Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮೇಲದಲ್ಲಿ ನಡೆದ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಆರ್.ನಾಡಗೌಡ ಅಭಿಮತ ಉದಯರಶ್ಮಿ ದಿನಪತ್ರಿಕೆ ಶಂ.ಗು.ಬಿರಾದಾರ ವೇದಿಕೆಆಲಮೇಲ: ಮಕ್ಕಳ ಸಾಹಿತ್ಯ ಸರ್ವ ಶ್ರೇಷ್ಠ ಸಾಹಿತ್ಯ ಈ ಸಾಹಿತ್ಯವು ಮಗು ಕೇಂದ್ರಿತ ಸಾಹಿತ್ಯವಾಗಿದೆ ಮಕ್ಕಳಲ್ಲಿ ವಿಭಿನ್ನ ರೀತಿಯ ಪ್ರತಿಭೆಗಳು ಇದ್ದೇ ಇರುತ್ತವೆ. ಮಕ್ಕಳಲ್ಲಿ ಅಡಗಿರುವ ಕೌಶಲ್ಯ ಸೃಜನಶೀಲತೆ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ವ್ಯಕ್ತಿತ್ವ ವಿಕಸನ ಉಜ್ವಲ ಭವಿಷ್ಯಕ್ಕಾಗಿ ಶ್ರೇಯೋಭಿವೃದ್ಧಿಗಾಗಿ ಉತ್ತೇಜನಗೊಳ್ಳಲು ಇಂಥಹ ಸಮ್ಮೇಳನದ ವೇದಿಕೆಗಳು ಪರಿಣಾಮಕಾರಿಯಾಗುತ್ತವೆ ಎಂದು 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮಕ್ಕಳ ಸಾಹಿತಿ ಬಿ.ಆರ್.ನಾಡಗೌಡ ಹೇಳಿದರು.ಪಟ್ಟಣದ ಶ್ರೀವೀಶ್ವೇಶ್ವರ ದೇವಸ್ಥಾನದ ಆವರಣದಲ್ಲಿ ಮಕ್ಕಳ ಸಾಹಿತ್ಯ ಸಂಗಮ ಏರ್ಪಡಿಸಿದ್ದ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಬಹಳಷ್ಟು ಬದಲಾಗಿದ್ದಾರೆ. ಅವರ ಕೈಯಲ್ಲಿ ಪುಸ್ತಕಗಳಿಗಿಂತ ಹೆಚ್ಚಾಗಿ ಮೊಬೈಲ್ ಮತ್ತು ವಿಡಿಯೋ ಗೇಮ್ಗಳು ಆವರಿಸಿಕೊಂಡಿವೆ. ಈ ಪರಿಸ್ಥಿತಿಯು ನಮ್ಮ ಮುಂದಿನ ಪೀಳಿಗೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎನ್ನುವುದನ್ನು…
ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲೂಕಾ ಮಟ್ಟದ ಚಡಚಣ, ಇಂಡಿ, ಆಲಮೇಲ, ದೇವರ ಹಿಪ್ಪರಗಿ, ಬಸವನ ಬಾಗೆವಾಡಿ, ನಿಡಗುಂದಿ, ಸಿಂದಗಿ,ಕೊಲ್ಹಾರ, ತಾಳಿಕೋಟಿ, ಮುದ್ದೆಬೀಹಾಳ, ತೀಕೋಟಾ-ಬಬಲೇಶ್ವರ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಚಡಚಣ ತಾಲೂಕಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾದ ಅಧ್ಯಕ್ಷ ರಮೇಶ ಬಿರಾದಾರ, ಪ್ರ.ಕಾರ್ಯದರ್ಶಿ ರಾಜಶೇಖರ ಡೋಣಜಮಠ, ಉಪಾಧ್ಯಕ್ಷ ಸಂಗಮೇಶ ಹೂಗಾರ, ಉಪಾಧ್ಯಕ್ಷ ಅನೀಲ ಕೊಡತೆ, ಕಾರ್ಯದರ್ಶಿ ಸಂಗಮನಾಥ ಚಿಂಚೊಳಿ, ಕಾರ್ಯದರ್ಶಿ ಪ್ರಶಾಂತ ಮುಂಡೇವಾಡಿ, ಕಾರ್ಯಕಾರಿಣಿ ಸದಸ್ಯ ಭಿಮರಾಯ ಕಾರಂಡೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಹಾಗೂ ಭ್ರಹತ್ ಹಗೂ ಮಧ್ಯಮ ಕೈಗಾರಿಕಾ ಸಚಿವ ಡಾ| ಎಮ್.ಬಿ. ಪಾಟೀಲ, ಕಾನಿ.ಪ. ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಕಾರ್ಯದರ್ಶಿ ಪುಂಡಳಲೀಕ ಬಾಳೋಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯದ ದಿಕ್ಷಾಬದ್ಧ ಕನ್ನಡ ಸಂಘಟನೆಯಾದ ಕದಂಬ ಸೈನ್ಯ ಸಂಘಟನೆ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಉಪಾಧ್ಯಕ್ಷರಾದ ಎನ್ ಸಿ ಕಾಂಬಳೆ ಹಾಗೂ ರಾಜ್ಯ ಕಾರ್ಯದರ್ಶಿಯಾದ ವಿನಾಯಕ್ ಸೊಂಡೂರ್ ಅವರ ಶಿಪಾರಸ್ಸು ಮೇರೆಗೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಆಯುಷ್ಮಾನ್ ರಮೇಶ್ ಬೇಕ್ರಿಯವರು ಈರಯ್ಯ ಶಾಂತಯ್ಯ ಹಿರೇಮಠರನ್ನು ಜಿಲ್ಲಾಧ್ಯಕ್ಷರನ್ನಾಗಿ ಹಾಗೂ ಸಾಯಬಣ್ಣ ಬಸಪ್ಪ ಹಳ್ಳಿ ಇವರನ್ನು ಜಿಲ್ಲಾ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿದ್ದಾರೆ.ಕರ್ನಾಟಕದ ನೆಲ ಜಲ ಭಾಷೆಗಾಗಿ ಹೋರಾಡುವುದು ನಾಡಿನ ಭಾಷೆಯ ಅಭಿಮಾನವನ್ನು ಬೆಳೆಸಿಕೊಂಡು ಶ್ರಮಿಸಲು ಸೂಚಿಸಿ ಸಂಘಟನೆಯ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಶ್ರಮಿಸಲು ಸೂಚಿಸಿ ಆದೇಶಿಸಿದ್ದಾರೆ.
ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ದೇಶವು ಕಂಡ ಅಪ್ರತಿಮ ಸ್ವಾತಂತ್ರ ಹೋರಾಟಗಾರ ವಾಲಿ ಚನ್ನಪ್ಪ ಉತ್ತರ ಕರ್ನಾಟಕದ ಲಿಂಗಾಯತ ಸಮಾಜಕ್ಕೆ ಸೇರಿದ ಧೀಮಂತ ವ್ಯಕ್ತಿ. ಅವರ ಬದುಕು-ಬವಣೆ, ಸಂಘರ್ಷ-ಚಿಂತನೆ, ಪ್ರಾಮಾಣಿಕತೆ-ರಾಷ್ಟ್ರ ಭಕ್ತಿ ನಮ್ಮ ಇಂದಿನ ಲೇಖನದ ಮುಖ್ಯ ಗುರಿ.ಬೈಲಹೊಂಗಲದ ಸಂಪಗಾವಿ ಗ್ರಾಮದಲ್ಲಿ 1910 ಸುಮಾರಿಗೆ ಜನಿಸಿದ ವಾಲಿ ಚೆನ್ನಪ್ಪ ದೇಶವು ಕಂಡ ಅಪ್ಪಟ ಕ್ರಾಂತಿಕಾರಿ. ಸ್ವಾತಂತ್ರ್ಯ ಗೋವಾ ವಿಮೋಚನೆ ಕರ್ನಾಟಕ ಏಕೀಕರಣ ಕರ್ನಾಟಕ ಗಡಿ ಭಾಗದಲ್ಲಿ ಕನ್ನಡ ಉಳಿಸುವ ಕ್ರಿಯೆ ಹೀಗೆ ಜೀವನದುದ್ದಕ್ಕೂ ಜನಪರ ಹೋರಾಟಗಾರರಾದ ಶ್ರೀ ವಾಲಿ ಚೆನ್ನಪ್ಪ ಅವರು 1986 ರಲ್ಲೀ ನಮ್ಮನ್ನು ಬಿಟ್ಟು ಬಯಲಾದರು. ಇಂತಹ ದೇಶ ಭಕ್ತನ ಬಗ್ಗೆ ತಿಳಿದುಕೊಳ್ಳುವ ಲೇಖನ ಇದಾಗಿದೆ.1942 ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಜಯಪ್ರಕಾಶ್ ನಾರಾಯಣ್ , ಅರುಣ ಅಸಫ್ ಅಲಿ , ರಾಮ ಮನೋಹರ ಲೋಹಿಯಾ ಅವರ ಜೊತೆಗೆ ನಮ್ಮ ಕಿತ್ತೂರು ನಾಡಿನ ಚೆನ್ನಪ್ಪವಾಲಿಯವರು ಕೆಲಸ ಮಾಡಿದ್ದು ಕನ್ನಡಿಗರು ತಿಳಿಯದೇ ಇರುವುದು ದುರಂತದ…
ಲೇಖನ- ಜಯಶ್ರೀ. ಅಬ್ಬಿಗೇರಿಆಂಗ್ಲ ಭಾಷಾ ಉಪನ್ಯಾಸಕರುಸ ಪ ಪೂ ಕಾಲೇಜುಹಿರೇಬಾಗೇವಾಡಿತಾ: ಜಿ: ಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಜೀವನದ ಜಂಜಾಟದೊಳಗೆ ಬಿದ್ದು ತಲೆ ಚಿಟ್ ಹಿಡಿದು ಹೋಗಿದೆ. ಬದುಕಿನ ತಾಪತ್ರಯಗಳನ್ನು ಕಂಡು ಮನಸ್ಸು ರೋಸಿ ಹೋಗಿದೆ. ಏನು ಮಾಡಬೇಕೆಂದು ತಿಳಿಯುತ್ತಿಲ್ಲ. ಅನ್ನೋದು ನಮ್ಮಲ್ಲಿ ಅನೇಕರ ಗೊಣಗಾಟ. ಈ ಸಮಸ್ಯೆಗಳಿಂದ ಅದ್ಯಾವಾಗ ಮುಕ್ತಿ ಸಿಗುತ್ತೋ ಎಂಬ ವಿಚಾರದೊಳಗೆ ಮುಳುಗಿರುವದೇ ಜೀವನ ಆಗಿಬಿಟ್ಟಿದೆ.ಹೀಗೆ ನಮ್ಮ ತಲೆ ಪ್ರತಿಕ್ಷಣ ಏನಾದರೂ ಒಂದನ್ನು ಯೋಚಿಸುತ್ತಲೇ ಇರುತ್ತದೆ. ಮಲಗಿಕೊಂಡಾಗಲೂ ಅದಕ್ಕೆ ವಿಶ್ರಾಂತಿ ಇಲ್ಲ. ಬಹಳಷ್ಟು ಸಾರಿ ಸಣ್ಣ ಸಣ್ಣ ವಿಚಾರಕ್ಕೂ ಅತಿಯಾಗಿ ಯೋಚಿಸಿ ಇತರರು ಅಪಹಾಸ್ಯ ಮಡುವಂತಹ ಪ್ರಸಂಗಗಳು ನಡೆಯುತ್ತವೆ. ಹೀಗೆ ಅಪಹಾಸ್ಯಕೊಳಗಾಗಬಾರದೆಂದು ಮತ್ತೆ ಮತ್ತೆ ವಿಚಾರ ಮಾಡುವದು ಸರಿಯೆನಿಸಿದರೂ ಇದು ಅನೇಕ ಬಾರಿ ಆತಂಕಕ್ಕೆ ತಳ್ಳುತ್ತದೆ. ಕೆಲವು ಬಾರಿ ಎಲ್ಲವೂ ಸರಿಯಾಗಿ ನಡೆಯುತ್ತಿದ್ದರೂ ಎಲ್ಲಿ ಕೆಲಸ ಅರ್ಧಕ್ಕೆ ನಿಂತು ಬಿಡುತ್ತೇನೋ, ಕೆಟ್ಟು ಬಿಡುತ್ತೆನೋ ಎಲ್ಲಿ ಮುಖಭಂಗಕ್ಕೆ ಒಳಗಾಗಬೇಕಾಗುತ್ತೆನೊ? ಎಂದು ಅತಿಯಾದ ಯೋಚನೆಗಳಿರುವ ಗೊಂದಲದ ಹೊಂಡದಲ್ಲಿ ಮುಳುಗಿ ನೋವು…
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ, ಫಾರ್ಮ್ ಹೌಸ್, ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಯರಝರಿ ಮನೆ, ಫಾರ್ಮ್ ಹೌಸ್, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ₹2.5 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕೋರ್ಟ್ ವಾರೆಂಟ್ ಪಡೆದು ಮಂಗಳವಾರ ಆಪಾದಿತ ಅಧಿಕಾರಿಗೆ ಸಂಬಂಧಿಸಿದ ಬಸವನ -ಬಾಗೇವಾಡಿ ತಾಲ್ಲೂಕಿನ ಕಣಕಾಲ ಗ್ರಾಮದ ಫಾರ್ಮ್ ಹೌಸ್, ಮುದ್ದೇಬಿಹಾಳದಲ್ಲಿರುವ ಮಾವನ ಮನೆ ಮತ್ತು ಕಚೇರಿ ಹಾಗೂ ವಿಜಯಪುರದ ನವರಸಪುರದಲ್ಲಿರುವ ಮನೆ, ಬ್ಯಾಂಕ್ ಲಾಕರ್ನಲ್ಲಿ ಶೋಧ ನಡೆಸಿದಾಗ ₹29.42 ಲಕ್ಷ ನಗದು, ಬೆಳ್ಳಿ, ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಅಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ಸೇರಿದಂತೆ ಅಂದಾಜು ₹2.5 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ ಎಂದು…
ವಿಜಯಪುರ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತ್ಯರ್ಥಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳಲ್ಲಿರುವ ದಾಖಲೆಗಳೊಂದಿಗೆ ಸರಿ ಹೊಂದಿಸಿಕೊಂಡು, ನಿಯಮಾನುಸಾರ ಕ್ರಮವಹಿಸಿ,ಅಧಿಕಾರಿಗಳು…
ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಸನ್ನಿವೇಶದಲ್ಲಿ ದೊಡ್ಡ ದೊಡ್ಡ ಉದ್ಯಮಿಗಳು ಯಶಸ್ವಿಯಾಗುವುದಕ್ಕೆ ಆಧ್ಯಾತ್ಮಿಕ ಸಾಧನೆಯು ಅತ್ಯಂತ ಸಹಾಯಕಾರಿಯಾಗಿದೆ ಎಂದು ಬೆಳಗಾವಿಯ ರಾಮಕೃಷ್ಣ ಮಿಶನ ಆಶ್ರಮದ ಪರಮ ಪೂಜ್ಯ ಮೋಕ್ಷಾತ್ಮಾನಂದಜಿ ಮಹಾರಾಜ್ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದ ಅವರು; ವಿವೇಕವೆಂದರೆ ಮಾತೃತ್ವ, ಭ್ರಾತೃತ್ವ ಹಾಗೂ ಸಮಾನತೆಯ ತತ್ವವಾಗಿದೆ. ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡ ನರೇಂದ್ರರು ಸ್ವಾಮಿ ವಿವೇಕಾನಂದರಾದರು. ಹೀಗಾಗಿ ವಿದ್ಯಾರ್ಥಿಯಲ್ಲಿಯ ವಿವೇಕ ಜಾಗೃತವಾದರೆ ಅವರೂ ಸಹ ವಿವೇಕಾನಂದರಾಗಬಹುದು. ಅದಕ್ಕಾಗಿ ಏಕಾಗ್ರತೆಯನ್ನು ಸಾಧಿಸಬೇಕು. ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾಡುವ ಕಾರ್ಯವನ್ನು ಪರಿಪೂರ್ಣ ಹಾಗೂ ದೋಷರಹಿತವಾಗಿ ಮಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಅದಕ್ಕೆ ಆಧ್ಯಾತ್ಮಿಕ ಸಾಧನೆಯು ನೆರವಾಗುತ್ತದೆ. ನಿರಂತರ ಧ್ಯಾನದಿಂದ ನಿತ್ಯವೂ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಈ ಕಾರಣದಿಂದಾಗಿಯೆ ಉದ್ದಿಮೆದಾರರು ಆಧ್ಯಾತ್ಮಿಕ ಸಾಧನೆಯನ್ನು ಅಳವಡಿಸಿಕೊಂಡು ಯಶಸ್ವಿ ಉದ್ದಿಮೆದಾರರಾಗಿ ಬೆಳೆದಿದ್ದಾರೆ. ಅದೇ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ವಾಣಿಜ್ಯ ಮಳಿಗೆಯಲ್ಲಿರುವ ಬಸವನಬಾಗೇವಾಡಿ ತಾಲೂಕು ಒಕ್ಕಲುತನ ಹಿಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ ಕಚೇರಿ ಮುಂಭಾಗ ಮಂಗಳವಾರ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಮಾರಾಟದ ನೋಂದಣಿ ಮಾಡಲು ಅಪಾರ ಸಂಖ್ಯೆಯ ರೈತರು ಸರದಿಯಲ್ಲಿ ನಿಂತಿರುವದು ಕಂಡುಬಂದಿತ್ತು.ಬಸವನಬಾಗೇವಾಡಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾರಾಟ ಕೇಂದ್ರದಲ್ಲಿ ಇಂದು ನೋಂದಣಿ ಆರಂಭವಾಗುತ್ತಿದ್ದ ವಿಷಯ ಅರಿತ ರೈತ ಬಾಂಧವರು ಈ ಕಚೇರಿ ಮುಂಭಾಗ ಸೋಮವಾರ ರಾತ್ರಿಯಿಂದಲೇ ಠಿಕಾಣಿ ಹೂಡಿದ್ದರು. ಬೆಳಗ್ಗೆ 8.30 ಗಂಟೆಗೆ ಆರಂಭ ನೋಂದಣಿ ಆರಂಭವಾಗುವ ಮುನ್ನ ಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆ ರೈತ ಬಾಂಧವರು ಸರದಿಯಲ್ಲಿ ತಾ ಮುಂದು, ನಾ ಮುಂದು ಎಂದು ಗದ್ದಲ ಆರಂಭಿಸಿದರು. ಇದನ್ನು ಅರಿತ ಪೊಲೀಸ್ ಸಿಬ್ಬಂದಿಗಳು ರೈತರನ್ನು ಸರದಿಯಲ್ಲಿ ನಿಲ್ಲುವಂತೆ ಕ್ರಮ ಕೈಗೊಂಡರು.ಮಧ್ಯಾನ್ಹದವರೆಗೂ ರೈತರ ಸರದಿಯಲ್ಲಿ ನಿಂತು 112 ರೈತರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರು.ತಾಲೂಕಿಗೆ ಒಟ್ಟು 4,520 ಕ್ವಿಂಟಾಲೆ…
ಬಸವನಬಾಗೇವಾಡಿಯಲ್ಲಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರಿಂದ ತಹಸೀಲ್ದಾರಗೆ ಮನವಿ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮತಕ್ಷೇತ್ರದ ಕೊಲ್ಹಾರ ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ.ಯಿಂದ ಹೊರಹೋಗುವ ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯವನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರು ಸೋಮವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಕೂಡಗಿ ಎನ್.ಟಿ.ಪಿ.ಸಿ. ವಿದ್ಯುತ್ ಸ್ಥಾವರ ಇದೆ. ಈ ಸ್ಥಾವರದಲ್ಲಿ ಕಲ್ಲಿದ್ದಲನ್ನು ಸುಟ್ಟು ನಂತರ ಅದರಿಂದ ಬರುವ ಬೂದಿಯನ್ನು ಸ್ಥಾವರ ಟ್ಯಾಂಕರ್ ಮೂಲಕ ಬೇರೆ ಬೇರೆ ಕಡೆ ಕಾರ್ಖಾನೆಗಳಿಗೆ ಹೋಗುತ್ತಿದೆ. ಬಸವನಬಾಗೇವಾಡಿ ಪಟ್ಟಣದ ಮೂಲಕ ಹಾದು ಹೋಗುವ ಈ ವಾಹನಗಳಿಂದ ಪಟ್ಟಣದಲ್ಲಿ ತುಂಬಾ ವಾಯು ಮಾಲಿನ್ಯವಾಗುತ್ತಿದೆ. ಇದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದೀಗ ಚಳಿಗಾಲ ಮಿತಿಮೀರಿದ್ದರಿಂದಾಗಿ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂತಹದರಲ್ಲಿ ಬೂದಿ ತುಂಬಿದ ಈ ಟ್ಯಾಂಕರ್ ವಾಹನಗಳು ಹಾದು ಹೋಗುವಾಗ ಹಾರುವ ಬೂದಿಯ ಮೂಲಕ ಅಸ್ತಮಾ ಮತ್ತು ಉಸಿರಾಟದ ತೊಂದರೆ ಇರುವ ಜನರಿಗೆ ಆರೋಗ್ಯ ಹಾನಿ ಉಂಟು ಮಾಡುವ ಸಾಧ್ಯತೆಯಿದೆ. ಕೆಲವೊಂದು…
