Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದ್ದನ್ನು ಧಿಕ್ಕರಿಸಿ ಬಿಜೆಪಿ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಸಿದ್ದು ಹೆಬ್ಬಾಳ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಪತ್ರವನ್ನು ಪತ್ರಿಕೆಗೆ ನೀಡಿ ಮಾತನಾಡಿದ ಅವರು ಯತ್ನಾಳರು ರಾಜ್ಯ ಬಿಜೆಪಿಯಲ್ಲಿ ಗಟ್ಟಿ ಧ್ವನಿಯಾಗಿದ್ದರು. ನೇರನುಡಿಯ ಮೂಲಕ ರಾಜ್ಯದ ಜನತೆಯ ಮನಗೆದ್ದಿದ್ದರು. ಕಳಂಕ ರಹಿತವಾಗಿದ್ದ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದು ನನಗೆ ನೋವು ತಂದಿದೆ. ಕಾರಣ ಅವರನ್ನು ಬೆಂಬಲಿಸಿ ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದರು.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ನೀರಿನ ಸುಸ್ಥಿರ ನಿರ್ವಹಣೆಯ ಬಗ್ಗೆ, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜೀವಜಲ ಸಂರಕ್ಷಿಸಲು ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದು ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆಂಭಾವಿ, ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವಜಲ ದಿನದಂದು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗದ ಜೀವಿಗಳು ಜೀವಿಸಲು ಜೀವಜಲ ಜೀವನಾಧಾರವಾಗಿದೆ, ಜೀವಜಲವನ್ನು ಹಿತಮಿತವಾಗಿ ಬಳಕೆ ಮಾಡೋಣಾ ಎಂದವರು, ನೀರನ್ನು ಮಹತ್ವ, ನೀರಿನ ಮೌಲ್ಯೀಕರಣ, ನೀರಿನ ಬಗ್ಗೆ ಜಾಗೃತಿ ಮೂಡಿಸುವ ಈ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ, ನೀರಿನ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಸರ್ಕಾರದ ಅಭಿಯಾನ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಪ್ರತಿಜ್ಞಾವಿಧಿ…

Read More

ಕುಟುಂಬ ರಾಜಕಾರಣದಲ್ಲಿ ಮುಳುಗಿದ ಬಿಜೆಪಿ | ನೇಶನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್ ತತ್ವದಡಿ ಕೆಲಸ | ಶಾಸಕ ಬಸನಗೌಡ ಪಾಟೀಲ ಸ್ಪಷ್ಟನೆ ಬೆಂಗಳೂರು: ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ಯತ್ನಾಳ ಹೇಳಿದ್ದಾರೆ.ಗುರುವಾರ ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೊರಹಾಕಿದ್ದಾರೆ.ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾದ ಪ್ರಸಾದ ಧನಸಿಂಗ್ ಚವ್ಹಾಣ, ಅರವಿಂದ ಡಿ ಸಾಲವಾಡಗಿ, ಮಹಾದೇವ ಸಿದ್ರಾಮಪ್ಪ ಕಾಂಬಳೆ, ಮಳಸಿದ್ದ ನಾಲ್ನೋಡಿ ಅವರನ್ನು ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹಾಗೂ ವಿವಿಧ ಅಧಿಕಾರಿಗಳು ಸನ್ಮಾನಿಸಿದರು.ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಶಿಷ್ಟ ಜಾತಿ/ಪಂಗಡದ ಜನರ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಜೆ ಇಂಡಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿಗಳ ಇಂಟರ್ನಶಿಪ್ ಸ್ಕೀಮ್ ಅತ್ಯುತ್ತಮ ಕಂಪನಿಗಳ ಯೋಜನೆಯಡಿ ಉನ್ನತ ಮಟ್ಟದ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನಶಿಪ್ ಮೂಲಕ ಕೌಶಲ್ಯವನ್ನು ವೃದ್ದಿಸಿಕೊಳ್ಳುವ ತರಬೇತಿ ನೊಂದಣಿಗೆ ಅರ್ಹತೆ ಆಧಾರದ ಮೇಲೆ ಪೋರ್ಟಲ್‌ನಲ್ಲಿ ಅವಶ್ಯ ದಾಖಲೆಗಳೊಂದಿಗೆ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ, ಡಿಪ್ಲೋಮಾ, ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎ, ಬಿಫಾರ್ಮ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅರ್ಹರು ದಿನಾಂಕ : ೩೧-೦೩-೨೦೨೫ರೊಳಗಾಗಿhttps://pminternship.mca.gov.in/login/ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದ್ದು, ಇಂಟರ್ನಶಿಪ್‌ಗೆ ಆಯ್ಕೆಯಾದ ಅಭ್ಯರ್ಥಿಗಳು ಕಂಪನಿ ಆಯೋಜಿಸಿದ ಸ್ಥಳಗಳಲ್ಲಿ ಹೋಗಿ ತರಬೇತಿ ಪಡೆಯಬೇಕು. ತರಬೇತಿ ಅವಧಿಯಲ್ಲಿ ಮಾಸಿಕ ೫ ಸಾವಿರ ರೂ. ಹಾಗೂ ತರಬೇತಿ ನಂತರ ಅರ್ಹತೆ ಆಧಾರದ ಮೇಲೆ ೬ ಸಾವಿರ ರೂ. ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.ಜಿಲ್ಲೆಯ ಆಸಕ್ತ ನಿರುದ್ಯೋಗ ಯುವಕ-ಯುವತಿಯರು ಇಂಟರ್ನಶಿಪ್ ಯೋಜನೆಯಡಿ ನೊಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಶೈಕ್ಷಣಿಕ ವರ್ಷ ಜನವರಿ-೨೦೨೫ರಲ್ಲಿ ಜರುಗಿದ ಬಿ.ಎ,ಬಿ.ಕಾಂ ಹಾಗೂ ಬಿಬಿಎ ಪದವಿ ಕೋರ್ಸಿನ ಪ್ರಥಮ,ತೃತೀಯ, ಹಾಗೂ ಐದನೇ ಸೆಮಿಸ್ಟರ್ ನ ರೆಗ್ಯೂಲರ್ ಹಾಗೂ ಪುನರಾವರ್ತಿತ ಪರೀಕ್ಷೆಗಳ ಫಲಿತಾಂಶವನ್ನು ದಿನಾಂಕ : ೨೫-೦೩-೨೦೨೫ ರಂದು ಪ್ರಕಟಿಸಲಾಗಿದೆ.ಫಲಿತಾಂಶವನ್ನುuucms.karnataka.gov.in ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಹೆಚ್. ಎಂ. ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿ ೨ನೇ ಹಂತದ ಪ್ರವಾಸೋದ್ಯಮ-ಆತಿಥ್ಯ ಕ್ಷೇತ್ರದ ಕೌಶಲ್ಯಾಭಿವೃದ್ಧಿಯ ೪ ತಿಂಗಳ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕೇತ್ರ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಮ ೮ನೇ ತರಗತಿ ತೇರ್ಗಡೆಯಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಲ್ಟಿ ಕ್ಯೂಸಿನ್ ಕುಕ್ ತರಬೇತಿ ಹಾಗೂ ೧೦ನೇ ತರಗತಿ ಪಾಸಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಫುಡ್ ಮತತು ಬೇವರೇಜ್ ಸರ್ವಿಸ್ ಸ್ಟೇವರ್ಡ್ ವಸತಿ ಸಹಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಆಸಕ್ತರು ಮಾ.೨೮ರಂದು ನಗರದ ಇಂಡಿ ರಸ್ತೆಯಲ್ಲಿರುವ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೦೪-೦೪-೨೦೨೫ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿ,…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಿಪದ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ತುಮಕೂರಿನ ಸಿದ್ದಗಂಗಾ ಮಠದ ತ್ರಿವಿದ ದಾಸೋಹಿ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ೧೧೮ ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿವರ್ಷ ಕೊಡಮಾಡುವ ಸಿದ್ದಂಗಂಗಾ ಶ್ರೀ ರತ್ನ ಪ್ರಶಸ್ತಿಗೆ ಕಲಕೇರಿ ಗ್ರಾಮದ ಶ್ರೀದೆವಿ ಈರಣ್ಣ ಝಳಕಿ ಆಯ್ಕೆಯಾಗಿದ್ದು ಇತ್ತಿಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಶುದ್ದಿನ್ ಇನಾಮದಾರ ಇವರ ಅಧ್ಯಕ್ಷತೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯದ ಆದೀನದಲ್ಲಿ ನಡಯುತ್ತಿರುವ ಆದರ್ಶ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಚಾರ್ಯ ಶಿವಾನಂದ ಸಜ್ಜನ ಅವರನ್ನು ರಾ.ಚ.ವಿ ದ ವಿಧ್ಯಾವಿಷಯಕ್ ಪರಿಷತ್ತಿನ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ಕುಲಸಚಿವರು ನೇಮಕಮಾಡಿದ್ದಾರೆ. ಇವರ ಆಯ್ಕೆ ಅವಧಿ ೨೦-೦೩-೨೦೨೫ ರಿಂದ ೧೯-೦೩-೨೦೨೭ ರ ವರೆಗೆ ೨ ವರ್ಷದ ಅವಧಿಗೆ ಇವರನ್ನು ನೇಮಕ ಮಾಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶದ ಸಂಸ್ಕೃತಿ ಜಾನಪದದ ಮೂಲಕ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿದೆ. ಜಾನಪದ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸುತ್ತಿವೆ. ಜಾನಪದವು ಮೇರುಸ್ತರದ ವಿಚಾರಗಳನ್ನು ಕಲಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.ವಿಜಯಪುರ ನಗರದ ( ನವಬಾಗ) ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಜಾನಪದ ಉತ್ಸವ ೨೦೨೫ ” ಅಡಿಯಲ್ಲಿ ” ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ವಿದೇಶಿ ವ್ಯಾಮೋಹ ಮತ್ತು ವೈಜ್ಞಾನಿಕ ಪ್ರಭಾವದಿಂದ ಯುವ ಜನಾಂಗ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಸಂಸ್ಕಾರವಿಲ್ಲದ ಶಿಕ್ಷಣ ಪಡೆದು ಸಂಸಾರಕ್ಕೆ ಕಂಟಕವಾಗುತ್ತಿದ್ದಾರೆ. ಅದಕ್ಕಾಗಿ ಯುವಕರು ಜಾನಪದ ಸಂಸ್ಕೃತಿ ಪ್ರೀತಿಸಬೇಕು ಅದರಂತೆ ಬದುಕಬೇಕು ಎಂದರು.ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಎ ಆಯ್ ಹಂಜಗಿ, ಜಾನಪದ ನಡೆ- ನುಡಿ ತಾಯಿಯ ಎದೆಹಾಲಿನಂತೆ ಅಮೃತಕ್ಕೆ ಸಮಾನವಾಗಿವೆ.…

Read More