Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ತಂಗಡಗಿ ರಸ್ತೆಯ ಡಿಸಿಸಿ ಬ್ಯಾಂಕ್ ಎದುರಿನ ನಿಜಶರಣ ಅಂಬಿಗರ ಚೌಡಯ್ಯ ವೃತ್ತದ ಮೂರ್ತಿ ಅನಾವರಣ ಹಾಗೂ ಕೃಷ್ಣಾ ತೀರದ ಅಂಬಿಗರ ಸಮಾವೇಶವನ್ನು ಫೆ.೯ ರಂದು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಸಮಾಜದ ಎಲ್ಲ ಬಂಧುಗಳು ಭಾಗಿಯಾಗಿ ಯಶಸ್ವಿಗೊಳಿಸಬೇಕು ಎಂದು ನಿವೃತ್ತ ಪಿಎಸ್‌ಐ ಎಲ್.ಸಿ.ಕೋಲಕಾರ ವಿನಂತಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ ವೃತ್ತದಲ್ಲಿ ಮೂರ್ತಿ ಅನಾವರಣ ನೆರವೇರಲಿದೆ. ಬಳಿಕ ಬೆ೧೧ ಗಂಟೆಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಮಾವೇಶ ನಡೆಯಲಿದೆ. ಉದ್ಘಾಟನೆಯ ದಿವ್ಯ ಸಾನಿಧ್ಯವನ್ನು ಹಾವೇರಿಯ ನರಸೀಪುರದ ಶಾಂತಭೀಷ್ಮಚೌಡಯ್ಯ ಸ್ವಾಮಿಗಳು, ಸಿಂದಗಿಯ ಶಾಂತಗಂಗಾಧರ ಸ್ವಾಮಿಗಳು, ಶಹಬಾದ ನ ಮಲ್ಲಪ್ಪಣ್ಣ ಮಹಾಸ್ವಾಮಿಗಳು, ಶಿರೂರಿನ ಡಾ|| ಬಸವಲಿಂಗ ಸ್ವಾಮಿಜಿಗಳು ಮತ್ತು ಪಟ್ಟಣದ ಶೋಭಾ ತಾಯಿಯವರು ವಹಿಸಲಿದ್ದು ಎಂಎಲ್‌ಸಿಗಳಾದ ತಿಪ್ಪಣ್ಣಪ್ಪ ಕಮಕನೂರ, ರವಿಕುಮಾರ ಎನ್, ಡಾ.ಸಾಬಣ್ಣ ತಳವಾರ, ಮಾಜಿ ಸಚಿವ ಪ್ರಮೋದ್ ಮಧ್ವರಾಜ, ಮಾಜಿ ಶಾಸಕ ಶರಣಪ್ಪ ಸುಣಗಾರ, ಜೆಡಿಎಸ್ ನ ಶಿವಕುಮಾರ ನಾಟೇಕಾರ ಆಗಮಿಸಲಿದ್ದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಾ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ, ನಾಟಕಕಾರ ಅಶೋಕ ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಸಾಹಿತ್ಯ ಕೃಷಿ, ಸಾಹಿತ್ಯ ಸೇವೆ, ಸಂಘಟನೆ ಹಿರಿತನ ಇವುಗಳ ಆಧಾರದ ಮೇಲೆ ಈ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಮತ್ತು ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬೈಕ್ ಮತ್ತು ಕ್ಯಾಂಟರ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಶರಣಗೌಡ ಪಾಟೀಲ (೩೭) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಮೃತನು ಆಲಮೇಲ ತಾಲೂಕಿನ ಅಲ್ಲೋಳ್ಳಿ ಗ್ರಾಮದ ಶರಣಗೌಡ ಪಾಟೀಲ ಎಂದು ತಿಳಿದು ಬಂದಿದೆ. ಈತ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಕಾರ್ಯನಿರ್ವಹಿಸುತಿದ್ದರು. ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ವಿಜಯಪುರ ರಸ್ತೆಯ ಕಡೆಯಿಂದ ಬಂದ ಕ್ಯಾಂಟರ್ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪಿಎಸ್‌ಐ ಆರಿಫ್ ಮುಷಾಪುರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಎಲ್ಲಕ್ಕಿಂತ ದೊಡ್ಡ ಸಂಪತ್ತು ಭಕ್ತಿಯಲ್ಲಿದೆ. ಭಕ್ತಿ ಎಂಬುವುದು ಪರಮ ಪವಿತ್ರವಾದ ಪ್ರೇಮವಾಗಿದೆ. ಕಾರಣ ಎಲ್ಲರೂ ಗುರುವಿನಲ್ಲಿ ಶ್ರದ್ಧಾ ಭಕ್ತಿ ಇಟ್ಟರೆ ಜೀವನ ಪ್ರಾಪ್ತಿಯಾಗುತ್ತದೆ ಎಂದು ದಾರವಾಡ ಬಸವಾನಂದ ಸ್ವಾಮಿಗಳು ಹೇಳಿದರು.ತಾಲೂಕಿನ ಆಸಂಗಿಹಾಳ ಗ್ರಾಮದ ಆರೂಢಮಠದಲ್ಲಿ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಮಹಾಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಮಹಾ ಪುರಾಣದಲ್ಲಿ ಮಾತನಾಡಿದ ಅವರು, ಶ್ರೀಮಠವು ಬಡವರ ಮಠವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಆದ್ಯಾತ್ಮಿಕ ಜ್ಞಾನವನ್ನು ಉಣಬಡುಸುವ ನಿಟ್ಟಿನಲ್ಲಿ ಇಂತಹ ಸಂತ ಮಹಾಂತರ ಶರಣೆಯರ ಪುರಾಣ ಪ್ರವಚನ ಸಂತ್ಸಂಗಗಳನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ. ಶರಣರ, ಸಂತರ, ಮಹಾಂತರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.ಈ ವೇಳೆ ಆರೂಢಾಶ್ರಮ ಶ್ರೀ ಸಮರ್ಥ ಸದ್ಗುರು ಶಂಕರಾನಂದ ಮಹಾರಾಜರು ಮಾತನಾಡಿ, ಶುಕ್ರವಾರ ದಿನಾಂಕ ೭-೦೨-೨೦೨೫ ರಂದು ಬೆಳಗ್ಗೆ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ಶ್ರೀ ವೇ ಸಂಗಯ್ಯ ಹಿರೇಮಠ, ಆಸಂಗಿಹಾಳ ಇವರಿಂದ ಜರುಗುವುದು. ನಂತರ…

Read More

ಮೂಲಸೌಕರ್ಯಗಳ ಕೊರತೆ | ರಸ್ತೆಗಳಲ್ಲಿ ಚರಂಡಿ ನೀರು | ಎಲ್ಲೆಡೆ ವ್ಯಾಪಿಸಿದ ದುರ್ವಾಸನೆ | ಸೊಳ್ಳೆಗಳ ಹಾವಳಿ | ಸಾಂಕ್ರಾಮಿಕ ರೋಗದ ಭೀತಿ ಉದಯರಶ್ಮಿ ದಿನಪತ್ರಿಕೆ ವರದಿ: ಮಹಾಂತೇಶ ನೂಲಾನವರಸಿಂದಗಿ: ಓಟಿಗಾಗಿ ಬರುವ ಜನಪ್ರತಿನಿಧಿಗಳು ಮೂಲಭೂತ ಸೌಕರ್ಯ ಒದಗಿಸಲು ಬಾರದೆ ಇರುವುದು ಖೇದಕರ ಸಂಗತಿ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಯಂಕಂಚಿ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಕನಿಷ್ಠ ಸೌಕರ್ಯಗಳ ನಡುವೆಯೇ ನಿವಾಸಿಗಳು ಬದುಕುವಂತಾಗಿದೆ.ಚರಂಡಿ ನೀರು ರಸ್ತೆಯ ಮೇಲೆ ನಿಂತು ದೊಡ್ಡ ದೊಡ್ಡ ಗಾತ್ರದ ತಗ್ಗು ಗುಂಡಿಗಳು ಬಿದ್ದಿವೆ. ಅಲ್ಲಲ್ಲಿ ನಿರ್ಮಾಣಗೊಂಡ ಹೊಂಡಗಳಲ್ಲಿ ಕೊಳಚೆ ನೀರು ತುಂಬಿ ಚರಂಡಿಯಾಗಿ ಪರಿಣಮಿಸಿದೆ. ಇಲ್ಲಿ ವಾಸಿಸುವ ನಿವಾಸಿಗಳ ಮತ್ತು ವಾಹನ ಸವಾರರ ಸಂಚಾರಕ್ಕೆ ಅಡ್ಡಿ ಉಂಟಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ರಸ್ತೆಯಿಲ್ಲದೆ ಚರಂಡಿ ಗಬ್ಬೆದ್ದು ನಾರುತ್ತಿವೆ. ಗ್ರಾಮದ ಹಲವು ಭಾಗದಲ್ಲಿ ಸಿಸಿ ರಸ್ತೆಗಳಿಲ್ಲ. ಚರಂಡಿ ಇಲ್ಲದ ಕಾರಣ ಗ್ರಾಮದ ಕಲುಷಿತ ನೀರು ರಸ್ತೆಯ ಮೇಲೆ ಹರಿದು ಕಸ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಗೊಂಡು ಗಬ್ಬೆದ್ದು, ನಾರುತ್ತಿದೆ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಶೈಕ್ಷಣಿಕ ವರ್ಷ ೨೦೨೩-೨೪ರ ಡಿಸೆಂಬರ್ ನಲ್ಲಿ ಜರುಗಿದ ಬಿಎಡ್ ಕೋರ್ಸ್ನ ದ್ವಿತೀಯ ಹಾಗೂ ಚತುರ್ಥ (ರೆಗ್ಯೂಲರ್ ಮತ್ತು ಪುನರಾವರ್ತಿತ)ರ ಫೆ.೦೪ರಂದು ಫಲಿತಾಂಶ ಪ್ರಕಟಿಸಲಾಗಿದೆ. uucms.karnataka.gov.inವೆಬ್‌ಸೈಟ್ UUCMS student login>Exam>Exam Application>View Result>Viewನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ವಿವಿಯ ಕುಲಸಚಿವ (ಮೌಲ್ಯಮಾಪನ) ಪ್ರೊ.ಎಚ್.ಎಂ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ ೨೭ ರಿಂದ ಮಾರ್ಚ್ ೩ ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ವನ್ನು ಹಮ್ಮಿಕೊಳ್ಳಲಾಗಿದೆ.ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.೧,೦೦೦/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ೨೦೨೫ ನೇ ಫೆಬ್ರವರಿ ೧೨ ರಂದು ಸಂಜೆ ೫.೦೦ ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು…

Read More

ರಾಜ್ಯ ಮಟ್ಟದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲೆಗೆ ಮೂರು ವಿಭಾಗದಡಿ ಪ್ರಶಸ್ತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕೆ, ನರೇಗಾ ಪ್ರಶಸ್ತಿಗೆ ಜಿಲ್ಲೆಯು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಪುರಸ್ಕಾರಕ್ಕೆ ಆಯ್ಕೆಯಾಗಿದೆ.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಳಗಾವಿ ವಿಭಾಗದ ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರ-ರೇಷ್ಮೆ ಇಲಾಖೆ ವಿಜಯಪುರ, ಅತ್ಯುತ್ತಮ ತಾಲ್ಲೂಕು ಪಂಚಾಯತಿ ಪುರಸ್ಕಾರ- ನಿಡಗುಂದಿ ತಾಲ್ಲೂಕು, ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರ- ರೂಗಿ ಗ್ರಾಮ ಪಂಚಾಯತಿ ಇಂಡಿ ತಾಲ್ಲೂಕು. ಫೆ.೦೫ರಂದು ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ನಡೆದ ನರೇಗಾ ಹಬ್ಬ-೨೦೨೫ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಜಿಲ್ಲಾಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಜಿಲ್ಲಾ ರೇಷ್ಮೆ…

Read More

ತಾಲೂಕಾ ಮಟ್ಟದ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿವಿಧ ತಾಲೂಕ ಮಟ್ಟದ ಆಸ್ಪತ್ರೆಯಲ್ಲಿ ಹಾಗೂ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಮೆಡಿಸಿನ್ ತಜ್ಞ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ,ಕಿವಿ, ಮೂಗು ಮತ್ತು ಗಂಟಲು ತಜ್ಞ,ಚರ್ಮ ರೋಗ ತಜ್ಞ,ಚಿಕ್ಕ ಮಕ್ಕಳ ತಜ್ಞ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಸಹಿತ ಹಾಜರಾಗಬಹುದಾಗಿದೆ.ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲಾತಿ ಸಹಿತ ಹಾಗೂ ಒಂದು ಸೆಟ್ ಝರಾಕ್ಷ ಪ್ರತಿಯೊಂದಿಗೆಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ಉಪ ಮಹಾಪೌರರ ಸ್ಥಾನಗಳಿಗೆ ಜ.೨೭ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅನಿವಾರ್ಯ ಕಾರಣದಿಂದ ಫೆ.೧೨ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More