Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯ, ಹೊರ ರಾಜ್ಯದ ಲಕ್ಷಾಂತರ ಭಕ್ತಗಣ ಹೊಂದಿರುವ ಪವಾಡ ಪುರುಷ ಭಕ್ತರ ಪಾಲಿನ ಕಲ್ಪವೃಕ್ಷ ಲಚ್ಯಾಣದ ಸಿದ್ದಲಿಂಗ ಮಹಾರಾಜರು ಎಂದು ಶಾಸಕ ಯಶವಂತಗೌಡ ಪಾಟೀಲ ಹೇಳಿದರು.ತಾಲೂಕಿನ ಸುಕ್ಷೇತ್ರ ಲಚ್ಯಾಣದ ಶ್ರೀಸಿದ್ದಲಿಂಗ ಮಹಾರಾಜರ ಮಠದಲ್ಲಿ ಅಂದಾಜು ೬ ಕೋಟಿ ರೂ. ವೆಚ್ಚದ ನೂತನವಾಗಿ ನಿರ್ಮಿಸುತ್ತಿರುವ ಸಭಾ ಮಂಟಪದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.ಮಾನವ ಕುಲಕೋಟಿ ಏಳ್ಗೆಬಯಸುವ ಮಠಗಳಲ್ಲಿ ಲಚ್ಯಾಣದ ಶ್ರೀಸಿದ್ದಲಿಂಗರ ಪುಣ್ಯಕ್ಷೇತ್ರ ಕೂಡಾ ಹೌದು. ಇಷ್ಠಾರ್ಥಿಗಳನ್ನು ಪೂರೈಸುವ ದಿವ್ಯಶಕ್ತಿ ಶ್ರೀಸಿದ್ದಲಿಂಗೇಶ್ವರರಲ್ಲಿದೆ. ಶ್ರೀಸಿದ್ದಲಿಂಗ ಮಹಾರಾಜರು ಈ ಭಾಗದಲ್ಲಿ ಭಕ್ತಿರಿಗೆ ಕಾಮದೇನು ಕಲ್ಪವೃಕ್ಷವಿದ್ದಂತೆ ಎಂದರು.ಭಂಥನಾಳದ ಶ್ರೀವೃಷಭಲಿಂಗ ಮಹಾರಾಜರು ದಿವ್ಯಸಾನಿಧ್ಯವಹಿಸಿ ಅರ್ಶೀವಚನ ನೀಡಿ, ಧನರಾಜ ಮುಜಗೊಂಡ , ನಿವೃತ್ತ ಶಿಕ್ಷಕ ಎ.ಪಿ ಕಾಗವಾಡಕರ್ ಮಾತನಾಡಿದರು.ಡಿ.ಎಸ್ ಪಾಟೀಲ ,ಎಂ,ಎಸ್ ಮುಜಗೊಂಡ, ವಿಠ್ಠಲಮಾಸ್ತರಕರಾಳೆ, ಸಂಕಪ್ಪಗೌಡ ಬಿರಾದಾರ, ಗೌರೀಶಂಕರ ಬಾಬಳಗಾಂವ್, ಹಣಮಂತ ಮುಜಗೊಂಡ, ಅಶೋಕಗೌಡ ಪಾಟೀಲ, ರಾಜೇಂದ್ರ ಹತ್ತಳ್ಳಿ, ಮಹಾದೇವ ಸಾಂಬಾಜಿ, ಬಸವರಾಜ ಬಾಬಳಗಾಂವ್, ಮಹೇಶಗೌಡ ಬಿರಾದಾರ, ಸಂತೋಷ ಪೋಲಾಸಿ, ಸುರೇಶ ವಾಲಿ, ಈರಪ್ಪ ವಾಲಿ, ಸಿದ್ದು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶಗೌಡ ಪಾಟೀಲ ಉಪಾಧ್ಯಕ್ಷರಾಗಿ ಹಣಮಂತ ಕುರಿ ಮತ್ತು ಯಲ್ಲಪ್ಪ ಚಲವಾದಿ ಅವಿರೋಧವಾಗಿ ಆಯ್ಕೆಯಾದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹೆಣ್ಣಿಗೆ ಹೆಣ್ಣು ಶತೃವಾಗಿರಬಾರದು ಎಂದು ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಲಿಂಗಾನುಪಾತ ಅಸಮತೋಲನವಾಗ ಬಾರದು. ಹೆಣ್ಣನ್ನು ಗೌರವಿಸುವ ಮನಸ್ಸು ಎಲ್ಲರಲ್ಲಿ ಬರಬೇಕು. ಹೆಣ್ಣು ಮಕ್ಕಳು ಸಹ ಪ್ರಯತ್ನ ಶೀಲರಾಗಿರಬೇಕು. ಸಾಧನೆಯ ಮೂಲಕ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕು. ತಮ್ಮ ಜೀವನದ ಕಾಳಜಿ ಸದಾ ಇರಬೇಕು. ಹೆಣ್ಣು ಮಕ್ಕಳಲ್ಲಿ ಹೊಂದಾಣಿಕೆ ಮತ್ತು ಸಂಘಟನಾ ಪ್ರವೃತ್ತಿ ಇರಬೇಕು ಎಂದರು.ಪ್ರಾಥಮಿಕ ಶಾಲಾ ಮುಖ್ಯಗುರು ಮಾತೆ ಸರಸ್ವತಿ ಮಡಿವಾಳರ್ ಮಾತನಾಡಿ ೨೦೦೮ ರಿಂದ ಹೆಣ್ಣು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರಗಳು ಹೊಸಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಪ್ರಯತ್ನ ಮಾಡುತ್ತಿದೆ. ಅದರ ಉಪಯೋಗ ಎಲ್ಲಾ ಹೆಣ್ಣು ಮಕ್ಕಳು ಪಡೆದುಕೊಂಡು ತಮ್ಮವರಿಗೆ ತಿಳಿಸುವ ವ್ಯವಸ್ಥೆ ಮಾಡಬೇಕು ಎಂದರು.ಜಿ.ಜೆ.ಪಾದಗಟ್ಟಿ, ಕಾಲೇಜಿನ ಉಪನ್ಯಾಸಕಿ ಅಂಜನಾ ದೇಶಪಾಂಡೆ, ಆಂಗ್ಲ ಮಾಧ್ಯಮ ಮುಖ್ಯ ಗುರುಮಾತೆ ರಂಜಿತಾ ಹೆಗಡೆ, ಶಿಕ್ಷಕರುಗಳಾದ ಅನ್ನಪೂರ್ಣ ನಾಗರಾಳ, ಬಿ.ಟಿ.ಭಜಂತ್ರಿ, ಮಂಜುನಾಥ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬ.ಬಾಗೇವಾಡಿಯಲ್ಲಿ ನ್ಯಾಯವಾದಿ ಈರಣ್ಣ ವಡವಡಗಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದ ನ್ಯಾಯವಾದಿಗಳ ಸಂಘದ ವತಿಯಿಂದ ಶುಕ್ರವಾರ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯವಾದಿಗಳಾದ ಎಂ.ಎ.ಲಿಂಗಸೂರ, ಚೇತನ ಶಿವಶಿಂಪಿ, ಪಿ.ಬಿ.ಜಾಧವ, ಬಿ.ಎ.ಚಿನಿವಾರ, ಆರ್.ಎಸ್.ಬಿರಾದಾರ, ಎನ್.ಎಸ್.ಪಾಟೀಲ, ಎಂ.ಎ.ಬಿದರಕುಂದಿ, ಪಿ.ಎಲ್.ಬೊಮ್ಮಣಗಿ, ಎಸ್.ಎಸ್.ಬಿರದಾರ, ಎಸ್.ಎಚ್.ಚಳ್ಳಗಿ, ಎಸ್.ಜಿ.ಹೊಕ್ರಾಣಿ, ಕೆ.ಜಿ.ಶಿವಯೋಗಿಮಠ, ಎಲ್.ಆರ್.ನಾಲವಾಡ ಸೇರಿಂದತೆ ಮತ್ತೀತರರು ಇದ್ದರು.

Read More

ನ್ಯಾಯವಾದಿ ಮೇಲೆ ಹಲ್ಲೆ: ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಮನವಿ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬ.ಬಾಗೇವಾಡಿಯಲ್ಲಿ ನ್ಯಾಯವಾದಿ ಈರಣ್ಣ ವಡವಡಗಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದ ನ್ಯಾಯವಾದಿಗಳ ಸಂಘದ ವತಿಯಿಂದ ಶುಕ್ರವಾರ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯವಾದಿಗಳಾದ ಎಂ.ಎ.ಲಿಂಗಸೂರ, ಚೇತನ ಶಿವಶಿಂಪಿ, ಪಿ.ಬಿ.ಜಾಧವ, ಬಿ.ಎ.ಚಿನಿವಾರ, ಆರ್.ಎಸ್.ಬಿರಾದಾರ, ಎನ್.ಎಸ್.ಪಾಟೀಲ, ಎಂ.ಎ.ಬಿದರಕುಂದಿ, ಪಿ.ಎಲ್.ಬೊಮ್ಮಣಗಿ, ಎಸ್.ಎಸ್.ಬಿರದಾರ, ಎಸ್.ಎಚ್.ಚಳ್ಳಗಿ, ಎಸ್.ಜಿ.ಹೊಕ್ರಾಣಿ, ಕೆ.ಜಿ.ಶಿವಯೋಗಿಮಠ, ಎಲ್.ಆರ್.ನಾಲವಾಡ ಸೇರಿಂದತೆ ಮತ್ತೀತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಬಂಜಾರ ಸಮಾಜ ಬಾಂಧವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಂಜಾರ ಸಮಾಜ ಬಾಂಧವರ ಬೇಡಿಕೆಯನ್ನು ಈಡೇರಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕರ್ನಾಟಕ ಬಂಜಾರ ನಿಗಮದ ಮಾಜಿ ನಿರ್ದೇಶಕ, ನ್ಯಾಯವಾದಿ ಮಲ್ಲಿಕಾರ್ಜುನ ನಾಯಕ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಜರುಗಿದ ಬಂಜಾರ ಸಮಾಜ ಬಾಂಧವರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸಚಿವ ಸಂಪುಟದಲ್ಲಿ ಬಂಜಾರ ಸಮಾಜದ ಸಚಿವರು ಇಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರು, ಜಿಲ್ಲೆಯ ಸಚಿವರು, ಶಾಸಕರು ಸೇರಿದಂತೆ ನಮ್ಮ ಸಮಾಜಕ್ಕೆ ಸೇರಿದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಇಲ್ಲವೇ ಪ್ರಕಾಶ ರಾಠೋಡ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿದರು.ವಿಜಯಪುರ ಜಿಲ್ಲೆಯ ಮುತ್ಸದ್ದಿ ರಾಜಕಾರಣಿಯಾಗಿರುವ ಪ್ರಕಾಶ ರಾಠೋಡ ಅವರ ಎಂಎಲ್‌ಸಿ ಅವಧಿ ಮುಕ್ತಾಯವಾಗಿದೆ. ಪ್ರಕಾಶ ರಾಠೋಡ ಅವರ ತಂದೆ ದಿ.ಕೆ.ಟಿ.ರಾಠೋಡ ಅವರು ಸೇರಿದಂತೆ ಪ್ರಕಾಶ ರಾಠೋಡ ಅವರು ಬಂಜಾರ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಸರ್ಕಾರ ಮತ್ತೊಮ್ಮೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇತ್ತೀಚೆಗೆ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿ ಶಿವನಗೌಡ ಬಿರಾದಾರ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ವಿಜಯಪುರ ನಗರದಲ್ಲಿ ಜವಳಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಸವೇಶ್ವರ ಕೋ ಅಪ್ರೇಟಿವ್ಹ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಬಸವರಾಜ ಸೋಂಪುರ(ಮನಗೂಳಿ), ಶಂಕರಗೌಡ ಪಾಟೀಲ, ಬಸನಗೌಡ ಚಿಕ್ಕೊಂಡ, ಸಂಗನಗೌಡ ಚಿಕ್ಕೊಂಡ , ಶೇಖರಗೌಡ ಬಿರಾದಾರ, ಬಸನಗೌಡ ಪಾಟೀಲ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬಸವನಬಾಗೇವಾಡಿ ಬ್ಲಾಕಿನ ಬೀದಿ ಬದಿ ವ್ಯಾಪಾರಿಗಳ ವಿಭಾಗದಿಂದ ಬಸವೇಶ್ವರ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಮುತ್ತು ನಾಲತವಾಡ, ಉಪಾಧ್ಯಕ್ಷ ಮಹ್ಮದತೌಫಿಕ ಶಾಬಾದಿ ಮಾತನಾಡಿ, ಸ್ವತಂತ್ರ ಸ್ವಾವಲಂಬಿಗಳಾಗಿ ಬದುಕು ನಡೆಸಲು ಬೀದಿ ಬದಿ ವ್ಯಾಪಾರ ಅನೇಕರ ಬಾಳಿಗೆ ಆಶಾಕಿರಣವಾಗಿದೆ. ಶ್ರಮದ ಬದುಕಿನಲ್ಲಿ ಸಾರ್ಥಕತೆಯಿದೆ. ಸಾರ್ಥಕತೆಯ ಶ್ರಮ ಜೀವನ ನಡೆಸುತ್ತಿರುವ ಬೀದಿ ಬದಿಯ ವ್ಯಾಪಾರಿಗಳ ಸಮಸ್ಯೆಗಳಿಗೆ ನಮ್ಮ ವಿಭಾಗವು ಸದಾ ಸ್ಪಂದಿಸಿ ಕಾರ್ಯನಿರ್ವಹಿಸಲಿದೆ ಎಂದರು.ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ವಿಭಾಗದ ಉಪಾಧ್ಯಕ್ಷ ಮಹಿಬೂಬ ಅತ್ತಾರ, ಬೀದಿ ಬದಿ ವ್ಯಾಪಾರಿಗಳಾದ ಮುಕ್ತುಮ ಹೊಕ್ರಾಣಿ, ಜಾಕೀರ ಬೆಲೀಪ್, ಮುಕ್ತುಮ ಬೈರವಾಡಗಿ, ಮೋಹನ ರಾಠೋಡ, ವಿಜಯ ಶೆಟ್ಟಿ, ಯಲ್ಲವ್ವ ಪೂಜಾರಿ, ಅಮೀಜಾ ಅತ್ತಾರ, ಹುಸೇನಬಿ ಜಮಖಂಡಿ, ಶಕೀನಾ ಬಾಗವಾನ, ಸೈನಜಾ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಕೀಲರ ಸಂಘದ ಸದಸ್ಯ ಈರಣ್ಣ ಶಂಕರಗೌಡ ವಡವಡಗಿ (ಗುಳಬಾಳ) ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ವಕೀಲರು ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.ವಕೀಲರು ನ್ಯಾಯಾಲಯದ ಹತ್ತಿರದ ವಿಜಯಪುರ ರಸ್ತೆಯಲ್ಲಿ ರಸ್ತೆ ತಡೆದು ಕೆಲಹೊತ್ತು ಪ್ರತಿಭಟನೆ ನಡೆಸಿದರು.ಘಟನಾ ಸ್ಥಳಕ್ಕೆ ಆಗಮಿಸಿದ ಡಿ.ವೈ.ಎಸ್.ಪಿ ಬಲ್ಲಪ್ಪ ನಂದಗಾವಿ, ಪೊಲೀಸ್ ಇನ್ಸಪೆಕ್ಟರ್ ಗುರುಶಾಂತ ದಾಶ್ಯಾಳ ಘಟನೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಸ್ತೆ ತಡೆಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ತಡೆ ನಿಲ್ಲಿಸಿ ಎಂದು ವಕೀಲರಿಗೆ ಮನವಿ ಮಾಡಿ ಮನವೊಲಿಸಿದರು.ನಂತರ ನ್ಯಾಯಾಲಯ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ, ವಕೀಲರಾದ ವಿ.ಬಿ.ಮರ್ತುರ, ಮಲ್ಲಿಕಾರ್ಜುನ ದೇವರಮನಿ, ಎಸ್.ಎಸ್.ಕೊಳೂರ, ಪದೇ ಪದೇ ವಕೀಲರ ಮೇಲೆ ಹಲ್ಲೆ ನಡೆಯತ್ತಿವೆ. ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಕೀಲರ ಸಂಘದ ಸದಸ್ಯ ಈರಣ್ಣ ವಡವಡಗಿ ಅವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ…

Read More

ನವದೆಹಲಿಯ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಸಿದ್ಧಗೊಂಡಿರುವ ರಾಜ್ಯದ ಸ್ತಬ್ಧಚಿತ್ರ ಉದಯರಶ್ಮಿ ದಿನಪತ್ರಿಕೆ ನವದೆಹಲಿ: ಜನವರಿ ೨೬ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ ‘ಕರ್ತವ್ಯ ಪಥ’ದಲ್ಲಿ ಪಥಸಂಚಲನದಲ್ಲಿ ಭಾಗವಹಿಸುತ್ತಿರುವ ” ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು” ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಕ್ಷಣಾ ಮಂತ್ರಾಲಯದ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ.ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಎಂ.ಇಮಕೊಂಗ್ಲ್ ಜಮೀರ್ ಅವರು ರಾಷ್ಟ್ರೀಯ ರಂಗಶಾಲಾ ಶಿಬಿರಕ್ಕೆ ಶುಕ್ರವಾರ (ಜ.೨೪) ರಂದು ಭೇಟಿ ನೀಡಿ, ಸ್ತಬ್ಧಚಿತ್ರವನ್ನು ವೀಕ್ಷಿಸಿ,ಮೆಚ್ಚುಗೆ ವ್ಯಕ್ತಪಡಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಧಿಕಾರಿಗಳು ರಾಜ್ಯ ಸ್ತಬ್ಧಚಿತ್ರದ ಕುರಿತ ಮಾಹಿತಿ ವಿವರ ನೀಡಿದರು.ಈ ಸಂದರ್ಭ ನವದೆಹಲಿಯ ಕರ್ನಾಟಕ ಭವನದ ಸಹಾಯ ನಿವಾಸಿ ಆಯುಕ್ತರೂ ಆದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಸಿ.ಮೋಹನ ಕುಮಾರ್ , ವ್ಯವಸ್ಥಾಪಕರಾದ ಕೆ.ಆರ್.ವೆಂಕಟೇಶ, ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ಪ್ರಭಾರ ಉಪ ನಿರ್ದೇಶಕಿ ಎಂ.ಶಾಲಿನಿ,ಪ್ರತಿರೂಪಿ ಸಂಸ್ಥೆಯ ರಾಜಕುಮಾರ್ ಉಪಸ್ಥಿತರಿದ್ದರು.

Read More