Author: editor.udayarashmi@gmail.com

ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಅಶೋಕ ಮನಗೂಳಿ ಖಡಕ್ ವಾರ್ನಿಂಗ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಕಾಬಿಟ್ಟಿಯಾಗಿ ವರದಿ ಸಲ್ಲಿಸಿ ಹೋಗದೇ ಅಲ್ಲಿನ ಸತ್ಯಾಂಶವನ್ನು ತಿಳಿದುಕೊಂಡು ಗ್ರಾಮಸ್ಥರಿಗೆ ಜೂನ್ ಮಧ್ಯದ ಅವಧಿಯವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜೆಜೆಎಂ ಕಾಮಗಾರಿ ಕಳಪೆ ಮಟ್ಟದ್ದಾಗಿವೆ ಎಂಬ ಮಾತುಗಳು ಕೇಳಿ ಬಂದದ್ದು, ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಎಚ್ಚರಿಕೆ ನೀಡಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನ ಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು. ಬಸ್ತಿಹಾಳ ಮತ್ತು ಹಂದಿಗನೂರ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ ಎರಡು ದಿನಗಳಲ್ಲಿ ಕೆರೆಯಲ್ಲಿ ಮೋಟರ್ ಬಿಟ್ಟು ನೀರು ಹರಿಸಬೇಕು. ಮುಂಬರುವ ದಿನಮಾನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಅಧಿಕಾರಿಗಳು ಹಾರಿಕೆ…

Read More

ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ | ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ | ಪಕ್ಷದ ಶಿಸ್ತು ಪದೇ ಪದೇ ಉಲ್ಲಂಘನೆಗೆ ಈ ಕ್ರಮ ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿಯಲ್ಲಿ ೨೦೨೪-೨೫ನೇ ಸಾಲಿನ ಪ್ರಧಾನಮಂತ್ರಿ ಇಂಟರ್ನ್ಶಿಪ್ ಸ್ಕಿಮ್ ಇನ್ ಟಾಪ್ ಕಂಪನಿಸ್ ಯೋಜನೆಯಡಿ ತರಬೇತಿಗೆ ಆಸಕ್ತರನ್ನು ಆಹ್ವಾನಿಸಲಾಗಿದೆ.ಪ್ರಧಾನಮಂತ್ರಿ ಇಂಟರ್ನ್ಶಿಪ್ ಸ್ಕಿಮ್ ಇನ್ ಟಾಪ್ ಕಂಪನಿಸ್ ಈ ಯೋಜನೆಯಡಿ ಉನ್ನತ ಮಟ್ಟದ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಯುವಕ, ಯುವತಿಯರಿಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯಲು ಇಚ್ಚಿಸುವವರು ಇದೇ ತಿಂಗಳ ದಿ: ೩೧ ರ ಒಳಗಾಗಿ ಪೋರ್ಟಲನಲ್ಲಿ ಅವಶ್ಯಕ ದಾಖಲೆಗಳೊಂದಿಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಅಸಕ್ತಿ ಇರುವವನ್ನು ಅರ್ಹತೆ ಆಧಾರದ ಮೇಲೆ ನೋಂದಾಯಿಸಿಕೊಳ್ಳಲಾಗುವುದು.ಅಭ್ಯರ್ಥಿಗಳು ೨೧ರಿಂದ ೨೪ ವಯಸ್ಸಿನ ವಯೋಮಾನದವರಾಗಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಬಿಎ ಸಹಿತ ಇತ್ಯಾದಿ ಪದವಿ ಪೂರ್ಣಗೊಂಡಿರಬೇಕು. ಕುಟುಂಬದ ಆದಾಯ ವಾರ್ಷಿಕ ೮ ಲಕ್ಷ ಮೀತಿಗೆ ಒಳಪಟ್ಟಿರಬೇಕು. ಕುಟುಂಬದ ಯಾವುದೇ ಸದಸ್ಯ ಸರ್ಕಾರದ ಖಾಯಂ ನೌಕರರಾಗಿರಬಾರದು. ತರಬೇತಿ ಅವಧಿ ೧೨ ತಿಂಗಳಗಳಾಗಿದ್ದು, ಈ ಅವಧಿಯಲ್ಲಿ ಸರಿಯಾಗಿ ಹಾಜರಾದ ಅಭ್ಯರ್ಥಿಗೆ ಮಾಸಿಕ ೫ ಸಾವಿರ ರೂ.ಬ್ಯಾಂಕ್ ಖಾತೆಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಡ್ಲೇವಾಡ ಪಿಸಿಎಚ್ ಗ್ರಾಮದ ಚಿರಾಕಿ ನಸ್ರೂದ್ಧೀನ್ ದರ್ಗಾದ ೩ ದಿನಗಳ ಕಾಲದ ಉರುಸ್ ದಿ: ೨೭ ಗುರುವಾರದಂದು ಆರಂಭಗೊಳ್ಳಲಿದೆ.ದಿ:೨೭ ರಂದು ಸಾಯಂಕಾಲ ಕುದುರೆ ಕುಣಿತ, ಗ್ರಾಮದ ಪ್ರಮುಖರು ಹಾಗೂ ಭಕ್ತಾಧಿಗಳಿಂದ ಗದ್ದುಗೆಗೆ ಗಂಧ ಏರಿಸುವುದು ನಂತರ ಲೆಕ್ಕಪತ್ರ ವಿವರಣೆ, ಭಕ್ತರಿಂದ ಕಾಣಿಕೆ ಸ್ವೀಕರಣೆ ತದನಂತರ ರಂಗುರಂಗಿನ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ.ದಿ:೨೮ ಶುಕ್ರವಾರ ಬೆಳಿಗ್ಗೆ ನೈವಿಧ್ಯ, ದೇವರ ದರ್ಶನ ನಂತರ ಜಿದ್ದಾಜಿದ್ದಿನ ಗೀಗೀ ಪದಗಳು ಜರುಗುವವು.ದಿ:೨೯ ಶನಿವಾರ ರಂದು ಮಧ್ಯಾನ್ಹ ಭಾರ ಎತ್ತುವುದು, ಸಾಯಂಕಾಲ ಜಂಗೀ ಕುಸ್ತಿ, ರಾತ್ರಿ ೧೦ ಘಂಟೆಗೆ ಜಮಖಂಡಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ ಶಿವಲಿಂಗೇಶ್ವರ ಪ್ರಸಾಧಿಕ ನಾಟ್ಯ ಸಂಘದಿಂದ ಸಾಮಾಜಿಕ ನಾಟಕ ಜರುಗುವುದು .ಜಾತ್ರಾ ಪ್ರಯುಕ್ತ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳಿಂದ ಬರುವಂತ ಭಕ್ತರಿಗೆ ದೇವರಹಿಪ್ಪರಗಿ ಹಾಗೂ ಇಂಡಿ ಪಟ್ಟಣಗಳ ಮೂಲಕ ಬಸ್‌ಗಳ ವ್ಯವಸ್ಥೆಯಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಸೋಮನಗೌಡ ಪಾಟೀಲ ಹಾಗೂ ಸಾಯಿಕುಮಾರ ಬಿಸನಾಳ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಿಇಟಿ ಮತ್ತು ನಿಟ್ ತರಬೇತಿಯನ್ನು ನೀಡುವ ಕಾರ್ಯವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಉಚಿತ ಸಿಇಟಿ – ನಿಟ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆದುನಿಕ ಜಗತ್ತಿನಲ್ಲಿ ಬಹಳಷ್ಟು ಪೈಪೋಟಿಯಲ್ಲಿ ಯಶಸ್ಸು ಕಾಣಬೇಕಾಗಿದರೆ ವಿಧ್ಯಾರ್ಥಿಗಳು ಜೀವನದ ಮುಂದಿನ ಗುರಿಯನ್ನು ಇಟ್ಟುಕೊಂಡು ಅಧ್ಯಯನ ಶೀಲರಾಗಬೇಕು ಎಂದರು. ತಾವು ಪಡೆಯುವ ಶಿಕ್ಷಣ ಕೇವಲ ತಮಗಾಗಿ ಅಷ್ಟೇ ಸೀಮಿತವಾಗದೆ, ಸಮಾಜಕ್ಕೆ ಅಗತ್ಯವಿರುವ ಕಾರ್ಯಗಳಿಗೆ ಉಪಯೋಗವಾಗುವಂತೆ ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವ ವ್ಯಕ್ತಿಗಳು ಆಗಬೇಕು ಎಂದರು.ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಚಂದ್ರಕಾಂತ ನಾಟಿಕಾರ ಅವರು ಮಾತನಾಡಿ, ಬಡ ರೈತ ಕಾರ್ಮಿಕರ ಮಕ್ಕಳಿಗೆ ಹೆಚ್ಚು ಹಣ ನೀಡಿ ಶಿಕ್ಷಣ ಪಡೆಯಲು ಕಷ್ಟ ಆಗುತ್ತಿರುವ ಸಂದರ್ಭದಲ್ಲಿ ಉಚಿತವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಕ್ಕಳಿಗೆ ನಮ್ಮ ಭಾಷೆ, ಸಂಸ್ಕೃತಿ, ಸಂಸ್ಕಾರ ಕಲಿಸಿ. ಆಗ ಮಕ್ಕಳು ಸುಸಂಸ್ಕೃತರಾಗಿ ನಾಡಿನ ಸತ್ಪ್ರಜೆಗಳಾಗಿ ದೇಶದ ಪ್ರಗತಿಗೆ ಬೆನ್ನುಲುಬಾಗಿ ನಿಲ್ಲುತ್ತಾರೆ’ ಎಂದು ಸುಸಂಸ್ಕೃತ ಸಂಸ್ಕಾರ ಸೇವಾ ಮಂಚ ಅಧ್ಯಕ್ಷ ಪಾರ್ಶ್ವನಾಥ ಉಪಾಧ್ಯ ಹೇಳಿದರು.ಜಮಖಂಡಿ ತಾಲೂಕಿನ ಸಾವಳಗಿ ನಗರದ ಮಾಳಿ ಭವನದಲ್ಲಿ ನಡೆದ ಶ್ರೀ ಗುರುಕುಲ ಪಬ್ಲಿಕ್ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ, ಅವರು ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.ನಂತರ ಮಾತನಾಡಿದ ಶ್ರೀ ಭವಾನಿ ಕೋ ಆಪ್ ಕ್ರೇಡಿಟ ಸೊಸಾಯಿಟಿ ಅಧ್ಯಕ್ಷ ಉಮೇಶ್ ಜಾಧವ್ ಅವರು, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ತಮ್ಮಣ್ಣಾಚಾರಿ ಜೋಷಿ ಅವರು ಆರ್ಶೀವಚನ ನೀಡಿ ವಿದ್ಯಾರ್ಥಿಗಳ ಜೀವನ ಉಜ್ವಲವಾಗಲಿ ಎಂದು ಆರ್ಶೀವಾದ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಜೋರು ಗಾಳಿ ಹಾಗೂ ಮಳೆಯು ದ್ರಾಕ್ಷಿ ಬೆಳೆಗಾರರಿಗೆ ಕಹಿ ಉಣಿಸಿದೆ. ಮತ್ತೊಮ್ಮೆ ಪರಿಹಾರಕ್ಕಾಗಿ ಸರ್ಕಾರದ ಎದುರು ಕೈಒಡ್ಡುವಂತೆ ಮಾಡಿದೆ. ತಾಲೂಕಿನ ಸಾವಳಗಿ ಹೋಬಳಿಯಲ್ಲಿ ಸೋಮವಾರ ಬಿರುಗಾಳಿ, ಹಾಗೂ ಮಳೆಯಿಂದಾಗಿ ಹಾನಿಯಾದ ದ್ರಾಕ್ಷಿಯನ್ನು ತಹಶೀಲ್ದಾರ್ ಸದಾಶಿವ ಮಕ್ಕೊಜಿ ಮಂಗಳವಾರ ಭೇಟಿ ಪರೀಶೀಲನೆ ನಡೆಸಿದರು.ಜಮಖಂಡಿ ತಾಲೂಕಿನ ಸಾವಳಗಿ ಹೋಬಳಿಯಲ್ಲಿ ಹಾನಿಯಾದ ಸ್ಥಳಕ್ಕೆ ಮಂಗಳವಾರ ತೊದಲಬಾಗಿ, ತುಂಗಳ, ಸೇರಿದಂತೆ ಅನೇಕರು ಗ್ರಾಮಗಳಲ್ಲಿ ದ್ರಾಕ್ಷಿಯನ್ನು ವೀಕ್ಷಿಸಿದರು.ನಂತರ ಮಾತನಾಡಿದ ತಹಶೀಲ್ದಾರ್ ಸದಾಶಿವ ಮಕ್ಕೊಜಿ, ಶೆಡ್‌ಗಳಲ್ಲಿ ಒಣ ದ್ರಾಕ್ಷಿ ಸಿದ್ಧಪಡಿಸಲು ಹಾಕಿದ್ದ ದ್ರಾಕ್ಷಿ ಹಾಳಾಗಿ, ದ್ರಾಕ್ಷಿ ಹಾನಿಯಾದ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ತಿಳಿಸಿದರು.ರೈತ ಉಮೇಶ್ ಜಾಧವ ಮಾತನಾಡಿ, ಅಕಾಲಿಕ ಮಳೆ ತೀವ್ರ ಆರ್ಥಿಕ ಹೊಡೆತ ನೀಡಿದೆ. ಹೋದ ವರ್ಷವೂ ನಷ್ಟ ಅನುಭವಿಸಿ ಉಳಿಸಿಕೊಂಡಿದ್ದ ಅಲ್ಪಸ್ವಲ್ಪ ಬೆಳೆಯೂ ಈಗ ಹಾಳಾಗಿದೆ. ಶೆಡ್‌ಗಳಲ್ಲಿ ಒಣ ದ್ರಾಕ್ಷಿ ಸಿದ್ಧಪಡಿಸಲು ಹಾಕಿದ್ದ ದ್ರಾಕ್ಷಿ ಹಾಳಾಗಿ, ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಗಾದೆಯಂತೆ ನಮ್ಮಬದುಕು ಆಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ಮೂಲಕ ಏಪ್ರಿಲ್ ೦೨ ರಂದು ದೇವರ ದಾಸಿಮಯ್ಯ ಹಾಗೂ ಏಪ್ರಿಲ್ ೧೦ ರಂದು ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಏಪ್ರಿಲ್ ೦೨ ರಂದು ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಸಂಗೀತ ಕಾರ್ಯಕ್ರಮ ಉಪನ್ಯಾಸ ಜರುಗಲಿವೆ. ಏಪ್ರಿಲ್ ೧೦ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ವರೆಗೆ ವಿವಿಧ ಕಲಾ ತಂಡದೊಂದಿಗೆ ಭಾವಚಿತ್ರದ ಮೆರವಣಿಗೆ, ನಂತರ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.ಈ ಮಹನೀಯರ ಆದರ್ಶ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲಲು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೩ ಗ್ರಾಮಗಳಲ್ಲಿ ಏಪ್ರಿಲ್ ೫ರ ಬೆಳಿಗ್ಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಅಂದು ವಿಜಯಪುರದ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಶಿರಗೂರ ಇನಾಂ ಗ್ರಾಮದ ಶ್ರೀ ಸದ್ಧಬೀರ ದೇವಸ್ಥಾನದಲ್ಲಿ, ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ವಾರ್ಡ ನಂ.೧೮ರ ಹಕೀಮ ಚೌಕನ ಗೋಲಗುಂಬಜ್ ಹತ್ತಿರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು, ಬರಟಗಿ ಗ್ರಾಮದ ಶ್ರೀ ಅಮೋಘ ಸಿದ್ದೇಶ್ವರ ದೇವಸ್ಥಾನದಲ್ಲಿ, ಬಸವನ ಬಾಗೇವಾಡಿಯ ಗ್ರೇಡ್-೨ ತಹಶೀಲ್ದಾರ ಹತ್ತರಕಿಹಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಬ್ಯಾಲ್ಯಾಳ ಗ್ರಾಮದ ಸಮುದಾಯ ಭವನದಲ್ಲಿ, ಕೊಲ್ಹಾರ ತಹಶೀಲ್ದಾರ ಮಟ್ಟಿಹಾಳ ಗ್ರಾಮದ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಶೈಕ್ಷಣಿಕ, ಸಂಘಟನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವರ್ಷದ ಕರ್ನಾಟಕ ರತ್ನ ಪುನಿತ್ ರಾಜಕುಮಾರ ಸ್ಪೂರ್ತಿ ಪ್ರಶಸ್ತಿಯನ್ನು ಹಾಗೂ ಮಹಿಳಾ ದಿನಾಚರಣೆಯ ಅಂಗವಾಗಿ ವಸುಂಧರಾ ರಾಷ್ಟ್ರೀಯ ಮಹಿಳಾ ಪ್ರಶಸ್ತಿ ಯನ್ನು ಶಿಕ್ಷಕಿ ಲಕ್ಷ್ಮೀಬಾಯಿ ಹಳೇಮನಿ ರವರಿಗೆ ಧಾರವಾಡದ ಸುವರ್ಣ ಸಮ್ಮುಚಾಯ ಭವನ ರಂಗಾಯಣದಲ್ಲಿ ಪ್ರಧಾನ ಮಾಡಲಾಯಿತು.ಪ್ರಶಸ್ತಿ ಸಮಾರಂಭವು ಕರ್ನಾಟಕ ಸೋಶಿಯಲ್ ಕ್ಲಬ್ ಧಾರವಾಡ ಹಾಗೂ ವಿಶ್ವಾಸ ಫೌಂಡೇಶನ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಯಂಕಾಲ ಜರುಗಿತು.ಪ್ರಶಸ್ತಿ ಪ್ರಧಾನವನ್ನು ಡಾ.ರಮೇಶ ಮಹದೇವಪ್ಪನವರ ಉದ್ಯಮಿಗಳು ಹುಬ್ಬಳ್ಳಿ, ಸಾಹಿತಿಗಳಾದ ಸುರೇಶ ಕೋರಕೊಪ್ಪ , ತೆರಿಗೆ ಅಧೀಕಾರಿಗಳು , ವೀಣಾ ಹೊಸಮನಿ , ಡಾ.ಶಿವಣ್ಣ ಜಿ,ಜಯಶ್ರೀ ಪಾಟೀಲ, ಮೃತ್ಯುಂಜಯ ಹಿರೇಮಠ, ಅನುಪಮಾ ಹಂಸಭಾವಿ, ಮಂಜುಳಾ ಬೆಣ್ಣಿ , ಪಂಡಿತ ಅವಜಿ ಹಾಗೂ ಡಾ.ಚಂದ್ರಶೇಖರ ಮಾಡಲಗೇರಿ ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ಚಲನಚಿತ್ರ ಮಂಡಳಿ ಬೆಂಗಳೂರು ರವರಿಂದ ಮಾಡಲಾಯಿತು.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ…

Read More