Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಲು ಮತದಾರರ ಪಾತ್ರ ಬಹು ಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಹೇಳಿದರು.೧೫ನೇ ರಾಷ್ಟ್ರೀಯ ಮತದಾರರ ದಿನಾಚರಣೆ ೨೦೨೫ ಅಂಗವಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿವರ್ಷ ಭಾರತದಲ್ಲಿ ಲಕ್ಷಾಂತರ ಜನರು ಹೊಸದಾಗಿ ಮತದಾನದ ಹಕ್ಕನ್ನು ಹೊಂದುವರು. ಅಂತಹ ಮತದಾರರಿಗೆ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.ಮತದಾನದಲ್ಲಿ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ಅಗತ್ಯವಿದೆ. ಚುನಾವಣೆ ಬಂದಾಗ ಮತದಾರರನ್ನು ಜಾಗ್ರತಗೊಳಿಸುವ ಕಾರ್ಯಗಳು ನಿರಂತರವಾಗಿ ಜರುಗಬೇಕು ಎಂದು ಅವರು ಹೇಳಿದರು.ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಬಿ. ಎಸ್. ರಾಠೋಡ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ,…
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಕ್ರೊ ಫೈನಾನ್ಸ್ ಹಾಗೂ ಚಿಟ್ ಫಂಡ್ಸ್ ಹಾವಳಿಗಳಿಂದ ಮಹಿಳೆಯರು ಅನುಭವಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರದಂದು ಜರುಗಿದ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಂಡ್ಯ ಜಿಲ್ಲೆಯಂತೆೆ ವಿಜಯಪುರ ಜಿಲ್ಲೆಯಲ್ಲಿಯೂ ಕೂಡ ಕೇಲವು ಫೈನಾನ್ಸ್ ಕಂಪನಿಗಳಿಂದ ತಡರಾತ್ರಿ ವರೆಗೂ ಮನೆಗೆ ಬಂದು ಕಂತು ತುಂಬಲು ಹಾಗೂ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿರುವ ಕುರಿತು ಇಲ್ಲಿಯ ಮಹಿಳೆಯರು ದೂರನ್ನು ನೀಡಿದ್ದು, ಈ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಎಲ್ಲ ಇಲಾಖೆಗಳಲ್ಲಿ ಆತಂರಿಕ ದೂರು ಸಮೀತಿ ರಚಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಕಳೆದ ಎರಡು ದಿನಗಳಿಂದ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ, ಮಹಿಳೆಯರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಸಣ್ಣ ಉದ್ಯಮಿದಾರರಿಗೆ ಉತ್ತೇ್ತಜಿಸಲು ೫ ಲಕ್ಷದ ವರೆಗಿನ ಸಹಾಯ ಸೌಲಭ್ಯಕ್ಕೆ ಪ.ಜಾ/ಪ.ಪಂ ದವರಿಂದ ಅರ್ಜಿ ಆಹ್ವಾನಿಸಿದೆ.ಈ ಯೋಜನೆಯಡಿ ಅಭ್ಯರ್ಥಿಗಳಿಗೆ ಒಂದು ತಿಂಗಳ ತರಬೇತಿ ನೀಡಿ ಮೋಬೈಲ್ ಕ್ಯಾಂಟಿನ್ ವಾಹನ ಖರೀದಿಸಲು ೫ಲಕ್ಷ ರೂ. ಸಹಾಯ ಧನ ನೀಡಲಾಗುವುದು. ತರಬೇತಿ ಕಾರ್ಯಾನುಷ್ಠನಕ್ಕೆ ಜಿಲ್ಲೆಯಲ್ಲಿ ೩ ಪ.ಪಂ ಮತ್ತು ೭ ಪ.ಜಾತಿ ಅಭ್ಯರ್ಥಿಗಳ ಗುರಿ ನಿಗದಿ ಪಡಿಸಲಾಗಿದೆ.ಆಸಕ್ತರು ಜ.೩೧ರ ಒಳಗಾಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೦೮೩೫೨-೨೫೦೩೫೯ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಪಿಯುಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಎಸ.ಎಸ್.ಪಿ ಪೋರ್ಟ್ನಲ್ಲಿ ಶುಲ್ಕ ಮರುಪಾವತಿಗೆ ಯೋಜನೆಯಡಿ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜ.೩೧ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.ಅರ್ಹ ಅಭ್ಯರ್ಥಿಗಳು : https://ssp.postmatric.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ :https://dom.karnataka.gov.inಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ “ಯುವನಿಧಿ” ಯೋಜನೆಯಡಿ ‘ವಿಶೇಷ ನೊಂದಣಿ ಅಭಿಯಾನ’ವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆ. ೧೫ರ ವರೆಗೆ ಹಮ್ಮಿಕೊಳ್ಳಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಲಿಗೆ ಹಾಗೂ ದೂ.ಸಂ ೦೮೩೫೨-೨೫೦೩೮೩ಗೆ ಸಂಪರ್ಕಿಸಬಹುದು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬ್ಯಾಂಕಿನ ಗ್ರಾಹಕರು ಮತ್ತು ಸಣ್ಣ ಸಣ್ಣ ವ್ಯಾಪಾರಿಗಳು ತಾವು ಅಲ್ಲಿಯೇ ಕುಳಿತುಕೊಂಡು ಕ್ಯೂಆರ್ ಕೋಡ್ ಮೂಲಕ ತಮ್ಮ ಖಾತೆಗೆ ಹಣವನ್ನು ಜಮಾ ಮಾಡಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ಪಟ್ಟಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಬಸವೇಶ್ವರ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿ ಹಮ್ಮಿಕೊಂಡ ಬ್ಯಾಂಕಿನ ಸಣ್ಣ ಸಣ್ಣ ವ್ಯಾಪಾರಸ್ಥ ಗ್ರಾಹಕರಿಗೆ ಕ್ಯೂಆರ್ ಕೋಡ್ ವಿತರಿಸಿ ಮಾತನಾಡಿದ ಅವರು, ಉತ್ತಮ ಗ್ರಾಹಕ ಸೇವೆಯನ್ನು ವಿಸ್ತರಿಸಲು ಮತ್ತು ಹೆಚ್ಚಿನ ಮಟ್ಟದ ಗ್ರಾಹಕರ ತೃಪ್ತಿಯನ್ನು ಸಾಧಿಸಲು ನಾವು ಉನ್ನತ ಗುಣಮಟ್ಟದ ಬ್ಯಾಂಕಿಂಗ್ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ಶ್ರೀ ಬಸವೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ಸಾಲದ ಯೋಜನೆ, ಠೇವಣಿ ಸೇರಿದಂತೆ ಅನೇಕ ಬ್ಯಾಂಕಿನ ಯೋಜನೆಗಳನ್ನು ಗ್ರಾಹಕರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬ್ಯಾಂಕಿನ ಗ್ರಾಹಕರು ಬ್ಯಾಂಕಿನ ಅಭಿವೃದ್ಧಿಗಾಗಿ ಸದಾ ನಮ್ಮೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದರು.ಈ ವೇಳೆ ಸಹಕಾರಿ ಅಭಿವೃದ್ಧಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಧಿಕಾರ ಎನ್ನುವುದು ಮುಳ್ಳಿನ ಹಾಸಿಗೆ ಇದ್ದಂತೆ. ಬಟ್ಟೆ ಮುಳ್ಳಿನ ಮೇಲೆ ಬಿದ್ದರು ಹರಿಯುತ್ತದೆ ಬಟ್ಟೆಯ ಮೇಲೆ ಮುಳ್ಳು ಬಿದ್ದರು ಕೂಡಾ ಹರಿಯುತ್ತದೆ. ಅದಕ್ಕೆ ಅಧಿಕಾರವಿದ್ದಾಗ ಪರೋಪಕಾರಿ ಕಾರ್ಯ ಮಾಡಿದಾಗ ಮಾತ್ರ ಹುದ್ದೆ ಅಲಂಕರಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಪಂಚಮಸಾಲಿ ಸಮಾಜದ ಅದ್ಯಕ್ಷ ಎಂ.ಎಂ.ಹಂಗರಗಿ ಹೇಳಿದರು.ಬ.ಬಾಗೇವಾಡಿಯ ಪಿಕಾರ್ಡ ಬ್ಯಾಂಕಿನ್ ಉಪಾದ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾರಣ ನಿಮ್ಮ ಆಯ್ಕೆಗೆ ಸಹಕರಿಸಿದ ಶಾಸಕರಿಗೆ ಯಾವುದೇ ರೀತಿಯ ಚ್ಯೂತಿ ಬರದ ಹಾಗೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಸಿಂದಗಿ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ನಿರ್ದೇಶಕ, ನಿವೃತ್ತ ಕೃಷಿ ಅಧಿಕಾರಿ ವ್ಹಿ.ಬಿ.ಕುರುಡೆ ಬಹುದಿನಗಳಿಂದ ಹಲವಾರು ಕ್ಷೇತ್ರಗಳಲ್ಲಿ ಕಾರ್ಯ ಮಾಡಿದ ಹಿನ್ನಲೆಯಲ್ಲಿ ಇಂದು ಪಿಕಾರ್ಡ ಬ್ಯಾಂಕಿನ್ ಉಪಾದ್ಯಕ್ಷರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾದ ಬೈರೊಡಗಿಯ ಸಾಹೇಬಗೌಡ ಉತ್ನಾಳ ಅವರಿಗೆ ಇನ್ನೂ ಹೆಚ್ಚಿನ ಹುದ್ದೆಗಳು ಲಭಿಸಲಿ ಹಾರೈಸಿದರು.ಈ ವೇಳೆ ಸನ್ಮಾನ ಸ್ವೀಕರಿಸಿದ ಪಿಕಾರ್ಡ ಬ್ಯಾಂಕಿನ್ ನೂತನ ಉಪಾದ್ಯಕ್ಷ ಸಾಹೇಬಗೌಡ ಉತ್ನಾಳ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡೋಹರ, ಸಮಗಾರ, ಮಚಿಗಾರ ಸಮುದಾಯ ಸಾಕಷ್ಟು ವರ್ಷಗಳಿಂದ ಚರ್ಮವನ್ನು ಹದ ಮಾಡುವ ಚರ್ಮದಿಂದ ತಯಾರಾಗುವ ಉತ್ಪನ್ನಗಳನ್ನು ತಯಾರಿಸುತ್ತಾ ಬಂದಿದ್ದಾರೆ. ಡೋಹರ ಸಮಾಜವನ್ನು ಅಲೇಮಾರಿ ಗುಂಪಿಗೆ ಸೇರಿಸಿ ಈ ಸಮುದಾಯಕ್ಕೆ ಅನ್ಯಾಯವೆಸಗಲಾಗಿದೆ. ಹಾಗಾಗಿ ಮತ್ತೇ ಈ ಸಮುದಾಯವನ್ನು ಚರ್ಮಕಾರರ ಗುಂಪಿಗೆ ಸೇರಿಸಬೇಕೆಂದು ವೀರಶೈವ ಡೋಹರ ಕಕ್ಕಯ್ಯ ಸಮಾಜದ ಗೌರವಾಧ್ಯಕ್ಷ ಕಿರಣ ಪರಶುರಾಮ ಕಟಕೆ ಹೇಳಿದರು.ಸಿಂದಗಿಯ ಡೋಹರ, ಸಮಗಾರ, ಮಚಿಗಾರ ಸಮಾಜದ ಮುಖಂಡರಿಂದ ತಹಶೀಲ್ದಾರರ ಅವರ ಮೂಲಕ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್, ಬೆಂಗಳೂರಿನ ಏಕ ಸದಸ್ಯ ವಿಚಾರಣಾ ಆಯೋಗ ಇವರಿಗೆ ಡೋಹರ ಸಮಾಜವನ್ನು ಅಲೇಮಾರಿ ಗುಂಪಿಗೆ ಸೇರಿಸಿ ಈ ಸಮುದಾಯಕ್ಕೆ ಅನ್ಯಾಯವೆಸಗಲಾಗಿದ್ದು, ಈ ಜಾತಿಯನ್ನು ಚರ್ಮಕಾರರ ಗುಂಪಿಗೆ ಸೇರಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿದ ಅವರು, ಡೋಹರ, ಮಚಿಗಾರ, ಸಮಗಾರ ಎಂಬ ೩ಹೆಸರುಗಳಿಂದ ಕರೆಯಲ್ಪಡುವ ತ್ರಿಮತಸ್ಥ ಚರ್ಮಕಾರ ವ್ಯಾಪ್ತಿಯಲ್ಲಿ ಬರುವ ೧೮ಜಾತಿಗಳ ಗುಂಪು ಮಾಡಬೇಕು. ಮಾದಿಗ ಸಮಾಜದಿಂದ ಬೇರ್ಪಡಿಸುವ ಮೂಲಕ ಸಾಮಾಜಿಕ, ಆರ್ಥಿಕ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಒಳ ಮೀಸಲಾತಿಗೆ ಅನುಗುಣವಾಗಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸರ್ಕಾರದಿಂದ ನೀಡುತ್ತಿರುವ ಪಡಿತರ ಆಹಾರದಲ್ಲಿ ನುಸಿ ಹುಳುಗಳು, ಗೊಂಡೆಗಳು ಬಂದಿದ್ದು ಫಲಾನುಭವಿಗಳು ಸರಕಾರದ ಹಾಗೂ ಅಧಿಕಾರಿಗಳ ವಿರುಧ್ಧ ಹರಿಹಾಯುತ್ತಿದ್ದಾರೆ.ಕಳೆದ ಎರಡು ತಿಂಗಳುಗಳಿಂದ ಕಳಪೆ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಉತ್ತರ ಕರ್ನಾಟಕದಲ್ಲಿ ಬೇಡಿಕೆ ಇರುವ ಜೋಳವನ್ನು ಪಡಿತರದಾರರಿಗೆ ನೀಡಲು ಸರ್ಕಾರ ತೀರ್ಮಾನಿಸಿ ಜೋಳವನ್ನು ನೀಡುತ್ತಿತ್ತು, ಆದರೆ ಕಳೆದ ಎರಡು ಮೂರು ತಿಂಗಳುಗಳಿಂದ ಜೋಳದಲ್ಲಿ ಗೊಂಡೆಗಳು, ನುಸಿ ಹುಳುಗಳು, ಚಿಕ್ಕ ಚಿಕ್ಕ ಕಲ್ಲುಗಳು ಸಹ ಬರುತ್ತಿವೆ ಎಂಬ ಆರೋಪವಿದೆ.ಶುಕ್ರವಾರ ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಂಘದ ಸಭಾಂಗಣದಲ್ಲಿ ಪಡಿತರ ವಿತರಿಸಲಾಗುತ್ತಿತ್ತು, ಜೋಳದಲ್ಲಿ ನುಸಿ ಹುಳುಗಳು ಗೊಂಡೆಗಳು ಬಂದಿದ್ದು, ಹಲವು ಪಡಿತರದಾರರು ಈ ಕುರಿತು ಅಂಗಡಿಯವರಿಗೆ ಪ್ರಶ್ನಿಸಿದ್ದಾರೆ, ನಮಗೆ ಏನು ಬರುತ್ತದೆ ಅದನ್ನೇ ನಾವು ಕೊಡುತ್ತಿದ್ದೇವೆ ಎಂದು ಪಡಿತರ ಹಂಚುವ ಸಿಬ್ಬಂದಿ ತಿಳಿಸಿದಾಗ, ಅಲ್ಲಿ ಪಡಿತರದಾರರು ತಹಸೀಲ್ದಾರ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.ಮಾಹಿತಿ ತಿಳಿದ ತಹಸಿಲ್ದಾರ್ ಬಿ.ಎಸ್.ಕಡಕಭಾವಿ ಆಹಾರ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಕೂಡಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಾಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜನೆವರಿ ೨೪ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಶಾಂತಾದೇವಿ ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಥಾವರಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ಪ್ರೊ.ಬಿ.ಕೆ.ತುಳಸಿಮಾಲ ಅವರು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ. ಅವರಿಗೆ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಬಿ.ಕೆ.ತುಳಸಿಮಾಲ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರ್, ವಿವಿಧ ವಿಭಾಗಗಳ ಮುಖ್ಯಸ್ಥರು/ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
