Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದಲ್ಲಿ ಸುಮಾರು ೪೦ ವರ್ಷದಿಂದ ಬ್ಯಾಂಕ ಸೇವೆಯನ್ನು ಗ್ರಾಹಕರ ಸಹಕಾರದಿಂದ ಉತ್ತಮ ವಹಿವಾಟಿನೊಂದಿಗೆ ನಡೆಸುತ್ತಾ ಬಂದಿದ್ದು, ಬಹುದಿನಗಳಿಂದ ಈ ಭಾಗದ ಬೇಡಿಕೆಯಂತೆ ಬ್ಯಾಂಕ್ ಆಫ್ ಬರೋಡಾದ ಕಲಕೇರಿ ಶಾಖೆಯ ನೂತನ ಸುಸಜ್ಜಿತ ಕಟ್ಟಡದಲ್ಲಿ ಉದ್ಘಾಟನೆಗೊಂಡಿದ್ದು, ಈ ಮೂಲಕ ಮತ್ತಷ್ಟು ಉತ್ತಮವಾದ ಸೇವೆಯನ್ನು ಗ್ರಾಹಕರಿಗೆ ಒದಗಿಸುತ್ತೇವೆ ಎಂದು ಕಲಬುರಗಿ ಪ್ರಾದೇಶಿಕ ವ್ಯವಸ್ಥಾಪಕರಾದ ವಿ.ರವೀಂದ್ರಬಾಬು ಅವರು ಹೇಳಿದರು.ಕಲಕೇರಿಯ ಬ್ಯಾಂಕ್ ಆಫ್ ಬರೋಡಾ ಶಾಖೆಯು ವಿಜಯಪುರ ರಸ್ತೆಯ ಕಿತ್ತೂರು ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ನೂತನ ಸುಸಜ್ಜಿನ ಕಟ್ಟಡಕ್ಕೆ ಸ್ಥಾಳಾಂತರಗೊಂಡ ಹಿನ್ನೆಲೆಯಲ್ಲಿ ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಇದೇ ವೇಳೆ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ನಾಯ್ಡು, ಸಹಾಯಕ ವ್ಯವಸ್ಥಾಪಕರಾದ ಚಂದ್ರಶೇಖರ ರಾಠೋಡ, ಶ್ಯಾಮಸುಂದರ, ವಿನೋದಕುಮಾರ, ಭವಾನಿ ಪ್ರಸಾದ, ಸಿಬ್ಬಂದಿಗಳಾದ ಅಂಭಾಜಿ ಪವಾರ, ಗೂಳಪ್ಪ ವಡ್ಡೋಡಗಿ, ಗುರುರಾಜ ಅಡಕಿ, ಸಾಯಿನಾಥ ನಾಯ್ಕ್, ಮಾಹಾಂತೇಶ ಮಾಗಣಗೇರಿ, ಪ್ರಜ್ವಲ್ ಅಡಕಿ, ರಾಜಶೇಖರ ಜಂಬಗಿ ಸೇರಿದಂತೆ ಕಲಕೇರಿ,ತಿಳಗೂಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗಣ್ಯರು ಮತ್ತು ಬ್ಯಾಂಕ್ ಗ್ರಾಹಕರು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರೈತ ಒಂದು ವರ್ಷ ದುಡಿದರೆ ಭಿವಿಷ್ಯದ ವರ್ಷಕ್ಕೆ ಸಾಕಾಗುವಷ್ಟು ಆಹಾರ ಸಂಗ್ರಹಿಸುತ್ತಾನೆ. ಆದರೆ ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಯನ ಮಾಡಿದರೆ ಇಡೀ ಜೀವನಪರ್ಯಂತ ಸಾಕಾಗುವಷ್ಟು ಜ್ಞಾನವೆಂಬ ಆಹಾರ ಸಂಗ್ರಹಿಸಬಹುದು. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯ ತಮ್ಮ ಕೈಯಲ್ಲಿದೆ. ತಮ್ಮ ಹಣೆಯ ಬರಹವನ್ನು ತಾವೇ ಬರೆದುಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ ಹೇಳಿದರು.ತಾಲ್ಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ತಾರುಣ್ಯದಲ್ಲಿ ಕಷ್ಟಪಟ್ಟು ದುಡಿದರೆ ವೃದ್ಧಾಪ್ಯದಲ್ಲಿ ಅದೇ ಫಲವಾಗಿ ನೆಮ್ಮದಿ ನೆಮ್ಮದಿ ನೀಡುತ್ತದೆ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಈಡೇರಿಸಿದಂತಾಗುತ್ತದೆ. ಅವರ ಉದರದಲ್ಲಿ ಹುಟ್ಟಿದ್ದು ಸಾರ್ಥಕವಾಗುತ್ತದೆ ಎಂದರು.ಎಂ.ಎಂ. ಮುಜಗೊಂಡ ಮಾತನಾಡಿ, ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಉತ್ತಮ ಪಾಠ ಬೋಧನೆಯ ಮೂಲಕ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ರೈತ ಬಾಂಧವರಿಗೆ ಎರೆಹುಳು ಗೊಬ್ಬರ ತಯಾರಿಸುವ ಮಾಹಿತಿ ಕುರಿತು ಪಟ್ಟಣದ ಸ್ಟೇಷನ್ ರಸ್ತೆಯಲ್ಲಿರುವ ಕೃಷಿ ಉಪ ನಿರ್ದೇಶಕರ ಕಚೇರಿಯ ಸಬಾಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಫೆ ೪ ರಂದು ತರಬೇತಿ ನೀಡಲಾಗುವದು ಎಂದು ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ತಿಳಿಸಿದ್ದಾರೆ.ಎರೆಹುಳು ಬೆಳೆಯುವ ವಿಧಾನ, ಅದಕ್ಕೆ ಬೇಕಾಗುವ ಜಾಗದ ವಿಸ್ತೀರ್ಣದ ಮಾಹಿತಿ, ಮತ್ತು ಎರೆಹುಳು ಸಿಗುವ ಮಾಹಿತಿ ಮತ್ತು ಬೇಕಾಗುವ ಪದಾರ್ಥಗಳ ಜೊತೆಗೆ ಸರಕಾರದಿಂದ ಸವಲತ್ತುಗಳ ಕುರಿತು ಮಾಹಿತಿ ನೀಡಲಾಗುವದು ಎಂದು ಪವಾರ ತಿಳಿಸಿದ್ದಾರೆ.ಕೇವಲ ಮೂವತ್ತು ಜನ ರೈತರಿಗೆ ಮಾತ್ರ ಪ್ರವೇಶವಿದೆ. ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮಾಹಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೦೮೩೫೯ ೨೨೫೦೮೦ ಸಂಪರ್ಕಿಸಲು ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪದ್ಮರಾಜ ವಿದ್ಯಾರ್ಧಕ ಸಂಸ್ಥೆಯು ಪ್ರಾಚೀನ ಕಾಲದ ನಳಂದ ವಿಶ್ವವಿದ್ಯಾಲಯದಂತೆ ಕಾರ್ಯನಿರ್ವಹಿಸುತ್ತಿದೆ. ಕಲ್ಯಾಣ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ ಎಂದು ಸಾಲೋಟಗಿಯ ಶ್ರೀ ಶಿವಯೋಗೇಶ್ವರ ಪಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸಿ.ಎಸ್.ಮಂಗಳೂರು ಹೇಳಿದರು.ಸಿಂದಗಿ ಪಟ್ಟಣದ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಓದುವ ವಿದ್ಯಾರ್ಥಿಗಳಿಗೆ, ಬಡ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಪ್ರೋತ್ಸಾಹವನ್ನು ನೀಡುತ್ತಾ ಸೇವಾ ಮನೋಭವನೆಯಿಂದ ಕರ್ತವ್ಯವನ್ನು ನಿರ್ವಹಿಸಿ ತಮ್ಮ ವಿದ್ಯೆಯನ್ನು ಧಾರೆ ಎರೆಯುವವರಾಗಿದ್ದಾರೆ ಎಂದರು.ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಸಂಸ್ಥೆಯ ಚೇರಮನ್‌ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಮಹಿಳೆಯರು ಯಾರ ಮೇಲೆಯೂ ಅವಲಂಬಿತರಾಗದೇ ಸ್ವಾವಲಂಬಿಗಳಾಗಬೇಕು. ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು ಕೌಶಲ್ಯಾಧಾರಿತ ಉದ್ಯೋಗಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಬರಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದು ಅವಶ್ಯಕವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕುಟುಂಬದಿAದಲೇ ನೀಡಬೇಕು ಎಂದು ವಿಜಯಪುರದ ರಾಮಕೃಷ್ಣ ಆಶ್ರಮದ ಸ್ವಾಮಿ ನರೇಶಾನಂದರು ಹೇಳಿದರು. ಸಿಂದಗಿ ಪಟ್ಟಣದ ಬಂದಾಳ ರಸ್ತೆಯಲ್ಲಿರುವ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿವೇಕ ಸಿರಿ ಸಂಭ್ರಮ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು ಇಂದಿನ ಮಕ್ಕಳು ಬೌದ್ಧಿಕವಾಗಿ ಚುರುಕಾಗಿದ್ದಾರೆ. ಆದರೆ ನೈತಿಕವಾಗಿ ಕುಸಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಮುಖ್ಯ ಅತಿಥಿಗಳಾಗಿದ್ದ ಬಿ.ಎಲ್.ಡಿ ಸಂಸ್ಥೆಯ ಬಿ.ಎಮ್.ಪಾಟೀಲ್ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರವಿಕುಮಾರ್ ಮತ್ತು ನಾನು ಶಾಲೆಯಲ್ಲಿ ಓದಿದ್ದೇವೆ. ಈ ಶಾಲೆಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು. ಈ ವೇಳೆ ಅಧ್ಯಕ್ಷೀಯ ನುಡಿಗಳನ್ನಾಡಿದ ಎಚ್.ಜಿ.ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಚಾಲಕ, ಬಾಲಕ ಮತ್ತು ಪಾಲಕರ ಪಾತ್ರ ಪ್ರಮುಖವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಶ್ರೀಮತಿ ಶಾಹಿಮೂಲ್ ಟಿ. ರಾಬಿನ್ ಶಾಲೆಯ ಶೈಕ್ಷಣಿಕ ವರದಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಮರ ನೆಟ್ಟು, ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ನಟ ನಿರ್ದೇಶಕ ವಿಶ್ವಪ್ರಕಾಶ ಮಲಗೊಂಡ ಹೇಳಿದರು.ಸಿಂದಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಗಮ ಯುವ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮಿಣಾಅಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡ ವೃಕ್ಷಥಾನ್ ಜಾಥಾದಲ್ಲಿ ಮಾತನಾಡಿದ ಅವರು, ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ, ನೆರಳು, ಹಣ್ಣು ನೀಡುತ್ತವೆ. ಆದರೆ ಮಾನವನ ತನ್ನ ಸ್ವಾರ್ಥ ಮತ್ತು ದುರಾಸೆಯಿಂದ ಇಂದು ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ಸಂಗಮ ಸಂಸ್ಥೆ ಪರಿಸರದ ಕಾಳಜಿಯ ಜೊತೆಗೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ದೇವರ ಹಿಪ್ಪರಗಿ ಜೆ.ಎಮ್.ಜೆ ನಿರ್ದೇಶಕಿ ಸಿಸ್ಟರ್ ಹೃದಯಾ ಮಾತನಾಡಿ, ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಾತ್ರಾ ಮಹೋತ್ಸವದ ಅಂಗವಾಗಿ ಜರುಗುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿಭಾವಗಳನ್ನು ಜಾಗೃತಿಗೊಳಿಸುವುದರ ಜೊತೆಗೆ ಐಕ್ಯತೆಯನ್ನುಂಟು ಮಾಡುತ್ತವೆ ಎಂದು ಸಿದ್ಧರಾಮ ಸ್ವಾಮೀಜಿ ಹೇಳಿದರು.ಪಟ್ಟಣದ ಗಂಗಾನಗರದಲ್ಲಿ ಶನಿವಾರ ಬಾಲಹನುಮಾನ ದೇವಸ್ಥಾನದ ೧೧ ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ಜಾತ್ರೆಯ ಅಂಗವಾಗಿ ಧರ್ಮಸಭೆ, ನಾಟಕ, ರಸಮಂಜರಿ, ಡೋಳ್ಳಿನ ಪದ, ಭಾರ ಎತ್ತುವ ಸ್ಪರ್ಧೆ ಸಹಿತ ಹತ್ತುಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ ಮಾತನಾಡಿ, ನಿಂಗು ಯಂಭತ್ನಾಳ ನೇತೃತ್ವದಲ್ಲಿ ಮಾಲಾಧಾರಿಗಳು ಸತತ ೧೧ನೇ ವರ್ಷದಲ್ಲಿ ಯಶಸ್ವಿಯಾಗಿ ಜಾತ್ರಾ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಸಮಯೋಚಿತ ಹಾಗೂ ಅನುಕರಣೀಯ ಕಾರ್ಯ ಎಂದರು.ಕಾರ್ಯಕ್ರಮದಲ್ಲಿ ಗಾಯಕ ಸಿದ್ಧಯ್ಯಸ್ವಾಮಿ ಪಡದಹಳ್ಳಿ, ತಬಲಾ ವಾದಕ ಮಲ್ಲಿಕಾರ್ಜುನ ಜೇವರಗಿ, ಸಂಘಟಕ ನಿಂಗು ಯಂಭತ್ನಾಳ, ಬಾಬು ಸೌದಿ, ಕಾಶೀನಾಥ ರಾಮಗೊಂಡ, ಬಸವರಾಜ ಕುಂಬಾರ ಶ್ರೀಶೈಲ ಸೌದಿ, ಜಟ್ಟೆಪ್ಪ ಪೂಜಾರಿ ಸಹಿತ ಮಾಲಾಧಾರಿಗಳು, ಭಕ್ತರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಾತ್ರಾ ಮಹೋತ್ಸವದ ಅಂಗವಾಗಿ ಜರುಗುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿಭಾವಗಳನ್ನು ಜಾಗೃತಿಗೊಳಿಸುವುದರ ಜೊತೆಗೆ ಐಕ್ಯತೆಯನ್ನುಂಟು ಮಾಡುತ್ತವೆ ಎಂದು ಸಿದ್ಧರಾಮ ಸ್ವಾಮೀಜಿ ಹೇಳಿದರು.ಪಟ್ಟಣದ ಗಂಗಾನಗರದಲ್ಲಿ ಶನಿವಾರ ಬಾಲಹನುಮಾನ ದೇವಸ್ಥಾನದ ೧೧ ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ಜಾತ್ರೆಯ ಅಂಗವಾಗಿ ಧರ್ಮಸಭೆ, ನಾಟಕ, ರಸಮಂಜರಿ, ಡೋಳ್ಳಿನ ಪದ, ಭಾರ ಎತ್ತುವ ಸ್ಪರ್ಧೆ ಸಹಿತ ಹತ್ತುಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ ಮಾತನಾಡಿ, ನಿಂಗು ಯಂಭತ್ನಾಳ ನೇತೃತ್ವದಲ್ಲಿ ಮಾಲಾಧಾರಿಗಳು ಸತತ ೧೧ನೇ ವರ್ಷದಲ್ಲಿ ಯಶಸ್ವಿಯಾಗಿ ಜಾತ್ರಾ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಸಮಯೋಚಿತ ಹಾಗೂ ಅನುಕರಣೀಯ ಕಾರ್ಯ ಎಂದರು.ಕಾರ್ಯಕ್ರಮದಲ್ಲಿ ಗಾಯಕ ಸಿದ್ಧಯ್ಯಸ್ವಾಮಿ ಪಡದಹಳ್ಳಿ, ತಬಲಾ ವಾದಕ ಮಲ್ಲಿಕಾರ್ಜುನ ಜೇವರಗಿ, ಸಂಘಟಕ ನಿಂಗು ಯಂಭತ್ನಾಳ, ಬಾಬು ಸೌದಿ, ಕಾಶೀನಾಥ ರಾಮಗೊಂಡ, ಬಸವರಾಜ ಕುಂಬಾರ ಶ್ರೀಶೈಲ ಸೌದಿ, ಜಟ್ಟೆಪ್ಪ ಪೂಜಾರಿ ಸಹಿತ ಮಾಲಾಧಾರಿಗಳು, ಭಕ್ತರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಂಜಗಿ ಗ್ರಾಮದ ಸರಕಾರಿ ಮುಫತ್ ಗಾಯರಾಣ ದನಗಳ ಚರಾಯಿ ಸಲುವಾಗಿ ಕಾಯ್ದಿರಿಸಿದ ಹಾಗೂ ಕೀರ್ದಿ ಸಾರು ಬೀಳು ಜಮೀನುಗಳ ಮತ್ತು ಅರಣ್ಯ ಜಮೀನುಗಳು ೧೯೬೪ ರಿಂದ ಇಲ್ಲಿಯವರೆಗೆ ಜಮೀನುಗಳ ಹಕ್ಕು ಬದಲಾವಣೆ ಮಾಡಿ ಖರೀದಿಸಿದ ಬಗ್ಗೆ ದಾಖಲೆಗಳನ್ನು ನೀಡುವಂತೆ ಇಂಡಿ ಉಪವಿಭಾಗಾದಿಕಾರಿಗಳು, ಹಾಗೂ ತಹಶೀಲ್ದಾರರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.ಹಂಜಗಿ ಗ್ರಾಮದ ಜಮೀನು ಸರ್ವೆ ನಂ. ೪೪೮, ೫೩೧, ೫೨೫,೫೩೦, ೫೩೨, ೪೨೪, ೩೮೭, ೩೫೩, ೫೨೮, ೮೯, ೫೧೬, ೫೧೭, ೩೩೬ ಒಟ್ಟು ೨೧೪ ಎಕರೆಗಳಿಗಿಂ ಮೆಲ್ಪಟ್ಟ ಜಮೀನುಗಳು, ಸರಕಾರಿ ಮುಫತ್ ಗಾಯರಾಣ ದನಗಳ ಚರಾಯಿ ಸಲುವಾಗಿ ಕಾಯ್ದಿರಿಸಿದ ಹಾಗೂ ಕಿರ್ಣ ಸಾರ ಬೀಳು ಮತ್ತು ಅರಣ್ಯ ಇಲಾಖೆಗೆ ಸೇರಿದ ಜಮೀನುಗಳು ಇದ್ದವು. ಇವುಗಳನ್ನು ಸರಕಾರದ ಯಾವ ಆದೇಶದ ಮೇರೆಗೆ ಸಾರ್ವಜನಿಕರಿಗೆ ಹಂಚಲಾಗಿದೆ? ಈ ಜಮೀನುಗಳನ್ನು ಸಾರ್ವಜನಿಕರಿಗೆ ಹಂಚಲು ಸಮರ್ಥ (ಕಾಂಪಿಟೆಂಟ್) ಅಧಿಕಾರಿಗಳು, ಯಾರು?, ಸದರಿ ಜಮೀನುಗಳನ್ನು ಹಂಚಲು ಜಾರಿ ಮಾಡಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಂಜಗಿ ಗ್ರಾಮದ ಸರಕಾರಿ ಮುಫತ್ ಗಾಯರಾಣ ದನಗಳ ಚರಾಯಿ ಸಲುವಾಗಿ ಕಾಯ್ದಿರಿಸಿದ ಹಾಗೂ ಕೀರ್ದಿ ಸಾರು ಬೀಳು ಜಮೀನುಗಳ ಮತ್ತು ಅರಣ್ಯ ಜಮೀನುಗಳು ೧೯೬೪ ರಿಂದ ಇಲ್ಲಿಯವರೆಗೆ ಜಮೀನುಗಳ ಹಕ್ಕು ಬದಲಾವಣೆ ಮಾಡಿ ಖರೀದಿಸಿದ ಬಗ್ಗೆ ದಾಖಲೆಗಳನ್ನು ನೀಡುವಂತೆ ಇಂಡಿ ಉಪವಿಭಾಗಾದಿಕಾರಿಗಳು, ಹಾಗೂ ತಹಶೀಲ್ದಾರರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.ಹಂಜಗಿ ಗ್ರಾಮದ ಜಮೀನು ಸರ್ವೆ ನಂ. ೪೪೮, ೫೩೧, ೫೨೫,೫೩೦, ೫೩೨, ೪೨೪, ೩೮೭, ೩೫೩, ೫೨೮, ೮೯, ೫೧೬, ೫೧೭, ೩೩೬ ಒಟ್ಟು ೨೧೪ ಎಕರೆಗಳಿಗಿಂ ಮೆಲ್ಪಟ್ಟ ಜಮೀನುಗಳು, ಸರಕಾರಿ ಮುಫತ್ ಗಾಯರಾಣ ದನಗಳ ಚರಾಯಿ ಸಲುವಾಗಿ ಕಾಯ್ದಿರಿಸಿದ ಹಾಗೂ ಕಿರ್ಣ ಸಾರ ಬೀಳು ಮತ್ತು ಅರಣ್ಯ ಇಲಾಖೆಗೆ ಸೇರಿದ ಜಮೀನುಗಳು ಇದ್ದವು. ಇವುಗಳನ್ನು ಸರಕಾರದ ಯಾವ ಆದೇಶದ ಮೇರೆಗೆ ಸಾರ್ವಜನಿಕರಿಗೆ ಹಂಚಲಾಗಿದೆ? ಈ ಜಮೀನುಗಳನ್ನು ಸಾರ್ವಜನಿಕರಿಗೆ ಹಂಚಲು ಸಮರ್ಥ (ಕಾಂಪಿಟೆಂಟ್) ಅಧಿಕಾರಿಗಳು, ಯಾರು?, ಸದರಿ ಜಮೀನುಗಳನ್ನು ಹಂಚಲು ಜಾರಿ ಮಾಡಿದ…

Read More