Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಮಾನವರಾದ ನಮ್ಮ ಜೀವನದಲ್ಲಿ ಎಲ್ಲದರಲ್ಲಿಯೂ ಯಶಸ್ವಿ ಕಾಣಬೇಕಾದರೆ ಮೊದಲು ದೇಹ ಬಲಿಷ್ಠವಾಗಿರಬೇಕು, ಅಂದರೆ ಮನಸ್ಸು ಕೂಡಾ ಬಲಿಷ್ಠವಾಗಿರುತ್ತದೆ ಎಂದು ಸ್ಥಳೀಯ ಪೋಲೀಸ್ಠಾಣೆಯ ಪಿಎಸ್ಐ ಶ್ರೀಮತಿ ಜ್ಯೋತಿ ಖೋತ್ ಅವರು ನುಡಿದರು.ಮಂಗಳವಾರ ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗದೇವರ ಜನ್ಮೋತ್ಸವ ಅಂಗವಾಗಿ ಸ್ಥಳೀಯ ಕ್ರೀಡಾ ಯುವ ಘಟಕ ಸಂಘಟನೆಯ ವತಿಯಿಂದ ಎಸ್ಕೆ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಲಾದ ಸಿದ್ದಲಿಂಗದೇವರ ಪ್ರಿಮಿಯರ್ ಲೀಗ್ ಸಿಸನ್ ೧(ಎಸ್ಪಿಎಲ್೧) ಕ್ರಿಕೇಟ್ ಪಂದ್ಯಾವಳಿಯನ್ನು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠವು ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿದ್ದು ಶ್ರೀ ಮಠದ ಶ್ರೇಯಸ್ಸು ಘನತೆಯನ್ನು ಹೆಚ್ಚಿಸುತ್ತಾ ಸಾಗಿದ ಮಠದ ಪೀಠಾದಿಪತಿ ಸಿದ್ದಲಿಂಗದೇವರ ಜನ್ಮದಿನೋತ್ಸವ ಅಂಗವಾಗಿ ಇಂದು ಏರ್ಪಡಿಸಲಾದ ಕ್ರೀಕೆಟ್ ಕ್ರೀಡಾಕೂಟವು ಜನಮನ ರಂಜಿಸುವಂತಾಗಲಿ ಎಂದು ಶುಭಹಾರೈಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತೀಯ ಜನತಾಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ(ಕೂಚಬಾಳ) ಅವರು ಮಾತನಾಡಿ, ಭಾರತ ದೇಶವು ಜ್ಞಾನ ವಿಜ್ಞಾನವನ್ನು…
ಉದಯರಶ್ಮಿ ದಿನಪತ್ರಿಕೆ ಎಚ್.ಡಿ.ಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಮ್ಮ ದೇಶದಲ್ಲಿ ಶಿಕ್ಷಣಕ್ಕೆ ತನ್ನದೇ ಆದ ಶಕ್ತಿ ಇದೆ. ಇದನ್ನು 15 ರಿಂದ 25 ವರ್ಷದೊಳಗಿನ ವಿದ್ಯಾರ್ಥಿಗಳು ಬಳಸಿಕೊಂಡು ಶಿಕ್ಷಣ ಕಡೆ ಹೆಚ್ಚು ಗಮನ ಕೊಡಬೇಕು. ಆ 10 ವರ್ಷದಲ್ಲಿ ನೀವು ಕಲಿಕೆ ಕೂಡ ಗಮನಕೊಟ್ಟರೆ, ಮುಂದಿನ 60 ವರ್ಷ ನೆಮ್ಮದಿಯ ಜೀವನ ನಡೆಸಬಹುದು, ಸಮಾಜ ಗುರುತಿಸುವ ವ್ಯಕ್ತಿ ನೀವಾಗಬಹುದು ಎಂದು ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ. ಶಿವಕುಮಾರ್ ಹೇಳಿದರು.ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಕೋಟೆ ಮತ್ತು ಸರಗೂರು ತಾಲೂಕಿನ ಮಾದರ ಮಹಾಸಭಾ, ಡಾ. ಬಾಬು ಜಗಜೀವನ ರಾಮ್ ವಿಚಾರ ವೇದಿಕೆ ಹಾಗೂ ಮಾತಂಗ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಿದ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಸಮಯ ಎಂಬುದು ಸಂಪತ್ತು ಇದ್ದಂತೆ, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಇದನ್ನು ಹಾಳುಮಾಡಿಕೊಳ್ಳಬಾರದು, ದಿನದ 24 ಗಂಟೆಯಲ್ಲಿ ಆರು ಗಂಟೆಯನ್ನಾದರೂ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸದ್ಯದ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯಿಂದಾಗಿ ನೂತನ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಮಂತ್ರಿ ಮಂಡಲ ವಿಸ್ತಾರವಾಗಲಿದೆ. ಉಪಮುಖ್ಯಮಂತ್ರಿಗಳ ಸ್ಥಾನಗಳು ಭರ್ತಿಯಾಗಲಿವೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಒಂದೊಮ್ಮೆ ಉಪ ಮುಖ್ಯಮಂತ್ರಿಗಳ ಸ್ಥಾನ ನೀಡುವುದೇ ಆದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮಾದ್ಯತೆ ಕೊಡಬೇಕು. ಅದರಲ್ಲೂ ವಿಶೇಷವಾಗಿ ಹಲವಾರು ಬಾರಿ ಶಾಸಕರಾಗಿ, ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸೈ ಎನಿಸಿಕೊಂಡದ್ದಲ್ಲದೇ ಸಜ್ಜನ ರಾಜಕಾರಣಿ ಎಂದೇ ಪ್ರಚಲಿತವಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಜವಳಿ ಮತ್ತು ಸಕ್ಕರೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಬಸವನ ಬಾಗೇವಾಡಿ ಕ್ಷೇತ್ರದ ಶಿವಾನಂದ ಪಾಟೀಲರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ನೀಡಬೇಕೆಂದು ಸಿಂದಗಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸಿಂದಗಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಾಂತವೀರ ಬಿರಾದಾರ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಾಯಿಕೊಡೆಗಳಂತೆ ಹೆಮ್ಮರವಾಗಿ ಬೆಳೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಹಾವಳಿಗೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಮಿತಿಮೀರಿದ ಡೋನೇಶನ್ ಹಾವಳಿ ಕೂಡಲೇ ತಡೆಗಟ್ಟಬೇಕು ಎಂದು ತಹಶಿಲ್ದಾರ ಬಿ.ಎಸ್ ಕಡಕಭಾವಿ ಅವರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಇಂಡಿ ತಾಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಅನೀಲ ಕೋಳಿ ಮಾತನಾಡಿ, ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳಲ್ಲಿ ಡೋನೇಶನ್ ಹಾವಳಿ ಹೆಚ್ಚಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿದ್ದು, ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ಶಿಕ್ಷಣ ಶುಲ್ಕವನ್ನು ಪಡೆಯುತ್ತಿವೆ. ಎಲ್ಕೆಜಿಯಿಂದ ಎಸ್.ಎಸ್.ಎಲ್.ಸಿ. ವರೆಗೂ ಕನಿಷ್ಠ ₹ 10 ಸಾವಿರದಿಂದ ರಿಂದ ಗರಿಷ್ಠ ₹ 65 ಸಾವಿರ ಶಿಕ್ಷಣ ಶುಲ್ಕು ಪಡೆಯುತ್ತಿವೆ ಮತ್ತು ಪಠ್ಯಪುಸ್ತಕ, ಶಾಲಾಸಮವಸ್ತ್ರ, ಸ್ಕೂಲ್ ಬ್ಯಾಗ್, ಶಾಲಾ ವಾಹನ ಇತರೆ ಶುಲ್ಕ ಸೇರಿದರೆ ಪ್ರತಿವರ್ಷ ₹ 30 ರಿಂದ ₹ 50 ಸಾವಿರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸದ್ಗುರು ದೊರೆಯುವುದು ಸುಲಭವಲ್ಲ. ದೊರೆತ ಗುರುವನ್ನು ಆರಾಧಿಸಬೇಕು. ಗುರುವಿನ ಬಗ್ಗೆ ಸಂಶಯ ಬೇಡ. ನಾವು ಯಾರ ಸಂಗ ಮಾಡುತ್ತೇವೆಯೋ ಅವರಂತಾಗುತ್ತೇವೆ. ಅದಕ್ಕೆ ಸಂಗ ಎನ್ನುವುದು ಬಹಳ ಮುಖ್ಯ ಎಂದು ವಿಜಯಪುರದ ಕೈವಲ್ಯ ಕುಟೀರದ ಪ್ರಣವ ಪ್ರಕಾಶ ಮಹಾರಾಜರು ಹೇಳಿದರು.ಸಿಂದಗಿ ನಗರದ ಸಾರಂಗಮಠದ ಲಿಂ.ಸಿದ್ದಲಿಂಗಮಹಾಸ್ವಾಮೀಜಿ ಕಾನ್ಫರೆನ್ಸ್ ಹಾಲ್ನಲ್ಲಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡ ೩೫೫ನೇ ಸದ್ವಿಚಾರ ಗೋಷ್ಠಿಯಲ್ಲಿ ಉನಸ್ಯಾಸ ನೀಡಿ ಮಾತನಾಡಿದ ಅವರು, ನಾನೇ ಬ್ರಹ್ಮ ಎನ್ನುವ ಸತ್ಯವನ್ನು ತಿಳಿದು ಬದುಕಬೇಕು. ನಾನೇ ಬ್ರಹ್ಮ ಎನ್ನುವುದು ದೃಢವಾಗಬೇಕಾದರೆ ಒಳ್ಳೆಯವರ ಸಹವಾಸ ಮಾಡಬೇಕು. ಸಮಾಜದ ಓರೆ ಕೋರೆಗಳನ್ನು ತಿದ್ದುವವರು ನಿಜವಾದ ಸಮರ್ಥನೆಯ ಗುರುಗಳು. ಈ ಸಾಲಿನಲ್ಲಿ ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವರು ಸಮರ್ಥ ಗುರುಗಳಾಗಿದ್ದಾರೆ. ಅವರನ್ನು ಪಡೆದ ನಾವು ನಿವೆಲ್ಲ ಧನ್ಯರು ಎಂದರು.ಈ ವೇಳೆ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪಾವನ ಸಾನಿಧ್ಯ ವಹಿಸಿದ್ದರು. ಸಮ್ಮುಖವನ್ನು ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಚ್.ಟಿ.ಕುಲಕರ್ಣಿ, ಶರಣಗೌಡ ಬಿರಾದಾರ, ವಿರೇಶ ಜೋಗುರ, ಮುಕ್ತಾಯಕ್ಕ ಕತ್ತಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದ ದಲಿತ ಸಮುದಾಯದ ಆಶೋತ್ತರಗಳಿಗೆ ಧ್ವನಿಯಾಗಿರುವ ಮಹಾದೇವಪ್ಪ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ನಾಯಕತ್ವ ಮತ್ತು ಆಡಳಿತ ಅನುಭವವನ್ನು ಪರಿಗಣಿಸಿ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವುದು ಸೂಕ್ತ. “ಸಾಮಾಜಿಕ ನ್ಯಾಯದ ಪರವಾಗಿ ನಿರಂತರ ಹೋರಾಟ ನಡೆಸಿರುವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಸರ್ಕಾರದಲ್ಲಿ ಇನ್ನಷ್ಟು ಮಹತ್ವದ ಜವಾಬ್ದಾರಿ ನೀಡಬೇಕು ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಮುಖಂಡರು ಒತ್ತಾಯಿಸಿದ್ದಾರೆ.ರಾಜ್ಯ ಸರ್ಕಾರದಲ್ಲಿ ಹಿರಿಯ ದಲಿತ ನಾಯಕರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು. ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ.ಹೆಚ್.ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಇದರಿಂದ ದಲಿತ ಸಮುದಾಯದ ಆಶಯಗಳಿಗೆ ಹೆಚ್ಚಿನ ಬಲ ದೊರೆಯಲಿದೆ ಎಂದು ದಲಿತ ಮುಖಂಡ ರಾಜಶೇಖರ ಕೂಚಬಾಳ ಮನವಿ ಮಾಡಿದ್ದಾರೆ.
ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ ಪೂ ಕಾಲೇಜಿನಲ್ಲಿ ಅದ್ದೂರಿಯಾಗಿ ನಡೆದ ಸ್ವಾಗತ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐಸ್ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆ ಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್ಕ್ರೀಮ್ ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದು ಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟು ಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮ ಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕು ನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್ ಎಂ ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ೨೦೨೬-೨೭ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು; ವಿದ್ಯೆ ಎನ್ನುವುದು ತಪ್ಪಸ್ಸಿದ್ದಂತೆ, ಸಂತ ಮಹಾಂತ ಋಷಿಮುನಿಗಳು ಏಕಾಗ್ರತೆಯಿಂದ ತಪಸ್ಸು ಮಾಡಿ ಆತ್ಮ ಸಾಕ್ಷಾತ್ಕಾರ ಮಾಡಿಕೊಂಡಂತೆ ವಿದ್ಯಾರ್ಥಿಗಳು ಸಹ ವಿದ್ಯೆ ಎನ್ನುವ ತಪಸ್ಸನ್ನು ಏಕಾಗ್ರತೆಯಿಂದ ಮಾಡಿದಲ್ಲಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮೀಪದ ಕೃಷ್ಣಾ ನದಿಯಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿರುವುದನ್ನು ಖಂಡಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ 218ರ ಕೊಲ್ಹಾರ ಸೇತುವೆ ಪಕ್ಕದ ತೋಟದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಡಂಪರ್ ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ಸ್ಥಳದಲ್ಲಿ ರೈತರು ಡಂಪರ್ಗಳನ್ನು ನಿಲ್ಲಿಸಿ, ಅಕ್ರಮ ಮಣ್ಣು ಸಾಗಣೆಗೆ ತಕ್ಷಣ ಕಡಿವಾಣ ಹಾಕುವಂತೆ ಆಗ್ರಹಿಸಿದರು.ಡಂಪರ್ಗಳಲ್ಲಿ ನಿಯಮ ಮೀರಿ ಮಣ್ಣು ತುಂಬಿ ಸಾಗಿಸಲಾಗುತ್ತಿದ್ದು, ವಾಹನ ಸಂಚಾರದಿಂದ ಏಳುವ ಭಾರೀ ಧೂಳು ಬೆಳೆಗಳ ಮೇಲೆ ಕುಳಿತು ಬೆಳೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದರು.ರೈತರಾದ ಮಲ್ಲಪ್ಪ ಗಾಣಿಗೇರ ಮತ್ತು ಲಕ್ಷ್ಮಣ್ ಅಂಬಿಗೇರ ಮಾತನಾಡಿ, “ನದಿಯಲ್ಲಿ ನೀರು ಇಳಿಮುಖವಾಗುತ್ತಿದ್ದಂತೆಯೇ ಮಣ್ಣು ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. “ಪೊಲೀಸ್ ದೂರು ನೀಡಿ” ಎಂದು ಹೇಳಿ ಅಧಿಕಾರಿಗಳು ಸಮಸ್ಯೆಯನ್ನು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಡಂಪರ್ಗಳ ಅತಿಯಾದ ಓಡಾಟದಿಂದ…
ಕಾಂಗ್ರೆಸ್ ಪಕ್ಷದ ಯುವ ಮುಖಂಡ ಬಾಪೂಗೌಡ ಎಂ ಪಾಟೀಲ್ (ಕಣ್ಣಗುಡ್ಡಿಹಾಳ್) ಒತ್ತಾಯ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸಚಿವ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಬಾಪೂಗೌಡ ಎಂ ಪಾಟೀಲ್ (ಕಣ್ಣಗುಡ್ಡಿಹಾಳ್) ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಕಳೆದ 20 ವರ್ಷಗಳಿಂದ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಂಡ ಇಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಲಾಡ್ಯಾ ಸಾದಿಸಿ ಅಧಿಕಾರದಲ್ಲಿದ್ದವು. ಇಂತಹ ಬಿಜೆಪಿ ಬದ್ರ ಕೋಟೆ ಎಂದು 4 ಬಾರಿ ಆಡಳಿತ ಹೊಂದಿರುವ ಸಿಂದಗಿ ಮತಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಸುಮಾರು 63000 ಮತ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕಟ್ಟಿಕೊಂಡರು. ಮುಂದೆ 2023 ಸಾರ್ವಜನಿಕ ಚುನಾವಣೆಯಲ್ಲಿ 8600 ಮತಗಳನ್ನ ಪಡೆಯುವ ಮೂಲಕ 31000 ಸಾವಿರ ಅಂತರದಲ್ಲಿ ಸೋತಿರುವ ಕಾಂಗ್ರೆಸ್ ಪಕ್ಷವನ್ನು ಇತಿಹಾಸ ಸೃಷ್ಟಿಸಿ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಿದರು. ಅತ್ಯಂತ ಕಡಿಮೆ ಅವಧಿಯಲ್ಲಿ ಸಾಕಷ್ಟು ಅನುದಾನ ತಂದು ಸಿಂದಗಿಯನ್ನು ಮಾದರಿಯ…
