Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮೂಲಭೂತ ಸೌಲಭ್ಯ ಕಲ್ಪಿಸುವದು, ವೇತನ ಶ್ರೇಣಿ ನಿಗಧಿಪಡಿಸುವದು, ಸೇವಾ ವಿಷಯಗಳಿಗೆ ಸೌಲಭ್ಯ ಕಲ್ಪಿಸುವದು ಸೇರಿದಂತೆ ವಿವಿಧ ಒಟ್ಟು ೨೩ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕು ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರಾರಂಭಿಸಿದ ೨ನೇ ಹಂತದ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡು ದಿನಗಳನ್ನು ಪೂರೈಸಿ ಮೂರನೇ ದಿನಕ್ಕೆ ಕಾಲಿರಿಸಿದೆ.ಮಂಗಳವಾರ ತಮ್ಮ ಬೇಡಿಕೆಗಳು ತಮಗೆ ಏಕೆ ಅವಶ್ಯಕ ಎನ್ನುವದನ್ನು ವಿವರಿಸುತ್ತ, ಘೋಷಣೆಗಳನ್ನು ಕೂಗಿದರು. ಧರಣಿ ಸ್ಥಳದಲ್ಲಿಯೇ ಊಟ ಮಾಡಿ ತಮ್ಮ ಆಕ್ರೋಷವನ್ನು ಹೊರಹಾಕಿದರು.ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಮಾತನಾಡಿ, ಕಂದಾಯ ಇಲಾಖೆಯ ನೌಕರರು ೫ವರ್ಷ ಸೇವೆ ಸಲ್ಲಿಸಿದರೆ ಪದೋನ್ನತಿಗೆ ಯೋಗ್ಯತೆ ಹೊಂದುತ್ತಾರೆ. ಆದರೆ ನಾವು ೧೮ ರಿಂದ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ಇನ್ನೂ ಪದೋನ್ನತಿ ಇಲ್ಲ. ಹೀಗೆ ಹಲವು ವಿಷಯಗಳಲ್ಲಿ ನಮ್ಮನ್ನು ಕಡೆಗಣಿಸಿದ್ದು…
ನಮ್ಮ ಮೆಟ್ರೋ ಪ್ರಯಾಣ ದರ ಏಕಾಏಕಿ ಹೆಚ್ಚಳ | ಜನರಿಂದ ಆಕ್ರೋಶ | ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಏಕಾಏಕಿ ಶೇ. 50ರಷ್ಟು ಹೆಚ್ಚು ಮಾಡಿದ್ದು, ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ.ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ.…
ದರೋಡೆಕೋರರ ಹಲ್ಲೆಯಿಂದ ಮೃತಪಟ್ಟ ಸಂತೋಷ ಕನ್ನಾಳ ಕುಟುಂಬಕ್ಕೆ ಸರ್ಕಾರ ಕೂಡಲೇ ಸ್ಪಂದಿಸಲು ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ : ಕಳ್ಳರ ಹಾವಳಿಯಿಂದ ಗಂಬೀರ ಗಾಯಗೊಡಿದ್ದ ವಿಜಯಪುರ ನಗರದ ಜೈನಾಪೂರ ಲೇಔಟ ನಿವಾಸಿ ಸಂತೋಷ ಕನ್ನಾಳ, (ದಿಂಡವಾರ) ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟಿದ್ದು, ನೋವಿನ ಸಂಗತಿ ಕೂಡಲೇ ಸರ್ಕಾರ ಮೃತ ಸಂತೋಷನ ಕುಟಂಬಕ್ಕೆ ಪರಿಹಾರ ಒದಗಿಸಬೇಕೆಂದು ನ್ಯಾಯವಾದಿ ಶ್ರೀಶೈಲ ಮುಳಜಿ ಒತ್ತಾಯಿಸಿದರು.ಅವರು ಮಂಗಳವಾರ ವಿವಿಧ ಸಂಘಟನೆಗಳಿಂದ ವಿಜಯಪುರದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.ಘಟನೆ ಸಂಭವಿಸಿ ತಿಂಗಳು ಕಳೆಯಲು ಬಂದರು ಜಿಲ್ಲಾಡಳಿತ ಹಾಗೂ ಸರ್ಕಾರ ಮೃತ ಸಂತೋಷನ ಕುಟುಂಬಕ್ಕೆ ಪರಿಹಾರ ನೀಡಲು ವಿಫಲವಾಗಿದೆ ಕೂಡಲೇ ಸೂಕ್ತ ಪರಿಹಾರ ನೀಡಿ ಮೃತ ಸಂತೋಷನ ಕುಟುಂಬಕ್ಕೆ ನ್ಯಾಯ ಒದಗಿಸಬೆಕೆಂದು ಆಗ್ರಹಿಸಿದರು.ಇನ್ನೋರ್ವ ಮುಖಂಡ ನ್ಯಾಯವಾದಿ ದಾನೇಶ ಅವಟಿಯವರು ಮಾತನಾಡಿ, ದರೋಡೆ ಪ್ರಕರಣದಲ್ಲಿ ಅನ್ಯಾಯವಾಗಿ ಮೃತ ಪಟ್ಟ ಸಂತೋಷ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಕೂಡಲೇ ಸರ್ಕಾರದಿಂದ ೨೫ ಲಕ್ಷ ರೂ ಗಳ ಪರಿಹಾರ ಹಾಗೂ ಮೃತನ ಪತ್ನಿಗೆ ಸರ್ಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸ್ಲಂ ಏರಿಯಾದ ಬಡ ಜನರಿಗೆ ಜಾಗ ಕಲ್ಪಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಅಧ್ಯಕ್ಷ ಸಂತೋಷ ಡಂಬಳ ಮಾತನಾಡಿ, ಜಿಲ್ಲೆಯ ಸಿಂದಗಿ ತಾಲೂಕಿನ ಸಿಂದಗಿ ಪಟ್ಟಣದ ವಾರ್ಡ ನಂ. ೧೩ ರ ಸ್ಲಂ ಏರಿಯದಲ್ಲಿ ಹಿರಿಯ ನಾಗರಿಕರು, ಅಂಗವಿಕಲರು, ಕಡು ಬಡ ಜನರು, ದಲಿತರು ಮತ್ತು ಅಲ್ಪಸಂಖ್ಯಾತರು, ಬಾಣಂತಿಯರು ದಿನಗೂಲಿ ಕೆಲಸ ಮಾಡಿಕೊಂಡು ತಮ್ಮ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ವಾಸ ಮಡುವ ಜನರಲ್ಲಿ ತಮ್ಮದೇ ಅಂತ ಯಾವುದೇ ರೀತಿಯ ಸ್ವಂತ ಜಾಗ ಅಥವಾ ಯಾವುದೇ ರೀತಿಯ ಆಸ್ತಿ ಏನು ಇರುವುದಿಲ್ಲಾ. ಸದರಿ ಎಲ್ಲಾ ಜನರು ಸೂಮಾರು ೪೩ ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದಾರೆ. ಅವರಿಗೆ ಬೇರೆ ಕಡೆ ಸೂರು (ಜಾಗ) ಕಲ್ಪಿಸಿ ಆನಂತರ ಅಲ್ಲಿಯ ಜನರಿಗೆ ಸ್ಥಳಾಂತಿರಸಬೇಕು ಹಾಗೂ ಸ್ಲಮ್ ಜನರಿಗೆ ಸೂರು(ಜಾಗ) ಕಲ್ಪಿಸುವ ವರೆಗೆ ಅಲ್ಲಿಯೇ ಇರಲು ಅವಕಾಶ ಮಾಡಿ ಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ಕರವೇ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗ ನ್ಯಾಯಾಲಯ ಪೀಠ-೨ರ ವಿಚಾರಣೆಯನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿರುವ ಆಯೋಗದ ಪೀಠದಲ್ಲಿ ಫೆ.೧೨ ರಂದು ಏರ್ಪಡಿಸಲಾಗಿದೆ.ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಕಕ್ಷಿದಾರರು ಹಾಜರಾಗಬಹುದು.ಈ ಹಿಂದೆ ಕಳುಹಿಸಿದ್ದ ನೋಟಿಸಿನಲ್ಲಿ ʼಬೆಳಗಾವಿ ಪೀಠʼ ಎಂದು ನಮೂದಿಸಿರುವುದನ್ನು ಕರ್ನಾಟಕ ಮಾಹಿತಿ ಆಯೋಗದ ʼನ್ಯಾಯಾಲಯ ಪೀಠ -೨ ʼ ಎಂದು ಓದಿಕೊಳ್ಳಲು ಆಯೋಗದ ಕಾರ್ಯದರ್ಶಿಗಳಾದ ಸುಷಮಾ ಗೋಡಬೋಲೆ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಉಮರಜದ ಶ್ರೀ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸಿದರು.ಮಂಗಳವಾರದ ನಸುಕಿನ ಜಾವ ೪ ಗಂಟೆಯಿಂದ ಸಾಮೂಹಿಕವಾಗಿ ಭೀಮಾ ನದಿಯಲ್ಲಿ ಮಿಂದ ಭಕ್ತರು ರೇವಣಸಿದ್ಧೇಶ್ವರ ದೇವಾಸ್ಥಾನದವರಗೆ ದೀರ್ಘದಂಡ ನಮಸ್ಕಾರ ಹಾಕಿದರು. ಭಾವೈಕ್ಯತೆ ಸಾರುವ ಎಲ್ಲ ಧರ್ಮದ ಕಿರಿಯರಿಂದ ಹಿರಿಯ ಎಲ್ಲ ವಯೋಮಾನದವರು ದೀರ್ಘದಂಡ ನಮಸ್ಕಾರವನ್ನು ಹಾಕಿ ದೇವರ ದರ್ಶನ ಪಡೆದರು.ನಸುಕಿನ ಜಾವ ೬ ಗಂಟೆಗೆ ರೇವಣಸಿದ್ದೇಶ್ವರ ದೇವಾಸ್ಥಾನಕ್ಕೆ ಮಹಾಮಜ್ಜನ ಹಾಗೂ ೭ ಗಂಟೆಗೆ ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿತು. ಮುಂಜಾನೆ ೧೦ ಗಂಟೆಗೆ ವಿಶೇಷ ಆಹ್ವಾನಿತರ ಸಮ್ಮುಖದಲ್ಲಿ ಶ್ರೀ ಘೂಳೇಶ್ವರ ಮಹಾರಾಜರ ವಿರಚಿತ ಗ್ರಂಥಗಳನ್ನು ಬಿಡುಗಡೆ ಮಾಡಲಾಯಿತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ವಿಜಯಪುರದ ಸ್ನಾತಕ ಎನ್.ಇ.ಪಿ. ಕೋರ್ಸುಗಳಿಗೆ ಪೂರ್ಣಕಾಲಿಕೆ/ಅರೆಕಾಲಿಕೆ ಅತಿಥಿ ಉಪನ್ಯಾಸಕರು ಅವಶ್ಯವಿದ್ದು, ಆಸಕ್ತಿಯುಳ್ಳ ಅರ್ಹ ಪದವಿ ಹೊಂದಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಇದೇ ದಿ. ೧೮ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ಇಲ್ಲಿಯ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿwww.kswu.ac.in£ÀÄß ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ತಾರನಾಳ ಗ್ರಾಮದ ಚಂದ್ರಶೇಖರ ಮಾಳಳ್ಳಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ರೈತರ ಮಗನಾದ ಚಂದ್ರಶೇಖರ ಬೆಂಗಳೂರಿನ ಬಿಎಂಎಸ್ ಇಂಜನೀಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಸೈನ್ಸ್ ವಿಷಯದಲ್ಲಿ ಸಂಶೋಧನೆ ಮಾಡಿದ್ದರ ಪ್ರಯುಕ್ತ ಈ ಪದವಿ ಲಭಿಸಿದೆ.
ಉತ್ತರ ಕರ್ನಾಟಕದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿಯಾಗುವ ನಿರೀಕ್ಷೆ ಉದಯರಶ್ಮಿ ದಿನಪತ್ರಿಕೆ ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಕಾಯಕ ಶರಣರ ಜಯಂತಿಯನ್ನು ಉದ್ಧೇಶಿಸಿ ಮಾತನಾಡಿದರು.ಕಾಯಕ ಶರಣರ ವಚನಗಳೇ ನಮ್ಮೆಲ್ಲರ ಬದುಕಿಗೆ ಸಂವಿಧಾನವಾಗಿದೆ. ಐವರು ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ ಎಂದರು.ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರು ತಮ್ಮ ಕಾಯಕದಿಂದ ಗುರುತಿಸಿಕೊಂಡು, ಕಾಯಕದ ಮೇಲೆ ಜಾತಿ ಮಾಡಬಾರದು ಎಂದು ಸಾರಿದ್ದಾರೆ ಎಂದು ಅಭಿಪ್ರಾಯಪಟ್ಟರು.ಮುಖ್ಯ ಶಿಕ್ಷಕರಾದ ಎಸ್…
