Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಬುರಗಿ: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾದ ಅಂಶಗಳನ್ನು ಅಳವಡಿಸಿ 2026 27ನೇ ಸಾಲಿನ ಹಣಕಾಸು ವರ್ಷದಿಂದ ಜಾರಿಗೆಗೊಳಿಸಲು ಸಿದ್ಧಪಡಿಸಲಾಗಿರುವ ಹೊಸ ಜಾಹೀರಾತು ನೀತಿಯನ್ನು ಕಲ್ಯಾಣ ಕರ್ನಾಟಕ ಸಂಪಾದಕರ ಸಂಘ ಕಲಬುರಗಿ ವಿಭಾಗ ತೀವ್ರವಾಗಿ ಖಂಡಿಸಿದೆ. ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿರುವ ಅಂಶಗಳನ್ನು ಕೈಬಿಡುವಂತೆ ಮಾರ್ಚ್ 17ರಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗಿದೆ.ಸಂಘದ ಪದಾಧಿಕಾರಿಗಳಾದ ಸುರೇಶ್ ಗೌರೆ, ಗುರುರಾಜ್ ಕುಲಕರ್ಣಿ, ಆನಂದ್ ಮಣ್ಣೂರ, ಹನುಮಂತ್ ರಾವ್ ಭೋಧನ್ ಕರ್ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಅನೇಕ ದಶಕಗಳಿಂದ ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದೆ ಪರಿಗಣಿಸಲಾದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು ಹೊಸ ಜಾಹೀರಾತು ನೀತಿಯಿಂದ ಸಂಪೂರ್ಣ ಸ್ಥಗಿತ ಗೊಳ್ಳುವ ಆತಂಕ ಎದುರಾಗಿದೆ. ಸಣ್ಣ ಪತ್ರಿಕೆಗಳ ಬೆಳವಣಿಗೆಗಾಗಿ ಪ್ರೋತ್ಸಾಹ ನೀಡುವ ಸಲುವಾಗಿ ಹೊಸ ಜಾಹೀರಾತು ನೀತಿ ಕೈ ಬಿಟ್ಟು ಎಂದಿನಂತೆ ಹಳೆಯ ಪ್ರೋತ್ಸಾಹ ನೀತಿಯನ್ನು ಮುಂದುವರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿಕೊಂಡಿದ್ದವು. ಕೌಟುಂಬಿಕ ಸೌಹಾರ್ದ ಸಂಬಂಧಗಳು ಗಟ್ಟಿಯಾಗಿದ್ದವು. ಅವಿಭಕ್ತ ಕುಟುಂಬದಲ್ಲಿ ಮಾನವೀಯ ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮಾದರಿಯ ಜೀವನ ನಡೆಸುತ್ತಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರ ಸಂಜೆ ಅಥಣಿ ರಸ್ತೆಯ ನವರಸಪೂರ ಸೇನಾ ನಗರದಲ್ಲಿ ಮೂರನೇ ವಷ೯ದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಅವಿಭಕ್ತ ಕುಟುಂಬದ ಮಹತ್ವ ಕುರಿತು ಉಪನ್ಯಾಸ ನೀಡಿದ ಹಾಸಿಂಪೀರ ವಾಲಿಕಾರ ಕುಟುಂಬದ ಹಿರಿಯ ಸದಸ್ಯರಿಗೆ ಗೌರವ, ಕಿರಿಯ ಸದಸ್ಯರಿಗೆ ವಾತ್ಸಲ್ಯ ಹಾಗೂ ಸಾಮೂಹಿಕ ಬೋಜನ.ಕುಟುಂಬದ ಅಭಿಮಾನ ಹಾಗೂ ಕುಟುಂಬದಲ್ಲಿ ಅನೇಕ ಜನ ಸಹೋದರರು. ಮಕ್ಕಳು ಅನ್ಯೋನ್ಯತೆಯಿಂದ ಬದುಕುತ್ತಿದ್ದರು ಇಂದು ವಿಭಕ್ತ ಕುಟುಂಬದಲ್ಲಿ ಗಂಡ ಹೆಂಡತಿ ಮಾತ್ರ ಇದ್ದು ತಮ್ಮ ಮಕ್ಕಳೊಂದಿಗೆ ಬದಕುತ್ತಿದ್ದಾರೆ ಎಂದರುಶಿಕ್ಷಣ ಇಲಾಖೆಯ ವಿಶ್ರಾಂತ ಅಧಿಕಾರಿ ಎಸ್ ಎಲ್ ಇಂಗಳೇಶ್ವರ ಮುಖ್ಯ ಅತಿಥಿಯಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರೆಲ್ಲರೂ ಅವಿಭಕ್ತ ಕುಟುಂಬದಲ್ಲಿ ಬೆಳೆದು ದೊಡ್ಡವರಾದವರು. ನಗರೀಕರಣ…

Read More

ವಿಜಯಪುರದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಸುಜಲಾಮ್ ಆಪ್ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜನರಿಗಾಗಿ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನೀರು ಮಾನವ ಸಂಕುಲದ ಒಂದು ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಗ್ರಾಮೀಣ ಜನರಿಗೆ ಕುಡಿಯುವ ನೀರು ಪೂರೈಸುವಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮವಹಿಸಬೇಕು ಎಂದರು.ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಜಾಗೃತಿ ವಹಿಸಬೇಕು. ಸರ್ಕಾರವು ಅಭಿವೃದ್ಧಿಪಡಿಸಿದ ಸುಜಲಾಮ್ ಆಪ್ ಬಗ್ಗೆ ಮಾಹಿತಿ ತಿಳಿದುಕೊಂಡು, ಮುಂಬರುವ…

Read More

ಇಲಾಖೆಯಲ್ಲಿ ಸುಧಾರಣೆಗಳನ್ನು ತರಲು ಮುಖ್ಯಮಂತ್ರಿ & ಅಧಿಕಾರಿಗಳೊಂದಿಗೆ ಸಭೆ | ವಿಧಾನಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಮೂಲಕ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ A ಮತ್ತು B) ನೇಮಕಾತಿಯನ್ನು ಪ್ರತಿ ವರ್ಷ ಪ್ರಕಟಿಸಲು ಸರ್ಕಾರ ಸಿದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ದುರುಪಯೋಗ ಮತ್ತು ನ್ಯಾಯಾಂಗ ವ್ಯಾಜ್ಯಗಳನ್ನು ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅನುಸರಿಸುವ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದರು.ಇಲಾಖೆಯಲ್ಲಿ ಸುಧಾರಣೆಗಳನ್ನು ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಮತ್ತು ಡಿಪಿಎಆರ್ (DPAR) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದರು.ನೇಮಕಾತಿ ಅಧಿಸೂಚನೆ ಸಾಮಾನ್ಯವಾಗಿ ನಾಲ್ಕು ವರ್ಷಕ್ಕೊಮ್ಮೆ ಹೊರಡಿಸುವುದರಿಂದ, ನಿರಂತರವಾಗಿ ಪರೀಕ್ಷೆ ಬರೆಯಲು ವಯೋಮಿತಿ ಅಡ್ಡಿಯಾಗುವ ಕಾರಣ ಯುವ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಿಂದ ಕೆಪಿಎಸ್ ಸಿ ಹೆಚ್ಚು ವ್ಯಾಜ್ಯಗಳನ್ನು ಎದುರಿಸುತ್ತಿದೆ ಎಂದರು.ಯುಪಿಎಸ್ ಸಿ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೆಪಿಎಸ್ ಸಿಯೊಂದಿಗೆ ಚರ್ಚಿಸಿ…

Read More

ಲೇಖನ- ಸಚೀನ ಹೆಬ್ಬಾಳಕರುಣಿಕರು,ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಆಲಮಟ್ಟಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ದಯವೇ ಧರ್ಮದ ಮೂಲವಯ್ಯಾ ಎಂಬ ಬಸವಣ್ಣನವರ ಮಾನನೀಯ ತತ್ವಸಾರ ವಚನದ ಪ್ರತಿಪಾದಕರಾಗಿ ಗದುಗಿನ ತೋಂಟದ ಡಾ, ಸಿದ್ದಲಿಂಗ ಮಹಾಸ್ವಾಮಿಗಳು ಗೈದಿರುವ ಸಮಾಜಮುಖಿ ಕಾಯಕಗಳು ಆವಣೀ೯ಯ.ಪಂಚ ಸೂತಕಗಳಾದ ಜನನ ಸೂತಕ,ಮರಣ ಸೂತಕ, ಜಾತಿಸೂತಕ, ಉಚೇಷ್ಠ ಸೂತಕ, ರಜ ಸೂತಕಗಳನ್ನು ಆಚರಿಸದೆ, ಜಗತ್ತಿಗೆ ಒಂದೇ ಕುಲ ಅದು ಮಾನವ ಕುಲ.ಅಲ್ಲಿ ದೀನ ದುಃಖಿತರನ್ನು ಪಾಪಿ ಪತಿತರನ್ನು ಕಂಡು,ಅವರ ಏಳಿಗೆಗೆ ಶ್ರಮಿಸಿ ಸಕಲ ಜೀವಾತ್ಮರಿಗೆ ಒಳ್ಳೆಯದನ್ನು ಬಯಸುವವನೇ ಮಾನವತಾವಾದಿ. ಹೊರತು ಜಾತಿ ಧರ್ಮ ವರ್ಣ ಆಧಾರದ ಮೇಲೆ ಜನರಲ್ಲಿ ಬಿರುಕು ಬಿಟ್ಟು ಅಧಿಕಾರ,ಹಣ,ಆಸ್ತಿ ದಾಹದ ಹಿಂದೆ ಬಿದ್ದಿರುವ ಮನುಜ ಮಾನವತಾವಾದಿ ಆಗಲಾರ ಎಂದು ಸಹಜ ಜನರಿಗೆ ಸರಳ ಅರ್ಥಗತವಾಗಿ ಮನಮುಟ್ಟುವಂತೆ ಸಮಾನತೆಯ ಮಾತನ್ನು ಸಾಮರಸ್ಯ ರಸಾನದ ಅತ್ಯಮೂಲ್ಯ ಜೀವ ಚೈತ್ರ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳು ಸದಾ ನುಡಿಯುತ್ತಲೇ ಬಂದವರು. ವೈಚಾರಿಕ ಭಾವದ ಖಡಕ್ ಕಾವಿಧಾರಿ ಎಂದೇ ಹೆಸರಾಗಿದ್ದ ಕನ್ನಡದ ಕುಲಗುರು ತೋಂಟದ ಡಾ,ಸಿದ್ದಲಿಂಗ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಇದನ್ನು ಮಹಾತ್ಮರಿಂದಲೇ ಪಡೆದುಕೊಳ್ಳಬೇಕೆಂದು ಖೇಡಗಿ ವಿರಕ್ತಮಠದ ಶಿವ ಬಸವರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಬುಧವಾರ ತಾಲೂಕಿನ ಅಗಡಖೇಡ ಗ್ರಾಮದಲ್ಲಿ ಲಿಂ. ಪ್ರಭುಲಿಂಗೇಶ್ವರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾವು ಬದುಕಿನಲ್ಲಿ ಒಳ್ಳೆಯ ರೀತಿಯಾಗಿ ಇನ್ನೊಬ್ಬರಿಗೆ ಸಹಾಯ ಹಸ್ತ ನೀಡುವಂತ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಈ ಸಮಾಜ ಸುಂದರವಾಗಿ ಬೆಳೆಯಬಹುದೆಂದು ಅವರು ತಿಳಿಸಿ ಭಕ್ತರಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ದೈವಭಕ್ತಿ ಇರುವವರಿಗೆ ಗುರವಿನ ಆಶೀರ್ವಾದ ಇರುತ್ತದೆ ಎಂದರು.ಇಂಚಗೇರಿ ಬೃಹನ್ಮಮಠದ ಶಂಭುಲಿಂಗ ಶಿವಾಚಾರ್ಯರು ಹಾಗೂ ಚಡಚಣ ವಿರಕ್ತಮಠದ ಷಡಕ್ಷರಿ ಮಹಾಸ್ವಾಮಿಗಳು ಉಪಸ್ಥಿರಿದ್ದು ಆಶೀರ್ವಚನ ನೀಡಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮಾಂತರ ಪ್ರದೇಶಗಳಲ್ಲಿ ನಡೆದಾಗ ಮಾತ್ರ ಸಮಾಜದಲ್ಲಿ ನಾವು ಹಲವಾರು ವಿಷಯಗಳನ್ನು ತಿಳಿಯುತ್ತೇವೆ ಎಂದರುಜಾತ್ರಾ ಮಹೋತ್ಸವ ಅಂಗವಾಗಿ ಬೆಳಗ್ಗೆ ಲಿಂಗೈಕ್ಯ ಪ್ರಭುಲಿಂಗೇಶ್ವರ ಶಿವಯೋಗಿಗಳ ಕತೃ ಗದ್ದುಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು ತಾಲೂಕಿನಾದ್ಯಂತ ಶಾಂತಿಯುತವಾಗಿ ನಡೆದಿದೆ. ಪ್ರಥಮ ಭಾಷೆ ಕನ್ನಡ ಉರ್ದು ಮತ್ತು ಇಂಗ್ಲೀಷ್ ಮಾದ್ಯಮದಲ್ಲಿ ಆಯಾ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ಅನೇಕ ಕಡೆ ವಿದ್ಯಾರ್ಥಿಗಳನ್ನು ಹೂವು ನೀಡಿ ಬರಮಾಡಿಕೊಂಡರೆ ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ನು ನೀಡಿ ಸ್ವಾಗತಿಸಿದರು.ಒಟ್ಟು ೪೭೪೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು ೪೬೫೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೮೮ ವಿದ್ಯಾರ್ಥಿಗಳು ಪರೀಕ್ಷೆ ಗೈರಾಗಿದ್ದರು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಎ.ಒ.ಹೂಗಾರ ತಿಳಿಸಿದ್ದಾರೆ.ಸ್ಥಳಿಯ ಜಾಗೃತದಳದ ತಹಸೀಲ್ದಾರ ಬಿ.ಎಸ್.ಕಡಕಬಾವಿ, ತಾ.ಪಂ ಇಒ ಭೀಮಾಶಂಕರ ಕನ್ನೂರ ಮತ್ತು ಕ್ಷೇತ್ರಶಿಕ್ಷಣಾಧಿಕಾರಿ ಸಯಿದಾ ಮುಜಾವರ ಹಲವಾರು ಕೇಂದ್ರಗಳಿಗೆ ಭೇಟಿ ನೀಡಿದರು.ಸ್ಥಾನಿಕ ಜಾಗೃತದಳದವರು ಎಲ್ಲ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದರು. ೧೯ ಕೇಂದ್ರಗಳಲ್ಲೂ ಸಿ.ಸಿ.ಕ್ಯಾಮೇರಾ ಅಳವಡಿಸಲಾಗಿತ್ತು. ಜಿಲ್ಲಾಧಿಕಾರಿಯಾಗಲೀ ಶಿಕ್ಷಣ ಇಲಾಖೆ ಯಾವದೇ ಹಿರಿಯ ಅಧಿಕಾರಿಗಳು ತಮ್ಮ ಕಚೇರಿಯಿಂದಲೇ ಯಾವದೇ ಕೇಂದ್ರದ ಪರೀಕ್ಷೆ ನೋಡುವ ವ್ಯವಸ್ಥೆ ಮಾಡಲಾಗಿತ್ತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಹೊರ ವಲಯದ ಹಂಚನಾಳ ಕೆರೆಯ ಕಲುಷಿತ ನೀರನ್ನು ಸಂಸ್ಕರಿಸಬೇಕು ಹಾಗೂ ಕೆರೆ ಅಭಿವೃದ್ಧಿಪಡಿಸಿ ಸೌಂದರ್ಯೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ಇತ್ತೀಚೆಗೆ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಸಚಿವರು, ಪ್ರಾಧಿಕಾರದ ವತಿಯಿಂದ ೨೦೨೫-೨೬ ನೇ ಸಾಲಿನಲ್ಲಿ ಹಂಚನಾಳ ಕೆರೆಯ ಪುನರುಜ್ಜೀವನ ಹಾಗೂ ಸೌಂದರೀಕರಣ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.ಜೊತೆಗೆ ಹಾಲಿ ಇರುವ ಎಸ್.ಟಿ.ಪಿಯನ್ನು ಉನ್ನತೀಕರಿಸಿ, ಸಂಸ್ಕರಿಸಿದ ಶುದ್ದ ನೀರನ್ನು ಮಾತ್ರ ಹಂಚನಾಳ ಕೆರೆಗೆ ಬಿಡಬೇಕೆಂದು ಸೂಚಿಸಿದ್ದರು.ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕೈಗೊಂಡು ಬುಧವಾರ ಹಂಚನಾಳ ಕೆರೆಗೆ ಭೇಟಿ ನೀಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೆರೆಯ ಸುತ್ತಲೂ ೩೦ ಮೀ. ಅಗಲದ ಬಫರ್ ಕಡ್ಡಾಯವಾಗಿ ಮೀಸಲಿರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ನಗರಾಭಿವೃದ್ದಿ…

Read More

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕೈ ಜೋಡಿಸಬೇಕು ಎಂದರು.ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪೌಷ್ಟಿಕತೆ ನಿವಾರಣಾ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಕುರಿತಾಗಿ…

Read More

ಎಲ್ಲೆಲ್ಲೂ ಭಕ್ತಿ ಭಾವರಸಗಳ ಪರಿಮಳ | ಪಲ್ಲಕ್ಕಿಗಳ ಕಲರವ | ಕೃಷ್ಣೆಯ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಬುಧವಾರ ಬೆಳ್ಳಂಬೆಳಿಗ್ಗೆ ನೂರಾರು ದೇವ, ದೇವತೆಗಳ ಪಲ್ಲಕ್ಕಿಗಳ ಮಹಾಪೂರವೇ ಹರಿದು ಬಂದವು. ಕೃಷ್ಣಾ ನದಿ ತೀರದತ್ತ ಲಗ್ಗೆಯಿರಿಸಿ ಭಕ್ತಿ ಭಾವ ರಸಗಳ ಪರಿಮಳ ಬೀರಿದವು.ಎಲ್ಲೆಲ್ಲೂ ಪಲ್ಲಕ್ಕಿಗಳ ಕಲರವ. ಕೃಷ್ಣೆಯ ಪವಿತ್ರ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ನೋಡುವುದೇ ಒಂದು ಸುಂದರ ಅನುಭವದಂತಿತ್ತು. ಡೊಳ್ಳಿನ ನಿನಾದ. ಸಹಸ್ರಾರು ಜನರು ಪಲ್ಲಕ್ಕಿಯಲ್ಲಿ ದೇವರ ಮೂರ್ತಿ ತರುತ್ತಿರುವ ದೃಶ್ಯ, ಪಲ್ಲಕ್ಕಿಗಳ ಸ್ನಾನ, ಗುಂಪಾಗಿ ಅಡುಗೆ ಮಾಡಿ, ನೈವೇದ್ಯ ಸಮರ್ಪಿಸುವ ದೃಶ್ಯ ಕಂಡುಬಂದಿತು. ಭಾರತೀಯ ಪರಂಪರೆಯ ಪ್ರಕಾರ ಯುಗಾದಿಯಿಂದ ಹೊಸ ವರ್ಷ ಆರಂಭ. ಯುಗಾದಿಯು ವರ್ಷದ ಮೊದಲ ಹಬ್ಬ. ಧಾರ್ಮಿಕ ಚೌಕಟ್ಟಿನಲ್ಲಿ ವಿಶೇಷ ಮಹತ್ವ ಹೊಂದಿರುವ ಈ ದಿನ ಹೊಸ ವರ್ಷಕ್ಕೆ ಮುನ್ನುಡಿ ಬರೆದಿದೆ. ಹಾಗಾಗಿ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಲ್ಲಿ ದೇವರ ಉತ್ಸವ ಮೂರ್ತಿಗಳಿಗೆ ಸ್ನಾನ ಮಾಡಿಸುವುದು ಉತ್ತರ ಕರ್ನಾಟಕದ…

Read More