Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ, ಪಟ್ಟಣದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಅಮೃತ ಯೋಜನೆ ೨.೦ ಅಡಿಯಲ್ಲಿ ಅಂದಾಜು ೩,೫೦೦ ನಲ್ಲಿ ಸಂಪರ್ಕ, ಭಜನಾ ಮಂಟಪದ ನವೀಕರಣ, ಅಗಸಿ ದ್ವಾರದ ಕಾಮಗಾರಿ ಸೇರಿದಂತೆ ಪಟ್ಟಣಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಮೂಲಕ ಪಟ್ಟಣವು ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ವಿಠ್ಠಲ ಮಂದಿರದ ಹತ್ತಿರ ಮನಗೂಳಿ ಪಟ್ಟಣ ಪಂಚಾಯಿತಿಯ ಸನ್ ೨೦೨೩-೨೪ ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನದಲ್ಲಿ ಅಂದಾಜು ಮೊತ್ತ ೨೦ ಲಕ್ಷ ರೂ.ಯಲ್ಲಿ ಕೈಗೊಂಡಿರುವ ವಿಠ್ಠಲ ಮಂದಿರದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಮಾಡುವ ಜೊತೆಗೆ ಅಲ್ಲಿ ವಾಯು ವಿಹಾರ ಟ್ರ್ಯಾಕ್, ಮಕ್ಕಳಿಗೆ ಆಟಿಕೆ ಸಾಮಾನುಗಳ ಅಳವಡಿಕೆ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಸಿದ್ಧಾರೂಢರ ಮಹಾಪುರಾಣ ಮಂಗಲ ಕಾರ್ಯಕ್ರಮದ ಅಂಗವಾಗಿ ಜೋಡಿ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು.ಗ್ರಾಮದ ಶ್ರೀಕಾಶೀ ವಿಶ್ವನಾಥ ಕೈಲಾಸ ಮಂದಿರದಲ್ಲಿ ಹಮ್ಮಿಕೊಂಡ ಸಿದ್ಧಾರೂಢರ ಮಹಾಪುರಾಣ ಮಂಗಲದ ಅಂಗವಾಗಿ ವಾಲಗ, ಕಳಸ,ಕುಂಭ, ಪುರವಂತರ ಸೇವೆಯೊಂದಿಗೆ ಆರಂಭಗೊಂಡ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಚೌಕಿಮಠದ ಅಭಿನವ ಮುರುಗೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ ಪುರಾಣಿಕ ರಮೇಶ ಶರಣರು, ನಿಂಗಣ್ಣ ಶರಣರು, ಶಿವಪ್ಪ ತಾಳಿಕೋಟಿ, ಗುರಣ್ಣ ಚಾಂದಕವಟೆ, ನಿಂಗಣ್ಣ ಸಜ್ಜನ, ಚನ್ನಪ್ಪ ಭದ್ರಗೊಂಡ, ಚಿದಾನಂದ ನಾಶೀ, ಭೀಮನಗೌಡ ಹಳವಣ್ಣಿ, ಬಸವರಾಜ ಸುಂಬಡ, ಚನ್ನಪ್ಪಗೌಡ ಬಿರಾದಾರ, ಅಶೋಕ ಹುಣಸಗಿ, ಸಂತೋಷ ಯತ್ನಾಳ, ಮಾಂತೇಶ ಜಂಬುಗೋಳ, ಎಂ.ಡಿ.ಮನಹಳ್ಳಿ , ರಾಮು ಯತ್ನಾಳ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಸಂಜೆ ಸೇರಿದ ಕಾರ್ಯಕರ್ತರು ಪಕ್ಷದ ಜಯವನ್ನು ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಪ್ರಕೋಷ್ಟ ಸಂಚಾಲಕ ಭೀಮನಗೌಡ ಲಚ್ಯಾಣ, ಮಂಡಲದ ಖಜಾಂಚಿ ಸೋಮಶೇಖರ ಮಾತನಾಡಿ, ದೆಹಲಿಯಲ್ಲಿ ಬಿಜೆಪಿಯ ೨೭ ವರ್ಷಗಳ ವನವಾಸ ಕೊನೆಗೊಳ್ಳುವುದರ ಮೂಲಕ ಪ್ರಧಾನಿ ಮೋದಿ ಹಾಗೂ ಅಮೀತ್ ಶಾ ಅವರ ಬಹುದಿನದ ಕನಸು ನನಸಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೂ ಸ್ಥಾನ ನೀಡದೇ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ದೆಹಲಿ ಮತದಾರರು ಉತ್ತಮ ಕಾರ್ಯವನ್ನೇ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಜಲಕತ್ತಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ರಾವುತ ಅಗಸರ, ರಮೇಶ ಈಳಗೇರ, ಕಲ್ಮೇಶ ಬುದ್ನಿ, ಶ್ರೀಶೈಲ ಯಂಭತ್ನಾಳ, ಸೋಮು ದೇವೂರ, ಬಸವರಾಜ ದೇವಣಗಾಂವ, ಕಾಶೀನಾಥ ಕಡ್ಲೇವಾಡ, ರಮೇಶ ಹಂಚಲಿ, ಶ್ರೀಧರ…
ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ :ಎಸಿ ಗದ್ಯಾಳ ಉದಯರಶ್ಮಿ ದಿನಪತ್ರಿಕೆ ಇಂಡಿ: ಬಡತನದಲ್ಲಿ ಹುಟ್ಟಿದ್ದು ತಪ್ಪಲ! ಆದರೆ ಬಡತನದಲ್ಲಿ ಸಾಯುವುದು ತಪ್ಪು.! ಬಡತನವನ್ನು ಮೆಟ್ಟಿ ನಿಲ್ಲಲು ಬಡತನವನ್ನು ಚಾಲೆಂಜಾಗಿ ಸ್ವೀಕಾರ ಮಾಡಬೇಕು. ನಿಮ್ಮಲ್ಲಿರುವ ಬಡತನವನ್ನು ಓಡಿಸುವ ಜೊತೆಗೆ ನಿಮ್ಮ ಸುತ್ತಮುತ್ತಲಿರುವ ಪರಿಸರ, ಪ್ರಕೃತಿಯಲ್ಲಿಯ ಬಡತನ ಓಡಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆ ಹಾಗೂ ಪಿ.ಯು ಕಾಲೇಜಿನ ಆಶ್ರಯದಲ್ಲಿ ಜರುಗಿದ ಎಸ್ ಎಸ್ ಎಲ್ ಸಿ ಹಾಗೂ ಪಿಯು ಕಾಲೇಜು ವಿಧ್ಯಾರ್ಥಿಗಳ ಬಿಳ್ಕೋಡುವ ಹಾಗೂ ವಾರ್ಷಿಕ ಸ್ನೇಹ ಸಮ್ಮೆಳದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯಶಸ್ಸಿಗೆ ನಿರಂತರ ಪರಿಶ್ರಮ, ಬದ್ಧತೆ, ಪ್ರಾಮಾಣಿಕತೆ ಅನಿವಾರ್ಯ,ಅತ್ಯಗತ್ಯ. ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ. ಮಕ್ಕಳ ಸರ್ವಾಂಗೀಣ ವಿಕಾಸವೇ ಶಿಕ್ಷಣದ ಆಶಯ. ಶಿಕ್ಷ ಣ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳನ್ನು ಕಲಿಸುವ ಮೂಲಕ ಸಾತ್ವಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲೆ ಒಳ್ಳೆಯ ಗುಣನಡತೆಗಳನ್ನು ರೂಢಿಸಿಕೊಳ್ಳಬೇಕು. ಪ್ರೀತಿ, ತ್ಯಾಗ, ಪರೋಪಕಾರ, ಸತ್ಯ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ವಿಜಯಪುರ ರಸ್ತೆಯ ಕರ್ನಾಟಕ ಬ್ಯಾಂಕ ಹತ್ತಿರದ ಮೈನೋದ್ದಿನ ಚಪ್ಪರಬಂದ ಇವರಿಗೆ ಸೇರಿದ ಅಂಗಡಿಗೆ ಬೆಳಿಗ್ಗೆ ೧೦.೧೫ ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.ಅಂಗಡಿಯು ಮೋಟಾರು ಬಾಯಿಕ ಶೋ ರೋಮ ಮತ್ತು ಬಿಡಿಭಾಗ ಮತ್ತು ಸೀಟ ಕವರ ಮಾರಾಟ ಮಾಡುವದಾಗಿದೆ.ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಒಂದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜೀವನ ಹಣೆಬರಹದ ಮೇಲೆ ನಿಲ್ಲದೇ ಅದು ನಮ್ಮ ಹಣೆಬೆವರಿನ ಮೇಲೆ ನಿಂತಿದೆ. ಸಾಧನೆಯನ್ನು ಯಾರೂ ಬೇಕಾದರೂ ಮಾಡಬಹುದು. ತಾವು ಮಾಡುವ ಕೆಲಸದ ಬಗ್ಗೆ ಕೀಳರಿಮೆ ತಾಳದೇ ತಮ್ಮ ಕೆಲಸವನ್ನು ತೃಪ್ತಿಯಿಂದ ಮಾಡಿದರೆ ಸಾಧನೆ ಮಾಡಲು ಸಾಧ್ಯ ಎಂದು ವೈದ್ಯಭೂಷಣ ಪ್ರಶಸ್ತಿ ಪುರಸ್ಕ್ರತ, ಪ್ರೇರಣದಾಯಕ ಭಾಷಣಕಾರ ಡಾ.ರಾಹುಲ್ ದೇವರಾಜ ಹೇಳಿದರು.ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ನಂದಿ ಶಿಕ್ಷಣ ಸಂಸ್ಥೆಯ ನಂದಿ ಪ್ರಾಥಮಿಕ ಮತ್ತು ಪ್ರೌಢಶಾಲೆ(ಆಂಗ್ಲ ಮತ್ತು ಕನ್ನಡ ಮಾಧ್ಯಮ) ಹಾಗೂ ನಂದಿ ಸಂಸ್ಕ್ರತ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವದಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳಿಗೂ ಯಾವದರಲ್ಲಿ ಕುಗ್ಗದಂತೆ ಬೆಳೆಸಬೇಕು. ಜೀವನದಲ್ಲಿ ಕಷ್ಟ ಇರುತ್ತದೆ. ಇದನ್ನು ಜಯಿಸಬೇಕು. ಮಕ್ಕಳಲ್ಲಿ ಸದೃಢ ವರ್ತನೆ ಬೆಳೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರವನ್ನು ನೀಡಬೇಕು. ಮಕ್ಕಳು ದೊಡ್ಡವರಿಗೆ ಗೌರವ ಕೊಡುವುದನ್ನು ಕಲಿಸಬೇಕೆಂದರು.ಜಗತ್ತಿನಲ್ಲಿ ಸಂಪತ್ತನ್ನು ಕಳ್ಳರು ಕದಿಯುತ್ತಾರೆ. ಅದೇ ನಮ್ಮಲ್ಲಿರುವ ವಿದ್ಯೆಯನ್ನು ಯಾರೂ ಕಲಿಯಲು ಸಾಧ್ಯವಿಲ್ಲ. ಇಂತಹ ಅಮೂಲ್ಯವಾದ ವಿದ್ಯೆಯನ್ನು…
– ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಮೇರಿ ಕ್ಯೂರಿ ಯುರೇನಿಯಂ ಅದಿರನ್ನು ಜಗತ್ತಿಗೆ ಪರಿಚಯಿಸಿದ ಪೋಲ್ಯಾoಡಿನ ಖ್ಯಾತ ಮಹಿಳಾ ವಿಜ್ಞಾನಿ. 1867ರಲ್ಲಿ ಪೋಲ್ಯಾಂಡಿನ ವಾರ್ಸಾದಲ್ಲಿ ಇವರು ಜನಿಸಿದರು. ಅವರ ತಂದೆ ಗಣಿತ ಮತ್ತು ಭೌತಶಾಸ್ತ್ರವನ್ನು ಕಲಿಸುತ್ತಿದ್ದರು. ಇದರಿಂದಾಗಿಯೇ ವಿಜ್ಞಾನದ ಬಗ್ಗೆ ಆರಂಭಿಕ ಪ್ರತಿಭೆಯನ್ನು ಕ್ಯೂರಿ ಬೆಳೆಸಿಕೊಂಡರು. ಚಿಕ್ಕಂದಿನಿಂದಲೇ ಚತುರೆಯಾಗಿದ್ದ ಇವರು ಪ್ರೌಢಶಾಲೆಯಲ್ಲೇ ಚಿನ್ನದ ಪದಕವನ್ನು ಗಳಿಸಿದ್ದರು. 1891 ರಲ್ಲಿ ಇವರು ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ಯಾರಿಸ್ ಗೆ ತೆರಳಿದರು. ಸೌಕನ್ ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಪದವಿಯನ್ನು ಪಡೆದರು.ಮೇರಿ ಕ್ಯೂರಿ ಒಬ್ಬ ಸುಶಿಕ್ಷಿತ ಪ್ರತಿಭಾವಂತ ಸರಳ ಸ್ವಭಾವದ ಮಹಿಳೆ. ದೈಹಿಕ ಶ್ರಮ ಮತ್ತು ಗುರುಸೇವೆ ಮಾಡಿ ವಿಜ್ಞಾನದ ಪದವಿಯನ್ನು ಪಡೆದರು. ಪ್ರಧಾನ ಬೋಧಕರಾಗಿದ್ದ ಅನೇಕ ಸಂಶೋಧನೆಗಳನ್ನು ಮಾಡಿದ್ದ ಪಿಯರಿ ಕ್ಯೂರಿ ಅವರ ಬಳಿ ಕಲಿಯುತ್ತಿದ್ದಾಗ ಅವರಲ್ಲಿ ಗೌರವ,ಮೈತ್ರಿ, ಪ್ರೀತಿ ಬೆಳೆದು 1895 ರಲ್ಲಿ ಮೇರಿ -ಪಿಯರಿ ದಂಪತಿಗಳಾದರು.ಉತ್ತಮ ಸಹಧರ್ಮಣಿಯಾಗಿ ಮನೆ ಕೆಲಸದ ಜೊತೆಗೆ ಪತಿಯ ಸೇವೆ ಮಾಡುತ್ತಿದ್ದರು.…
ರಚನೆ- ಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ನಿನ್ನ ಅರ್ಧ ಕನಸುನನ್ನ ಅರ್ಧ ಕನವರಿಕೆಕೂಡಿ ಕೊಂಡವುಸುಂದರ ನನಸುಸ್ನೇಹ ಪ್ರೀತಿ ಒಲವುಬೆಸುಗೆ ಹಾಕಿದ ಮನಸ್ಸುಅದೆಷ್ಟೋ ದೂರದ ದಾರಿಸವೆಸಿದ್ದು ಗೊತ್ತಾಗಲಿಲ್ಲನಿನಗೆ ನಾನುನನಗೆ ನೀನುಭಾವ ಭದ್ರತೆಯಚಿಗುರು ಸೊಗಸುಇದೆ ಬಾಳ ಬಟ್ಟೆಯಗಟ್ಟಿ ಗುರಿಚೆಲುವ ಕನಸು
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಗುಲ್ಬರ್ಗದ ಕೊಳಗೇರಿಯಲ್ಲಿ ತರಕಾರಿ ಮಾರುತ್ತಿದ್ದ ಹೆಣ್ಣುಮಗಳನ್ನು ಆಕೆಯ ಗಂಡನೇ ಆ ದಿನ ರಾತ್ರಿ ಆಕೆಯ ಕೊರಳಿನ ತಾಳಿಯನ್ನು ಕೊಡಲು ಕೇಳಿದ. ಇದ್ದುದು ಅದೊಂದೇ ಜೊತೆ ಚಿನ್ನದ ತಾಳಿ ಬೊಟ್ಟು. ಸಹಜವಾಗಿಯೇ ಸಂಪ್ರದಾಯಸ್ಥ ಮನಸ್ಥಿತಿಯ ಆ ಹೆಣ್ಣು ಮಗಳು ಕೊಂಚ ಹಿಂಜರಿದಾಗ ‘ಗಟ್ಟಿ ಗುಂಡು ಕಲ್ಲಿನಂಗ ನಾನ ಅದೀನಿ… ತಾಳಿ ಬೊಟ್ಟ ಮಾರಿದರೆ ನಿನ್ನ ಮಗಳ ಸಾಲಿ ಫೀಸ್ ಕಟ್ಟಾಕ ಬರ್ತೈತಿ’ ಎಂದು ಹೇಳಿದಾಗ ಮರು ಮಾತಿಲ್ಲದೆ ಕೊರಳ ತಾಳಿಯನ್ನು ಬಿಚ್ಚಿಕೊಟ್ಟ ಆಕೆ ಅರಿಶಿಣದ ಕೊಂಬನ್ನು ಕೊರಳಲ್ಲಿ ಧರಿಸಿದಳು.ಹೀಗೆ ಆಕೆಯಿಂದ ತಾಳಿಯ ಬೊಟ್ಟನ್ನು ಇಸಿದುಕೊಂಡು ಮಾರಿ ಮಗಳ ವೈದ್ಯಕೀಯ ಕಾಲೇಜಿನ ಫೀಸ್ ಕಟ್ಟಿದವರು ಬಾಬುರಾವ್ ದೇಶಮಾನೆ ಮತ್ತು ಆ ವೈದ್ಯಕೀಯ ಪದವಿಯನ್ನು ಪಡೆದು ಸ್ನಾತಕೋತ್ತರ ವೈದ್ಯಕೀಯದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಕಳಾದ ಆ ಮಗಳೇ ನಮ್ಮ ಇಂದಿನ ಕಥೆಯ ಸ್ಫೂರ್ತಿ ದೇವತೆ ಡಾ. ವಿಜಯಲಕ್ಷ್ಮಿ ದೇಶಮಾನೆ. ದೇಶಮಾನೆ ಎಂಬುದು ಅವರ ಮನೆತನದ ಅಡ್ಡ ಹೆಸರಲ್ಲ……
ದೆಹಲಿ ಚುನಾವಣೆ ಪಲಿತಾಂಶ | ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ | ಅರವಿಂದ್ ಕೇಜ್ರಿವಾಲ್ ಗೆ ಸೋಲಿನ ಆಘಾತ ನವದೆಹಲಿ: ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುವ ಮೂಲಕ ದೆಹಲಿ ಗದ್ದುಗೆಯನ್ನು 27 ವರ್ಷಗಳ ನಂತರ ಏರುತ್ತಿದೆ. ವಿಧಾನಸಭೆಯ ಒಟ್ಟು 70 ಕ್ಷೇತ್ರಗಳಲ್ಲಿ ಪಕ್ಷವು 48 ಸ್ಥಾನಗಳನ್ನು ಗಳಿಸಿದ್ದು, ಆಡಳಿತರೂಢ ಎಎಪಿಯ ಸಂಖ್ಯೆ 22 ಕ್ಕೆ ಇಳಿದಿದೆ. ಪಕ್ಷದ ಪ್ರಮುಖ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುಂಡಿದ್ದು ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಅದಾಗ್ಯೂ, ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಕಲ್ಕಾಜಿ ಕ್ಷೇತ್ರವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.2020ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು, ಬಿಜೆಪಿಗೆ 8 ಸ್ಥಾನಗಳಲ್ಲಿ ಸಮಾಧಾನ ಪಡುವಂತೆ ಮಾಡಿತ್ತು. ಅದಕ್ಕೂ ಮುಂಚಿನ 2015ರ ಚುನಾವಣೆಯಲ್ಲಿ ಎಎಪಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 67 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಬಿಜೆಪಿಗೆ 3 ಸ್ಥಾನಗಳಷ್ಟೆ ದಕ್ಕಿತ್ತು. ಅದಾಗ್ಯೂ,…
