Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ ೫ರಂದು ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.ತಿಕೋಟಾ ತಾಲೂಕಿನ ತಹಶೀಲ್ದಾರರಾದ ಸುರೇಶ ಚಾವಲರ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೨೪ ರಂದು ತಹಶೀಲ್ದಾರ ಅವರ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.ಸಭೆಯಲ್ಲಿ ತಾಲೂಕಾ ಪಂಚಾಯತಿಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಆರ್ ಬಿರಾದಾರ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳಾದ ರಘು ನಡುವಿನಮನಿ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆಲಮೇಲದಲ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣವು ಸುತ್ತ ಮತ್ತಲಿನ ಗ್ರಾಮದವರಿಗೆ ವ್ಯಾಪಾರ ಕೇಂದ್ರವಾಗಬೇಕು ಮತ್ತು ಆಲಮೇಲ ಅಭಿವೃದ್ದಿ ಹೊಂದಿದ ತಾಲೂಕು ಕೇಂದ್ರ ವಾಗಬೇಕು. ಈ ದಿಸೆಯಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬದ್ಧನಾಗಿರುವೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ನಿಗಮ ನಿಯಮಿತ ಉಪವಿಭಾಗದಿಂದ ಆಲಮೇಲ ಪಟ್ಟಣದಲ್ಲಿ ಗ್ರೇಡ್-೪ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.ಆಲಮೇಲದಲ್ಲಿ ಪ್ರಜಾಸೌದ ನಿರ್ಮಾಣಕ್ಕೆ ೮ ಕೋಟಿ ರೂ. ಮತ್ತು ಅಗ್ನಿಶಾಮಕ ದಳಕ್ಕೆ ೩.೫ ಕೋಟಿ ರೂ. ಬಾಲಕರ ವಸತಿ ನೀಲಯಕ್ಕೆ ೫ ಕೋಟಿ ರೂ. ಮಂಜುರು ಆಗಿದ್ದು ಆಲಮೇಲ ಪಟ್ಟಣಕ್ಕೆ ನನ್ನ ಮುಂದಿನ ಅಧಿಕಾರ ಅವದಿಯಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ಶಾಸಕ ಮನಗೂಳಿ ಹೇಳಿದರು.ಈ ಕಾರ್ಯಕ್ರಮದಲ್ಲಿ ಠಾಣ…

Read More

ಹಿರಿಯ ಸಿವ್ಹಿಲ್ ನ್ಯಾಯಧೀಶರ ಹಾಗೂ ಸದಸ್ಯ ಕಾರ್ಯದರ್ಶಿ, ಕಾನೂನು ಸೇವೆಗಳ ಪ್ರಾಧಿಕಾರ ಅರವಿಂದ ಹಾಗರಗಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ತಾವೆಲ್ಲರೂ ಕಂಕಣಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಅರವಿಂದ ಹಾಗರಗಿ ಕರೆ ನೀಡಿದರು.ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಸೋಮವಾರ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಭಾರತದಲ್ಲಿ ವಿಸ್ತಾರವಾಗುತ್ತಿರುವ ಅನೇಕ ರೋಗಗಳಲ್ಲಿ ಈ ಕ್ಷಯ ರೋಗ ಒಂದು. ಇದರ ನಿರ್ಮೂಲನೆಗೆ ತಿಳುವಳಿಕೆ ಅತ್ಯಗತ್ಯವಾಗಿದೆ. ಕ್ಷಯಮುಕ್ತ ಗ್ರಾಮ ಪಂಚಾಯತ್‌ಗಳಂತೆಯೇ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಜಿಲ್ಲೆಯ ಒಟ್ಟು ೭೯ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಯಾಗಿ ಆಯ್ಕೆಯಾಗಿದ್ದು, ಗ್ರಾಮ…

Read More

ವಿಜಯಪುರದಲ್ಲಿ ವಿಶ್ವ ಕ್ಷಯರೋಗ ದಿನ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯತಿ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು ಕ್ಷಯ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ವಿಭಾಗ ಹಾಗೂ ಜಿಲ್ಲಾ ಸರ್ಕಾರೇತರ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡ ವಿಶ್ವ ಕ್ಷಯರೋಗ ದಿನಾಚರಣೆ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ರೋಗವು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಸುಲಭವಾಗಿ ಹರಡುತ್ತದೆ. ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಷಯ ರೋಗದಿಂದ ಅನೇಕ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ರೋಗ ಮೈಕೋಬ್ಯಾಕ್ಟೀರಿಯಂ ಟ್ಯುಬರ್ಕುಲೋಸಿಸ್ ಎಂಬ ರೋಗದಿಂದ ಬರುತ್ತದೆ. ಇದು ವಾಸಿಯಾಗುವಂತಹ ರೋಗವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು ಸಾರ್ವಜನಿಕರಲ್ಲಿ ಈ ರೋಗದ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್ ೭ ರಿಂದ ೯ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷರ ವಿಭಾಗದಲ್ಲಿ ೪೫ ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಮಹಿಳಾ ವಿಭಾಗದಲ್ಲಿ ೪೦ ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಬ್ಯಾಡ್ಮಿಂಟನ್ (ಸಿಂಗಲ್ಸ್-ಡಬಲ್ಸ್), ಟೆನ್ನಿಸ್ (ಸಿಂಗಲ್ಸ್-ಡಬಲ್ಸ್), ಕೇರಂ (ಸಿಂಗಲ್ಸ್-ಡಬಲ್ಸ್), ಟೆನಿಕ್ವಾಯಿಟ್ (ಸಿಂಗಲ್ಸ್-ಡಬಲ್ಸ್), ಥ್ರೋಬಾಲ್, ಈಜು, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ, ಪಾಶ್ಚಾತ್ಯ ಗಾಯನ, ಜಾನಪದ ಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಕ್ಲಾಸಿಕಲ್, ನೃತ್ಯ, ಕಥಕ್, ಭರತನಾಟ್ಯ, ಮಣಿಪುರಿ, ಕುಚುಪುಡಿ, ಓಡಿಸ್ಸಿ, ಕಥಕಳಿ, ಕಿರುನಾಟಕ ಸ್ಪರ್ಧೆಗಳನ್ನು ಪುರುಷ ಮತ್ತು…

Read More

ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ದಿ-ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಎಂ.ಬಿ.ಪಾಟೀಲ ಭೂಮಿ ಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಶಿಕ್ಷಣ, ಯುವಕರಿಗೆ ಉದ್ಯೋಗ, ರಸ್ತೆ ಅಭಿವೃದ್ದಿ, ನೀರಾವರಿ, ವಿದ್ಯುತ್ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳಿಗೆ ಆದ್ಯತೆ ನೀಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಜನರ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಮದಗುಣಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಹಮ್ಮಿಕೊಂಡ ೦ ರಿಂದ ೫ ಕಿ.ಮೀ. ವರೆಗಿನ ೪ಕೋಟಿ ರೂ. ವೆಚ್ಚದ ಬಬಲೇಶ್ವರ ಮತಕ್ಷೇತ್ರದ ಶೇಗುಣಸಿ, ಮದಗುಣಕಿ, ಕೊಡಬಾಗಿ, ತಾಜಪುರ ಹಾಗೂ ಮಂಗಳೂರು ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ದಿಪಡಿಸುವ ಕಾಮಗಾರಿಗೆ ಭೂಮಿ ಪೂಜೆ ಹಾಗೂ ೨೦೨೪-೨೫ನೇ ಸಾಲಿನ ಕೆಎಸ್‌ಐಐಸಿ ಸಿ.ಆರ್.ಅನುದಾನದಲ್ಲಿ ಮದಗುಣಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ೫…

Read More

ಡಿಕೆಶಿ ವಜಾಗೊಳಿಸಿ ಅಥವಾ ಸಂವಿಧಾನ ಬದಲಾಯಿಸುವ ಯೋಜನೆ ಬಹಿರಂಗಪಡಿಸಿ | ಸದನದಲ್ಲಿ ಸಚಿವ ರಿಜಿಜು ತಪರಾಕಿ ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಆಡಳಿತಾರೂಢ ಬಿಜೆಪಿ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಯಿತು. ಲೋಕಸಭೆಯನ್ನು ಪದೇ ಪದೇ ಮುಂದೂಡಲಾಯಿತು.ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.ಆ ವ್ಯಕ್ತಿಯನ್ನು ವಜಾಗೊಳಿಸುವ ಬಗ್ಗೆ ಕಾಂಗ್ರೆಸ್ ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದ ರಿಜಿಜು, ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುವ ನೀವು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ಜೀಬಿನಲ್ಲಿಟ್ಟುಕೊಂಡು…

Read More

ಮುಸ್ಲಿಂ ಗುತ್ತಿಗೆ ಮೀಸಲಾತಿ, ೧೮ ಶಾಸಕರ ಅಮಾನತು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂ ಗುತ್ತಿಗೆ ಮೀಸಲಾತಿ ಹಾಗೂ ಅಧಿವೇಶನದಲ್ಲಿ ೧೮ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ನಗರದ ಅಂಬೇಡ್ಕರ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಕಲ್ಪಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ರಾಜ್ಯ ಸರ್ಕಾರದ ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.ರಾಜ್ಯ ಅಭಿವೃದ್ಧಿ ಕೆಲಸ ಮಾಡದೆ ಸಚಿವರು ಶಾಸಕರಗಳ ವಿರುದ್ಧ ಹನಿಟ್ರ್ಯಾಪ್ ಮಾಡುತ್ತಿರುವುದು ನಾಚಿಗೇಡಿತನದ ಸಂಗತಿಯಾಗಿದೆ ಎಂದು ಟೀಕಿಸಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಡಾ.ಬಾಬಾಸಾಹೇಬ ಅಂಬೇಡ್ಕರ ರಚಿಸಿರುವ ಸಂವಿಧಾನದ ಶೆಡ್ಯೂಲ್‌ನಲ್ಲಿ ಇಲ್ಲದ ಜನರಿಗೆ ಮೀಸಲಾತಿ…

Read More

ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ವಿದ್ಯಾರ್ಥಿನಿಯರ ಸಾಧನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಳೆದ ೨೦೨೩-೨೪ ನೇ ಸಾಲಿನ ನವೆಂಬರ್ ತಿಂಗಳಲ್ಲಿ ಜರುಗಿದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬಿ.ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯಕ್ಕೆ ಪ್ರಥಮ ಮತ್ತು ದ್ವಿತೀಯ ರ್ಯಾಂಕ ಪಡೆಯುವುದರ ಮೂಲಕ ಉನ್ನತ ಸಾಧನೆ ತೋರಿದ್ದಾರೆ.ವಿದ್ಯಾರ್ಥಿನಿಯರಾದ ಕು.ಅನುಷಾ ಕುಲಕರ್ಣಿ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್ ) ನಲ್ಲಿ ಶೇ ೮೧.೨೫% ಫಲಿತಾಂಶದೊಂದಿಗೆ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕ ಪಡೆದುಕೊಂಡಿದ್ದಾಳೆ, ಅಲ್ಲದೆ ಕು.ಐಶ್ವರ್ಯ ಆಸಂಗಿ ಎಂಎಸ್ಸಿ (ರಸಾಯನಶಾಸ್ತ್ರ) ವಿಭಾಗದಲ್ಲಿ ಶೇ ೮೧.೩೩% ಫಲಿತಾಂಶದೊಂದಿಗೆ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ ಹಾಗೂ ಚಿನ್ನದ ಪದಕ ಪಡೆದುಕೊಂಡಿದ್ದಾಳೆ ಅದೇ ರೀತಿಯಾಗಿ ಎಂ ಎ (ಇಂಗ್ಲಿಷ್) ವಿಭಾಗದಲ್ಲಿ ಕು. ಮೇಘಾ ಪವಾರ್ ಶೇ ೭೦.೩೮% ಫಲಿತಾಂಶದೊಂದಿಗೆ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ್ಯಾಂಕ್ ಪಡೆದುಕೊಂಡು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ, ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಭಾರತ ಸರಕಾರ ಹಾಗೂ ನೆಹರು ಯುವ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ದಿ. ೧೯ ಮತ್ತು ೨೦ ರಂದು ಆಯೋಜಿಸಿದ್ದ ‘ವಿಕಸಿತ್ ಭಾರತ ಯುಥ್ ಪಾರ್ಲಿಮೇಂಟ್ ಮಾರ್ಚ ೨೦೨೫’ ಸ್ಪರ್ಧೆಯಲ್ಲಿ ೧೦ ಜನ ಸ್ಪರ್ಧಾಳುಗಳು ರಾಜ್ಯ ಮಟ್ಟದ ವಿಕಸಿತ್ ಭಾರತ ಯುಥ್ ಪಾರ್ಲಿಮೆಂಟ್‌ಗೆ ಆಯ್ಕೆಯಾಗಿದ್ದಾರೆ.ಆಯ್ಕೆಯಾದ ಸ್ಪರ್ಧಾಳುಗಳಿಗೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಸುರಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More