Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಐತಿಹಾಸಿಕ ದೇವರಾದ ಶ್ರೀ ರಾವುತರಾಯನು ತನ್ನ ಅಲಂಕಾರ ಅಂಗವಾಗಿ ದಿ:೨೦ ರಂದು ಬಂಡಿ ಉತ್ಸವದೊಂದಿಗೆ ಮಲ್ಲಯ್ಯನ ದೇವಸ್ಥಾನ ಪ್ರವೇಶಿಸಲಿದ್ದಾನೆ.ಪಟ್ಟಣದ ಸರ್ವಜನ ಪೂಜಿತ ರಾವುತರಾಯ ಬಹುದಿನಗಳ ನಂತರ ಅಲಂಕಾರಕ್ಕೆ ಸಿದ್ಧನಾಗಿದ್ದು ಇದನ್ನು ಗ್ರಾಮೀಣ ಭಾಷೆಯಲ್ಲಿ ಬಣ್ಣ ಕಾರ್ಯ ಎಂದೇ ಕರೆಯಲ್ಪಡುತ್ತಿದೆ. ಈ ಕಾರ್ಯದ ಅಂಗವಾಗಿ ದಿ: ೧೯ ರಂದು ಬಂಡಿ ತುಂಬುವದು ಹಾಗೂ ೨೦ ರಂದು ಬಂಡಿ ಉತ್ಸವ ಆರಂಭಗೊಳ್ಳಲಿದೆ.ಶ್ರೀರಾವುತರಾಯ ಅಲಂಕಾರಕ್ಕೆ ೩ ರಿಂದ ೪ ತಿಂಗಳು ಕಾಲ ತಗುಲಲಿದೆ. ಇದನ್ನು ಗೋಕಾಕ ಪಟ್ಟಣದ ಚಿತಾರಿ ಕುಟುಂಬದವರು ನೆರವೇರಿಸುತ್ತಿದ್ದಾರೆ. ಈ ಸಮಯದಲ್ಲಿ ಮಲ್ಲಯ್ಯನ ದೇವಸ್ಥಾನದಲ್ಲಿಯೇ ಅಲಂಕಾರ ಪೂರ್ಣಗೊಳ್ಳುವವರೆಗೆ ಆಸೀನನಾಗಿದ್ದು, ಭಕ್ತರಿಗೆ ಯಾವುದೇ ರೀತಿಯಾದ ದರ್ಶನ ಭಾಗ್ಯ ಇರುವುದಿಲ್ಲ. ಭಕ್ತಾಧಿಗಳು ಅಲಂಕಾರ ಕಾರ್ಯದಲ್ಲಿ ತನು,ಮನ,ಧನದಿಂದ ಸೇವೆ ಸಲ್ಲಿಸಿ ಪುನೀತರಾಗಬೇಕೆಂದು ಶ್ರೀಮಲ್ಲಯ್ಯ ರಾವುತರಾಯ ದೇವಸ್ಥಾನ ಕಮಿಟಿ ಪ್ರಕಟಣೆ ಮೂಲಕ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳಿಗೆ ಶಿಕ್ಷಣ ಒಂದು ಅಮೂಲ್ಯ ರತ್ನ ಇದ್ದಂತೆ. ಶೈಕ್ಷಣಿಕ ಅಭಿವೃದ್ದಿಯಿಂದ ಏನೆಲ್ಲಾ ಬದಲಾವಣೆ ಮಾಡುವಂತ ಶಕ್ತಿ ಇದೆ. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆ ಮಾನವೀಯ ಮೌಲ್ಯಗಳನ್ನು ನೀಡಿ ಭಾವಿ ಭವಿಷ್ಯತ್ತಿನ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ಕೆ. ಬಿರಾದಾರ ಹೇಳಿದರು.ಮಂಗಳವಾರ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಸಕರ್ಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಅಧ್ಯಕ್ಷತೆ ವಹಿಸಿದರು, ಮುಖ್ಯ ಅತಿಥಿಗಳಾಗಿ ಜಿ.ಎ.ದುದಗಿ, ಜಿ.ಎಸ್.ಬಂದಿ, ಎಸ್.ಆರ್. ಭೋಸಲೆ, ಎಸ್.ವ್ಹಿ.ಮುಂಜಿ, ಸದಾಶಿವ ಅಂಬಾರೆ, ಎಸ್.ಜಿ.ಬಾಣಿಕೊಲ, ಜೋತಿ ಕನ್ನೂರ, ಎಸ್.ಎಸ್. ಖೇಡದ, ಎ.ಎಸ್.ಹರವಾಳ, ಉಪಾಧ್ಯಕ್ಷ ವಿಠ್ಠಲ ಹೋತರ್ಿ, ಮತ್ತು ಎಸ್.ಡಿ.ಎಮ್.ಸಿ. ಸದಸ್ಯರು ಸೇರಿದಂತೆ ಶಿಕ್ಷಕ ಸಿಬ್ಬಂದಿ ವೇದಿಕೆಯಲ್ಲಿದ್ದರು.ನಂತರ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸತತವಾಗಿ ಮೂವತ್ತು ವರ್ಷಗಳಿಂದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನಕ್ಕಾಗಿ ಪಾದಯಾತ್ರೆ ಮೂಲಕ ತೆರಳಿ ತಮ್ಮ ಭಕ್ತಿಯ ಸೇವೆ ಸಲ್ಲಿಸುತ್ತಾ ಬಂದಿರುವ ಗ್ರಾಮದ ಸೋಮಶೇಖರ ಸಜ್ಜನ ಅವರನ್ನು ಮುಸ್ಲಿಂ ಬಾಂಧವರು ಸೇರಿಕೊಂಡು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಕೋರಿದರು. ಈ ವೇಳೆ ನಬಿಲಾಲ ಬಡೆಮ್ಗೋಳ, ಆರೀಫಪಾಶಾ ಕೆಂಭಾವಿ, ರಜಾಖ ಬಳಿಗಾರ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮಹಿಮೂದ ಕೆಂಭಾವಿ, ಬಸಪ್ಪ ರಕ್ಕಸಗಿ, ಸಿದ್ದಪ್ಪ ಕುದರಕಾರ, ಅಣ್ಣಪ್ಪಗೌಡ ಯಾಳವಾರ, ಮಲ್ಲಿಕಾರ್ಜುನ ರಕ್ಕಸಗಿ, ಸಂತೋಷ ರಕ್ಕಸಗಿ, ಗುರಲಿಂಗಪ್ಪ ಸಜ್ಜನ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಿಂದಗಿಯಲ್ಲಿ ಜರುಗಿದ ಖೋ-ಖೋ ತಂಡದ ಆಯ್ಕೆಯಲ್ಲಿ ಭಾಗವಹಿಸಿ, ಸಿದ್ದಮ್ಮ ಸತತವಾಗಿ ಎರಡನೆಯ ಬಾರಿಗೆ ಹಾಗೂ ಶೈಲಜಾ ಮೊದಲ ಬಾರಿಗೆ ವಿಶ್ವವಿದ್ಯಾಲಯ ಬ್ಲೂö್ಯ ಆಗಿ ಆಯ್ಕೆಯಾಗಿದ್ದಾರೆ.ಈ ವಿದ್ಯಾರ್ಥಿನಿಯರು ಮಾ.೩೦ರಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ಅಂತರ್ ವಿಶ್ವವಿದ್ಯಾಲಯಗಳ ಖೋ-ಖೋ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರ ವ್ಯಾಪ್ತಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಜನ ದಟ್ಟಣೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಿ ಸುಗಮಗೊಳಿಸುವ ಉದ್ದೇಶದಿಂದ ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ.ಈ ಕುರಿತು ಮಂಗಳವಾರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ವನಜ ಆದೇಶ ಹೊರಡಿಸಿದ್ದಾರೆ. ಪ್ರಸ್ತಾವಿತ ಗ್ರಾಮೀಣ ಠಾಣೆಯಲ್ಲಿ ೨೦೨೧ರಲ್ಲಿ ೩೩, ೨೦೨೨ರಲ್ಲಿ ೩೫, ೨೦೨೩ರಲ್ಲಿ ೩೩, ೨೦೨೪ರಲ್ಲಿ ೩೧, ೨೦೨೫ರಲ್ಲಿ ೧೯ ಒಟ್ಟು ೧೫೧ ಸಿಂದಗಿ ವೃತ್ತದಲ್ಲಿ ೪೦,೪೩,೪೪,೪೭,೧೮ ಅಪಘಾತ ಪ್ರಕರಣಗಳು ದಾಖಲಾಗಿತ್ತು. ೨೦೨೧ ರಿಂದ ೨೦೨೫ರವರೆಗೆ ಒಟ್ಟೂ ೩೪೩ ಅಪಘಾತ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ೨ ಪಿಎಸ್ಐ, ೪ ಎಎಸ್ಐ, ೧೨ಹೆಡ್ ಕಾನ್ಸ್ಟೆಬಲ್ ಹಾಗೂ ೨೪ ಸಿಬ್ಬಂದಿ ಸೇರಿ ೪೨ ವಿವಿಧ ದರ್ಜೆಯ ಹುದ್ದೆಗಳೊಂದಿಗೆ ಗ್ರಾಮೀಣ ಠಾಣೆ ಮಂಜೂರಾತಿ ಆದೇಶ ಹೋರಡಿಸಲಾಗಿದೆ. “ಸಿಂದಗಿ ಪಟ್ಟಣದಲ್ಲಿ ಗ್ರಾಮೀಣ ಭಾಗದ ಜನರ ಸುರಕ್ಷತೆಗಾಗಿ ನೂತನ ಸಿಂದಗಿ ಗ್ರಾಮೀಣ ಪೊಲೀಸ್ ಠಾಣೆ ನಿರ್ಮಾಣಕ್ಕೆ ಮಂಜೂರಾತಿ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅನಂತ ಧನ್ಯವಾದಗಳು. ಸಿಂದಗಿ ಮತಕ್ಷೇತ್ರದ ಕಾನೂನು…
ವಿಜಯಪುರ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರಿಗೆ ಕನಿಷ್ಟ ವೇತನದಡಿ ಇ.ಎಸ್.ಐ ಇ.ಪಿ.ಎಫ್ ಕಟಾವು ಮತ್ತು ವಿಮಾ ಕಂತಿನ ಸಮಗ್ರ ಮಾಹಿತಿಯನ್ನು ಕಾಲ ಕಾಲಕ್ಕೆ ಮಾಹಿತಿ ನೀಡಬೇಕು ಎಂದರು.ಕಾರ್ಮಿಕರ ಆರೋಗ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಮೇಲಿಂದ ಮೇಲೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಅವರಿಗೆ ಸುರಕ್ಷಿತ…
ಮಾ.೧೮ ರಿಂದ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಒಟ್ಟು ೧೩೭ ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮಾರ್ಚ್ ೧೮ ರಿಂದ ಎಸ್ ಎಸ್ ಎಲ್ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ಏಪ್ರಿಲ್ ೨ ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳು ಜಿಲ್ಲೆಯ ೭ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ನೋಡಲ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಆನಂದ ಕೆ. ಅವರು ತಿಳಿಸಿದ್ದಾರೆ.ತಾಲೂಕುವಾರು ಮಾರ್ಗಗಳನ್ನು ನಿಗದಿಪಡಿಸಿ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ, ಸುರಕ್ಷಿತವಾಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಮಾರ್ಗಸೂಚಿ ಅಧಿಸೂಚನೆಯಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ…
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ ಇಟಗಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಬಾಲ ವಿಕಾಸ ಅಕಾಡೆಮಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಹೇಳಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿ, ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾದ ವಾತಾವರಣ ಹೊಂದಿರುವ ಜಿಲ್ಲೆಯಲ್ಲಿ ಈ ಸಮ್ಮೇಳನ ನಡೆಸಲಾಗುವುದು.ಸಾಹಿತ್ಯದಲ್ಲಿ ಆಸಕ್ತಿ ಹೊಂದಿರುವ ೧೮ ವರ್ಷದೊಳಗಿನ ಎಲ್ಲ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವ ವಹಿಸಲು ಅವಕಾಶ ಕಲ್ಪಿಸಿ ಕೊಡಲಾಗುವುದು ಎಂದರು.ಅದರಲ್ಲಿ ವಿಶೇಷವಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ ಮಕ್ಕಳನ್ನು ಕೂಡ ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ…
ಹೊಟೇಲ್ ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ ಮೇಲೆ ದಾಳಿ ನಡೆಸಿ ೧೫ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೋಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು ೧೫ ಗೃಹ ಬಳಕೆ ಸಿಲಿಂಡರಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಮಾಡುವ ಹೊಟೇಲ್ ಮಾಲೀಕರಿಗೆ ಎಚ್ಚರಿಕೆ ನೀಡಿದರು.ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ್ ಗುಮಶೆಟ್ಟಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಶ್ರೀ ಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಂಸ್ಕೃತಿ ವೇದಿಕೆ ದೇವರಹಿಪ್ಪರಗಿ 2025-26 ನೇ ಸಾಲಿನ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಗುರುತಿಸಿ ಸಾಹಿತಿ ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ ರವರಿಗೆ ಮಾರ್ಚ್ 22 ರಂದು ದೇವರಹಿಪ್ಪರಗಿ ಪಟ್ಟಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
