Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನುಪ್ರಭಾಕರ್ ಅವರಿಗೆ ವಿವರಿಸಲಾಯಿತು.ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರುಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿಸಿದರು.ಪರಿಣಾಮವಾಗಿ ಸಮಸ್ಯೆ ಬಗೆಹರಿಸಲುಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿದ ಡಿಸಿಎಂ ಡಿಕೆ.ಶಿವಕುಮಾರ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು ಎಂದು ಹೇಳಿದರು.ಹೈಕಮಾಂಡ್’ಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ತಿಳಿದಿದೆ. ಪ್ರತಿಯೊಬ್ಬ ಜಿಲ್ಲಾ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಹುಲ್ಲೂರು ಗ್ರಾಮದ ಎಸ್ಎನ್ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯಿಂದ ಕೊಡಮಾಡುವ ಚನ್ನಬಸವ ಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ತಾಲೂಕಿನ ಸಂಯುಕ್ತ ಕರ್ನಾಟಕ ಹಾಗೂ ಉದಯರಶ್ಮಿ ಪತ್ರಿಕೆಗಳ ವರದಿಗಾರ ಚೇತನ ಶಿವಶಿಂಪಿ ಭಾಜನರಾಗಿದ್ದಾರೆ. ಮಾ೨೨ ರಂದು ಶಾಲೆಯಲ್ಲಿ ನಡೆಯಲಿರುವ ಅಭಿನವ ಕುಮಾರ ಚನ್ನಬಸವ ಮಹಾಸ್ವಾಮಿಗಳಿಗೆ ನುಡಿನಮನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕೆಟ್ಟ ಗುಣಗಳನ್ನು ಬಿಟ್ಟು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಮನುಷ್ಯನ ಮನಸ್ಸನ್ನು ಪರಿವರ್ತಿಸುವ ಶಕ್ತಿ ನಾಟಕ ಕಲೆಯಲ್ಲಿ ಅಡಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.ತಾಲೂಕಿನ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರಾಮಹೋತ್ಸವದಂಗವಾಗಿ ಬುಧವಾರ ರಾತ್ರಿ ಯಮನೂರೇಶ್ವರ ನಾಟ್ಯ ಸಂಘವು ಹಮ್ಮಿಕೊಂಡಿದ್ದ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾಜುನ ಸಾಮಾಜಿಕ ನಾಟಕದ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಜಾತ್ರೆಯಂತಹ ಸಂದರ್ಭದಲ್ಲಿ ನಾಟಕ ಪ್ರದರ್ಶನಗಳು ಇನ್ನೂ ಜೀವಂತವಾಗಿವೆ. ನಾಟಕಗಳಿಂದ ಜನರು ಮನರಂಜನೆ ಪಡೆಯುವ ಜೊತೆಗೆ ನೈತಿಕ ಮೌಲ್ಯಗಳನ್ನು ತಿಳಿದುಕೊಳ್ಳಲು ಸಾಧ್ಯ ಎಂದರು.ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಮಾತನಾಡಿ,ಸಾಮಾಜಿಕ ವಿಡಂಬನೆಯನ್ನು ನಾಟಕದ ಮೂಲಕ ಬಿಂಬಿಸಿ ಒಳ್ಳೆಯ ಆಚಾರ-ವಿಚಾರ ಬದುಕು ಕಲಿಸುವ ಸಾಮಾಜಿಕ ನಾಟಕಗಳು ಇನ್ನೂ ಜೀವಂತವಾಗಿವೆ. ಅವುಗಳನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣವೆಂದರು.ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ಮಾನವೀಯ ಮೌಲ್ಯಗಳು ನಾಟಕಗಳಿಂದ ತಿಳಿದುಕೊಳ್ಳಬಹುದು. ಕವಿಯ ಕಾಲ್ಪನಿಕ ಹಿಂದಿರುವ ರಹಸ್ಯ ಸಾಮಾಜಿಕ ಜೀವನದ ಸಂದೇಶ ನೀಡುವ ನೆಲೆಯಾಗಿದೆ. ನಾಟಕದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪರೀಕ್ಷಾ ಪಾವಿತ್ರ್ಯಕ್ಕೆ ಧಕ್ಕೆ ಬರದಂತೆ ಪರೀಕ್ಷಾ ಕರ್ತವ್ಯ ನಿಯೋಜಿತ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ತಹಸೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭಾಭವನದಲ್ಲಿ ಗುರುವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಗಳು ವೆಬ್ಕಾಸ್ಟಿಂಗ್ ಮೂಲಕ ನಡೆಯುತ್ತಿದ್ದು ಕ್ಯಾಮರಾಗಳು ಬಂದ್ ಆಗದಂತೆ ನಿಗಾ ವಹಿಸಬೇಕು. ಎಲ್ಲಿಯಾದರೂ ಕ್ಯಾಮರಾ ಬಂದ್ ಆಗಿ ಸಮಸ್ಯೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವದು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಮಾತನಾಡಿ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸಬೇಕು. ಯಾವುದೇ ಆಸೆ ಆಮೀಶಗಳಿಗೆ ಬಲಿಯಾಗಬಾರದು. ಯಾವುದೇ ಕಾರಣಕ್ಕೂ ನಕಲಿಗೆ ಅವಕಾಶ ಕೊಡಬಾರದು ಎಂದರು.ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಎಎಸ್ಐ ಕೆ.ಎಸ್.ಅಸ್ಕಿ ಮಾತನಾಡಿದರು. ತಾಲೂಕು ಪಂಚಾಯತನ ಖೂಬಾಸಿಂಗ್ ಜಾಧವ, ಶಾಲಾ ಆರೋಗ್ಯ ತಪಾಸಣಾ ವೈದ್ಯಾಧಿಕಾರಿ ಡಾ.ಭಾಗ್ಯಶ್ರೀ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಸೇರಿದಂತೆ ಪರೀಕ್ಷಾ ಕರ್ತವ್ಯ ನಿಯೋಜಿತ ಸಿಬ್ಬಂದಿ ಇದ್ದರು. ತಮ್ಮ ಅಧಿಕಾರದಲ್ಲಿ ಬೇಜವಾಬ್ದಾರಿತನ ತೋರಿದರಾ ಬಿಇಓ? ಪ್ರತಿಯೊಂದು ಪರೀಕ್ಷಾ…
ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ರಾಜ್ಯಧ್ಯಕ್ಷ ಚಂದ್ರಶೇಖರ ಕೊಡಿಹಳ್ಳಿ ಆರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಸರ್ಕಾರ 16.35 ಲಕ್ಷ ಕೋಟಿ ಸಾಲ ಕೈ ಬಿಡುವ ತೀರ್ಮಾನ ಕೈಗೊಳ್ಳುತ್ತಾರೆ. ಇದು ಯಾರಪ್ಪನ ಮನೆ ದುಡ್ಡು? ಆಪ್ತ ಉದ್ದಿಮೆದಾರರ ಸಾಲ ಮನ್ನಾ ಮಾಡುವ ನೀವು ಯಾವ ಸೀಮೆ ರಾಜಕಾರಣಿಗಳು..? ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಯೇ ಇವರ ಉದ್ದೇಶವಾಗಿದೆ. ದೇಶ ಕಟ್ಟವ ಸರಕಾರಗಳು ಇಡೀ ಸರಕಾರ ಬರ್ಬಾದ ಮಾಡಿವೆ. ಜನರು ಇವರನ್ನು ಯಾವುದೆ ಕಾರಣಕ್ಕೂ ಕ್ಷಮಿಸಬಾರದು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯಧ್ಯಕ್ಷ ಚಂದ್ರಶೇಖರ ಕೊಡಿಹಳ್ಳಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದರು.ಬುಧವಾರ ನಗರದಲ್ಲಿ ಆಯೋಜಿಸಿರುವ ವಿಜಯಪುರ ಜಿಲ್ಲೆಯ ರೈತರ ಜಲ್ವಂತ ಸಮಸ್ಯೆಗಳ ಕುರಿತು ಚೆರ್ಚಾಗೋಷ್ಠಿ ಸಭೆಯಲ್ಲಿ ಮಾತನಾಡಿದರು.ಏನಾಗಿದೆ ಈ ರಾಷ್ಟ್ರೀಯ ಪಕ್ಷಗಳಿಗೆ..? ಜನರ ಹಿತ, ರೈತರ ಹಿತ, ಕೂಲಿ ಕಾರ್ಮಿಕರ, ಬಡ ಬಲ್ಲಿದರ ಹಾಗೂ ದೇಶದ ಶ್ರಯೋಭಿವೃದ್ದಿಗಾಗಿ ಕೆಲಸ ಮಾಡಬೇಕಾಗಿದ್ದ ಸರಕಾರಗಳು, ಉದ್ದಿಮಪತಿಗಳ ಸಾಲ ಮನ್ನಾ ಮಾಡುತ್ತೀರುವ…
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಬೇಸಿಗೆಯಲ್ಲಿ ಜಾನುವಾರಗಳಿಗೆ ಮೇವು ಕೊರತೆಯನ್ನು ನಿಗಿಸುವ ನಿಟ್ಟಿನಲ್ಲಿ ರೈತ ಸಮುದಾಯ ಮುಂದಾಗಿದ್ದು ಒಣಮೇವು ಸಂಗ್ರಹಕ್ಕೆ ಮುಂದಾಗಿದ್ದಾರೆ.ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಡುಬೇಸಿಗೆಯ ಎರಡು ತಿಂಗಳು ಜಾನುವಾರಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯವಾದ ಒಣಮೇವನ್ನು ದೂರದ ಗ್ರಾಮಗಳಿಂದ ಖರೀದಿಸಿ ಟ್ರ್ಯಾಕ್ಟರ್ ಗಳ ಮೂಲಕ ತಂದು ಸಂಗ್ರಹಿಸುತ್ತಿದ್ದಾರೆ. ಆಕಳು, ಎತ್ತು, ಎಮ್ಮೆಗಳಿಗೆ ಅಗತ್ಯವಾದ ಒಣಮೇವು ಈಗ ವಿರಳವಾದ ಹಿನ್ನೆಲೆಯಲ್ಲಿ ಜೋಳ-ಮೆಕ್ಕೆಜೋಳದ ಒಣಮೇವನ್ನೇ ಒಂದು ಟ್ರ್ಯಾಲಿಗೆ ಹತ್ತು ಸಾವಿರದಂತೆ ೨೦ ಸಾವಿರ ಹಣ ನೀಡಿ ಎರಡೆರಡು ಟ್ರ್ಯಾಲಿ ಮೇವು ಕೊಳ್ಳುತ್ತಿದ್ದಾರೆ.ಈ ಕುರಿತು ಚಾಂದಕವಟೆ ಗ್ರಾಮಕ್ಕೆ ಒಣಮೇವು ಸಾಗಿಸುತ್ತಿರುವ ರೈತರಾದ ಅಯ್ಯಣ್ಣ ಪೂಜಾರಿ, ಅಣವೀರಯ್ಯ ಹಿರೇಮಠ ಹಾಗೂ ನಾಗಪ್ಪ ಶಿವೂರ ಮಾತನಾಡಿ, ಎರಡು ಟ್ರ್ಯಾಲಿ ಒಣಮೇವು ೧೫ ದನಗಳಿಗೆ ಎರಡು ತಿಂಗಳು ಸಾಲಬಹುದು. ನೀರಿನ ಕೊರತೆಯಿಂದ ಹಸಿಮೇವು ಸಿಗುವುದು ದೂರದ ಮಾತು. ಮುಂದಿನ ಮಳೆಗಾಲದವರೆಗೆ ಅಗತ್ಯವಾದ ಮೇವನ್ನು ನಾವು ಮಾರ್ಸನಳ್ಳಿ ರೈತರಿಂದ ಖರೀದಿಸಿ ಸಂಗ್ರಹಿಸುತ್ತಿದ್ದೇವೆ. ಈ ಮೇವು ಮುಂದಿನ ಮಳೆಗಾಲದವರೆಗೆ ಸಾಲಬಹುದು ಎಂಬ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾದ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಲಹೆ ಸೂಚನೆಗಳನ್ನು ನೀಡಲಾಗಿದೆ.ದಿನದಿಂದ ದಿನಕ್ಕೆ ಬಿಸಿಲಿನಲ್ಲಿ ಬದಲಾವಣೆಯಾಗುತ್ತಿದ್ದು, ಸಾರ್ವಜನಿಕರು ರೇಡಿಯೋ, ಟಿವಿ, ದಿನಪತ್ರಿಕೆ ಸೇರಿದಂತೆ ವಿವಿಧ ಮಾಧ್ಯಮಗಳಿಂದ ಒದಗಿಸಲಾಗುವ ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಬಿಸಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ ಅಥವಾ ಚಪ್ಪಲಗಳನ್ನು ಧರಿಸಿ, ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ಸಮಯದಲ್ಲಿ ಮಾಡುವುದು ಉತ್ತಮ. ಒಂದು ವೇಳೆ ದಿನದಲ್ಲಿ ಪ್ರಯಾಣ ಅನಿವಾರ್ಯವಿದ್ದಲ್ಲಿ ನಿಮ್ಮೊಂದಿಗೆ ನೀರನ್ನು ಒಯ್ಯಿರಿ, ನೀವು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತೊಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ.ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಆಗ್ಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಆದಷ್ಟು…
ವಿಜಯಪುರ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯಡಿಯ ಸೌಕರ್ಯಗಳು ಮತ್ತು ಗುಣಮಟ್ಟದ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೌಲಭ್ಯಗಳಿಂದ ಜಿಲ್ಲೆಯಲ್ಲಿ ಸರಾಸರಿ ಪ್ರಮಾಣಕ್ಕಿಂತಲು ತಾಯಿ-ಶಿಶು ಮರಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.ಬುಧವಾರ ನಡೆದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಮೂರು ವರ್ಷಗಳಿಗೆ ಹೋಲಿಸಿದ್ದಲ್ಲಿ ೨೦೨೪-೨೫ನೇ ಸಾಲಿನಲ್ಲಿ ತಾಯಿ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಸತತ ಪ್ರಯತ್ನ, ಉತ್ತಮವಾದ ಆರೋಗ್ಯ ಸೇವೆಯಿಂದಾಗಿ ಮರಣ ಪ್ರಮಾಣ ಕಡಿಮೆಯಾಗಿರುವುದಕ್ಕೆ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಜನನವಾಗುವ ಪ್ರತಿ ಸಾವಿರ ಶಿಶುಗಳ ಪೈಕಿ ಬೇರೆ ಬೇರೆ ಕಾರಣಗಳಿಂದ ಮೃತಪಡುವ ಶೇ.೫.೭೭ ರಷ್ಟು ಪ್ರಮಾಣವಾಗಿದ್ದು, ಸತತ ಗರ್ಭೀಣಿಯರ ಆರೋಗ್ಯ ತಪಾಸಣೆ, ವೈದ್ಯರ ಕಾಳಜಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಯರ್ತೆರು ಹಾಗೂ ಕ್ಷೇತ್ರ ಮಟ್ಟದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.23 ರವಿವಾರ ಮತ್ತು ದಿ.24 ಸೋಮವಾರ ಎರಡು ದಿನಗಳವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ದಿ. 23 ರವಿವಾರದಂದು ಬೆ.10.30ಗಂ. ನಗರದ ಬರಟಗಿ ರಸ್ತೆ, ಸರಸ್ವತಿ ಶಾಲೆ ಹತ್ತಿರ ನಿರ್ಮಿಸುತ್ತಿರುವ ರಾಜವಾಡಿ ಡೆವಲೆಪರ್ಸ್ ವತಿಯಿಂದ ಅಯೋಧ್ಯಾನಗರದ ಭೂಮಿ ಪೂಜೆ ಸಲ್ಲಿಸಲಿದ್ದಾರೆ.ಬೆ.11 ಗಂ. ತಿಕೋಟಾ ವಾಡೆ ಆವರಣದಲ್ಲಿ ಜರುಗಲಿರುವ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂ. 6 ಗಂ. ಕಣಮುಚನಾಳ ಗ್ರಾಮದ ಭರಮದೇವರ ಜಾತ್ರಾ ಮಹೋತ್ಸವದಲ್ಲಿ ಭಾವಹಿಸಲಿದ್ದಾರೆ.ದಿ. 24 ಸೋಮವಾರ ಬೆ.10 ಗಂ. ಮದಗುಣಕಿ ಗ್ರಾಮದಲ್ಲಿ ರೂ.4 ಕೋಟಿ ಸಿ.ಎಸ್.ಆರ್ ಅನುದಾನದಲ್ಲಿ ಶೇಗುಣಶಿ-ಮದಗುಣಕಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮತ್ತು ಮದಗುಣಕಿ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡದ 5 ಕೊಠಡಿಗಳನ್ನು ರೂ.60 ಲಕ್ಷ ಸಿ.ಎಸ್.ಆರ್ ಅನುದಾನದಲ್ಲಿ ನವೀಕರಣದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ.ನಂತರ ಬೆ.11 ಗಂ. ಬೆಳ್ಳುಬ್ಬಿ…
