Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಮಾದಿಗರ ಸಂಘ (ರಿ ) ವಿಜಯಪುರ ಗಾಂಧಿನಗರದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದ ಅಮಾನುಷವಾಗಿ ಕೂಲಿ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮಾನ್ಯ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಕರ್ನಾಟಕ ಮಾದಿಗ ಸಂಘದ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ್ ಅವರು ಮಾತನಾಡಿ, ವಿಜಯಪುರ ಗಾಂಧಿನಗರದಲ್ಲಿರುವ ( ಸ್ಟಾರ್ ಚೌಕ್) ಇಟ್ಟಂಗಿ ಬಟ್ಟಿಯಲ್ಲಿ ಪ್ರತಿದಿನ 600 ರೂಪಾಯಿ ಗೆ ಕೆಲಸ ಮಾಡುತ್ತಿದ್ದ 1) ಸದಾಶಿವ ಮಾದರ,2) ಸದಾಶಿವ ಬಬಲಾದ್ 3) ಉಮೇಶ್ ಮಾದರ ಅವರು ಸಾ / ಚಿಕ್ಕಲಕಿ, ತಾಲೂಕು ಜಮಖಂಡಿ ಜಿಲ್ಲಾ ಬಾಗಲಕೋಟೆಯವರಾಗಿದ್ದು ಈ ಮೂರು ಕೂಲಿ ಕಾರ್ಮಿಕರ ಮೇಲೆ ೧೬-೦೧-೨೦೨೫ ರಂದು ಊರಿನಿಂದ ಸಂಕ್ರಮಣ ಹಬ್ಬ ಮುಗಿಸಿಕೊಂಡು ಮರಳಿ ಕೆಲಸಕ್ಕೆ ಬಂದಾಗ ಇವರು ತಡವಾಗಿ ಬಂದಿದ್ದಾರೆ ಎಂದು ಇಟ್ಟಂಗಿ ಬಟ್ಟೆ ಮಾಲೀಕನಾದ, ಖೆಮು ರಾಥೋಡ್, ಮತ್ತು ಅವನ ಮಗನಾದ ಮೋಹನ್ ರಾಟೋಡ್, ಮತ್ತು ಇತರ ತಮ್ಮ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಡೊಂಕಮಡು ಗ್ರಾಮ, ಪಟ್ಟಣದ ಶಿರೋಳ ರಸ್ತೆಯಲ್ಲಿರುವ ಆಶ್ರಯ ಕಾಲೋನಿ ಮತ್ತು ಹಡಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬುಧವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಪರಿಶೀಲಿಸಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡೊಂಕಮಡು ಗ್ರಾಮಕ್ಕೆ ಬಸ್ಸಿನ ಕೊರತೆ, ಉದ್ಯೋಗ ಖಾತ್ರಿ ಬಗ್ಗೆ ಎಷ್ಟು ಜನಕ್ಕೆ ಕೆಲಸಾ ಕೊಡ್ತಾರೆ ಏನು ಅಂತಾ ಸರಿಯಾದ ಮಾಹಿತಿ ಯಾವ ಸಾರ್ವಜನಿಕರಿಗೂ ಇಲ್ಲ. ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ, ಶೌಚಾಲಯಗಳ ಕೊರತೆ, ಮುಖ್ಯ ರಸ್ತೆಯ ಸೇತುವೆ ತೊಂದರೆ, ಮೊಸಳೆ ಇದೆ ಎಂದು ದೂರಿದರೂ ಯಾರೊಬ್ಬರೂ ಪರಿಶೀಲಿಸದಿರುವದು, ಎಸ್‌ಸಿ ಎಸ್‌ಟಿ ಕಾಲೋನಿಗಳಲ್ಲಿ ರಸ್ತೆ ಇಲ್ಲ, ಕುಡಿಯುವ ನೀರಿಲ್ಲ, ಶುದ್ಧ ಕುಡಿಯುವ ನೀರಿನ ಘಟಕ ಇಲ್ಲ, ಲೈಬ್ರರಿ ಇಲ್ಲ, ಜಲಜೀವನ ಮಿಶನ್ ಮಿಶನ್ ಅಡಿ ಇರುವ ಪೈಪ್‌ಗಳಲ್ಲಿ ಎಲ್ಲೂ ನೀರು ಬರೊಲ್ಲ. ಕೋಟ್ಯಾಂತರ ರೂಪಾಯಿಗಳ ಎಸ್‌ಸಿ ಎಸ್‌ಟಿ ಫಂಡ್ಸ್ ಏನ್ಮಾತ್ತಿದ್ದಾರೆೆ? ಎಲ್ಲೆಲ್ಲಿಗೆ ಡೈವರ್ಟ ಮಾಡ್ತಿದ್ದಾರೆ? ಯಾರ ತಗೋತಾರೆ? ಎಂದು ಬೇಸರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಜಿಲ್ಲೆಯ ಬಸವನಗರದ ಖೇಮು ರಾಠೋಡ ಮಾಲೀಕತ್ವದ ಇಟ್ಟಂಗಿ ಬಟ್ಟಿಯಲ್ಲಿ ನಡೆದ ಹಲ್ಲೆ ಗಾಯಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಮಿಕರ ಯೋಗ್ಯಕ್ಷೇಮವನ್ನು ವಿಚಾರಿಸಿದರು. ಕಾರ್ಮಿಕರಿಗೆ ಅವರಿಗೆ ಪರಿಹಾರ ಹಣ ಮತ್ತು ಉದ್ಯೋಗ ನೀಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.ಇಟ್ಟಂಗಿ ಬಟ್ಟಿ ನೊಂದಣಿಯನ್ನು ರದ್ದು ಪಡಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಉಳಿದವರ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದೆ. ಕಾಲಕಾಲಕ್ಕೆ ಜಿಲ್ಲೆಯಲ್ಲಿರುವ ಇಟ್ಟಂಗಿ ಬಟ್ಟಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಯೋಗಕ್ಷೇಮ ವಿಚಾರಿಸಲು ಸಮೀತಿ ರಚಿಸಲಾಗಿದ್ದು, ತಹಶೀಲ್ದಾರ, ತಾಲೂಕು ಮುಖ್ಯ ನಿರ್ವಾಕ ಅಧಿಕಾರಿ, ಕಾರ್ಮಿಕಾಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಸ್ಥಳೀಯ ಸಂಘಟಕರು ಸೇರಿದಂತೆ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಶವಾಗಾರ ಹಾಗೂ ಇತರ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ…

Read More

ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದೆ. ಶೇ ೮೦ ರಷ್ಟು ಕೃಷಿ ಚಟುವಟಿಕೆಯಿಂದ ಆರ್ಥಿಕ ವ್ಯವಹಾರಗಳು ನಡೆಯುತ್ತಿವೆ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾದಲ್ಲಿ ಉದ್ಯೋಗ ಸೃಷ್ಟಿ, ಸಾರ್ವಜನಿಕ ವಹಿವಾಟು, ರಫ್ತು, ಆದಾಯ ಹೆಚ್ಚಿಗೆ ನಿರೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಬುಧವಾರ ನಗರದ ಸ್ಪೂರ್ತಿ ರೆಸಾರ್ಟನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರ ವ್ಯಾಪಾರ ಉತ್ತೇಜನಾ ಕೇಂದ್ರ, ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವು ಯೋಜನೆಯಡಿಯಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ನಮ್ಮ ಜಿಲ್ಲೆಯಲ್ಲಿರುವ ಸಂಪನ್ಮೂಲಗಳನ್ನು ಸದುಪಯೋಗ ಪಡಿಸಿಕೊಂಡು ಸರ್ಕಾರ, ಜಿಲ್ಲಾಡಳಿತ ಹಾಗೂ ವಿವಿಧ ಸಂಸ್ಥೆಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇ.ಪಿ.ಎಸ್.೯೫ ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ರೂ. ೭೫೦೦ +ಡಿ.ಎ. + ಮೆಡಿಕಲ್ ಬೇಡಿಕೆ ಈಡರಿಸಲೇಬೇಕೆಂದು ಆಗ್ರಹಿಸಿ ಸುಮಾರು ೩೦೦ಕ್ಕೂ ಹೆಚ್ಚು ಪಿಂಚಣಿದಾರರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಿ ಮೋದಿಜಿಯವರಿಗೆ ಹಾಗೂ ಸಂಸದ ರಮೇಶ ಜಿಗಜಿಣಗಿಯವರಿಗೆ ಅವರ ಕಾರ್ಯಾಲಯದಲ್ಲಿ ಮನವಿ ಸಲ್ಲಿಸಿದರು.ವೀರಕುಮಾರ ಗಡಾದ ಉಪಾಧ್ಯಕ್ಷ ರಾಷ್ಟ್ರೀಯ ಸಂಘರ್ಷ ಸಮಿತಿ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಿ ಕೇಂದ್ರ ಸರಕಾರದ ಗಮನ ಸೆಳೆಯುವಂತೆ ಕೋರಲಾಯಿತು.ಕೇಂದ್ರ ಸರಕಾರ ಈ ಬಜೆಟಿನಲ್ಲಿ ಕನಿಷ್ಠ ಪಿಂಚಣಿ ರೂ ೭೫೦೦ + ಡಿ.ಎ. + ಮೆಡಿಕಲ್ ಘೋಷಿಸಿ ಮಂಜೂರು ಮಾಡಲೇಬೇಕು ಇಲ್ಲದಿದ್ದರೆ ಈಗಾಗಲೇ ೭೦-೮೦ ವರ್ಷ ದಾಟುತ್ತಿರುವ ವೃದ್ಧ ಪಿಂಚಣಿದಾರರು ಉಗ್ರ ಹೋರಾಟಕ್ಕೆ ಇಳಿದು ಆಮರಣ ಉಪವಾಸದಂತಹ ಆಂದೋಲನಕ್ಕೆ ಈಗಾಗಲೇ ಸಿದ್ಧಮಾಡಿಕೊಂಡಿದ್ದಾರೆ. ಸರಕಾರ ಇಂತಹ ಸ್ಥಿತಿ ತಂದೊದಗಿಸದೇ ಕನಿಷ್ಠ ಪಿಂಚಣಿ ಹೆಚ್ಚಳ ಮಾಡಿ ದೇಶದ ವೃದ್ಧ ಪಿಂಚಣಿದಾರರನ್ನು ರಕ್ಷಿಸಬೇಕೆಂದು ಎಸ್.ಜೆ. ಗೌಡರ ರಾಷ್ಟ್ರೀಯ ಸಂಘರ್ಷ ಸಮಿತಿ ವಿಜಯಪುರದ ಅಧ್ಯಕ್ಷರು, ಕಾರ್ಮಿಕ ಮುಖಂಡರಾದ ಆಯ್.ಎ. ಮುಶ್ರೀಫ, ಗೋಪಾಲ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವ ಕಾರ್ಯಕ್ರಮ ವನ್ನು ಹೆಣ್ಣು ಮಗುವಿನ ಹುಟ್ಟು ಹಬ್ಬಮಾಡುವದರ ಮೂಲಕ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಿಡಿಪಿಒ ಶಂಭುಲಿಂಗ ಹಿರೇಮಠ ಜಯಶ್ರೀ ದೋಡಮನಿ ಅನುರಾದ ರಜಪೂತ ಮತ್ತು ಅಂಗವಾಡಿ ಶಿಕ್ಷಕರು ಶಾಲ ಶಿಕ್ಷಕರು ಇದ್ದರು.

Read More

ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ | ಆಪ್ತ ಸ್ನೇಹಿತ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿಚಡಚಣ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಹಲವಾರು ಭಾಗ್ಯಗಳು ಅವಶ್ಯಕತೆ ಇಲ್ಲ, ಎಂದು ಹಲವಾರು ಜನರು ಈ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಈ ಭಾಗ್ಯಗಳನ್ನೇ ಸದುಪಯೋಗಪಡಿಸಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಈ ನಿಟ್ಟಿನಲ್ಲಿ ಸಮೀಪದ ಕರ್ನಾಟಕ-ಮಹಾರಾಷ್ಟçದ ಗಡಿ ಅಂಚಿನ ಗ್ರಾಮದಲ್ಲಿ ಮಹಿಳೆಯೋಬ್ಬರು ಗೃಹಲಕ್ಷ್ಮಿ ಹಣದಿಂದ ಪತ್ರಾಸ್ ಮನೆಕಟ್ಟಿಕೊಂಡಿದ್ದಾರೆ ಎಂದರೆ ಭಾಗ್ಯಗಳು ಹೇಗೆ ಬಡವರ ಪಾಲಿಗೆ ಆಶಾಕಿರಣವಾಗಿವೆ ಎಂಬುದಕ್ಕೆ ಸಾಕ್ಷಿ.ಶಿರಾಡೋಣ ಗ್ರಾಮದ ನೀಲಾಬಾಯಿ ಗಂಗಣ್ಣ ಪಾಂಡ್ರೆ ಎಂಬ ಗೃಹಿಣಿ ತಮಗೆ ಬಂದ ಸುಮಾರು ೩೦ ಸಾವಿರ ರೂಪಾಯಿ ಗೃಹಲಕ್ಷ್ಮಿ ಹಣದೊಂದಿಗೆ ಇನ್ನಷ್ಟು ಹಣವನ್ನು ಹೊಂದಿಸಿಕೊಂಡು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಪತ್ರಾಸ್ ಮನೆ ನಿರ್ಮಿಸಿಕೊಂಡಿದ್ದಾರೆ.ಮನೆಗೆ “ಗೃಹಲಕ್ಷ್ಮಿ ನಿಲಯ” ಎಂದು ನಾಮಕರಣ ಮಾಡಿದ್ದೂ ಅಲ್ಲದೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಭಾವಚಿತ್ರವನ್ನು ಅಂಟಿಸಿ. ಕೆಳಗಡೆ ಸಿದ್ಧರಾಮಯ್ಯ ಕೃಪೆ ಎಂದು ಬರೆಸಿದ್ದಾರೆ.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ನೀಲಾಬಾಯಿ ದಂಪತಿ, ನಿತ್ಯ ಕೂಲಿ ಮಾಡಿ ಬದುಕುವ ನಮಗೆ ಸ್ವಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಳಗಾವಿಯಲ್ಲಿ ಇದೇ ಜ.೨೬ರಂದು ಹಮ್ಮಿಕೊಳ್ಳಲಾಗಿದೆ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.ದೇಶದ ಯುವಜನತೆ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದು, ಇದು ಕರ್ನಾಟಕದಲ್ಲಿಯೂ ಮತ್ತಷ್ಟು ವ್ಯಾಪಕವಾಗಿದೆ. ರಾಜ್ಯದ ಯುವಜನರಿಗೆ ಹೆಚ್ಚಿನ ಉದ್ಯೋಗವಕಾಶಗಳು, ಲಭ್ಯವಾಗುವಂತೆ ಮಾಡುವ ಕೆಲಸ ನಮ್ಮೆಲ್ಲರ ಮುಂದಿದೆ. ಇದನ್ನು ನಿರ್ವಹಿಸಬೇಕಾದ ಸರ್ಕಾರಕ್ಕೆ ತನ್ನ ಜವಾಬ್ದಾರಿಯನ್ನು ನೆನಪಿಸಿ, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ಮಾಡುವ ಬಗ್ಗೆ ಸ್ವಾಮಿ ವಿವೇಕಾನಂದರ ಜಯಂತಿಯ ಸಂದರ್ಭದಲ್ಲಿ “ಉದ್ಯೋಗಕ್ಕಾಗಿ ಕನ್ನಡಿಗರು – ಯುವಜನರ ಹಕ್ಕೊತ್ತಾಯ ಸಮಾವೇಶವನ್ನು” – ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಳಗಾವಿಯಲ್ಲಿ ಜ.೨೬ರಂದು ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ರಾಜ್ಯದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಿತಿ ಜಿಲ್ಲಾಧ್ಯಕ್ಷ ಅಶೋಕ್ ಜಾಧವ್. ಪ್ರದಾನ ಕಾರ್ಯದರ್ಶಿ ಲಕ್ಷ್ಮಣ ಚಡಚಣ. ಇಂಡಿ ಉಪಾಧ್ಯಕ್ಷ ಮಲ್ಲು ಬಿರಾದಾರ, ಸುರೇಶ್ ನಿಂಬೊಣಿ. ದೇಸು ಚವ್ಹಾಣ್ ಸದಸ್ಯರು ಕೋರಿದ್ದಾರೆ.

Read More

ಕಪ್ಪತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: “ಸೋಹಂ ಎಂದಿನಸದೇ ದಾಸೋಹಂ ಎಂದೆನಿಸಯ್ಯ” ಎಂಬ ಪ್ರಭುದೇವರ ಮಾತು ನಮಗೆಲ್ಲ ಮಾದರಿ ಮತ್ತು ಆದರ್ಶವಾಗಿದೆ ಎಂದು ಗದಗ ನ ಕಪ್ಪತಗುಡ್ಡದ ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು ನುಡಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಬಳಿಯ ಗಾರ್ಡನ್ ಜಾಗೆಯಲ್ಲಿ ವಿಶ್ವ ದಾಸೋಹ ದಿನಾಚರಣೆ ಅಂಗವಾಗಿ ಲಿಂ.ಹಾನಗಲ್ಲ ಕುಮಾರೇಶ್ವರ ಮಹಾಸ್ವಾಮಿಗಳು, ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಮಹಾಸ್ವಾಮಿಗಳು, ತಾಲೂಕಿನ ಮಡಿಕೇಶ್ವರ ಗ್ರಾಮದ ಲಿಂ.ಚನ್ನಣ್ಣ ದೇಸಾಯಿ ಅವರ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ಲಿಂಗಾಯತ ಸಮಾಜ ಮತ್ತು ಜೆಸಿ ಗೆಳೆಯರ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಶರಣ ಪರಂಪರೆಯಲ್ಲಿ ಕಾಯಕ ಮತ್ತು ದಾಸೋಹ ಎರಡೂ ಜೊತೆ ಜೊತೆಯಾಗಿ ಸಾಗುತ್ತವೆ. ಶರಣರು ತಮ್ಮ ಸುತ್ತಮುತ್ತಲಿನ ಸಮಾಜದ ಕೊಳೆಯನ್ನು ಅಂಟಿಸಿಕೊಳ್ಳದೇ ಪರಿಶುದ್ಧ ಜೀವನವನ್ನು ಸಾಗಿಸಿ ಕಾಯಕ ಮತ್ತು ದಾಸೋಹದ ಮೂಲಕ ಅನುಭಾವದ…

Read More