Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕದಲ್ಲಿ ಅನೇಕ ಪ್ರತಿಭೆಗಳಿದ್ದು, ಅವರ ಪ್ರತಿಭೆಗೆ ತಕ್ಕಂತೆ ಚಲನಚಿತ್ರದಲ್ಲಿ ಅವಕಾಗಳು ಸಿಗುತ್ತಿಲ್ಲ. ಸೂಕ್ತ ವೇದಿಕೆ ಸಿಕ್ಕರೆ ಉತ್ತರ ಕರ್ನಾಟಕದ ಕಲಾವಿದರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬುದನ್ನು ತೋರಿಸುತ್ತಾರೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ, ಚಲನಚಿತ್ರ ನಿರ್ದೇಶಕ ಪವನಕುಮಾರ ಒಡೆಯರ ಹೇಳಿದರು.ಅವರು ನಗರದ ಖಾಸಗಿ ಹೋಟೇಲ್‌ನಲ್ಲಿ ಪರಿಸರ ವೇದಿಕೆ ಹಾಗೂ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದ್ಧೋದ್ಧೇಶಗಳ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಉತ್ತರ ಕರ್ನಾಟಕದ ಭಾಗದಲ್ಲಿ ಚಾಲುಕ್ಯರು, ರಾಷ್ಟ್ರಕೂಟರು, ವಿಜಯನಗರ ಹಾಗೂ ಆದಿಲ್ ಶಾಹಿ ಸಾಮ್ರಾಜ್ಯ ಕಾಲದ ಅನೇಕ ಸ್ಮಾರಕಗಳಿದ್ದು ಜೊತೆಗೆ ದೇಶಗತಿ ಮನೆತನದ ಕೋಟೆ ಕೊತ್ತಲುಗಳಿದ್ದು, ಪ್ರಾಕೃತಿಕವಾಗಿ ಬಯಲುಸೀಮೆ ನಾಡಾಗಿರುವ ಉತ್ತರ ವಲಯವು ಚಲನ ಚಿತ್ರ ನಿರ್ಮಾಣಕ್ಕೆ ಪೂರಕವಾಗಿದೆ.ಇಲ್ಲಿನ ಸ್ಮಾರಕಗಳನ್ನು ಹಾಗೂ ಸಾಹಿತ್ಯ ಸಂಸ್ಕೃತಿ ಮತ್ತು ಜವಾರಿ ಭಾಷೆಯನ್ನು ಬಳಸಿಕೊಂಡು ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಕೇಂದ್ರಿಕೃತ ಚಲನಚಿತ್ರ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇಲ್ಲಿನ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.ಪರಿಸರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಡೋಹರ್ ಸಮುದಾಯವನ್ನು ೪ ನೇ ಗುಂಪಿನಲ್ಲಿ ಇರಿಸಲಾಗಿರುವ ಕ್ರಮವನ್ನು ಆಗ್ರಹಿಸಿ ಸಮಾಜಕ್ಕೆ ಆಗಿರುವ ಅನ್ಯಾಯಕ್ಕೆ ಮಿನಿ ವಿಧಾನಸೌಧ ಎದುರು ಸಮಾಜ ಬಾಂಧವರು ಪ್ರತಿಭಟಿಸಿದರು.ಭೀಮಾಶಂಕರ ಸಕ್ಕರೆ ಕಾರ್ಖಾನೆ ನಿರ್ದೇಶಕ ಮತ್ತು ನ್ಯಾಯವಾದಿ ಅಶೋಕ ಗಜಾಕೋಶ ಮಾತನಾಡಿ ಪರಿಶಿಷ್ಠ ಜಾತಿ ವರ್ಗೀಕರಣದಲ್ಲಿ ಡೋಹರ್ ಕಕ್ಕಯ್ಯ ಸಮುದಾಯವನ್ನು ಅವೈಜ್ಞಾನಿಕವಾಗಿ ೪ ನೇ ಗುಂಪಿನಲ್ಲಿ ಇರಿಸಲಾಗಿದೆ. ಸಮುದಾಯವು ಚರ್ಮ ಸಂಬಂದಿತ ಸಮುದಾಯವಾಗಿದ್ದು ಚರ್ಮ ಸಂಬಂದಿತ ಕಸಬು ಮಾಡುವ ಮಾದಿಗ ಹಾಗೂ ಸಮಗಾರ, ಚಮ್ಮಾರ ಮೋಚಿ ಜಾತಿಗಳಿದ್ದು ಅವರಿಗೆ ಒಂದನೇಯ ಗುಂಪಿನಲ್ಲಿ ಸೇರಿಸಿ ೬ ಪ್ರತಿಶತ ಮೀಸಲಾತಿ ನೀಡಿದ್ದಾರೆ ಎಂದರು.ನಿವೃತ್ತ ಉಪನ್ಯಾಸಕ ಸುರೇಶ ಕಟಕಕೊಂಡ ಮಾತನಾಡಿ, ಡೋಹರ್ ಕಕ್ಕಯ್ಯ ಸಮುದಾಯವನ್ನು ಅತಿ ಸಣ್ಣ ಮತ್ತು ಅಲೆಮಾರಿ ಜನಾಂಗ ಎಂದು ತಿಳಿದು ೮೯ ಸಮುದಾಯದಲ್ಲಿ ಸೇರ್ಪಡೆ ಮಾಡಿದ್ದಾರೆ ಕಾರಣ ಒಂದನೇಯ ಗುಂಪಿನಲ್ಲಿರಿಸಿ ಶೇಕಡಾ ೬ ಮಿಸಲಾತಿ ಒದಗಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಎಸ್.ಆರ್.ಪೋಳ , ಮಳಸಿದ್ದ ಗಜಾಕೋಶ, ಮಾರುತಿ ಇಂಗಳೆ, ಜಗದೀಶ ಗಜಾಕೋಶ, ಶಿವಾಜಿ ನಾರಾಯಣಕರ, ಶರತ ಗಜಾಕೋಶ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಧಾರವಾಡದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಶಿರಕನಹಳ್ಳಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ವರ್ಗದ ವಿದ್ಯಾರ್ಥಿನಿ ಪೂರ್ಣಿಮಾ ಕೆಂಭಾವಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾಗೂ ಯೋಜನಾಧಿಕಾರಿ ಭಾರತಿ ಶೆಟ್ಟರ ಅವರು ವಿಜೇತ ಪೂರ್ಣಿಮಾಳಿಗೆ ಪ್ರಶಸ್ತಿ ಪತ್ರ ಹಾಗೂ ೨೫೦೦೦ ರೂ.ಗಳ ಚೆಕ್ ನೀಡಿ ಗೌರವಿಸಿದ್ದಾರೆ.ರೈತರಾದ ತಂದೆ ರಮೇಶ ಹಾಗೂ ತಾಯಿ ಮಲ್ಲಮ್ಮಳ ಸುಪುತ್ರಿಯಾದ ಪೂರ್ಣಿಮಾ ಕೆಂಭಾವಿ-ಈ ವಿದ್ಯಾರ್ಥಿನಿಯ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಶಿಕ್ಷಣ ಸಂಯೋಜಕ ಪ್ರಕಾಶ ನಾಯಕ, ಬಿಆರ್‌ಪಿ ಎ.ಜಿ. ಚೌಧರಿ, ಸಿಆರ್‌ಪಿ ಸಂತೋಷ ನೆರಕಿ, ಮುಖ್ಯ…

Read More

ಭೂ ಪರಿಹಾರ ಬರದಿದ್ದರೂ ಕಾಮಗಾರಿ ಆರಂಭ | ಆತಂಕದಲ್ಲಿ ಭೂ ಮಾಲೀಕರು | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ! ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಾರಾಷ್ಟ್ರ ಕರ್ನಾಟಕ ಸಂಪರ್ಕಿಸುವ ೫೪೮ (ಬಿ) ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, ಭೂ ಮಾಲೀಕರಿಗೆ ಇದುವರೆಗೂ ಭೂ ಪರಿಹಾರವೇ ಜಮಾ ಮಾಡಿಲ್ಲ. ಆದರೆ ಕಾಮಗಾರಿ ಪ್ರಾರಂಭವಾಗಿದ್ದು ನಮಗೆ ಪರಿಹಾರ ಬರುತ್ತದೋ ಇಲ್ಲವೋ ಎಂಬ ಬಗ್ಗೆ ಭೂ ಮಾಲೀಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.ಈಗಾಗಲೇ ಮಹಾರಾಷ್ಟ್ರ ರಾಜ್ಯದ ಮುರಮ್ ಗ್ರಾಮದಿಂದ ಕರ್ನಾಟಕದ ವಿಜಯಪುರ ನಗರದವರೆಗೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಜಿಸಿಬಿ ಹಿಟಾಚಿ ಯಂತ್ರಗಳ ಮುಖಾಂತರ ಮಣ್ಣು ತೆಗೆದು ಅದಕ್ಕೆ ಗರಸು ತುಂಬುವ ಪ್ರಕ್ರಿಯೆ ನಡೆದಿದೆ. ಇನ್ನೂ ಹಲವೆಡೆ ಗರಸು ಸಿಗದೇ, ಮಣ್ಣು, ಗುಂಡುಕಲ್ಲುಗಳನ್ನು ತುಂಬಲಾಗುತ್ತಿದೆ.ಭೂ ಮಾಲೀಕರಿಗೆ ಪರಿಹಾರ ನೀಡದೆ ಕಾಮಗಾರಿ ಪ್ರಾರಂಭಿಸಬಾರದು ಎಂದು ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶ ನೀಡಿದೆ. ಆದರೂ ಸಹಿತ ಈ ರಸ್ತೆ ಹಿಡಿದ ಗುತ್ತಿಗೆದಾರ ಭೂ ಮಾಲೀಕರಿಗೆ ಪರಿಹಾರ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನಾವು ತಂತ್ರಜ್ಞಾನದಿಂದ ಎಷ್ಟೇ ಮುಂದುವರೆದರು ನಮ್ಮನ್ನು ನಾವು ಮೈಮರೆಯುತ್ತಿದ್ದೇವೆ ಈ ಮಾಯಾ ಜಗತ್ತಿಗೆ ನಾವು ಬಲೆಯಾಗಿದ್ದೇವೆ ಪ್ರತಿ ನಿಮಿಷಕ್ಕೆ ಒಂದು ಮಗು ಕಾಣಿಸುತ್ತದೆ ಹಾಗೆ ಪ್ರತಿ ನಿಮಿಷಕ್ಕೂ ಒಂದು ಹೆಣ್ಣು ಮಗು ಅತ್ಯಾಚಾರಕ್ಕೆ ಒಳಪಡುತ್ತದೆ ನಿಯಂತ್ರಿಸಲು ಜಾರಿಯಲ್ಲಿರುವ ಕಾನೂನುಗಳು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ವಿಜಯಪುರದ ಕುಮಾರೇಶ್ವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ರಮೇಶ ಎಚ್ ಸಂಗಾತಿ ಹೇಳಿದರು.ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಕುಮಾರೇಶ್ವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವಿಜಯಪುರ ಹಾಗೂ ಮೈ ಚಾಯ್ಸ್ ಫೌಂಡೇಶನ್ ರೆಡ್ ಅಲರ್ಟ್ ಹೈದರಾಬಾದ್ ಇವರ ಸಯೋಗದಲ್ಲಿ ಸುರಕ್ಷಿತ ಗ್ರಾಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರುದೇಶದಲ್ಲಿ ಮಕ್ಕಳ ಹಕ್ಕುಗಳ ಪರಿಸ್ಥಿತಿ ಚಿಂತಾ ಜನಕವಾಗಿದೆ ಹೀಗಾಗಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳನ್ನು ದೌರ್ಜನದಿಂದ ರಕ್ಷಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಸಂಘ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.ಯಾರಾದರೂ ಅಪರಿಚಿತರು ತೊಂದರೆ ಕೊಟ್ಟರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕದ ಹೆಸರಾಂತ ಲೇಖಕ, ಸಾಹಿತಿ, ರಂಗಕರ್ಮಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತಿಚೆಗೆ ಆತ್ಮೀಯವಾಗಿ ಭೇಟಿಯಾದರು.ಈ ವೇಳೆ ಗಣೇಶ ಅಮೀನಗಡ ತಮ್ಮ ಕೃತಿಗಳಾದ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ ಸಚಿವ ಎಮ್ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರ‌ “ಮುಖ ಪುಸ್ತಕದ ಮರೆಯದ ಮುಖಗಳು” ಲೇಖನಗಳ‌ ಸಂಕಲನ ಪುಸ್ತಕಗಳು ವಿಶ್ವಪ್ರಕಾಶ ಅವರಿಗೆ ಕೊಡುಗೆಯಾಗಿ ನೀಡಿದರು.ಈ ವೇಳೆ ಸಿಂದಗಿ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ, ವರದಿಗಾರ ಮಹಾಂತೇಶ ನೂಲಾನವರ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಗುಮ್ಮಟ ನಗರಿ ವರದಿಗಾರ ಇಸ್ಮಾಯಿಲ್ ಶೇಖ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹೊರವಲಯ ಮಹಾತ್ಮ ಗಾಂಧಿನಗರ, ಸ್ಟಾರ್‌ಚೌಕ್ ಹತ್ತಿರ ಇಟ್ಟಗೆಬಟ್ಟಿಯಲ್ಲಿ ಹೊಟ್ಟೆಪಾಡಿಗಾಗಿ ಕೆಲಸಕೆ ಬಂದ ಕಾರ್ಮಿಕರಾದ ಜಮಖಂಡಿ ತಾಲೂಕಿ ಚಿಕ್ಕಲಕಿ ಕ್ರಾಸ್‌ನ ಸದಾಶಿವ ಮಾದರ, ಉಮೇಶ ಮಾದರ, ಸದಾಶಿವ ಬಬಲಾದಿ ಇವರನ್ನು ಮರ‍್ನಾಲ್ಕು ದಿನ ಕೂಡಿ ಹಾಕಿ ಅಮಾನವೀಯವಾಗಿ ಥಳಿಸಿರುವುದು ಅತ್ಯಂತ ಹೀನ ಕೃತ್ಯವಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಅಸಂಘಟಿತ ಕಾರ್ಮಿಕ ಪ್ರಕೋಸ್ಠಿಯ ರಾಜ್ಯ ಸದಸ್ಯರಾದ ಸಚೀನ ಶಿ. ಬೊಂಬಲೆ ಹೇಳಿದರು.ಅವರು ನಗರದ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೋಂದ ಕಾರ್ಮಿಕರಿಗೆ ಹಣ್ಣು ಹಂಪಲು ವಿತರಿಸಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇಟ್ಟಿಗೆ ಬಟ್ಟೆ ಮಾಲೀಕ ಹಾಗೂ ಗುಂಡಾ ವರ್ತನೆ ತೋರಿದ ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕೆಂದು ಸಾಂತ್ವಾನ ಹೇಳಿದರು. ಪೆಟ್ಟು ತಿಂದವರಿಗೆ ಸಾಂತ್ವಾನ ವ್ಯಕ್ತಪಡಿಸಿ ಕಾರ್ಮಿಕ ಇಲಾಖೆಯಿಂದ ಹಾಗೂ ಸರ್ಕಾರದಿಂದ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವುದಲ್ಲದೇ ದುಸ್ಕೃತ್ಯ ಎಸಗಿದವರನ್ನು ಕಠೀಣ ಶಿಕ್ಷೆ ನೀಡಬೇಕು.ಜಿಲ್ಲಾ ಅಸಂಘಟಿತ ಕಾರ್ಮಿಕ ಸಹ ಸಂಚಾಲಕರಾದ ಸಂಗಮೇಶ ಮ.…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಕಾಮಗಾರಿಯ ಬಿಲ್ ಪಾವತಿ ಮಾಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ವೃತ್ತದಲ್ಲಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದರು.ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಿಲ್ ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿ ಧರಣಿ ನಿರತರಿಗೆ ಧರಣಿ ಹಿಂಪಡೆಯುವಂತೆ ಮನವೊಲಿಸಿದರು. ಶಾಸಕರ ಮಾತಿಗೆ ಬೆಲೆ ನೀಡಿದ ಧರಣಿ ನಿರತರು ತಮ್ಮ ಹೋರಾಟವನ್ನು ಹಿಂಪಡೆದರು.ಈ ವೇಳೆ ಧರಣಿ ನಿರತರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ, ಪರಶುರಾಮ ಮುರಾಳ, ತಹಸೀಲ್ದಾರ ಬಲರಾಮ ಕಟ್ಟಿಮನಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಸೇರಿದಂತೆ ಹಲವರು ಇದ್ದರು.

Read More

ಮಾತಾಲಕ್ಷ್ಮಿ ಪಬ್ಲಿಕ್ ಶಾಲೆಯ ೮ನೆಯ ವರ್ಷದ ನಾಟ್ಯಕಲಾ ಉತ್ಸವದಲ್ಲಿ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣವು ಶಿಕ್ಷಣ ಕಾಶಿ ಎಂದೇ ಹೆಸರಾಗಿದೆ. ಅದನ್ನು ನಾವು ನೀವೆಲ್ಲರೂ ಕಾಪಾಡಿಕೊಂಡು ಹೋಗಬೇಕು ಎಂದು ಸಿಎಂ ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಗೋಲಗೇರಿ ರಸ್ತೆಯಲ್ಲಿರುವ ಮಾತಾಲಕ್ಷಿö್ಮ ಪಬ್ಲಿಕ್ ಶಾಲೆಯ ೮ನೆಯ ವರ್ಷದ ನಾಟ್ಯಕಲಾ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನೀಡುವುದು ಎಂದರೆ ಪಠ್ಯಪುಸ್ತಕದಲ್ಲಿನ ಅಂಶಗಳನ್ನು ಮಾತ್ರ ಮಕ್ಕಳಿಗೆ ಕಲಿಸುವುದಲ್ಲ. ಅದರ ಜೊತೆಗೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಅವಕಾಶ ನೀಡುವುದು ಮತ್ತು ಉತ್ತಮ ಚಾರಿತ್ರ್ಯವಂತರಾಗಲು ಬೇಕಾದ ಪರಿಸರ ನಿರ್ಮಾಣ ಮಾಡಬೇಕು ಎಂದರು.ಈ ವೇಳೆ ಅಮೇರಿಕಾದ ಟೆಕ್ಸರ್ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಭೀಮನಗೌಡ ಪಾಟೀಲ ಮಾತನಾಡಿ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಜಗೊಳ್ಳಬೇಕಾದರೆ ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಷಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂಜೀವ ದೇಶಪಾಂಡೆ ವಹಿಸಿದ್ದರು. ಕಾರ್ಯಕ್ರಮವನ್ನು ಪುರಸಭೆ…

Read More

ನಿಜ ಶರಣ ಅಂಬಿಗರ ಚೌಡಯ್ಯ ಆಲ್ಬಂ ಗೀತೆ ಬಿಡುಗಡೆ ಮಾಡಿದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿ ಡಾ. ಸಂಗಮೇಶ ಉಪಾಸೆ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಿಜ ಶರಣ ಅಂಬಿಗರ ಚೌಡಯ್ಯನವರು ೧೨ನೆಯಶತಮಾನದ ಶರಣರಲ್ಲಿ ಅಗ್ರಗಣ್ಯರಾಗಿ ಸಮಾಜದ ಉದ್ದಗಲಕ್ಕೂ ಆಳವಾಗಿ ಬೇರೂರಿದ್ದ ಮೌಢ್ಯಾಚಾರಣೆಯ ವಿರುದ್ಧ ಧ್ವನಿ ಎತ್ತಿದ ಕ್ರಾಂತಿ ವಚನಕಾರ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿ ಡಾ. ಸಂಗಮೇಶ ಉಪಾಸೆ ಹೇಳಿದರು.ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ ಇವರ ಸಾಹಿತ್ಯ, ರಾಜು ಎಮ್ಮಿಗನೂರ ಇವರ ಸಂಯೋಜನೆ ಹಾಗೂ ಕನ್ನಡ ಕೋಗಿಲೆ ವಿಜೇತ ಖಾಸೀಂ ಅಲಿ ಇವರ ಗಾಯನದಲ್ಲಿ ಮೂಡಿ ಬಂದ ನಿಜ ಶರ ಅಂಬಿಗರ ಚೌಡಯ್ಯ ಆಲ್ಬಂ ಗೀತೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೌಡ್ಯತೆಯಲ್ಲಿ ದೇವರನ್ನು ಕಾಣದೆ, ಕಪಟತೆಯ ಜೀವನ ನಡೆಸದೇ ಅಂತರಂಗ ಮತ್ತು ಬಹಿರಂಗ ಶುದ್ಧೀಕರಣವಾಗಿರಿಸಿ, ಯಾರನ್ನು…

Read More