Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಭೀಮಾನದಿ ಪಾತ್ರದಲ್ಲಿ ಹಲವು ಸಂತ ಮಹಾಂತರು, ಕವಿಗಳು, ಸಾಹಿತಿಗಳು ಆಗಿ ಹೋಗಿದ್ದಾರೆ. ಭೀಮಾನದಿ ಈ ಭಾಗದ ಪುಣ್ಯ ನದಿಯಾಗಿದ್ದು ಭೀಮಾತೀರ ಎಂದು ಬಿಂಬಿಸಿ ಮಾಧ್ಯಮಗಳು ಭೀಮೆಗೆ ಅಪಮಾನ ಮಾಡುವ ಕಾರ್ಯ ಮಾಡುತ್ತಿವೆ ಎಂದು ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ಆರೋಪಿಸಿದರು.ಭೀಮಾತೀರದಲ್ಲಿ ಹಲಸಂಗಿ ಗೆಳಯರ ಬಳಗದ ಸಿಂಪಿ ಲಿಂಗಣ್ಣ, ಮಧುರಚೆನ್ನರು ನಾಡಿಗೆ ಕೊಡುಗೆ ಕೊಟ್ಟಿದ್ದಾರೆ. ಭೀಮೆ ಖ್ಯಾತ ಸಾಹಿತಿಗಳಿಗೆ ಜನ್ಮ ನೀಡಿದ ಒಡಲು. ಬಂಥನಾಳದ ಸಂಗನಬಸವ ಶಿವಯೋಗಿಗಳು, ತ್ರಿವಿಧ ದಾಸೋಹದ ತೀರ ಶೈಕ್ಷಣಿಕ ಕ್ರಾಂತಿಗೈದಿದ್ದರು. ತ್ರಿವಿಧಿ ದಾಸೋಹದ ಇಂಡಿ ತಾಲೂಕಿನ ಅಗರಖೇಡ ಶ್ರೀರಂಗರು ಕರ್ನಾಟಕ ರಾಜ್ಯದಲ್ಲೇ ಅತ್ತುತ್ಯಮ ನಾಟಕ ರಚನಾಕಾರರಾಗಿದ್ದು. ಭೀಮೆಯ ಒಡಲಿನಲ್ಲಿ ಹಲವು ಸಂತರು, ದಾರ್ಶನಿಕರು, ಪವಾಡ ಪುರುಷರು ಆಗಿ ಹೋಗಿದ್ದಾರೆ. ಕೇವಲ ಕೆಲವು ಕುಟುಂಬಗಳಿಂದ ಇಡೀ ಭೀಮಾನದಿಗೆ ಕಪ್ಪು ಚುಕ್ಕೆ ಇಡುತ್ತಿರುವುದು ಸರಿಯಲ್ಲ ಎಂದರು.ಮಾಧ್ಯಮದವರು ಇನ್ನಾದರೂ ಭೀಮಾತೀರ ಎಂಬ ಪದ ಬಳಕೆ ಮಾಡಬೇಡಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಹೇಶ ಹೂಗಾರ, ಪ್ರಶಾಂತ ,ಲಾಳಸಂಗಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಬ್ಬಿನ ರಾವುದಿ ತುಂಬಿಕೊಂಡು ತೆರಳುತ್ತಿದ್ದ ಬೋಲೆರೋ ವಾಹನಕ್ಕೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡ ಘಟನೆ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.ತಾಲೂಕಿನ ಗಣಿಹಾರ ಗ್ರಾಮದಿಂದ ಸಿಂದಗಿಯೆಡೆಗೆ ಕಬ್ಬಿನ ರಾವುದಿಯನ್ನು ಬೊಲೆರೋ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಬೆಂಕಿ ಹೊತ್ತುಕೊಂಡಿದೆ. ಕಬ್ಬಿನ ರಾವುದಿಗೆ ಹೊತ್ತಿಕೊಂಡ ಬೆಂಕಿ ತ್ವರಿತವಾಗಿ ವಾಹನಕ್ಕೆ ಆವರಿಸಿಕೊಂಡಾಗ ಸ್ಥಳದ ಸಮೀಪವಿದ್ದ ನಿವಾಸಿಗಳು ಪಂಪ್‌ಸೆಟ್ ನೀರನ್ನು ಬಳಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಕಬ್ಬಿನ ರಾವುದಿ ಹಾಗೂ ಲಕ್ಷಾಂತರ ಮೌಲ್ಯದ ವಾಹನ ಹಾನಿಗೊಂಡಿದೆ. ಕಾರ್ಯಾಚರಣೆಯಲ್ಲಿ ಎಫ್‌ಎಸ್‌ಟಿಒ ಎಂ.ಬಿ,ಪೂಜಾರಿ, ಸಿಬ್ಬಂದಿಗಳಾದ ಮಚೇಂದ್ರ ಶಿಂಧೆ. ಹಣಮಂತ ವಾಯ್, ಅಜರುದ್ದಿನ ಚಿಟಗುಪ್ಪಿ, ಹಣಮಂತ ಕುಂಬಾರ, ಶಾಂತಪ್ಪ ಬಿರಾದಾರ, ಕೃಷ್ಣಪ್ಪ ಪೂಜಾರಿ ಸೇರಿದಂತೆ ಅನೇಕರಿದ್ದರು. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳು ಮೊದಲು ಕೀಳರಿಮೆಯ ಭಾವನೆಯಿಂದ ಮೊದಲು ಹೊರಬರಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಬಿ.ಜಿ.ಬಿರಾದಾರ ಹೇಳಿದರು.ಸಿಂದಗಿ ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಜ್ಞಾನ ಸೌರಭ ಕಾರ್ಯಕ್ರಮದಲ್ಲಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಈ ರೀತಿಯ ಜ್ಞಾನ ಸೌರಭ ಕಾರ್ಯಕ್ರಮಗಳು ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಂಡು ಮಕ್ಕಳಿಗೆ ಜ್ಞಾನ ರಸದೌತಣ ಊಣಬಡಿಸಬೇಕು. ವಾರಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ವಿವಿಧ ಸಂಪನ್ಮೂಲ ವ್ಯಕ್ತಿಗಳನ್ನು ಆವ್ಹಾನಿಸಿ ಮಕ್ಕಳಿಗೆ ಜ್ಞಾನದ ಅರಿವನ್ನು ಮೂಡಿಸಬೇಕು ಎಂದು ಸಲಹೆ ನೀಡಿದರು.ಈ ವೇಳೆ ಶಾಲೆಯ ಮುಖ್ಯಗುರು ಶರಣು ಲಂಗೋಟಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಮಕ್ಕಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಪ್ತಗ್ರಾಮಗಳಿಗೆ ಅಧಿಪತಿಯಾಗಿರುವ ಸಮೀಪದ ಯಲಗೂರ ಕ್ಷೇತ್ರದ ಶ್ರೀ ಯಲಗೂರೇಶನ ಕಾರ್ತಿಕೋತ್ಸವವು ಫೆ.೧೫ ರಿಂದ ಮೂರು ದಿನಗಳ ಕಾಲ ಜರುಗಲಿದೆ.ಫೆ.೧೫ ಬೆಳಿಗ್ಗೆ ಪಂಚಾಮೃತ ಅಭಿಷೇಕ ಪವಮಾನ ಹೊಮ, ಮಹಾಪೂಜೆ, ಬೆಳಿಗ್ಗೆ ೧೦ ಕ್ಕೆ ದಿಂಡಿನ ಸ್ಪರ್ಧೆ, ತೀರ್ಥ ಪರಿದಾಸರ ಕೀರ್ತನೆ ಹಾಗ್ಗೆ ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ಬೆಳಿಗ್ಗೆ ೯ ಕ್ಕೆ ಅವಳಿ ಜಿಲ್ಲೆಯ ನಾನಾ ಭಜನಾ ಮಂಡಳಿಗಳ ನೇತೃತ್ವದಲ್ಲಿ ಭಜನೆಯೊಂದಿಗೆ ಭವ್ಯ ಶೋಭಾಯಾತ್ರೆ ಜರುಗಲಿದೆ.ಶನಿವಾರ ಬೆಳಿಗ್ಗೆ ೧೧ ಗಂಟೆಯಿಂದ ಭಾನುವಾರ ಸಂಜೆಯವರೆಗೂ ಅಹೋರಾತ್ರಿ ಸಂಗೀತ ಕಾರ್ಯಕ್ರಮ ಜರುಗಲಿದೆ.ಶನಿವಾರ, ಗಾಯಕರಾದ ಸಂಗೀತಾ ಕಾಖಂಡಕಿ, ವಸುದೇಂದ್ರ ವೈದ್ಯ, ಪುಟ್ಟರಾಜು ಭಜಂತ್ರಿ, ಶುಭದಾ ದೇಶಪಾಡೆ, ವಿಭಾ ಹೆಗಡೆ, ರವೀಂದ್ರ ಸೈದ್ಯ, ಬಾಲಚಂದ್ರ ನಾಕೋಡ, ರಾಧಾ ದೇಸಾಯಿ, ರಜತ ಕುಲಕರ್ಣಿ, ಬಿ.ಬಿ.ಕುಲಕರ್ಣಿ, ವೀಣಾ ಸವದತ್ತಿ, ನಾರಾಯಣ ತಾಸಗಾಂವ, ಕುಮಾರ ಬಡಿಗೇರ, ವಿನಾಯಕ ಮುತಾಲಿಕದೇಸಾಯಿ, ಪ್ರವೀಣ ಕಾರಡಗಿ ಸೇರಿದಂತೆ ೫೦ ಕ್ಕೂ ಅಧಿಕ ಗಾಯಕರು ಸಂಗೀತ ರಸದೌತಣ ಉಣಬಡಿಸಲಿದ್ದಾರೆ.ಅಭಿನವ ಹೊಸೂರ ಅವರು ಯೋಗ ಪ್ರದರ್ಶನ,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕೂಡಗಿ ಕೆಪಿಎಸ್ ಶಾಲೆಯ ಶಿಥಿಲಾವಸ್ಥೆಯಲ್ಲಿ ಇರುವ ಎಲ್ಲ ಕಟ್ಟಡಗಳನ್ನು ಬರುವ ದಿನಗಳಲ್ಲಿ ಸುಂದರವಾದ ಕಟ್ಟಡಗಳನ್ನಾಗಿ ನಿರ್ಮಿಸಲಾಗುವುದು. ಮೂಲಭೂತ ಸೌಲಭ್ಯಗಳಿಗಾಗಿ ಇರುವ ಅನುದಾನವನ್ನು ಸದುಪಯೋಗ ಮಾಡಿ, ಕಡಿಮೆ ಬಿದ್ದರೆ ಅದನ್ನು ಬೇರೆ ಮೂಲಗಳಿಂದ ಅನುದಾನ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಜಿಲ್ಲಾ ಪಂಚಾಯತ ವಿಜಯಪುರ, ಪಂಚಾಯತರಾಜ್ ಇಂಜನೀಯರಿಂಗ್ ಉಪವಿಭಾಗ ಬಸವನ ಬಾಗೇವಾಡಿ, 2022-23 ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ ಕೂಡಗಿ ಕೆ ಪಿ ಎಸ್ ಶಾಲೆ ನಿರ್ಮಾಣ ಹಾಗೂ ರಿಪೇರಿ ಅಂದಾಜು ಮೊತ್ತ 174 ಲಕ್ಷ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಹೊಸ ಕಟ್ಟಡವನ್ನು 9 ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಮುಂದಿನ ಭಾಗ ಶಾಲಾ ಕಟ್ಟಡ ಮಾಡಿಕೊಂಡು ಹಿಂದಿನ ಭಾಗವನ್ನು ಆಟದ ಮೈದಾನ ಮಾಡಿ ಒಂದು ಸುಸಜ್ಜಿತ ಶಾಲೆ ಮಾಡಿಕೊಡುವ ಭರವಸೆ ನೀಡಿದರು.ಈ ವೇಳೆ ಕಾರ್ಯಕ್ರಮದ ಸಾನಿಧ್ಯವನ್ನು ಮೈರಾಜಪೀರಾ ವಹಿಸಿದ್ದರು. ಅತಿಥಿಗಳಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಉದ್ಘಾಟನೆಯನ್ನು ಫೆ.೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ್ ಅವರ ಉಪಸ್ಥಿತಿಯಲ್ಲಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್ ಅವರು ಉದ್ಘಾಟಿಸಲಿದ್ದು, ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚೀವರಾದ ಎಂ.ಬಿ.ಪಾಟೀಲರು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರು ಮತ್ತು ಸಾಬೂಬು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವದಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಲೊಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸಪಾಟೀಲರು ತಿಳಿಸಿದ್ದಾರೆ.

Read More

ಆಲಮಟ್ಟಿಯಲ್ಲಿ ಉರ್ದು ಭಾಷಾ ಕಲಿಕಾ ಹಬ್ಬಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಶೈಕ್ಷಣಿಕ ಬಲವರ್ಧನೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ, ಸರ್ಕಾರಿ ಶಾಲೆಗಳಲ್ಲಿ ಬರುವ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶಿಕ್ಷಕರು ತನು ಮನದಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.ಆಲಮಟ್ಟಿಯ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ನಿಡಗುಂದಿ ಉರ್ದು ಕ್ಲಸ್ಟರ್ ನ ಕಲಿಕಾ ಹಬ್ಬವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.ಬದಲಾವಣೆ ಸಹಜ ನಿಯಮ, ಬದಲಾವಣೆಗೆ ತಕ್ಕಂತೆ ನಾವು ಕೂಡಾ ಸ್ಮಾರ್ಟ್ ಆಗಿ, ಜತೆಗೆ ಮಕ್ಕಳನ್ನು ಸ್ಮಾರ್ಟ್ ಮಾಡಬೇಕಿದೆ. ಈ ಕಲಿಕಾ ಹಬ್ಬಗಳಿಂದ ಸುತ್ತಮುತ್ತಲಿನ ಶಾಲೆಗಳ ಮಕ್ಕಳೊಂದಿಗೆ ಸ್ಪರ್ಧಿಸುವ ಮನೋಭಾವನೆ ಬೆಳೆಯುತ್ತದೆ, ಪೋಷಕರು ಕೂಡಾ ಮಕ್ಕಳ ಕಲಿಕೆಯ ಪ್ರಗತಿಯ ಮೇಲೆ ನಿರಂತರ ನಿಗಾ ಇಡಬೇಕು ಎಂದರು.ಚಿಮ್ಮಲಗಿ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷ ಎಂ.ಆರ್. ಕಮತಗಿ ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚುತ್ತಿದೆ, ಅದನ್ನು ಪೋಷಕರು ನಿಯಂತ್ರಣದಲ್ಲಿಡಬೇಕು, ಮಕ್ಕಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ಬಬಲೇಶ್ವರ ತಾಲೂಕಿನ ಸಾರವಾಡ, ಹಲಗಣಿ ಮತ್ತು ಕಂಬಾಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಸಾರವಾಡ, ಹಲಗಣಿ ಹಾಗೂ ಕಂಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಸಿಬ್ಬಂದಿ-ಮಕ್ಕಳ ಹಾಜರಾತಿ, ಮಕ್ಕಳ ಆರೋಗ್ಯ ತಪಾಸಣಾ ವರದಿಗಳನ್ನು ಪರಿಶೀಲಿಸಿ, ಅಂಗನವಾಡಿ ಕೇಂದ್ರಕ್ಕೆ ಪೇಂಟಿಂಗ್ ಮತ್ತು ಗೋಡೆ ಮೇಲೆ ಮಕ್ಕಳಿಗೆ ಆಕರ್ಷಣೀಯವಾಗುವಂತೆ ಕಾರ್ಟೂನ್ ಚಿತ್ರಗಳನ್ನು ಬರೆಯಿಸಬೇಕು, ವಿದ್ಯುತ್ ವ್ಯವಸ್ಥೆ, ೧೫ ನೇ ಹಣಕಾಸಿನ ಯೋಜನೆಯ ಅನುದಾನವನ್ನು ಬಳಸಿ ಕೇಂದ್ರದ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಹಾಗೂ ಅಡುಗೆ ದಾಸ್ತಾನು ಸಂಗ್ರಹಿಸಲು ಕಂಟೇನರ್ ಖರೀದಿಸುವಂತೆ ಅವರು ಸೂಚನೆ ನೀಡಿದರು.ಮದಗುಣಕಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಂಗನವಾಡಿ ಕೇಂದ್ರದ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳು ಹಾಡಿದ ವಿವಿಧ ಬಗೆಯ ಹಾಡುಗಳನ್ನು ಆಲಿಸಿದ ಸಿಇಓರವರು ಮಕ್ಕಳ ಪ್ರತಿಭೆಗೆ ಹರ್ಷ ವ್ಯಕ್ತಪಡಿಸಿದರು.ಸಾರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಾತ್ಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ಅವರು ಫೆ.೧೬ ರಿಂದ ೧೮ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಫೆ.೧೬ ರಂದು ಸಂಜೆ ೪ಗಂಟೆಗೆ ಜಿಲ್ಲೆಯ ನಿಡಗುಂದಿಗೆ ಆಗಮಿಸಿ, ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಫೆ.೧೭ರಂದು ಬೆಳಿಗ್ಗೆ ೧೦ ಗಂಟೆಗೆ ಇಂಡಿ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರ ನಗರದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಹಂದಿಜೋಗಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ ೫ ಗಂಟೆಗೆ ವಿಜಯಪುರ ನಗರದ ಕುಂಚಿ ಕೊರವ ಕಾಲನಿಗೆ ಭೇಟಿ ನೀಡಿ ಕುಂಚಿ ಕೊರವ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ೧೩ ತಾಲೂಕುಗಳಲ್ಲಿ ಫೆ.೧೫ರಂದು ನಡೆಯಲಿರುವ ಕ್ರೆöÊಸ್ತ ಸಂಸ್ಥೆಗಳ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ನಡೆಯುವ ಪ್ರವೇಶ ಪರೀಕ್ಷೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಜಿಲ್ಲೆಯ ಆಲಮೇಲ, ಬಬಲೇಶ್ವರ, ಬಸವನ ಬಾಗೇವಾಡಿ, ವಿಜಯಪುರ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೋಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟಿ ಹಾಗೂ ತಿಕೋಟಾ ತಾಲೂಕಿನಲ್ಲಿ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ೧೫,೧೩೪ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದೆ ವ್ಯವಸ್ಥಿತವಾಗಿ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.ಪರೀಕ್ಷೆ ಕೇಂದ್ರ ಹಾಗೂ ಕೊಠಡಿಗಳಲ್ಲಿ ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಸಿಬ್ಬಂದಿಗಳ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾರ್ಥಿಗಳು ಇಲೆಕ್ಟಾçನಿಕ್ ವಸ್ತುಗಳು, ಕ್ಯಾಲ್ಕುಲೇಟರ್, ಮೊಬೈಲ್ ಸೇರಿದಂತೆ ಇನ್ನಿತರ…

Read More