Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ಅವಧಿಯಲ್ಲಿ ಪಟ್ಟಣದಲ್ಲಿ ಉತ್ತಮವಾದ ಕಾಂಕ್ರೇಟ್ ರಸ್ತೆಯನ್ನು ನಿರ್ಮಿಸಿದ್ದೇವೆ. ಸಧ್ಯ ಆ ರಸ್ತೆಯನ್ನು ಅಗೆದು ಅಮೃತ್ ೨.೦ ಯೋಜನೆಯಡಿ ಕುಡಿಯುವ ನೀರಿಗೆ ಪೈಪಲೈನ್‌ಗಳನ್ನು ಅಳವಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಇದರಿಂದ ರಸ್ತೆ ಹಾಳಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಗುಣಮಟ್ಟದ ಪೈಪ್‌ಗಳನ್ನು ಬಳಸಿ ಕಾಮಗಾರಿ ಮಾಡಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆ ರಾಜ್ಯ ಸರ್ಕಾರದ ನೇರವಾದ ಯೋಜನೆ ಅಲ್ಲ. ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆ. ಶೇ೫೦ ರಷ್ಟು ಕೇಂದ್ರದಿಂದ ಶೇ೫೦ ರಷ್ಟು ರಾಜ್ಯದಿಂದ ಹಣ ಬಿಡುಗಡೆಯಾಗುತ್ತದೆ. ಈ ಬಗ್ಗೆ ಒಂದು ಮಾತು ಕೂಡ ಶಾಸಕರು ಹೇಳ್ತಿಲ್ಲ. ನಾನು ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕಾರಣ ಮಾಡೋದಿಲ್ಲ. ಆದರೆ ಅಭಿವೃದ್ಧಿ ಕಳಪೆಯಾದರೆ ಸುಮ್ಮನಿರೋದಿಲ್ಲ ಎಂದರು.ಈ ಕಾಮಗಾರಿ ಮಾಡುತ್ತಿರುವವರು ಶಾಸಕರ ಅಳಿಯ ಸುರೇಶ ನಾಡಗೌಡರು. ಆವರು ತಾಲೂಕನ್ನು ಲೂಟಿ ಹೊಡೆಯಲು ಬಂದಿದ್ದಾರೆ. ಈ ಕಾಮಗಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೈಹಿಕ ಆರೋಗ್ಯಕ್ಕೆ ವೈದ್ಯರು, ಆಸ್ಪತ್ರೆಗಳು ಅಗತ್ಯವಾದಂತೆ, ಮಾನಸಿಕ ಆರೋಗ್ಯ, ಮೌಲ್ಯ, ಸಂಸ್ಕಾರಗಳಿಗೆ ಮಠ ಮಾನ್ಯಗಳು ಅತ್ಯಗತ್ಯವಾಗಿವೆ ಎಂದು ಸಂಗಮೇಶ ಆಸ್ಪತ್ರೆಯ ಡಾ.ಎಸ್.ಎಸ್.ಪಾಟೀಲ ಹೇಳಿದರು.ನಗರದ ಉಕ್ಕಲಿ ರಸ್ತೆಯ ಜಯಶಾಂತಲಿಂಗೇಶ್ವರ ಬೃಹನ್ಮಠದಲ್ಲಿ ಸೋಮವಾರ ಜರುಗಿದ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.ಇಂದು ದೈಹಿಕ ಆರೋಗ್ಯದ ಜೊತೆಜೊತೆಗೆ ಮಾನಸಿಕ ಕ್ಷಮತೆ ಅತೀ ಮುಖ್ಯವಾಗಿವೆ. ಮಾನಸಿಕ ಆರೋಗ್ಯಕ್ಕೆ ಮಾನವೀಯ ಮೌಲ್ಯಗಳು, ಶಿಕ್ಷಣ, ಸಂಸ್ಕಾರಗಳು ಬೇಕು. ಇವುಗಳನ್ನು ಮಠ, ಮಂದಿರ, ಪುರಾಣ, ಪ್ರವಚನಗಳ ಮೂಲಕ ಪಡೆಯಬಹುದಾಗಿದೆ ಎಂದರು.ಸ್ಥಳೀಯ ಚಿನ್ಮಯ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಇಜೇರಿ ಮಾತನಾಡಿ, ಉತ್ತಮ ಆರೋಗ್ಯ ಹಾಗೂ ಪರಿಸರಕ್ಕೆ ತಾಯಿ ಮಾತ್ರ ಸಂಸ್ಕಾರ ನೀಡಬಲ್ಲಳು ಎಂದರು.ಶಿಬಿರದಲ್ಲಿ ಆರೋಗ್ಯಧಾಮದ ಹೃದಯರೋಗ ತಜ್ಞ ಶಂಕರಗೌಡ ಪಾಟೀಲ, ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಂತೋಷಗೌಡ ಪಾಟೀಲ, ಸಂಗಮೇಶ ಪಾಟೀಲ ಹಾಗೂ ಸಂಗಮೇಶ್ವರ ಆಸ್ಪತ್ರೆಯ ಶಾಂತೇಶ ಗಂವಾರಮಠ, ಹಣಮಂತ ರತ್ನಾಕರ, ಮಲ್ಲಿಕಾರ್ಜುನ ಪಾಟೀಲ ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದರು. ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಶಿಬಿರದ ಅಧ್ಯಕ್ಷತೆ ವಹಿಸಿದ್ದರು.ಶ್ರೀಮಠ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಂಚಕರ್ಮರು ಎಂದು ಹೆಸರಾದ ಐವರು ಕಾಯಕ ಶರಣರ ಚಿಂತನೆಗಳು, ಜೀವನಶೈಲಿ ಹಾಗೂ ಅವರು ಸಾಗಿಬಂದ ದಾರಿ ಇಂದಿನ ಸರ್ವ ಜನಾಂಗಕ್ಕೆ ಮಾದರಿಯಾಗಿವೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಅವರು ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಕಾಯಕ ಶರಣರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. ಹನ್ನೆರಡನೆಯ ಶತಮಾನದಲ್ಲಿ ತನ್ನ ನಿಷ್ಕಲ್ಮಶ ಭಕ್ತಿಯಿಂದ ಶಿವನಿಗೆ ಅಂಬಲಿ ಕುಡಿಸುತ್ತಿದ್ದ ಮಾದಾರ ಚನ್ನಯ್ಯ, ಚರ್ಮದ ಕಾಯಕ ಮಾಡುತ್ತಲೇ ಸಂಸ್ಕೃತದಲ್ಲಿ ವಚನಗಳನ್ನು ರಚಿಸಿದ ಮಾದಾರ ಧೂಳಯ್ಯ, ಮಾಳವ ದೇಶದಿಂದ ಕಲ್ಯಾಣಕ್ಕೆ ಬಂದು, ಲಿಂಗದೀಕ್ಷೆ ಪಡೆದು ಕಲ್ಯಾಣ ಕ್ರಾಂತಿಯಲ್ಲಿ ಶರಣರನ್ನು ರಕ್ಷಿಸಿದ ಡೋಹರ ಕಕ್ಕಯ್ಯ, ತಮ್ಮ ತೊಡೆಗಳಿಂದ ಚಮ್ಮಾವುಗೆಗಳನ್ನು(ಪಾದರಕ್ಷೆ) ಮಾಡಿದ ಸಮಗಾರ ಹರಳಯ್ಯ, ನಿರಂತರ ಪ್ರಯತ್ನದಿಂದ ಲಿಂಗದೀಕ್ಷೆ ಪಡೆದು ಜನರ ನೀರಿನ ದಾಹವನ್ನು ನೀಗಿಸಿದ ಉರಿಲಿಂಗಪೆದ್ದಿ ಅವರ ಆದರ್ಶಗಳು ನಿಜಕ್ಕೂ ಪ್ರೇರಣಾದಾಯಕ ಹಾಗೂ ಮಾದರಿಯಾಗಿವೆ ಎಂದು ಐವರು ಶಿವಶರಣರ ಕುರಿತು ಹೇಳಿದರು.ತಹಶೀಲ್ದಾರ ಪ್ರಕಾಶ ಸಿಂದಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿರಸ್ತೇದಾರರಾದ ಸುರೇಶ ಮ್ಯಾಗೇರಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಡಣದ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ನಿಂಗರಾಜ ಅತನೂರ ಅವರ ತಂದೆಯವರಾದ ತಾಲೂಕಿನ ಚಾಂದಕವಟೆ ಗ್ರಾಮದ ದಿ.ಬಸಗೊಂಡಪ್ಪ ನಿಂ. ಅತನೂರ (೯೦) ಅವರು ಸೋಮವಾರ ನಿಧನರಾದರು.ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಗಳವಾರ ಬೆಳಿಗ್ಗೆ ೧೧ಗಂಟೆಗೆ ಸ್ವಗ್ರಾಮ ಚಾಂದಕವಟೆಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಣ ಎಂದರೆ ಅಂದು ಕಠಿಣವಿತ್ತು. ಆದರೆ ಇಂದು ಎಲ್ಲವೂ ಇದೇ. ಕಲಿಯುವ ಮತ್ತು ಕಲಿಸುವವರ ಸಂಖ್ಯೆ ಬಹಳ ಕಡಿಮೆಯಾಗಿದೆ ಎಂದು ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ಪಾಟೀಲ ಗಣಿಹಾರ ಹೇಳಿದರು.ಸಿಂದಗಿ ಪಟ್ಟಣದ ಅಲಮೇಲ ರಸ್ತೆಯ ಹೊರವಲಯದಲ್ಲಿರುವ ಪಿಇಎಸ್ ಕಾಲೇಜಿನ ಸಭಾಂಗಭದಲ್ಲಿ ಪಿಇಎಸ್ ಶಿಕ್ಷಣ ಸಂಸ್ಥೆ, ಲಾಯನ್ಸ್ ಕ್ಲಬ್ ಹಾಗೂ ಸಿಂದಗಿ ಮಾತೋಶ್ರಿ ಗುರುಬಸಮ್ಮ ಹಣಮಂತ್ರಾಯ ಸೋಮಾಪೂರ ಸೇವಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೆ.ಎಚ್.ಸೋಮಾಪೂರ ಅವರ “ಬಾಳ ಬುತ್ತಿ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಮೌಲ್ಯಾಧಾರಿತ ಶಿಕ್ಷಣ ಹಾಗೂ ಮಾನವೀಯತೆ ಕೊರತೆ ಇದೆ. ತಂದೆ ತಾಯಿಗಳನ್ನು ವೃದ್ದಾಶ್ರಮಕ್ಕೆ ಬಿಡುತಿದ್ದೇವೆ. ಇಂದಿನ ಮಕ್ಕಳಲ್ಲಿ ಮಾನವೀಯತೆ, ಮೌಲ್ಯ, ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ವಿದ್ಯಾರ್ಥಿಗಳು ಅತೀ ಹೆಚ್ಚು ಮೊಬೈಲ್ ಬಳಕೆಮಾಡಬಾರದು. ಮಕ್ಕಳನ್ನು ಇಂದು ಎಟಿಎಂ ಆಗಿ ತಯಾರಮಾಡುತ್ತಿದ್ದೇವೆ. ಮೊಬೈಲ್ ಗಿಳಿನಿಂದ ಎಲ್ಲರೂ ಹೊರಗೆ ಬರಬೇಕು ಎಂದು ಸಲಹೆ ನೀಡಿದರು.ಈ ವೇಳೆ ಕಾರ್ಯುಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿ, ಪುಸ್ತಕಗಳು ನಮ್ಮ ಜೀವನದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ-ಕಾಲೇಜುಗಳು, ವಸತಿ ನಿಲಯಗಳು ಹಾಗೂ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರು ಡಿ.ಇ.ಸಿ ಮಾತ್ರೆ ನುಂಗುವ ಮೂಲಕ ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಮನವಿ ಮಾಡಿದರು.ಸಿಂದಗಿ ಪಟ್ಟಣದ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತಾಲೂಕಾಡಳಿತ, ತಾಲೂಕು ಪಂಚಾಯತ, ತಾಲೂಕು ಆರೋಗ್ಯ ಇಲಾಖೆ ಹಾಗೂ ಜ್ಞಾನ ಭಾರತಿ ಪ್ರೌಢ ಶಾಲೆ ಸಹಯೋಗದೊಂದಿಗೆ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ಸಾಮೂಹಿಕ ಔಷಧಿ(ಡಿ.ಇ.ಸಿ) ಮಾತ್ರೆ ನುಂಗಿಸುವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಆನೆಕಾಲು ರೋಗ ನಿಯಂತ್ರಣಕ್ಕಾಗಿ ಮಾತ್ರೆ ನುಂಗುವದು ಉತ್ತಮ. ರೋಗ ಬಂದಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರಲಾರದಂತೆ ತಡೆಯುವದು ಅತ್ಯವಶ್ಯವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ಮತಕ್ಷೇತ್ರದ ಸಿಂದಗಿ, ಆಲಮೇಲ, ಬಳಗಾನೂರ, ಚಾಂದಕವಟೆ, ಮಲಘಾಣ, ಮೋರಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಔಷಧಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮೂಲಭೂತ ಸೌಲಭ್ಯ ಕಲ್ಪಿಸುವದು, ವೇತನ ಶ್ರೇಣಿ ನಿಗಧಿಪಡಿಸುವದು, ಸೇವಾ ವಿಷಯಗಳಿಗೆ ಸೌಲಭ್ಯ ಕಲ್ಪಿಸುವದು ಸೇರಿದಂತೆ ವಿವಿಧ ಒಟ್ಟು ೨೩ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ೨ನೇ ಹಂತದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಮಾತನಾಡಿ, ನಮ್ಮ ಸಂಘದ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ೨೩೭ ತಾಲೂಕುಗಳಲ್ಲಿ ಈ ಅನಿರ್ದಿಷ್ಟಾವಧಿ ಹೋರಾಟವನ್ನು ಹಮ್ಮಿಕೊಂಡಿದ್ದೇವೆ. ಕಳೆದ ೨೦೨೪ ರಲ್ಲಿ ೮ದಿನಗಳ ಕಾಲ ರಾಜ್ಯದ್ಯಂತ ಹೋರಾಟವನ್ನು ಹಮ್ಮಿಕೊಂಡಾಗ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಒಂದು ತಿಂಗಳಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿ ನಾಲ್ಕು ತಿಂಗಳುಗಳು ಕಳೆದರೂ ನಮ್ಮ ಮಹತ್ವದ ಬೇಡಿಕೆಯನ್ನು ಈಡೇರಿಸಿರುವದಿಲ್ಲ. ಕಾರಣ ೨ನೇ ಹಂತದ ಹೋರಾಟವನ್ನು ಹಮ್ಮಿಕೊಂಡಿದ್ದು ನಮ್ಮ ಬೇಡಿಕೆಗಳು ಈಡೇರುವವರೆಗೂ ಈ ಬಾರಿ ನಾವು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಟೆಂಪೋ-ಟ್ರಾಕ್ಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ೧೦ ಜನ ಗಂಭೀರವಾಗಿ ಗಾಯಗೊಂಡ ಘಟನೆ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್ ಐಎಸ್ ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೊಮವಾರ ಸಂಜೆ ಸಂಭವಿಸಿದೆ.ಟೆಂಪೋದಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಅದರಲ್ಲಿ ೧೦ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರೂ ಹುಣಸಗಿ ತಾಲ್ಲೂಕಿನ ಜೈನಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು.ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ, ದರ್ಶನ ಪಡೆದು ಮರಳಿ ತಮ್ಮೂರಿಗೆ ಹೋಗುವ ಮಧ್ಯೆ ಆಲಮಟ್ಟಿ ಉದ್ಯಾನ ವೀಕ್ಷಿಸಲು ಆಲಮರಿಗೆ ಸೊಮವಾರ ಬಂದಿದ್ದರು. ಲವಕುಶ ಉದ್ಯಾನ ವೀಕ್ಷಿಸಿ ಅಲ್ಲಿಂದ ಕೆಳಕ್ಕೆ ಬರುವಾಗ ಇಳಿಜಾರಿನಲ್ಲಿ ಟೆಂಪೋ ಚಾಲಕನ ನಿಯಂತ್ರಣಕ್ಕೆ ಬಾರದೇ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಟೆಂಪೋ ನುಜ್ಜುಗುಜ್ಜಾಗಿ ಉರುಳಿ ಬಿದ್ದಿದೆ.ಅಲ್ಲಿಯೇ ಇದ್ದ ಕೆಎsIಎsಂಫ್ ನ ೨೦ ಕ್ಕೂ ಹೆಚ್ಚು ಪೊಲೀಸರು ತಕ್ಷಣವೇ ಟೆಂಪೋನಲ್ಲಿದ್ದ ಪ್ರಯಾಣಿಕರೆಲ್ಲರನ್ನು, ಸಿಲುಕಿಗೊಂಡ ಗಾಯಾಳಗಳನ್ನು ಹೊರಕ್ಕೆ ತೆಗೆದರು. ತಕ್ಷಣವೇ ಅಂಬುಲೆನ್ಸ್ ಸಂಪರ್ಕಿಸಿದಾಗ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ಕೆಎಸ್ ಐಎsಂಫ್…

Read More

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ | ಬಿಜೆಪಿ ಅಧಿಕಾರಕ್ಕೆ ತರುವುದು ನನ್ನ ಗುರಿ | ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ | ಶಾಸಕ ಯತ್ನಾಳ ಸ್ಪಷ್ಠನೆ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲಅರ್ಹತೆ ನನಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಭಾನುವಾರ ಹೇಳಿದರು.ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ರಾಜ್ಯ ಬಿಜೆಪಿ ಅಧ್ಯಕ್ಷನಾಗುವ ಸಾಮರ್ಥ್ಯವಿದೆ. ಅಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿಯಾಗುವ ಸಾಮರ್ಥ್ಯವೂ ಇದೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಹೇಳಿದರು.ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ, ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ಅಲ್ಲದೆ ಮತ್ತೆ ದೆಹಲಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ಎಸ್.ಕುಲಕರ್ಣಿಯವರ ಆಯ್ಕೆ ಸಂಸ್ಥೆಯ ನಿಯಮಾವಳಿ ಪ್ರಕಾರ ಆಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ತಿಳಿಸಿದ್ದಾರೆ.ಜಿ.ಎಸ್.ಕುಲಕರ್ಣಿಯವರ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆ ಕಾನೂನು ಬದ್ಧವಾಗಿ ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳು ಹಾಗೂ ಸಹಕಾರ ಸಂಸ್ಥೆಗಳ ಉಪನಿಬಂಧಕರು ವಿಜಯಪುರ ಇವರ ಬಾಯಲಾ ಪ್ರಕಾರ ಕಾರ್ಯ ನಿರ್ವಹಿಸುತ್ತಿದೆ.ಮತ್ತು ೨೬.೬. ೨೦೨೪ ರಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರಿ ಸಂಘಗಳ ಉಪನಿಬಂಧಕರು ವಿಜಯಪುರ ಇವರ ನಿಯಮದಂತೆ ಸಭೆ ನಡೆದಿದೆ.೨೦.೧. ೨೦೨೫ ರಂದು ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆದಾಗ ಕೆಲವು ಜನರು ಬಂದು ಅನಾವಶ್ಯಕ ಗೊಂದಲದಿಂದಾಗಿ ಸಭೆಯನ್ನು ಮುಂದೂಡಿ ನಂತರ ಸಭೆ ನಡೆಸಿ ದೀಪಕ ದೋಶಿ ಇವರಿಂದ ತೆರವಾದ ಸ್ಥಾನಕ್ಕೆ ಜಿ.ಎಸ್.ಕುಲಕರ್ಣಿ ಇವರನ್ನು ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ.ಕೆಲವು ವ್ಯಕ್ತಿಗಳು ಸಂಸ್ಥೆಗೆ ಕೆಟ್ಟ ಹೆಸರು ತರಲು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು ಅದು ಸತ್ಯಕ್ಕೆ…

Read More