Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳಿಗೆ ಆ ದೇಶ ರಕ್ಷಣೆ ಒದಗಿಸಬೇಕು. ಭಾರತದಲ್ಲಿರುವ ಬಾಂಗ್ಲಾದೇಶದ ರಾಯಬಾರಿ ಆ ದೇಶಕ್ಕೆ ತುರ್ತು ಸಂದೇಶ ರವಾನಿಸಬೇಕು ಎಂದು ಬಿಜೆಪಿ ನಗರಘಟಕ ಅಧ್ಯಕ್ಷ ಸಂದೀಪ್ ಪಾಟೀಲ ಝಳಕಿ ಆಗ್ರಹಿಸಿದ್ದಾರೆ.ಬುಧವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, ವಿಶ್ವವೇ ಒಂದೆ ಕುಟುಂಬವೆಂಬ ದೃಢ ನಂಬಿಕೆಯಲ್ಲಿದ್ದು ಯಾವುದೇ ದೇಶ ಸಂಕಷ್ಟದಲದಲಿದ್ದರೂ ಅದಕ್ಕೆ ಸ್ಪಂದಿಸುವ ಭಾರತ ದೇಶದ ಹಿರಿಮೆಯಾದರೇ, ಅದೇ ದೇಶದ ಮೂಲನಿವಾಸಿಗಳು ವಿಭಜಿತ ಬಾಂಗ್ಲಾದೇಶದಲ್ಲಿ ಹಿಂದೂ ಸಮಾಜದ ದೀಪು ಚಂದ್ರದಾಸ ಅವರ ಬರ್ಬರ ಹತ್ಯೆ ಖಂಡನೀಯ. ಅಪರಾಧಿಗಳನ್ನು ಬಂಧಿಸಿದರೇ ಸಾಲದು ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸಮೀಪದ ಕರಡಕಲ್ ಗ್ರಾಮ ಪಂಚಾಯತಿಗೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇವಿಂದ್ರಪ್ಪ ಕುಂಭಾರ ಹಾಗೂ ಉಪಾದ್ಯಕ್ಷರಾಗಿ ಪಾರ್ವತಿ ವಿನಾಯಕ ದೊಡ್ಡಮನಿ ಅವಿರೋದವಾಗಿ ಆಯ್ಕೆಯಾದರು. 10 ಸದ್ಯಸರನ್ನು ಹೊಂದಿರುವ ಕರಡಕಲ್ ಗ್ರಾಮಪಂಚಾಯಿತಿಯಲ್ಲಿ 6 ಸದ್ಯಸರು ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿದ್ದು ಕಾಂಗ್ರೇಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದಂತಾಗಿದೆ.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ ಚುನಾವಣಾಧಿಕಾರಿಯಾಗಿ ಕರಡಕಲ್ ಗ್ರಾಪಂ ಅಧ್ಯಕ್ಷ ಚುನಾವಣೆ ಸುಸೋತ್ರವಾಗಿ ನಡೆಸಿಕೊಟ್ಟರು. ಚುನಾವಣೆ ಮುಗಿಯುತ್ತಿದಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳ, ಸಿಹಿ ಹಂಚಿ ಸಂಭ್ರಮಿಸಿದರು.ಪ್ರಮುಖರಾದ ಮಾಜಿ ಮಂಡಲ ಪ್ರಧಾನ ಸಂಗನಗೌಡ ಮರಡ್ಡಿ, ಮಾಜಿ ಜಿಪಂ ಉಪಾಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ, ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಚಿಂಚೋಳಿ, ಬಾಪುಗೌಡ ಪಾಟೀಲ, ಬೀಮಣ್ಣ ಯಲಗೋಡ, ಬಾಪುಗೌಡ ಪೋ ಪಾಟೀಲ, ಸಿದ್ದನಗೌಡ ಮಾಲಹಳ್ಳಿ, ಮಾನಸಣ್ಣ ಘಂಟಿ, ಹಣಮಂತ್ರಾಯ ದೊಡ್ಡಮನಿ, ರಾಜಾವೆಂಕಟಪ್ಪ ನಾಯಕ ಜಾಗಿರದಾರ, ಭೀಮಣ್ಣ ನಾರಾಯಣಪೂರ, ಶಿವನಗೌಡ ಪಾಟೀಲ, ಬಸನಗೌಡ ಮರಡ್ಡಿ, ನಿಂಗನಗೌಡ ಮರಡಿ, ವಿರುಪಾಕ್ಷಿ ಗುಡಿಮನಿ, ಪಿಡಿಒ ಮಲ್ಲಪ್ಪ ಸೇರಿದಂತೆ ಪಂಚಾಯತಿ ಸಿಬ್ಬಂದಿಗಳು…
ಸರಕಾರಿ ಪ್ರೌಢಶಾಲೆ ಕುಂಬಾರಹಳ್ಳದಲ್ಲಿ ರಾಷ್ಟ್ರೀಯ ಗಣಿತ ದಿನೋತ್ಸವ ಹಾಗೂ ರಾಷ್ಟ್ರೀಯ ರೈತ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಗಣಿತ ವಿಷಯಕ್ಕೆ ಭಾರತದ ಕೊಡುಗೆ ಅದ್ವಿತೀಯವಾಗಿದ್ದು ಆರ್ಯಭಟರಿಂದ ಹಿಡಿದು ಶ್ರೀನಿವಾಸ ರಾಮಾನುಜನ್ ರವರೆಗೆ ಅದು ಹಬ್ಬಿದೆ. ಶ್ರೀನಿವಾಸ ರಾಮಾನುಜನ್ ಅವರು ಗಣಿತಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರು *ಗಣಿತದ ಅಗುಣಿತ ವಿನ್ಯಾಸವಾಗಿದ್ದಾರೆ ಮತ್ತು ಪ್ರತಿ ಧನ ಪೂರ್ಣಾಂಕದಲ್ಲೂ ಅವರ ವಿಳಾಸವಿದೆ ಎಂದು ಗಣಿತ ಶಿಕ್ಷಕ ಸಂಗನಬಸವ ಉಟಗಿ ಅಭಿಪ್ರಾಯಪಟ್ಟರು.ಅವರು ಕುಂಬಾರಹಳ್ಳ ಸರಕಾರಿ ಪ್ರೌಢಶಾಲೆಯ ಗಣಿತ ದಿನೋತ್ಸವದ ಹಾಗೂ ರೈತ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಗನಬಸವ ಉಟಗಿ ಮಾತನಾಡಿ, ಗಣಿತ ಅತ್ಯಂತ ಸುಲಭದ ವಿಷಯವಾಗಿದೆ. ಜೀವನದ ಎಲ್ಲಾ ವಿಭಾಗದಲ್ಲೂ ಗಣಿತ ಹಾಸುಕೊಕ್ಕಾಗಿದೆ. ಗಣಿತಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಗಣಿತ ದಿನವಾಗಿ ಆಚರಿಸಲಾಗುವುದು. ಮಕ್ಕಳು ಸಹ ಗಣಿತ ವಿಷಯವನ್ನು ಪ್ರೀತಿಸಬೇಕು ರಾಮಾನುಜನ್ ಅವರ ಆದರ್ಶವನ್ನು ಪಾಲಿಸಬೇಕು.ಅವರು ನೀಡಿದ ಕೊಡುಗೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನುಡಿದರು. ರೈತ ದೇಶದ ಬೆನ್ನೆಲುಬು ಅವರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ “ಮೀಡಿಯೇಶನ್ ಫಾರ್ ದ ನೇಶನ್ ೨.೦” ಎಂಬ ರಾಷ್ಟ್ರಮಟ್ಟದ ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಜ.೨ ೨೦೨೬ ರಿಂದ ರಾಜ್ಯದಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಆರಂಭಿಸಲಾಗುತ್ತಿದೆ.ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಹೈಕೋರ್ಟ್, ಬೆಂಗಳೂರು ಇವರ ನಿರ್ದೇಶನದಂತೆ ಈ ಅಭಿಯಾನವನ್ನು ೯೦ ದಿನಗಳ ಅವಧಿಗೆ ಹಮ್ಮಿಕೊಳ್ಳಲಾಗಿದ್ದು, ಪರಸ್ಪರ ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸುವುದಕ್ಕೆ ಒತ್ತು ನೀಡಲಾಗುತ್ತದೆ.ಈ ಅಭಿಯಾನದಡಿ ಜ.೩೧ ೨೦೨೬ ರವರೆಗೆ ಮಧ್ಯಸ್ಥಿಕೆಗೆ ಯೋಗ್ಯವಾದ ಪ್ರಕರಣಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಪ್ರಕರಣಗಳನ್ನು ಸಂಬಂಧಿತ ನ್ಯಾಯಾಲಯಗಳ ಅನುಮೋದನೆಯೊಂದಿಗೆ ಮಧ್ಯಸ್ಥಿಕೆ ಕೇಂದ್ರಗಳಿಗೆ ರವಾನಿಸಲಾಗುವುದು. ವಕೀಲರು, ನ್ಯಾಯಾಲಯದ ಸಿಬ್ಬಂದಿ, ಕಾನೂನು ಪ್ರಾಧ್ಯಾಪಕರು ಹಾಗೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಸಹಕಾರದಿಂದ ಪ್ರಕರಣಗಳ ಗುರುತಿಸುವ ಕಾರ್ಯ ನಡೆಯಲಿದೆ.ಕುಟುಂಬ ವ್ಯಾಜ್ಯಗಳು, ನಾಗರಿಕ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು ಸೇರಿದಂತೆ ಮಧ್ಯಸ್ಥಿಕೆಗೆ ಸೂಕ್ತವಾದ ಪ್ರಕರಣಗಳನ್ನು ಈ ಅಭಿಯಾನದಲ್ಲಿ ಪರಿಗಣಿಸಲಾಗುತ್ತದೆ. ಪಕ್ಷಗಾರರು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮನೆಯಲ್ಲಿ ಕುಳಿತು ಇ-ಖಾತಾ ಪಡೆಯುವ ಕುರಿತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಫ್ರೋಜ್ ಅಹ್ಮದ್ ಪಟೇಲ ಹಾಗೂ ಸಿಬ್ಬಂದಿ ಜಾಗೃತಿ ಮೂಡಿಸಿದರು.ಪಟ್ಟಣದಲ್ಲಿ ಬುಧವಾರ ಮನೆಯಲ್ಲೇ ಕುಳಿತು ಇ-ಖಾತಾವನ್ನು ಪಡೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಮುಖ್ಯಾಧಿಕಾರಿ ಮಾತನಾಡಿ, ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು. ಸದರಿ ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸಿ, ಅನಮೋದಿಸಲಾಗುಗುವುದು. ಅಂತಿಮ ಇ- ಖಾತಾವನ್ನು ತಮ್ಮ ಮನೆಗಳಲ್ಲೇ ಕುಳಿತು ಪಡೆಯಬಹುದಾಗಿದೆ.ಇ-ಖಾತಾಗಾಗಿ ಮಾಲೀಕರ ಭಾವಚಿತ್ರ ಮತ್ತು ಆಧಾರ, ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ ಸಂಖ್ಯೆ, ಸ್ವತ್ತಿನ ಕ್ರಯ ಅಥವಾ ನೋಂದಾಯಿತ ಪತ್ರ ಸಂಖ್ಯೆ, ವಿದ್ಯುತ್ ಆರ್.ಆರ್.ಸಂಖ್ಯೆ, ಸ್ವತ್ತಿನ ಛಾಯಾಚಿತ್ರ, ಇಸಿ ನಮೂನೆ ೧೫/೧೬, ಸ್ವತ್ತಿಗೆ ಸಂಬAಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ಅಗತ್ಯವಾಗಿವೆ ಎಂದು ಮಾಹಿತಿ ನೀಡಿದರು.ಸಿಬ್ಬಂದಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೋರವಾರ ಗ್ರಾಮದ ೩ನೇವಾರ್ಡಿನಲ್ಲಿ ಕುಡಿಯುವ ನೀರನ್ನು ನಿಗದಿತವಾಗಿ ಪೂರೈಸಲು ಜೊತೆಗೆ ನೀರಿನ ಟ್ಯಾಂಕ್ ಅಳವಡಿಸಲು ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದ ವಾರ್ಡ್ ೩ರ ಶ್ರೀಬಸವೇಶ್ವರನಗರದ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಆಗಮಿಸಿ ನೀರಿನ ತೊಂದರೆ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ವಾರ್ಡಿಗೆ ಎರಡು ತಿಂಗಳಿಗೊಮ್ಮೆ ಕುಡಿವ ನೀರು ಪೂರೈಕೆಯಾಗುತ್ತಿದ್ದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆಯ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ. ಒಂದು ವೇಳೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಒಂದು ವಾರದೊಳಗಾಗಿ ನಿಗದಿತ ಪೂರೈಸುವುದು ಹಾಗೂ ಒಂದು ಕುಡಿಯುವ ನೀರಿನ ಟ್ಯಾಂಕ್ ಅಳವಡಿಸದಿದ್ದರೆ ಗ್ರಾಮ ಪಂಚಾಯಿತಿ ಕಾರ್ಯಲಯದ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ನಂತರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.ಮಾದೇವ ಜಂಬುಗೋಳ, ಅಶೋಕ ಮಾಲಿ, ವಿಜಯಲಕ್ಷ್ಮಿ ಪಾಟೀಲ, ಬಸಮ್ಮ ಬಿರಾದಾರ,…
ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸಲಹೆ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕು ಮಟ್ಟದ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವದರಿಂದಲೇ ಜನ ಸಾಮಾನ್ಯರು ಜನ ಸಂಪರ್ಕ ಸಭೆಗೆ ತಮ್ಮ ಅಹವಾಲುಗಳನ್ನು ತೊಡಿಕೊಳ್ಳಲು ಬರುತ್ತಾರೆ. ಈ ರೀತಿ ಜನ ಸಾಮಾನ್ಯರು ಜನ ಸಂಪರ್ಕ ಸಭೆಗೆ ಬರದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಕೆಲಸ ಮಾಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಮಂಗಳವಾರ ಇಂಡಿ ಪಟ್ಟಣದ ವಿಧಾನಸೌಧ ಸಭಾಭವನದಲ್ಲಿ ಏರ್ಪಡಿಸಿದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜನ ಸಂಪರ್ಕ ಸಭೆಗೆ ನೂರಾರು ಜನ ಸಾರ್ವಜನಿಕರು ಆಗಮಿಸಿ ಡಾ. ಬಿ.ಆರ್.ಅಂಬೇಡಕರ ನಿಗಮದಿಂದ ಸ್ವಯಂ ಸಾಲ ಯೋಜನೆ ಮಂಜೂರಿ ಮಾಡಿಸಬೇಕು. ಗೋಳಸಾರ ಗ್ರಾಮದ ೧೨೦ ಮನೆಗಳನ್ನು ಕಂದಾಯ ಗ್ರಾಮಕ್ಕೆ ಸೇರ್ಪಡೆ ಮಾಡುವ ಕುರಿತು ಜಮೀನು ಬೆಳೆ ಪರಿಹಾರ ಕೊಡಿಸಬೇಕು ಶ್ರೀ ನರಸಿಂಹ ದೇವಸ್ಥಾನ ಆಸ್ತಿ ಆಕ್ರಮವಾಗಿ ಮಾರಾಟ ಮಾಡಿದ ಬಗ್ಗೆ ತನಿಖೆ ಮಾಡಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ೨೭ ನೇ ಡಿಸ್ಟ್ರಿಬ್ಯೂಟರ್ ಗೆ ನೀರು ಹರಿಸುವ ಕುರಿತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦ಕೆವಿ ಮಾರ್ಗಗಳಲ್ಲಿನ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ ಹಾಗೂ ರೋಣಿಹಾಳ ಉಪ ಕೇಂದ್ರಗಳಲ್ಲಿ ಮೂರನೇ ತ್ರೆöÊಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊg ಹೋಗುವ ೩೩ ಕೆವ್ಹಿ ದೇವರಗೆಣ್ಣೂರ, ೩೩ಕೆವ್ಹಿ ಎಲ್ಐಎಸ್ ಲಿಂಗದಳ್ಳಿ, ತಿಕೋಟಾ ಜಾಕ್ವೆಲ್ ಸೇರಿದಂತೆ ೧೧ ಕೆವಿ ವಿದ್ಯುತ್ ಮಾರ್ಗಗಳಿಗೆ ಡಿಸೆಂಬರ್ ೨೮ರ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜ. ೯ ಕೊನೆಯ ದಿನವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಮೊಬೈಲ್ ಸಂಖ್ಯೆ: ೮೦೫೦೭೭೦೦೦೪ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಜಾರಿ ಮತ್ತು ತನಿಖೆ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಪಕೀರಪ್ಪ ಚಲವಾದಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ ಸನ್ನದುಗಳ ಇ-ಹರಾಜು ಪ್ರಕ್ರಿಯೆಯು ಜನವರಿ ೧೩ ರಿಂದ ೨೦ರವರೆಗೆ ಆನ್ಲೈನ್ ಮೂಲಕ ನಡೆಯಲಿದೆ ಎಂದು ಬೆಳಗಾವಿಯ ಜಾರಿ ಮತ್ತು ತನಿಖೆ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಪಕೀರಪ್ಪ ಚಲವಾದಿ ಅವರು ಹೇಳಿದರು.ಅವರು ಬುಧವಾರ ವಿಜಯಪುರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾದ್ಯಂತ ಇದೇ ಮೊದಲ ಬಾರಿಗೆ ಇ-ಹರಾಜು ಪ್ರಕ್ರಿಯೆಯು ನಡೆಯಲಿದ್ದು, ಈಗಾಗಲೇ ಡಿಸೆಂಬರ್ ೨೨ರಿಂದ ಇ-ಹರಾಜಿಗೆ ನೋಂದಣಿ ಕಾರ್ಯ ಆನ್ಲೈನ್ ಮೂಲಕ ಆರಂಭವಾಗಿದೆ. hಣಣಠಿs://sಣsಣeexಛಿise.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ hಣಣಠಿs://ತಿತಿತಿ.msಣಛಿeಛಿommeಡಿಛಿe.ಛಿom ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿಗೆ ಜಿಎಸ್ಟಿ ಸೇರಿದಂತೆ ರೂ. ಒಂದು ಸಾವಿರ ಶುಲ್ಕ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.ಎಂಎಸ್ಟಿಸಿ ಲಿಮಿಟೆಡ್ ಇ-ಪೊರ್ಟಲ್ನಲ್ಲಿ ಈ-ಹರಾಜು ಪ್ರಕ್ರಿಯೆ ನಡೆಯಲಿದ್ದು, ಈ ಸನ್ನದು ಅವಧಿಯು ಐದು ವರ್ಷದಾಗಿದ್ದು, ಪ್ರತಿ ವರ್ಷ ನವೀಕರಣ ಮಾಡಿಕೊಳ್ಳಬೇಕು. ಅಬಕಾರಿ ಇಲಾಖೆಯ ಉಪ…
