Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರಮವಹಿಸಿ ದುಡಿದರೆ ಭುಮಿ ತಾಯಿ ಎಂದಿಗೂ ಕೈ ಬಿಡುವದಿಲ್ಲ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಶಿವಶಂಕರಮೂರ್ತಿ ಹೇಳಿದರು.ಮಾನವ ವಿಕಾಸ ಕೇಂದ್ರ ವಿಜಯಪುರ ಮತ್ತು ಶ್ರೀಮತಿ ಶಾಲಿನಿತಾಯಿ ಮಾಣಿಕ ಚಂದ ದೋಶಿ ಮಹಿಳಾ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗ್ರಾಮೀಣಾಭಿವೃದ್ದಿಯಲ್ಲಿ ಕೃಷಿಯಾಧಾರಿತ ಮಹಿಳಾ ಕೌಶಲ್ಯ ಮಹತ್ವ ವಿಚಾರ ಸಂಕೀರಣದಲ್ಲಿ ಮಾತನಾಡಿದರು.ರೈತರ ಕಲ್ಯಾಣದಲ್ಲಿ ದೇಶದ ಕಲ್ಯಾಣ ಅಡಗಿದೆ.ರೈತರ ಪರ ಅಗತ್ಯ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿ ಅನುಷ್ಠಾನಗೊಳಿಸುವ ಅಗತ್ಯತೆ ಇದೆ ಎಂದರು.ಜನಸಂಖ್ಯೆಯಲ್ಲಿ ೫೧.೬ % ಗಂಡಸರು ಇದ್ದರೆ ೪೮.೪ % ಹೆಣ್ಣು ಸಂಖ್ಯೆ ಇದೆ. ಗ್ರಾಮೀಣ ಪ್ರದೇಶದಲ್ಲಿ ಶೇ ೮೦ ರಷ್ಟು ಮಹಿಳೆಯರು ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ.ಶೇ ೬೦ ಮಹಿಳೆಯರು ಕೃಷಿ ಉತ್ಪಾದನೆಯಲ್ಲಿ ತೊಡಗಿದ್ದಾರೆ. ಕೃಷಿ ಪ್ರಧಾನ ಚಟುವಟಿಕೆಗಳಲ್ಲಿ ಮಹಿಳೆಯರು ಪ್ರಧಾನ ಪಾತ್ರ ವಹಿಸುತ್ತಿದ್ದಾರೆ ಎಂದರು.ಮಹಾವಿದ್ಯಾಲಯದ ಪ್ರಾಚಾರ್ಯ ಎ.ಬಿ.ಪಾಟೀಲ, ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎಂ.ಎಮ್ಮಿ, ಎಸ್.ಬಿ.ಹಡಪದ,ವಿಜಯ ರಾಠೋಡ, ಸದಾನಂದ ಈರನಕೇರಿ ಮಾತನಾಡಿದರು.ಆರ್.ಎಸ್.ಬಿರಾದಾರ, ಶ್ರೀಮತಿ ವಾಣಿ ಹಿರೇಮಠ, ಜ್ಞಾನೇಶ್ವರ ಧೂಳಖೇಡ, ಆರ್.ಜಿ.ಪೂಜಾರಿ, ಆರ್.ವಿ.ಅಂಗಡಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಾರ್ಡ ನಂ. ೧೪ ಓಪಲ್ ಶಾಲೆ ಹತ್ತಿರ ವಾರದ ನಗರದಲ್ಲಿ ರಸ್ತೆ, ದುರಸ್ತಿ, ಬೀದಿದೀಪಗಳ ಅಳವಡಿಕೆ ಹಾಗೂ ಸ್ವಚ್ಚತೆಗಾಗಿ ಕರ್ಮಚಾರಿಗಳನ್ನು ಪ್ರತಿನಿತ್ಯ ವಾರ್ಡಿಗೆ ಕಳಿಸಿಕೊಡಲು ಮಹನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಸದರಿ ವಾರ್ಡ ನಂ. ೧೪ ಓಪಲ್ ಶಾಲೆ ಹತ್ತಿರ ವಾರದ ನಗರದಲ್ಲಿ ರಸ್ತೆ ವ್ಯವಸ್ಥೆ ಇರುವದಿಲ್ಲ ಅದರಿಂದ ಅಲ್ಲಿನ ನಿವಾಸಿಗಳಿಗೆ ತಿರುಗಾಡಲು ಸಹ ತೊಂದರೆ ಉಂಟಾಗುತ್ತಿದೆ. ಬಡಾವಣೆಯಲ್ಲಿ ಬೀದಿದೀಪಗಳ ಸಹ ಇರುವದಿಲ್ಲ ಸಾಯಂಕಾಲ ಆಗುತ್ತಿದ್ದಂತೆ ಹೊರಗೆ ಬರಲು ಅಂಜಿಕೆ ಬರುವ ಪರಿಸ್ಥಿತಿ ಇದೆ ಅಲ್ಲದೆ ವಿಜಯಪುರ ನಗರದಲ್ಲಿ ಕಳ್ಳರ ಹಾವಳಿ ಕೂಡ ಹೆಚ್ಚಾಗುತ್ತಿದೆ. ನಮ್ಮ ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಅಳವಡಿಸಿಕೊಡಲು ಬಡಾವಣೆಯಲ್ಲಿ ಸಾರ್ವಜನಿಕರಿಂದ ಮನವಿ ಸಲ್ಲಿಸಿ ಆದಷ್ಟು ಬೇಗನೆ ಬಡಾವಣೆಯ ಸಮಸ್ಯೆಗಳಿಗೆ ಸ್ಪಂದಿಸಲು ಕೋರಲಾಗಿದೆ.ಈ ಸಂದರ್ಭದಲ್ಲಿ ಬಂದೇನವಾಜಿ ಕಮತಗಿ, ಹುಸೇನ ಶೇಖ, ಜುಬೇರ ಸಯ್ಯದ, ಉಮರ ಪಾಂಡು, ಮಸ್ತಾನ ಪಾಂಡು, ಕೆ.ಎ. ಮನಿಯಾರ ಮತ್ತಿರರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಮಲ್ಲಿಕಾರ್ಜುನ ಶಿಕ್ಷಣ ಮಹಾವಿಧ್ಯಾಲಯ ಮತ್ತು ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ದ ರಾ ಬೇಂದ್ರೆ ಜಯಂತಿ ಆಚರಣೆ ಮಾಡಲಾಯಿತು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಶಿಕ್ಷಣ ಮಾಹಾವಿಧ್ಯಾಲಯ ಪ್ರಾಚಾರ್ಯ ಶ್ರೀಕಾಂತ ಚವ್ಹಾಣ ಅವರು ಬೇಂದ್ರೆ ಅವರು ಸಾಹಿತ್ಯದ ಎಲ್ಲ ಮಜಲುಗಳಲ್ಲಿ ಕೃಷಿ ಮಾಡಿದ್ದರೂ ಅವರು ಪ್ರಸಿದ್ಧಿಗೆ ಬಂದದ್ದು ಕಾವ್ಯಗಳಿಂದ. ಅವರ ಕವಿತೆಗಳಲ್ಲಿನ ಜನಪದೀಯ ಶೈಲಿ ಅವರನ್ನು ಉತ್ತುಂಗಕ್ಕೆ ಏರಿಸಿತು’ ಎಂದರು.ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಎಸ್.ಎಸ್.ದೇಸಾಯಿ ಮಾತನಾಡಿ ದ ರಾ ಬೇಂದ್ರೆಯವರ ಸಾಹಿತ್ಯ ನಮಗೆ ಪ್ರತಿ ಹೆಜ್ಜೆಗೂ ಮಾದರಿ, ಆದ್ದರಿಂದ ಅವರ ಸಾಹಿತ್ಯವನ್ನು ಪ್ರತಿಯೊಬ್ಬರು ಓದಿ ಜೇವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಮಹಾಂತೇಶ ಜನವಾಡ ಮಾತನಾಡಿ, ಸಾಮಾನ್ಯರಿಗೆ ತಿಳಿಯುವಂತೆ ವರಕವಿ ದ.ರಾ. ಬೇಂದ್ರೆ ಅವರು ಮನುಷ್ಯ ಜೀವನದ ಸಾಮಾಜಿಕ ವ್ಯವಸ್ಥೆಯ ವಿವಿಧ ಆಯಾಮಗಳನ್ನು ತಮ್ಮ ಕಾವ್ಯದ ಮೂಲಕ ಬಿಂಬಿಸಿದ್ದಾರೆ ಎಂದರು.ವಿದ್ಯಾಶ್ರೀ.ದೇಸಾಯಿ.ಬಿ.ಎಸ್ ಮೇಂಡೆಗಾರ್ ,ಕೆ.ಆರ್ ಬಿರಾದಾರ್, ಎ.ಎಸ್ ಹಿರೇಮಠ್, ಎಂ ಎಂ ಬಡಿಗೇರ್, ಬಸವರಾಜ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ-೫೦ ರ ಮೇಲಿನ ಸಂಚಾರ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಮಂಗಳವಾರ ಆಗಮಿಸಿದ ಕರ್ನಾಟಕ ಸೇನೆಯ ಪದಾಧಿಕಾರಿಗಳು ಸಂಚಾರ ವ್ಯವಸ್ಥೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಪಟ್ಟಣದ ಮಧ್ಯೆದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದರಿಂದ ಟ್ರಾಫಿಕ್ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಜನಸಂಚಾರಕ್ಕೆ ತೊಂದರೆಯಾಗುತ್ತಿದೆ.ರಾಷ್ಟಿçÃಯ ಹೆದ್ದಾರಿ ಮೇಲೆ ತರಕಾರಿ ಸಹಿತ ವಿವಿಧ ವ್ಯಾಪಾರ ವಹಿವಾಟು ನಡೆಸುವುದರಿಂದ ಜನದಟ್ಟಣೆ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ದಿನದಲ್ಲಿ ಇಬ್ಬರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದು ಕೂಡಲೇ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿ ಮೇಲಿನ ತರಕಾರಿ ಮಾರುಕಟ್ಟೆಯನ್ನು ಬೇರೆಡೆ ವರ್ಗಾಯಿಸಬೇಕು. ಜೊತೆಗೆ ಪ್ರತಿ ಸೋಮವಾರ ಹೊಸನಗರದಲ್ಲಿ ನಡೆಯುವ ಜಾನುವಾರ ಸಂತೆಗೆ ಆಗಮಿಸುವ ವಾಹನಗಳಿಂದ ಆಗುವ ಟ್ರಾಫಿಕ್ ಸಮಸ್ಯೆ ತಪ್ಪಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಕೂಡಲೇ ಯಾವುದೇ ಕ್ರಮ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಇತ್ತೀಚಿನ ದಿನಗಳಲ್ಲಿ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವದರಿಂದ ರಸ್ತೆ ಸುರಕ್ಷತೆಯು ಬಹಳ ಮುಖ್ಯವಾಗಿದ್ದು, ನಾವು ಸಂಚಾರ ನಿಯಮ ಮತ್ತು ಕಾನೂನುಗಳನ್ನು ಅನುಸರಿಸಿದಾಗ ನಮ್ಮ ಕುಟುಂಬಗಳನ್ನು ರಸ್ತೆ ಅಪಘಾತಗಳಿಂದ ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಇಂಡಿ ಗ್ರಾಮೀಣ ಪಿ ಎಸ್ ಐ ಮಹೇಶ ಸಂಖ ಹೇಳಿದರು.ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಗಳ ವತಿಯಿಂದ ಹಮ್ಮಿಕೊಂಡ ‘ರಸ್ತೆ ಸುರಕ್ಷತೆ-ಕಾನೂನು ಅರಿವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಆವರು ಮಾತನಾಡಿದರು.18 ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡುವುದು ಅಪರಾಧವಾಗಿದ್ದು, ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ರಸ್ತೆ ಸುರಕ್ಷತೆಯು ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ರಸ್ತೆ ಸುರಕ್ಷತೆ ನಿಯಮಗಳು ಮತ್ತು ಕ್ರಮಗಳ ಬಗ್ಗೆ ಚೆನ್ನಾಗಿ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ಷಣಾತ್ಮಕ ಚಾಲನೆಯ ಅಭ್ಯಾಸ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಎರೆಹುಳು ಗೊಬ್ಬರ ಉಪಯೋಗಿಸುವದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವದಲ್ಲದೆ ಒಂದು ಎಕರೆಗೆ ವರ್ಷಕ್ಕೆ ೨ ಲಕ್ಷ ರೂ ಹೆಚ್ಚು ಆದಾಯ ಸಂಪಾದಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ ಹೇಳಿದರು.ಪಟ್ಟಣದ ಕೃಷಿ ಉಪನಿರ್ದೇಶಕರ ಕಚೇರಿಯ ಸಬಾಭವನದಲ್ಲಿ ನಡೆದ ಎರೆಹುಳ ತರಬೇತಿ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಮಾತನಾಡುತ್ತಿದ್ದರು.ಎರೆಹುಳು ರೈತರ ಮಿತ್ರ ರೈತ ಬಂಧು ಎಂದು ಕರೆಯಲಾಗುತ್ತಿದೆ. ರೈತನಂತೆ ಭೂಮಿಯಲ್ಲಿ ನಿರಂತರವಾಗಿ ಕೆಲಸ ಮಾಡುವ ಹುಳುಗಳು ನೈಸರ್ಗಿಕ ಪೋಷಕಾಂಶಯುಕ್ತ ಗೊಬ್ಬರವನ್ನು ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರ ರೈತರಿಗೆ ಸಹಾಯವಾಗುತ್ತದೆ. ಎಲ್ಲ ಸಾವಯುವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಗೊಬ್ಬರ ತಯಾರಿಸಬಹುದು, ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಗೊಬ್ಬರ ಉಪಯುಕ್ತತೆಯಾಗಿದೆ ಎಂದರು.ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿ ಮಣ್ಣಿನ ಹಾಸಿಗೆಯ ಕೆಳಭಾಗದಲ್ಲಿ ಕಾಂಕ್ರೀಟ್ ಹಾಕಬೇಕು, ಇಲ್ಲದಿದ್ದರೆ ಎರೆಹುಳು ಹೊರಗೆ ಹೋಗುವ ಸಾದ್ಯತೆ ಇರುತ್ತದೆ. ಅತಿಯಾದ ಬಿಸಿಲು ಇರುವ ಕಡೆ ಬೆಡ್ ಮೇಲೆ ಚಾವಣಿ ನಿರ್ಮಿಸಬೇಕು,ಮಳೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದ ಬಹುಸಂಖ್ಯಾತ ದಲಿತರು, ಶೋಷಿತರು, ವಿಶೇಷವಾಗಿ ಮಹಿಳೆಯರು ಇವತ್ತು ಗೌರವಯುತವಾಗಿ ಬದುಕುತ್ತಿದ್ದಾರೆಂದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಮತ್ತು ಸಂವಿಧಾನ ಕಾರಣ ಎಂಬುದನ್ನು ಯಾರೂ ಮರೆಮಾಚಲಾಗದು ಎಂದು ಪ್ರಗತಿಪರ ಚಿಂತಕ, ಲೇಖಕ ರಂಜಾನ್ ದರ್ಗಾ ಹೇಳಿದರು.ನಗರದ ತೊರವಿ ರಸ್ತೆಯ ಡಾ. ಅಂಬೇಡ್ಕರ್ ಎಜ್ಯುಕೇಶನಲ್ ಅಸೋಸಿಯೇಶನ್‌ನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಸಚಿವ, ಕ್ರಾಂತಿಕಾರಿ ದಲಿತ ನಾಯಕ ಬಿ. ಬಸವಲಿಂಗಪ್ಪ ಅವರ ೧೦೧ನೆಯ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಡಾ. ಅಂಬೇಡ್ಕರ್ ಅವರ ಬಾಲ್ಯ ಮತ್ತು ವಿದ್ಯಾರ್ಥಿಜೀವನ ಸುಖಮಯವಾಗಿರಲಿಲ್ಲ. ಕಠಿಣ ಪರಿಶ್ರಮದಿಂದ ಜಗತ್ತಿನ ಅತ್ಯಂತ ವಿದ್ಯಾವಂತರಲ್ಲಿ ಒಬ್ಬರಾದರು. ಅವರ ಜನ್ಮದಿನವನ್ನು ವಿಶ್ವ ಜ್ಞಾನದಿನವನ್ನಾಗಿ ಘೋಷಿಸಲಾಗಿದೆ. ಭಾರತದ ಸಂವಿಧಾನ ಬರೆಯುವ ಜವಾಬ್ದಾರಿ ಅವರ ಹೆಗಲಿಗೆ ಬಂತು. ಇಡೀ ಸಂವಿಧಾನಸಭೆಯಲ್ಲಿ ಅವರಷ್ಟು ಪದವಿಗಳು ಯಾರ ಬಳಿಯೂ ಇರಲಿಲ್ಲ. ವಿದ್ಯಾರ್ಥಿಗಳು ಡಾ. ಅಂಬೇಡ್ಕರ್ ಅವರನ್ನು ಆದರ್ಶವನ್ನಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.ಡಾ. ಅಂಬೇಡ್ಕರ್ ಅವರ ಸಾಧನೆಯ ಹಿಂದೆ…

Read More

ವಿಶ್ವ ಕ್ಯಾನ್ಸರ್ ದಿನಾಚರಣೆ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವಕ್ಕೆ ಆಪತ್ತು ತರುವ ಹಲವು ಕಾಯಿಲೆಗಳ ಮೂಲ ಜೀವನಶೈಲಿ. ಅಂತಹ ಕಾಯಿಲೆಗಳಲ್ಲಿ ಕ್ಯಾನ್ಸರ್ ಪ್ರಮುಖವಾದದ್ದು. ಇದನ್ನು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ತ ಗುಣಾರಿ ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾ ಸಮೀಕ್ಷಾ ಘಟಕ ವಿಜಯಪುರ ಇವರ ಸಂಯುಕ್ತಾಶ್ರಯಲ್ಲಿ ಮಂಗಳವಾರ ಬೆಳಿಗ್ಗೆ ಸರಕಾರಿ ನರ್ಸಿಂಗ ಕಾಲೇಜು ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಶಿವಾನಂದ ಮಾಸ್ತಿಹೊಳಿ ರವರು ಜಂಟಿಯಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಮಾನ್ಯವಾಗಿ ಕ್ಯಾನ್ಸರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇಕಡಾ ೭೫% ರಷ್ಟು ಹಾಗೂ ಇತರೆ ವರ್ಗದ ಶೇಕಡಾ ೨೫% ರಷ್ಟು ವಿದ್ಯಾರ್ಥಿಗಳಿಗೆ ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ವಸತಿ ಶಾಲೆಗಳಲ್ಲಿ ಶೇಕಡಾ ೫೦% ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರುವುದು. ವಿದ್ಯಾರ್ಥಿಗಳ ಪೋಷಕರ ಆದಾಯ ೨.೫೦ ಮಿತಿ ಲಕ್ಷ ಮಿರಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ ೧೦ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಸೇವಾಸಿಂಧುಪೋರ್ಟಲ್‌ನಲ್ಲಿ ನೇರವಾಗಿ ವೆಬ್‌ಸೈಟ್ https://sevasindhuservices.karnataka.gov.inಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಸವನಬಾಗೇವಾಡಿ ತಾಲೂಕಾ ಪ್ರೈಮರಿ ಟೀಚರ್ಸ್ ಕೋ-ಆಪರೇಟಿವ್ ಕ್ರೆಡಿಟ್ ಸೊಸಾಯಿಟಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಆದರ್ಶ ಶಿಕ್ಷಕರ ವೇದಿಕೆ, ಸಮಾನ ಮನಸ್ಕರ ವೇದಿಕೆ, ಹೊನ್ನಪ್ಪ ಗೊಳಸಂಗಿ ಅವರ ಪೆನಲ್‌ದ ಅಭ್ಯರ್ಥಿಗಳು ಒಟ್ಟು ೧೩ ಸದಸ್ಯ ಬಲದಲ್ಲಿ ೧೧ ಸದಸ್ಯರು ಆಯ್ಕೆಯಾಗುವ ಮೂಲಕ ಈ ಪೆನಲ್ ವಿಜಯೋತ್ಸವ ಆಚರಿಸುವ ಮೂಲಕ ಪಟಾಕ್ಷಿ ಸಿಡಿಸಿ ಪರಸ್ಪರ ಗುಲಾಲು ಎರಚಿಕೊಂಡು ಸಂಭ್ರಮಿಸಿದರು.ಬಸವನಬಾಗೇವಾಡಿ ತಾಲೂಕಾ ಪ್ರೈಮರಿ ಟೀಚರ್ಸ್ ಕೋ-ಆಪರೇಟಿವ್ ಕ್ರೆಡಿಟ್ ಸೊಸಾಯಿಟಿಯು ೧೩ ಸದಸ್ಯ ಬಲಹೊಂದಿದೆ. ಐದು ವರ್ಷದ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಿಗದಿಯಾಗಿತ್ತು. ೧೩ ಸ್ಥಾನಗಳಿಗೆ ಹಿರಿಯರ ಪೆನಲ್‌ದಿಂದ ೧೩ ಜನ ಶಿಕ್ಷಕ ಅಭ್ಯರ್ಥಿಗಳು, ಆದರ್ಶ ಶಿಕ್ಷಕರ ವೇದಿಕೆ, ಸಮಾನ ಮನಸ್ಕರ ವೇದಿಕೆ, ಹೊನ್ನಪ್ಪ ಗೊಳಸಂಗಿ ಅವರ ಪೆನಲ್‌ದಿಂದ ೧೩ ಶಿಕ್ಷಕ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಒಟ್ಟು ೭೮೦ ಮತದಾರರು ಇದ್ದರು. ಇದರಲ್ಲಿ ೭೬೧ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಇದರಲ್ಲಿ ಮಹೇಶ…

Read More