಿನಾಂಕ ೧೮-೦೨-೨೦೨೫ರ ಬೆಳಿಗ್ಗೆ ೦೯ರಿಂದ ಮಧ್ಯಾಹ್ನ ೨ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೊರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಕ್ಫ್ ಆಸ್ತಿ ರಿ.ಸ.ನಂ.೧೦೨೯ರ ೫ಎ ೧೯ಗುಂಟೆ ಜಮೀನಿನಲ್ಲಿ ಅನಧಿಕೃತವಾಗಿ ಶೆಡ್ಡ್ಗಳನ್ನು ನಿರ್ಮಾಣ ಮಾಡುತ್ತಿದ್ದು, ಅದನ್ನು ತೆರವುಗೊಳಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಖಬರಸ್ಥಾನ (ಸ್ಮಶಾನ) ಜಮೀನು ಖಬರಸ್ಥಾನಗೆ ಉಪಯೋಗವಾಗುವ ಹಾಗೆ ಮಾಡಬೇಕು ಎಂದು ಟಿಪ್ಪು ಕ್ರಾಂತಿ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಸಿಂದಗಿ ಪಟ್ಟಣದ ವಕ್ಫ್ ಆಸ್ತಿ ರಿ.ಸ.ನಂ.೧೦೨೯ ಜಮೀನಿನಲ್ಲಿ ವಕ್ಫ್ ಆಸ್ತಿ ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ವಕ್ಫ ಆಸ್ತಿಯಲ್ಲಿ ಅನಧಿಕೃತ ಶೆಡ್‌ಗಳು ನಿರ್ಮಾಣ ಮಾಡಬಾರದು. ಖಬರಸ್ಥಾನ ಆಸ್ತಿಯಾಗಿಯೇ ಉಳಿಯಬೇಕು. ಒಂದು ವೇಳೆ ಅನಿಧಿಕೃತ ಶೆಡ್ ನಿರ್ಮಿಸಿದರೆ ಮುಂಬರುವ ದಿನಮಾನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಹೋರಾಟದಲ್ಲಿ ಅಂಜುಮನ್ ಸಮಿತಿ ಅಧ್ಯಕ್ಷ ಅಬ್ದುಲ್‌ರಜಾಕ ದುದನಿ, ಸಮಾಜದ ಮುಖಂಡರಾದ ಯಾಕೂಬ್ ನಾಟೀಕಾರ, ಎಂ.ಎ.ಖತೀಬ, ಮೈಬೂಬಸಾಬ ನಾಟೀಕಾರ, ಮೈಬೂಬ ಹಸರಗುಂಡಗಿ, ಮೈಬೂಬ ವಾಲೀಕಾರ, ಸಲೀಮ ಜುಮನಾಳ, ರಹಿಮ್ ದುದನಿ, ದಲಿತ ಸೇನೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸುತ್ತಲೂ ಕಂಪೌಂಡ ನಿರ್ಮಿಸಲು ಕಾಲೇಜಿಗೆ ಶೀಘ್ರದಲ್ಲಯೇ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸುವೆ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಗೃಹ ಮಂಡಳಿಯ ೨೦೨೧-೨೨ನೆಯ ಸಾಲಿನ ಎಸ್.ಡಿ.ಪಿ ಯೋಜನೆಯಡಿಯಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.ಶಿಕ್ಷಣ ಕ್ಷೇತ್ರದಲ್ಲಿ ಸಿಂದಗಿ ನಗರ ಗಣನೀಯವಾಗಿ ಹೆಸರು ಮಾಡಿದೆ. ಜಿಲ್ಲೆಯಲ್ಲಿಯೇ ಸಿಂದಗಿ ಶಿಕ್ಷಣ ಕಾಶಿಯಾಗಿ ಬೆಳೆಯುತ್ತಿದೆ. ಶಿಕ್ಷಣಕ್ಕೆ ಹೆಚ್ಚಿನ ಪ್ರಾಧ್ಯಾನತೆಯನ್ನು ಮಕ್ಕಳ ಶ್ರೇಯೊಭಿವೃದ್ಧಿಗೆ ಸದಾ ಶ್ರಮಿಸುವೆ ಎಂದರು.ಈ ವೇಳೆ ಕಾಲೇಜು ಅಭಿವೃದ್ಧಿ ಸದಸ್ಯರಾದ ಸಿದ್ದನಗೌಡ ಪಾಟೀಲ, ಪ್ರಭುಲಿಂಗ ಲೋಣಿ, ಪ್ರತಿಭಾ ಚೆಳ್ಳಗಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಶಿವಾನಂದ ಗಣಿಹಾರ, ಜಿಲ್ಲಾ ಕೆಡಿಪಿ ಸದಸ್ಯ ನೂರ್‌ಅಹ್ಮದ ಅತ್ತಾರ, ಕೆ.ಎಚ್.ಬಿ ಅಭಿಯಂತರ ಸಾಧಿಕ್, ಗುತ್ತಿಗೆದಾರ ವೆಂಕಟೇಶ, ಪ್ರಾಚಾರ್ಯ ಎಸ್.ಎಎಸ್.ಹಳೆಮನಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಪದಗ್ರಹಣ ಮಾಡಿದರು.ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರು ಕಾಂಗ್ರೆಸ್ ಧ್ವಜ ನೀಡಿದರು.ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರಾದ ಅಬ್ದುಲ್ ಹಮೀದ ಮುಶ್ರೀಫ ಮಾತನಾಡಿ, ಕಾಂಗ್ರೆಸ್ ಪಕ್ಷ ಜನಪರ ಚಿಂತನೆಯ ಪಕ್ಷವಾಗಿದ್ದು. ಪಕ್ಷ ಸಂಘಟನೆ ಒಂದು ಸರಳ ಕೆಲಸವಲ್ಲ ಅದು ಒಂದು ಜವಾಬ್ದಾರಿಯ ಕೆಲಸ. ಈ ಜವಾಬ್ದಾರಿಯನ್ನು ನೂತನ ಅಧ್ಯಕ್ಷರು ಯುವಕರಾಗಿದ್ದು ಸಮರ್ಥವಾಗಿ ನಿಭಾಯಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿ ಶುಭ ಕೋರಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರು ಮಾತನಾಡಿ, ಶಕೀಲ ಬಾಗಮಾರೆವರು ಯುವಕರಾಗಿದ್ದು, ಪತ್ರಕರ್ತರಾಗಿದ್ದು ವಿಶೇಷವಾಗಿದೆ. ಇವರ ಮೇಲೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಜವಾಬ್ದಾರಿಯನ್ನು ನೀಡಿ ಪಕ್ಷ ಸಂಘಟಣೆ ಮಾಡಲು ಅವಕಾಶ ನೀಡಿದೆ. ಇದನ್ನು ಜಿಲ್ಲೆಯ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಎಲ್ಲ ಕಾಂಗ್ರೆಸ್ ನಾಯಕರ ವಿಶ್ವಾಸವನ್ನು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪುರ್ನವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣವು ತಾಲೂಕು ಕೇಂದ್ರವಾಗಿರುವದರಿಂದ ಪಟ್ಟಣಕ್ಕೆ ಇನ್ನೂ ಬರಬೇಕಾದ ತಾಲೂಕು ಕಛೇರಿಗಳನ್ನು ಮಂಜೂರಿ ಮಾಡಿಸಲು ಸಚಿವ ಕ್ಷೇತ್ರದ ಶಾಸಕರಾದ ಶಿವಾನಂದ ಪಾಟೀಲ ಗಮನಕ್ಕೆ ತಂದು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಪಟ್ಟಣ ಪಂಚಾಯತ ನೂತನ ಅಧ್ಯಕ್ಷ ಚನಮಲ್ಲಪ್ಪ ಶಿವಪ್ಪ ಗಿಡ್ಡಪ್ಪಗೋಳ ಹೇಳಿದರು.ಕೊಲ್ಹಾರ ತಾಲೂಕು ರಚನಾ ಹೋರಾಟ ಸಮಿತಿ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸ್ವಿಕರಿಸಿ ಮಾತನಾಡಿದ ಅವರು ಸಚಿವ ಶಿವಾನಂದ ಪಾಟೀಲರು ಕೊಲ್ಹಾರ ಪಟ್ಟಣದ ಅಭಿವ್ರದ್ದಿಗಾಗಿ ಯುಕೆಪಿ ಇಲಾಖೆ ಮತ್ತು ಸರಕಾರದ ವಿವಿಧ ಇಲಾಖೆಗಳ ಮೂಲಕ ಅನುದಾನವನ್ನು ಕಾಮಗಾರಿ ಪ್ರಾರಂಬಿಸಲು ಮಂಜೂರಿ ಮಾಡಿಸಿದ್ದು ಕೆಲವು ಅಡಚಣೆಗಳು ಬಗೆಹರಿದರೆ ಎಲ್ಲ ಕೆಲಸಗಳು ಚಾಲು ಆಗುವದರಲ್ಲಿ ಸಂಶಯವಿಲ್ಲ ಪಟ್ಟಣದ ಎಲ್ಲ ಸಂಘಟನೆಯವರ ಜನರ ಸಹಕಾರ ಪ್ರಾಮುಖ್ಯತೆ ಅತಿ ಅವಶ್ಯ ಎಂದರು.ಪಟ್ಟಣದಲ್ಲಿರುವ ಕೆಲವು ರಸ್ತೆಗಳನ್ನು ದ್ವಿಪಥ ರಸ್ತೆಯನ್ನಾಗಿ ಮಾರ್ಪಡಿಸಿ ವಿಭಜಕದ ಮದ್ಯ ವಿದ್ಯುತ್ ಕಂಬ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಲಾಗುವದು ಪಟ್ಟಣದ ಸರ್ವಾಂಗೀಣ ಅಭಿವ್ರದ್ದಿಗಾಗಿ ಸದ್ಯಸ್ಯರ ಅಧಿಕಾರಗಳ ಮತ್ತು…

Read More

ಕಪನಿಂಬರಗಿಯಲ್ಲಿ ಮಾನಸಿಕ ಆರೋಗ್ಯ ತಿಳುವಳಿಕೆ ಜಾಗೃತಿ ಜಾಥಾ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಮ್ಮ ಮನಸ್ಸನ್ನು ಶಾಂತಗೊಳಿಸಲು, ಒತ್ತಡವನ್ನು ಕಡಿಮೆ ಮಾಡಲು, ಉತ್ತಮ ಮಾನಸಿಕ ಯೋಗಕ್ಷೇಮಕ್ಕಾಗಿ ಭಾವನಾತ್ಮಕ ಅರಿವನ್ನು ಹೆಚ್ಚಿಸಲು ಸಾವಧಾನತೆ ಅಥವಾ ಧ್ಯುಆನಕ್ಕೆ ಪ್ರತಿದಿನ ಕೆಲವು ನಿಮಿಷಗಳನ್ನು ಮೀಸಲಿಡುವುದು ಬಹಳ ಮುಖ್ಯ. ದೈಹಿಕ ಚಟುವಟಿಕೆಗಳು ಮಾನಸಿಕ ಸ್ವಾಸ್ಥ್ಯವನ್ನು ಉತ್ತಮವಾಗಿಸಲು ಸಹಾಯ ಮಾಡುತ್ತದೆ ಎಂದು ಕಪ ನಿಂಬರಗಿ ಗ್ರಾಪಂ ಅಧ್ಯಕ್ಷರಾದ ಪ್ರತಿಭಾ ಠೋಕೆಯವರು ಹೇಳಿದರು.ಶನಿವಾರದಂದು ಕಪನಿಂಬರಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ತಿಳುವಳಿಕೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಮನಸ್ಸೆಂಬ ಕನ್ನಡಿಯಲ್ಲಿ ಬಿಂಬಿತವಾಗುವ ಶಾಂತಿ, ಸಮಾಧಾನ, ಬದುಕಿನ ಸೊಗಸು ಎಲ್ಲವೂ ನಮ್ಮ ಅರಿವಿಗೆ, ಅನುಭವಕ್ಕೆ ಬರುವುದು ಮನಸ್ಸಿನ ಮೂಲಕವೇ. ಹೀಗಾಗಿ ಮಾನಸಿಕ ಆರೋಗ್ಯವೇ ನಮ್ಮ ಜೀವನದ ಸಂತೋಷಗಳಿಗೆ ಬುನಾದಿಯಾಗಿದೆ ಎಂದರು.ಈ ವೇಳೆ ಸಿಬಿಐಡಿ ಸಂಯೋಜಕರಾದ ಹಣಮಂತರಾಯಗೌಡ ಪಾಟೀಲರು ಮಾತನಾಡುತ್ತ. ನಿಮ್ಮ ದೇಹವನ್ನು ಪೋಷಿಸಲು, ಮೆದುಳಿನ ಆರೋಗ್ಯವನ್ನು ಉತ್ತಮವಾಗಿಸಲು, ದೇಹ ಮತ್ತು ಮನಸ್ಸಿನ ಸರಿಯಾದ ಯೋಗಕ್ಷೇಮಕ್ಕಾಗಿ ಹಣ್ಣುಗಳು, ತರಕಾರಿಗಳು, ಧ್ಯಾನಗಳು ಮತ್ತು…

Read More

ನಿವರಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಆಚರಣೆಯಲ್ಲಿ ಬಿಇಓ ಸುಜಾತಾ ಹುನ್ನೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಿಗೆ ನಾವೀನ್ಯತೆ ಹಾಗೂ ಒಳಗೊಳ್ಳುವಿಕೆ ಭೋಧನೆಗೆ ಪ್ರೋತ್ಸಾಹ ನೀಡುವುದು. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು. ಕಲಿಯುವ ಪ್ರಕ್ರಿಯೆಯನ್ನು ಸಂತಸದಾಯಕಗೊಳಿಸುವುದು, ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಚಡಚಣ ಬಿಇಓ ಶ್ರೀಮತಿ ಸುಜಾತಾ ಹುನ್ನೂರ ಹೇಳಿದರು.ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯ ಅಧಿಕಾರಿಗಳು ಕಾರ್ಯಾಲಯ ಚಡಚಣ ತಾಲೂಕು ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯದ ಆಂದೋಲನ ನಿವರಗಿ ಕ್ಲಸ್ಟರ್ ವ್ಯಾಪ್ತಿಯ ಉಮರಜದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ‘ಕಲಿಕಾ ಹಬ್ಬ’ವನ್ನು ಸರಸ್ವತಿ ಮಾತೆ ಭಾವಚಿತ್ರ ಪೂಜೆ ನೆರವೇರಿಸಿ ಮಾತನಾಡಿದ ಅವರು. ಮಕ್ಕಳು ಚಟುವಟಿಕೆ ಮೂಲಕ ಸಂತೋಷದಾಯಕ ಕಲಿಕೆಯನ್ನು ಮಕ್ಕಳು ಕಲಿಯಬೇಕು ಎಂಬ ಹಿನ್ನಲೆಯಿಂದ ಸರ್ಕಾರ ಚಿಂತನೆ ಮಾಡಿದ್ದು, ಈ ಚಿಂತನೆ, ಸಲಹೆ ಹಾಗೂ ಮಾರ್ಗದರ್ಶನದಡಿಯಲ್ಲಿ…

Read More

ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ,ಪಟ್ರಮೆ ಗ್ರಾಮ ಮತ್ತು ಅಂಚೆ,ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮನುಷ್ಯನ ದೇಹದಲ್ಲಿ ಹೃದಯವನ್ನು ಬಿಟ್ಟರೆ ಮೆದುಳು ಅತ್ಯಂತ ಭಾಗ. ಮೆದುಳನ್ನು ದೇಹದ ಅತ್ಯಂತ ಶಕ್ತಿಶಾಲಿ ಭಾಗವೆಂದು ಪರಿಗಣಿಸಲಾಗುತ್ತದೆ. ಆದರೆ ಬಹುತೇಕ ಜನರು ತಮ್ಮ ಮೆದುಳನ್ನು ದೇಹದ ಪ್ರಮುಖ ಅಂಗವೆಂದು ಪರಿಗಣಿಸಿಲ್ಲ ಮತ್ತು ಹೆಚ್ಚಿನವರು ಯಾವತ್ತೂ ತಮ್ಮ ಮೆದುಳಿನ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸುವುದೇ ಇಲ್ಲ ಎನ್ನಬಹುದು. ಮೆದುಳು ಸ್ವಲ್ಪ ಆರೋಗ್ಯ ತಪ್ಪಿದರೆ ಮನುಷ್ಯ ಜೀವಂತ ಶವದಂತೆಯೇ ಸರಿ. ಹಾಗಾಗಿ ಮೆದುಳಿನ ಆರೋಗ್ಯ ಕಾಪಾಡಲು ಹೆಚ್ಚಿನ ಗಮನವನ್ನು ಹರಿಸಬೇಕು. ಪ್ರಾತಃಕಾಲದಲ್ಲೇ ಏಳುವುದು, ಸೂರ್ಯ ಸ್ನಾನ ಮಾಡುವುದು, ನಿತ್ಯವೂ ನಿಯಮಿತ ಧ್ಯಾನ ಮಾಡುವುದು, ಆರೋಗ್ಯ ಹಾಗೂ ತೂಕ ನಿಯಂತ್ರಣ ಮತ್ತು ಉತ್ತಮ ಆಹಾರ ಕ್ರಮವನ್ನು ಅಳವಡಿಸಿಕೊಳ್ಳುವ ಮೂಲಕ ಮೆದುಳಿನ ಆರೋಗ್ಯ ಕಾಪಾಡಬಹುದು. ನಮ್ಮ ಮೆದುಳಿನ ಆರೋಗ್ಯದ ಮೇಲೆ ನಮಗೆ ಅರಿವಿಲ್ಲದಂತೆ ನಮ್ಮ ಅಭ್ಯಾಸಗಳೇ ಪರಿಣಾಮ ಬೀರುತ್ತವೆ. ಮೆದುಳಿನ ಆರೋಗ್ಯವನ್ನು ಕಾಪಾಡುವ ಅಂಶಗಳೆಂದರೆ,ಸಾಕಷ್ಟು ನಿದ್ರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನವಾಣಿ ಬೇರು ಕವಿವಾಣಿ ಹೂ. ಶಿಷ್ಯ ಸಾಹಿತ್ಯಕ್ಕೆ ಮೂಲ ಜನಪದ ಸಾಹಿತ್ಯ ಜನಪದ ಹಾಡು -ಕಥೆಗಳಲ್ಲಿ ಜೀವನಾನುಭವವಿದೆ. ಅನಕ್ಷರಸ್ಥರಿಂದ ರಚಿಸಲ್ಪಟ್ಟಿದ್ದರೂ ಅದು ಸಂಸ್ಕೃತಿಯ ವೈಭವವನ್ನು ಹೊಂದಿದೆಯೆಂದು ಜನಪದ ಕಲೆಗಾರ ಡಾ. ಜ್ಯೋತಿರ್ಲಿಂಗ ಹೊನಕಟ್ಟಿ ಹೇಳಿದರು.ಅವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಡಾ. ಎಂ.ಎನ್. ವಾಲಿ ಪ್ರತಿಷ್ಠಾನ ಮತ್ತು ಡಾ. ಸರಸ್ವತಿ ಚಿಮ್ಮಲಗಿ ಅವರ ಯುಗದರ್ಶಿನಿ ಪ್ರತಿಷ್ಠಾನಗಳ ದತ್ತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲಾ ವೀರಶೈವ ಲಿಂಗಾಯತ ಸಮುದಾಯ ಭವನದ ಜ್ಞಾನಜ್ಯೋತಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ, ಜನಪದ ಹಾಡಿಕೆ, ಸಾಧಕರಿಗೆ ಸನ್ಮಾನಗಳ ಕಾರ್ಯಕ್ರಮ ಜರುಗಿದವು. ಪ್ರೊ. ಲಕ್ಷ್ಮಿ ಅನುಭವ ಮಂಟಪದಲ್ಲಿ ಶಿವಶರಣೆಯರು ವಿಷಯ ಕುರಿತು ಉಪನ್ಯಾಸ ನೀಡಿದರು. ವೇದಕಾಲದಲ್ಲಿ ಹೆಣ್ಣಿಗೆ ಸ್ವಾತಂತ್ರ್ಯ ವಿದ್ದಿದ್ದಿಲ್ಲ. ಹೆರಿಗೆ ಯಂತ್ರದಂತೆ ಯಾತನೆ ಅನುಭವಿಸುತ್ತಿದ್ದ ಹೆಣ್ಣಿಗೆ ಗಂಡಿಗೆ ಸಮಾನವಾದ ಸ್ಥಾನ ನೀಡಿ ದೈವತ್ವಕ್ಕೇರಿಸಿದ ಖ್ಯಾತಿ ಬಸವಾದಿ ಶರಣರಿಗೆ ಸಲ್ಲುತ್ತದೆ ಎಂದು ಹೇಳಿದರು.ತಾಳಿಕೋಟಿಯ ಶಿವಲೀಲಾ ಮುರಾಳ ಅವರು ಜಾನಪದಲ್ಲಿ ಗರತಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಯಲಗೂರು ಯಲಗೂರೇಶ್ವರ ಕಾರ್ತಿಕೋತ್ಸವದ ಎರಡನೇ ದಿನ ವಿವಿಧ ಧಾಮರ್‌uಟಿಜeಜಿiಟಿeಜಕ, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.ಯಲಗೂರೇಶನ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ತೆರಳಿ ನದಿ ಸ್ನಾನಗೈದು ಮರಳಿ ದೇವಸ್ಥಾನಕ್ಕೆ ನೂರಾರು ಭಕ್ತರ ಸಮ್ಮುಖದಲ್ಲಿ ನಸುಕಿನ ಜಾವ ೫ ಕ್ಕೆ ತರಲಾಯಿತು. ನಂತರ ದೇವರಿಗೆ ಅಭಿಷೇಕ, ಅಲಂಕಾರಗಳು ನಡೆದವು. ನಂತರ ದಿಂಡಿನ ಸ್ಪಧರ್‌uಟಿಜeಜಿiಟಿeಜ ಜರುಗಿದವು.ಎರಡನೇ ದಿನವೂ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆದವು.ಸಂಗೀತ ಕಾರ್ಯಕ್ರಮ:ವಿದೂಷಿ ಸಂಗೀತಾ ಕಟ್ಟಿ ಕುಲಕಣರ್‌uಟಿಜeಜಿiಟಿeಜ, ಕುಮಾರ ಮರಡೂರ, ಜಯತೀರ್ಥ ಮೇವುಂಡಿ, ಅವರ ಗಾಯನ, ರಾಜೇಂದ್ರ ನಾಕೋಡ ಅವರ ತಬಲಾ ಸೋಲೋ, ಚಿದಾನಂದ ಕುಲಕರ್ಣಿ ಅವರ ನೃತ್ಯರೂಪಕ ಗಮನಸೆಳೆಯಿತು.ಪಂಡಿತ ಕಿರಣ ಯಾವಗಲ್, ಗುರುನಾಯಕ, ಪ್ರಶಾಂತ, ಗಣಾಚಾರಿ, ಶೇಷಗಿರಿ, ಕೇಶವ ಜೋಷಿ, ಪ್ರಮೋದ ಹರಿಮಂದಿರ, ಭರತ ಹೆಗಡೆ, ಮಧು ಕೊಪ್ಪ, ಅಕ್ಷಯ ಜೋಷಿ, ಶ್ರೀಹರಿ ದಿಗ್ಗಾವಿ, ಬಿಂಧು ಕಡಿವಾಲ ತಬಲಾ ಸಾಥ್ ನೀಡಿದರು.ಅನುಗ್ರಹ ಪ್ರಶಸ್ತಿ:ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ನೀಡುವ `ಯಲಗೂರೇಶ್ವರ ಅನುಗ್ರಹ ಪ್ರಶಸ್ತಿ’ಯನ್ನು ಶನಿವಾರ…

Read More