Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಯಲಗೂರು ಗ್ರಾಮ ಪಂಚಾಯ್ತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ಜರುಗಿತು.ಅಧ್ಯಕ್ಷರಾಗಿ ಯಲಗೂರು ಗ್ರಾಮದ ಶೃತಿ ಭೀಮಣ್ಣ ತಳವಾರ, ಉಪಾಧ್ಯಕ್ಷರಾಗಿ ಯಲ್ಲಮ್ಮನಬೂದಿಹಾಳ ಗ್ರಾಮದ ಚಂದ್ರಮ್ಮ ಬಸವರಾಜ ಅಮಾತಿಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ನಿಡಗುಂದಿ ತಾ.ಪಂ ಇಓ ವೆಂಕಟೇಶ ವಂದಾಲ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.ಆಯ್ಕೆಯಾದ ನಂತರ ಚುನಾಯಿತ ಇಬ್ಬರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮುಖಂಡ ಶ್ಯಾಮ ಪಾತರದ, ಭೀಮಣ್ಣ ಅವಟಗೇರ, ಗುಂಡಪ್ಪ ತಳವಾರ, ರಾಜು ಪಲ್ಲಕ್ಕಿ, ಶ್ರೀಶೈಲ ಡೆಂಗಿ, ಬಸವರಾಜ ಹೂಗಾರ, ಗುಂಡಪ್ಪ ಪೂಜಾರ, ರಂಗಣ್ಣ ಪೂಜಾರ, ಕೃಷ್ಣಾ ದಾಸರ, ಯಲಗೂರೇಶ ಮುದಿಯಪ್ಪನವರ, ಯಂಕಣ್ಣ ಪೂಜಾರ, ರಾಜು ಮೇಟಿ ಮತ್ತೀತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ವಿದ್ಯಾರ್ಥಿಗಳು ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಾಗದೆ ಉತ್ತಮ ಮೌಲ್ಯಗಳು, ಶಿಸ್ತು ಹಾಗೂ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಂದಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರವಿಂದ ಡೋಣುರ ಹೇಳಿದರು.ಸಿಂದಗಿ ನಗರದ ಕಲ್ಯಾಣ ನಗರದಲ್ಲಿರುವ ಶ್ರೀ ಹೀರಾಮಾತಾ ಹಿರಿಯ ಪ್ರಾಥಮಿಕ ಶಾಲೆಯ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಬಿ.ಸಿ.ಪಾಟೀಲ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣವನ್ನು ಸರಿಯಾಗಿ ಕಲಿತು ತಂದೆ-ತಾಯಿ, ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತರುವಂತೆ ಸಾಧನೆ ಮಾಡಬೇಕು ಎಂದರು.ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ವಹಿಸಿದ ಬೋರಗಿ—ಪುರದಾಳದ ತಪೋರತ್ನ ಮಹಾಲಿಂಗೇಶ್ವರ ಪೂಜ್ಯರು ಆಶೀರ್ವಚನ ನೀಡಿದರು.ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಂಸ್ಥೆಯ ಅಧ್ಯಕ್ಷೆ ಲಲಿತಾಬಾಯಿ ರಾಥೋಡ, ಅಯ್.ಎಸ್.ಟಕ್ಕೆ, ಎಸ್.ಎಸ್.ತಳ್ಳೊಳ್ಳಿ, ಡಿ.ಬಿ.ಮುಲ್ಲಾ, ಎನ್.ಎಸ್.ತಿಳುಗೂಳ, ಜಯಶ್ರೀ ಹದನೂರು, ಬುಳ್ಳಪ್ಪ ಡಿ, ಬಂಗಾರಿ ಕೊಡಿಯಾ, ಬಸವರಾಜ ಚವಾಣ, ಪ್ರಶಾಂತ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಗತ್ತಿನಲ್ಲಿ ಸುಮಾರು ೬೦೦೦ ಕ್ಕೂ ಅಧಿಕ ಭಾಷೆಗಳಿದ್ದು ಅವುಗಳಲ್ಲಿ ೨೫೦೦ ಕ್ಕೂ ಹೆಚ್ಚು ಭಾಷೆಗಳು ಭಾರತದಲ್ಲಿವೆ. ಇನ್ನು ಕೆಲವು ಭಾಷೆಗಳು ಅಳಿವಿನಂಚಿನಲ್ಲಿವೆ. ಇವುಗಳ ಮಧ್ಯದಲ್ಲಿ ಸಾವಿಲ್ಲದ, ಕೊನೆಯಿಲ್ಲದ ಭಾಷೆ ಎಂದರೆ ಅದು ನಮ್ಮ ಕನ್ನಡ ಭಾಷೆ ಎಂದು ಸಿಂದಗಿಯ ಜಿ.ಪಿ.ಪೋರವಾಲ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ನಾಗರಾಜ ಮುರಗೋಡ ಹೇಳಿದರು.ಸಿಂದಗಿ ನಗರದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕನ್ನಡ ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡವೆಂದರೆ ಕೇವಲ ನುಡಿ, ಭಾಷೆಯಲ್ಲ ನಾವಾಡುವ ಪ್ರತಿ ಭಾವನೆಯಾಗಿದೆ. ಉದ್ಯೋಗಕ್ಕಾಗಿ ಅನ್ಯ ಭಾಷೆಗಳನ್ನು ಕಲಿಯಿರಿ ಆದರೆ ಮನೆ ಮಾತು ಶಿಕ್ಷಣದ ಮಾಧ್ಯಮ ಕನ್ನಡವಾಗಿರಲಿ ಎಂದರು.ಈ ವೇಳೆ ಸಾರಂಗಮಠದ ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಲಬುರಗಿಯ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಡಾ.ಶಿವುಕುಮಾರ ಹುಣಚಾಳ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಜೆ.ಸಿ.ನಂದಿಕೋಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಅಧ್ಯಕ್ಷ ದಾನಯ್ಯ ಮಠಪತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಬಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು .ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಪಿ.ಯು.ಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ ಎನ್‌ಇಇಟಿ, ಜೆಇಇ,ಕೆ-ಸಿಇಟಿ,ಐಸಿಎಆರ್,ಸಿಎ-ಫೌಂಡೇಶನ್,ಸಿಎಲ್ ಎಟಿ,ಸಿಯುಇಟಿ ಪರೀಕ್ಷಾ ಪೂರ್ವ ಉಚಿತ ತರಬೇತಿಗಾಗಿ ಆನ್‌ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್.೩೧ ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೮೯೭೦೭೦೪೯೮೬, ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೯೯೦೦೨೨೯೭೮೦, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ:೮೧೨೩೭೧೦೭೬೬, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಬ.ಬಾಗೇವಾಡಿ ಮೊ:೯೯೭೨೩೪೦೭೨೧, ಮುದ್ದೇಬುಹಾಳ ಮೊ:೮೭೨೨೪೪೫೫೫೨, ಇಂಡಿ ಮೊ:೯೯೦೦೧೦೯೭೫೯ ಹಾಗೂ ಸಿಂದಗಿ ಮೊ:೯೦೩೫೫೫೮೬೦೯ ಅದರಂತೆ ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹುಬ್ಬಳ್ಳಿ ಮೊ: ೯೬೨೦೮೨೮೧೮೫, ಹಾಲಹಳ್ಳಿ ಮತ್ತು ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಚಂದ್ರ ಕಾಂಬಳೆ ಮೊ:೭೮೯೨೩೭೧೭೦೯, ಸಿಂದಗಿ ಅಲ್ಪಸಂಖ್ಯಾತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಸ್ಕಾಂ ಜಾಗೃತದಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಒಟ್ಟು ೧೦೭ ಪ್ರಕರಣಗಳನ್ನು ೨ ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲೋಕ ಅದಾಲತ್ ನಲ್ಲಿ ಇತ್ಯರ್ಥ ಪಡಿಸಿದ್ದು, ಒಟ್ಟು ೩೧೧೧೬೫೪ ರೂ. ಗಳನ್ನು ದಂಡದ ರೂಪದಲ್ಲಿ ಭರಿಸಿದೆ.ಹೆಸ್ಕಾಂ ಜಾಗೃತದಳದ ಅಧಿಕಾರಿಗಳಾದ ಚಂದ್ರಪ್ಪ ಚಿಕ್ಕೋಡಿ ಪಿಐ ಕೋಟ್ರೆಪ್ಪ ಹರನಾಳ, ಎಇಇ ಸುರೇಖಾ ಗಲಗಲಿ, ಪಿ.ಎಸ್.ಐ ಸಂತೋಷ ರಾಠೋಡ ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿ, ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾರ್ಚ್.೨೨ರಂದು ಆದರ್ಶ ವಿದ್ಯಾಲಯಗಳಲ್ಲಿ ೬ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಿದ್ದಾರೆ.

Read More

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದ ಜಿಲ್ಲಾಧಿಕಾರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩೭ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲೋಯೆಲಾ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳದೇ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಇದೇ ವೇಳೆ ಆತ್ಮಸ್ಥೈರ್ಯ ತುಂಬಿದರು.ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎల్ల ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದAತೆ ನೋಡಿಕೊಳ್ಳಬೇಕು. ಪರೀಕ್ಷಾ…

Read More

ಉದಯರಶ್ಮಿ ದಿನಪತ್ರಿಕೆ ಭೈರವಾಡಗಿ(ದೇವರಹಿಪ್ಪರಗಿ): ಗ್ರಾಮದ ಹಿಂದೂ ಸಮುದಾಯದಿಂದ ಇಫ್ತಾರಕೂಟ ಏರ್ಪಡಿಸುವುದರ ಮೂಲಕ ಸೌಹಾರ್ದತೆ ಸಾರಲಾಯಿತು.ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ರೈತಸಂಘದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ನೇತೃತ್ವದಲ್ಲಿ ಮಂಗಳವಾರ ರಂಜಾನ್ ಅಂಗವಾಗಿ ಜರುಗಿದ ಇಫ್ತಾರಕೂಟದಲ್ಲಿ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಪ್ರಮುಖರು ಭಾಗವಹಿಸಿ ಉಪಹಾರ ಸೇವಿಸಿ ಸಾಮರಸ್ಯ ಮೆರೆದರು.ಮಂಜುನಾಥ ಹಿರೇಮಠ, ಶರಣಯ್ಯ ಹಿರೇಮಠ, ರಾಮು ಬೊಮ್ಮನಳ್ಳಿ, ಸಾಹೇಬಗೌಡ ಉತ್ನಾಳ, ರಜಾಕ್ ಶಾಬಾದಿ, ಸೋಮನಗೌಡ ಬಿರಾದಾರ, ನಾನಾಗೌಡ ಪಾಟೀಲ, ಅಬ್ದುಲ್ ಬಳಗಾನೂರ, ಹಣಮಂತ ಡಂಬಳ, ಶಿವು ಉತ್ನಾಳ, ಯಮನೂರಿ ಬಿರಾದಾರ, ರವಿಗೌಡ ಪಾಟೀಲ, ಶೇಖು ಕಿರಣಗಿ, ಭೀಮನಗೌಡ ಲಚ್ಯಾಣ, ಈರಣ್ಣಗೌಡ ಪಾಟೀಲ ನೇತೃತ್ವ ವಹಿಸಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಸಂಜಯ ಪಾಟೀಲ ಕನಮಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಯುಕ್ತ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಪಾಟೀಲ ತಿಳಿಸಿದ್ದಾರೆ.ಸೌಹಾರ್ದ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಸವಾಲುಗಳಿವೆ ಇದಕ್ಕೆ ಪರಿಹಾರ ಕಂಡು ಹಿಡಿಯಲು ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಸೌಹಾರ್ದ ಸಹಕಾರಿಗಳ ಒಕ್ಕೂಟದ ರಚನೆ ಮಾಡಲಾಗಿದೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಬೆಂಗಳೂರು ಇದರ ನಿರ್ದೇಶಕರಾಗಿ ಪಾಟೀಲರ ಆಯ್ಕೆಯಿಂದ ಜಿಲ್ಲೆಗೆ ಇನ್ನಷ್ಟು ಬಲ ಬಂದಂತಾಗಿದೆ.ಬೆಳಗಾವಿ ವಿಭಾಗದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಗಟ್ಟಿ ಧ್ವನಿಯಾಗಿ ಸೌಹಾರ್ದ ಸಹಕಾರಿಗಳ ಸೇವೆಗೆ ಹಾಗೂ ಸರ್ವ ಸೌಹಾರ್ದ ಸಹಕಾರಿ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಪಾಟೀಲರು ತಿಳಿಸಿದ್ದಾರೆ.

Read More