Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸದಾ ಕ್ರೀಯಾಶೀಲರಾಗಿ ಉದ್ಯಮಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿಜಯಪುರದ ಮಹಿಳಾ ಮತ್ತು ಶಿಶುಅಭಿವೃದ್ದಿ ಯೋಜನಾಧಿಕಾರಿ ರೇಷ್ಮಾ ವಿ. ಚವ್ಹಾಣ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಮಾಜಶಾಸ್ತ್ರ ವಿಭಾಗ ಏರ್ಪಡಿಸಿದ್ದ “ಮಹಿಳೆಯರಲ್ಲಿ ಆಹಾರ ಮತ್ತು ಪೋಷಣೆಯ ಮಹತ್ವ” ಎಂಬ ವಿಷಯದ ಕುರಿತು ಮಾತನಾಡಿದರು.ಯುವತಿ ಮತ್ತು ಮಹಿಳೆಯರ ಆರೋಗ್ಯಕ್ಕೆ ಪೋಷಕ ಆಹಾರದ ಮಹತ್ವವನ್ನು ವಿವರಿಸಿದರು. ಅವರು ಸಮತೋಲನ ಆಹಾರದ ಅಗತ್ಯತೆ ಮತ್ತು ಪೌಷ್ಠಿಕ ಅಂಶಗಳ ಪ್ರಾಮುಖ್ಯತೆಯನ್ನು ವಿವರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಆರ್.ಎಚ್. ರಮೇಶ ವಹಿಸಿದ್ದರು. ಅಕ್ಕಮಹಾದೇವಿ ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಎಸ್.ಜೆ.ಮಾಡ್ಯಾಳ, ಪ್ರೊ. ರವಿಕುಮಾರ ಅರಳಿ, ಪ್ರೊ. ಸಂಗಮೇಶ ಹಿರೇಮಠ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಈ ಕಾರ್ಯಕ್ರಮವು ಮಹಿಳೆಯರ ಆಹಾರ ಹಾಗೂ ಆರೋಗ್ಯ ಜಾಗೃತಿಗೆ ಪ್ರಮುಖ ವೇದಿಕೆಯಾಗಿದ್ದು,ಎಲ್ಲರಲ್ಲಿಯೂ ಪೋಷಣೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ನೀಲಾಬಾಯಿ ಆರ್. ಸ್ವಾಗತಿಸಿದರು, ಕು.ಐಶ್ವರ್ಯ ನಾದ ವಂದಿಸಿದರು, ಪ್ರೊ.ಸುನಂದಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವರು ಶೈಕ್ಷಣಿಕ, ಸಂಘಟನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವರ್ಷದ ಕರ್ನಾಟಕ ರತ್ನ ಪುನಿತ್ ರಾಜಕುಮಾರ ಸ್ಪೂರ್ತಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.ಪ್ರಶಸ್ತಿ ಸಮಾರಂಭವು ಕರ್ನಾಟಕ ಸೋಶಿಯಲ್ ಕ್ಲಬ್ ಧಾರವಾಡ ಹಾಗೂ ವಿಶ್ವಾಸ ಫೌಂಡೇಶನ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ದಂದು ರಂಗಾಯಣ ಸಭಾ ಭವನ ಧಾರವಾಡದಲ್ಲಿ ಜರುಗಲಿದೆ.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ, ಆಡಳಿತ ಮಂಡಳಿಯ ಸದಸ್ಯರು,ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ,ಸುವರ್ಣ ಸಾರಂಗಮಠ, ಲಕ್ಷ್ಮೀಬಾಯಿ ಹಳೇಮನಿ,ಸೀತಾ ಆರೇಶಂಕರ,ಸರುಬಾಯಿ ಗಡದೆ,ಸುನಿತಾ ಗುಂಡದ,ವೀಣಾ ಗುಡಿಮಠ ಮುಂತಾದವರು ಹರ್ಷ ವ್ಯಕ್ತ ಪಡಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಾಲೂಕು ಕೆ.ಯು. ಗಿಡ್ಡಪ್ಪಗೋಳ ಮಾತನಾಡಿ1-7-2022 ರಿಂದ 31-7-2024 ರವರಿಗೆ ನಿವೃತ್ತಿ ಹೊಂದಿದ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಸಿಗದಿದ್ದಕ್ಕೆ ದಿನಾಂಕ 3-4-2025 ರಂದು ಗುರುವಾರ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 4-4-2025 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಬೃಹತ್ ಸಮಾವೇಶವನ್ನು ಬೆಂಗಳೂರಿನ ಪ್ರಿನ್ಸಸ್ ಶ್ರೈನ್ (ಗೇಟ್ ನಂ-9) ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದು ಉದ್ಘಾಟನೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಸ್ಮರಣ ಸಂಚಿಕೆ ಬಿಡುಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರವರು, ಅಧ್ಯಕ್ಷತೆ ರಾಜ್ಯಾಧ್ಯಕ್ಷ ಎಸ್.ಎಲ್. ಭೈರಪ್ಪ, ಉಪಸ್ಥಿತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನೀರು ಪ್ರತಿ ಜೀವಿಯ ಜೀವ ಜಲ ಈ ನೀರನ್ನು ನಾವುಗಳು ಮಿತವಾಗಿ ಬಳಸಿ, ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಉಳಿಸಬೇಕು ಮತ್ತು ಹಸಿರು ಬೆಳೆಸುವಲ್ಲಿ ನಾವು ಶ್ರದ್ದೆಯಿಂದ ಕಾರ್ಯ ಮಾಡಿದರೆ ಮಳೆಯಾಗಿ ಜೀವ ಸಂಕುಲ ಉಳಿಯಲು ಸಾಧ್ಯ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಬಿದ್ಯಾನಂದ ಝಾ ಹೇಳಿದರು.ತಾಲೂಕಿನ ಕೂಡಗಿ ಎನ್ ಟಿಪಿಸಿ ಯಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ನೀರು ಉಳಿಸಿ ಜೀವಸಂಕುಲ ಉಳಿಸಿ ಎಂಬ ವಿನೂತನ ಅಭಿಯಾನದಲ್ಲಿ ಮಾತನಾಡಿದರು.ಎನ್ ಟಿಪಿಸಿ ಜಿಎಂ ಸಂತೋಷ್ ತಿವಾರಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಏಕೆಂದರೆ ಉಸಿರಾಡಲು ಶುದ್ಧ ಗಾಳಿ ನೀರು ಆಹಾರ ಸಿಗಬೇಕಾದರೆ ನಾವು ನಮ್ಮ ಸುತ್ತಲಿನ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಹೇಳಿದರು.ಅಭಿಯಾನದಲ್ಲಿ ನೀರಿನ ಸಂರಕ್ಷಣೆ, ಮಿತವ್ಯಯ ಬಳಕೆ ಗುರಿಯನ್ನು ಹೊಂದಿರುವ ಜಾಗೃತಿ ಅಭಿಯಾನದಲ್ಲಿ ಭಿತ್ತಿಪತ್ರಗಳು ರಾರಾಜಿಸುತ್ತಿವೆ ಜೋತೆಗೆ ಜಲ ಸಂರಕ್ಷಣೆ ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಎಲ್ಲಾ ನೌಕರರು ಪಡೆದುಕೊಂಡರು.ಈ ಸಂದರ್ಭದಲ್ಲಿ…

Read More

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮೂಲಕ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತ ಬಾಹುಳ್ಯವುಳ್ಳ ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಕೂಡಲೇ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರನ್ನು ಶನಿವಾರ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಈ ಸಮಸ್ಯೆಯ ಬಗ್ಗೆ ವಿವರಣೆ ನೀಡಿದ ಶಕೀಲ್ ಬಾಗಮಾರೆ, ಅಲ್ಪಸಂಖ್ಯಾತ ಬಾಹುಳ್ಯವಿರುವ ವಾರ್ಡ್ಗಳಲ್ಲಿ ರಸ್ತೆ ಕಾಮಗಾರಿಗಳು ಮರೀಚಿಕೆಯಾಗಿವೆ, ಕಾಮಗಾರಿ ಆರಂಭವಾದರೂ ಅದು ಪೂರ್ಣವಾಗಿಲ್ಲ, ಇನ್ನೂ ಕೆಲವೆಡೆ ಕಾಮಗಾರಿಯೇ ಆರಂಭವಾಗಿಲ್ಲ, ಇದರಿಂದಾಗಿ ಸಾರ್ವಜನಿಕರು ನಿತ್ಯ ತೊಂದರೆ ಎದುರಿಸುವಂತಾಗಿದೆ ಎಂದರು.ಅತಾವುಲ್ಲಾ ಸರ್ಕಲ್‌ನಿಂದ ಜಾಮೀಯಾ ಮಸೀದಿ ರಸ್ತೆ ಕಾಮಗಾರಿ ಅನೇಕ ತಿಂಗಳುಗಳಿಂದ ಸ್ಥಗಿತಗೊಂಡಿದೆ, ದಿನನಿತ್ಯ ಈ ರಸ್ತೆ ಅವಲಂಬಿಸಿ ಸಾವಿರಾರು ಪ್ರಯಾಣಿಕರು ತೊಂದರೆ ಎದುರಿಸುವಂತಾಗಿದೆ, ಬಡ ಆಟೋ ಚಾಲಕರು ಈ ಭಾಗಕ್ಕೆ ಆಟೋ ಓಡಿಸಿದರೆ ಅವರ ಆಟೋಗಳು ಸಹ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕ ಕರೆಯ ಮೇರೆಗೆ ಎಂ.ಇ.ಎಸ್. ಪುಂಡಾಟಿಕೆ ವಿರುದ್ದ ನೀಡಲಾದ ಕರ್ನಾಟಕದ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಕುರಿತು ಹಮ್ಮಿಕೊಂಡ ಜಿಲ್ಲಾಧ್ಯಕ್ಷ ಶೇಷರಾವ್ ಮಾನೆ ಅವರ ನೇತೃತ್ವದಲ್ಲಿ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಮಹಿಳಾ ಘಟಕಗಳ ಪರವಾಗಿ ಎಮ್.ಇ.ಎಸ್. ಸಂಘಟನೆಯ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಗೌರವಾಧ್ಯಕ್ಷ ಎಮ್.ಎಮ್. ಖಲಾಸಿ ಯವರು ಮಾತನಾಡಿ, ಕನ್ನಡ ಅಸ್ಮಿತೆ ಉಳಿಯಲು ಬೆಳೆಯಲು ಜನ್ಮತಳೆದ ರಾಜ್ಯದ ಕನ್ನಡಪರ ಸಂಘಟನೆಗಳು ನಾಡು, ನುಡಿ, ಜಲ, ಪರಿಸರ ಸಂರಕ್ಷಣೆಗೆ ಬದ್ದವಾಗಿ ಶಾಂತಿಯುತ ಕಾರ್ಯಾಚರಣೆ ಸಹಿಸದೆ ಎಮ್.ಇ.ಎಸ್. ಪುಂಡರ ಗುಂಡಾವರ್ತನೆ ಉಗ್ರವಾಗಿ ಖಂಡಿಸಿದರು.ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಬೌಮ, ಇದಕ್ಕೆ ದಕ್ಕೆ ತಂದ ಎಮ್.ಇ.ಎಸ್. ಹತ್ತಿಕ್ಕಿವ ನಿಟ್ಟಿನಲ್ಲಿ ನಾವು ಕನ್ನಡಿಗರು ಸುಮ್ಮನಿರಲು ಸಾಧ್ಯವಿಲ್ಲ. ಇನ್ನು ಮುಂದೆ ನಮ್ಮ ತಾಳ್ಮೆಯನ್ನು ಪರೀಕ್ಷಸಿದರೆ ರಾಜ್ಯ ಮಟ್ಟದ ಉಗ್ರ ಸ್ವರೂಪದ ಹೋರಾಟವನ್ನು ಹಮ್ಮಿಕೊಳ್ಳಲಾಗುವದು ಎಂದರು.ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ…

Read More

ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳು ಕೂಡ ಹನಿಟ್ರ್ಯಾಪ್‌ಗೆ ಬಲಿ | ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಬೆಳಗಾವಿ: ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು.ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ.ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ ಸಚಿವ ರಾಜಣ್ಣ ಅವರಿಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ ಎಂದು ಅವರು ಹೇಳಿದರು. ತಮ್ಮ ಕೆಲಸ ಸಾಧಿಸಲು ಹನಿಟ್ರ್ಯಾಪ್ ಮಾಡಿ ಅಧಿಕಾರಿಗಳನ್ನು ಅವರು ಬ್ಲ್ಯಾಕ್‌ಮೇಲ್ ಮಾಡುತ್ತಾರೆ ಎಂದು ಅವರು ಹೇಳಿದರು.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಜಲದಿನ ಆಚರಣೆ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ವೀರೇಶ ಚೌದ್ರಿಯವರು ಇತ್ತೀಚಿಗೆ ನೀರಿನ ಅಭಾವ ಉಲ್ಬಣಿಸಿದ್ದು ಅದನ್ನು ನೀಗಿಸಲು ನಾವೆಲ್ಲ ಜಾಗೃತರಾಗಿ ನೀರಿನ ಸಂರಕ್ಷಣೆ ಮತ್ತು ಮಳೆನೀರಿನ ಕೊಯ್ಲುಗಳತ್ತ ಗಮನಹರಿಸಬೇಕಾಗಿದೆ ಎಂದರು.ಶಾಲೆಯ ಮುಖ್ಯಗುರುಗಳಾದ ಮಹ್ಮದಶಫೀಕ ಮುಜಾವರ ಮಾತನಾಡಿ ವಿಶ್ವ ಜಲದಿನದ ಈ ವರ್ಷದ ವಿಷಯವಾದ ಮಂಜುಗಡ್ಡೆಗಳ ಸಂರಕ್ಷಣೆಯ ಬಗ್ಗೆ ವಿವರಿಸಿದರು.ಸಿಹಿ ನೀರಿನ ಆಕರಗಳಾದ ಹಿಮನದಿಗಳನ್ನು ರಕ್ಷಿಸುವದು ನಮ್ಮೆಲ್ಲರ ಕರ್ತವ್ಯವಾಗಿದೆ. ಭೂಮಿಯ ಮೇಲೆ ಕುಡಿಯುವ ನೀರು ಕಡಿಮೆ ಪ್ರಮಾಣದಲ್ಲಿದ್ದು ಅದನ್ನು ಮಿತವಾಗಿ,ಪ್ರಜ್ಞಾಪೂರ್ವಕವಾಗಿ ಬಳಸಬೇಕು. ಮಳೆನೀರು ಕೊಯ್ಲನ್ನು ವೈಜ್ಞಾನಿಕವಾಗಿ ಕಾರ್ಯರೂಪಕ್ಕೆ ತಂದರೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಬಹುದು ಎಂದರು.ಗುರುಮಾತೆಯವರಾದ ರೇಣುಕಾ ಅಗಸರ ವಿಶ್ವ ಜಲದಿನದ ಅಂಗವಾಗಿ ಮಕ್ಕಳಿಗೆ ನೀರಿನ ಸಂರಕ್ಷಣೆ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆಯನ್ನು ನಡೆಸಿದರು. ಮಕ್ಕಳಲ್ಲಿ ನೀರಿನ ಮಿತಬಳಕೆಯ ಬಗ್ಗೆ ಅರಿವು ಮೂಡಿಸಿದರು.ನೀರಿನ ಮೂಲಗಳನ್ನು ರಕ್ಷಿಸಲು,ಪರಸರ ಸಮತೋಲನದ ಸಂರಕ್ಷಣೆ ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹವಾಮಾನ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇಂಗ್ಲೀಷ ವ್ಯಾಮೋಹದಿಂದ ಕನ್ನಡ ಮರೆಯಾಗುತಿದೆ, ಕನ್ನಡ ಬಾಷೆ ಉಳುವಿಗಾಗಿ ಪ್ರಾಥಮಿಕ ಹಂತದಲ್ಲಿ ಕನ್ನಡ ಶಿಕ್ಷಣ ಕಡ್ಡಾಯಗೊಳಿಸಬೇಕು ಎಂದ ಪ.ಪಂ ಅಧ್ಯಕ್ಷ ಸಾದೀಕ ಸುಂಬಡ ಹೇಳಿದರು.ಪಟ್ಟಣದ ಗಣಪತಿ ಶಿಕ್ಷಣ ಸಂಸ್ಥೆಯ ರವಿ ಕನ್ನಡ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.ಉತ್ತರ ಕರ್ನಾಟಕದ ಗ್ರಾಮೀಣ ಬಾಗದ ಹಳ್ಳಿಗಳಲ್ಲಿ ಕನ್ನಡ ಶಾಲೆಗಳಿದ್ದು ಮತ್ತು ಕನ್ನಡ ಬಾಷೆ ಉಳಿವಿಗಾಗಿ ಕರ್ನಾಟಕದಲ್ಲಿ ಮೊದಲು ಕನ್ನಡ ಬಾಷೆಗೆ ಹೆಚ್ಚಿನ ಆದ್ಯತೆ ಕನ್ನಡ ಶಿಕ್ಷಣ ಕಡ್ಡಾಯಗೊಳಿಸಬೇಕು ಎಂದು ಹೇಳಿದರು.ಪ್ರಜಾಪೀತ ಬ್ರಹ್ಮಕುಮಾರಿ ರೇಣುಕಾ ಅಕ್ಕನವರು ಮಾತನಾಡಿ, ಉತ್ತಮ ಸಮಾಜ ನಿರ್ಮಾಣವಾಗಬೇಕು ಮಕ್ಕಳಲ್ಲಿ ಸಂಸ್ಕಾರ ಬೆಳೆಯಬೇಕು ಎಂದರೆ ಶಿಕ್ಷಣದ ಜೊತೆಗೆ ಸಂಸ್ಕಾರವು ಅವಶ್ಯಕತೆ ಇದೆ. ಅದಕ್ಕೆ ಪಾಲಕರು ಮತ್ತು ಶಿಕ್ಷಕರು ಸಂಸ್ಕಾರವನ್ನು ಕಲಿಸಬೇಕು ಎಂದು ಹೇಳಿದರು.ಸಾನಿದ್ಯ ವಹಿಸಿದ ವಿರಕ್ತಮಠದ ಜಗದೇವ ಮೊಲ್ಲಿಬೊಮ್ಮಯ್ಯ ಮಹಾಸ್ವಾಮಿಜಿ, ರವಿ ಹೊಸಮನಿ, ಶಿಕ್ಷಕ ಶಂಕರ ದೇವರಮನಿ ಮುಂತಾದವರು ಮಾತನಾಡಿದರು.ಇದೆ ಶಾಲೆಯಲ್ಲಿ ಕಲಿತು ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆದುಕೊಂಡ ಸಿದ್ದಾರೊಢ ಕೂಡಿ ಅವರನ್ನು ವಿಶೇಷವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ವತಿಯಿಂದ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಆಯೋಜಿಸಿದ ೫೨ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಕೆ. ಆಲಗೂರ ಬರೆದ ನಲಗುಗಿರಲಿ ಪರಿಸರ ಶಿಶುಗೀತೆಗಳ ಸಂಕಲನಕ್ಕೆ ೨೦೨೩ ನೇ ಸಾಲಿನ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಜೊತೆಗೆ ೨೫೦೦ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್‌ನ ವ್ಯವಸ್ಥಾಪಕ ಬಸವರಾಜು, ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ, ಕರ್ನಾಟಕ ಸಾಹಿತ್ಯ ಅಕಾಡೆವಿ ಅಧ್ಯಕ್ಷ ಡಾ.ಎಲ್.ಎನ್.ಮುಕುಂದರಾಜ, ರವೀಂದ್ರ ಭಟ್ಟ, ಕಸಾಪ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read More