Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ. ಛೆ.. ಏನೂ ಮಾಡಲು ಸಾಧ್ಯವಾಗುತ್ತಿಲ್ಲ..ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ..ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ..ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.ಬಸ್…
ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ ಮಾಡುವವರಅಭಿಷೇಕ ಮಾಡಿಸಿಗುಡಿಯ ಸುತ್ತುವವರಅಂಧಕಾರದ ಮನವ ಕಂಡುನೆನಪಾದ ಬಸವಣ್ಣಅಡಿಗಡಿಗೆ ತನ್ನೊಳಗಿನ ಪ್ರಜ್ವಲಿಸುವಜ್ಯೋತಿಯ ಕಾಣದೆತನ್ನ ಕೆಲಸವನ್ನು ತಾನು ಮಾಡದೆಹಗಲಿರುಳು ಜಪ ಮಾಡುವಭಂಡ ಭಕ್ತರ ನೋಡಿನೆನಪಾದ ಬಸವಣ್ಣಅಡಿಗಡಿಗೆ ಸಮಾನತೆಯ ಮೆರೆಯದೆಭೇದ -ಭಾವ ಅರಸುವವ್ಯಾಮೋಹದಲ್ಲಿ ಮಿಂದುಸ್ವಾರ್ಥಿಯಾಗುವಗೊಡ್ಡು ಸಂಪ್ರದಾಯಗಳಿಗೆಮೊರೆಹೋಗುವ ಜಿಡ್ಡುಮನಸುಗಳ ಕಂಡುನೆನಪಾದ ಬಸವಣ್ಣಅಡಿಗಡಿಗೆ
ಉದಯರಶ್ಮಿ ದಿನಪತ್ರಿಕೆ ಇಂಡಿ: 12 ನೇ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ ಚಿಂತನೆಗಳನ್ನು ಮೂಡಿಸಿದ ಮಾಚಿದೇವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಕಲ್ಯಾಣ ಕ್ರಾಂತಿಯ ಕೊನೆಯ ಘಟ್ಟದ ಹೋರಾಟದಲ್ಲಿ ಮಾಚಿದೇವರು ತಮ್ಮ ಪರಾಕ್ರಮದಿಂದ ವಚನ ಸಾಹಿತ್ಯ ಉಳಿಸುವಲ್ಲಿ ಅನುಪಮ ಸೇವೆಗೈದಿದ್ದಾರೆ. ಮಡಿವಾಳ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ, ದಿಟ್ಟ ಗಣಾಚಾರಿ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಹಿರೇರೂಗಿ ಉರ್ದು ಕ್ಲಸ್ಟರ್ ಸಿ ಆರ್ ಪಿ ಬಾದಶಾ ಚಪ್ಪರಬಂದ ಮಾತನಾಡಿ, ಮೇಲು ಕೀಳು, ಬಡವರು,ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾದವರ ಬಗ್ಗೆ ಚಿಂತಿಸಿ,ವ್ಯಕ್ತಿ-ವ್ಯಕ್ತಿಗಳ ನಡುವೆ ಇರುವ ಅಂತರವನ್ನು ಹೋಗಲಾಡಿಸಲು ಹೋರಾಡಿದ ಮಾಚಿದೇವರ ಜೀವನ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ಎಸ್ ಎಸ್…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದಲ್ಲಿ ಅವ್ಯಾಹತವಾಗಿ ಜರುಗುತ್ತಿರುವ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಹಂಚಲಿ ಗ್ರಾಮದ ವೃದ್ಧರು ಪ್ರಭಾರಿ ಸಿಪಿಐ ಪರಶುರಾಮ ಮನಗೂಳಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರದಂದು ಆಗಮಿಸಿದ ಹಂಚಲಿ ಗ್ರಾಮದ ವೃದ್ಧರು ತಮ್ಮ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಸಿಪಿಐ ಅವರ ಗಮನ ಸೆಳೆದರು.ಈ ಸಂದರ್ಭದಲ್ಲಿ ವೃದ್ಧ ಶಿವಪ್ಪ ಸಜ್ಜನ ಹಾಗೂ ವೃದ್ಧೆ ಮಹಾದೇವಿ ಚವನಭಾವಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಮದ್ಯ ಮಾರಾಟದಿಂದ ಬಡ ಕುಟುಂಬಗಳು ಪರಿಸ್ಥಿತಿ ನೋಡದಂತಾಗಿವೆ. ಅದರಲ್ಲೂ ಮನೆ ಜೀವನ ನಡೆಸುವ ಮಹಿಳೆಯರ ಸ್ಥಿತಿಗತಿಗಳು ಮತ್ತು ಅವರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ಪರಿಣಾಮಗಳು ಹೇಳತೀರದಂತಾಗಿವೆ. ಈ ಕುರಿತು ನಾವು ಹಲವು ಬಾರಿ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾಗಿದೆ ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ತಾವು ಸ್ಪಂದಿಸಿ ಅಕ್ರಮ ಸರಾಯಿ ಮಾರಾಟವನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.ಮನವಿ ಸ್ವೀಕರಿಸಿ ಮಾತನಾಡಿದ ಸಿಪಿಐ, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ನೀಲಕಂಠರಾಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾಚಿದೇವನ ಜನ್ಮಭೂಮಿಯಲ್ಲಿ ಜನಿಸಿದ ನಾವೆಲ್ಲ ಮಾಚಿದೇವ, ಬಸವಣ್ಣ ಸೇರಿದಂತೆ ಎಲ್ಲ ಶರಣರ ಕಾಯಕ ತತ್ವವನ್ನು ತನು, ಮನದಿಂದ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರ ಜರುಗಿದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿ ಮಾತನಾಡಿದರು.ಜೀವನದಲ್ಲಿ ಶರಣರ ನಡೆ-ನುಡಿ ಇಂದಿಗೂ ಪ್ರಸ್ತುತ. ಅವರನ್ನು ಕೇವಲ ಜಯಂತಿಗಳಿಗೆ ಸೀಮಿತಗೊಳಿಸದೇ ಅವರ ನಡೆದ ಮಾರ್ಗ, ಕಾಯಕ ತತ್ವ, ವಚನಸಾರ, ಸಾಧನೆಗಳನ್ನು ಅರಿತು ಪಾಲಿಸಬೇಕಾಗಿದೆ ಎಂದರು.ನಿವೃತ್ತ ಶಿಕ್ಷಕ ಬಿ.ಆಯ್.ಹೊಸಳ್ಳಿ, ಶಿಕ್ಷಕ ಅರುಣ ಕೋರವಾರ ಉಪನ್ಯಾಸ ನೀಡಿ ಮಾತನಾಡಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಆಹಾರ ನಿರೀಕ್ಷಕ ದಳವಾಯಿ, ರಾಮಯ್ಯ ನಾಶೀಮಠ, ಬಸವರಾಜ ಮೆಟಗಾರ, ಮಲ್ಲಪ್ಪ ಭತಗುಣಕಿ. ಶ್ರೀಶೈಲ ಅಗಸರ, ಕಾಶೀನಾಥ ಅಗಸರ, ಶಂಕರಗೌಡ ಪಾಟೀಲ, ಆನಂದ ಮಶಾನವರ, ಬಸವರಾಜ ಅಗಸರ ಸಿಬ್ಬಂದಿ ರಾಜು ಕಂಠಿ, ಸಂತೋಷ ತಳವಾರ ಹಾಗೂ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಕೊಡ ಮಾಡುವ ರಾಜ್ಯ ಪುರಸ್ಕಾರಕ್ಕೆ ಸಿಂದಗಿ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ರೇಂಜರ್ ಪೂಜಾ ಕದ್ನಳ್ಳಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜಭವನದಲ್ಲಿ ಜರುಗುವ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಪುರಸ್ಕಾರವನ್ನು ಸ್ವೀಕರಿಸಲಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಿ.ಎಂ.ಪಾಟೀಲ, ರೇಂಜರ್ ಲೀಡರ್ ಪ್ರತಿಕಾ ತಳವಾರ, ರೋವರ್ ಲೀಡರಾದ ತೇಜು ಪ್ರಕಾಶ ರಾಠೋಡ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಶಿಕ್ಷಣ ಪಡೆಯದೆಇರುವ ಅನೇಕ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಡಿದೇಶಪ್ರೇಮವನ್ನು ಮೆರೆದವರು. ಆದರೆ ನಾವೆಲ್ಲ ಶಿಕ್ಷಣವಂತರು, ವಿದ್ಯಾವಂತರು ನಾವು ದೇಶಕ್ಕಾಗಿ ಏನು ನೀಡುತಿದ್ದೇವೆ ಎಂಬುದನ್ನು ನಾವು ಅವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಹೇಳಿದರು.ಸಿಂದಗಿ ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ.ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಜಯಪುರ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕ್ರಾಂತಿಕಾರಿಗಳು ವಿಷಯದ ಕುರಿತಾದ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.ವಿಜಯಪುರ ಜಿಲ್ಲೆಯಲ್ಲಿ ಇಂಚಗೇರಿ ಮಠ ಸೇರಿದಂತೆ ಅನೇಕ ಮಠಗಳು, ಸಂಘ ಸಂಸ್ಥೆಗಳು ಮತ್ತು ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಬದುಕನ್ನೆ ತ್ಯಾಗ ಮಾಡಿದಂತವರು ಎಂದ ಅವರು ೧೯೭೩ರಲ್ಲಿ ರಾಜ್ಯದಲ್ಲಿ…
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸ್ವಾಗತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ೨೦೨೫ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ೧,೨೮,೬೫೦ ಕೋಟಿ ಮೀಸಲಿಟ್ಟಿರುವುದನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸ್ವಾಗತಿಸಿದ್ದಾರೆ.ಇದು ಹಿಂದಿನ ವರ್ಷಕ್ಕಿಂತ ೬.೬೫% ಹೆಚ್ಚಾಗಿದೆ ಎಂದಿದ್ದಾರೆ.ಶಿಕ್ಷಣ ಮೂಲಸೌಕರ್ಯವನ್ನು ವಿಸ್ತರಿಸುವ, ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ, ಸಂಶೋಧನೆ ಮತ್ತು ಆವಿಷ್ಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಜೆಟ್ ಒಂದು ಪ್ರಮುಖ ಹೆಜ್ಜೆ ಎಂದು ಅರುಣ್ ಶಹಾಪುರ ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ಯೋಜನೆಗೆ ೭,೫೦೦ ಕೋಟಿ, ಪ್ರಧಾನಮಂತ್ರಿ ಪೋಷಣ ಯೋಜನೆಗೆ ೧೨,೫೦೦ಕೋಟಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ೫೦,೦೭೭.೯೫ ಕೋಟಿ ಬಜೆಟ್ನಲ್ಲಿ ಹಂಚಿಕೆ ಮಾಡಿರುವುದು ಸಕಾರಾತ್ಮಕ ಎಂದು ಅರುಣ್ ಶಹಾಪುರ ಮಾಜಿ ಎಂಎಲ್ಸಿ ವಿವರಿಸಿದ್ದಾರೆ.ಇದರೊಂದಿಗೆ ದೇಶದ ೫ ಐಐಟಿಗಳಲ್ಲಿ ೬,೫೦೦ ಹೊಸ ಸೀಟುಗಳು, ಮುಂದಿನ ೫ ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ೭೫,೦೦೦ ಹೊಸ ಸೀಟುಗಳು, ೫೦,೦೦೦ ಅಟಲ್ ಟಿಂಕರಿಂಗ್ ಲ್ಯಾಬ್ಗಳು ಮತ್ತು ಆರ್ಟಿಫಿಶಿಯಲ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರದ ಇಂದಿನ ಬಜೆಟ್ ಸದೃಡ ಭಾರತದ ಬುನಾದಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಾ ಹೇಳಿದ್ದಾರೆ.ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ೮ನೇ ಬಾರಿ ಭಾರತದ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿ ರಾಷ್ಟ್ರ ರಾಜಕಾರಣದಲ್ಲಿ ಇತಿಹಾಸ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಜೆಟ್ ಸ್ವಾಗತಾರ್ಹ. ಬಡತನ ನಿರ್ಮೂಲನೆಗಾಗಿ ಅಭಿವೃದ್ದಿಯ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ ೨೦೨೪ರ ವಿಶ್ವ ಮುಂಚೂಣಿಯ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿದೆ. ದೇಶದ ಸಾರಿಗೆ ಕೈಗಾರಿಕೆ, ಉದ್ಯೋಗ, ವೈದ್ಯಕೀಯ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ದಿಗೆ ಒತ್ತು ಕೊಟ್ಟಿದೆ ಎಂದು ಶ್ರೀಶೈಲಗೌಡ ಬಿರಾದಾರ ಹರ್ಷ ವ್ಯಕ್ತಪಡಿಸಿದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಕುರಿತು ಶನಿವಾರ ಪತ್ರಿಕೆಗೆ ತಿಳಿಸಿದ ಅವರು, ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ. ಮಧ್ಯಮ ವರ್ಗದ ಜನತೆಗೆ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂತ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಬೇಸರ ವ್ಯಕ್ತಪಡಿಸಿದರು.
