Author: editor.udayarashmi@gmail.com

ವಿಜಯಪುರದಲ್ಲಿ ಅಥ್ಲೇಟಿಕ್ ಕ್ರೀಡಾಕೂಟ ಉದ್ಘಾಟಿಸಿದ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಗಳಲ್ಲಿ ವ್ಯಾಪಕ ಅವಕಾಶಗಳಿದ್ದು ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹೇಳಿದ್ದಾರೆ.ನಗರದಲ್ಲಿ ಶನಿವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ 10ನೇ ಅಂತರ ಶಾಲೆ- ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡಾಕೂಟಗಳು ನಮ್ಮಲ್ಲಿರುವ ಕ್ರೀಡಾ ಸಾಮರ್ಥ್ಯ ಹೊರಹಾಕಲು ಅವಕಾಶ ಒದಗಿಸುತ್ತವೆ. ಹೀಗಾಗಿ ಪಠ್ಯಗಳ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಈಗ ಆಯೋಜಿಲಾದ ಅಥ್ಲೆಟಿಕ್ ಕ್ರೀಡಾಕೂಟ ಅಚ್ಚುಕಟ್ಟಾಗಿದ್ದು, ಪ್ರತಿಯೊಬ್ಬರಿಗೂ ಒಳ್ಳೆಯಾದಗಲಿ ಎಂದು ಅವರು ಶುಭ ಹಾರೈಸಿದರು.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ದಿ. ಸಿ. ಆರ್. ಬಿದರಿ ಅವರು ಶ್ರೇಷ್ಠ ಕ್ರೀಡಾಪಟುವಾಗಿದ್ದರು. ಅಂತಸರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದರು. ವಿದೇಶಗಳಲ್ಲಿ ಸಾಕಷ್ಟು ಅವಕಾಶಗಳಿದ್ದರು ವಿಜಯಪುರ ಜಿಲ್ಲೆಯಲ್ಲಿಯೇ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಹನ್ನೆರಡನೇ ಶತಮಾನದಲ್ಲಿ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು.ಅವರು ಮೇಲು-ಕೀಳು,ಬಡವರು, ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾಗಿದವರ ಬಗ್ಗೆ ಚಿಂತಿಸಿದ ಧೀರ ಶರಣರಾಗಿದ್ದರು ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕುರಿತು ಮಾತನಾಡುತ್ತಿದ್ದರು. ಕಲಿದೇವರ ದೇವಾ ಎಂಬ ವಚನಾಂಕಿತ ದೊಂದಿಗೆ ವಿಶ್ವ ನೈತಿಕ ಆಚರಣೆ ತತ್ವಗಳ ಮೇಲೆ ಅವರು ರಚಿಸಿದ ವಚನಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ.ಅವರ ವಚನದ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ನಿತ್ಯ ಜೀವನದಲ್ಲಿ ರೂಢಿಸಿಕೊಂಡು,ಮಾನವೀಯ ಮೌಲ್ಯಗಳ ಅಡಿಯಲ್ಲಿ ನೆಮ್ಮದಿಯ ಬದುಕನ್ನು ಸಾಗಿಸಬೇಕು ಎಂದು ಹೇಳಿದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವಶ್ರೇಷ್ಠ ಶರಣ, ದಿಟ್ಟ ಗಣಾಚಾರಿ.ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ‌ ಗೌರವಕ್ಕೆ ಪಾತ್ರರಾಗಿದ್ದರು ಎಂದು ಹೇಳಿದರು.ಶಿಕ್ಷಕ ಡಿ ಎಸ್ ಬಗಲಿ ಮಾತನಾಡಿ, ಶರಣರಲ್ಲಿಯೇ ಧೀರ-ದಿಟ್ಟ ವ್ಯಕ್ತಿಯಾಗಿ ವಚನ…

Read More

ರಚನೆಇಂದಿರಾ ಮೋಟೆಬೆನ್ನೂರಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಸತ್ಯ ಶಾಂತಿ ಅಹಿಂಸೆ ಆಯುಧಗಳ ಉಪಾಸಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲನಿತ್ಯ ಭಜನೆ ಉಪವಾಸ ಪ್ರಾರ್ಥನೆಯ ಆರಾಧಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ ನಡೆದ ದಾರಿಯ ತುಂಬಾ ಹೆಜ್ಜೆ ಗುರುತು ಮೂಡಿಸಿಸರಿದಾರಿ ತೋರಿದವನುತುಂಡು ಪಂಜೆ ಕೋಲು ಕಣ್ಣಿಗೊಂದು ಕನ್ನಡಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ ಮೆಟ್ಟಿದ ಮೆಟ್ಟು ಸವೆಸುತ ಸ್ವಾತಂತ್ರ್ಯ ಮೆಟ್ಟಿದ ಆಳರಸರ ಮೆಟ್ಟಿ ನಿಂತವನುಸತ್ಯಾಗ್ರಹ ತ್ಯಾಗದ ಸವಿಫಲ ದಾಸ್ಯ ಮುಕ್ತಿಕಾರಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ ನಟ್ಟಿರುಳಿನಲಿ ನಿರ್ಭೀತಳಾಗಿ ಒಂಟಿಯಾಗಿ ನಡೆವ ಹೆಣ್ಣಿನ ಸ್ವಾತಂತ್ರ್ಯದ ಕನಸು ಕಂಡವನುರಾಮರಾಜ್ಯದ ಕನಸ ನನಸಾಗಿಸಲು ಹೋರಾಡಿದಜನನಾಯಕ ಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ ಜಾತಿ ಪಾತಿಯ ಪಾಚಿ ಬಾಚಿ ತೆಗೆಯುತ ತಾಯಿ ಭಾರತಿಯಗರಿಮೆ ಪೊರೆದವನುದ್ವೇಷವಾರಿಸಿ ಹೃದಯ ಬೆಳಗುವ ಸ್ಫೂರ್ತಿದಾಯಕ ಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ

Read More

ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ” ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ…..” ಮೈಕ್ರೋ ಫೈನಾನ್ಸ್ ಅಂದರೆ ಸಣ್ಣ ಹಣಕಾಸು ಖಾಸಗಿ ಸಂಸ್ಥೆಗಳು ಮಾಡುತ್ತಿರುವ ದೌರ್ಜನ್ಯ ಕುರಿತಾಗಿ ಇತ್ತೀಚೆಗೆ ಮಾಧ್ಯಮಗಳು ಜನರ ಮತ್ತು ಸರ್ಕಾರದ ಗಮನ ಸೆಳೆಯುತ್ತಿವೆ..ಹಣ ಎಂಬ ಮಾಧ್ಯಮ ಚಲಾವಣೆಗೆ ಬಂದ ನಂತರ ಮಾನವ ಜಗತ್ತು ಒಂದು ರೀತಿ ತೀವ್ರ ಬದಲಾವಣೆಯತ್ತ ಸಾಗಿತು. ಬಹುಶಃ ಅಲ್ಲಿಯವರೆಗೂ ಇದ್ದ ಮಾನವೀಯ ಸಂಬಂಧಗಳು, ವಸ್ತು ವಿನಿಮಯ ಸಂದರ್ಭದ ಭಾವನಾತ್ಮಕತೆ, ಹಣದ ಪ್ರಾರಂಭದೊಂದಿಗೆ ನಿಧಾನವಾಗಿ ಶಿಥಿಲವಾಗ ತೊಡಗಿ ಇದೀಗ “ಹಣವೇ ನಿನ್ನಯ ಗುಣ ” ಎನ್ನುವಲ್ಲಿಗೆ ಬಂದು ನಿಂತಿದೆ. ಎಲ್ಲ ಸಂಬಂಧಗಳನ್ನು ಹಣದಿಂದಲೇ ಅಳೆಯಲಾಗುತ್ತದೆ.ಆದ್ದರಿಂದ ಹಣ ಈ ಸಮಾಜದ ಬಹುಮುಖ್ಯ ಜೀವ ದ್ರವ್ಯವಾಗಿದೆ. ಬಹುಶಃ ಗಾಳಿ, ನೀರು, ಆಹಾರ, ವಸತಿಯದು ಒಂದು ತೂಕವಾದರೆ, ತಂದೆ ತಾಯಿ ಅಣ್ಣ ತಮ್ಮ ಅಕ್ಕ ತಂಗಿ ಅಜ್ಜ ಅಜ್ಜಿ ಮಗ ಮಗಳದು ಮತ್ತೊಂದು ತೂಕವಾದರೆ, ಅಧಿಕಾರ, ಅಂತಸ್ತು,…

Read More

ವಿಜಯಪುರ ಪೋಲೀಸರ ಸಾಹಸ | ಮೂವರು ದರೋಡೆಕೋರರ ಬಂಧನ | ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ | ಜನರಿಂದ ವ್ಯಾಪಕ ಪ್ರಶಂಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತ್ತು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿ ಜನರ ನಿದ್ದೆಗೆಡಿಸಿದ್ದ ಸುಲಿಗೆ / ದರೋಡೆ ಆರೋಪಿತರನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ, ಐಪಿಎಸ್ ಅವರು ಶನಿವಾರ ಮಾಹಿತಿ ನೀಡಿದ್ದಾರೆ.ಸುಲಿಗೆ/ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆಬಂಧಿತ ಮೂವರು ಆರೋಪಿತರೂ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತದ ಏಕತಾ ನಗರದವರಾಗಿದ್ದಾರೆ.೧) ಸುರೇಶ ವಿಶ್ವಲ ತಂದೆ ಮದುಕರ ಚವ್ಹಾಣ (42 ವರ್ಷ), ೨) ಸೂರಜ್ ತಂದೆ ತುಳಸಿರಾಮ್ ಚವ್ಹಾಣ (32 ),೩) ಆಕಾಶ ಅಕ್ಷಯ ತಂದೆ. ಸುಖದೇವ ರಾವತ್ (31 ವರ್ಷ) ಬಂಧಿತ ಆರೋಪಿತರು.ದಿನಾಂಕ: 16.01.2025 ರಂದು ರಾತ್ರಿ 00.45 ಗಂಟೆಯಿಂದ 01.00 ಗಂಟೆಯ ನಡುವಿನ ಅವಧಿಯಲ್ಲಿ ವಿಜಯಪುರ ನಗರದ ಜೈನಾಪುರ ಲೇಔಟ್‌ನಲ್ಲಿ ಒಂದು ಮನೆಗೆ 04 ಜನ ಸುಲಿಗೆಕೋರರು ನುಗ್ಗಿ ಮನೆಯ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಈಜು ಕಲಿಯಲೆಂದು ಕಾಲುವೆಗೆ ಇಳಿದಿದ್ದ ಯುವಕ ನೀರು ಪಾಲಾದ ಘಟನೆ ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಕಾಲುವೆಯಲ್ಲಿ ಗುರುವಾರ ನಡೆದಿದೆ.ಮೃತ ದುರ್ದೈವಿ ಕಾರ್ತಿಕ ಹಿರೇಮಠ(೧೭) ಪ್ರಥಮ ಪಿಯುಸಿ ಓದುತ್ತಿದ್ದ. ಈಜು ಕಲಿಯಲೆಂದು ಕಾಲುವೆಗೆ ಇಳಿದಿದ್ದು ನೀರಿನ ಸೆಳೆತಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಮೃತದೇಹದ ಪತ್ತೆಗೆ ಸಂಜೆಯವರೆಗೂ ಕಾರ್ಯಾಚರಣೆ ನಡೆಸಿದ್ದು ಮೃತದೇಹ ಪತ್ತೆಯಾಗಿರಲಿಲ್ಲ. ಶುಕ್ರವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಕಾನೂನು ವಿಧಾನಗಳನ್ನು ಪಾಲಿಸಿ ಅಂತ್ಯಕ್ರೀಯೆ ನೆರವೇರಿಸಲಾಗಿದೆ.ಕಳೆದ ಒಂದೂವರೆ ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ಕಾರ್ತಿಕ ತಂದೆ ಹೇಳಿದ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಕುಟುಂಬಕ್ಕೆ ಆಸರೆಯಾಗಿದ್ದ. ಏಳು ತಿಂಗಳು ಇರುವಾಗಲೇ ಭೂಮಿಗೆ ಬಂದಿದ್ದ ಕಾರ್ತಿಕ ನನ್ನು ಆತನ ಪಾಲಕರು ಸಾಕಷ್ಟು ಜೋಪಾನವಾಗಿ ಪಾಲನೆ ಪೋಷಣೆ ಮಾಡಿದ್ದರು ಎನ್ನಲಾಗಿದೆ. ಕೈಗೆ ಬಂದಿದ್ದ ಯುವಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Read More

ಸಾಲಗಾರರ ಹಿತರಕ್ಷಣೆಗೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ಚಿಂತನೆ | ಸಿಎಂ ಸಿದ್ದರಾಮಯ್ಯ ಮಾಹಿತಿ ಮೈಸೂರು: ಮೈಕ್ರೊಫೈನಾನ್ಸ್ ಸಂಸ್ಥೆಗಳಿಗೆ ಹೆದರಿ ಯಾರೂ ಜೀವ ಕಳೆದುಕೊಳ್ಳಬೇಡಿ ಮತ್ತು ಅವರ ಪ್ರತಿನಿಧಿಗಳು ಕಿರುಕುಳ ನೀಡಿದರೆ ಅಂತಹ ಸಂಸ್ಥೆಗಳ ವಿರುದ್ಧ ದೂರು ದಾಖಲಿಸಿದರೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕಿರುಕುಳ ನೀಡುವ ಸಂಸ್ಥೆಗಳ ವಿರುದ್ಧ ಪೊಲೀಸರಿಗೆ ದೂರು ಕೊಡಿ, ಸರ್ಕಾರ ನಿಮ್ಮೊಂದಿಗಿದೆ. ಮೈಕ್ರೋಫೈನಾನ್ಸ್ ಸಂಸ್ಥೆಗಳ ಅಕ್ರಮ ವಸೂಲಿ ಪದ್ಧತಿಯಿಂದ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ನೀವು ಯಾವುದೇ ರೀತಿಯ ಕಿರುಕುಳವನ್ನು ಎದುರಿಸಿದರೆ, ಕೂಡಲೇ ದೂರು ನೀಡಿ. ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ ಜನರು ಎದುರಿಸುತ್ತಿರುವ ತೊಂದರೆ ಮತ್ತು ರಾಜ್ಯದಲ್ಲಿ ಗೂಂಡಾ ರಾಜ್ ಆಡಳಿತವಿದೆ ಎಂಬ ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಜನರು ತಮಗೆ ಲಭ್ಯವಿರುವ ಮೂಲಗಳಿಂದ ಸಾಲ ತೆಗೆದುಕೊಳ್ಳುತ್ತಾರೆ. ಆದರೆ, ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿಗಾರರು ಹೆಚ್ಚಿನ…

Read More

ವಿಜ್ಷಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಅಬಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ವೈಜ್ಞಾನಿಕ ಮನೋಭಾವ, ಸತ್ಯಾನ್ವೇಷಣೆ ಗುಣ ವಿದ್ಯಾರ್ಥಿಗಳು ಬೆಳಿಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಹೇಳಿದರು.ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಹಬ್ಬ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ ಎಂ ಕೋರೆ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಕಲಬುರಗಿ ರಸ್ತೆಯ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸ್ಕೂಲ್‌ನಲ್ಲಿ ಫೆ.೦೧ ಸಾಯಂಕಾಲ ೫ರಂದು ಭೀಮೋತ್ಸವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ ಎಂದು ನಿರ್ದೇಶಕ ಪ್ರಶಾಂತ ಕಮತಗಿ ತಿಳಸಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಶಿಕ್ಷಣ ತಜ್ಞ, ಎಮ್.ಇ.ಎಸ್. ಟೀರ‍್ಸ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಎಚ್.ಎಸ್.ಗಣೇಶ ಭಟ್ಟ ಇರಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳ್ಳೂರ ವಹಿಸುವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದಲ್ಲಿರುವ ತಾಲೂಕು ಸಮ್ಮೇಳನದ ಕಾರ್ಯಾಲಯದ ಆವರಣದಲ್ಲಿ ತಾಲೂಕಿನ ಯರಗಲ್ಲ ಕಲಾವಿದ ಬಸವರಾಜ ಹಡಪದ ರಚಿಸಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.ಈ ವೇಳೆ ಮಹಾದೇವ ಶಾಸ್ತ್ರಿಗಳು, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಹಿರಿಯ ಸಾಹಿತಿ ಬಿ.ಎಂ.ಹಿರೇಮಠ, ಮಲಕೇಂದ್ರಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

Read More