Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇದರ ನಿರ್ದೇಶನದ ಮೇರೆಗೆ ಬರುವ ಜನೇವರಿ 2 ರಿಂದ 90 ದಿನಗಳ ಕಾಲ ನಡೆಯಲಿರುವ ಮಧ್ಯಸ್ಥಗಾರರ 2.0 ಅಭಿಯಾನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಎಲ್ಲ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಮಧ್ಯಸ್ಥಿಕೆ ಕೇಂದ್ರದಲ್ಲಿ ಬಗೆಹರಿಸಿಕೊಂಡು ಸಮಯ ಹಾಗೂ ಹಣ ಉಳಿತಾಯದ ಸದುಪಯೋಗ ಪಡೆದುಕೊಳ್ಳಬೇಕೆಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ನ್ಯಾಯಾಧೀಶ ಶಶಿಧರ ಎಂ.ಗೌಡ, ಸಮಿತಿಯ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಅಮೀತ ಘಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನೋತ್ಸವ ಪ್ರಯುಕ್ತ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ವೃತ್ತಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮಾಲಾರ್ಪಣೆ ಮಾಡಿ ಗೌರವಿಸಿದರು.ಮೇಯರ್ ಎಂ.ಎಸ್.ಕರಡಿ, ಸಮಾಜ ಸೇವಕ ಶ್ರೀಮೋಯಿನ್ ಕಲಾದಗಿ ಮೊದಲಾದವರು ಈ ಕ್ಷಣಕ್ಕೆ ಸಾಕ್ಷಿಯಾದರು‌.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025/2026 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಶ್ರೀಯುತ ಇರ್ಫಾನ್ ಬೀಳಗಿಯವರು ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ ದಿನಾಂಕ 27.12.2025 ರಂದು ಶನಿವಾರ ಬೆಳಗ್ಗೆ 10:30ಕ್ಕೆ ಜಿಲ್ಲಾ ಕನ್ನಡ ಪರಿಷತ್ ಕುವೆಂಪು ಕನ್ನಡ ಭವನ ವಿದ್ಯಾನಗರ ದಾವಣಗೆರೆಯಲ್ಲಿ ನಡೆಯುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ 6ನೇ ರಾಜ್ಯ ಭಾವೈಕ್ಯತೆ ಸಮ್ಮೇಳನದಲ್ಲಿ ಶ್ರೀಯುತರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಯನ್ನು ಕೊಟ್ಟು ತಮ್ಮನ್ನು ಗೌರವಿಸುತ್ತಿದ್ದೇವೆ ಎಂದು ವಿಶ್ವ ದರ್ಶನ ಪತ್ರಿಕೆಯ ಸಂಸ್ಥೆ ಹಾಗೂ ರಾಜ್ಯ ಭಾವೈಕ್ಯತೆಯ ಕಾರ್ಯಕ್ರಮದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಆಲಮೇಲ ಮಕ್ಕಳ ಸಾಹಿತ್ಯ ಸಂಗಮದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವನ್ನು ಅವಿರೋಧವಾಗಿ ಆಯ್ಕೆ ಮಾಡಿ ನೂತನ ಪದಾಧಿಕಾರಿಗಳಿಗೆ ೧೨ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು.ಆಲಮೇಲ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳಲ್ಲಿ ಗೌರವಾಧ್ಯಕ್ಷರಾಗಿಸಿಂದಗಿಯ ಶಾಸಕ ಅಶೋಕ ಮನಗೂಳಿ, ಕಾರ್ಯಾಧ್ಯಕ್ಷರಾಗಿ ಅಶೋಕಗೌಡ ಕೋಳಾರಿ, ಉಪಾಧ್ಯಕ್ಷರಾಗಿ ರಮೇಶ ಗಂಗನಳ್ಳಿ, ಪ್ರಧಾನ ಕಾರ್ಯದರ್ಶಿಗಳಾಗಿ ಬಸವರಾಜ ಭೂತಿ, ಕೋಶಾಧ್ಯಕ್ಷರಾಗಿ ಕುದರತ್ ಅಲಿ, ಭೂಸನೂರ, ಸಹ ಕಾರ್ಯದರ್ಶಿಗಳಾಗಿ ಅನಂತನಾಗ ಪಾಟೀಲ, ಮಹಾಂತಗೌಡ ಹಳೇಮನಿ, ಸಂಘಟನಾ ಕಾರ್ಯದರ್ಶಿಗಳಾಗಿ ಅಪ್ಪು ಪಾರ್ಶವನಾಥ ಶೆಟ್ಟಿ , ರಾಜೀವ ಶಂಕರ ಕಲಬುರಗಿ, ಮಾಧ್ಯಮ ಪ್ರತಿನಿಧಿಗಳಾಗಿ ಅಬ್ದುಲ್ ಗನಿ ದೇವರಮನಿ ಮಹಿಳಾ ಪ್ರತಿನಿಧಿಗಳು ಗೀತಾ.ಎಸ್,ಲಕ್ಷ್ಮೀಬಾಯಿ ಕುಂಬಾರ, ಸದಸ್ಯರಾಗಿ, ಯಲ್ಲಪ್ಪ ನಾಯ್ಕೋಡಿ, ಮುಕೇಶ್ ಲೋಣಿ, ಸಂತೋಷ ಚೆಂಗಟ್ಟಿರವರನ್ನು ತಾಲ್ಲೂಕು ಅಧ್ಯಕ್ಷರು ಆಯ್ಕೆ ಮಾಡಿರುತ್ತಾರೆ.ನೂತನ ಪದಾಧಿಕಾರಿಗಳನ್ನು ಗೌರವಾಧ್ಯಕ್ಷ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹ.ಮ‌.ಪೂಜಾರ , ಜಿಲ್ಲಾ ಅಧ್ಯಕ್ಷರು ಪ್ರೊಫೆಸರ್ ಎ.ಆರ್.ಹೆಗ್ಗನದೊಡ್ಡಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ, ಚುನಾವಣೆ ಸಾಕ್ಷರತೆ ಕ್ಲಬ್ ವತಿಯಿಂದ ಸಮುದಾಯ ವೈದ್ಯಕೀಯ ವಿಭಾಗದ, ಎರಡನೆ ಮಹಡಿಯಲ್ಲಿ ಡೆಮಾಕ್ರಸಿ ರೂಮ್, ಡೆಮಾಕ್ರಸಿ ವಾಲ್ ಹಾಗೂ ಇಎಲ್‌ಸಿ ವೆಬ್‌ಪೇಜ್ ನ್ನು ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಬುಧವಾರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವಲ್ಲಿ ಇಂಥ ಶೈಕ್ಷಣಿಕ ಮತ್ತು ಡಿಜಿಟಲ್ ವೇದಿಕೆಗಳು ಅಗತ್ಯವಾಗಿವೆ. ಡೆಮಾಕ್ರಸಿ ರೂಮ್ ಮತ್ತು ಡೆಮಾಕ್ರಸಿ ವಾಲ್‌ಗಳು ಭಾರತೀಯ ಚುನಾವಣೆ ವ್ಯವಸ್ಥೆ, ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಮತದಾರರ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹೊಂದಿವೆ. ಇವು ಪ್ರಜಾಪ್ರಭುತ್ವದ ಅರಿವು ಮತ್ತು ನಾಗರಿಕ ಹೊಣೆಗಾರಿಕೆಯನ್ನು ಬೆಳೆಸುವ ಶೈಕ್ಷಣಿಕ ವೇದಿಕೆಗಳಾಗಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.ಚುನಾವಣೆ ಸಾಕ್ಷರತೆ ಕ್ಲಬ್ ನೋಡಲ್ ಅಧಿಕಾರಿ ಡಾ. ಸಂದೀಪ ಯಂಕಂಚಿ ಮಾತನಾಡಿ, ಸಾಕ್ಷರತೆ ಕ್ಲಬ್ ವತಿಯಿಂದ ಮತದಾರ ಜಾಗೃತಿ ಕಾರ್ಯಕ್ರಮಗಳು, ಶೈಕ್ಷಣಿಕ ಅಭಿಯಾನಗಳು, ವಿದ್ಯಾರ್ಥಿ ತೊಡಗಿಸಿಕೊಳ್ಳುವ ಚಟುವಟಿಕೆಗಳು ಹಾಗೂ ಸಮುದಾಯ ಸಂಪರ್ಕ ಕಾರ್ಯಕ್ರಮಗಳನ್ನು…

Read More

ಸಿಂದಗಿಯ ಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ಸಾರಂಗ ಮಠ ನೀಡಲಾಗುವ ರಾಷ್ಟ್ರೀಯ ಭಾಸ್ಕರ ಪ್ರಶಸ್ತಿ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಾರತವು ವಿಶ್ವಗುರು ಸ್ಥಾನವನ್ನು ಪಡೆಯಬೇಕಾದರೆ ವಿಜ್ಞಾನ–ತಂತ್ರಜ್ಞಾನ, ಜ್ಞಾನಾಧಾರಿತ ಚಿಂತನೆ ಹಾಗೂ ಗುಣಮಟ್ಟದ ಶಿಕ್ಷಣವೇ ಅದರ ಬಲಿಷ್ಠ ಅಡಿಪಾಯವಾಗಬೇಕು ಎಂದು ಖ್ಯಾತ ಪರಮಾಣು ವಿಜ್ಞಾನಿ, ಪದ್ಮಶ್ರೀ–ಪದ್ಮವಿಭೂಷಣ ಪುರಸ್ಕೃತ ಡಾ. ಅನಿಲ್ ಕಾಕೋಡಕರ ಹೇಳಿದರು.ಅವರು ಸಿಂದಗಿಯ ಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ಸಾರಂಗ ಮಠ–ಸಿಂದಗಿ ವತಿಯಿಂದ ಪ್ರತಿವರ್ಷ ನೀಡಲಾಗುವ ರಾಷ್ಟ್ರೀಯ ಭಾಸ್ಕರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಪ್ರಗತಿ ಕೃಷಿ, ಕೈಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೆ ಬಲ ನೀಡಿದೆ ಎಂದು ಅವರು ತಿಳಿಸಿದರು.ಸ್ವದೇಶಿ ಸಂಶೋಧನೆ, ನವೀನ ಆವಿಷ್ಕಾರಗಳು ಹಾಗೂ ತಾಂತ್ರಿಕ ಆತ್ಮನಿರ್ಭರತೆಯೇ ಭಾರತದ ಆರ್ಥಿಕ ಬಲವಾಗಬೇಕು ಎಂದು ಅಭಿಪ್ರಾಯಪಟ್ಟ ಅವರು, ಸಂಪನ್ಮೂಲಗಳಿಗಿಂತ ಜ್ಞಾನ ಸಂಪತ್ತಿನ ಮೇಲೆ ವಿಶ್ವಾಸವಿಟ್ಟಾಗ ಮಾತ್ರ ಭಾರತ ಜಾಗತಿಕ ನಾಯಕತ್ವ ಸಾಧಿಸಲಿದೆ ಎಂದರು. ಯುವಜನರಲ್ಲಿ ಅಡಗಿರುವ…

Read More

ಜಮಖಂಡಿಯಲ್ಲಿ ಕೌಮಿ ಏಕತಾ ಸಮ್ಮೇಳನ ಉದ್ಘಾಟಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕರೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ದಲಿತರ ಮುಸಲ್ಮಾನರು ಸಮಸ್ಯೆಗಳನ್ನು ಒಂದೆಯಾಗಿವೆ, ಸಮಸ್ಯೆಗಳ ಬಗ್ಗೆ ಚಿಂತನೆಗಳು ನಡೆಯಬೇಕಿದೆ, ಒಗ್ಗಟ್ಟಿನಿಂದ ಹೋರಾಟಮಾಡಬೇಕು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಅಬುಬಕರ ದರ್ಗಾ ಮೈದಾನದಲ್ಲಿ ನಡೆದ ಶಹೀದ ಹಜರತ ಟಿಪು ಸುಲ್ತಾನ ಜಯಂತ್ಯೋತ್ಸವ ಸಮೀತಿ ಹಮ್ಮಿಕೊಂಡಿದ್ದ ಕೌಮಿ ಏಕತಾ(ಸರ್ವಧರ್ಮ ಸಮ್ಮೇಳನ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಕಳೆದ 12 ವರ್ಷಗಳಿಂದ ಭಾರತ ಬದಲಾಗಿದೆ. ಹೆಜ್ಜೆ-ಹೆಜ್ಜೆಗೂ ಸಮಸ್ಯೆಗಳು ಎದುರಾಗುತ್ತಿವೆ, ಕಾಲ ಬದಲಾಗಿದೆ, ಕಾಲಕ್ಕೆ ತಕ್ಕಂತೆ ಬದಲಾವಣೆ ತಂದುಕೊಳ್ಳಬೇಕು, ಶಿಕ್ಷಣ ಇಲ್ಲದೇ ಬದುಕು ಸಾಗಿಸುವ ಕಾಲ ಇಲ್ಲ ಶಿಕ್ಷಣಕ್ಕೆ ಬಹಳ ಮಹತ್ವವಿದೆ, ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದರು.ಟಿಪು ಸುಲ್ತಾನರ ಆಡಳಿತ, ಜಾರಿಗೆ ತಂದ ಕಾನೂನುಗಳ ಬಗ್ಗೆ ತಿಳುವಳಿಕೆ ನೀಡುವ ಕೆಲಸವಾಗಬೇಕಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ, ದೇಶಕ್ಕಾಗಿ ಮಕ್ಕಳನ್ನು ಬಲಿ ನೀಡಿದ ಅವರ ದೇಶಭಕ್ತಿಯ ಕುರಿತು ಎಲ್ಲರಿಗೂ ಮಾಹಿತಿ ನೀಡುವ ಕೆಲಸವಾಗಬೇಕು. ಇತಿಹಾಸವನ್ನು ತಿಳಿದುಕೊಳ್ಳಬೇಕು ಅದಕ್ಕಾಗಿ…

Read More

ಸತ್ಸಂಗಅಮೃತಾನಂದ ಶ್ರೀಗಳು ಸಿದ್ದೇಶ್ವರ ಶ್ರೀ ಆಶ್ರಮ ಕಾತ್ರಾಳ – ಬಾಲಗಾಂವ ಅವರಿಂದ ಇಂಡಿಯಲ್ಲಿ ನಡೆದ ಪ್ರವಚನ ಸಾರ ಸಂಗ್ರಹ- ಉಮೇಶ ಕೋಳೆಕರಇಂಡಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸಂತೋಷ ಸಮಾಧಾನ ತರುವ ವಿದ್ಯೆ ನಮಗೆ ಬೇಕುಹೊರಗಿನ ವಸ್ತುಗಳ ಬಗ್ಗೆ ಕಲಿಯುವದು ವಿದ್ಯೆ ಎಂದರೆ ಅದು ಸಂತೋಷ ಸಮಾಧಾನ ಕೊಡಬೇಕು. ವಿದ್ಯೆ ಉಳ್ಳವನ ಮುಖವು ಮುದ್ದು ಬರುವಂತಿದ್ದು ವಿದ್ಯಾ ಇಲ್ಲದವನ ಮುಖವು ಹಾಳುರ ಹದ್ದಿನಂತಿದೆ ಎಂಬ ಪ್ರತೀತಿ ಇದೆ. ವಿದ್ಯಾ ಜ್ಞಾನದ ಲಕ್ಷಣ. ಮನುಷ್ಯ ಚಿಂತೆಯಿಂದ ಮುಕ್ತನಾಗಬೇಕು. ಮನಸ್ಸಿನಲ್ಲಿ ಕೆಟ್ಟ ಚಿಂತೆ ಆಲೋಚನೆ ಅಸಮಾಧಾನ ಇರಬಾರದು. ಕಲಿತು ಖಿನ್ನರಾದರೆ ಚಿಂತೆ ಹೆಚ್ಚಾದರೆ ಜೀವನವೇ ಅಲ್ಲ. ಹೆಚ್ಚು ಸಮಾಧಾನ ಇರಲು ಕಲಿಯಬೇಕು. ಶಾಲೆ ಕಲಿಯದವನಿಗೆ ಜ್ಞಾನ ಇಲ್ಲ ಎಂದು ಹೇಳುತ್ತೇವೆ. ಕಲಿತವರಿಗೆ ಸಮಸ್ಯೆ ಚಿಂತೆ ದುಃಖ ಅಸಮಾಧಾನವಿದೆ. ಹೊರಗಿನ ವಸ್ತು ತಿಳಿಯಲು ಕಲಿತಿದ್ದೇವೆ. ಆಧ್ಯಾತ್ಮ ನಿಜವಾದ ವಿದ್ಯೆ ಲೌಕಿಕ ವಿದ್ಯೆಗೆ ಸಮಾಧಾನವಿಲ್ಲ, ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ.ಗುರುಕುಲಗಳಲ್ಲಿ ೧೨ ವರ್ಷದ ಮಕ್ಕಳು ಅಭ್ಯಾಸ ಮಾಡುತ್ತಿದ್ದರು. ಮಕ್ಕಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ೩೦ ವರ್ಷಗಳಿಂದ ಮನೆಗಳಿಗೆ ಉತಾರೆ ನೀಡುವಂತೆ ೩೦ಕ್ಕೂ ಹೆಚ್ಚು ಅರ್ಜಿಗಳನ್ನು ನೀಡಿದರೂ ಉತಾರೆ ಕೊಡುತ್ತಿಲ್ಲ. ಮತ್ತು ವಾರ್ಡ್ ನಂ ೧೩ ರಲ್ಲಿ ಬೇರೆ ಊರಿನ ಮತ್ತು ಬೇರೆ ಬೇರೆ ವಾರ್ಡುಗಳ ಮತದಾರರ ಹೆಸರುಗಳನ್ನು ಮತದಾರರ ಯಾದಿಯಲ್ಲಿ ಸೇರಿಸಲಾಗಿದೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಮುಖಂಡ ಬಸವರಾಜ ಕೊಳೂರ ನೇತೃತ್ವದಲ್ಲಿ ಇಲ್ಲಿನ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.ಇಂದಿರಾ ನಗರದಿಂದಲೇ ಹೋರಾಟ ಪ್ರಾರಂಭಿಸಿದ ನೂರಾರು ಹೋರಾಟಗಾರರು ಹಲಿಗೆ ಬಡಿಯುತ್ತ, ಬೇಕೆ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೋಗುತ್ತ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಪುರಸಭೆ ಬಳಿಯ ವಾಲ್ಮೀಕಿ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಸೀಲ್ದಾರ ಕಚೇರಿಯವರೆಗೆ ಸಾಗಿ ಧರಣಿ ಆರಂಭಿಸಿದರು. ಕೆಲ ಸಮಯದ ಬಳಿಕ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ ಕೀರ್ತಿ ಚಾಲಕ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದರ ಧರಣಿ…

Read More