Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕರ್ನಾಟಕ ಕಲಾ ಸಂಘವು ಸಾಧಕರ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ ೧೬-೨-೨೦೨೫ ರವಿವಾರ ಮುಂಜಾನೆ ೧೦-೩೦ ಗಂಟೆಗೆ ಉಪ್ಪಲಿ ಬುರ್ಜ ಹತ್ತಿರದ ಬಿಡಿಈ ಸಂಸ್ಥೆಯ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಗಮಕ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದ ವಾಗ್ದೇವಿ ಪ್ರಶಸ್ತಿ ಪುರಸ್ಕೃತರಾದ ಕಲ್ಯಾಣರಾವ ದೇಶಪಾಂಡೆ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಉಪನ್ಯಾಸಕ ಡಾ. ಸುಭಾಸಚಂದ್ರ ಕನ್ನೂರ ಅವರನ್ನು ಸನ್ಮಾನಿಸಲಾಗುವುದು.ದರಬಾರ ಪ.ಪೂ. ಕಾಲೇಜಿನ ಉಪನ್ಯಾಸಕ ಡಾ. ವೇದನಿಧಿ ಆಚಾರ್ಯ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನ್ಯಾಸಕ ಶ್ರೀ ನಾರಾಯಣ ಬಾಬಾನಗರ ಮುಖ್ಯ ಅತಿಥಿಗಳಾಗಿ ಹಾಗೂ ವಿಶೇಷ ಚೇತನ ಅಂಧ ಸಾಹಿತಿ ಶ್ರೀತನಯ ಕಾವ್ಯನಾಮದ ಬಳವಂತ ಕುಲಕರ್ಣಿ ವಿಶೇಷ ಅತಿಥಿಗಳಾಗಿ ಆಗಮಿಸುವರು.ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕರ್ನಾಟಕ ಕಲಾ ಸಂಘದ ಅಧ್ಯಕ್ಷ ಬಾಬುರಾವ ಕುಲಕರ್ಣಿ ಹಾಗೂ ಸದಸ್ಯರಾದ ಪ್ರಕಾಶ ಇನಾಮದಾರ ಮತ್ತು ಪ್ರೊ. ರಾಮಚಂದ್ರ ದಿಕ್ಷೀತ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಕಠಿಣ ಪರೀಶ್ರಮ ಮತ್ತು ಬೋಧಕರ ಸಮರ್ಪಣಾ ಭಾವದ ಫಲವೇ ಈ ಫಲಿತಾಂಶ :ಬಸವರಾಜ್ ಕೌಲಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ನಾಡಿನಾಧ್ಯಂತ ಹೆಸರು ಮಾಡಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತನ್ನ ಗುಣಮಟ್ಟದ ಶಿಕ್ಷಣಕ್ಕೆ ಮತ್ತೊಮ್ಮೆ ಸಾಕ್ಷಿ ಒದಗಿಸಿದೆ.ಐಐಟಿ, ಐಐಐಟಿ ಸೇರಿದಂತೆ ಭಾರತದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಎಂಜಿನೀಯರಿಂಗ್ ಕೋರ್ಸಗಳಿಗೆ ಪ್ರವೇಶ ಪಡೆದುಕೊಳ್ಳುವುದಕ್ಕೆಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ಮೂಲಕ ನಡೆಸಲಾಗುವ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಎಕ್ಸಲಂಟ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಂದು ಸಾಧನೆ ಮಾಡಿದ್ದಾರೆ. ಜನೇವರಿ ೨೦೨೫ ರಲ್ಲಿ ಜರುಗಿದ ಜೆಇಇ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಅತ್ಯಂತ ಸ್ಪರ್ಧಾತ್ಮಕವಾಗಿರುವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಮರ್ಥ ಕಾಲಾಲ್(೯೮.೯೬), ಹರ್ಷ ಋಣವಾಲ(೯೮.೬೮), ಪ್ರೀತಮ ಬಾಗಲೇ(೯೭.೭೪), ಇಜ್ರೆಲ್ ಮಗಲಿ(೯೭.೫೬), ಅಭಿಷೇಕ್ ಜೋರಾಪುರ(೯೭.೫೩), ಪ್ರೇಮ್ ಚನಗೊಂಡ(೯೭.೧೮), ಗಂಗಾಧರ ಮುಟಗಿ(೯೭.೧೬),…
ಕಲುಷಿತ ನೀರಿನೊಂದಿಗೆ ಸಭೆಗೆ ಬಂದ ಕೆಸರಟ್ಟಿ ಮಹಿಳೆಯರು | ಅಧಿಕಾರಿಗಳ ಪ್ರತಿ ಹೇಳಿಕೆಗೆ ಕೆಡಿಪಿ ನೂತನ ಸದಸ್ಯರಿಂದ ಆಕ್ಷೇಪ | ಅಧಿಕಾರಿಗಳ ರಕ್ಷಣೆಗೆ ನಿಂತ ಶಾಸಕರು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಿಸಿದ ಪಂಚಾಯಿತಿ ಪಿಡಿಓ ಹಾಗೂ ಅಧ್ಯಕ್ಷರು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಜರುಗಿದ ೨೦೨೪-೨೫ನೇ ಸಾಲಿನ ಒಂದನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ. ಒಂದು ಮೋಟಾರು ರಿಪೇರಿಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೆ ನನಗೆ ಕರೆ ಮಾಡಿದರೆ ಹೇಗೆ? ೧೫ ನೇ ಹಣಕಾಸು ಅನುದಾನ ಬಳಸಿಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಸಭೆಯಲ್ಲಿ ಶಿಸ್ತಿನಿಂದ ವರ್ತಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಬೆಳಿಗ್ಗೆ ಒಂದು ಗಂಟೆ ವಿಳಂಬವಾಗಿ ಆರಂಭಗೊಂಡ ಸಭೆಗೆ ಕೆಡಿಪಿ ನೂತನ ಸದಸ್ಯರಿಗೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇವರ ಒಲುಮೆ ಪಡೆದುಕೊಳ್ಳಲು ಹಲವಾರು ಮಾರ್ಗಗಳಿದ್ದು, ಅವುಗಳಲ್ಲಿ ತ್ಯಾಗ ಮತ್ತು ಕರುಣೆ ಉತ್ತಮವಾದದ್ದು ಎಂದು ಶಿರಹಟ್ಟಿ ಭಾವೈಕ್ಯತೆ ಸಂಸ್ಥಾನಮಠದ ಶ್ರೀಫಕೀರ ದಿಂಗಾಲೇಶ್ವರ ಜಗದ್ಗುರು ಹೇಳಿದರು.ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ಶ್ರೀಮಡಿವಾಳೇಶ್ವರ ಗದ್ದಿಗಿಮಠದಲ್ಲಿ ಲಿಂ.ಸಿದ್ದಲಿಂಗ ಮಹಾಶಿವಯೋಗಿಗಳ ೩೧ನೇ ಪುಣ್ಯ ಸ್ಮರಣೋತ್ಸವ ಹಾಗೂ ಮಡಿವಾಳೇಶ್ವರ ಮಹಾಸ್ವಾಮಿಗಳವರ ೧೭ನೆಯ ಪಟ್ಟಾಧಿಕಾರದ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಬಸವ ಪುರಾಣ ಕಾರ್ಯಕ್ರಮದಲ್ಲಿ ಶಿರಹಟ್ಟಿ ಭಾವೈಕ್ಯತೆ ಸಂಸ್ಥಾನಮಠದ ಶ್ರೀಫಕೀರ ದಿಂಗಾಲೇಶ್ವರ ಜಗದ್ಗುರು ಆಶೀರ್ವಚನ ನೀಡಿ ಮಾತನಾಡಿದ ಅವರು, ಮಹಾತ್ಮರ ಚರಿತ್ರೆಗಳನ್ನು ಆಲಿಸುವುದರ ಮೂಲಕ ಜೀವನದಲ್ಲಿ ಆದ್ಯಾತ್ಮಿಕ ಮತ್ತು ನೈತಿಕ ಚಿಂತನೆ ಅಳವಡಿಸಿಕೊಳ್ಳಬೇಕು. ಮಾನವ ಜನ್ಮ ಶಾಶ್ವತವಲ್ಲ. ಆದರೆ ಜೀವ ಸಂಕುಲದಲ್ಲಿ ಮಾನವ ಜನ್ಮಕ್ಕೆ ಶ್ರೇಷ್ಠ ಸ್ಥಾನವಿದೆ. ದುಡಿಮೆಯಲ್ಲಿ ಸಾಧ್ಯವಾದಷ್ಟು ದಾನ, ಧರ್ಮ ಮಾಡಿ ಸಮೃದ್ಧಿಯ ಬದುಕು ಸಾಗಿಸಬೇಕು. ಶರಣರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಗುರುವಿನ ಸ್ಮರಣೆ ಮಾಡಬೇಕು ಎಂದರು.ಈ ವೇಳೆ ಮಸಬಿನಾಳ ದಾಸೋಹಮಠದ ಸಿದ್ದರಾಮ ಮಹಾಸ್ವಾಮಿಗಳು, ಮಮದಾಪುರ ವಿರಕ್ತಮಠದ ಮುರುಗೇಂದ್ರ ಮಹಾಸ್ವಾಮಿಗಳು, ಶ್ರೀಮಠದ ಮಡಿವಾಳೇಶ್ವರ ಮಹಾಸ್ವಾಮಿಗಳು,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗೆ ಯಾವುದೇ ಬೆಲೆ ಕೊಡದೇ ಗ್ರಾಮ ಲೆಕ್ಕಾಧಿಕಾರಿಗಳನ್ನು ಬೇಕಾ ಬಿಟ್ಟಿಯಾಗಿ ನಡೆಸಿಕೊಳ್ಳುತ್ತಿರುವ ಸರ್ಕಾರ ಇನ್ನಾದರು ಎಚ್ಚೆತ್ತುಕೊಂಡು ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಛೇರಿ, ಪಿಠೋಪಕರಣ ಹಾಗೂ ಇತರೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಎಮ್.ಎನ್ ಪಾಟೀಲ ಆಗ್ರಹಿಸಿದ್ದಾರೆ.ನಗರದ ತಾಲೂಕ ದಂಡಾಧಿಕಾರಿಗಳ ಕಛೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ಕೈಗೊಂಡ ೨ನೇ ಹಂತದ ಮುಷ್ಕರಕ್ಕೆ ಜೆಡಿಎಸ್ ಪಕ್ಷದ ಬೆಂಬಲ ಸೂಚಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳು ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ತಂತ್ರಾಂಶಗಳನ್ನು ನಿರ್ವಹಿಸಲು ಗೂಗಲ್ ಕ್ರೋಮ್/ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕಾö್ಯನರ್ಗಳನ್ನು ಪೂರೈಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲ ಮಾಡಿಕೊಡಬೇಕು ಎಂದರು.ಈ ವೇಳೆ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಿರೇಕುರುಬರ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳನ್ನು ತಾಂತ್ರಿಕ ಹುದ್ದೆಗಳ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಅದಕ್ಕೆ ತಕ್ಕಂತೆ ತಾಂತ್ರಿಕ ಹುದ್ದೆಗಳಿಗೆ ನಿಗದಿಪಡಿಸಿದಂತೆ ಇವರಿಗೂ ವೇತನ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಣ ನಮಗೆ ಧೈರ್ಯ ನೀಡಬಹುದೇ ಹೊರತು ತೃಪ್ತಿ ನೀಡುವದಿಲ್ಲ. ಶಿಕ್ಷಣ ನಮಗೆ ಬದುಕಿನಲ್ಲಿ ಧೈರ್ಯ ಮತ್ತು ತೃಪ್ತಿ ನೀಡುತ್ತದೆ ಎಂದು ಸ್ಥಳೀಯ ಸಿ.ಎಂ.ಮನಗೂಳಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭದಲ್ಲಿ ಸ್ಥಳೀಯ ಸಿ.ಎಂ.ಮನಗೂಳಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಭಾಗವಹಿಸಿ ಮಾತನಾಡಿದರು.ಇಂದು ದೃಡವಾದ ಶ್ರದ್ದೆ ಹೊಂದಿದ ವಿದ್ಯಾಭ್ಯಾಸ ಮುಖ್ಯವಾಗಿದೆ. ಇಂದಿನ ಯುವ ಜನಾಂಗದವರಲ್ಲಿ ಓದುವ, ಅರ್ಥೈಸಿಕೊಳ್ಳುವ ಗುಣ ಕಡಿಮೆಯಾಗುತ್ತಿರುವುದು ಮಾರಕ ಇದು ದೇಶದ ಮೇಲೆ ದೊಡ್ಡ ಪರಿಣಾಮ ಬಿರುತ್ತದೆ. ಬದುಕನ್ನು ಪ್ರೀತಿಸಿ ಸಾಧನೆಡೆಗೆ ಸಾಗುವು ಪರಿಕಲ್ಪನೆಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.ಈ ವೇಳೆ ಕಾರ್ಯಾಧ್ಯಕ್ಷ ಎಸ್.ಎ.ಪಾಟೀಲ, ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆಗಳು ಮೊದಲಿನಂತಿಲ್ಲ. ಅತ್ಯಂತ ಕಠಿಣ…
ವಿಜಯಪುರದಲ್ಲಿ ಬನಶಂಕರಿ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಯತ್ನಾಳ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆಕಾಶವಾಣಿ ಕೇಂದ್ರದ ಎದುರಿನ ರಿಂಗ್ ರಸ್ತೆಗೆ ಬನಶಂಕರಿ ಸರ್ಕಲ್ ಎಂದು ನಾಮಕರಣ ಮಾಡುವ ಜತೆಗೆ ನೇಕಾರರು ಸಮುದಾಯ ಭವನ ನಿರ್ಮಿಸಲು ೧೧ ಲಕ್ಷ ರೂ., ಆರ್ಥಿಕ ನೆರವು ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಭರವಸೆ ನೀಡಿದರು.ನಗರದ ವೇದಮಾತೆ ಗಾಯತ್ರಿ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಆಕಾಶವಾಣಿ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಬನಶಂಕರಿ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನೇಕಾರರು ತಮ್ಮೊಳಗಿನ ಭಿನ್ನಾಭಿಪ್ರಾಯ ಮರೆತು ಸಂಘಟಿತರಾದಾಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ. ಎಲ್ಲರೂ ತಮ್ಮಲ್ಲಿನ ಒಡಕು ಮನೋಭಾವ ತೊರೆದು ಸನಾತನ ಧರ್ಮ ಮತ್ತು ದೇಶದ ಉಳಿವಿಗಾಗಿ ದುಡಿಯಬೇಕು. ರಾಜಕಾರಣಿಗಳು ಮಾಡುವ ಸಾಮೂಹಿಕ ವಿವಾಹ ಬರೀ ಚುನಾವಣೆಗಳಿಗಷ್ಟೇ ಸೀಮಿತವಾಗಿರುತ್ತವೆ. ಅದನ್ನೇ ಮಠಾಧೀಶರು ಮುಂದೆ ನಿಂತು ಬಡ ಮಕ್ಕಳ ಸಾಮೂಹಿಕ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಜನತೆಯ ನಿರೀಕ್ಷೆಯಂತೆ ಪಟ್ಟಣ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೇಸ್ ಪಕ್ಷದ ಪಾಲಾಗಿದೆ.ಬುಧವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ನಾಲ್ಕನೆ ವಾರ್ಡಿನ ಸದಸ್ಯ ಚನಮಲ್ಲಪ್ಪ ಶಿವಪ್ಪ ಗಿಡ್ಡಪ್ಪಗೋಳ ಒಬ್ಬರೆ ನಾಮಪತ್ರ ಸಲ್ಲಿಸಿದರು ಅದರಂತೆ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಒಂಬತ್ತನೆ ವಾರ್ಡಿನ ಶ್ರಿಮತಿ ರಾಜಮಾ ನದಾಪ್ ಒಬ್ಬರೆ ನಾಮಪತ್ರ ಸಲ್ಲಿಸಿದ ಪ್ರಯುಕ್ತ ಚುನಾವಣಾಧಿಕಾರಿಗಳು ಎರಡು ಸ್ಥಾನಗಳಿಗೆ ಅವಿರೋದ ಆಯ್ಕೆ ನಡೆಯಿತು ಎಂದು ತಿಳಿಸಿದರು.ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿಯವರ ಸ್ವಂತ ಊರಾದ ಕೊಲ್ಹಾರ ಪಟ್ಟಣ ಪಂಚಾಯತಿಯ ಸ್ಥಳಿಯ ಆಡಳಿತದ ಚುಕ್ಕಾಣೆ ಕಾಂಗ್ರೇಸ್ ಪಕ್ಷಕ್ಕೆ ದೊರಕಿದೆ ಎನ್ನುವದನ್ನು ಮಾಹಿತಿ ಪಡೆದ ಸಚಿವ ಶಿವಾನಂದ ಎಸ್ ಪಾಟೀಲ ಆಡಳಿತ ಕಛೇರಿಗೆ ಖುಷಿಯಿಂದ ಆಗಮಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗೌರವಿಸಿದರು.ಈ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಹಲವಾರು ಜ್ವಲಂತ ಸಮಸ್ಯೆಗಳ ಮೂಟೆ ಹೊತ್ತಿರುವ ಕೊಲ್ಹಾರ ಪಟ್ಟಣದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಬಿ ಎಲ್ ಡಿ ಇ ಸಂಸ್ಥೆಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಸಾವಿನ ಕುರಿತು ರಾಜಕೀಯ ಲೇಪಿತ ಹೇಳಿಕೆ ನೀಡುವ ಮೂಲಕ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಎಂದು ಬಾಲ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಾರ ನಗರದ ಲಾಲಾಬಹುದ್ದೂರ ಶಾಸ್ತ್ರಿ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರು ನಡೆಸುವ ಬಾರ್ ನಲ್ಲಿ ನೀರು ಎಂದು ಕೊಟ್ಟಿದ್ದ ಆ್ಯಸಿಡ್ ನ್ನು ಕುಡಿದು ವ್ಯಕ್ತಿಯೊರ್ವ ಮೃತಪಟ್ಟಿದ್ದು, ಆ ಕುರಿತಂತೆ ಈಗಾಗಲೇ ಎಫ್ ಐ ಆರ್ ಆಗಿದೆ.ಬಿ.ಎಲ್.ಡಿ. ಇ ಸಂಸ್ಥೆಯ ವೈದ್ಯಕೀಯ ವಿದ್ಯಾರ್ಥಿನಿಯ ಸಾವು ಆತ್ಮಹತ್ಯೆಯಿಂದ ಉಂಟಾಗಿದೆ. ಇದರಲ್ಲಿ ಯಾರೆ ತಪ್ಪಿತಸ್ಥರು ಇದ್ದಲ್ಲಿ ಅವರಿಗೆ ಶಿಕ್ಷೆ ಆಗಲಿದೆ. ಇದರಲ್ಲಿ ಯಾವುದೇ ಮುಲಾಜೆ ಇಲ್ಲ. ಆಕೆಯ ಆತ್ಮಹತ್ಯೆ ಹಿಂದಿನ ವಿವಿಧ ಆಯಾಮಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ನೀರು ಎಂದು ಹೇಳಿ,…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಘಟನೆ ಒಂದು. ಬಹುಮಹಡಿ ಕಟ್ಟಡದ ಶಾಲೆಗಳಲ್ಲಿ ದುಬಾರಿ ಫೀಸ್ ತೆತ್ತು ಪ್ರವೇಶ ಪಡೆದಿರುವ ಪಾಲಕರು ಅದರ ಖರ್ಚು ವೆಚ್ಚಗಳನ್ನು ನಿಭಾಯಿಸಲಾಗದೆ ಒದ್ದಾಡುತ್ತಾರೆ. ಶಾಲೆಯ ಇನ್ ಫ್ರಾಸ್ಟ್ರಕ್ಚರ್ ಗೆ ತಕ್ಕಂತೆ ನೂರೆಂಟು ಶುಲ್ಕಗಳನ್ನು ಸಂಗ್ರಹಿಸುವ ಶಾಲೆಯವರು ದುಬಾರಿ ಬೆಲೆಯ ಬ್ರಾಂಡೆಡ್ ಯೂನಿಫಾರ್ಮ್, ಶೂಸ್, ಸ್ಕೂಲ್ ಬ್ಯಾಗ್ ಗಳನ್ನು, ನೋಟ್ ಬುಕ್ ಗಳನ್ನು ತಮ್ಮಲ್ಲಿಯೇ ಖರೀದಿಸಲು ಹೇಳುತ್ತಾರೆ, ಇದರ ಜೊತೆಗೆ ಮುಂಜಾನೆಯ ಬ್ರೇಕ್ ಫಾಸ್ಟ್ ಮತ್ತು ಲಂಚ್ ಗಳನ್ನು ತಮ್ಮಲ್ಲಿಯೇ ಪ್ರೊವೈಡ್ ಮಾಡುತ್ತೇವೆ ಎಂದು ಮತ್ತಷ್ಟು ಹಣವನ್ನು ಸುಲಿಗೆ ಮಾಡುತ್ತಾರೆ.ಸಾಕಷ್ಟು ಹಣಕಾಸಿನ ಅನುಕೂಲ ಇರುವವರೇ ತಡ ಬಡಾಯಿಸುವಂತಹ ಪರಿಸ್ಥಿತಿ ಇರುವಾಗ, ಹಣಕಾಸಿನ ತೊಂದರೆ ಇರುವವರು ಇಂತಹ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿದರೆ ಆ ಪಾಲಕರ ಪಾಡೇನು?ಘಟನೆ 2… ಮುಂಜಾನೆಯಿಂದ ಸಂಜೆಯವರೆಗೆ ಆಫೀಸಿನ ಕೆಲಸಗಳಲ್ಲಿ ವ್ಯಸ್ತರಾಗುವ ಆ ದಂಪತಿಗಳು ಇಳಿ ಸಂಜೆಯ ಹೊತ್ತಿಗೆ ಮನೆ ಸೇರಿ ವಿಶ್ರಾಂತಿ ಪಡೆಯುತ್ತಾರೆ. ವಾರಾಂತ್ಯಗಳಲ್ಲಿ ಸ್ನೇಹಿತರು, ಮೋಜು, ಮಸ್ತಿ,…
