Author: editor.udayarashmi@gmail.com

ವಿಜಯಪುರದಲ್ಲಿ ನಡೆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆಯಲ್ಲಿ ಆದಿತ್ಯಾ ವೈದ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಜಯಂತಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಹಾಗೂ ಶ್ರೀ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಆದಿತ್ಯಾ ವೈದ್ಯ ಅವರು, ಭಾರತದ ಆಧ್ಯಾತ್ಮಿಕ ಇತಿಹಾಸದಲ್ಲಿ ಅಪ್ರತಿಮ ಸ್ಥಾನ ಹೊಂದಿರುವ ಶ್ರೀ ಆದಿ ಶಂಕರಾಚಾರ್ಯರು ವೇದಗಳಿಗೆ ಭಾಷ್ಯ ಬರೆದು ಜಗತ್ತಿಗೆ ಅದ್ವೈತ ತತ್ವವನ್ನು ಪರಿಚಯಿಸಿದ ಮಹಾನ್ ತತ್ವಜ್ಞರು ಹಾಗೂ ಇಡೀ ದೇಶ ಸಂಚರಿಸಿ ಅದೈತ ಸಿದ್ದಾಂತವನ್ನು ಪ್ರತಿಪಾದಿಸಿದ ಶ್ರೀ ಆದಿ ಶಂಕರಚಾರ್ಯರ ಜೀವನ ಇಂದಿನವರಿಗೆ ಆದರ್ಶಪ್ರಾಯವಾಗಿದೆ ಶಂಕರಾಚಾರ್ಯಾರು ಮಾಹಾ ವಿದ್ವಾಂಸ, ಕವಿ ಯಾಗಿದ್ದರು ಅವರ ಜೀವನದ ಮೌಲ್ಯಗಳು ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.ವಿವಿದ ಸಿದ್ದಾಂತಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಡೆಸಲಿರುವ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಮತ್ತು ನವದೆಹ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ ಅರ್ಹತಾ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಿರ್ಧರಿಸಲಾಗಿದೆ.ಆಸಕ್ತರು ಇದೇ ಏಪ್ರಿಲ್.೨೪ರ ರೊಳಗಾಗಿ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ: ೦೮೨೧-೨೫೧೫೯೪೪ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಲಕ್ಷ್ಮಣ ಸವದಿ ಅವರ ಸುಪುತ್ರ ಹಾಗೂ ಯುವ ನಾಯಕ ಚಿದಾನಂದ ಸವದಿ ಅವರು ಅನಿರೀಕ್ಷಿತ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಾಮಾನ್ಯರಂತೆ ಸಾಲಿನಲ್ಲಿ ನಿಂತು ಟೋಕನ್ ಪಡೆದ ಅವರು, ಅಲ್ಲಿನ ಆಹಾರದ ರುಚಿ ಸವಿಯುವ ಮೂಲಕ ತಮ್ಮ ಸರಳತೆಯನ್ನು ಮೆರೆದರು.ಕ್ಯಾಂಟೀನ್‌ನ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಪರಿಶೀಲಿಸಿದ ಚಿದಾನಂದ ಸವದಿ ಅವರು, ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಬಳಿಕ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತನಾಡಿ, ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಸೂಚನೆ ನೀಡಿದರು.ಬಡವರು ಮತ್ತು ಶ್ರಮಿಕ ವರ್ಗದವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂಬುದು ಸರ್ಕಾರದ ಆಶಯ. ಅಥಣಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿದೆ. ಬಡವರ ಹಸಿವು ನೀಗಿಸುವ ಈ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನಾವು ಸದಾ ನಿಗಾ ವಹಿಸುತ್ತೇವೆ. ತಾಲೂಕಿನ ಜನತೆ ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಅಧುನಿಕ ಜಗತ್ತನಲ್ಲಿ ಜಗತ್ತು ವೇಗವಾಗಿ ಬೆಳೆಯುತ್ತಿರುವದರಿಂದ ಇಂದಿನ ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯವಾಗಿ ಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ ಅಧ್ಯಕ್ಷ ಚನ್ನಯ್ಯ ಮಠಪತಿ ಹೇಳಿದರು.ತಾಲ್ಲೂಕಿನ ಕನಮಡಿ ಗ್ರಾಮದಲ್ಲಿರುವ ಶ್ರೀ ಮಾಣಿಕೇಶ್ವರಿ ಚೈತನ್ಯ ಕನ್ನಡ ಮತ್ತು ಆಂಗ್ಲ ಪ್ರಾಥಮಿಕ ಪ್ರೌಢ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಕಂಪ್ಯೂಟರ್ ಕಲಿಕಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಡಿ ಭಾಗದಲ್ಲಿರುವ ಈ ಶಾಲೆಯ ಮಕ್ಕಳಿಗೆ ಪಠ್ಯ, ಪಠ್ಯೇತರ ಪಾಠಗಳ ಜೊತೆಗೆ ತಂತ್ರಜ್ಞಾನದ ಜ್ಞಾನ ನೀಡಲು ಕಂಪ್ಯೂಟರ್ ಲ್ಯಾಬ್ ಆರಂಭಿಸಿರುವದು ಸಂತಸ ತಂದಿದೆ. ಗುಣಾತ್ಮಕ ಶಿಕ್ಷಣ ನೀಡುತ್ತಿರುವ ಈ ಮಾಣಿಕೇಶ್ವರಿ ಶಾಲೆ ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೆಯಾಗಿದ್ದರು ಮಕ್ಕಳ ಪಾಲಿನ ಆಶಾಕಿರಣವಾಗಿ ಈ ಸಂಸ್ಥೆ ಹೊರಹೊಮ್ಮಿದೆ ಎಂದರು.ಸಂಸ್ಥೆಯ ಮುಖ್ಯಸ್ಥ ಚಿದಾನಂದ ಅವಟಿಯವರು ಮಕ್ಕಳು ಶಿಕ್ಷಣದ ಜೊತೆಗೆ ಪ್ರಾಥಮಿಕ‌‌ ಹಾಗೂ ಪ್ರೌಢ ಹಂತದಲ್ಲೆ ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಕೊಡುವದರಿಂದ ಅಗತ್ಯವಾದ ಶಿಕ್ಷಣವನ್ನು ತಂತ್ರಜ್ಞಾನದ ಮೂಲಕ ಪಡೆಯಲು ಸಹಕಾರವಾಗುತ್ತದೆ ಎಂದರು.ಕಾರ್ಯಕ್ರಮದ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಹೈರಿಗೆ ಗ್ರಾಮದಲ್ಲಿ ಶ್ರೀ ರಣದಕಾಳಮ್ಮ ಜಾತ್ರಾ ಮಹೋತ್ಸವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.ಜಾತ್ರೆ ಹಾಗೂ ಅಂಬೇಡ್ಕರ್ ಜಯಂತಿ ಮಹೋತ್ಸವ ಹಿನ್ನೆಲೆ ಗ್ರಾಮದ ಬೀದಿಗಳನ್ನು ತಳಿರು ತೋರಣಗಳಿಂದ ಸಿಗರಗೊಳಿಸಲಾಗಿತ್ತು. ಮನೆ ಮುಂದೆ ರಂಗೋಲಿ ಬಿಡಿಸಲಾಗಿತ್ತು. ರಾತ್ರಿ ವೇಳೆ ಪ್ರಮುಖ ಬೀದಿಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದವು. 3 ದಿನಗಳ ಕಾಲ ನಡೆದ ಈ ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾದರು. ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನಡೆದ್ರೆ, ರಾತ್ರಿ ದೇವಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಲಾಯಿತು. ಸತ್ತಿಗೆ ಸೂರಪಾನಿ, ತಮಟೆ ವಾದ್ಯ, ಅರಮನೆ ಬ್ಯಾಂಡ್ ಸೇರಿದಂತೆ ನಾನಾ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ತಂದವು. ಭಕ್ತರು ರಸ್ತೆ ಇಕ್ಕೇಲುಗಳಲ್ಲಿ ನಿಂತು ದೇವಿಯ ವೈಭೋಗವನ್ನು ಕಣ್ತುಂಬಿಕೊಂಡರು.ಅಂಬೇಡ್ಕರ್ ಜಯಂತಿ ಹಗು ಜಾತ್ರೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಮಿಡಿ…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ವಿದ್ಯಾರ್ಥಿ ಜೀವನ ಬಂಗಾರದಂತಹ ಜೀವನ, ಈ ಪುಣ್ಯ ನೆಲದ ಈ ಪ್ರೌಢ ಶಾಲೆಯಲ್ಲಿ ಕಲಿತ ಪ್ರತಿಯೊಬ್ಬರೂ ಉತ್ತಮ ಭವಿಷ್ಯ ಕಟ್ಟಿಕೊಂಡಿದ್ದಾರೆ ಎಂದು ವಿಶ್ರಾಂತ ಪ್ರಾಚಾರ್ಯ ಜೆ.ಜೆ. ಕುರಂದವಾಡೆ ಹೇಳಿದರು.ಬಬಲೇಶ್ವರ ಪಟ್ಟಣದ ಶಾಂತವೀರ ಪ್ರೌಢ ಶಾಲೆ ಸೋಮವಾರ ನಡೆದ 1999-2000 ನೇ ಸಾಲಿನ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀಲಕ್ಷ್ಮೀ ನರಸಯ್ಯ ರಾಜಶಾಸ್ತ್ರದ ವಿಶ್ರಾಂತ ಶಿಕ್ಷಕ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ತಾವು ಕಷ್ಟ ಪಟ್ಟು ಓದಿ ಈ ಹಂತಕ್ಕೆ ಬಂದಿದ್ದೀರಿ ನಾವು ನಿಮ್ಮೆಲ್ಲರ ಉತ್ತಮ ಸ್ಥಿತಿ ನೋಡಿ ತುಂಬಾ ಸಂತಸವಾಗಿದೆ ಎಂದರು.ಹಿಂದಿ ವಿಷಯದ ವಿಶ್ರಾಂತ ಶಿಕ್ಷಕ ಎಸ್. ಡಿ. ಗಡದೆ ಮಾತನಾಡಿ, ಕಬೀರದಾಸ ಹಾಗೂ ತುಳಸಿದಾಸರ ದೋಹೆಗಳು ಅಂದಿಗೂ ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ ನಿಮ್ಮೆಲ್ಲರ ಜೀವನ ಇನ್ನೂ ಉತ್ತಮವಾಗಲಿ ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.ಸಾನಿಧ್ಯ ವಹಿಸಿದ ಬಬಲೇಶ್ವರ ಬ್ರಹನ್ಮಠದ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.ರುದ್ರಗೌಡ ಬಿರಾದಾರ, ಸಂಸ್ಥೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮೋಹನ. ಭೀ ಕಟ್ಟಿಮನಿ ಅವರನ್ನು ದ ಸಾ ಪ ರಾಜ್ಯ ಘಟಕ ಬೆಳಗಾವಿ ವಿಭಾಗೀಯಸಂಯೋಜಕರಾನ್ನಾಗಿ ನೇಮಕ ಮಾಡಲಾಗಿದೆ.ಮೋಹನ. ಕಟ್ಟಿಮನಿಯವರು ವಿಜಯಪುರದ ದಲಿತಸಾಹಿತ್ಯ, ಶರಣ ಸಾಹಿತ್ಯ, ಸಾಂಸ್ಕೃತಿಕ ಚಿಂತನೆ ಹಾಗೂ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಉತ್ತಮ ಸಂಘಟಕರಾಗಿ, ಭಾವ ಲಹರಿ, ಜೀವಂತ ಶವಗಳು ನಕ್ಕಾಗ, ಬರಡನಾಡಿನಲ್ಲಿ ಬಂಗಾರ ಬೆಳೆದವರು, ಚಾಣಕ್ಯ ಬಿರಾದಾರ ಬದುಕಿನ ಚಿತ್ರಣ, ವಿಸ್ಮಯದ ಬೆನ್ನೆರಿ, ವಚನ ಫಕೀರ ಮತ್ತು ಹರ್ಡೇಕರ ಮಂಜಪ್ಪ ನಾಟಕ, ಪದ್ಮಭೂಷಣ ಜನರಲ್ ಜಿ. ಜಿ. ಬೆವೂರ ಕೃತಿಗಳನ್ನು ರಚಿಸುವದರ ಮೂಲಕ 1001 ಬಸವಣ್ಣನವರ ವಚನಗಳನ್ನು ಕಂಠ ಪಾಠದ ಮೂಲಕ ಹೇಳು ವ ಮೂಲಕ ಅಕ್ಕಾ ಸಮ್ಮೇಳನದಲ್ಲಿ 2005ರಲ್ಲಿ ಭಾಗವಹಿಸಿ ಇಲ್ಲಿಯವರೆಗೆ ಬಸವ ತತ್ವದ ಮೇಲೆ ವಚನ ಸಾಹಿತ್ಯ ಕುರಿತು 900ಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ.ಇದರೊಂದಿಗೆ ನಾಟಕ, ಸಾಕ್ಷಾಚಿತ್ರ ನಿರ್ಮಾಣದ ಮೂಲಕ ಸಾಮಾಜಿಕ ಜಾಗೃತಿಯ ಕಾರ್ಯ ಮಾಡುತ್ತಿರುವ ಇವರನ್ನು ದ ಸಾ ಪ ರಾಜ್ಯ ಘಟಕ ಪದಾಧಿಕಾರಿಗಳೆಲ್ಲ ಚರ್ಚಿಸಿ ಶ್ರೀಯುತರನ್ನು ದಸಾಪ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಸವೇಶ್ವರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ರೈತ ಬಳಗದಿಂದ ಬಸವ ಜಯಂತಿ ಆಚರಿಸಲಾಯಿತು.ಪಟ್ಟಣದಲ್ಲಿ ಸೋಮವಾರ ಸಾಯಂಕಾಲ ರೈತ ಬಳಗದ ಸದಸ್ಯರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ಭಾವಚಿತ್ರವನ್ನು ಎತ್ತಿನಗಾಡಿಯಲ್ಲಿ ಅಳವಡಿಸುವುದರ ಮೂಲಕ ಹಲಗೆ ವಾದ್ಯವೃಂದಗಳೊಂದಿಗೆ ಬಸವ ವೃತ್ತದಿಂದ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಪನ್ನಗೊಳಿಸಿದರು.ಕಾಸುಗೌಡ ಬಿರಾದಾರ(ಜಿರ್ಲಿ), ರಾಚೋಟಯ್ಯ ಹಿರೇಮಠ, ಕಾಶೀನಾಥ ಸರೂರ, ಅಪ್ಪುಗೌಡ ಪಾಟೀಲ (ಜಿಡ್ಡಿಮನಿ), ಗುರು ಜಡಗೊಂಡ, ಬಸವರಾಜ ಇಂಡಿ, ಕಾಶೀನಾಥ ಮಡಗೊಂಡ, ರಮೇಶ ಅಸ್ಕಿ, ಸಂಪತ್ ಜಮಾದಾರ, ರಾಮು ದೇಸಾಯಿ, ಬಸವರಾಜ ಸರೂರ, ಸಂಜು ಕೋಟಿನ್ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಶ್ರೇಷ್ಠ ಆಧ್ಯಾತ್ಮಿಕ ಸಂತರಾಗಿದ್ದಾರೆ ಎಂದು ಹಿರಿಯ ವೈದ್ಯ ಆರ್.ಆರ್.ನಾಯಿಕ್ ಹೇಳಿದರು.ತಾಲ್ಲೂಕು ಆಡಳಿತದಡಿಯಲ್ಲಿ ಮಂಗಳವಾರ ಜರುಗಿದ ಆದಿ ಜಗದ್ಗುರು ಶಂಕರಾಚಾರ್ಯರ ೧೨೩೮ ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮದ ಆಶಾಕಿರಣವಾಗಿ ನಿರ್ಣಾಯಕ ಪಾತ್ರ ವಹಿಸಿದ ಜಗದ್ಗುರು ಶಂಕರಾಚಾರ್ಯರು ಭಾರತೀಯ ತತ್ವಶಾಸ್ತçದ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದರು.ಉಪನ್ಯಾಕ ಗಿರೀಶ ಕುಲಕರ್ಣಿ ಆದಿಜಗದ್ಗುರು ಶಂಕರರ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.ತಹಶೀಲ್ದಾರ ನಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಉಪನ್ಯಾಸಕ ಎಂ.ಆರ್.ಶಿರಸಂಗಿಮಠ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಕೃಷ್ಣಾಜೀ ಕುಲಕರ್ಣಿ, ಪಿ.ಎಸ್.ಮಿಂಚನಾಳ, ವೆಂಕಟೇಶ ಕುಲಕರ್ಣಿ, ಪ್ರಲ್ಹಾದ ಕುಲಕರ್ಣಿ, ಶ್ರೀಧರ ನಾಡಗೌಡ, ಶ್ರೀಪಾದ ಜೋಷಿ, ಚಿದಂಬರ್ ಕುಲಕರ್ಣಿ(ಹಂಚಲಿ), ಪ್ರವೀಣ ಕುಲಕರ್ಣಿ ಹಾಗೂ ಸಿಬ್ಬಂದಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ‌ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಡಶಾಲೆ, ಪ್ರಾಥಮಿಕ ಶಾಲೆ, ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಪ್ರೌಡಶಾಲೆಯ ಮುಖ್ಯಗುರುಗಳಾದ ಜಗದೀಶ ಗುಮಶೆಟ್ಟಿ ಮಾತನಾಡಿ, ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಅಣ್ಣ ಬಸವಣ್ಣನವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೆಳಿದರು.ಬಸವೇಶ್ವರ ಪದವಿ‌ ಕಾಲೇಜಿನ ಪ್ರಾಚಾರ್ಯ ಜೆ ಎಸ್ ಕಾದಳ್ಳಿ ನಿಂಗನಗೌಡ ಗುಂಡಕನಾಳ ಮಾತನಾಡಿದರು.ಕಾರ್ಯಕ್ರಮದಲ್ಲಿ ವಿಶ್ವನಾಥ ಸಿಂದಗಿ, ಕಂಠೀರವ ದೇಸಾಯಿ, ರವಿಕುಮಾರ ಗುಮಶೆಟ್ಟಿ, ಆರ್ ವ್ಹಿ ಕುಲಕರ್ಣಿ, ಐ ಎಂ‌ ಝಳಕಿ ಸೇರಿದಂತೆ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಭೋದಕ,ಭೋದಕೇತರ ಸಿಬ್ಬಂದ್ದಿ ಹಾಜರಿದ್ದರು.

Read More