Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹರನಾಳ ಗ್ರಾಮದಲ್ಲಿ ದಸಂಸ ಕಾರ್ಯಕರ್ತನ ಮೇಲಿನ ಹಲ್ಲೆ ಹಾಗೂ ಹರನಾಳ ಗ್ರಾಮ ಪಂಚಾಯಿತಿ ಅವ್ಯವಹಾರದಲ್ಲಿ ಭಾಗಿಯಾದ ಮಾಜಿ ಅಧ್ಯಕ್ಷ, ಹಾಗೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಬಿ.ಕೃಷ್ಣಪ್ಪ ಬಣದವರು, ಪ್ರತಿಭಟನಾ ಮೆರವಣಿಗೆ ಕೈಗೊಂಡು, ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಸಂಗಮೇಶ ಗ್ವಾಳೇದ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಗುರುವಾರ ಸೇರಿದ ದಲಿತ ಸಂಘರ್ಷ ಸಮಿತಿ ಬಿ.ಕೃಷ್ಣಪ್ಪ ಬಣದವರು, ದಸಂಸ ಕಾರ್ಯಕರ್ತನ ಮೇಲಿನ ಹಲ್ಲೆ ಹಾಗೂ ಗ್ರಾಮ ಪಂಚಾಯಿತಿ ಅವ್ಯವಹಾರದಲ್ಲಿ ಭಾಗಿಯಾದ ಮಾಜಿಅಧ್ಯಕ್ಷ, ಹಾಗೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೆರವಣಿಗೆ ಹೊರಟು ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಇಂಡಿ ರಸ್ತೆಯ ಮೂಲಕ ತಹಶೀಲ್ದಾರ ಕಾರ್ಯಾಲಯ ತಲುಪಿ ನಂತರ ಸಭೆ ಕೈಗೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ರಾಜ್ಯ ಸಂ.ಸಂಚಾಲಕ ರಮೇಶ ಆಸಂಗಿ, ಬೆಳಗಾವಿ ವಿಭಾಗೀಯ ಸಂಚಾಲಕ ವಿನಾಯಕ ಗುಣಸಾಗರ, ಜಿಲ್ಲಾ ಸಂಚಾಲಕ ಅಶೋಕ ಚಲವಾದಿ, ಸುರೇಶ…
ಬಿ.ಎಸ್.ಯಡಿಯೂರಪ್ಪ ಪ್ರತಿಕೃತಿ ದಹನ | ಪಂಚಮಸಾಲಿ ಸಮುದಾಯದ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಿಜೆಪಿ ಧುರೀಣ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ ಕ್ರಮ ಖಂಡನೀಯ ಎಂದು ಕೋರವಾರ ಗ್ರಾಮದ ಪಂಚಮಸಾಲಿ ಸಮುದಾಯದ ಧುರೀಣ ಬಾಪುಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಗುರುವಾರ ಜರುಗಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.ವಿಜಯಪುರ ನಗರ ಕ್ಷೇತ್ರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ ಕ್ರಮ ತಪ್ಪು. ಇದರ ಪರಿಣಾಮ ಬಿಜೆಪಿಗೆ ಮುಂದಿನ ದಿನಗಳಲ್ಲಿ ಬರುವ ತಾಲ್ಲೂಕು, ಜಿಲ್ಲಾ, ವಿಧಾನಸಭೆ, ಲೋಕಸಭೆಯ ಚುನಾವಣೆಗಳಲ್ಲಿ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದ ಸಮುದಾಯದ ಯುವಕರು ಉಚ್ಚಾಟನೆಗೆ ಕಾರಣರಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಭೀಮನಗೌಡ ಕುಳೇಕುಮಟಗಿ, ಅಪ್ಪುಗೌಡ ಪೊಲೀಸ್ಪಾಟೀಲ, ಮಾಂತಗೌಡ ಪಾಟೀಲ, ರಾಜುಗೌಡ ಬಿರಾದಾರ, ಮಹೇಶ ಬಿರಾದಾರ, ನಿಂಗಣ್ಣ ಕೊಟ್ಟಗಿ, ಬಸು ಬಾದೊಡ್ಗಿ, ಗೌಡು ಬುಳ್ಳಾ, ಮಲ್ಲು ಬಿರಾದಾರ, ಹಣಮಂತ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದ ವಾರ್ಡುಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧ ವಾರ್ಡುಗಳಲ್ಲಿ ಕಂಡು ಬರುತ್ತಿರುವ ನೀರಿನ ಸಮಸ್ಯೆಯ ಕುರಿತಾಗಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಬುಧವಾರ ಗ್ರಾಮ ಪಂಚಾಯಿತಿಗೆ ಆಗಮಿಸಿ ಗಮನ ಸೆಳೆದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದು, ತಿಂಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ಪುರದಾಳ ಕೆರೆಯಿಂದ ಪೈಪ್ಲೈನ್ ಮೂಲಕ ಬರುವ ನೀರು ಪೋಲಾಗದಂತೆ ತಡೆದು ನೀರಿನ ಸಮಸ್ಯೆ ನೀಗಿಸಬೇಕು ಎಂದರು.ತಾಲ್ಲೂಕಾಧ್ಯಕ್ಷ ಸಿದ್ರಾಮಪ್ಪ ಅವಟಿ ಮಾತನಾಡಿ, ಮುಂದಿನ ತಿಂಗಳು ಕೋರವಾರೇಶ ಜಾತ್ರಾ ನಿಮಿತ್ಯ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಮತ್ತು ಗ್ರಾಮದ ದೇವಸ್ಥಾನದ ಮುಖ್ಯರಸ್ತೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಡಿಡಿಟಿ ಸಿಂಪಡಿಸಬೇಕು ಎಂದು ಆಗ್ರಹಿಸಿ ಮನವಿ…
ಹುಲ್ಯಾಳ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶಿಸ್ತು ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಉನ್ನತ ಶಿಕ್ಷಣ ಪಡೆಯುವ ಮೂಲಕ ಸಮಾಜ ಹಾಗೂ ಶಿಕ್ಷಣ ಸಂಸ್ಥೆ ಹಿರಿಮೆ ಹೆಚ್ಚಿಸಬೇಕೆಂದು ಹುಲ್ಕಾಳ ಗ್ರಾಮದ ಪಿಕೆಪಿಎಸ್ ನಿರ್ದೇಶಕ ಮಂಜುನಾಥ ಗಲಗಲಿ ಹೇಳಿದರು.ತಾಲೂಕಿನ ಹುಲ್ಯಾಳ ಗ್ರಾಮದ ಕಾಡಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆಧುನಿಕ ತಂತ್ರಜ್ಞಾನ ಯುಗದಲ್ಲಿ ಕಾಲಮಾನಕ್ಕೆ ತಕ್ಕಂತೆ ನಮ್ಮ ಜೀವನ ಕ್ರಮವನ್ನು ಕೂಡ ಪರಿವರ್ತಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಮಕ್ಕಳಿಗೆ ತಿಳಿಹೇಳಿದರು.ಸಾಹಿತಿ, ನಿವೃತ್ತ ಶಿಕ್ಷಕ ಗುರುನಾಥ ಸುತಾರ ಮಾತನಾಡಿ, ಪಠ್ಯದೊಂದಿಗೆ ಪಠ್ಯತರ ಚಟುವಟಿಕೆಯಲ್ಲಿ ಮಕ್ಕಳು ಕ್ರಿಯಾಶೀಲರಾಗುವ ಮೂಲಕ ಗುರುಹಿರಿಯರನ್ನು ಗೌರವದಿಂದ ಕಾಣಬೇಕು ಎಂದರು.ಸಂಸ್ಥೆ ಅಧ್ಯಕ್ಷ ಮಲ್ಲಪ್ಪ ತುಬಚಿ, ಸದಸ್ಯರಾದ ಪರಪ್ಪ ನೀಲವಾಣಿ, ಹಣಮಂತ ಮಂಡಗಣಿ, ಉಮೇಶ ಕೋರಿ, ಶ್ರೀಶೈಲ ಪೂಜಾರ, ನಿಂಗಪ್ಪ ದಬಾಳಿ, ಜೆ ಟಿ ಆಲಗುಂಡಿ, ಮುಖ್ಯಗುರು ಎಸ್.ಎಸ್.…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಹುನ್ನೂರು ಗ್ರಾಮದ ಪ್ರಯಾಣಿಕರ ತಂಗುದಾಣದ ಮುಂಭಾಗದಲ್ಲಿ ವಿಶ್ವ ಜಲ ದಿನದಂದು ನೀರಿನ ಅರವಟಿಗೆ ಸೇವೆಗೆ ಚಾಲನೆ ನೀಡಲಾಯಿತು.ಪರಿಸರ ಪ್ರಿಯರು, ಜಲದಾನಿಗಳ ಸಹಕಾರದೊಂದಿಗೆ ಹಲವು ವರ್ಷಗಳಿಂದ ಪ್ರತಿ ಬೇಸಿಗೆಯಲ್ಲಿ ನೀರಿನ ಅರವಟಿಗೆ ಸೇವೆ ಜತೆಗೆ ಜಲದ ಮಹತ್ವದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಯುವಕರ ಗುಂಪೊಂದು ಮಾಡುತ್ತಿದೆ. ಜಗದುಳಿವಿಗೆ ಜಲವುಳಿಸಿಎಂಬ ಘೋಷ ವಾಕ್ಯದೊಂದಿಗೆ ಪ್ರಸಕ್ತ ವರ್ಷ ನೀರಿನ ಅರವಟಿಗೆ ಸೇವೆ ಕೈಗೊಂಡಿರುವುದು ಗಮನ ಸೆಳೆಯಿತು. ಮಾಜಿ ಶಾಸಕ ಆನಂದ ನ್ಯಾಮಗೌಡ ಅರವಟಿಗೆ ಸೇವೆಗೆ ಚಾಲನೆ ನೀಡಿದರು.ಗ್ರಾಮದ ಹಿರಿಯರಾದ ಚಂದ್ರಶೇಖರ ಸಾವಳಗಿ, ನರಸಪ್ಪ ತೇಲಿ, ಕಲ್ಲಪ್ಪ ದಫೇದಾರ, ಮಲ್ಲಪ್ಪ ಕಡಪಟ್ಟಿ, ರಾಜು ಕಡಪಟ್ಟಿ, ಈಶ್ವರ ಸಾವಳಗಿ, ಲಕ್ಕಪ್ಪ ಮೂಲಿಮನಿ, ರಮೇಶ ಪಾಯಗೊಂಡ, ರಮೇಶ ಬನ್ನವ್ವಗೋಳ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯ ದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ಜಾತ್ರೆಯು ಮಾ.27 ರಿಂದ ಏ.3 ರವರೆಗೆ ನಡೆಯಲಿದೆ. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಾ.27 ರಂದು ಪಲ್ಲಕ್ಕಿಯು ಗಂಗಸ್ಥಳಕ್ಕೆ ಹೋಗುವದು, ಮಾ.28 ರಂದು ವಿವಿಧ ವಾದ್ಯಗಳೊಂದಿಗೆ ಪಲ್ಲಕ್ಕಿಯನ್ನು ಜಾಯವಾಡಗಿ ಗ್ರಾಮಕ್ಕೆ ಬರಮಾಡಿಕೊಳ್ಳಲಾಗುವುದು. ರಾತ್ರಿ 10-30 ಗಂಟೆಗೆ ಜಾಯವಾಡಗಿ, ಬ್ಯಾಕೋಡ, ಕಾನ್ನಾಳ, ಸೋಲವಾಡಗಿ, ಅಗಸಬಾಳ, ಕಾಜಿಅಗಸಬಾಳ ಹಾಗೂ ಪಡೇಕನೂರ ಗ್ರಾಮಗಳ ಭಜನಾ ಮಂಡಳಿ ಹಾಗೂ ಭಕ್ತರಿಂದ ಶಿವಭಜನೆ ನಡೆಯುವುದು.ಮಾ.29 ರಂದು ಕಾನ್ನಾಳ ಗ್ರಾಮದ ಸಜ್ಜನ ಬಂಧುಗಳು ಹಾಗೂ ಗ್ರಾಮದ ಭಕ್ತರೊಂದಿಗೆ ಕಳಸ, ಜಾಯವಾಡಗಿ ಗ್ರಾಮಸ್ಥರಿಂದ ಪಲ್ಲಕ್ಕಿಯು ವಿವಿಧ ವಾದ್ಯಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸುವುದು. ಮಧ್ಯಾಹ್ನ 12 ಗಂಟೆಗೆ ಕಳಸವು ಶಿಖರಕ್ಕೆರುವುದು. ರಾತ್ರಿ 10-30 ಗಂಟೆಗೆ ನಾಟಕ ಪ್ರದರ್ಶನಗೊಳ್ಳಲಿದೆ.ಮಾ.30 ರಂದು ಬೆಳಗ್ಗೆ ತೇರಿಗೆ ಅಲಂಕಾರ ನಡೆಯುವುದು. ನಂತರ ಬ್ಯಾಕೋಡ ಗ್ರಾಮಸ್ಥರು ತೆಗೆದುಕೊಂಡು ಬರುವ ಕಳಸ ಏರಿಸುವುದು, ಸೋಲವಾಡಗಿ ಗ್ರಾಮಸ್ಥರು ರಥದ ಮಿಣಿ, ಅಗಸಬಾಳ ಗ್ರಾಮಸ್ಥರು ರಥದ ಬೆಳ್ಳಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಾನಪದ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ತಾಲೂಕಿನ ನಾಗೂರ ಗ್ರಾಮದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಯೂಟ್ಯೂಬ್ ಹಾಸ್ಯ ಕಲಾವಿದ ದಿ.ಬಸಯ್ಯ ಹಿರೇಮಠರ ಸ್ಮರಣೆ ಹಾಗೂ ಗುರುನಮನ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನ ವಹಿಸಿ ಮಾತನಾಡಿದ ಅವರು,ಕರ್ನಾಟಕವು ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ರಾಜ್ಯದಲ್ಲಿ ಬಸವನಬಾಗೇವಾಡಿ ತಾಲೂಕು ಜಾನಪದ ಸೇರಿದಂತೆ ವಿವಿಧ ಕಲಾಕ್ಷೇತ್ರಗಳಿಗೆ ಹಲವು ಕೊಡುಗೆ ನೀಡಿದೆ. ಇಲ್ಲಿ ಕಲೆಯ ಆರಾಧಕರು ಇದ್ದಾರೆ. ಸ್ಥಳೀಯ ಕಲಾವಿದರಿಗೆ ಮಾನ್ಯತೆ ನೀಡಿ ಸಹಕಾರ ಕೊಟ್ಟರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಪುರಸಭೆ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ, ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ವೃತ್ತಿ ಕಲಾವಿದರು ತಮ್ಮ ಕಲೆಯ ಪ್ರದರ್ಶನ ನೀಡುವ ಮೂಲಕ ಬದುಕನ್ನು ಕಟ್ಟಿಕೊಂಡಿದ್ದಾರೆ. ಇನ್ನೂ ಕೆಲವು ಕಲಾವಿದರು ಪ್ರವೃತ್ತಿಯಾಗಿ ಕಲೆಗಳನ್ನು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜನಸಾಮಾನ್ಯರಿಗೆ ಸರಕಾರ ಪ್ರತಿಯೊಂದು ಅನುದಾನ ತಲುಪಲಿ ಎಂಬ ಭದ್ದತೆಯಿಂದ ಕಾಂಗ್ರೆಸ್ ಸರಕಾರ ಕಾರ್ಯನಿರ್ವಹಿಸುತ್ತಿದೆ. ಸಿಂದಗಿ ತಾಲೂಕಿಗೆ ಸಂಬಂಧಿಸಿದ ೧೪ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ ವಿತರಣೆ ಮಾಡಲಾಗಿದೆ. ಮುಂದಿನ ವಾರದಲ್ಲಿ ಆಲಮೇಲ ತಾಲೂಕಿಗೆ ಸಂಬಂಧಿಸಿದ ೧೫ ತ್ರಿಚಕ್ರ ವಾಹನಗಳನ್ನು ವಿಲಚೇತನರಿಗೆ ವಿತರಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ೨೦೨೪-೨೫ನೆಯ ಸಾಲಿನ ಅನಿರ್ಬಂಧಿತ ಅನುದಾನದಲ್ಲಿ ತಾಲೂಕಿನ ೧೪ ಜನ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ಕಾಂಗ್ರೆಸ್ ಸರಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ವಿಶೇಷವಾಗಿ ವಿಲಕಚೇತನರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದ್ದಾರೆ ಎಂದರು.ಈ ವೇಳೆ ಆಲಮೇಲ ತಾಪಂ ಫರೀದಾ ಪಠಾಣ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಸಿಂದಗಿ ಜೋಗುರ ಹೀರೊ ಮೋಟರ್ಸ್ ಮಾಲೀಕ ರಮೇಶ ಜೋಗುರ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ತಾಲೂಕು ಕೆಡಿಪಿ ಸದಸ್ಯೆ ಮಹಾನಂದ…
ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿ ಆಡಳಿತಾಧಿಕಾರಿ ಬಾಗೇಶ ಮುರಡಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವರ್ತಮಾನ ಸವಾಲುಗಳ ನಡುವೆ ಕನ್ನಡ ಭಾಷೆ, ಜಗತ್ತಿನಲ್ಲಿ ಸು.೬೦೦೦ ಭಾಷೆಗಳಿದ್ದು, ಅದರಲ್ಲಿ ೪೦೦೦ಭಾಷೆಗಳಿಗೆ ಲಿಪಿಯೇ ಇಲ್ಲ. ಅದರಲ್ಲಿ ಕನ್ನಡ ಭಾಷೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ವಿಜಯಪುರದ ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿಯ ಆಡಳಿತಾಧಿಕಾರಿ ಬಾಗೇಶ ಮುರಡಿ ಹೇಳಿದರು.ಸಿಂದಗಿ ಪಟ್ಟಣದ ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದನ್ನು ಮುಂದಿನ ಯುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮ ನಮ್ಮೆಲ್ಲರ ಮೇಲಿದೆ ಎಂದರು.ಈ ವೇಳೆ ಮರಗೂರಿನ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಅಭಿಯಂತರ ಶ್ರೀಶೈಲ ಮಠಪತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿಯೂ ಕನ್ನಡ ಭಾಷೆಯ ಮಹತ್ವ ಕಡಿಮೆಯಾಗಿಲ್ಲ. ಮತ್ತು ಕನ್ನಡದ ಜ್ಞಾನ ಸಂಪತ್ತು ಅನನ್ಯವಾದದ್ದು, ಯುವಕರು ಈ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯವಶ್ಯಕ. ಕನ್ನಡ ಸಂಘವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ. ಇದರ ಸದುಪಯೋಗವನ್ನು ಎಲ್ಲ ಪ್ರಶಿಕ್ಷಣಾರ್ಥಿಗಳು…
ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಅಶೋಕ ಮನಗೂಳಿ ಖಡಕ್ ವಾರ್ನಿಂಗ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಕಾಬಿಟ್ಟಿಯಾಗಿ ವರದಿ ಸಲ್ಲಿಸಿ ಹೋಗದೇ ಅಲ್ಲಿನ ಸತ್ಯಾಂಶವನ್ನು ತಿಳಿದುಕೊಂಡು ಗ್ರಾಮಸ್ಥರಿಗೆ ಜೂನ್ ಮಧ್ಯದ ಅವಧಿಯವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜೆಜೆಎಂ ಕಾಮಗಾರಿ ಕಳಪೆ ಮಟ್ಟದ್ದಾಗಿವೆ ಎಂಬ ಮಾತುಗಳು ಕೇಳಿ ಬಂದದ್ದು, ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಎಚ್ಚರಿಕೆ ನೀಡಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನ ಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು. ಬಸ್ತಿಹಾಳ ಮತ್ತು ಹಂದಿಗನೂರ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ ಎರಡು ದಿನಗಳಲ್ಲಿ ಕೆರೆಯಲ್ಲಿ ಮೋಟರ್ ಬಿಟ್ಟು ನೀರು ಹರಿಸಬೇಕು. ಮುಂಬರುವ ದಿನಮಾನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಅಧಿಕಾರಿಗಳು ಹಾರಿಕೆ…
