Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾರ್ಮಿಕರ ಕಲ್ಯಾಣ & ಹಕ್ಕುಗಳ ರಕ್ಷಣೆ ಕುರಿತ ವಿಡಿಯೋ ಸಂವಾದದಲ್ಲಿ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ಪ್ರತಿಯೊಂದು ಇಟ್ಟಂಗಿ ಭಟ್ಟಿಗಳ ಮಾಹಿತಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಕಾರ್ಮಿಕರ ಕಲ್ಯಾಣ ಮತ್ತು ಹಕ್ಕುಗಳ ರಕ್ಷಣೆ ಕುರಿತು ಗುರುವಾರ ಬೆಳಿಗ್ಗೆ ೯.೩೦ಕ್ಕೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇತ್ತೀಚೆಗೆ ನಡೆದ ಇಟ್ಟಂಗಿ ಬಟ್ಟೆಯಲ್ಲಿ ಕಾರ್ಮಿಕರಿಗೆ ಹಲ್ಲೆ ಮಾಡಿದ ಘಟನೆ ಕುರಿತು ಜಂಟಿ ತಪಾಸಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಸಮಿತಿಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವೃತ್ತ ಆರಕ್ಷಕ ನಿರೀಕ್ಷಿಕರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮುಖ್ಯ ಅಧಿಕಾರಿಗಳು/ ಪಟ್ಟಣ ಪಂಚಾಯತಿ ಸದಸ್ಯರನೊಳಗೊಂಡು ಕಾರ್ಮಿಕ ನಿರೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿ ಕರ್ತವ್ಯ ನಿರ್ವಹಿಸುವಂತೆ ಅವರು ಹೇಳಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಗ ಗೆಣ್ಣೂರ, ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡಿ, ಅಬಿದ ಗದ್ಯಾಳ, ಜಿಲ್ಲಾ…
೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಹೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲಿ ಮಹಾಮಾರಿ ಕೊರೊನಾ ಬಂದಂತಹ ಸಂದರ್ಭದಲ್ಲಿ ಆದ ಸಾವು ನೋವುಗಳಿಗಿಂತ ರಸ್ತೆ ಅಪಘಾತಗಳಿಂದ ಸಂಬವಿಸುತ್ತಿರುವ ಸಾವು ನೋವುಗಳ ಪ್ರಮಾಣವು ಹೆಚ್ಚಾಗುತ್ತಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕಳವಳ ವ್ಯಕ್ತಪಡಿಸಿದರು.ಗುರುವಾರ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಹೆಯ ಕಾರ್ಯಕ್ರಮವನ್ನು ಸಸಿಗೆ ನೀರುನ್ನಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿ, ಕೋವಿಡ ಭಯದಿಂದ ಎರಡೆರಡು ಮಾಸ್ಕ್ ಧರಿಸುತ್ತಿದ್ದ ಜನರು; ರಸ್ತೆ ಅಪಘಾತದ ಭಯವಿಲ್ಲದೆ ಹೆಲ್ಮೇಟ್ ಧರಿಸದೆ ಬೈಕ್ ಸವಾರರು ತಮ್ಮ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ.ದೇಶ ಅಭಿವೃದ್ಧಿಯಾದಂತೆ ರಸ್ತೆಯಲ್ಲಿ ವಾಹನ ದಟ್ಟನೆಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ರಸ್ತೆ ಸುರಕ್ಷತೆಯನ್ನು ಅಳವಡಿಸಿಕೊಂಡು ವಾಹನ ಚಲಾಯಿಸಬೇಕು. ರಸ್ತೆ ಸುರಕ್ಷತೆಯಲ್ಲಿ ಇಲಾಖೆಗಳ ಜವಾಬ್ದಾರಿ ಅಷ್ಟೇ ಅಲ್ಲದೇ ಸಾರ್ವಜನಿಕರ ಜವಾಬ್ದಾರಿಗಳು ಸಹ ಅಷ್ಟೇ ಮಹತ್ವದಾಗಿದೆ ಎಂದು…
ಉದಯರಶ್ಮಿ ದಿನಪತ್ರಿಕೆ ಝಳಕಿ: ಸಮೀಪದ ಲೋಣಿ ಗ್ರಾಮದಲ್ಲಿ ಸಿದ್ದೇಶ್ವರ ಮೂರ್ತಿಯನ್ನು ಜಮಖಂಡಿ ತಾಲೂಕಿನ ಹನಗಂಡಿ ಗ್ರಾಮದಿಂದ ಲೋಣಿ ಬಿ ಕೆ ಗ್ರಾಮದವರೆಗೆ ಶಿವನಿಗೆ ಪ್ರಿಯವಾದ ನಂದಿ ಅಂದರೆ ಎತ್ತಿನ ಗಾಡಿಗಳಲ್ಲಿ ಪದಯಾತ್ರೆಯ ಮೂಲಕ ನೂತನ ಮೂರ್ತಿಗಳನ್ನು ತಂದು ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾವಿರಾರು ಕುಂಭ ಹೊತ್ತ ಸುಮಂಗಲೆಯರು ಮತ್ತು ವಾದ್ಯ ವೈಭವಗಳೊಂದಿಗೆ ಗ್ರಾಮಕ್ಕೆ ಸ್ವಾಗತಿಸಿ, ದೇವಾಲಯದಲ್ಲಿ ಹೋಮ ಹವನಾದಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು ಪೆ.3 ಸೋಮವಾರದಂದು ಜಗದ್ಗುರು ಪ್ರಸನ್ನ ರೇಣುಕ ಡಾ.ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಧರ್ಮಸಭೆ ನಡೆಯುತ್ತದೆ ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಕಾರ್ಯಾಧ್ಯಕ್ಷ ಕೆ ಎಸ್ ಪಾಟೀಲ, ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ದಿ.25 ಶನಿವಾರ ಪ್ರವಾಸ ಕೈಗೊಂಡು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.ಅಂದು ಮ.2ಗಂ. ಮಮದಾಪುರ ಎಂ.ಸಿ.ಆರ್.ಪಿ ಕೇಂದ್ರದಲ್ಲಿ ಸಿ.ಎಸ್.ಆರ್., ಶಾಸಕರ ಮತ್ತು ತಾ.ಪಂ ಅನುದಾನದಲ್ಲಿ ನಿರ್ಮಿಸಿದ ಮೂರು ಶಾಲಾ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸಮಾಜಕಲ್ಯಾಣ ಇಲಾಖೆಯಿಂದ ರೂ.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ ಭವನ ಹಾಗೂ ಕೆ.ಬಿ.ಜೆ.ಎನ್.ಎಲ್ ಎಸ್.ಟಿ..ಪಿ ಅನುದಾನದಲ್ಲಿ ರೂ.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಖಾಜಾ ಬಾಪುಸಾಹೇಬ್ ಮಠ ಸಮುದಾಯಭವನ ಉದ್ಘಾಟಿಸಲಿದ್ದಾರೆ.ನಂತರ ಮ.2.30ಗಂ. ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್. ಅನುದಾನದಲ್ಲಿ ಸರಕಾರಿ ಪದವಿ ಕಾಲೇಜು ಹಾಗೂ ಕಣಮುಚನಾಳ ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಸರಕಾರಿ ಪದವಿ ಕಾಲೇಜು ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಹಾಗೂ ತಿಕೋಟಾ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್. ಎಂ. ರೇವಣ್ಣ ಆದೇಶ ಹೊರಡಿಸಿದ್ದಾರೆ.ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್ ಗ್ರಾಮದ ಪ್ರಗತಿಪರ ರೈತ ಮಲ್ಲಪ್ಪ ಗೌಡಪ್ಪ ದಳವಾಯಿ ಮತ್ತು ತಿಕೋಟಾ ತಾಲೂಕಿನ ಬರಟಗಿ ಗ್ರಾಮದ ಪ್ರಗತಿಪರ ರೈತ ಹಾಗೂ ಯುವ ಉದ್ದಿಮೆದಾರ ಗುರುಪಾದಪ್ಪ ಸಿದ್ದನಗೌಡ ದಾಶ್ಯಾಳ ಅವರನ್ನು ಸಚಿವ ಎಂ. ಬಿ.ಪಾಟೀಲ ಅವರ ಶಿಫಾರಸ್ಸಿನ ಮೆರೆಗೆ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ನೂತನ ತಾಲೂಕಾ ಅಧ್ಯಕ್ಷರಿಗೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರಿಯ ನೇತಾಜಿ,ನಿಮ್ಮೆಲ್ಲರ ಕಠಿಣ ಪರಿಶ್ರಮ, ಹೋರಾಟದ ಫಲವಾಗಿ ನಾವಿಂದು ಸ್ವಚ್ಛಂದವಾಗಿ ಜೀವಿಸುತ್ತಿದ್ದೇವೆ. ಒಳ್ಳೆಯ ಆಹಾರ, ಆರೋಗ್ಯ, ಶಿಕ್ಷಣ ಮತ್ತಿತರ ಸೌಲಭ್ಯಗಳು ನಮಗೆ ನಿಮ್ಮಂತಹ ಸ್ವಾತಂತ್ರ್ಯ ಯೋಧರ ಕೃಪೆಯಿಂದ ದೊರೆತಿವೆ. ಅದಕ್ಕೆ ನಾವು ನಿಮಗೆ ಎಷ್ಟು ಋಣಿಯಾಗಿದ್ದರೂ ಸಾಲದು.ಹಾ0… ನಿಮ್ಮನ್ನು ವರ್ಷದಲ್ಲಿ ಮೂರು ಬಾರಿ ಮಾತ್ರ ನೆನೆಸಿಕೊಳ್ಳುತ್ತೇವೆ ನಾವು. ಸ್ವಾತಂತ್ರ್ಯೋತ್ಸವ ದಿನ, ಗಣರಾಜ್ಯೋತ್ಸವದ ದಿನ ಮತ್ತು ಶಾಲೆಗಳಲ್ಲಿ ನಡೆಯುವ ಫ್ಯಾನ್ಸಿ ಡ್ರೆಸ್ ಸ್ಪರ್ಧೆಗೆ ನಿಮ್ಮ ರೀತಿ ವೇಷಭೂಷಣ ಧರಿಸಿದಾಗ…. “ನನಗೆ ನಿಮ್ಮ ಒಂದು ಹನಿ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯವನ್ನು ಕೊಡಿಸುತ್ತೇನೆ… ಸ್ವಾತಂತ್ರ್ಯ ಎನ್ನುವುದು ಬೇಡುವುದಲ್ಲ ಅದು ಹಕ್ಕಿನಿಂದ ಪಡೆದುಕೊಳ್ಳುವುದು” ಎಂಬ ನಿಮ್ಮ ವಾಗ್ನುಡಿ ಸಾವಿರಾರು ಮಕ್ಕಳ ಬಾಯಲ್ಲಿ ಅನುರಣಿತಗೊಂಡಿದೆ. ಅದು ನಿಮ್ಮ ಮಿಲಿಟರಿ ಡ್ರೆಸ್ ಅತ್ಯಂತ ಶಿಸ್ತಿನ ಸಿಪಾಯಿಯಂತೆ ತೋರಿ ಪ್ರಶಸ್ತಿ ಸಿಗಬಹುದು ಎಂಬ ಆಸೆಯಿಂದ ನಮಗೆ ಧರಿಸಲು ನೀಡಲಾಗುತ್ತದೆ. ವಿಪರ್ಯಾಸ ಎಂದೆನಿಸಿದರೂ ಇದೇ ನಿಜವಾದ ಸತ್ಯ.ದೊಡ್ಡವರಾಗುತ್ತಾ ಬಂದಂತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇತ್ತೀಚೆಗೆ ವಿಜಯಪುರದಇಟ್ಟಂಗಿಬಟ್ಟಿ ಮಾಲಕರು ಮತ್ತು ಅವನ ಸಹಚರರಿಂದ ಕಾರ್ಮಿಕರ ಮೇಲೆ ನಡೆದ ಅಮಾನುಷ ಹಲ್ಲೆ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ವೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ದಲಿತ ಸೇನೆಯ ಅಧ್ಯಕ್ಷ ರವಿ ಹೋಳಿ ಮಾತನಾಡಿ, ಈ ಒಂದು ಘಟನೆ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಾಗಿದೆ. ಬಡ ಕೂಲಿ ಕಾರ್ಮಿಕರಿಗೆ ಬಡೆದಿರುವ ರೀತಿ ನೋಡಿದರೆ ಮನುಷ್ಯತ್ವ ಇಲ್ಲದ ರಾಕ್ಷಸರಂತೆ ವರ್ತಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಗಳು ಯಾವುದೇ ಸಮಾಜದವರಿರಲಿ ಅವರನ್ನು ಬಡಿದಿರುವ ವ್ಯಕ್ತಿ ಕೂಡ ಯಾವುದೇ ಸಮಾಜದನಾಗಿರಲಿ ಅಪರಾಧಿಗೆ ಉಗ್ರವಾದ ಶಿಕ್ಷೆ ಆಗಬೇಕು. ಇದರಲ್ಲಿ ಕಾಣದ ಕೆಲವು ರಾಜಕೀಯ ಕೈಗಳು ಮತ್ತು ಜಿಲ್ಲೆಯ ಪ್ರಭಾವಿ ನಾಯಕರು ಆರೋಪಿ ಪರವಾಗಿದ್ದು ಆರೋಪಿಗಳಿಗೆ ಬಚಾವ ಮಾಡುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯ ನಾಯಕರಿಗೆ ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಪೋಲಿಸ್ ಇಲಾಖೆ ಇದ್ಯಾವುದನ್ನು ಪರಿಗಣಿಸದೆ ಇನ್ನೊಮ್ಮೆ ಎಲ್ಲಿಯೂ ಇಂತ ಘಟನೆಗಳು ಆಗದಂತೆ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕಿನ ಆನೂರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಚೌಡಯ್ಯ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಪಂಡಿತ ತಳವಾರ, ಪ್ರಮುಖರಾದ ಬಾಬು ದೇವರಮನಿ, ಶಿವಶರಣ ತಳವಾರ, ಚಂದ್ರಕಾಂತ ಭೂಸನೂರ, ವಿರೇಶ ಘಾಣೂರ, ಗುರು ತಳವಾರ, ಸಂಜು ಘಾಣೂರ ಸೇರಿದಂತೆ ಗ್ರಾಮಸ್ಥರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡಲಾಯಿತು.ಪ್ರಾಚಾರ್ಯ ಮಾಣ ಕರಾವ್ ಕುಲಕಣ ð, ಉಪನ್ಯಾಸಕರಾದ ಡಾ. ಸಂತೋಷ ಹುಗ್ಗಿ, ಸೂರ್ಯಕಾಂತ ಉಮಾಪುರೆ, ಡಾ. ಸಾವಿತ್ರಿ ಕೃಷ್ಣ, ಡಾ. ಮಹ್ಮದ್ ಯೂನೂಸ, ಪ್ರವೀಣ, ಡಾ. ಶಾಂತಲಾ, ಡಾ. ಭಾರತಿ, ಡಾ. ಸಂಗಣ್ಣ ಸಿಂಗೆ, ಶ್ರೀದೇವಿ ರಾಠೋಡ, ಗೌರಿಶಂಕರ ಭುರೆ, ಹೀರೂ ರಾಠೋಡ, ಶರಣಬಸು ಇಕ್ಕಳಕಿ, ಡಾ. ಶಾಂತಪ್ಪ ಮೇಲ್ಕೇರಿ, ಮಡಿವಾಳ ಮುಗಳಿ, ಚಿದಾನಂದ, ಮಹೇಶ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಸಿದ್ದಿ ಸಾಧಕ ಅಂಬಿಗರ ಚೌಡಯ್ಯನವರ ಹೃದಯ ಸದಾಕಾಲವೂ ಸಾಮಾಜಿಕ ತಮಲುಗಳಿಗೆ ಮಿಡಿದಿದೆ ಎಂದು ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಹೇಳಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 905 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಸ್ರಾರು ವಚನಗಳನ್ನು ರಚಿಸಿ ಮನುಸ್ಮೃತಿಯ ಒಳಿತನ್ನು ಅಂಬಿಗರ ಚೌಡಯ್ಯನವರು ಬಯಸಿದರು ಎಂದರು. ಸಮಸಮಾಜದ ಹೊಂಗನಸ್ಸು ಮನಭಾವದಲ್ಲಿ ಹೊತ್ತಿ ಶೋಷಣೆಯ ತುಳಿತಕ್ಕೆ ಒಳಗಾದ ಜನರನ್ನು ಮೇಲೆತ್ತುವ ಜನಪರ ಕಾಯಕಕ್ಕೆ ಮುಂದಾಗಿ ಅವಿರತ ಶ್ರಮಿಸಿರುವ ನಿಜಶರಣ ಚೌಡಯ್ಯ ನಮಗೆಲ್ಲ ಬದುಕಿನ ವೇದ ತಿಳಿಸಿಕೊಟ್ಟ ಮಹಾನುಭಾವ ಎಂದರು.ಸಮ ಸಮಾಜ ಸೃಷ್ಟಿವಾದಾಗಲೇ ಸಕಲರಲ್ಲೂ ನೆಮ್ಮದಿಯ ಸಾಮರಸ್ಯ,ಶಾಂತಿ,ಕಾಂತಿ ಪ್ರಾಪ್ತಿವಾದೀತೆಂಬ ದಿವ್ಯತೆ ಜ್ಞಾನೋಕ್ತಿಯ ಸವಿಕನಸು ಕಂಡಿದ್ದ ಚೌಡಯ್ಯನವರು ನೇರ ನಡೆ,ನುಡಿಗೆ ಹೆಸರಾಗಿದ್ದರು. ಅವರಲ್ಲಿ ಅಪರಿಮಿತ ಜ್ಞಾನಯಿತ್ತು.ಅದು ಸಮಾಜಮುಖಿ ಕೆಲಸಗಳಿಗೆ ಬಳಕೆವಾಗಿತ್ತು.ಸಮಾನತೆಯ ಆಶಯ ಹೆಮ್ಮರವಾಗಿತ್ತು.ಮಹಾನ ವ್ಯಕ್ತಿತ್ವದ ಆದರ್ಶತನ ಇತ್ತು ಎಂದರು.ಹನ್ನೆರಡನೇ ಶತಮಾನದಲ್ಲಿ ಭಾಗಶಃ ಸಮಾಜದಲ್ಲಿ ತಾಂಡವಾಡುತ್ತಿದ್ದ ಜಾತಿ ವ್ಯವಸ್ಥೆಯ ಕಂದರದ ತಾರತಮ್ಯ…
