Author: editor.udayarashmi@gmail.com

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಮಾಜದ ಸ್ವಾಸ್ಥ್ಯ ಕಾಪಾಡಲು ಶಿಕ್ಷಣ ಮತ್ತು ಆರೋಗ್ಯ ಇವೆರಡು ಬಹಳ ಮುಖ್ಯ. ಅದರ ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಕೊಡಿಸುವ ಕೆಲಸ ನ್ಯಾಯವಾದಿಗಳು ಮಾಡುವ ಮೂಲಕ ಸಾರ್ವಜನಿಕರು ನ್ಯಾಯಾಂಗದ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಜಿಲ್ಲಾ ನ್ಯಾಯಾಂಗ, ಲೊಕೋಪಯೋಗಿ ಇಲಾಖೆ, ಮತ್ತು ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಸೃಜಿಸಲ್ಪಟ್ಟ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ, ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಲಾ ಛೇಂರ‍್ಸ್ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಕಟ್ಟಡಗಳ ಉದ್ಘಾಟನಾ ಸಮಾರಂಭದ ಘನ ಉಪಸ್ಥಿತಿ ವಹಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ಸಂಘಟನೆ ಮಾಡಿದಾಗ ಎಷ್ಟೋ ವಕೀಲರು ತಮ್ಮ ವೃತ್ತಿಯನ್ನು ಬಿಟ್ಟು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿದ್ದರು. ಸ್ವಾತಂತ್ರö್ಯ ಬಂದು ಇಷ್ಟು ವರ್ಷಗಳಾದರೂ…

Read More

ಸಿಂದಗಿಯಲ್ಲಿ ಮಂದಾರ ಶಿಕ್ಷಣ ಸಂಸ್ಥೆಯ ಲಿಟಲ್ ವಿಂಗ್ಸ್ ಫೆಸ್ಟಿವಲ್ ಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಲಕರು ಚಿಕ್ಕಂದಿನಲ್ಲಿ ಮಕ್ಕಳಿಗೆ ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸುವುದರ ಜೊತೆಗೆ ಸನಾತನ ಭಾರತೀಯ ಸಂಸ್ಕೃತಿಯನ್ನು ಬಿತ್ತಬೇಕು ಎಂದು ವಿಜಯಪುರದ ಅನುಗ್ರಹ ಆಸ್ಪತ್ರೆಯ ನೇತೃ ತಜ್ಞ ಡಾ.ಪ್ರಭುಗೌಡ ಪಾಟೀಲ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಮಂದಾರ ಶಿಕ್ಷಣ ಸಂಸ್ಥೆಯ ಲಿಟಲ್ ವಿಂಗ್ಸ್ ಫೆಸ್ಟಿವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯಾವುದೇ ಒಬ್ಬ ವ್ಯಕ್ತಿಯ ಉನ್ನತ ವ್ಯಕ್ತಿತ್ವದ ಹಿಂದೆ ತಂದೆ ತಾಯಿ ಸಂಸ್ಕಾರ ಜೊತೆಗೆ ಗುರುವಿನ ಮಾರ್ಗದರ್ಶನ ಅವಶ್ಯವಿರುತ್ತದೆ ಇಂತಹ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಅಡಗಿದ ಪ್ರತಿಭೆ ಹೊರ ಹೊರಹಮ್ಮಿಸಲು ಸಾಧ್ಯವಿದೆ ಎಂದರು.ಈ ಸಂದರ್ಭದಲ್ಲಿ ಮಾತನಾಡಿದ ಬಿ ಎನ್ ಬಿ ಫೌಂಡೇಶನ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾತನಾಡಿ ಅವರು, ಮಕ್ಕಳಿಗೆ ಬಾಲ್ಯದಿಂದಲೇ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡಿದಾಗ ಮಗು ಬಹುಬೇಗ ವಿಷಯವನ್ನು ಗ್ರಹಿಸುವುದಲ್ಲದೆ ಕಲಿಕೆಯಲ್ಲಿ ಮುಂದಿರುತ್ತದೆ. ಮಗುವಿನ ಚಿಂತನಾ ಕ್ರಮ, ಕ್ರಿಯಾಶೀಲತೆ, ವಾಕ್‌ ಚಾತುರ್ಯ, ಅರಿವು ಉತ್ತಮಗೊಳ್ಳುತ್ತದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ ಎಸ್ ಎಸ್ ಕೋಷ್ ವಿದ್ಯಾರ್ಥಿಯಾದ ಸಚೀನ್ ಅರ್ಜುಣಗಿ ನ್ಯಾಷನಲ್ ಇಂಟಿಗ್ರೇಟೆಡ್ ಕ್ಯಾಂಪ್(ಏನ್ ಐ ಸಿ) ಯಲಹಂಕ ಬೆಂಗಳೂರು ಫೆಬ್ರವರಿ 11 ರಿಂದ 17 ರವರೆಗೆ ನಡೆಯುವ ಕ್ಯಾಂಪ್ ಗೆ ಆಯ್ಕೆ ಆಗಿದ್ದಾರೆ. ಮತ್ತು ಮಹಾವಿದ್ಯಾಲಯದ ಡಾ.ಮಿಲನ್ ರಾಠೋಡ್ ಅವರು ಎನ್ ಎಸ್ ಎಸ್ ಕಾರ್ಯಕ್ರಮದ ಅಧಿಕಾರಿಯಾಗಿ, ಪವನಕುಮಾರ ಪಟ್ಟಣಶೆಟ್ಟಿ ಹಾಗೂ ಶ್ವೇತಾ ಕೊಡತೆ ಇವರು ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ಓಡಿಸ್ಸಾದ ಭೂಬನೇಶ್ವರ ಅಲ್ಲಿ ಫೆಬ್ರವರಿ 21 ರಿಂದ 27 ರವರೆಗೆ 7 ದಿನಗಳ ಕಾಲ ನಡೆಯಲಿರುವ ಕ್ಯಾಂಪ್ ಗೆ ಆಯ್ಕೆ ಆಗಿದ್ದಾರೆ, ಹಾಗೂ ವಿದ್ಯಾರ್ಥಿ ರಾಹುಲ್ ಅರಕೇರಿ ಬೆಂಗಳೂರಿನಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 4 ರವರೆಗೆ ನಡೆಯುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಎನ್ ಎಸ್ ಎಸ್ ಸ್ವಯಂಸೇವಕರಾಗಿ ಆಯ್ಕೆ ಆಗಿದ್ದಾರೆ. ಮಹಾವಿದ್ಯಾಲಯದ…

Read More

ಮುದ್ದೇಬಿಹಾಳ ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಾಗತೀಕರಣದ ಪ್ರಭಾವದಿಂದ ವಿಶ್ವದ ಎಲ್ಲ ಭಾಷೆಗಳು ನಶಿಸಿ ಹೋಗುವ ದಿನಮಾನಗಳಲ್ಲಿ ಉಳಿಯುವ ಮುನ್ನೂರು ಭಾಷೆಗಳ ಪೈಕಿ ಅತೀ ಗಟ್ಟಿಯಾಗಿ ನಿಲ್ಲುವ ಭಾಷೆ ಕನ್ನಡ ಮಾತ್ರ ಎಂದು ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದಲ್ಲಿ ನಡೆದ ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಕೆಲವರು ತಮ್ಮ ಮನೆಗಳಲ್ಲಿ ಇಂಗ್ಲೀಷ್ ಮಾತನಾಡುವದರಿಂದ ತಮ್ಮ ಯೋಗ್ಯತೆ ಹೆಚ್ಚಾಗುತ್ತದೆ ಅಂದುಕೊಂಡಿದ್ದಾರೆ. ಇಂಗ್ಲೀಷ್ ಮಾತನಾಡುವ ಮನೆಗಳಲ್ಲಿ ಹೆಚ್ಚು ವಿವಾಹ ವಿಚ್ಛೇದನಗಳು ನಡೆಯುತ್ತಿವೆ. ಕನ್ನಡ ಉಳಿಸಲು ನಾವು ನೀವು ಸಾಕಷ್ಟು ಪ್ರಯತ್ನಿಸುತ್ತಿರುವ ಮಧ್ಯೆ ಸರ್ಕಾರದ ಮಟ್ಟದಲ್ಲಿ ಕನ್ನಡ ಉಳಿಸುವ ಚಿಂತನೆ ನಡೆದಾಗ ಮಾತ್ರ ಕನ್ನಡ ಉಳಿಸಲು ಸಾಧ್ಯ ಎಂದರು.ಸಮಾರಂಭವನ್ನು ಉದ್ಘಾಟಿಸಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಮಾತನಾಡಿ, ಹಿಂದೆ ನಮ್ಮನ್ನು ಆಳಿದ ಆದಿಲ್ ಶಾಹಿ ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ ೦೫ ರಂದು ಡಾ. ಬಾಬು ಜಗಜೀವನ ರಾಂ ಅವರ ೧೧೮ನೇ ಹಾಗೂ ಏಪ್ರಿಲ್ ೧೪ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ ೨೫-೦೨-೨೦೨೫ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕೊಡೇಕಲ್ ದಾವಲಮಲಿಕ್ ಅಜ್ಜರ ಯಶೋಗಾಥೆ | ದಾರಿ ಹೋಕರಿಂದ ಹಿಡಿದು ಅನಾಥರಿಗೆಲ್ಲ ಅನ್ನ, ನೀರು, ನೆರಳು ನೀಡಿದ ಸಹೃದಯಿ ಉದಯರಶ್ಮಿ ದಿನಪತ್ರಿಕೆ ವರದಿ: ಇಲ್ಯಾಸ್ ಪಟೇಲ್. ಬಯಾದಗಿರಿ: ತಾಯಿಯ ಮಮತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.ತಾಯಿಯಪ್ರೀತಿಯನ್ನು ಯಾರೂ ಕೊಡಲು ಸಾಧ್ಯವಿಲ್ಲ ತಂದೆ ತಾಯಿ ಇಲ್ಲದ ನೂರಾರು ಅನಾಥ ಜೀವಗಳ ತಾಯಿಯಾಗಿ, ತಂದೆಯಾಗಿ ಹಗಲು ರಾತ್ರಿ ಮಕ್ಕಳ ಆರೈಕೆ ಮಾಡುತ್ತಿರುವ ಮಹಾನ್ ಜೋಳಿಗೆ ಅಜ್ಜರ ಮಮತೆಯ ಮಡಿಲು ಇಲ್ಲಿದೆ ನೋಡಿ,ಅವರೆಲ್ಲ ಕನಸುಗಳನ್ನ ಹೊತ್ತುಕೊಂಡು ಓಡಾತ್ತಿರುವ ಪುಟ್ಟ ಪುಟ್ಟ ಮಕ್ಕಳು. ತಾಯಿಯ ಆಸರೆ ಇಲ್ಲದೆ, ಭಾವನೆಗಳ ಬರಿದಾದ ಜೀವನದಲ್ಲಿ ತಾಯಿಯ ಮಡಿಲು ಬೇಡುತ್ತಿರುವ ಚಿಕ್ಕ ಚಿಕ್ಕ ಕಂದಮ್ಮಗಳು. ಯ್ಯಾರೊ ಮಾಡಿದ ತಪ್ಪಿಗೆ ಇನ್ಯಾರೊ ನೋವು ಅನುಭವಿಸುತ್ತಿರುವ ಆ ಜೀವಗಳು. ತಂದೆ ತಾಯಿ ಮಾಡಿದ ತಪ್ಪಿಗೆ ಮಕ್ಕಳಿಗೆ ಶಿಕ್ಷೆ. ಈ ಎಲ್ಲ ನೋವು ಗಳನ್ನ ಅರಿತು, ತಾಯಿ ಮನಸ್ಸಿನಿಂದ ಆರೈಕೆ ಮಾಡುತ್ತಿರುವ ಹೃದಯ ವಂತಿಕೆಯ ನೂರು ಮಕ್ಕಳ ತಾಯಿ_ತಂದೆಯಾಗಿ ಭವದ ಬಯಲಿಗೆ ಬೆಂದು ಬಿದ್ದ ಜೀವಗಳ ರಕ್ಷಣೆಗಾಗಿ…

Read More

ಸಮಸ್ಯೆ ಅರಿಯಲು ಜಿಲ್ಲಾಧಿಕಾರಿ ಸ್ಥಳಕ್ಕೆ ಖುದ್ದು ಭೇಟಿ | ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮತ್ತು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೇಗವಾಗಿ ಬೆಳೆಯುತ್ತಿರುವ ವಿಜಯಪುರ ನಗರದ ವಜ್ರ ಹನುಮಾನ ರೈಲ್ವೆ ಗೇಟ್ ಹತ್ತಿರ ತುಂಬಾ ದಿನಗಳಿಂದ ಭಾರಿ ಸಂಚಾರಿ ದಟ್ಟಣೆ ಆಗುತ್ತಿದ್ದು ಇದರಿಂದ ರೈಲ್ವೆ ಲೈನ್ ಆಚೆ ಇರುವ ಸಾಕಷ್ಟು ಹೊಸ ಬಡಾವಣೆಗಳ ಸುಮಾರು ೫೦ ಸಾವಿರ ಜನರು ಮತ್ತು ಆ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಗ್ರಾಮೀಣ ಪ್ರದೇಶದ ಜನರಿಗೆ ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ರೋಗಿಗಳಿಗೆ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಾವು ಖುದ್ದು ಬಂದು ಪರಿಶೀಲಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮತ್ತು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಜಿಲ್ಲಾಧಿಕಾರಿಯವರನ್ನು ಸ್ವತಃ ಸ್ಥಳಕ್ಕೆ ಆಹ್ವಾನಿಸಿದ್ದರು.ಇತ್ತೀಚಿಗೆ ಡಬಲ್‌ನ ರೈಲ್ವೆ ಲೈನ್ ನಿರ್ಮಾಣವಾದ ನಂತರ ಸಾರ್ವಜನಿಕರು ದೀರ್ಘ ವಿಳಂಬ ಅನುಭವಿಸುತ್ತಿದ್ದಾರೆ. ಕಾರಣ ಸಂಚಾರ ದಟ್ಟಣೆ ಕಡಿಮೆ ಮಾಡಲು ವಜ್ರ ಹನುಮಾನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಹಸೀನಾ ಅಗಸಿಮನಿ ಅವರು ಸಲ್ಲಿಸಿದ್ದ “ಸೋಷಿಯೊ-ಎಕನೋಮಿಕ್ ಕಂಡೀಷನ್ಸ ಆಫ್ ಮುಸ್ಲಿಂ ವುಮನ್ ಇನ್ ಅರಬನ್ ಸ್ಲಮ್ಸ್” ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಹಸೀನಾ ಅಗಸಿಮನಿ ಅವರು ಸಮಾಜಶಾಸ್ತ್ರ ವಿಭಾಗದ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಹಸೀನಾ ಅಗಸಿಮನಿ ಅವರನ್ನು ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ. ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅವರು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ “ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ” ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ. ಜಿ ಅವರು ಫೆಬ್ರವರಿ ೧೮ರ ಬೆಳಿಗ್ಗೆ ೯:೩೦ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.ಸಮುದಾಯದ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More