Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬೀದಿ ಬದಿಯ ವ್ಯಾಪಾರಿಗಳ ವಿಭಾಗದಿಂದ ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ, ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕು, ಬಸವೇಶ್ವರ ಅರ್ಬನ್ ಬ್ಯಾಂಕಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ, ನಿರ್ದೇಶಕರಿಗೆ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಬೀದಿ ಬದಿಯಲ್ಲಿ ನಿತ್ಯ ತಮ್ಮ ವ್ಯಾಪಾರ ಮಾಡಿಕೊಂಡು ತಮ್ಮ ಜೀವನ ನಿರ್ವಹಿಸುತ್ತಿರುವ ಬಾಂಧವರು ಒಗ್ಗೂಟ್ಟಿನಿಂದ ಸ್ಥಳೀಯ ವಿವಿಧ ಬ್ಯಾಂಕಿಗೆ ಆಯ್ಕೆಯಾದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಸನ್ಮಾನಿಸುತ್ತಿರುವದು ಶ್ಲಾಘನೀಯ ಸಂಗತಿ. ಇವರು ತಮ್ಮ ದುಡಿಮೆಯಿಂದ ಬಂದಿರುವದರಲ್ಲಿ ಪಾಲು ನೀಡಿ ನಮ್ಮ ಎಲ್ಲ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳನ್ನು ಸನ್ಮಾನಿಸುವ ಮೂಲಕ ತಮ್ಮ ಪಾತ್ರ ವಹಿಸಿ ಸನ್ಮಾನಿಸಿರುವದು ಎಲ್ಲರಿಗೂ ಸಂತಸ ತಂದಿದೆ ಎಂದರು.ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿ, ಬೀದಿ ಬದಿಯ ವ್ಯಾಪಾರಸ್ಥರು ಅಲ್ಪ ಬಂಡವಾಳ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ನೇತಾಜಿ ಎಂದು ಜನಪ್ರಿಯರಾಗಿ ಕರೆಯಲ್ಪಡುವ ಸುಭಾಷ್ ಚಂದ್ರ ಬೋಸ್ ಅವರು ಬ್ರಿಟೀಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಅತ್ಯಂತ ಪ್ರಮುಖ ಮತ್ತು ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸರ ಜಯಂತಿ ಕುರಿತು ಮಾತನಾಡುತ್ತಿದ್ದರು.ನೇತಾಜಿಯವರ ಅಚಲ ನಿರ್ಣಯ, ದೂರದೃಷ್ಟಿಯ ನಾಯಕತ್ವ ಮತ್ತು ಕ್ರಾಂತಿಕಾರಿ ವಿಚಾರಗಳು ಅವರನ್ನು ಧೈರ್ಯ ಮತ್ತು ದೇಶಪ್ರೇಮದ ಸಂಕೇತವನ್ನಾಗಿ ಮಾಡಿತು ಎಂದು ಹೇಳಿದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತ ಮಹಾನ್ ವ್ಯಕ್ತಿಯಾಗಿದ್ದರು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ ಮಾತನಾಡಿ ಬೋಸರು ಆಗಾಗ ಹೇಳುತ್ತಿದ್ದರು ನೀವು ನಮಗೆ ರಕ್ತ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೆಲವು ದಿನಗಳ ಹಿಂದೆ ವಿಜಯಪುರ ನಗರದ ಹೊರವಲಯದಲ್ಲಿ ಇಟ್ಟಂಗಿ ಬಟ್ಟಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ಅವರನ್ನು ಕೆಲಸಕ್ಕೆ ಕರೆದೊಯ್ದು. ಮಾಲಿಕ ಗ್ಯಾಂಗ್ ಕಟ್ಟಿಕೊಂಡು ಮನಬಂದಂತೆ ಥಳಿಸಿ ಮೃಗಿಯ ವರ್ತನೆ ಮೆರೆದಿರುವ ಘಟನೆ ಇಡೀ ಮಾನವ ಕುಲ ತಲೆತಗ್ಗಿಸುವ ವಿಷಯವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಂವಿಧಾನ ಜಾರಿಯಾಗಿ ೭೫ರ ಸುವರ್ಣ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದು ಅತ್ಯಂತ ಖೇದಕರ ಸಂಗತಿ. ದೌರ್ಜನ್ಯಕೋರರೆಲ್ಲರನ್ನೂ ಪೊಲೀಸ್ ಇಲಾಖೆ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ನೊಂದ ಕುಟುಂಬಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅಲ್ಲದೇ ಸದರಿ ದೌರ್ಜನ್ಯದಲ್ಲಿ ನೊಂದವರಿಗೆ ತಲಾ ೧೦ಲಕ್ಷ ರೂ. ಪರಿಹಾರ ಘೋಷಿಸಬೇಕು. ಸದರಿ ಇಟ್ಟಂಗಿ ಬಟ್ಟಿಯ ಪರವಾನಿಗೆ ರದ್ದು ಪಡಿಸಬೇಕು. ಹಾಗೂ ಜಿಲ್ಲೆಯ ಎಲ್ಲ ಇಟ್ಟಂಗಿ ಬಟ್ಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ…

Read More

ಆದಿಶೇಷ ಸಂಸ್ಥಾನ ಹಿರೇಮಠದ ೨೯ನೇ ಜಾತ್ರಾ ಮಹೋತ್ಸವ | ಡಾ.ಚಂದ್ರಶೇಖರ ಶ್ರೀಗಳ ೫೪ನೇ ವರ್ಷದ ಅನುಷ್ಠಾನದ ಸುರ್ವಣ ಮಹೋತ್ಸವ | ಪುರಾಣ ಮಹಾ ಮಂಗಲ | ಧರ್ಮಸಭೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರ ಪಂಚ ಗ್ಯಾರಂಟಿ ಯೋಜನೆಗೆ ಬಹಳಷ್ಟು ದುಡ್ಡು ಖರ್ಚಾಗುವ ಕಾರಣ ಆಯಾ ಭಾಗದ ಕಾರ್ಯ ಎಷ್ಟು ನಡೆಯಬೇಕಿತ್ತು ಅಷ್ಟು ಕಾರ್ಯ ನಡೆಯುತ್ತಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ವಿಷಾದವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ನೇ ಜಾತ್ರಾ ಮಹೋತ್ಸವ ಹಾಗೂ ರಾಜಯೋಗಿ ಡಾ.ಚಂದ್ರಶೇಖರ ಶ್ರೀಗಳವರ ೫೪ನೇ ವರ್ಷದ ಅನುಷ್ಠಾನದ ಸುರ್ವಣ ಮಹೋತ್ಸವ, ಶ್ರೀ ರೇವಣಸಿದ್ದೇಶ್ವರ ಮಹಾಪುರಾಣ ಮಹಾ ಮಂಗಲ ಹಾಗೂ ಧರ್ಮಸಭೆಯ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಧನ ಕನಕಾದಿ ವಸ್ತುಗಳು ಬಹಿರಂಗದ ಸಿರಿ. ಸತ್ಯ ಶಾಂತಿಗಳು ಆಂತರಿಕ ಸಿರಿ. ಹೊರಗಿನ ಸಿರಿಯನ್ನು ಕಳ್ಳರು ಕದಿಯಬಹುದು. ಆದರೆ ಅಂತರಂಗದ ಗುಣ ಸಿರಿಯನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ವೀರಶೈವ…

Read More

ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಕೃಷಿ ಆಧಾರಿತ ಮಂಡ್ಯ ಜಿಲ್ಲೆಯಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.ಈ ವಿಶ್ವವಿದ್ಯಾಲಯವು ಕೃಷಿ, ತೋಟಗಾರಿಕೆ ಮತ್ತು ಪಶುಸಂಗೋಪನೆ ಕೋರ್ಸ್‌ಗಳನ್ನು ನೀಡಲಿದ್ದು, ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಪ್ರದೇಶಗಳ ರೈತರಿಗೆ ಸಾವಯವ ಮತ್ತು ಧಾನ್ಯ ಕೃಷಿಗಾಗಿ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಿದೆ ಎಂದು ತಿಳಿಸಿದರು.ನಗರದ ಅರಮನೆ ಮೈದಾನದಲ್ಲಿ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.”ಭಾರತ ಕೃಷಿ ದೇಶ ಮತ್ತು ನಾವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಆಹಾರದ ಕೊರತೆ ಇತ್ತು. ಆದರೆ ಈಗ, ಭಾರತವು ಅನೇಕ ಆಹಾರ ಧಾನ್ಯಗಳನ್ನು ರಫ್ತು ಮಾಡುತ್ತಿರುವುದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸುಂದರ ಕೈಬರಹವು ಅಂಕ ಗಳಿಕೆಗೆ ಸಹಾಯ ಮಾಡುವದಲ್ಲದೇ ಕಲಿಕೆ ಮತ್ತು ಮಿದುಳಿನ ಅಭಿವೃದ್ಧಿಗೆ ನೆರವಾಗುವ ಒಂದು ಕೌಶಲವಾಗಿದ್ದು, ಅದು ವ್ಯಕ್ತಿಯ ತಿಳುವಳಿಕೆಯನ್ನು ಸುಧಾರಿಸುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಗುರುವಾರದಂದು ವಿಶ್ವ ಕೈಬರಹ ದಿನವನ್ನು ಉದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿಗಳು ಉತ್ತಮ ಕೈಬರಹ ಕೌಶಲ್ಯದಿಂದ ಸಂತೋಷ, ಆತ್ಮವಿಶ್ವಾಸ ಮತ್ತು ಸ್ಫೂರ್ತಿಯನ್ನು ಪಡೆಯುತ್ತಾರೆ. ಉತ್ತಮ ಕೈಬರಹವು ಮಕ್ಕಳ ಜೀವನದಲ್ಲಿ ಆತ್ಮ ವಿಶ್ವಾಸ, ಸೃಜನಶೀಲತೆ, ಕಲಿಕೆ ಮತ್ತು ಜ್ಞಾಪಕಶಕ್ತಿ ಹೆಚ್ಚಿಸುತ್ತದೆ. ಹಾಗಾಗಿ ಮಕ್ಕಳು ಸುಂದರವಾಗಿ ಬರೆಯುವ ರೂಢಿ ಮಾಡಬೇಕು ಎಂದು ಹೇಳಿದರು.ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ,ಕೈಬರಹವು ಭಾಷೆ, ಚಲನೆ, ಸ್ಮರಣೆ ಹಾಗೂ ಓದುವಿಕೆಗೆ ಸಂಬಂಧಿಸಿದ ಮಿದುಳಿನ ನರಗಳನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಾವು ಬರೆದ ಅಕ್ಷರದ ಗಾತ್ರಗಳು, ಪದಗಳ ಅಂತರ, ಅಕ್ಷರ ರೂಪಗಳು ನಮ್ಮ ಪ್ರಾಮಾಣಿಕತೆ, ಏಕಾಗ್ರತೆ, ಭಾವನಾತ್ಮಕ ಸ್ಥಿರತೆ, ಕೆಲಸ ನಿರ್ವಹಿಸುವ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಗ್ರಾಮ ಸೇವಾ ಸಾಮಾಜಿಕ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಸ್ಥೆ ಇಂಡಿ ಮತ್ತು ಸಮಾಜ ಕಲ್ಯಾಣ ಇಲಾಖೆ ಇಂಡಿ ಇವರ ಸಹಯೋಗದಲ್ಲಿ ಇಂಡಿ ತಾಲೂಕಿನ ಅಥರ್ಗಾ, ತಡವಲಗಾ ಮತ್ತು ತಾಂಬಾ ಗ್ರಾಮಗಳಲ್ಲಿ ಅಸ್ಪೃಶ್ಯತಾ ನಿವಾರಣೆ ಕುರಿತು ಬೀದಿ ನಾಟಕ ಮೂಲಕ ಜಾಗೃತಿ ಗೊಳಿಸಿದರು.ಬೀದಿ ನಾಟಕದಲ್ಲಿ ಇಂಡಿಯ ಸತೀಶ ಚವ್ಹಾಣ, ವಿನೋದ ಇಂಡಿ, ಹೊಸಪೇಟೆಯ ಗೋವಿಂದ ಬಂಡಿಹಳ್ಳಿ, ಹನುಮಯ್ಯ ವೆಂಕಟಾಪುರ,ಮಮತಮ್ಮ ತುಮಕುರ,ಹಿರಣ್ಯ ವಿಜಯಪುರ, ಮಂಜುನಾಥ ತುಮಕೂರ, ಪೂರ್ಣೀಮಾ ಬೈಲಹೊಂಗಲ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿದೇರ್ಶಕ ಪುಂಡಲೀಕ ಮಾನವರ, ಇಂಡಿ ತಾಲೂಕಾ ಸಮಾಜ ಕಲ್ಯಾಣ ನಿದೇರ್ಶಕ ಉಮೇಶ ಲಮಾಣಿ ಭಾಗವಹಿಸಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಸುರೇಶ ಕಾಂಬಳೆ ಇವರನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕರಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ರಾಜು ತಳವಾರ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹೊರವಲಯದ ಇಟ್ಟಂಗಿ ಭಟ್ಟಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಗೊಳಗಾದ ಕಾರ್ಮಿಕರನ್ನು ಜಿಲ್ಲಾಸ್ಪತ್ರೆಯಲ್ಲಿ ಇಂದು ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಭೇಟಿಯಾಗಿ ಸಾಂತ್ವನ ಹೇಳಲಾಯಿತು.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, ಅಮಾಯಕ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಇಟ್ಟಂಗಿ ಭಟ್ಟಿ ಮಾಲಿಕನಿಗೆ ಗಡಿಪಾರು ಮಾಡಬೇಕು. ಅವನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ರೀಇಯ ಘಟನೆಗಳು ಮರುಕಳಿಸದಂತೆ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಕಾರ್ಮಿಕರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕೆಂದು ಆಗ್ರಹಿಸಿದರು.ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ಕಾಲೇಬಾಗ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವ ಚವ್ಹಾಣ ಮಾತನಾಡಿ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ನೊಂದ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪೂರ, ರಾಘವೇಂದ್ರ ವಡವಡಗಿ, ಮಲ್ಲಿಕಾರ್ಜುನ ಮಡ್ಡಿಮನಿ, ಲಕ್ಷ್ಮಣ ಚಲವಾದಿ, ವಿಠ್ಠಲ ಸಂದಿಮನಿ, ಪರಶುರಾಮ ಪಾರಣ್ಣವರ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” (ಬೇಟಿ ಪಡಾವೋ ಬೇಟಿ ಬಚಾವೋ) ಯೋಜನೆಯು ೧೦ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ವಿನೂತನವಾಗಿ ದಶಮಾನೋತ್ಸವ ಸರಣಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” ಪ್ರತಿಜ್ಞಾ ವಿಧಿ ಬೋಧಿಸಿ, ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಲಿಂಗ ಪಕ್ಷಪಾತ ಹಾಗೂ ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟಬೇಕು. ಹೆಣ್ಣು ಮಕ್ಕಳ ಉಳಿವು ಮತ್ತು ಅವರ ರಕ್ಷಣೆ ಮಾಡಿ ಹೆಣ್ಣು ಲಿಂಗಾನುಪಾತ ಅಸಮಾನತೆ ತಡೆಯಬೇಕು ಹಾಗೂ ಹೆಣ್ಣು ಮಗುವಿಗೆ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಖಾತ್ರಿ ಪಡೆಸಿಕೊಳ್ಳುವಂತೆ ರ‍್ಯಾಲಿಯಲ್ಲಿ ಅವರು ಹೇಳಿದರು.ಪ್ರತಿ ವರ್ಷ ಶೇಕಡಾ ೦೨% ರಷ್ಟು ಹೆಣ್ಣು ಮಗುವಿನ ಜನನ ಪ್ರಮಾಣದಲ್ಲಿ ಸುಧಾರಣೆ, ಸಾಂಸ್ಥಿಕ ಹೆರಿಗೆ ಪ್ರಮಾಣದಲ್ಲಿ ಶೇಕಡಾ ೯೫% ಕ್ಕಿಂತ ಅಧಿಕಗೊಳಿಸುವುದು,…

Read More