Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಾಬಾಸಾಹೇಬರು ನೀಡಿರುವ ಸಂವಿಧಾನದಡಿಯಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು. ಅಧಿಕಾರ ಯಾವಾಗಲೂ ಜನಪರವಾಗಿರಬೇಕು. ಅಧಿಕಾರ ಎನ್ನುವುದು ಸೇವೆ ಎಂಬ ಮನೋಭಾವದಿಂದ ಕೂಡಿರಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ ನಡೆದ ೨೦೨೫-೨೬ ಸಾಲಿನ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ ರೂ.೨೫ಲಕ್ಷ ಮೊತ್ತದ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಶರಣರ, ಸಂತರ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ದಾರ್ಶನಿಕರ ಆಚಾರ, ವಿಚಾರ, ಸಂಪ್ರದಾಯ ಮತ್ತು ತತ್ವಾದರ್ಶಗಳನ್ನು ಮುಂದಿನ ಯುವ ಪೀಳಿಗೆಗೆ ವರ್ಗಾವಣೆಯಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾಲಕ್ಕೆ ಅನುಗುಣವಾಗಿ ಪುರಾಣ-ಪ್ರವಚನ, ಉಪನ್ಯಾಸಗಳು ನಡೆಯಬೇಕು. ಗ್ರಾಮದ ಅಭಿವೃದ್ಧಿಗಾಗಿ ಸದಾ ಶ್ರಮಿಸುತ್ತೇನೆ. ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಜಿರ್ಣೋದ್ಧಾರಕ್ಕೆ ಗ್ರಾಮಸ್ಥರ ಈಗಾಗಲೇ ರೂ.೭೦ಲಕ್ಷ ಹಣವನ್ನು ದೇಣಿಗೆಯ ಮೂಲಕ ಸಂಗ್ರಹಣೆ ಮಾಡಿ ೧೪ ನಿವೇಶನಗಳನ್ನು ಖರೀದಿ ಮಾಡಿದ್ದಾರೆ. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ…

Read More

ಸಿಂದಗಿಯಲ್ಲಿ ನಡೆದ ಬಸವಣ್ಣನವರ ಜಯಂತ್ಯುತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೨ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪಿಸಿ ಸಾಮಾಜೋದ್ಧಾರ್ಮಿಕ ಸಮಾನತೆಗೆ ಶ್ರಮಿಸಿದ ಬಸವಣ್ಣನವರ ಅಂದಿನ ಅನುಭವ ಮಂಟಪದ ಪರಿಕಲ್ಪನೆಗಳೇ ಇಂದಿನ ಭಾರತದ ಸಂವಿಧಾನಕ್ಕೆ ತಳಹದಿಯಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಬಸವಣ್ಣನವರ ೮೯೩ನೇ ಜಯಂತ್ಯುತ್ಸವದ ಭವ್ಯ ಮೆರವಣಿಗೆಗೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುಗಪುರುಷ ಬಸವಣ್ಣನವರು ಮನೆಯಿಂದಲೇ ವೈಚಾರಿಕ ಕ್ರಾಂತಿಯನ್ನು ಆರಂಭಿಸಿದರು. ಬಸವಣ್ಣನವರು ವಿಶ್ವದ ಶ್ರೇಷ್ಠ ದಾರ್ಶನಿಕರಲ್ಲಿ ಮುಂಚೂಣಿಯಲ್ಲಿದ್ದವರು. ಎಲ್ಲ ಧರ್ಮಕ್ಕಿಂತ ಕಾಯಕ ಧರ್ಮ ದೊಡ್ಡದು. ಅಹಿಂಸೆಯೇ ಮಾನವ ಧರ್ಮವನ್ನು ಧೀರ್ಘಕಾಲ ಬಾಳಿಸಬಲ್ಲದು ಎಂಬುದನ್ನು ಜಗತ್ತಿಗೆ ಸಾರಿದ ಬಸವಣ್ಣ ವಿಶ್ವ ಸಾಂಸ್ಕೃತಿಕ ನಾಯಕರು. ಇವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ ಎಂದರು.ಈ ವೇಳೆ ತಹಶೀಲ್ದಾರ ಕರೆಪ್ಪ ಬೆಳ್ಳಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಅಖಿಲ ಭಾರತ ವೀರಶೈವ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸೋಮವಾರ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ “ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಬಸವ ಜಯಂತಿ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೈ. ವೈ. ಕೊಕ್ಕನವರ, ಕನ್ನಡ ಸಹ ಪ್ರಾಧ್ಯಾಪಕರು ಇವರು ಮಾತನಾಡುತ್ತಾ “ವಿಶ್ವಗುರು ಬಸವಣ್ಣನವರು 12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾಗಿ, ಸಮಾನತೆ, ಶ್ರಮದ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕರು. ಅವರು ಕಲ್ಯಾಣದಲ್ಲಿ ಅನೇಕ ಸಾಮಾಜಿಕ ಕ್ರಾಂತಿಗಳನ್ನು ಮಾಡಿ ‘ಅನುಭವ ಮಂಟಪ’ದ ಮೂಲಕ ಎಲ್ಲ ವರ್ಗದ ಜನರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ವೇದಿಕೆಯನ್ನು ನಿರ್ಮಿಸಿದರು. ಅವರ ವಚನ ಸಾಹಿತ್ಯವು ಸಮಾಜದ ಅಂಧಶ್ರದ್ಧೆಗಳನ್ನು ನಿವಾರಿಸಿ. ಸತ್ಯ, ಧರ್ಮ ಹಾಗೂ ನೈತಿಕತೆಯ ಮಾರ್ಗವನ್ನು ತೋರಿಸುತ್ತದೆ. ಬಸವಣ್ಣನವರ ಸಾಧನೆಗಳು ಇಂದಿಗೂ ಸಮಾಜಕ್ಕೆ ದೀಪಸ್ತಂಭವಾಗಿವೆ” ಎಂದು ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ ಮಾತನಾಡುತ್ತಾ “ಬಸವಣ್ಣನವರ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಸವ ಜಯಂತಿ ಆಚರಿಸಲಾಯಿತು.ಪಟ್ಟಣದ ಬಸವೇಶ್ವರ ವೃತ್ತ ಹಾಗೂ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿ, ಸಾಮಾಜಿಕ ಸಮಾನತೆ, ಭಾತೃತ್ವ, ಸಾಮರಸ್ಯದ ಕುರಿತಾದ ಚಿಂತನೆಗಳನ್ನು ತಮ್ಮ ವಚನಗಳ ಮೂಲಕ ಸಾದರ ಪಡಿಸಿದ ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿಯೇನಿಸಿದ್ದಾರೆ. ೨೧ನೇ ಶತಮಾನದ ಸಮಾಜದ ಆರ್ಥಿಕ ಅಗತ್ಯತೆಗಳನ್ನು ೯ ಶತಮಾನಗಳ ಹಿಂದೆಯೇ ಕಲ್ಪಿಸಿಕೊಂಡಿದ್ದ ಬಸವಣ್ಣ ಮಹಾನ್ ದಾರ್ಶನಿಕ ಇಂದಿಗೂ ಬಸವಣ್ಣನವರು ಪ್ರತಿಪಾದಿಸಿದ ಶರಣ, ವಚನ ಸಂಸ್ಕೃತಿಗಳು ಇಡೀ ವಿಶ್ವಕ್ಕೆ ನೀಡಿದ ಆದರ್ಶ ಕೊಡುಗೆಗಳಾಗಿವೆ ಎಂದರು.ನಿವೃತ್ತ ಶಿಕ್ಷಕ ಶಾಂತಪ್ಪ ಪಡನೂರ, ಜೆ.ಆರ್.ಬಿರಾದಾರ, ಶಿವಶರಣ ಪೂಜಾರಿ, ಪಿ.ಸಿ.ತಳಕೇರಿ, ಗೋಲ್ಲಾಳ ಬಿರಾದಾರ, ಪಿ.ಎಸ್.ಮಿಂಚನಾಳ, ಸಂಗನಗೌಡ ಪಾಟೀಲ, ಸೋಮು ದೇವೂರ, ಶಿವನಗೌಡ ಪಾಟೀಲ (ಯರನಾಳ) ಹಾಗೂ ಸಿಬ್ಬಂದಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವೇಶ್ಚರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಿಶ್ವ ಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಯಲ್ಲಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇವರ ಜಯಂತಿಯನ್ನು ಎಲ್ಲ ಸಮುದಾಯದವರೆಲ್ಲ ಸೇರಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಬಸವನಬಾಗೇವಾಡಿಯಿಂದ ಬಸವಜ್ಯೋತಿ ಯಾತ್ರೆಯೂ ಆಗಮಿಸುತ್ತಿದೆ ಎಂದರು.ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ ಬಸವಣ್ಣನವರು ಶ್ರೇಷ್ಠ ದಾರ್ಶನಿಕರು, ಅವರಿಗೆ ಜನ್ಮನೀಡಿದ ಹಾಗೂ ಅವರ ಕರ್ಮಭೂಮಿ ಬಸವಕಲ್ಯಾಣ ಸೇರಿದಂತೆ ಎಲ್ಲೆಡೆಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು…

Read More

ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ | 86 ವಿದ್ಯಾರ್ಥಿನಿಯರಿಗೆ ಪಿಎಚ್ಡಿ ಪದವಿ | ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ವಿವರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ 17ನೇ ಘಟಿಕೋತ್ಸವವನ್ನು ಇದೇ ದಿ. 21 ರಂದು ವಿವಿ ಜ್ಞಾನಶಕ್ತಿ ಆವರಣದ ಕ್ರೀಡಾಂಗಣದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಅವರು, ಘಟಿಕೋತ್ಸವ ಕಾರ್ಯಕ್ರಮದ ಕುರಿತು ಸಂಪೂರ್ಣ ವಿವರಣೆ ನೀಡಿದರು.ಈ ಘಟಿಕೋತ್ದವದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ಮಹಿಳಾ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಲ್ಹೋಟ್ ವಹಿಸಲಿದ್ದು, ಮುಂಬೈನ ಎಸ್ಎನ್ ಟಿಡಿ ಮಹಿಳಾ ವಿವಿ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ, ಕುಲಪತಿ ಪ್ತೊ. ವಿಜಯಾ ಬಿ.ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಹಾಗೂ ಮೌಲ್ಯಮಾಪನ ಕುಲಸಚಿವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಮಾನವತಾವಾದಿ ಬಸವಣ್ಣನವರು ೧೨ ನೇಯ ಶತಮಾನದ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಕ ಮತ್ತು ತತ್ವಜ್ಞಾನಿಯಾಗಿದ್ದರು. ಅವರು ತನ್ನ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ಲಿಂಗ ತಾರತಮ್ಯ ಮತ್ತು ಮೌಢ್ಯತೆಗಳನ್ನು ಕಠೋರವಾಗಿ ವಿರೋಧಿಸುತ್ತಾ, ಸಮಾನತೆ ಮತ್ತು ಕಾಯಕ ನಿಷ್ಠೆಯನ್ನು ಬೋಧಿಸಿದ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಧರ್ಮದ ಮೂಲ ಎಂಬ ಸಂದೇಶ ಸಾರುತ್ತಾ, ಸಾಮಾಜಿಕ ಜಾಗೃತಿ ಮೂಡಿಸುತ್ತಾ, ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದವರು ಎಂದು ಹೊನ್ನುಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಬಸವರಾಜ ಕುಂಬಾರ ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿಯಲ್ಲಿ “ವಿಶ್ವಗುರು ಬಸವಣ್ಣ ಅವರ ಜಯಂತಿ” ಕಾರ್ಯಕ್ರಮದಲ್ಲಿ ಬಸವಣ್ಣನವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡ. ಎ.ಐ.ಹಂಜಗಿ ಅವರು ಮಾತನಾಡಿ, ವಿಶ್ವಗುರು ಬಸವಣ್ಣನವರ ವಚನಗಳ ಸಂದೇಶದ ಸಾರವನ್ನು ಜನರಿಗೆ ತಿಳಿಸಕೊಡಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದರು.ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಚಂದ್ರಕಾಂತ.ಬಿ. ವೇದಿಕೆಯ ಮೇಲಿದ್ದರು.ಈ ಕಾರ್ಯಕ್ರಮದಲ್ಲಿ ಬಸವ ಜಯಂತಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮಾಜದಲ್ಲಿನ ಮೌಢ್ಯಗಳನ್ನು ತಿದ್ದಿ, ಜಾತಿ, ಮತ ಪಂಥಗಳ ಭೇದವನ್ನು ತೊಲಗಿಸಿ ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ವಿಶ್ವಗುರು ಬಸವಣ್ಣನವರು ಮಹಾನ್ ಮಾನವತಾವಾದಿಗಳಾಗಿದ್ದರು ಎಂದು ತಹಶಿಲ್ದಾರ ಸಂಜಯ ಇಂಗಳೆ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಸೇವಾ ಸಮೀತಿ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಾವಿನಾಳದ ಚರಂತಿಮಠದ ವಿಜಯ ಮಹಾಂತೇಶ ಸ್ವಾಮೀಜಿ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಕಟ್ಟಿದ ವಿಶ್ವದ ಮೊದಲು ಸಂಸತ್ತು ಎಂದು ಹೆಸರಾದ ಅನುಭವ ಮಂಟಪ ಕಾಯಕಯೋಗವನ್ನು ಪ್ರತಿಪಾದಿಸಿ, ಶರಣ ಶರಣೆಯರು ನೀಡಿದ ಚಿಂತನೆಗಳು, ವಚನಗಳು ಮನುಕುಲಕ್ಕೆ ಸರ್ವಕಾಲಿಕ ದಾರಿ ದೀಪವಾಗಿವೆ ಎಂದರು.ಸಾನಿಧ್ಯ ವಹಿಸಿದ ಸ್ಥಳಿಯ ವಿರಕ್ತಮಠದ ಷಡಕ್ಷರಿ ಸ್ವಾಮೀಜಿ ಆಶಿರ್ವಚನ ನೀಡಿದರುಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಅಶೊಕ ರಾಠೋಡ, ಪ.ಪಂ. ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ, ಚಡಚಣ ಮಂಡಲ ಬಿಜೆಪಿ ಅಧ್ಯಕ್ಷ ಕಾಂತುಗೌಡ ಪಾಟೀಲ, ಮುಖಂಡರಾದ ದೇವೇಂದ್ರಪ್ಪ ಪಾಟೀಲ, ಸೋಮು ಬಡಿಗೇರ, ಭೀಮಾಶಂಕರ ಆಲಕುಂಟೆ, ಎಂ.ಆರ್.ಹಿಟ್ನಳ್ಳಿ, ಮೊನಪ್ಪ ಬಡಿಗೇರ,ವಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಜೈ ಹನುಮಾನ ಯುವ ಮಿತ್ರ ಮಂಡಳಿಯವರ ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಗ್ರಾಮಸ್ಥರಲ್ಲಿ ಭಕ್ತಿಭಾವ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಲಿದೆ.“ಪಾರಂಪರಿಕ ಕೃಷಿ ಪದ್ಧತಿ ಹಾಗೂ ಸಾವಯವ ಕೃಷಿ” ಕುರಿತ ವಿಶೇಷ ಉಪನ್ಯಾಸವನ್ನ ಅದೃಶ್ಯ ಕಾಡಸಿದೇಶ್ವರ ಶ್ರೀಗಳು ಕನ್ನೇರಿ ಮಠ ಕೋಲ್ಲಾಪೂರ ಮತ್ತು ಮಾತೋಶ್ರೀ ಅಕ್ಕಮಹಾದೇವಿ ತಾಯಿಯವರು ಕಮರಿಮಠ ಚಿಕ್ಕಪಡಸಲಗಿ ಪುರ್ನವಸತಿ ಕೇಂದ್ರ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.ಕಾರ್ಯಕ್ರಮವು ಬುಧವಾರ ಏಪ್ರಿಲ್ 22 ರಂದು ಸಂಜೆ 6.00 ಗಂಟೆಗೆ ಶ್ರೀ ಹನುಮಾನ ದೇವಸ್ಥಾನ ಅವರಣ, ಚಿಕ್ಕಪಡಸಲಗಿಯಲ್ಲಿ ನಡೆಯಲಿದೆ. ಭಕ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಪನ್ಯಾಸದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜೀವಜಾಲಕ್ಕೆ ರವಿವಾರ ಪಟ್ಟಣದಲ್ಲಿ ಸುರಿದ ಮಳೆಯು ತಂಪು ನೀಡಿತು. ಸತತವಾಗಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಪಕ್ಷಿ-ಪ್ರಾಣಿಗಳು ಹಾಗೂ ಜನರಿಗೆ ನಿರಾಳತೆ ಸಿಕ್ಕಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.ಈ ಮೊದಲ ಮಳೆಯಿಂದ ಜಾನುವಾರುಗಳಿಗೆ ಮೇವು, ನೀರಿನ ಸೌಲಭ್ಯ ದೊರೆಯುವಂತಾಗಿದ್ದು, ರೈತರು ಹಾಗೂ ಪಟ್ಟಣದ ನಾಗರಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.ಆದರೆ, ಬಿರುಗಾಳಿ ಸಹಿತ ಸುರಿದ ಮಳೆಯಿಂದ ಪಟ್ಟಣದಲ್ಲಿ ಕೆಲವೆಡೆ ಅನಾಹುತಗಳು ಸಂಭವಿಸಿವೆ. ಇಂದಿರಾ ಕ್ಯಾಂಟಿನ್ ಮುಂಭಾಗದ ರಸ್ತೆಯ ಮಧ್ಯದಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದರೆ, ಕೆಲವು ಮನೆಗಳ ಮುಂದಿನ ಶೀಟ್‌ಗಳು ಹಾರಿಹೋದ ಘಟನೆಗಳು ನಡೆದಿವೆ.ವಿದ್ಯುತ್ ಕಂಬಗಳು ಧರೆಗೆ ಉರುಳಿದ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ಹೆಸ್ಕಾಂ ಅಧಿಕಾರಿ ಎಸ್.ಎಸ್. ಪಡಸಲಗಿ ಮಾಹಿತಿ ನೀಡಿದ್ದಾರೆ.ಇದಲ್ಲದೆ, ತಾಲೂಕಿನ ರೋಣಿಹಾಳ ಮತ್ತು ಮಲಘಾಣ ಗ್ರಾಮದ ಭಾಗಗಳಲ್ಲಿ ಕೆಲವೆಡೆ ಆಲಿಕಲ್ಲು ಮಳೆಯೂ ದಾಖಲಾಗಿದೆ.

Read More