Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಾಜಪೇಯಿ ವೃತ್ತದಲ್ಲಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕ ಯತ್ನಾಳ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ರವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ ಚಿಂತಕರಾಗಿದ್ದರು ಎಂದರು.ದೂರಸಂಪರ್ಕ ಕ್ರಾಂತಿ ಆದದ್ದು ಭಾರತ ರತ್ನ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ. ಸರ್ವ ಶಿಕ್ಷಾ ಅಭಿಯಾನ ಯೋಜನೆಯ ಮೂಲಕ ಅಟಲ್ ಜಿ ಅವರು 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು ಎಂದರು.ಕಾರ್ಗಿಲ್ ಯುದ್ಧದ ಸಮಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿಯಲು…
ಸಿದ್ಧಸಿರಿ ಸಂಸ್ಥೆ ಕುರಿತು ಯಾವುದೇ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಿ ನ್ಯಾಯಾಲಯದಿಂದ ಮಧ್ಯಂತರ ಆದೇಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಗೆ ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಎಲ್ಲರಿಗೂ ಚಿರ ಪರಿಚಿತವಾದ ಮತ್ತು ರಾಜ್ಯದ ಮೂಲೆ ಮೂಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಈಗ ಕೇಂದ್ರ ಸರ್ಕಾರದ ಅಡಿ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ನಿ. ಆಗಿ ನೋಂದಣಿಯಾಗಿರುವದು ಎಲ್ಲ ಗ್ರಾಹಕರಿಗೆ ಮತ್ತು ನಿರ್ದೇಶಕ ಮಂಡಳಿಗೆ ಅತ್ಯಂತ ಸಂತಸದ ಸಂಗತಿ.ಆದರೆ ಇತ್ತಿತ್ತಲಾಗಿ ನಮ್ಮ ಸೊಸೈಟಿಯ ಒಬ್ಬ ನೌಕರನಾದ ರಾಘವ ಅಣ್ಣಿಗೇರಿ (ರಾಘವೇಂದ್ರ ಭೀ. ಅಣ್ಣಿಗೇರಿ) ಎನ್ನುವ ವ್ಯಕ್ತಿ ನಮ್ಮ ಸೊಸೈಟಿ ಕುರಿತಂತೆ ಫೇಸ್ಬುಕ್ (Facebook) ನಲ್ಲಿ ಕೆಲವು ಪೋಸ್ಟಗಳನ್ನು ಹಾಕುತ್ತಾ ನಮ್ಮ ಸೊಸೈಟಿ ನೀಡಿದ ಒಂದು ಪತ್ರವನ್ನು ಪ್ರದರ್ಶಿಸಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದು ನಮ್ಮ ಸಂಸ್ಥೆಯ ಗಮನಕ್ಕೆ ಬಂದಿದ್ದು, ಇದರಿಂದಾಗಿ ನಮ್ಮ ಗ್ರಾಹಕರಲ್ಲಿ ಕೆಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ ಈ ಪತ್ರಿಕಾ ಪ್ರಕಟಣೆ ಮುಖಾಂತರ ಎಲ್ಲ ವಿಷಯಗಳನ್ನು ಸ್ಪಷ್ಟಪಡಿಸಲು ಆಡಳಿತ ಮಂಡಳಿ ನಿರ್ಧರಿಸಿದಂತೆ ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ವಿವಿಧ ಕಲಾ ಪ್ರಕಾರದ ಸಾಂಸ್ಕರತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಸ್ಪರ್ಧಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಡಿಸೆಂಬರ್ ೨೬ ಹಾಗೂ ೨೭ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆಯುವ ವಲಯ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಕಲಾ ಪ್ರತಿಭೆ ಪ್ರಸ್ತುತಪಡಿಸಲಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯತೆಯ ವೃದ್ಧಿಗೊಳಿಸುವತ್ತ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ನಗರದ ಕಂದಗಲ್ಲ ಶ್ರೀ ಹನಮಂತ್ರಾಯ ರಂಗಮಂದಿರ ಹಾಗೂ ವಾರ್ತಾ ಇಲಾಖೆಯ ಆವರಣದಲ್ಲಿ ಇದೇ ಡಿಸೆಂಬರ್ ೧೮ ಹಾಗೂ ೧೯ ರಂದು ಆಯೋಜಿಸಲಾಗಿತ್ತು.ಬಾಲ ಪ್ರತಿಭೆ ವಿಭಾಗದಲ್ಲಿ ಶಾಸ್ತ್ರೀಯ ನೃತ್ಯ-ಆರಾಧ್ಯಾ ಹೂಗಾರ, ಸುಗಮ ಸಂಗೀತ-ರಶ್ಮಿ ಬಗಲಿ, ಚಿತ್ರಕಲೆ-ಪ್ರಜ್ವಲ ಚವ್ಹಾಣ, ಜನಪದ ಗೀತೆ-ಪ್ರತೀಕ ರಾಠೋಡ, ಹಿಂದೂಸ್ಥಾನಿ-ಕರ್ನಾಟಕ ವಾದ್ಯ ಸಂಗೀತ-ಅನಂತ ಆಧ್ಯ, ಹಿಂದೂಸ್ಥಾನಿ-ಕರ್ನಾಟಕ ಶಾಸ್ರ್ತೀಯ ಸಂಗೀತ-ಸಮೀರ ಶೇಖ ಹಾಗೂ ಕಿಶೋರ ಪ್ರತಿಭೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೨೦/೧೧೦/೧೧ ಕೆವಿ ಬಸವನ ಬಾಗೇವಾಡಿ ಸ್ವೀಕರಣಾ ಕೇಂದ್ರದ ೨೦ ಎಮ್ವಿಎ, ೧೧೦/೩೩ ಕೆವಿ ಪರಿವರ್ತಕ-೧೮೨ ಹಾಗೂ ೨೦ ಎಮ್ವಿಎ, ೧೧೦/೩೩ ಕೆವಿ ಪರಿವರ್ತಕ-೩ ಮತ್ತು ೪ ಪರಿವರ್ತಕಗಳ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಪರಿವರ್ತಕಗಳ ಮೇಲೆ ಬರುವ ೩೩ ಕೆವಿ ಮತ್ತು ೧೧ಕೆವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ೩೩ಕೆವಿ ಮಾರ್ಗಗಳಲ್ಲಿ ಬರುವ ಮುತ್ತಗಿ, ಮನಗೂಳಿ, ಹೂವಿನ ಹಿಪ್ಪರಗಿ ೩೩ಕೆವಿ ಉಪಕೇಂದ್ರಗಳಲ್ಲಿಯೂ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಿಸಲು ಉದ್ದೇಶಿಸಿರುವುದರಿಂದ ಎಲ್ಲ ೩೩ ಕೆವಿ ಉಪ ಕೇಂದ್ರಗಳು ಹಾಗೂ ಅವುಗಳಿಂದ ಹೊರಹೊಗುವ ೧೧ ಕೆವಿ ಮಾರ್ಗಗಳಲ್ಲಿ ಹಾಗೂ ೨೨೦/೧೧೦/೧೧ ಕೆ ವಿ ಬಸವನ ಬಾಗೇವಾಡಿ ಸ್ವೀಕರಣಾ ಕೇಂದ್ರದಿಂದ ಹೊರ ಹೋಗುವ ಎಲ್ಲಾ ೧೧ ಕೆವಿ ಮಾರ್ಗಗಳಲ್ಲೂ ಡಿ.೨೭ರ ಬೆಳಿಗ್ಗೆ ೧೦ ರಿಂದ ಸಂಜೆ ೫:೩೦ರವರೆಗೆ ವಿದ್ಯುತ್ ಸರಬಾರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನ ಬಾಗೇವಾಡಿಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ | ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಮುಖ್ಯ ಕಾರಣ | ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್ನ ಸ್ಲೀಪರ್ ಬಸ್ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವುಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ಹತ್ಯೆ ನಡೆದಿರುವದು ಖಂಡನೀಯ. ಇಂತಹ ಘಟನೆಗಳು ನಡೆದರೆ ದೇಶದ ಮಕ್ಕಳ, ಯುವಜನಾಂಗದ ಮೇಲೆ ಪ್ರಭಾವ ಬೀರುತ್ತದೆ. ಈ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳಬೇಕಿದೆ. ನಮ್ಮ ಸರ್ಕಾರವು ಇದರ ಕಡೆಗೆ ಗಮನ ಹರಿಸಬೇಕೆಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಶ್ವ ಹಿಂದು ಪರಿಷದ್, ಬಜರಂಗದಳವು ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದುಗಳ ಶೀಘ್ರ ರಕ್ಷಣೆ ಮಾಡುವಂತೆ ಆಗ್ರಹಿಸಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಹಿಂದುಗಳ ಮೇಲೆ ಇಂತಹ ಘಟನೆ ನಡೆದಿರುವದು ಖಂಡನೀಯ. ಹಿಂದುಗಳ ಮೇಲಿನ ಹತ್ಯಾಕಾಂಡ ನಿಲ್ಲಿಸಲು ಕ್ರಮಕೈಗೊಳ್ಳುವಂತೆ ಬಾಂಗ್ಲಾ ಸರ್ಕಾರದ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರಬೇಕೆಂದು ಒತ್ತಾಯಿಸಿದರು.ವಕೀಲ ರಾಚಯ್ಯ ಗಣಕುಮಾರ ಮಾತನಾಡಿ, ಪಾಪಿ ಪಾಕಿಸ್ತಾನದ ಪ್ರಚೋದನೆಯಿಂದ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಇಂತಹ ಘಟನೆ ನಡೆಯುತ್ತಿದೆ. ನಮ್ಮ ದೇಶದಲ್ಲಿ ಎಲ್ಲ ಜಾತಿಯವರು ಒಂದಾಗಿ ಬಾಳುತ್ತಿದ್ದಾರೆ. ನಮ್ಮ ದೇಶದ ಸಂಸ್ಕ್ರತಿ…
ಉದಯರಶ್ಮಿ ದಿನಪತ್ರಿಕೆ ಅನುಭವಗಳ ಭಾರದಿಂದ ಭರವಸೆಯ ಬೆಳಕಿನತ್ತ2025ಕ್ಕೆ ವಿದಾಯ 2026ಕ್ಕೆ ಹಾರ್ದಿಕ ಸ್ವಾಗತ ಕಾಲ ಎಂದರೆ ನಿಲ್ಲದ ಪಯಣ.ನೋಡುತ್ತಲೇ 2025 ಎಂಬ ವರ್ಷ ನಮ್ಮ ಬದುಕಿನ ದಿನಚರಿಯಲ್ಲಿ ಒಂದು ನೆನಪಿನ ಪುಟವಾಗಿ ಮಡಚಿಕೊಳ್ಳುತ್ತಿದೆ.ಅದರ ಜೊತೆ ಸಂತೋಷ, ನೋವು, ಸಾಧನೆ, ಪಾಠಗಳು—ಎಲ್ಲವೂ ನೆನಪಾಗಿ ಉಳಿಯುತ್ತಿವೆ. 2025 ನಮ್ಮೆಲ್ಲರ ಬದುಕಿನಲ್ಲಿ ಕಲಿಕೆಯ ವರ್ಷ.ಕೆಲವರಿಗೆ ಸಾಧನೆಯ ಹಾದಿ, ಕೆಲವರಿಗೆ ಸಹನೆಯ ಪಾಠ, ಮತ್ತವರಿಗೆ ಹೊಸ ಕನಸುಗಳ ಆರಂಭ.ಬಿದ್ದರೂ ಮತ್ತೆ ಎದ್ದು ನಿಲ್ಲುವ ಧೈರ್ಯವನ್ನು ಈ ವರ್ಷ ನಮಗೆ ಕಲಿಸಿತು. ಬದುಕು ಎಂದರೆ ಕೇವಲ ಗೆಲುವಲ್ಲ, ಸೋಲಿನಲ್ಲೂ ಅರ್ಥ ಹುಡುಕುವ ಪ್ರಯತ್ನ ಎಂದು ಅರಿವುಗೊಳಿಸಿತು.ಇದೀಗ 2026 ನಮ್ಮ ಮುಂದೆ ನಿಂತಿದೆಹೊಸ ಭರವಸೆಗಳೊಂದಿಗೆ,ಹೊಸ ಅವಕಾಶಗಳೊಂದಿಗೆ,ಹೊಸ ಸಂಕಲ್ಪಗಳೊಂದಿಗೆ.ಈ ಹೊಸ ವರ್ಷದಲ್ಲಿಹಿಂದಿನ ತಪ್ಪುಗಳು ಪಾಠಗಳಾಗಲಿ,ನೋವುಗಳು ಶಕ್ತಿಯಾಗಲಿ,ಕನಸುಗಳು ಗುರಿಯಾಗಲಿ.ವೈಯಕ್ತಿಕ ಬದುಕಿನ ಜೊತೆಗೆಸಮಾಜದಲ್ಲಿ ಮಾನವೀಯತೆ ಹೆಚ್ಚಲಿ,ಸೌಹಾರ್ದತೆ ಬಲವಾಗಲಿ,ನೆಮ್ಮದಿ ಎಲ್ಲರ ಮನೆಬಾಗಿಲಿಗೂ ತಲುಪಲಿ. 2025ಕ್ಕೆ ಗೌರವಪೂರ್ವಕ ವಿದಾಯ ಹೇಳುತ್ತಾ,2026ನ್ನು ತೆರೆದ ಹೃದಯದಿಂದ ಸ್ವಾಗತಿಸೋಣ.ಸ್ವಾಗತ 2026 —ಹೊಸ ಬೆಳಕು, ಹೊಸ ದಾರಿ, ಹೊಸ ಬದುಕಿನ ಆಶಯ. -…
ವಿಜಯಪುರದಲ್ಲಿ ನಡೆದ ಕಾನಿಪ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವ ಡಾ.ಎಂ.ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡ ವಿದ್ಯಾರ್ಥಿಗಳಿಗೆ ಉಚಿತ ಸೀಟು ಕೊಡಿಸುವ ಮೂಲಕ ವೇದಿಕೆಯಾಗುವ ಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು ಕೂಡಾ ಹೌದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ನಡೆದ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೀಟು ತೆಗೆದುಕೊಳ್ಳಲು ಪರದಾಡುವ ಬಡ ವಿದ್ಯಾರ್ಥಿಗಳು, ಚಿಕಿತ್ಸೆಗಾಗಿ ಹಂಬಲಿಸುವ ಬಡ ರೋಗಿಗಳು ಹೀಗೆ ಎಲ್ಲ ವಿಷಯಗಳನ್ನು ಮಾನವೀಯ ಅಂತ:ಕರಣದೊಂದಿಗೆ ಆ ಸುದ್ದಿಗಳನ್ನು ಪ್ರತಿಬಿಂಬಿಸುವ ಪತ್ರಿಕೆಗಳಿಂದಾಗಿ ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಸೀಟು ದೊರಕಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಿದೆ ಎಂದರು.ಆಧುನಿಕ ಮಾಧ್ಯಮಗಳಿಂದ ಪತ್ರಿಕೆಗಳು ಅಸ್ತಿತ್ವವೇ ಕಳೆದುಕೊಳ್ಳಲಿವೆ ಎಂದು ಅನೇಕರು ಭಾವಿಸಿದ್ದರು, ಪರಿಸ್ಥಿತಿ ಸಹ ಅದೇ ರೀತಿ ಭಾಸವಾಗುವಂತೆ ಮಾಡಿದ್ದರು, ಆದರೆ ಇಂದಿಗೂ ಪತ್ರಿಕೆ ಓದಿದರೆ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಲೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸುವದರ ಮೂಲಕ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಚಲ ಸಂಕಲ್ಪ ಹೊಂದಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮೋಹಿತೆ ವಸ್ತಿ ಮತ್ತು ಅರಕೇರಿ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮೋಹಿತೆ ವಸ್ತಿಯಲ್ಲಿ ಕೆ.ಎಸ್.ಐ.ಐ.ಡಿ.ಸಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿ.ಎಸ್.ಆರ್ ಅನುದಾನದಲ್ಲಿ ಸರಕಾರಿ ಶಾಲೆಗಳಲ್ಲಿ ನೂತನ ಕೊಠಡಿಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಮಹಾನಗರಗಳ ಕಾನ್ವೆಂಟ್ ಶಾಲೆಗಳಲ್ಲಿರುವ ಮಾದರಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.ಅರಕೇರಿಯಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಟಿ.ಎಸ್.ಇ ಯೋಜನೆಯಡಿ ನಿರ್ಮಿಸಿರುವ ನೂತನ ಸಮುದಾಯ ಭವನ ಕಟ್ಟಡ…
ನವದೆಹಲಿಯ ಸಿಸಿಐಎಂ ಮಾಜಿ ಸದಸ್ಯ, ಗದಗ ಡಿ. ಜಿ. ಎಂ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಜಿ.ಬಿ.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಯುರ್ವೇದ ಪ್ರಾಚೀನ ಕಾಲದ ಶಾಸ್ತ್ರೀಯ ವಿದ್ಯೆಯಾಗಿದೆ. ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡುವುದರ ಮೂಲಕ ಆಯುರ್ವೇದವನ್ನು ಉಳಿಸಬೇಕು ಹಾಗೂ ಬೆಳೆಸಬೇಕು ಎಂದು ನವದೆಹಲಿಯ ಸಿಸಿಐಎಂ ಮಾಜಿ ಸದಸ್ಯ ಮತ್ತು ಗದಗ ಡಿ. ಜಿ. ಎಂ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಜಿ. ಬಿ. ಪಾಟೀಲ ಹೇಳಿದ್ದಾರೆ.ನಗರದ ಬಿಎಲ್ಡಿಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ವಿಶ್ವಾದ್ಯಂತ ಜನರು ಈಗ ಆಯುರ್ವೇದ ಕಡೆಗೆ ಒಲವು ತೋರಿಸುತ್ತಿರುವುದು ಸಂತಸದ ವಿಷಯವಾಗಿದೆ. ನಿಖರವಾದ ಆಯುರ್ವೇದ ಚಿಕಿತ್ಸೆಯನ್ನು ಸಂಶೋಧನೆಯ ಮೂಲಕ ನೀಡಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ಆಯುರ್ವೇದ ವೈದ್ಯರ ಕರ್ತವ್ಯವಾಗಿದೆ. 77 ವರ್ಷಗಳ ಇತಿಹಾಸವಿರುವ ಈ ಮಹಾವಿದ್ಯಾಲಯವು ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಹೊಂದಿರುವುದು ಸಂತಸ ತಂದಿದೆ. ಕಾಲೇಜಿನ…
