Author: editor.udayarashmi@gmail.com

ಲೇಖನವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ವ್ಯಾಪಾರಕ್ಕಿಳಿದ ಉನ್ನತ ಶಿಕ್ಷಣದ ವಿಶ್ವವಿದ್ಯಾಲಯಗಳು..ಭಾರತದ ವಿಶ್ವವಿದ್ಯಾಲಯಗಳಿಗೆ ಐತಿಹಾಸಿಕ ಮಹತ್ವವಿದೆ. ಭಾರತದಲ್ಲಿ ಅಜ್ಞಾನ, ಅನಕ್ಷರತೆ ಬಹಳ ಹಿಂದಿನಿಂದಲೂ ತಾಂಡವವಾಡುತ್ತಿದ್ದರೂ, ಶೋಷಿತ ವರ್ಗಗಳನ್ನು ಶಿಕ್ಷಣದಿಂದ ದೂರ ಇಟ್ಟಿದ್ದರೂ, ಕೆಲವು ವರ್ಗಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿಯೇ ಇತ್ತು. ಗುರುಕುಲ ಶಿಕ್ಷಣದ ಜೊತೆಗೆ ಭಾರತದಲ್ಲಿ ಬಹಳ ಹಿಂದೆಯೇ ನಳಂದ, ತಕ್ಷಶಿಲಾ ಮುಂತಾದ ವಿಶ್ವವಿದ್ಯಾಲಯಗಳಿದ್ದವು. ಸ್ವಾತಂತ್ರ ಪೂರ್ವದಲ್ಲಿಯೇ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಸ್ಥಾಪಿತವಾಯಿತು. ಸ್ವಾತಂತ್ರ್ಯ ನಂತರದಲ್ಲಿ ಶಿಕ್ಷಣ ಎಲ್ಲಾ ಸಾಮಾನ್ಯರ ಮೂಲಭೂತ ಹಕ್ಕಾದ ಮೇಲೆ ಕಲ್ಕತ್ತಾ, ಮುಂಬೈ, ಮದ್ರಾಸ್, ದೆಹಲಿ, ಬೆಂಗಳೂರು ಮುಂತಾದ ನಗರಗಳಲ್ಲಿ ವಿಶ್ವವಿದ್ಯಾಲಯಗಳು ಬಹಳ ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿದವು..ಆಗೆಲ್ಲಾ ತಾಲ್ಲೂಕಿಗೆ ಒಬ್ಬರು ಅಥವಾ ಇಬ್ಬರು ಮಾತ್ರ ಉನ್ನತ ಶಿಕ್ಷಣದ ಹಂತ ತಲುಪುತ್ತಿದ್ದರು. ಮುಂದೆ ಉನ್ನತ ಶಿಕ್ಷಣ ಮತ್ತು ಸಂಶೋಧನೆಯ ಅನೇಕ ವಿಶ್ವವಿದ್ಯಾಲಯಗಳು ಪ್ರಾರಂಭವಾದವು. ಆಗ ನಿಜಕ್ಕೂ ಡಾಕ್ಟರೇಟ್ ಪ್ರಬಂಧಗಳು ಅಥವಾ ಸ್ನಾತಕೋತ್ತರ ವಿದ್ಯಾರ್ಥಿಗಳ ಅಧ್ಯಯನದ ಗುಣಮಟ್ಟ ತುಂಬಾ ಮೇಲ್ದರ್ಜೆಯದಾಗಿತ್ತು. ಎಷ್ಟೋ ಜನ ಅವರವರ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಇನ್ನಷ್ಟು ಉತ್ತೇಜಿಸಲು ಶಿಕ್ಷಣ ಇಲಾಖೆ ಫೋನ್ ಇನ್ ನೇರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಬರುವ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕಿ ಪಿ.ಎ.ಬಾಳಿಕಾಯಿ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಇಂಗ್ಲೀಷ್ ವಿಷಯದ ಫೋನ್ ಇನ್ ನೇರ್ ಕಾರ್ಯಕ್ರಮದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮ ನೇರವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲುಪುವಂತಹದ್ದು. ವಿದ್ಯಾರ್ಥಿಗಳಿಗೆ ಯಾವುದೇ ವಿಷಯದಲ್ಲಿ ಯಾವುದೇ ಸಂದೇಹಗಳಿದ್ದರೂ ಸುಲಭವಾಗಿ ಫೋನ್ ಮೂಲಕ ಬಗೆಹರಿಸಿಕೊಳ್ಳಬಹುದು. ಇದರಿಂದ ರಾಜ್ಯದ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿಯೂ ಸಾಕಷ್ಟು ಸುಧಾರಣೆ ತರಲು ಸಾಧ್ಯ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಂಡು ತಮ್ಮಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದರು.ಈ ವೇಳೆ ಇಂಗ್ಲೀಷ್ ವಿಷಯದಲ್ಲಿ ನುರಿತ ಶಿಕ್ಷಕರಾದ ಎನ್.ಬಿ.ಪಿಂಜಾರ, ವಾಗೇಶ ಹಿರೇಮಠ, ಬಸವರಾಜ ಹಂಚಲಿ, ಎಸ್.ಎಸ್.ಅಂಗಡಿ ಹಲವು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗೃಹಲಕ್ಷ್ಮಿ ಹಣದಿಂದ ಬದುಕು ಕಟ್ಟಿಕೊಂಡವರ ಯಶೋಗಾಥೆ ಜನರಿಗೆ ತಿಳಿಯುವಂತಾಗಬೇಕು. ಇದರಿಂದಾಗಿ ಸರಕಾರದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಬದುಕಿನಲ್ಲಿ ಹೊಸತನ ತಂದಿದೆ ಎಂಬುದನ್ನು ಜನರಿಗೆ ತಿಳಿಸುವಂತಾಗಬೇಕು ಎಂದು ಸಿಂದಗಿ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀಶೈಲ್ ಕೌಲಗಿ ಅಭಿಪ್ರಾಯಪಟ್ಟರು.ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಗಣಕಯಂತ್ರ ಚಾಲಿತ ತೂಕದ ಯಂತ್ರಗಳನ್ನು ಬಳಸಬೇಕೆಂಬ ಕಡ್ಡಾಯ ನಿಯಮವಿದ್ದರೂ ತಾಲೂಕಿನಾದ್ಯಂತ ಹಲವಾರು ಪಡಿತರ ನ್ಯಾಯ ಬೆಲೆ ಅಂಗಡಿಕಾರರು ಅದನ್ನು ಪಾಲಿಸುತ್ತಿಲ್ಲ ಅಂತಹ ಅಂಗಡಿಕಾರರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ತಾಪಂ ಇಒ ರಾಮು ಅಗ್ನಿ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಗ್ಯಾರಂಟಿ ಯೋಜನೆಯ ಸದಸ್ಯ ಸಾಹೇಬಪಟೇಲ್ ಅವಟಿ ಮಾತನಾಡಿ, ಪಡಿತರ ಧಾನ್ಯದ ತೂಕದಲ್ಲಿ ಮೋಸವಾಗುತ್ತಿದೆ. ಹಾಗೆಯೇ ಸರ್ಕಾರದಿಂದ ಪಡಿತರಂಗಡಿದಾರರಿಗೆ ಪಡಿತರ ಹಂಚಿಕೆಯಾದ ದಿನದಿಂದ ೨೦ದಿನಗಳವರೆಗೆ ದಿನಸಿ ಹಂಚಬೇಕೆನ್ನುವ ನಿಯಮವಿದ್ದರೂ ಒಂದೆರಡು ದಿವಸ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳಲ್ಲಿ ಹುಮ್ಮಸ್ಸು, ವಿಜ್ಞಾನ ಶಿಕ್ಷಕರಲ್ಲಿನ ಕುತೂಹಲ ಹಾಗೂ ಇತರೆ ವಿದ್ಯಾರ್ಥಿ ಹಾಗೂ ಶಿಕ್ಷಕರಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಎಂದು ಹಿರಿಯ ನ್ಯಾಯವಾದಿ ರಾಜಶೇಖರ ಚೌರ ಮಾತನಾಡಿದರು.ಸಿಂದಗಿ ಪಟ್ಟಣದ ಗ್ಲೋಬಲ್ ಸ್ಮಾರ್ಟ್ಕಿಡ್ಸ್ ಪೂರ್ವ ಪ್ರಾಥಮಿಕ ಹಾಗೂ ಇಂದಿರಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ರಬ್ಬಿನ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪಠ್ಯ ಪುಸ್ತಕಗಳನ್ನು ಓದು ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಮಾತೆ ರೇಖಾ ಕಟಕೆ ಮಾತನಾಡಿದರು. ಈ ವೇಳೆ ಶಾಲಾ ವ್ಯವಸ್ಥಾಪಕ ರವಿಕಿರಣ ಕಟಕೆ, ಪತ್ರಕರ್ತ ಶಿವಾನಂದ ಆಲಮೇಲ, ಖಾಧರಬಾಷಾ ಸೌದಾಗರ, ವಿಜಯಲಕ್ಷಿö್ಮÃ ತಳವಾರ, ಗೀತಾಚೆನ್ನಾ ವಂದನಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಾಗರೀಕರಿಗೆ ಆತ್ಮ ರಕ್ಷಣೆ ಹಾಗೂ ಆರೋಗ್ಯಕರವಾದ ಸಮಾಜ ನಿರ್ಮಾಣದ ಸಲುವಾಗಿ ದಿನಾಂಕ: 24-02-2025 ರಿಂದ ದಿನಾಂಕ: 02-03-2025 ರವರೆಗೆ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಸಲು ಉದ್ದೇಶಿಸಲಾಗಿರುತ್ತದೆ. ತರಬೇತಿಯು 07 (ಏಳು) ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 07.00 ಗಂಟೆಯಿಂದ 09.30 ಗಂಟೆಯ ವರೆಗೆ ನಡೆಯುತ್ತದೆ. ತರಬೇತಿಯು ಮುಕ್ತಾಯವಾದ ನಂತರ ಅರ್ಹ ಅರ್ಜಿದಾರರಿಗೆ ಪೊಲೀಸ್ ಅಧೀಕ್ಷಕರು, ವಿಜಯಪುರ ಜಿಲ್ಲೆ ರವರು ತರಬೇತಿ ಪತ್ರವನ್ನು ನೀಡುವರು.ಆಸಕ್ತರು ಪೊಲೀಸ್ ಹೆಡ್ ಕ್ವಾಟ್ರರ್ಸ್ ಆವರಣದಲ್ಲಿರುವ ವಿಜಯಪುರ ಜಿಲ್ಲಾ ಶಸ್ತ್ರಾಗಾರದಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ, ತಮ್ಮ ವಿಳಾಸದ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಪರಿಶೀಲನೆ (ಪೊಲೀಸ್ ವೆರಿಫಿಕೇಶನ್) ಮಾಡಿಸಿ, ವಿಳಾಸದ ಗುರುತಿನ ಚೀಟಿ ಮತ್ತು ಇತ್ತೀಚಿನ 03 ಭಾವಚಿತ್ರಗಳೊಂದಿಗೆ ದಿನಾಂಕ: 20-02-2025 ರ ಒಳಗಾಗಿ ಜಿಲ್ಲಾ ಶಸ್ತ್ರಾಗಾರ ವಿಭಾಗಕ್ಕೆ ಸಲ್ಲಿಸಬೇಕು.ನಿಬಂಧನೆಗಳು

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚು ಸಮಯ ಮೀಸಲಿಡಬೇಕು. ಪಾಠಗಳಲ್ಲಿ ಕ್ಲಿಷ್ಟವೆನಿಸಿದ ಅಂಶಗಳಿಗೆ ಉಪನ್ಯಾಸಕರಿಂದ ಪರಿಹಾರ ಕಂಡುಕೊಳ್ಳಬೇಕು. ಸ್ಪರ್ಧಾ ಜಗತ್ತನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಸಿದ್ದತೆಯಲ್ಲಿ ತೊಡಗಿಕೊಳ್ಳಬೇಕು ಎಂದು ಭೈರವಾಡಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಬಿ.ಪಾಟೀಲ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭಕೋರುವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಡಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ನಿರ್ದಿಷ್ಟ ಗುರಿಯೊಂದಿಗೆ ನಿರಂತರ ಪ್ರಯತ್ನದಿಂದ ಯಶಸ್ಸು ಕಾಣಬಹುದು ಎಂದು ಹೇಳಿದರು.ಉಪಪ್ರಾಚಾರ್ಯ ರಮೇಶ ಪೂಜಾರಿ ಮಾತನಾಡಿ, ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆಯಲ್ಲಿ ತೊಡಗಿಕೊಳ್ಳಬೇಕು. ವಿದ್ಯಾರ್ಥಿಗಳು ನಿಷ್ಠೆಯಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಅದು ಬದುಕಿನುದ್ದಕ್ಕೂ ನೆಮ್ಮದಿ ನೀಡುತ್ತದೆ ಎಂದು ಹೇಳಿದರು.ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶೇಖರ ಗೊಳಸಂಗಿ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕರಾದ ಜಿ.ಎಸ್.ಡೊಮನಾಳ, ಶಶಿ.ಎನ್, ಮಲ್ಲಮ್ಮ ಮಾಲಿಪಾಟೀಲ, ವಿದ್ಯಾರ್ಥಿನಿಯರಾದ ಸಾವಿತ್ರಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೇಶದ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಹಿರಿದಾಗಿದೆ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜೊತೆಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಅಗತ್ಯವಿದೆ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ವಿಶ್ವಗುರು ಶಿಕ್ಷಣ ಸಂಸ್ಥೆಯ ಬಸವ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವದಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಬಸವ ರಂಗೋತ್ಸವ-002ದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಬಾಲ್ಯದಲ್ಲಿಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ನೀಡಿದರೆ ಅವರು ಪ್ರಬುದ್ಧ ನಾಗರಿಕರಾಗಲು ಸಾಧ್ಯವಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ. ಈ ಭಾಗದ ಮಕ್ಕಳಿಗೆ ವಿದ್ಯಾಕಾಶಿ ಧಾರವಾಡದಲ್ಲಿ ಸಿಗುವಂತಹ ಗುಣಮಟ್ಟದ ಶಿಕ್ಷಣ ಸಿಗುವಂತಾಗಲೆಂಬ ಉದ್ದೇಶದಿಂದ ಈ ಸಂಸ್ಥೆಯು ಉತ್ತಮ ಬೋಧಕರನ್ನು ಬೇರೆಡೆಯಿಂದ ಕರೆಯಿಸಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಕೈಂಕರ್ಯದಲ್ಲಿ ತೊಡಗಿರುವುದು ಶ್ಲಾಘನೀಯ. ಈ ಸಂಸ್ಥೆಯು ಇನ್ನೂ ಅಂಬೆಗಾಲು ಇಡುತ್ತಿದೆ. ಇದಕ್ಕೆ ಎಲ್ಲ ಹಿರಿಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ರಬಿನಾಳ ಗ್ರಾಮದಲ್ಲಿ ಮುಳವಾಡ ಏತ ನೀರಾವರಿ ಸಂಬಂಽಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ವಿತರಣಾ ನಾಲೆ ಕಾಮಗಾರಿ ಆರಂಭಿಸಿದ್ದು. ಈ ಕಾಮಗಾರಿಗೆ ಸಂಬಂಧಿಸಿದಂತೆ ಜೆಎಂಸಿ ಮಾಡಿ ಪರಿಹಾರ ನೀಡದೆ ಕಾಮಗಾರಿಯನ್ನು ಆರಂಭಿಸಬಾರದೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಶಿ ಅರವಿಂದ ಕುಲಕರ್ಣಿ, ರೈತರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಬುಧವಾರ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಡಿಸ್ಟ್ರೀಬ್ಯೂಟರ್ ಹಾಗೂ ಲ್ಯಾಟರಲ್ ಕಾಲುವೆಗಳನ್ನು ನಿರ್ಮಿಸುತ್ತಿದ್ದು. ರೈತರಿಗೆ ಯಾವುದೇ ರೀತಿ ನೋಟಸ್ ಕೊಟ್ಟಿಲ್ಲ. ಜೆಎಂಸಿ ಕೂಡ ಮಾಡಿಲ್ಲ. ಯಾವುದೇ ರೈತನ ಜಮೀನಿನಲ್ಲಿ ಕಾಲುವೆ ಕಾಮಗಾರಿ ಪ್ರಾರಂಭಿಸಬೇಕಾದರೆ ಮೊದಲು ರೈತನ ಒಪ್ಪಿಗೆ ಪಡೆದು ನಂತರ ೧೧(೧) ನೋಟಿಸ್ ಕೊಡಬೇಕು. ನಂತರ ಆ ಜಮೀನಿನ ರೈತನ ಸಮಕ್ಷಮ ಜೆಎಂಸಿ ಮಾಡಬೇಕು. ಜೆಎಂಸಿ ಮಾಡಿದ ನಂತರ ರೈತರಿಗೆ ಜೆಎಂಸಿ ವರದಿ ನೀಡಬೇಕು. ನಂತರ ಪರಿಹಾರ ಕೊಡಬೇಕು. ಆಮೇಲೆ ಕಾಲುವೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳಿಗೆ ನೀಡುವ ಶಿಕ್ಷಣ ಹೃದಯದ ಮೂಲಕ ಮೆದುಳನ್ನು ತಲುಪಿದಾಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮದಲ್ಲಿ ಮಾತನಾಡಿದರು.ಹಣ ನಮಗೆ ಧೈರ್ಯ ನೀಡಬಹುದೇ ಹೊರತು ತೃಪ್ತಿ ನೀಡುವದಿಲ್ಲ. ನಮ್ಮ ಸಂಸ್ಕೃತಿ ಹಿರಿಯರ ಕಾಲಕೋಶಗಳಿಂದ ದೂರ ಹೋದಂತೆಲ್ಲ ಬದುಕು ಸತ್ವ ಕಳೆದುಕೊಳ್ಳುತ್ತಾ ಹೋಗುತ್ತದೆ. ವ್ಯಕ್ತಿತ್ವದ ನಿರೂಪಣೆಗೆ ಮಾತು ಬಂಡವಾಳವಾಗಿದ್ದು ಆತ್ಮವಿಶ್ವಾಸದ ಮಾತುಗಳು ನಿಮ್ಮದಾಗಿರಲಿ ಎಂದರು.ದೃಡವಾದ ಶ್ರದ್ದೆ ಹೊಂದಿದ ವಿದ್ಯಾಭ್ಯಾಸ ಮುಖ್ಯ. ಒಂಟಿತನ ಎಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆ. ಕೂಡು ಕುಟುಂಬ ಸಂಸ್ಕೃತಿ ಕಣ್ಮರೆಯಾಗುತ್ತಿರುವದು ಈ ದುಸ್ಥಿತಿಗೆ ಕಾರಣ. ಆಸೆಯ ಬೆನ್ನಿಗಿಂತ ಆಧರ್ಶದ ಬೆನ್ನು ಹತ್ತಿ ಎಂದು ತಿಳಿಸಿದರು..ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಕಣ್ಣಿ ಗುರುಗಳು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಹೊರಗೆ ತಂದು ಅದನ್ನು ಸಮಾಜಮುಖಿಯಾಗಿ ಬಳಕೆಯಾಗುವಂತೆ ಮಾಡುವದೇ ಶಿಕ್ಷಣದ ಉದ್ದೇಶ. ಶಿಕ್ಷಣ ಪಡೆಯುವಾಗ…

Read More

ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ :ಶಾಸಕ ಯಶವಂತರಾಯಗೌಡ ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳಿಗೆ ನೀಡುವ ಶಿಕ್ಷಣ ಹೃದಯದ ಮೂಲಕ ಮೆದುಳನ್ನು ತಲುಪಿದಾಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮದಲ್ಲಿ ಮಾತನಾಡಿದರು.ಹಣ ನಮಗೆ ಧೈರ್ಯ ನೀಡಬಹುದೇ ಹೊರತು ತೃಪ್ತಿ ನೀಡುವದಿಲ್ಲ. ನಮ್ಮ ಸಂಸ್ಕೃತಿ ಹಿರಿಯರ ಕಾಲಕೋಶಗಳಿಂದ ದೂರ ಹೋದಂತೆಲ್ಲ ಬದುಕು ಸತ್ವ ಕಳೆದುಕೊಳ್ಳುತ್ತಾ ಹೋಗುತ್ತದೆ. ವ್ಯಕ್ತಿತ್ವದ ನಿರೂಪಣೆಗೆ ಮಾತು ಬಂಡವಾಳವಾಗಿದ್ದು ಆತ್ಮವಿಶ್ವಾಸದ ಮಾತುಗಳು ನಿಮ್ಮದಾಗಿರಲಿ ಎಂದರು.ದೃಡವಾದ ಶ್ರದ್ದೆ ಹೊಂದಿದ ವಿದ್ಯಾಭ್ಯಾಸ ಮುಖ್ಯ. ಒಂಟಿತನ ಎಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆ. ಕೂಡು ಕುಟುಂಬ ಸಂಸ್ಕೃತಿ ಕಣ್ಮರೆಯಾಗುತ್ತಿರುವದು ಈ ದುಸ್ಥಿತಿಗೆ ಕಾರಣ. ಆಸೆಯ ಬೆನ್ನಿಗಿಂತ ಆಧರ್ಶದ ಬೆನ್ನು ಹತ್ತಿ ಎಂದು ತಿಳಿಸಿದರು..ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಕಣ್ಣಿ ಗುರುಗಳು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಹೊರಗೆ ತಂದು ಅದನ್ನು ಸಮಾಜಮುಖಿಯಾಗಿ…

Read More