Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ ನೇಯ ಶತಮಾನದ ಬಸವಾದಿ ಶರಣರು ಸಮಾಜದಲ್ಲಿನ ಸಮಾನತೆ, ಜಾತಿ-ಜನಾಂಗದ ಭೇದ, ಸಾಮಾಜಿಕ ಅನಿಷ್ಟ, ಮೌಢ್ಯತೆಗಳನ್ನು ಹೋಗಲಾಡಿಸಿ, ಸಮ ಸಮಾಜ ನಿರ್ಮಾಣಕ್ಕಾಗಿ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದರು ಎಂದು ಪಂಡಿತ ಮಧುಸೂದನ ಆಚಾರ್ಯ ಕಟ್ಟಿ ಅವರು ಹೇಳಿದರು.ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ್ ಆಸ್ಪತ್ರೆ ಎದುರಿಗೆ ಇರುವ ಆಂಜನೇಯ ದೇವಸ್ಥಾನದ ೬ ನೇಯ ವರ್ಷದ ಜಾತ್ರಾ ಮಹೋತ್ಸವದ ಸಮಾರೋಪ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಸಾನಿಧ್ವ ವಹಿಸಿದ್ದ ಜಮಖಂಡಿ ಓಲೇಮಠದ ಆನಂದ ದೇವರು ತಮ್ಮ ಮಾತನಾಡಿ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಏಕೋಭಾವದಿಂದ ಪಾಲ್ಗೊಂಡು ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚರಣೆ, ಸಂಪ್ರದಾಯ ಮತ್ತು ಪರಂಪರೆಯನ್ನು ಎತ್ತಿ ಹಿಡಿದರೆ, ಸಮಾಜದಲ್ಲಿ ಸಾಮರಸ್ಯತೆ ಸಾಧಿಸಲು ಸಹಕಾರಿಯಾಗುತ್ತದೆ ಎಂದರು.ಸಮಾರಂಭದಲ್ಲಿ ದೇವಾಲಯದ ಅಧ್ಯಕ್ಷ ಸಂತೋಷ ಪಾಟೀಲ, ಲಕ್ಷಣ ಶಿಂಧೆ, ಬಲವಂತ ಬಳೂಲಗಿಡದ, ಸಿದ್ದಾರೂಢ ಹಿರೇಮಠ, ನಾಗೇಂದ್ರ ಯಾದವ, ಸಂಗಣ್ಣ ತೆನಿಹಳ್ಳಿ, ರೇವತಿ ಬುದ್ನಿಮಠ, ಇನ್ನಿತರರು ವೇದಿಕೆಯ ಮೇಲಿದ್ದರು,ನಂತರ ಮಕ್ಕಳು ಮತ್ತು…
ಉದಯರಶ್ಮಿ ದಿನಪತ್ರಿಕೆ ಗದಗ: ಉತ್ತರ ಕರ್ನಾಟಕ ಕಲಾವಿದರ ಹಾಗೂ ಕಲಾ ಪೋಷಕರ ಸಂಘಟನೆಯಾದ, ಕಲಾ ವಿಕಾಸ ಪರಿಷತ್ ನಿಂದ, ದಿನಾಂಕ ೦೨ ಫೆಬ್ರುವರಿ ೨೦೨೬. ಸೋಮವಾರ ಇಳಿಹೊತ್ತು ೩ ಗಂಟೆಗೆ ನಗರದ ಮುಂಡರಗಿ ರಸ್ತೆಯಲ್ಲಿ ಇರುವ, ಚಿಕ್ಕಟ್ಟಿ ಸಭಾ ಭವನದಲ್ಲಿ, ಗದಗು ಸಂಗೀತದ ಗದ್ದುಗೆ ಮಾಡಿದ ಗಾನಯೋಗಿ ಪಂಚಾಕ್ಷರಿ ಗವಾಯಿಗಳವರ ೧೩೪ ನೆಯ ಜಯಂತಿಯನ್ನು, ಅಮರ ಸ್ವರ ಸಮಾರೋಹವನ್ನಾಗಿ ಆಚರಿಸಲಾಗುತ್ತಿದೆ.ಈ ಸಮಾರಂಭದ ಉದ್ಘಾಟನೆಯನ್ನು ಭಾರತೀಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಎಸ್. ವಾಯ್. ಚಿಕ್ಕಟ್ಟಿ ಇವರು ನಡೆಸಿಕೊಡುವರು. ಅಧ್ಯಕ್ಷತೆಯನ್ನು ಕಲಾ ವಿಕಾಸ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ರವಿ ಎಲ್. ಗುಂಜೀಕರ್ ಇವರು ವಹಿಸಿಕೊಳ್ಳುವರು. ಕಲಾ ವಿಕಾಸ ಪರಿಷತ್ ಅಧ್ಯಕ್ಷರಾದ ಶ್ರೀ ಸಿ. ಕೆ. ಹೆಚ್. ಶಾಸ್ತ್ರೀ (ಕಡಣಿ) ಇವರು ನುಡಿನಮನ ಸಲ್ಲಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಬೆಂಗಳೂರಿನ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಬಳ್ಳಾರಿಯವರನ್ನು ಮತ್ತು ಎಲ್.ಎಲ್.ಎಮ್. ಪದವಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ವ್ಯಾಪ್ತಿಯಲ್ಲಿ ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ, ಪ್ರತಿ ಮನೆ -ಮನೆಗೆ ತೆರಳಿ ಮತದಾನ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ನಿಯೋಜಿತ ಬೂತ್ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಚುನಾವಣೆ ಹಾಗೂ ಮತದಾನ ಪ್ರಜಾಪ್ರಭುತ್ವದ ಮಹತ್ವದ ಅಂಗಗಳು, ಮತದಾನದ ಹಕ್ಕನ್ನು ಖಾತ್ರಿಪಡಿಸುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಕಾರ್ಯ ಅತ್ಯಂತ ಮಹತ್ವ ಹಾಗೂ ಜವಾಬ್ದಾರಿಯುತ ಕಾರ್ಯವಾಗಿದೆ, ಈಗ ಸರ್ಚ್, ಐಡೆಂಟಿಟಿ ಹಾಗೂ ಮ್ಯಾಪಿಂಗ್ (ಸರ್) ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಾ ಆರಂಭಗೊಂಡಿದೆ, ಆದರೆ ಈ ಕಾರ್ಯಕ್ಕೆ ನಿಯೋಜಿತಗೊಂಡಿರುವ ಬಿಎಲ್ಓಗಳು ವಿವಿಧ ಬಡಾವಣೆಗಳ ಪ್ರತಿ ಮನೆ-ಮನೆಗೂ ಭೇಟಿ ನೀಡುತ್ತಿಲ್ಲ, ಪ್ರತಿ ಮನೆಗೂ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಣೆ, ಪರಿಷ್ಕರಣೆ ಮಾಡಬೇಕು…
ವಿಜಯಪುರದಲ್ಲಿ ಅಖಿಲ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಆಡಳಿತ ಯಂತ್ರದಲ್ಲಿ ಮಹಿಳಾ ನೌಕರರ ಪಾತ್ರ ಪ್ರಮುಖ, ಮಹಿಳಾ ನೌಕರರ ಸಮಸ್ಯೆ ನಿವಾರಣೆಗಾಗಿ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ಅಸ್ತಿತ್ವಗೊಂಡಿದ್ದು ಪ್ರತಿ ಜಿಲ್ಲಾ ಕೇಂದ್ರಕ್ಕೂ ಭೇಟಿ ನೀಡಿ ಮಹಿಳಾ ನೌಕರರ ಜೊತೆ ಸಮಾಲೋಚನೆ ನಡೆಸುವ ಕಾರ್ಯ ನಡೆಸುವ ಜೊತೆಗೆ ಸದಸ್ಯತ್ವ ಅಭಿಯಾನಕ್ಕೂ ಆದ್ಯತೆ ನೀಡಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿಯೂ ಸಹ ಶೀಘ್ರದಲ್ಲಿಯೇ ಸಂಘದ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ಎಂದು ವಿಜಯಪುರದಲ್ಲಿ ಅಖಿಲ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆಡಳಿತ ಯಂತ್ರದಲ್ಲಿ ೨.೫ ಲಕ್ಷಕ್ಕೂ ಮಹಿಳಾ ನೌಕರರಿದ್ದಾರೆ, ಈ ಎಲ್ಲ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅವರ ಧ್ವನಿಯಾಗುವ ನಿಟ್ಟಿನಲ್ಲಿ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಭೇಟಿ ನೀಡಿ ಮಹಿಳಾ ನೌಕರರಲ್ಲಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಗುಲಬುರ್ಗಾ ವಿಶ್ವಾವಿದ್ಯಾಲಯ ಕಲಬುರ್ಗಿಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಸಭೆಯಲ್ಲಿ ಸ್ಥಳೀಯ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಪಾಲಕ ಮಹಾಂತೇಶ ಕೆ. ಬಿರಾದಾರ ಇವರನ್ನು ವಿಜಯಪುರ ಜಿಲ್ಹಾ ಗ್ರಂಥಾಲಯ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಮಹಾಂತೇಶ ಬಿರಾದಾರ ಅವರ ಗ್ರಂಥಾಲಯ ಸೇವಾನುಭವ, ದತ್ತಾಂಶಗಳ ಸಂಗ್ರಹಣೆ, ಸಂಘಟನೆ, ಸಂರಕ್ಷರಣೆ ಹಾಗೂ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಇವರನ್ನು ವಿಜಯಪುರ ಜಿಲ್ಹಾ ಗ್ರಂಥಾಲಯ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (ರಿ ) ಬೆಂಗಳೂರು ಅಧ್ಯಕ್ಷ ಡಾ| ಎಸ್.ಎಲ್. ಕಾಡದೇವರಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ದೇವರನಿಂಬರಗಿ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಹಿಂಬದಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ದೇವರ ನಿಂಬರಗಿ ನಿವಾಸಿ ರೇವಣಸಿದ್ದ ರವಿ (30) ಹಾಗೂ ಇನೂಸ್ ಇಮಾಮ ಶೇಖ (ವಯಸ್ಸು ತಿಳಿದು ಬಂದಿಲ್ಲ) ಎಂಬುವವರು ದ್ವಿಚಕ್ರ ವಾಹನದಲ್ಲಿ ಚಡಚಣದಿಂದ ದೇವರನಿಂಬರಗಿ ಕಡೆಗೆ ತೆರಳುತ್ತಿದ್ದಾಗ, ಚಡಚಣದಿಂದ ಝಳಕಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ದೇವರನಿಂಬರಗಿ ಕ್ರಾಸ್ ಸಮೀಪ ದ್ವಿಚಕ್ರ ವಾಹನವನ್ನು ರಸ್ತೆ ಬಲಭಾಗಕ್ಕೆ ತೆಗೆದುಕೊಳ್ಳುವ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ರೇವಣಸಿದ್ದ ಅವರಿಗೆ ಎಡಗೈ ಹಾಗೂ ಎರಡೂ ಕಾಲುಗಳಿಗೆ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಹಿಂಬದಿ ಸವಾರ ಇನೂಸ್ ಅವರಿಗೆ ತಲೆ, ಮುಖ, ಕೈಗಳು ಮತ್ತು ಕಾಲುಗಳಿಗೆ ಗಂಭೀರ…
ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ಶೃಂಗಸಭೆ | ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ | ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಬೆಂಗಳೂರು: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ (WEF) ಯಲ್ಲಿ 46 ಜಾಗತಿಕ ಮತ್ತು ಭಾರತೀಯ ಕಂಪನಿಗಳು, ಹೂಡಿಕೆದಾರರು ಮತ್ತು ದೇಶದ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಶನಿವಾರ ಹೇಳಿದ್ದಾರೆ.ಹೂಡಿಕೆ ಉದ್ದೇಶಗಳ ಕುರಿತು ಚರ್ಚೆಗಳು ನಡೆದಿವೆ. ಆದರೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎಂದು ಅವರು ಹೇಳಿದರು.’ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಜಾಗತಿಕ ಮತ್ತು ಭಾರತೀಯ ಕಂಪನಿಗಳು, ಹೂಡಿಕೆದಾರರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ನಾಯಕರು ಸೇರಿದಂತೆ ವಿವಿಧ ಸಂಸ್ಥೆಗಳೊಂದಿಗೆ 46 ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದೇವೆ’ ಎಂದು ಪಾಟೀಲ್ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಕರ್ನಾಟಕದಿಂದ ತೆರಳಿದ್ದ ನಿಯೋಗಗಳು ಏರೋಸ್ಪೇಸ್ ಮತ್ತು ರಕ್ಷಣೆ, ಸುಧಾರಿತ ಉತ್ಪಾದನೆ, ಪಾನೀಯಗಳು ಮತ್ತು ಆಹಾರ ಸಂಸ್ಕರಣೆ, ಬಾಹ್ಯಾಕಾಶ ತಂತ್ರಜ್ಞಾನ, ದತ್ತಾಂಶ ಕೇಂದ್ರ ಮತ್ತು ಡಿಜಿಟಲ್ ಮೂಲಸೌಕರ್ಯ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವಿಜಯಪೂರ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ವಿಜಯಪೂರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ ಕಚೇರಿಗೆ ಬೃಹತ್ ಪ್ರತಿಭಟನೆ ಮುಖಾಂತರ ತೆರಳಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಲ್ಲಿ ೨೧ ದಿನಗಳ ವರೆಗೂ ಸತತ ಕೆಲಸಕೊಡಬೇಕೆಂದು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಜಿಲ್ಲಾ ಕೃಷಿ ಕೂಲಿ ಕಾರ್ಮಿಕ ಸಂಘದ ಮುಖಂಡರಾದ ರಮೇಶ್ ತಳವಾರ ಮಾತನಾಡಿ, ಹೆಚ್ಚು ಕೆಲಸದ ಬೇಡಿಕೆಗಾಗಿ ಪಂಚಾಯತಿ ಹಾಗೂ ತಾಲೂಕಾ ಪಂಚಾಯತ ಕಾರ್ಯಲಯಕ್ಕೆ ಕೃಷಿ ಕೂಲಿ ಕಾರ್ಮಿಕರು ಈ ಹಿಂದೆ ಅಲೆದಾಡಿದರೂ ಹೆಚ್ಚು ಕೆಲಸ ಕೊಡಲಿಲ್ಲ. ಆದ್ದರಿಂದ ಈ ವರ್ಷ ಹೆಚ್ಚು ಕೆಲಸ ಒದಗಿಸಬೇಕು ಎಂದು ಲಿಖಿತ ಉತ್ತರ ಒದಗಿಸಬೇಕು ಎಂದರು.ರಾಜ್ಯ ಜಂಟಿ ಕಾರ್ಯದರ್ಶಿ ದಾವಲಸಾಬ್ ನಧಾಫ ಮಾತನಾಡಿ, ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಾಮಾಜಿಕ ವಲಯ ಅರಣ್ಯ ಅಧಿಕಾರಿಗಳಿಗೆ ೨೦೦೧ ೨೬ಮನೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ವರಕವಿ ಡಾ. ದ.ರಾ.ಬೇಂದ್ರೆ ಅವರ 130 ನೆ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಮಹಾವಿದ್ಯಾಲಯದ ಡಾ. ಫ.ಗು.ಹಳಕಟ್ಟಿ ಕನ್ನಡ ಸಂಘದ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಶಿಕ್ಷಕರು ಮತ್ತು ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಶಿಲ್ಪಾ ಭಸ್ಮೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಬೇಂದ್ರೆ ಅವರ ಕವನಗಳು ಯುವಜನರಲ್ಲಿ ಚೈತನ್ಯ, ದೇಶ ಭಕ್ತಿ, ಮತ್ತು ಬದುಕಿನ ನೈಜ ಪ್ರೀತಿಯನ್ನು ಮೂಡಿಸುವ ಅದ್ಭುತ ಶಕ್ತಿಯನ್ನು ಹೊಂದಿವೆ ಎಂದು ಹೇಳಿದರು.ಗೌರವ ಉಪಸ್ಥಿತರಾಗಿ ಅಂಜುಮನ್ B.Ed ಕಾಲೇಜು ಪ್ರಾಚಾರ್ಯೆ ಡಾ.ಶಾರದಾಮಣಿ ಹುಣಶಾಳ ಅವರು, ಬೇಂದ್ರೆ ಅವರಿಗೆ ಜೀವನವೇ ಕಾವ್ಯ – ಕಾವ್ಯವೇ ಜೀವನವಾಗಿತ್ತು. ಕುವೆಂಪು, ಬೇಂದ್ರೆ ಇವರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳು. ಅವರು ಸಾಗಿ ಬಂದ ಧಿವ್ಯಪಥ ನಮ್ಮ ಮುಂದೆ ಇದೆ. ಅವರ ನೆನಪು ನಮ್ಮಲ್ಲಿ ನಾಡು-ನುಡಿಯ ಅಭಿಮಾನವನ್ನು ಉಕ್ಕಿಸಲಿ ಎಂದು ಆಶಿಸಿದರು.ಅಧ್ಯಕ್ಷ ಸ್ಥಾನ ವಹಿಸಿದ, ಮಹಾವಿದ್ಯಾಲಯ ಆಡಳಿತಗಾರ ಕು.ಮುಬೀನಾ ಮುಶ್ರೀಫ್ ಮಾತನಾಡಿದರು.ಕನ್ನಡ ವಿಭಾಗದ…
ಉದಯರಶ್ಮಿ ದಿನಪತ್ರಿಕೆ ಸರಗೂರು: ಹೆಚ್ ಡಿ ಕೋಟೆ ತಾಲೂಕಿನ ಜನರ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದ ಹುತಾತ್ಮ ಅರ್ಜುನ ಆನೆಯ ನೆನಪಿಗಾಗಿ ಮಾವುತ ಸಿನಿಮಾ ಮಾಡಿದ್ದೇವೆ. ತೆರೆ ಮೇಲೆ ಅದ್ಭುತವಾಗಿ ಮೂಡಿಬಂದಿದೆ. ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ನೋಡದೆ ಇರುವವರು, ಅರ್ಜುನ ಆನೆಯನ್ನು ಮತ್ತೊಮ್ಮೆ ನೋಡಬೇಕು ಎನ್ನುವವರು ದಯವಿಟ್ಟು ಥಿಯೇಟರ್ ಗೆ ಬಂದು ಸಿನಿಮಾ ನೋಡಿ, ರೈತನ ಮಗನಿಗೆ ಆಶೀರ್ವಾದ ಮಾಡಿ ಬೆಳೆಸಬೇಕೆಂದು ನಟ ಲಕ್ಷ್ಮೀಪತಿ ಬಾಲಾಜಿ ಮನವಿ ಮಾಡಿದರು.ಚಿತ್ರತಂಡದ ಜೊತೆ ಸರಗೂರು ಪಟ್ಟಣದ ಶಂಕರ್ ಥಿಯೇಟರ್ ಗೆ ಆಗಮಿಸಿ ನಟ ಲಕ್ಷ್ಮೀಪತಿ ಬಾಲಾಜಿ ಪ್ರೇಕ್ಷಕರ ಜೊತೆ ಸಿನಿಮಾ ನೋಡಿದರು.ಅಭಿಮಾನಿಗಳ ಪ್ರೀತಿ, ವಿಶ್ವಾಸ ಕಂಡು ಭಾವುಕರಾದರು.ಈ ವೇಳೆ ಮಾತನಾಡಿದ ಲಕ್ಷ್ಮೀಪತಿ ಬಾಲಾಜಿ, ಸರಗೂರಿನಲ್ಲಿ ಹೌಸ್ ಫುಲ್ ಆಗಿರೋದು ತುಂಬಾ ಖುಷಿಯಾಗಿದೆ. ಅರ್ಜುನನ್ನು ಮತ್ತೆ ತೆರೆ ಮೇಲೆ ತರಲು ಬಹಳ ಇಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಕಾಡಿನ ಸಂರಕ್ಷಣೆ ಮಾತ್ರವಲ್ಲ. ಸಿನಿಮಾದಲ್ಲಿ ಕೊನೆವರೆಗೂ ಸಸ್ಪೆನ್ಸ್ ಕಾಪಾಡಿಕೊಂಡು ಬಂದಿದ್ದೇವೆ. ಕ್ಯೂಟ್ ಲವ್ ಸ್ಟೋರಿ ಇದೆ.…
