Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಗದಗ: ಪಂ.ಪುಟ್ಟರಾಜ ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ, ಗದುಗಿನ ಡಾ ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕವಾಗಿದ್ದಾರೆ.ಸಂಸ್ಕೃತಿ ಚಿಂತಕ, ಪೂಜ್ಯಗುರು ಪುಟ್ಟರಾಜರ ಅಭಿಮಾನಿ ಭಕ್ತ, ಧರ್ಮ ಪ್ರಕಾಶ ಪಾಳೇಗಾರ ಹನುಮಂತಪ್ಪನವರ ಚಿರಂಜೀವಿ, ದಾವಣಗೆರೆಯ ಪ್ರತಿಷ್ಠಿತ, ಶ್ರೀಗಂಧ ರೆಸಿಡೆನ್ಸಿಯ ಮಾಲೀಕರಾದ, ಮಂತ್ರಾಲಯದಿಂದ “ಮಂತ್ರಾಲಯ ಪರಿಮಳ” ಪ್ರಶಸ್ತಿ ಪುರಸ್ಕೃತ, ಖ್ಯಾತ ಉದ್ಯಮಿದಾರ ವಿನಾಯಕ ಪಿ. ಬಿ. ಇವರನ್ನು ನೇಮಕ ಮಾಡಲಾಗಿದೆ ಎಂದು ಡಾ ಪಂ ಪುಟ್ಟರಾಜ ಸೇವಾ ಸಮಿತಿಯ ಪ್ರವರ್ತಕರಾದ ವೇ. ಚನ್ನವೀರಸ್ವಾಮಿ ಹಿರೇಮಠ ,(ಕಡಣಿ) ಶ್ರೀವೀರೇಶ್ವರ ಪುಣ್ಯಾಶ್ರಮ ಗದಗ, ಇವರು ತಿಳಿಸಿದ್ದಾರೆ.ಸುಮಾರು ೫ ವರ್ಷಗಳಿಂದ ಸೇವಾ ಸಮಿತಿಯ ಪೋಷಕರಾಗಿ, ಜಿಲ್ಲಾ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಮತ್ತು ಪುಟ್ಟರಾಜರ ಮಾಸದ ನೆನಪು ಸಂಗೀತ ಶ್ರೀಗಂಧ ಮಾಸಿಕ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿರುವುದನ್ನು ಗಮನಿಸಿ, ಇವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕೃಷಿ ಪ್ರಧಾನ ಭಾರತ ದೇಶದಲ್ಲಿ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಗ್ರಾಮೀಣ ಮೂಲದ ಜನರೇ ಹೆಚ್ಚಾಗಿರುವ ಗ್ರಾಮ ಬದುಕಿನ ಸೊಗಡಿನ ಜನರಿಗೆ ಪ್ರಕೃತಿ ಹಸಿರು ಸಂಪ್ರದಾಯಗಳೆಲ್ಲವೂ ಅವರ ಕೃಷಿ ಬದುಕಿನಲ್ಲಿಯೇ ಕಾಣುತ್ತದೆ.ಅವರ ಭಾಷೆಯಲ್ಲಿ ಯುಗಾದಿ ಎಂಬ ಪದವು ಉಗಾದಿ ಎಂದಾಗಿದೆ ಉಳಿದವರು ವ್ಯಾಪಾರಸ್ಥರಿಗೆ ದೀಪಾವಳಿ ಮುಖ್ಯ ಹಬ್ಬವಾದರೆ ರೈತಾಪಿ ಜನರಿಗೆ ಯುಗಾದಿಯೇ ಮುಖ್ಯ ಹಬ್ಬ.ಚೈತ್ರ ಮಾಸದ ಆರಂಭವನ್ನು ಸೂಚಿಸುವ ಈ ಸಮಯದಲ್ಲಿ ಪ್ರಕೃತಿ ಅತ್ಯಂತ ಸುಂದರವಾಗಿ ಹಸಿರಿನಿಂದ ತುಂಬಿ ಪಲ್ಲವಿಸುತ್ತದೆ. ವಿಶೇಷವಾಗಿ ಮಾವು ಬೇವುಗಳು ಹೂವನ್ನು ಕಾಯಿಗಳನ್ನು ತಮ್ಮಲ್ಲಿ ತುಂಬಿಕೊಂಡು ನೋಡುವವರ ಕಣ್ಣಿಗೆ ಆನಂದವನ್ನು ಉಂಟು ಮಾಡುತ್ತವೆ. ಆಗ ತಾನೆಬಿಟ್ಟ ಎಳೆಯ ಹುಣಸೆ, ಮಾವು ಭತ್ತದ ತೆನೆಗಳು ಹಬ್ಬದ ದಿನ ವಿಶೇಷವಾಗಿ ಪೂಜಿಸಲ್ಪಟ್ಟು ನಂತರ ಬಳಸಲ್ಪಡುತ್ತವೆ.ಭಾರತ ದೇಶದ ಪ್ರತಿ ಹಳ್ಳಿಗಳಲ್ಲೂ ವರ್ಷದ ಮೊದಲ ಹಬ್ಬ ಯುಗಾದಿ ಅತ್ಯಂತ ವೈವಿಧ್ಯಮಯವಾಗಿ ಆಚರಿಸಲ್ಪಡುತ್ತದೆ. ಸರಿಸುಮಾರು ಯುಗಾದಿ ಹಬ್ಬಕ್ಕೆ ಒಂಬತ್ತು ದಿನಗಳ…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಂದು ದಟ್ಟವಾದ ಕಾಡಿನಲ್ಲಿ ಒಂದು ಸಿಂಹ ಇತ್ತು. ಅದು ತುಂಬಾ ಅಹಂಕಾರದಿಂದ ವರ್ತಿಸುತ್ತಿತ್ತು. ಕಾಡಿನ ಬೇರೆಲ್ಲ ಪ್ರಾಣಿಗಳನ್ನು ಕೀಳಾಗಿ ನೋಡುತ್ತಿತ್ತು. ಒಂದು ದಿನ ಕಾಡಿನಲ್ಲಿ ಸುತ್ತಾಡುತ್ತಿರುವಾಗ ಸಿಂಹದ ಪಂಜಕ್ಕೆ ಚೂಪಾದ ಮುಳ್ಳೊಂದು ಚುಚ್ಚಿತು. ಸಿಂಹಕ್ಕೆ ಮುಳ್ಳು ಚುಚ್ಚಿದ ನೋವಿನಿಂದಾಗಿ ನಡೆಯಲು ಸಾಧ್ಯವಾಗಲಿಲ್ಲ. ಇಲಿಯೊಂದು ಸಿಂಹದ ಸ್ಥಿತಿ ಕಂಡು ಸಹಾಯ ಮಾಡಲು ಬಂದಿತು. ಆದರೆ ಸಿಂಹವು ‘ನಾನು ಕಾಡಿನ ರಾಜ ನಿನ್ನಂಥ ಸಣ್ಣ ಪ್ರಾಣಿಯಿಂದ ಸಹಾಯ ಪಡೆಯುವುದೇ?’ ಎಂದು ಸೊಕ್ಕಿನಿಂದ ಇಲಿಯ ಸಹಾಯವನ್ನು ನಿರಾಕರಿಸಿತು. ಕ್ರಮೇಣ ಅದಕ್ಕೆ ನಡೆಯಲು ಆಗದಂತಾಯಿತು. ಕಾಡಿನಲ್ಲಿ ನರಳುತ್ತಾ ಮೆಲ್ಲನೇ ಅಲೆದಾಡುತ್ತ ಸಹಾಯ ಮಾಡಲು ಯಾರಾದರೂ ಸಿಗುವರೇನೋ ಎಂದು ನೋಡುತ್ತಿತ್ತು. ಆದರೂ ಒಣ ಜಂಭ ಕಡಿಮೆ ಆಗಿರಲಿಲ್ಲ. ಆದರೆ ನೋವು ಹೆಚ್ಚಾದಂತೆ ತಡೆದುಕೊಳ್ಳಲಾರದೇ ತನ್ನ ಅಹಂಕಾರವನ್ನು ಬಿಟ್ಟು ಇಲಿಯನ್ನು ಸಹಾಯ ಮಾಡಲು ಕೇಳಿಕೊಂಡಿತು. ಇಲಿ ತನ್ನ ಚೂಪಾದ ಹಲ್ಲುಗಳಿಂದ ಸಿಂಹದ ಪಂಜದಲ್ಲಿ ಸಿಕ್ಕಿದ್ದ ಮುಳ್ಳನ್ನು ಸುಲಭವಾಗಿ ತೆಗೆದು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಡಾ.ಸಮೃದ್ಧಿ ಗಡ್ಡದ ಅವರು 2025 ನೇ ಸಾಲಿನ ಸೆಪ್ಟೆಂಬರ್ – ಅಕ್ಟೋಬರ್ ತಿಂಗಳಿನಲ್ಲಿ ನಡೆದ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯ ಎಂ ಎಸ್. ಜನರಲ್ ಸರ್ಜರಿ ಯಲ್ಲಿ ಶೇ.81ರಷ್ಟು ಅಂಕ ಪಡೆದು ರಾಜ್ಯದ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ರವರು ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಪಡೆದಿದ್ದಾರೆ.ಡಾ||ಸಮೃದ್ಧಿಯವರು ದಾವಣಗೆರೆಯ ಜಗದ್ಗುರು ಜಯದೇವ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಪ್ರಾಥಮಿಕ ಶಿಕ್ಷಣದಿಂದ ಇಲ್ಲಿಯವರೆಗೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರತಿ ಹಂತದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆಯುತ್ತಾ ಬಂದಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದವರಾಗಿದ್ದು, ರೇವಪ್ಪ ಹಾಗೂ ಮಹಾದೇವಿ ಗಡ್ಡದ ದಂಪತಿಯ ಏಕೈಕ ಸುಪುತ್ರಿಯಾಗಿದ್ದಾರೆ.ಇವರು ದಾವಣಗೆರೆಯ ವೈದ್ಯಕೀಯ ಕಾಲೇಜಿನ ಬಾಪೂಜಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ವೈದ್ಯಕೀಯ ಸೇವೆಯಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಇನ್ನೂ ಹೆಚ್ಚಿನ ವ್ಯಾಸಂಗ ಮಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಹಂಬಲವನ್ನು ಹೊಂದಿದ್ದಾರೆ. ಇವರ ಈ ಸಾಧನೆಗೆ ಪಾಲಕರು, ಸಂಬಂಧಿಕರು ಬಂಧುಗಳು ಹಾಗೂ ಹಿತೈಷಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕಾಭಿವೃದ್ಧಿ ಆಯುಕ್ತರು, ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ನಿರ್ದೇಶಕರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಮಾ.೨೦ರಂದು ಜಿಲ್ಲೆಗೆ ಆಗಮಿಸಿ,ಅಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು.ಕ್ಷೇತ್ರ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಅವರು, ಅದೇ ದಿನ ಮಧ್ಯಾಹ್ನ ೩ ಗಂಟೆಗೆ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಡಿಗೆ ರಶೀದಿಗಳು ಹಣದ ರಶೀದಿಗಳು ಮತ್ತು ಇತರ ಕಾನೂನು ಬದ್ದ ದಾಖಲೆಗಳಗೆ ಅಗತ್ಯವಿರುವ ಒಂದು ರೂಪಾಯಿ ಮೌಲ್ಯದ ಕಂದಾಯ ಚೀಟಿಗಳು (ಖeveಟಿue Sಣmಠಿ) ಜಿಲ್ಲೆಯ ಮುಖ್ಯ ಅಂಚೆ ಕಚೇರಿ ಹಾಗೂ ಉಪ ಅಂಚೆ ಕಚೇರಿಗಳಲ್ಲಿ ಲಭ್ಯವಿವೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ವಿಭಾಗದ ಅಂಚೆ ಕಚೇರಿಗಳ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಗಳ ಕಾರ್ಯಾಲಯ ಹಾಗೂ ಪುನರ್ವಸತಿ ಅಧಿಕಾರಿಗಳ ಕಚೇರಿಗಳ ಮೇಲೆ ವಿಜಯಪುರ ಲೋಕಾಯುಕ್ತ ಪೊಲೀಸರ ತಂಡ ಸೋಮವಾರ ದಾಳಿ ನಡೆಸಿದರು.ಈ ಎರಡೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಸುಮಾರು ೨೫ ಜನ ಲೋಕಾಯುಕ್ತ ಪೊಲೀಸ್ ರ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದೆ.ಬೆಳಿಗ್ಗೆಯಿಂದಲೇ ಆರಂಭಗೊಂಡ ತಪಾಸಣೆ ಸಂಜೆಯವರೆಗೂ ಮುಂದುವರೆದಿದೆ.ಇದು ಮುಂದಿನ ಎರಡು ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಛೇರಿ ಹಾಗೂ ಪುನರ್‌ವಸತಿ ಅಧಿಕಾರಿಗಳು ಕಛೇರಿಗಳಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿತರಣೆ, ಸಾರ್ವಜನಿಕ ಉದ್ದೇಶಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಕೊಳ್ಳಬೇಕಾದ ಸಂದರ್ಭದಲ್ಲಿ, ಮುಳುಗಡೆಯಾಗಿರುವ ಹಳ್ಳಿಗಳ ಜನರಿಗೆ ಪುನರ್ವಸತಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸಿಗಬೇಕಾದ ಮೂಲ ಪರಿಹಾರಕ್ಕಿಂತ ನ್ಯಾಯಾಲಯದ ಮೂಲಕ ಹೆಚ್ಚಿನ ಹಣ ಕೊಡಿಸುವುದಾಗಿ ಸಂತ್ರಸ್ತರಿಗೆ ನಂಬಿಸಿ ಮಧ್ಯವರ್ತಿಗಳ ಮೂಲಕ ಲಂಚದ ಹಣದ ಬೇಡಿಕೆ, ಭೂಮಿಯನ್ನು ಕಳೆದುಕೊಂಡ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿ ಮಾಡುವಂತೆ ಆಗ್ರಹಿಸಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಮನವಿ ಸ್ವೀಕರಿಸಲು ತಡವಾಗಿ ಬಂದ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದ ವಿದ್ಯಾರ್ಥಿಗಳು, ನಂತರ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಕಳೆದ ೫-೬ ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ ಜೊತೆಗೆ ನಿಲ್ಲಬೇಕಾದ ಸರ್ಕಾರ ಕುಂಭನಿದ್ರೆಗೆ ಜಾರಿದೆ. ಸರಕಾರದ ಹತ್ತಿರ ಯಾವುದೇ ದೂರದೃಷ್ಟಿಯ ಯೋಜನೆಗಳು ಇಲ್ಲದೆ ಸಮಸ್ಯೆಗಳು ಬಂದಾಗ ಅವುಗಳಿಗೆ ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನ ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ, ರಾಜ್ಯದಲ್ಲಿ ಒಟ್ಟು ೪೩ ಇಲಾಖೆಗಳಲ್ಲಿ ೨ ೮೪,೮೮೧ ಹುದ್ದೆಗಳು…

Read More

ದೇವರಹಿಪ್ಪರಗಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಜಾರಿಗೊಳಿಸಿದ ವಿವಿಧ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಶಕ್ತಳಾಗಬೇಕು ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ನೈರ್ಮಲ್ಯ ನಿರ್ವಹಣೆಯಲ್ಲಿ ತೊಡಗಿರುವ ಸ್ವಸಹಾಯ ಗುಂಪುಗಳ ಸಾಮಾರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.ಮಹಿಳೆ ಇಂದು ಎಲ್ಲ ರಂಗಗಳಲ್ಲಿ ಸುಶಿಕ್ಷಿತಳಾಗಿ, ಸಮರ್ಥಳಾಗುವುದರ ಮೂಲಕ ಅತ್ಯಂತ ಮುಂಚೂಣಿ ಪಾತ್ರ ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.ಜೆಎಮ್‌ಜೆ ಸ್ವಯಂಸೇವಾ ಸಂಸ್ಥೆಯ ಶಾಂತಾ ದೇಗಿನಾಳ ಹಾಗೂ ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಈಳಗೇರ ಮಾತನಾಡಿ, ಬದಲಾದ ಜಗತ್ತಿನಲ್ಲಿ ದೇಶದ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವದು ಹೆಮ್ಮೆಯ ವಿಷಯ. ಅದರಲ್ಲೂ ಶಿಕ್ಷಣ, ವೈದ್ಯಕೀಯ, ವಿಜ್ಞಾನ ತಂತ್ರಜ್ಞಾನದಲ್ಲಿ ಮಹಿಳೆಯರ ಸಾಧನೆ ಅಮೋಘವಾಗಿದೆ ಎಂದರು.ಪಟ್ಟಣ ಪಂಚಾಯಿತಿ ಸಿಬ್ಬಂದಿ ಎಸ್.ಸಿ.ಹಿರೇಮಠ, ರೇಣುಕಾ ಬಿರಾದಾರ, ಎಸ್.ಎಸ್.ಪೂಜಾರಿ, ಶಿಕ್ಷಕಿ ಇಂದುಮತಿ ಕೋಟಿನ್, ಅಂಗನವಾಡಿ ಕಾರ್ಯಕರ್ತೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದ ಮೂರು ದಿನಗಳ ಚಿರಾಕಿ ನಸ್ರೂದ್ದೀನ್ ಉರುಸ್‌ನ್ನು ಶಾಂತಿ, ಸಹನೆ, ಸಹಕಾರದಿಂದ ಆಚರಿಸಬೇಕು ಎಂದು ಪಿಎಸೈ ಸಚೀನ ಆಲಮೇಲಕರ ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಸೋಮವಾರ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಇಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ. ಎಲ್ಲರೂ ಶಾಂತಿ, ಸಹನೆ ಯಿಂದ ಉರುಸ್ ಆಚರಣೆಗೆ ಸಹಕಾರ ನೀಡಬೇಕು ಅಹಿತಕರ ಘಟನೆಗಳು ಜರುಗದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಎಂದರು.ಗ್ರಾಮಸ್ಥರ ಪರವಾಗಿ ಕಾಂಗ್ರೆಸ್ ಧುರೀಣ ಸಾಯಿಕುಮಾರ ಬಿಸನಾಳ ಮಾತನಾಡಿದರು.ಸಭೆಯಲ್ಲಿ ಸಂಗನಗೌಡ ಪಾಟೀಲ, ವಿಠ್ಠಲ ದೇಗಿನಾಳ, ಸೋಮನಗೌಡ ಪಾಟೀಲ ಸಿದ್ಧನಗೌಡ ಬಿರಾದಾರ, ಕಾಂತು ಕನ್ನೋಳ್ಳಿ, ಹಣಮಂತ ಗಣಜಲಿ, ಸಾಯಬಣ್ಣ ಮಸಳಿ, ಕಮಲ್‌ಸಾಬ್ ಚಿಕ್ಕರೂಗಿ, ನಬಿಸಾಬ್ ಮುಲ್ಲಾ, ಕಲ್ಲಪ್ಪ ಚೌಧರಿ, ಸಿದ್ದು ಗಂಗನಳ್ಳಿ, ರಮೇಶ ಕುಂಬಾರ ಇದ್ದರು.

Read More