Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಇಡೀ ದೇಶದಲ್ಲಿ ಅಥವಾ ವಿಶ್ವದಲ್ಲಿ ಮನುಷ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದು ಈ ಆಧುನಿಕ ಕಾಲದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಯುಗದಲ್ಲಿ ಟೆಲಿಫೋನ್, ಮೊಬೈಲ್, ಸಾಮಾಜಿಕ ಜಾಲತಾಣಗಳು ಮುಂತಾದ ಕೆಲವನ್ನು ಹೆಸರಿಸಲಾಗುತ್ತದೆ. ಆದರೆ ಅದರಷ್ಟೇ ಪ್ರಾಮುಖ್ಯತೆ ಪಡೆದು ಅದಕ್ಕಿಂತ ಪ್ರಮುಖವಾಗಿ ಇಡೀ ಜನ ಸಮೂಹವನ್ನು ಫಿಸಿಕಲಿ ಅಂದ್ರೆ ಭೌತಿಕವಾಗಿ ಒಗ್ಗೂಡಿಸುವುದು ಬೃಹತ್ ಸಂಪರ್ಕ ಜಾಲ ವ್ಯವಸ್ಥೆ ಹೊಂದಿರುವ ಚಾಲಕರು ಎಂಬ ಚಲಿಸುವ ಜೀವಂತ ವಾಹನಗಳು. ಹೌದು, ಖಂಡಿತವಾಗಲೂ ಚಾಲಕರಿಗೆ ಜೀವಂತ ವಾಹನಗಳು ಎಂದು ಆತ್ಮಸಾಕ್ಷಿಯಾಗಿ ಕರೆಯಲೇಬೇಕಾಗುತ್ತದೆ.ಭಾರತದಂತಹ ಅತ್ಯಂತ ಸಂಕೀರ್ಣ ಭೌಗೋಳಿಕ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಚಾಲಕರು ಬಹು ಮುಖ್ಯಪಾತ್ರ ವಹಿಸುತ್ತಾರೆ. ಹೇಗೆ ಶಿಕ್ಷಕರು, ವೈದ್ಯರು, ಸೈನಿಕರು ಮುಂತಾದ ಅತ್ಯಂತ ಅವಶ್ಯಕ ವೃತ್ತಿಗಳಂತೆ ಚಾಲನಾ ವೃತ್ತಿಯು ಒಂದು ಮತ್ತು ಚಾಲಕರು ಅತ್ಯಂತ ಮಹತ್ವ ಪಡೆದಿದ್ದಾರೆ.ಚಾಲಕರಿಲ್ಲದ ದೇಶವನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಹಾಗೆಯೇ ಚಾಲಕರಿಲ್ಲದೆ ದೇಶವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಅಷ್ಟೊಂದು ಮಹತ್ವದ ಪಾತ್ರ ನಿರ್ವಹಿಸುವುದು ಚಾಲಕರು.ಹಾಗಾದರೆ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ‘ವಾಸ್ತವ ಪ್ರಪಂಚಕ್ಕೆ ಮಿತಿಗಳಿವೆ. ’ಕಲ್ಪನೆಯ ಪ್ರಪಂಚವು ಅಪಾರ’ ಎಂದಿದ್ದಾನೆ ತತ್ವಜ್ಞಾನಿ ಜೀನ್ ಜಾಕ್ಚೆಸ್ ರೂಸೋ. ನಾವು ಬೆಳೆಯುವುದಕ್ಕೆ ಅತ್ಯಗತ್ಯವಾಗಿ ಬೇಕಾದ ಎರಡು ಮುಖ್ಯ ಕೌಶಲ್ಯಗಳೆಂದರೆ: ಸೃಜನಶೀಲತೆ ಮತ್ತು ನಾವೀನ್ಯತೆ. ಅವು ಹೊಸ ಆಲೋಚನೆಗಳನ್ನು ಸೃಷ್ಟಿಸಲು, ಸಮಸ್ಯೆಗಳನ್ನು ಪರಿಹರಿಸಲು ಮತ್ತು ಬದಲಾಗುತ್ತಿರುವ ಸನ್ನಿವೇಶಗಳಿಗೆ ಹೊಂದಿಕೊಳ್ಳಲು ನಮಗೆ ಅನುವು ಮಾಡಿಕೊಡುತ್ತವೆ. ಕಲ್ಪನೆ ಮತ್ತು ಸೃಜನಶೀಲತೆ ಎಂಬ ಎರಡು ಪದಗಳನ್ನು ನಾವು ಹೆಚ್ಚಾಗಿ ಸಮಾನಾರ್ಥಕ ಪದಗಳಾಗಿ ಬಳಸುತ್ತೇವೆ. ಹೌದು ಅವು ನಿಕಟ ಸಂಬಂಧ ಹೊಂದಿವೆ. ಆದರೆ ಅವುಗಳ ನಡುವೆ ಒಂದು ಪ್ರಮುಖ ವ್ಯತ್ಯಾಸವಿದೆ.ಹೆಬ್ಬಾಗಿಲು‘ಕಲ್ಪನೆಯೇ ಸೃಜನಶೀಲತೆಗೆ ಹೆಬ್ಬಾಗಿಲು.’ ನಮ್ಮ ಕಲ್ಪನೆಯನ್ನು ತೊಡಗಿಸಿಕೊಳ್ಳದೇ ನಾವು ಯಾವುದೇ ಸೃಜನಶೀಲತೆಯನ್ನು ಮಾಡಲು ಸಾಧ್ಯವಿಲ್ಲ. ಹೊಸ ಯೋಜನೆ ಅಥವಾ ತಂತ್ರವನ್ನು ಅಭಿವೃದ್ಧಿಪಡಿಸುವಂತಹ ಸೃಜನಶೀಲ ಕೆಲಸದಲ್ಲಿ ತೊಡಗಿದಾಗ ನಮಗೆಲ್ಲ ಇದು ಸಂಭವಿಸುತ್ತದೆ. ಇದರಿಂದ ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ಇದು ಕಲ್ಪನಾಶೀಲರಾಗುವುದನ್ನು ಇನ್ನಷ್ಟು ಕಷ್ಟಕರವಾಗಿಸುತ್ತದೆ. ಬುದ್ಧಿಮತ್ತೆ ಮತ್ತು ವಿನ್ಯಾಸ ಚಿಂತನೆಯಂತಹ ವಿವಿಧ ತಂತ್ರಗಳು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಫೆ೧೫ ರಂದು ಜರುಗಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಅಂದು ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಎಲ್ಲ ಸರಕಾರಿ, ಅನುದಾನ ರಹಿತ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಆದೇಶಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮದವೇರಿದ ಎಮ್ಮೆಯೊಂದು ಇಲ್ಲಿನ ಬಸ್ ನಿಲ್ದಾಣದಲ್ಲಿ ನುಗ್ಗಿ ಇಬ್ಬರು ಬೈಕ್ ಸವಾರರಿಗೆ ಗುದ್ದಿ ಚಿಕ್ಕ ಪುಟ್ಟ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.ಏಕಾಏಕಿ ಬಸ್ ನಿಲ್ದಾಣಕ್ಕೆ ನುಗ್ಗಿದ ಎಮ್ಮೆ ವಾಹನಗಳ ಮೇಲೆ ನುಗ್ಗಲು ಆರಂಭಿಸಿದೆ. ಇದನ್ನು ಕಂಡ ಸಾರ್ವಜನಿಕರು ಕೆಲಹೊತ್ತು ಭಯಭೀತರಾಗಿದ್ದರು. ಬಳಿಕ ಪೊಲಿಸರಿಗೆ, ಪುರಸಭೆಯವರಿಗೆ ತಿಳಿಸಿದ್ದಾರೆ. ಎಮ್ಮೆಯನ್ನು ಹಿಡಿಯಲು ಸಾರ್ವಜನಿಕರು, ಪುರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟರೂ ಯಾರ ಕೈಗೂ ಸಿಗದೇ ಬಸ್ ನಿಲ್ದಾಣದಿಂದ ಕಾಲ್ಕಿತ್ತು, ಕಳೆಯ ಸರ್ಕಾರಿ ಆಸ್ಪತ್ರೆಯೊಳಗೆ ನುಗ್ಗಿತ್ತು. ಬಳಿಕ ಜೆಸಿಬಿ ಬಳಸಿದಾಗ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ದೈರ್ಯ ಮಾಡಿ ಎಮ್ಮೆಯ ಕುತ್ತಿಗೆ ಬಳಿಯ ಹಗ್ಗ ಹಿಡಿದಾಗ ಸೆರೆಯಾಯಿತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನಿಗದಿತ ಅವಧಿಯಲ್ಲಿ ಗುರಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ, ಜನನಿ ಸುರಕ್ಷಾ ಯೋಜನೆ ಹಾಗೂ ಹೆರಿಗೆಗಳ ವಿವರ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬಸ್ ನಿಲ್ದಾಣದಿಂದ ಅನುಗ್ರಹ ಕಣ್ಣಿನ ಆಸ್ಪತ್ರೆವರೆಗೆ ರಸ್ತೆ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲು ಕ್ರಮ ವಹಿಸಲಾಗುವುದು. ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ರೈತರಿಗೆ ಶೇ.೯೦ ರಷ್ಟು ಸಬ್ಸಿಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಸರ್ಕಾರದ ವಿವಿಧ ಯೋಜನೆಗಳಿದ್ದು, ಈ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಕಾರ್ಯಕ್ರಮಗಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಫೆ.೧೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜರಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣ, ವಿಜಯಪುರ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೆ ಸಂಜೆ ೬ ಗಂಟೆಯಿAದ ಮರುದಿನ ಬೆಳಿಗ್ಗೆ ೬ ಗಂಟೆಯವರೆಗೆ ಓಪನ್ ಡೆಲ್ಟಾ ಮುಖಾಂತರ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಈ ಅವಧಿಯಲ್ಲಿ ರೈತರು ನೀರಾವರಿ ಪಂಪಸೆಟ್ಗಳನ್ನು ಬಳಕೆ ಮಾಡದಂತೆ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.ರೈತರ ಮಕ್ಕಳ ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳಕಿನ ಅವಶ್ಯಕತೆಯನ್ನು ಗಮನಿಸಿ, ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೆ ಸಂಜೆ ೬ ರಿಂದ ಬೆಳಿಗ್ಗೆ ೬ ಗಂಟೆಯವರೆಗೆ ಸರ್ಕಾರದ ನಿರ್ದೇಶನದಂತೆ ೧೧ಕೆವ್ಹಿ ನೀರಾವರಿ ಪಂಪಸೆಟ್ ವಿದ್ಯುತ್ ಮಾರ್ಗಗಳ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಹಾಗೂ ಪ್ರತಿ ಮಾರ್ಗದ ಮೇಲೆ ಇರುವ ತೋಟದ ಮನೆಗಳಿಗೆ ಬೇಕಾಗುವ ವಿದ್ಯುತ್ ಲೆಕ್ಕಾಚಾರ ಮಾಡಿ ನಿಗದಿಪಡಿಸಲಾಗಿದೆ. ಒಂದು ವೇಳೆ ಈ ಅವಧಿಯಲ್ಲಿ ಪಂಪಸೆಟ್ ಬಳಕೆ ಮಾಡಿದರೆ ಮಾರ್ಗದ ಭಾರವು ನಿಗದಿತ ಭಾರಕ್ಕಿಂತ ಹೆಚ್ಚಾಗಿ ಅಟೋಮೆಟಿಕ್ ಟ್ರಿಪ್ ಆಗುವುದರಿಂದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅಡಚಣೆಯಾಗುತ್ತದೆ. ಆದ್ದರಿಂದ ರೈತರು ಈ ಅವಧಿಯಲ್ಲಿ ನೀರಾವರಿ ಪಂಪಸೆಟ್ಗಳನ್ನು ಬಳಕೆ ಮಾಡದೇ…
ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಗುಜರಾತನಲ್ಲಿರುವ ವಾಪಿ ಕನ್ನಡ ಸಂಘವು ಫೆಬ್ರುವರಿ 15ರಂದು ಸಾಯಂಕಾಲ ಐದು ಘಂಟೆಗೆ ಅಧ್ಯಕ್ಷೆ -ನಿಶಾ ಶೆಟ್ಟಿ, ಗೌರವ ಕಾರ್ಯದರ್ಶಿ – ವಿದ್ಯಾಧರ ಭಟ್, ಮಹಿಳಾ ಮುಖ್ಯಸ್ಥೆ – ಚಂದ್ರಿಕಾ ಕೋಟ್ಯಾನ, ಕಾರ್ಯಾಧ್ಯಕ್ಷರು -ಲಲಿತಾ ಕಾರಂತ, ವಿಶ್ವಸ್ಥರು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ 45 ನೆಯ ವಾರ್ಷಿಕೋತ್ಸವದ ಸಮಾರಂಭವನ್ನು ಹಮ್ಮಿಕೊಂಡಿದೆ. ಅದರ ಘನ ಅಧ್ಯಕ್ಷತೆಯನ್ನು ಕನ್ನಡ ನಾಡು -ನುಡಿಗೆ, ಶರಣ ತತ್ವ ಪ್ರಚಾರಕ್ಕೆ ಹಗಲಿರುಳು ದುಡಿಯುತ್ತಿರುವ ಕವಿಗಳು, ಲೇಖಕರು, ವಿಮರ್ಶಕರು, ಚಿಂತಕರು, ಉಪನ್ಯಾಸಕರು ಆಗಿ ಎಲ್ಲೆಡೆ ಪ್ರಸಿದ್ಧಿ ಪಡೆದ ಡಾ. ಶಶಿಕಾಂತ ಪಟ್ಟಣ -ಅಧ್ಯಕ್ಷರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ -ಪುಣೆ ಇವರು ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಬಸವತತ್ವ ಮತ್ತು ಕನ್ನಡನಾಡು -ನುಡಿಯ ಮಹತ್ವವನ್ನು ಗುಜರಾತನಲ್ಲಿರುವ ಕನ್ನಡಿಗರಿಗೆ ಉಣಬಡಿಸಲು ಹೊರಟಿದ್ದಾರೆ. ಅಕ್ಕನ ಅರಿವು ಮತ್ತು ವಚನ ಅಧ್ಯಯನ ವೇದಿಕೆಯ ಎಲ್ಲ ಆಜೀವ ಸದಸ್ಯರು, ದತ್ತಿ ದಾಸೋಹಿಗಳು, ವಿಶ್ವಸ್ಥರಾದ ಪ್ರೊ. ಶಾರದಾ ಪಾಟೀಲ್, ಶರಣ ಶಿವಾನಂದ ಕಲಕೇರಿ,…
ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ತಡೆಯುವ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸಬೇಕು. ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ರಸ್ತೆ ನಿಯಮಗಳ ಪಾಲನೆ ಮಾಡುವಂತೆ ವಾಹನ ಸವಾರರು-ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯ ಪ್ರಮುಖ ಸ್ಥಳಗಳಲ್ಲಿ ಕೈಕೊಳ್ಳಬೇಕಾದ ರಸ್ತೆ ಸುಧಾರಣೆ ಕ್ರಮಗಳ ಕುರಿತು ತಿಳಿಸಿದ ಅವರು, ಸೋಲಾಪೂರ ಬೈಪಾಸ್ ಸರ್ಕಲ್ನಲ್ಲಿ ಅಂಗಡಿಕಾರರು ರಸ್ತೆ ಒತ್ತುವರಿ ಮಾಡಿಕೊಂಡಿದ್ದಲ್ಲದೇ, ರಸ್ತೆಯ ಮುಂಭಾಗ ಎಲ್ಲೆಂದರಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.…
ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿಯ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಾದಕ ದ್ರವ್ಯಗಳ ಪರೀಕ್ಷಾ ಕಿಟ್ (ಡ್ರಗ್ ಡಿಟೆಕ್ಸನ್ ಕಿಟ್)ಗಳನ್ನು ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಯಲ್ಲಿ ಬಳಸಲು ಕ್ರಮವಹಿಸಬೇಕು. ಮಾದಕ ದ್ರವ್ಯ ಪರೀಕ್ಷೆ ನಡಸುವುದರಿಂದ ಮಾದಕ ದ್ರವ್ಯ ಸೇವನೆ ಪ್ರಮಾಣ ಕಡಿಮೆಗೊಳಿಸಬಹುದು.…
