Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಆದೇಶದ ಮೇರೆಗೆ ಸಾಮಾಜಿಕ ಜಾಲತಾಣದ ತಾಲೂಕಾಧ್ಯಕ್ಷರನ್ನಾಗಿ ಹಣಮಂತ ಟಕ್ಕಳಕಿ ಅವರನ್ನು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ, ಅವಳಿ ಜಿಲ್ಲೆಯ ಉಸ್ತುವಾರಿ ಅಶೋಕ ಹಾರಿವಾಳ ನೇಮಕ ಮಾಡಿದರು. ನಂತರ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ರಜಕಾ ದರ್ಗಾ, ಶಂಕ್ರಪ್ಪ ದೊಡ್ಡಮನಿ, ಸಿದ್ದಪ್ಪ ಬೇಲಿ, ಶಾಸಪ್ಪ ಮಾದರ, ಕರೆಯಪ್ಪ ಶರಣರ, ರಾಜು ಬೇಲಿ, ರಾಜು ದಡ್ಡಿ, ಮಹಾಂತೇಶ ಬೇವಿನಗಿಡದ, ಕರೆಯಪ್ಪ ಹೊಸಮನಿ, ಬಸವರಾಜ ಹೂಗಾರ, ಭರತ ಗಾಯಕವಾಡ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಾ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ಜರುಗಿತು. ಅಧ್ಯಕ್ಷ ಸ್ಥಾನಕ್ಕೆ ಈರಣ್ಣ ಚನ್ನಬಸಪ್ಪ ಪಟ್ಟಣಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಹೇಬಗೌಡ ಶಾಂತಪ್ಪ ಉತ್ನಾಳ (ಯಾಳವಾರ) ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಚೇತನ ಬಾವಿಕಟ್ಟಿ ಅವರು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.ನಂತರ ಬಸವೇಶ್ವರ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿದ ಸನ್ಮಾನ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಈ ಸಲದ ಚುನಾವಣೆಯಲ್ಲಿ ನನ್ನನ್ನು ಪರಾಭವಗೊಳಿಸಬೇಕೆಂದು ಸಾಕಷ್ಟು ಪ್ರಯತ್ನಿಸಿದರೂ ನಾನು ಮಾಡಿರುವ ರೈತರ ಸೇವೆ, ವಿಶ್ವಗುರು ಬಸವೇಶ್ವರರ ಕೃಪಾಶೀರ್ವಾದದಿಂದ ಆಯ್ಕೆಯಾಗಿದ್ದೇನೆ. ಸಚಿವ ಶಿವಾನಂದ ಪಾಟೀಲ ಹಾಗೂ ನನ್ನ ನಡುವೆ ಯಾವಾಗಲೂ ಆತ್ಮೀಯ ಬಾಂಧವ್ಯವಿದೆ. ಈ ಬಾಂಧವ್ಯವನ್ನು ಯಾರೂ ಕೆಡಿಸಲು ಸಾಧ್ಯವಿಲ್ಲ. ಮತಕ್ಷೇತ್ರದಲ್ಲಿ ಯಾವಾಗಲೂ ನಾವು ಕೂಡಿಕೊಂಡು ಕ್ಷೇತ್ರದ ಜನತೆಯ ಸೇವೆ ಮಾಡುತ್ತೇವೆ. ನಮ್ಮ ಬ್ಯಾಂಕಿನ ಎಲ್ಲ ನಿರ್ದೇಶಕರು ಒಮ್ಮತದಿಂದ ನನ್ನನ್ನು ಮೂರನೆಯ ಬಾರಿಗೆ ಅಧ್ಯಕ್ಷನನ್ನಾಗಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಳಿಕೋಟೆ ತಾಲ್ಲೂಕಿನ ಕಲಕೇರಿ ಗ್ರಾಮದ ದಲಿತ ವ್ಯಕ್ತಿಯ ಕೊಲೆ, ಇಟ್ಟಿಗೆ ತಯಾರಿಕಾ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಘಟನೆಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿದ ದಸಂಸ ಪದಾಧಿಕಾರಿಗಳು ಜಿಲ್ಲೆಯಲ್ಲಿ ಜರುಗಿದ ಎರಡು ಘಟನೆಗಳ ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಹುಯೋಗಿ ತಳ್ಳೊಳ್ಳಿ ಮಾತನಾಡಿ, ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತರ ಮೇಲೆ ಹಲ್ಲೆ ಮಾಡಿ ಹತ್ಯೆಗೈದಿರುವ ವಿಷಯ ಖಂಡನೀಯ. ಮತ್ತು ವಿಜಯಪುರದಲ್ಲಿ ಇಟ್ಟಿಗೆ ತಯಾರಿಕಾ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆಯಾಗಿರುವುದು ಸಹ ಅಮಾನವೀಯ ಕೃತ್ಯವಾಗಿದೆ.ರಾಜ್ಯದಲ್ಲಿ ಅಕ್ರಮ ಚಟುವಟಿಕೆಗಳು ನಡೆದಿದ್ದು, ಹಾಡು ಹಗಲೇ ಇಂತಹ ದುಷ್ಕೃತ್ಯ ನಡೆಯುತ್ತಿವೆ. ಆಗಾಗ ದಲಿತರ ಮೇಲೆ ಅನ್ಯಾಯವಾಗುತ್ತಿದ್ದು, ರಕ್ಷಣೆ ಇಲ್ಲವಾಗಿದೆ. ಕೂಡಲೇ ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಕೊಳ್ಳಬೇಕು. ದಲಿತರಿಗೆ ಸೂಕ್ತ ರಕ್ಷಣೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಓಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳ್ಳಿ ಹೇಳಿದರು.ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ನಿಶ್ಚಿತ ಪಿಂಚಣಿ (ಔPS) ಜಾರಿ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ತಾಲೂಕಿನ ನೌಕರರು ಮುಖ್ಯ ಮಂತ್ರಿಗಳಿಗೆ ಪತ್ರ ಚಳುವಳಿ ಪ್ರಾರಂಭಿಸಿ ಮಾತನಾಡಿದ ಅವರು, ಅಧೀಕಾರಕ್ಕೆ ಬಂದು ಎರಡೂ ವರ್ಷಗಳು ಕಳೆದರೂ ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ವಿಳಂಬ ನೀತಿ ಅನುಸರುತ್ತಿರುವುದು ಖಂಡಿನೀಯ. ಇಡೀ ರಾಜ್ಯಾದ್ಯಂತ ಓಪಿಎಸ್ ಜಾರಿ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಅಂಚೆ ಪತ್ರಗಳನ್ನು ಹಾಕುವುದರ ಮುಖಾಂತರ ಪತ್ರ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದರು.ಈ ವೇಳೆ ತಾಲೂಕು ಅಧ್ಯಕ್ಷ ಬುಳ್ಳಪ್ಪ ಡಿ. ಪ್ರಧಾನ ಕಾರ್ಯದರ್ಶಿ ಶಿವಲಿಂಗ ಉಮ್ಮರಗಿ, ಕ್ಷೇತ್ರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ನಗರದ ಹೊರ ವಲಯದಲ್ಲಿ ಇತ್ತೀಚಗೆ ನಡೆದ ಕೂಲಿ ಕಾರ್ಮಿಕರ ಮೇಲಿನ ಹಲ್ಲೆ ನಾಗರೀಕ ಸಮಾಜ ತೆಲೆ ತಗ್ಗಿಸುವಂತೆ ಮಾಡಿದೆ. ಇಂತಹ ಅಮಾನವೀಯ ಕೃತ್ಯ ಎಸಗಿದ ಇಟ್ಟಂಗಿ ಬಟ್ಟಿಯ ಮಾಲೀಕ ಖೇಮು ರಾಠೋಡ ಹಾಗೂ ಸಂಗಡಿಗರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕೇವಲ ನಾಮಕಾವಸ್ಥೆ ಬಂದಿಸಿದರೆ ಸಾಲದು ಹಲ್ಲೆ ಮಾಡಿದವರ ಇಟ್ಟಿಗೆ ಬಟ್ಟಿಯನ್ನು ಸರಕಾರ ಮುಟ್ಟುಗೊಲು ಹಾಕಿಕೊಂಡು ಹಲ್ಲೆಗೋಳಗಾದ ಕುಟುಂಬದ ಕಾರ್ಮಿಕರಾದ ಸದಾಶಿವ ಮಾದರ, ಉಮೇಶ ಮಾದರ, ಸದಾಶಿವ ಮಾದರ ಅವರಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಬೇಕು. ಮೂವರು ಕಾರ್ಮಿಕರಿಗೆ ಸೂಕ್ತ ಭದ್ರತೆ ಹಾಗೂ ಸಂಪೂರ್ಣ ಚಿಕಿತ್ಸೆಯ ವೆಚ್ಚ ಹೆಚ್ಚಿನ ಚಿಕಿತ್ಸೆಯ ಜವಾಬ್ದಾರಿ ಹೊರಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಆಡಳಿತ ವ್ಯೆವಸ್ಥೆ ಹಾಳಾಗಿದೆ. ಮೂಲ ಅಸ್ಪೃಶ್ಯ ಜನಾಂಗದ ಮೇಲೆ ಪದೆ – ಪದೆ ಹಲ್ಲೆಗಳು ಆಗುತ್ತಿದ್ದು ಸರಕಾರ ಎಚ್ಛೆತ್ತುಕೊಂಡು ನ್ಯಾಯ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈಗಾಗಲೇ ಅಪರಾಧಿಗಳನ್ನು ಬಂದಿಸಿದ್ದು ಸ್ವಾಗತ. ಅದು ನಾಮಕಾವಸ್ಥೆ ಆಗದೆ ಕಠಿಣ ಕಾನೂನು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಬುಧವಾರ ಜರುಗಿತು. ಅಧ್ಯಕ್ಷರಾಗಿ ಚಂದ್ರಶೇಖರ.ಎಸ್. ಬೆಳ್ಳುಬ್ಬಿ, ಉಪಾಧ್ಯಕ್ಷರಾಗಿ ಈರಯ್ಯ.ಹ. ಮಠಪತಿ ಅವಿರೋಧವಾಗಿ ಆಯ್ಕೆಯಾದರು.ಒಟ್ಟು 12 ನಿರ್ದೇಶಕರ ನೇತೃತ್ವದ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ.ಎಸ್. ಬೆಳ್ಳುಬ್ಬಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಈರಯ್ಯ.ಹ. ಮಠಪತಿ ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿ ಎಲ್.ಆರ್. ಕೆಲವಡಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಕಲ್ಲಪ್ಪ.ಈ ಗಿಡ್ಡಪ್ಪಗೋಳ, ಕಲ್ಲಪ್ಪ.ಬ ಸೊನ್ನದ, ರಮೇಶ.ಸಂ ಗಣಿ, ಪರಸಪ್ಪ.ಹ ಬಾಟಿ, ಕಲಂದರ.ಮೈ ಕಂಕರಪೀರ, ಶ್ರೀಮತಿ ಅನ್ನಪೂರ್ಣ.ಈ ಜಿಡ್ಡಬಾಗಿಲ, ಶ್ರೀಮತಿ ಶೀವಗಂಗವ್ವ.ಅ ಗಣಿ, ಕಾಸಪ್ಪ.ಸಂ ಕುದುರಿ, ಹಣಮಂತ.ಬ ಕೊಠಾರಿ, ಶರಣಪ್ಪ.ಶಿ ಬಾಲಗೊಂಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಬಾಟಿ ಸಹಿತ ಅನೇಕರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಗದಗ: ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗದಗ ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಬುದಪ್ಪ ಅಂಗಡಿ ಅವರ ಗದುಗಿನಲ್ಲಿರುವ ಮನೆಗೆ ಬುಧವಾರ ಬೇಟಿ ನೀಡಿ ಆರೋಗ್ಯ ಕುಶಲೋಪರಿ ವಿಚಾರಿಸಿದರು.ಬುದಪ್ಪ ಅಂಗಡಿ ಅವರ 19 ವಯಸ್ಸಿನ ಸುಪುತ್ರ ಸಿದ್ದಲಿಂಗೇಶ್ವರ ಅಂಗಡಿ ಅಂಗವೈಕಲ್ಯತೆ ನೂನ್ಯತೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ಸಮಸ್ಯೆಗಳನ್ನು ಆಲಿಸಿದರು. ಸಿದ್ದಲಿಂಗೇಶ್ವರನ ಕೃಪಾದಯೆ ಈ ಜೀವಿತ ಸಿದ್ದಲಿಂಗೇಶ್ವರ ಜೀವದ ಮೇಲೆ ಬೀರಲಿ.ಆರೋಗ್ಯ ಪರತೆ ಸುಧಾರಿಸಲಿ ಎಂದು ಆಶಿಸಿ ಶುಭಹರಿಸಿದರು.ಅಂಗಡಿ ಅವರ ಮನೆಯಲ್ಲಿ ಶ್ರೀಗಳು ಪೂಜಾ,ಪ್ರಸಾದ ಸ್ವೀಕರಿಸಿದರು. ಈ ವೇಳೆ ಬೂದಪ್ಪ ಅಂಗಡಿ ಹಾಗೂ ಕುರ್ತಕೋಟಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸರೋಜಾ ಅಂಗಡಿ ದಂಪತಿಗಳಿಗೆ ಹೂಮಾಲೆ ಹಾಕಿ ಸ್ವಾಮೀಜಿಯವರು ಸತ್ಕರಿಸಿ ಆಶೀರ್ವದಿಸಿದರು.ಅಂಗಡಿಯವರ ಮನೆ ಹತ್ತಿರದಲ್ಲೇ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರಾದ ಆರ್.ಎಸ್.ಬುರಡಿ ಅವರ ನಿವಾಸ ಇದಿದ್ದರಿಂದ ಅವರು ಸಹ ಸಹಜವಾಗಿ ಆಗಮಿಸಿದರು. ಸಮಾಜದ ಪ್ರಮುಖರಾದ ಅಯ್ಯಪ್ಪ ಅಂಗಡಿ, ಬಸವರಾಜ ಗಡೇಪ್ಪನವರ, ಸಂತೋಷ…

Read More

ಉದಯರಶ್ಮಿ ದಿನಪತ್ರಿಕೆ ಗದಗ: ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗದಗ ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಬುದಪ್ಪ ಅಂಗಡಿ ಅವರ ಗದುಗಿನಲ್ಲಿರುವ ಮನೆಗೆ ಬುಧವಾರ ಬೇಟಿ ನೀಡಿ ಆರೋಗ್ಯ ಕುಶಲೋಪರಿ ವಿಚಾರಿಸಿದರು.ಬುದಪ್ಪ ಅಂಗಡಿ ಅವರ 19 ವಯಸ್ಸಿನ ಸುಪುತ್ರ ಸಿದ್ದಲಿಂಗೇಶ್ವರ ಅಂಗಡಿ ಅಂಗವೈಕಲ್ಯತೆ ನೂನ್ಯತೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ಸಮಸ್ಯೆಗಳನ್ನು ಆಲಿಸಿದರು. ಸಿದ್ದಲಿಂಗೇಶ್ವರನ ಕೃಪಾದಯೆ ಈ ಜೀವಿತ ಸಿದ್ದಲಿಂಗೇಶ್ವರ ಜೀವದ ಮೇಲೆ ಬೀರಲಿ.ಆರೋಗ್ಯ ಪರತೆ ಸುಧಾರಿಸಲಿ ಎಂದು ಆಶಿಸಿ ಶುಭಹರಿಸಿದರು.ಅಂಗಡಿ ಅವರ ಮನೆಯಲ್ಲಿ ಶ್ರೀಗಳು ಪೂಜಾ,ಪ್ರಸಾದ ಸ್ವೀಕರಿಸಿದರು. ಈ ವೇಳೆ ಬೂದಪ್ಪ ಅಂಗಡಿ ಹಾಗೂ ಕುರ್ತಕೋಟಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸರೋಜಾ ಅಂಗಡಿ ದಂಪತಿಗಳಿಗೆ ಹೂಮಾಲೆ ಹಾಕಿ ಸ್ವಾಮೀಜಿಯವರು ಸತ್ಕರಿಸಿ ಆಶೀರ್ವದಿಸಿದರು.ಅಂಗಡಿಯವರ ಮನೆ ಹತ್ತಿರದಲ್ಲೇ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರಾದ ಆರ್.ಎಸ್.ಬುರಡಿ ಅವರ ನಿವಾಸ ಇದಿದ್ದರಿಂದ ಅವರು ಸಹ ಸಹಜವಾಗಿ ಆಗಮಿಸಿದರು. ಸಮಾಜದ ಪ್ರಮುಖರಾದ ಅಯ್ಯಪ್ಪ ಅಂಗಡಿ, ಬಸವರಾಜ ಗಡೇಪ್ಪನವರ, ಸಂತೋಷ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕಾಲುವೆಗಾಗಿ ವಶಪಡಿಸಿಕೊಂಡಿದ್ದ ರೈತರ ಜಮೀನಿಗೆ, ನ್ಯಾಯಾಲಯ ನೀಡಿದ ತೀರ್ಪಿನಂತೆ ಪರಿಹಾರ ನೀಡದ ಕಾರಣ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಾರ್ಯಾಲಯದ ಎರಡು ಕಂಪ್ಯೂಟರ್ ಗಳನ್ನು ಬುಧವಾರ ಜಪ್ತಿ ಮಾಡಲಾಯಿತು.ಬಸವನಬಾಗೇವಾಡಿ ತಾಲ್ಲೂಕಿನ ನಂದಿಹಾಳ ಪಿಎಚ್ ಗ್ರಾಮದ ತಾರಾನಾಥ ದೊಡಬಸಪ್ಪ ದೇಸಾಯಿ ಹಾಗೂ ಮತ್ತೀತರರಿಗೆ ಸೇರಿದ ನಾಲ್ಕು ಎಕರೆ ಜಮೀನನ್ನು ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆಗಾಗಿ ವಶಪಡಿಸಿಕೊಳ್ಳಲಾಗಿತ್ತು.ಸರ್ಕಾರ ನಿಗದಿಪಡಿಸಿದ ಪರಿಹಾರಕ್ಕಿಂತಲೂ ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿ ರೈತ ತಾರಾನಾಥ ಮತ್ತೀತರರು ಕೋರ್ಟ್ ಮೊರೆ ಹೋಗಿದ್ದರು. ವಿಜಯಪುರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಾಲ್ಕು ಎಕರೆಗೆ ೧.೬೭ ಕೋಟಿ ರೂ ಪರಿಹಾರ ನೀಡುವಂತೆ ಆದೇಶಿಸಿ ೧೫-೦೯-೨೦೨೧ ರಲ್ಲಿ ತೀರ್ಪು ನೀಡಿತ್ತು. ಪರಿಹಾರ ಹಣ ರೈತರಿಗೆ ನೀಡುವವರೆಗೂ ವಾರ್ಷಿಕ ೧೫% ಬಡ್ಡಿಯನ್ನು ವಿಧಿಸಿತ್ತು. ತೀರ್ಪು ಪ್ರಕಟಿಸಿ ನಾಲ್ಕು ವರ್ಷ ಕಳೆದರೂ ರೈತನಿಗೆ ಪರಿಹಾರ ನೀಡದ ಕಾರಣ ಅದೇ ನ್ಯಾಯಾಲಯ, ವಿಶೇಷ ಭೂಸ್ವಾಧಿನಾಧಿಕಾರಿಗಳ ಕಾರ್ಯಾಲಯದ ಕಂಪ್ಯೂಟರ್ ಜಪ್ತಿಗೆ ಆದೇಶಿಸಿತ್ತು.ನ್ಯಾಯಾಲಯದ ಆದೇಶದಂತೆ ಬುಧವಾರ, ರೈತರ…

Read More

ಹೆಸ್ಕಾಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಂಜಿನಿಯರ್, ಲೈನ್ ಮ್ಯಾನ್ ಗಳು ಹಾಗೂ ಜನಪ್ರತಿನಿಧಿಗಳು ನೇರ ಸಂಪರ್ಕಕ್ಕೆ ಬರುವುದರ ಮೂಲಕ ವಿದ್ಯುತ್ ತೊಂದರೆಗಳನ್ನು ಸರಿಪಡಿಸಬಹುದು ಎಂದು ರಾಜ್ಯ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.ರಾಜ್ಯದ ಇಂದನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮದ್ಯಾಹ್ನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿಜಯಪುರ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಯ ವಿವಿಧ ವಿಷಯಗಳ ಚರ್ಚಿಸುವ ಕುರಿತು ಆಯೋಜಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಪಿಎಂ ಕುಸುಮ ಯೋಜನೆ’ ಅಡಿಯಲ್ಲಿ ಜಮೀನಿನಲ್ಲಿ ಸೋಲಾರ್ ಪಂಪ್ ಅಳವಡಿಸುವ ರೈತರಿಗೆ ೪೦ ಎಕರೆ ಭೂಮಿಯ ಅವಶ್ಯಕತೆ ಇರುವುದಾಗಿ…

Read More