Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ.ಶನಿವಾರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಜಾಗೃತಿ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ತಿಳಉವಳಿಕೆ ಮೂಡಿಸಲು ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದಂತೆ ಈಗಲೂ ಸಾಕಷ್ಟು ಮೂಢನಂಬಿಕೆಗಳು ಪ್ರಚಲಿತದಲ್ಲಿವೆ. ಅದರ ಬಗ್ಗೆ ಎಚ್ಚರವಿರಬೇಕು. ಆದರೆ, ಭಯ ಬೇಡ ಎಂದು ಅವರು ಹೇಳಿದರು.ಬಿ. ಎಲ್. ಡಿ. ಇ. ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಕ್ಯಾನ್ಸರ್ ರೋಗಗಗಳನ್ನು ಕಂಡು ಹಿಡಿಯುವ ಸಾಧನಗಳಿವೆ.…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಹಗಲು ಹೊತ್ತು ಕೃಷಿಗೆ ಏಳು ತಾಸು ವಿದ್ಯುತ್ ಆಗ್ರಹಿಸಿ ಮತ್ತು ರಾತ್ರಿ ವೇಳೆ ಗ್ರಾಮಗಳಿಗೆ ಸಿಂಗಲ್ ಫೇಜ್ ವಿದ್ಯುತ್ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಡಿಯಲ್ಲಿ ಹೆಸ್ಕಾಂ ಎಇಇ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರಾತ್ರಿ ವೇಳೆ ಗ್ರಾಮಗಳಿಗೆ ವಿದ್ಯುತ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಓದಬೇಕಂದರೆ ವಿದ್ಯುತ್ ಇಲ್ಲದೆ ತೊಂದರೆ ಯಾಗುತ್ತದೆ. ಅದಲ್ಲದೆ ಇತ್ತ ಘಾಸಲೇಟ ಎಣ್ಣೆ ದೊರೆಯುತ್ತಿಲ್ಲ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳು ಓದಿನಿಂದ ವಂಚಿತರಾಗುತ್ತಿದ್ದಾರೆ ಮತ್ತು ರೈತರಿಗೆ ಏಳು ಗಂಟೆ ನಿರಂತರವಾಗಿ ನೀಡಬೇಕು. ನಡುವೆ ವಿದ್ಯುತ್ ಮೂರು ನಾಲ್ಕು ಬಾರಿ ಕಡಿತ ಮಾಡುವದರಿಂದ ರೈತರಿಗೆ ತೊಂದರೆ ಯಾಗುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದು ವರೆದರೆ ಬರುವ ಸೋಮವಾರ ಇಂಡಿ ಬಂದ ಮಾಡಿ ಪ್ರತಿಭಟನೆ ಮಾಡಲಾಗುವದು ಎಂದರು.ಶಿವಶಂಕರ ಕಾಗಸೇರಿ, ಮಾಳಪ್ಪ ಪೂಜಾರಿ, ರಾಮಚಂದ್ರ ಬಡಿಗೇರ, ರಾಮನಗೌಡ ಪಾಟೀಲ ಮಾತನಾಡಿದರು.ಪ್ರತಿಭಟನೆಯಲ್ಲಿ ಭೀಮಣ್ಣ ನಿಡೋಣಿ, ಸೋಮನಿಂಗ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ವಿವಿಧ ಬೇಡಿಕೆ ಆಗ್ರಹಿಸಿ ಕಪ್ಪು ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.ಸೋಮವಾರ ರಾಜ್ಯದಾದ್ಯಂತ ರಾಜ್ಯ ಸಂಘ 2 ನೇ ಹಂತದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ‌ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ಮಾತನಾಡಿದರು.ಗ್ರಾಮ ಆಡಳಿತ ಅಧಿಕಾರಿಗಳು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಚುನಾಯಿತ ಪ್ರತಿನಿಧಿಗಳಾಗಿ ಮೂರು ವರ್ಷದ ನಂತರ ಬಹುನಿರೀಕ್ಷಿತ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ, ಚುನಾವಣೆ ಆಯೋಗ ಮೀಸಲಾತಿಯನ್ನು ಪ್ರಕಟಿಸಿದ ಪ್ರಕಾರ ಚುನಾವಣೆ ಆರು ತಿಂಗಳ ಹಿಂದೆಯೇ ನಡೆಯಬಹುದಾಗಿತ್ತು ನ್ಯಾಯಾಲಯದಲ್ಲಿ ಇದ್ದಂತಹ ತಕರಾರು ಬಗೆಹರಿದು ಆಯೋಗದವು ಪ್ರಕಟಿಸಿರುವ ಮೀಸಲಾತಿಯಂತೆ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಫೆ.೧೨ ಬುಧವಾರದಂದು ನಡೆಯುವದು ಎಂದು ತಿಳಿದುಬಂದಿದೆ.ಪಟ್ಟಣ ಪಂಚಾಯತಿಯಲ್ಲಿ ಒಟ್ಟು ೧೭ ಸ್ಥಾನಗಳಿದ್ದು ೧೧ಜನ ಸದಸ್ಯರು ಕಾಂಗ್ರೆಸ್ ಪಕ್ಷದ ಬಿ-ಫಾರ್ಮ್ ಪಡೆದ ಚುನಾಯಿತ ಸದಸ್ಯರಿದ್ದು ಇಬ್ಬರೂ ಎಐಎಮ್‌ಐಎಮ್ ಸದಸ್ಯರಿದ್ದು, ಒಬ್ಬನೇ ಒಬ್ಬ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿರುತ್ತಾರೆ, ಇವರಲ್ಲರೂ ಈಗಾಗಲೇ ಸಚಿವ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರಿಗೆ ಬೆಂಬಲ ಸೂಚಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷವು ಅಧಿಕಾರ ಚುಕ್ಕಾಣೆ ಹಿಡಿಯುವುದರಲ್ಲಿ ಯಾವುದೆ ಅನುಮಾನವಿಲ್ಲ, ಮೂವರು ಸದಸ್ಯರನ್ನು ಹೊಂದಿದ ಬಿಜೆಪಿ ಪಕ್ಷವು ಅದರ ನಾಯಕರು ಮನಸ್ಸು ಮಾಡಿದರೆ ಏನುಬೇಕಾದರೂ ಆಗುವ ಸಾಧ್ಯತೆ ಅಧಿಕವಾಗಿದೆ.ಮೀಸಲಾತಿ ಪಟ್ಟಿ ಪ್ರಕಟಗೊಳ್ಳಲು ಅಪಾರ ಸಮಯ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತೋಟದ ನಿವಾಸಿ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರ ತೋಟದಲ್ಲಿ ನಡೆದ ಘಟನೆಯು ಸುತ್ತಮುತ್ತಲಿನ ಜನರು ವಿಸ್ಮಯವಾಗುವಂತಹ ಘಟನೆ ಸೋಮವಾರ ಜರುಗಿದೆ.೪೧ ವಯಸ್ಸಿನ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರು ತಮ್ಮ ನಾಲ್ಕು ಎಕರೆ ತೋಟದಲ್ಲಿ ೧೪ ಸಲ ಬೋರವೆಲ್ ಹಾಕಿದರೂ ನೀರು ಬಾರದೇ ವಿಫಲರಾಗಿದ್ದರು. ಇದರಿಂದಾಗಿ ಇವರು ಜೀವನದಲ್ಲಿ ಜಿಗುಪ್ಸೆ ಪಟ್ಟುಕೊಂಡಿದ್ದರು. ೧೪ ಸಲ ಬೋರವೆಲ್ ಹಾಕಿಸಲು ಸಾಕಷ್ಟು ಸಾಲ ಮಾಡಿದ ಪರಿಣಾಮ ತಮ್ಮ ಎರಡು ಎಕರೆ ಮಾರಾಟ ಮಾಡಿ ತಾವು ಮಾಡಿದ ರೂ.೩೬ ಲಕ್ಷ ಸಾಲವನ್ನು ಮುಟ್ಟಿಸಿದ್ದಾರೆ. ೧೪ ಸಲ ಬೋರವೆಲ್ ಹಾಕಿ ವಿಫಲರಾದರೂ ಅವರು ಆತ್ಮವಿಶ್ವಾಸ ಕಳೆದುಕೊಳ್ಳದೇ ಮತ್ತೆ ನಿನ್ನೆ ಜಯೋಲಾಜಿಸ್ಟರನ್ನು ತೋಟಕ್ಕೆ ಕರೆಸಿ ನೀರಿನ ಪಾಯಿಂಟ್ ಗುರುತಿಸಿ ಬೋರವೆಲ್ ಹಾಕಿದರೂ ನೀರು ಬಾರದೇ ಅದು ಸಹ ವಿಫಲವಾಗಿದೆ. ದೇವರನ್ನು ನೆನೆದರೂ ನೀರು ಬೀಳದೆ ಇರುವದನ್ನು ಕಂಡ ಇವರು ತಮಗೆ ಜೀವನವೇ ಸಾಕೆಂದು ಆತ್ಮಹತ್ಯೆಗೆ ಮೊರೆ ಹೋಗಬೇಕೆಂದು ನಿರ್ಧಾರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾದಗಿರಿ ಜಿಲ್ಲೆಯ ತಿಂಥಣಿಯ ಮೌನೇಶ್ವರಿ ಜಾತ್ರೆ ನಿಮಿತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ಮುದ್ದೇಬಿಹಾಳ ಹಾಗೂ ತಾಳಿಕೋಟ ಬಸ್ ನಿಲ್ದಾಣದಿಂದ ಫೆ.೯ ರಿಂದ ಫೆ.೧೫ರ ವರೆಗೆ ವಿಶೇಷ ಸಾರಿಗೆಯನ್ನು ಕಾರ್ಯಾಚರಣೆ ಮಾಡಲಿದ್ದು, ಜಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ವಿಶೇಷ ಬಸ್‌ಗಳ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಮುದ್ದೇಬಿಹಾಳ ಘಟಕ ವ್ಯವಸ್ಥಾಪಕ ಮೊ.ನಂ ೭೭೬೦೯೯೨೨೬೭ ಹಾಗೂ ತಾಳಿಕೋಟ ಘಟಕ ವ್ಯವಸ್ಥಾಪಕ ಮೊ.ನಂ ೭೭೬೦೯೯೨೨೬೮ ಗೆ ಸಂಪರ್ಕಿಸಬಹುದು ಎಂದು ಕ.ಕ.ರ.ಸಾ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯು ತಿಳಿಸಿದೆ.

Read More

ವಿಜಯಪುರದಲ್ಲಿ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಘನತೆ ಬದುಕು ರೂಪಿಸಿಕೊಳ್ಳಲು ಕಾಯಕ ತತ್ವ ಅಳವಡಿಸಿಕೊಂಡು ಕಾಯಕದಲ್ಲಿ ನಿರತರಾಗುವುದರ ಮೂಲಕ ಜೀವನವನ್ನು ಸುಂದರಗೊಳಿಸಿಕೊಳ್ಳೋಣ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.ಅವರು ನಗರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೨ನೇ ಶತಮಾನದಲ್ಲಿ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವುದರ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ತೋರಿದರು.ಜನಸಾಮಾನ್ಯರಾಡುವ ಭಾಷೆಯಲ್ಲಿ ವಚನಗಳನ್ನು ಶರಣರು ನೀಡಿದ್ದಾರೆ. ಶರಣರ ವಚನಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಕಾಯಕ ತತ್ವದ ಮಹತ್ವವನ್ನು ವಚನಗಳಲ್ಲಿ ಕಾಣಬಹುದು. ಶರಣರು ತಮ್ಮ ವಚನದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯತ ನಾಲತವಾಡ ಇವರ ಸಂಯುಕ್ತಾಶ್ರಯದಲ್ಲಿ “ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ನಾಲತವಾಡ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆ” ಗಾಗಿ ನಾಲತವಾಡದ ಬಸವೇಶ್ವರ ಸರ್ಕಲ್ ಹತ್ತಿರ ಭೂಮಿ ಪೂಜೆ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಭೂಮಿ ಪೂಜೆ ನೆರವೆರಿಸಲಿದ್ದಾರೆ.ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಹಾಗೂ ಮತಕ್ಷೇತ್ರ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಲ್ಲ ಎಂದು ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಾರ್ವತಿ ಬಾಪೂಗೌಡ ಹೇಳಿದರು.ಪಟ್ಟಣದಲ್ಲಿರುವ ಹಿಲ್ ಟಾಪ್ ಕಾಲೋನಿಯಲ್ಲಿರುವ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಜೀವನದ ಮೌಲ್ಯಗಳ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ನಿರಾಶೆಯಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಾಳಗಿ ಪ್ರೌಢ ಶಾಲೆಯ ಮುಖ್ಯಗುರು ಶಿವಣ್ಣಗೌಡ ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು ಸಕರಾತ್ಮಕ ಚಿಂತನೆಗಳು ಮೈಗೂಡಿಸಿಕೊಂಡು. ಮುನ್ನಡೆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಗುರಿ ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ ಅಗತ್ಯವಾಗಿದೆ, ಮಕ್ಕಳ ಬಗ್ಗೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಪಾಲಕರು ಮಕ್ಕಳ ಮನಸ್ಸು ಅರ್ಥಮಾಡಿಕೊಳ್ಳಬೇಕು, ಅವರಿಗೆ ಯಾವ ಕ್ಷೇತ್ರದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಇಂದಿನ ದಿನಮಾನಗಳಲ್ಲಿ ದುಪ್ಪಟ್ಟು ಬೆಲೆಯುಳ್ಳ ಭೂಮಿಯನ್ನು ಸರಕಾರಿ ಶಿಕ್ಷಣ ಕೇಂದ್ರ ತೆರೆಯಲು ದಾನವಾಗಿ ಕೊಡುವ ಮನುಷ್ಯರು ಸಿಗುವದು ಅಪರೂಪ. ಅಂತಹ ಅಪರೂಪದ ವ್ಯಕ್ತಿ ಶರಣಬಸಪ್ಪ ಲಗಳಿ ಅವರು ಮುಳವಾಡ ಗ್ರಾಮದಲ್ಲಿ ಸರಕಾರಿ ಪಿಯು ಕಾಲೇಜು ಪ್ರಾರಂಭವಾಗಲು ಕಾರಣೀಕರ್ತರಾಗಿರುವದು ನಾವು ಮರೆಯಬಾರದು ಎಂದು ಸಚಿವ ಶಿವಾನಂದ ಎಸ್ ಪಾಟೀಲ ಹೇಳಿದರು.ತಾಲೂಕಿನ ಮುಳವಾಡ ಗ್ರಾಮದಲ್ಲಿ ೨೦೨೨-೨೩ ನೇ ಸಾಲಿನ ಶಿಕ್ಷಣ ಇಲಾಖೆಯ ವಿವೇಕ (ಪದವಿಪೂರ್ವ) ಯೋಜನೆಯಡಿ ಶ್ರೀಮತಿ ನಿರ್ಮಲಾಬಾಯಿ ಶರಣಬಸಪ್ಪ ಲಗಳಿ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.೫೦.೧೦ ರೂ. ಲಕ್ಷ ವೆಚ್ಚದಲ್ಲಿ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಈ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಇನ್ನೂ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು, ವಿಜ್ಞಾನ ವಿಭಾಗಕ್ಕೆ ಹೆಚ್ಚುವರಿ ವಿಜ್ಞಾನ ಕೊಠಡಿಗಳನ್ನು ನಿರ್ಮಿಸಲು ಹಾಗೂ ತಾಲೂಕು ಪಂಚಾಯತಿ ಅನುದಾನದಲ್ಲಿ ವಿಜ್ಞಾನ ವಿಭಾಗಕ್ಕೆ ಅವಶ್ಯವಿರುವ ಪೀಠೋಪಕರಣಗಳನ್ನು ಪಡೆಯಲು ಅಗತ್ಯ ಅನುದಾನ ಮಂಜೂರು ಮಾಡಲಾಗುವುದು ಎಂದು ಹೇಳಿದರು.ಸರಕಾರಿ ಶಿಕ್ಷಣ ಸೌಲಭ್ಯ ಪಡೆದಿರುವ…

Read More